logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನೇಪಾಳ ಪ್ರವಾಹ ದುರಂತ:ಸಂಪರ್ಕಕ್ಕೆ ಸಿಗದ ಕೋಲಾರ ಮೂಲದವರ ಬಗ್ಗೆ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ ​​ಆಗಸ್ಟ್ 26 ರಂದು ನೇಪಾಳದಲ್ಲಿ ಸಂಭವಿಸಿದ ದಿಢೀರ್ ಪ್ರವಾಹ ಹಾಗೂ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ, ಕೋಲಾರ ಮೂಲದ ಯಾವುದೇ ನಾಗರಿಕರು ಅಥವಾ ಪ್ರವಾಸಿಗರು ಅಲ್ಲಿಗೆ ತೆರಳಿ ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ತಕ್ಷಣವೇ ಮಾಹಿತಿಯನ್ನು ಒದಗಿಸುವಂತೆ ಕೋಲಾರ ಜಿಲ್ಲಾಡಳಿತವು ಸಾರ್ವಜನಿಕರಲ್ಲಿ ಮನವಿ ಮಾಡಿದೆ. ​ನೇಪಾಳದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನೂರಾರು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾಧಿಕಾರಿಗಳು ಗುರುವಾರ (ಆ. 27) ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಜಿಲ್ಲೆಯಿಂದ ನೇಪಾಳಕ್ಕೆ ತೆರಳಿರುವವರ ಕುರಿತು ಆತಂಕವಿದ್ದರೆ ಅಥವಾ ಅವರ ಸಂಪರ್ಕ ಸಾಧ್ಯವಾಗದಿದ್ದರೆ, ಕೂಡಲೇ ಕೋಲಾರ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಅವರ ವಿವರಗಳನ್ನು ಒದಗಿಸುವಂತೆ ಸೂಚಿಸಿದ್ದಾರೆ. ​ತುರ್ತು ಸಂಪರ್ಕಕ್ಕಾಗಿ ಸಹಾಯವಾಣಿ ಸಂಖ್ಯೆಗಳು: ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ತುರ್ತು ನೆರವಿಗಾಗಿ ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದೆ: ​ಕೋಲಾರ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ: 08152-243506 ​ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ದೂರವಾಣಿ ಸಂಖ್ಯೆ: 080-22253707 ಹಾಗೂ ಟೋಲ್ ಫ್ರೀ (Toll Free) ಸಂಖ್ಯೆ: 1070 ​ಭಾರತೀಯ ರಾಯಭಾರ ಕಛೇರಿಯ ತುರ್ತು ವಾಟ್ಸಾಪ್ (WhatsApp) ಹಾಗೂ ಕರೆ ಸಂಖ್ಯೆಗಳು: +977 9851316807, +977 9709107500, +977 9810326117. ​ನೇಪಾಳದಲ್ಲಿರುವ ತಮ್ಮ ಕುಟುಂಬದವರು ಅಥವಾ ಪರಿಚಿತರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಮೇಲಿನ ತುರ್ತು ಸಂಖ್ಯೆಗಳನ್ನು ಸಂಪರ್ಕಿಸಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

58 min ago
user_Vishnu Press
Vishnu Press
Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
58 min ago
d259e93d-f654-481d-9af9-629e5c102848

ನೇಪಾಳ ಪ್ರವಾಹ ದುರಂತ:ಸಂಪರ್ಕಕ್ಕೆ ಸಿಗದ ಕೋಲಾರ ಮೂಲದವರ ಬಗ್ಗೆ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ ​​ಆಗಸ್ಟ್ 26 ರಂದು ನೇಪಾಳದಲ್ಲಿ ಸಂಭವಿಸಿದ ದಿಢೀರ್ ಪ್ರವಾಹ ಹಾಗೂ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ, ಕೋಲಾರ ಮೂಲದ ಯಾವುದೇ ನಾಗರಿಕರು ಅಥವಾ ಪ್ರವಾಸಿಗರು ಅಲ್ಲಿಗೆ ತೆರಳಿ ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ತಕ್ಷಣವೇ ಮಾಹಿತಿಯನ್ನು ಒದಗಿಸುವಂತೆ ಕೋಲಾರ ಜಿಲ್ಲಾಡಳಿತವು ಸಾರ್ವಜನಿಕರಲ್ಲಿ ಮನವಿ ಮಾಡಿದೆ. ​ನೇಪಾಳದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನೂರಾರು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾಧಿಕಾರಿಗಳು ಗುರುವಾರ (ಆ. 27) ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಜಿಲ್ಲೆಯಿಂದ ನೇಪಾಳಕ್ಕೆ ತೆರಳಿರುವವರ ಕುರಿತು ಆತಂಕವಿದ್ದರೆ ಅಥವಾ ಅವರ ಸಂಪರ್ಕ ಸಾಧ್ಯವಾಗದಿದ್ದರೆ, ಕೂಡಲೇ ಕೋಲಾರ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಅವರ ವಿವರಗಳನ್ನು ಒದಗಿಸುವಂತೆ ಸೂಚಿಸಿದ್ದಾರೆ. ​ತುರ್ತು ಸಂಪರ್ಕಕ್ಕಾಗಿ ಸಹಾಯವಾಣಿ ಸಂಖ್ಯೆಗಳು: ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ತುರ್ತು ನೆರವಿಗಾಗಿ ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದೆ: ​ಕೋಲಾರ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ: 08152-243506 ​ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ದೂರವಾಣಿ ಸಂಖ್ಯೆ: 080-22253707 ಹಾಗೂ ಟೋಲ್ ಫ್ರೀ (Toll Free) ಸಂಖ್ಯೆ: 1070 ​ಭಾರತೀಯ ರಾಯಭಾರ ಕಛೇರಿಯ ತುರ್ತು ವಾಟ್ಸಾಪ್ (WhatsApp) ಹಾಗೂ ಕರೆ ಸಂಖ್ಯೆಗಳು: +977 9851316807, +977 9709107500, +977 9810326117. ​ನೇಪಾಳದಲ್ಲಿರುವ ತಮ್ಮ ಕುಟುಂಬದವರು ಅಥವಾ ಪರಿಚಿತರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಮೇಲಿನ ತುರ್ತು ಸಂಖ್ಯೆಗಳನ್ನು ಸಂಪರ್ಕಿಸಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

More news from ಕರ್ನಾಟಕ and nearby areas
  • *ದೇವರ ನಿಶ್ಚಯದಂತೆ ನಾವುಗಳು ಕೆಲಸ ಮಾಡಿ ದೇವಾಲಯ ನಿರ್ಮಾಣ ಮಾಡಿದ್ದೇವೆ:ಸಮಾಜ ಸೇವಕ ಕರುಣಾಮಯಿ ಲಕ್ಷ್ಮಣಗೌಡ* ಹಲವಾರು ಸಮುದಾಯದ ಜನರು ವಾಸಿಸುವ ಕಮ್ಯೂನಿಟಿಗಳಲ್ಲಿ ದೇವಾಲಯ ನಿರ್ಮಾಣ ಕಷ್ಟ ಸಾಧ್ಯ ಆದರೂ ಪ್ರೆಸ್ಟೀಜ್ ಗ್ಲೆನ್ ವುಡ್  ಕಮ್ಯೂನಟಿಯ ಜನರ ಆಶಯ ಹಾಗೂ ಸಂಕಲ್ಪ ದಂತೆ ಶ್ರೀ ವರಸಿದ್ಧಿ ವಿನಾಯಕ ದೇವಾಲಯವ ನಿರ್ಮಾಣದ ಬಗ್ಗೆ ಎರಡು ವರ್ಷದ ಹಿಂದಿನಿಂದಲೂ ಮಾಡುತ್ತಿದ್ದರೂ ದೇವಾಲಯವ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ 45 ದಿನಗಳಲ್ಲಿ ಅದರಲ್ಲೂ ಕೇವಲ 30 ದಿನಗಳು ಕೆಲಸ ಮಾಡಿ ಪೂರ್ಣಗೊಳಿಸಿರುವುದು ಗಿನ್ನಿಸ್ ದಾಖಲೆ ಎಂದು ಕೆಲವು ಸ್ನೇಹಿತರು ಹೇಳುತ್ತಿದ್ದರು ಎಂದು  ಸಮಾಜ ಸೇವಕರು ಮತ್ತು  ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ಲಕ್ಷ್ಮಣಗೌಡರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಬಿದರಹಳ್ಳಿ ಹೋಬಳಿ ಭೂದಿಗೆರೆ ರಸ್ತೆಯ ಮಂಡೂರುಗ್ರಾಮದ ಪ್ರೆಸ್ಟೀಜ್ ಗ್ಲೆನ್ ವುಡ್ ನ   ಶ್ರೀ ವರಸಿದ್ಧ ವಿನಾಯಕ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಯಾವುದೇ ಕೆಲಸ ಮಾಡಬೇಕಾದರೂ ನಾವು ನಿಮಿತ್ತ ಮಾತ್ರ ಎಲ್ಲಾ ದೇವರ ಕೃಪೆಯಿಂದ ನಡೆಯುತ್ತದೆ.ದೇವಾಲಯದ ಕೆಲಸ ಹಾಗೂ ಪ್ರತಿಷ್ಠಾಪನೆ ವಿನಾಯಕನ ಕೃಪೆಯಿಂದ ಸಾಂಗವಾಗಿ ನೆರವೇರಿದೆ ಎಂದು ಹೇಳಿದರು. ದೇವತಾ ಕಾರ್ಯದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿರವರು ಭಾಗವಹಿಸಿ ಹಿತವಚನಗಳನ್ನು ತಿಳಿಸಿದರು. ಅವರೊಂದಿಗೆ ಮುಖಂಡರುಗಳಾದ ಕಾಟ್ಮನೂರು ಪಾಪಣ್ಣ,ಕ್ರಾಸ್ ಮಂಜು,,ಜ್ಯೋತಿ ಪುರ ವೇಣು ರವರುಗಳು ಆಗಮಿಸಿ ಶುಭಕೋರಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು. ದೇವಾಲಯ ನಿರ್ಮಾಣಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದವರಿಗೆ ಧನ್ಯವಾದಗಳನ್ನು ತಿಳಿಸಿದ ಅವರು ಶ್ರೀ ವರಸಿದ್ಧಿ ವಿನಾಯಕ ಎಲ್ಲರ ಕಷ್ಟಗಳ ನಿವಾರಣೆ ಮಾಡಲಿ ಹಾಗೂ ಕಲವರ ಮನಸ್ಸುಗಳಲ್ಲಿರುವ ಕಲ್ಮಶಗಳನ್ನು ತೊಳೆದು ಹಾಕಲಿ ಎಂದು ಆಶಿಸಿದರು ಹಾಗೂ ದೇವಾಲಯದ ಶುಚಿತ್ವ ಕಾಪಾಡಿಕೊಂಡು ಮುನ್ನಡಿಸಿಕೊಂಡು ಹೋಗ ಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ದೇವಾಲಯದ ಅಧ್ಯಕ್ಷರಾದ ಪಿಳ್ಳಪ್ಪ,ಸ್ಥಳೀಯ ನಿವಾಸಿಗಳಾದ ಜನಾರ್ದನ್, ಪರಿಷಿತ್,ನಿಕುನ್,ಚೌಧರಿ,ರಣವೀರ್, ರಂಚಿತ್,ಕೃಷ್ಣಾ ಸೇರಿದಂತೆ ಅನೇಕ ಮಹಿಳೆಯರು, ಮುಖಂಡರುಗಳು ಮತ್ತು ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.
    3
    *ದೇವರ ನಿಶ್ಚಯದಂತೆ ನಾವುಗಳು ಕೆಲಸ ಮಾಡಿ ದೇವಾಲಯ ನಿರ್ಮಾಣ ಮಾಡಿದ್ದೇವೆ:ಸಮಾಜ ಸೇವಕ ಕರುಣಾಮಯಿ ಲಕ್ಷ್ಮಣಗೌಡ*

ಹಲವಾರು ಸಮುದಾಯದ ಜನರು ವಾಸಿಸುವ ಕಮ್ಯೂನಿಟಿಗಳಲ್ಲಿ ದೇವಾಲಯ ನಿರ್ಮಾಣ ಕಷ್ಟ ಸಾಧ್ಯ ಆದರೂ ಪ್ರೆಸ್ಟೀಜ್ ಗ್ಲೆನ್ ವುಡ್  ಕಮ್ಯೂನಟಿಯ ಜನರ ಆಶಯ ಹಾಗೂ ಸಂಕಲ್ಪ ದಂತೆ ಶ್ರೀ ವರಸಿದ್ಧಿ ವಿನಾಯಕ ದೇವಾಲಯವ ನಿರ್ಮಾಣದ 
ಬಗ್ಗೆ ಎರಡು ವರ್ಷದ ಹಿಂದಿನಿಂದಲೂ ಮಾಡುತ್ತಿದ್ದರೂ ದೇವಾಲಯವ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ 45 ದಿನಗಳಲ್ಲಿ ಅದರಲ್ಲೂ ಕೇವಲ 30 ದಿನಗಳು ಕೆಲಸ ಮಾಡಿ ಪೂರ್ಣಗೊಳಿಸಿರುವುದು ಗಿನ್ನಿಸ್ ದಾಖಲೆ ಎಂದು ಕೆಲವು ಸ್ನೇಹಿತರು ಹೇಳುತ್ತಿದ್ದರು ಎಂದು  ಸಮಾಜ ಸೇವಕರು ಮತ್ತು  ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ಲಕ್ಷ್ಮಣಗೌಡರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಬಿದರಹಳ್ಳಿ ಹೋಬಳಿ ಭೂದಿಗೆರೆ ರಸ್ತೆಯ ಮಂಡೂರುಗ್ರಾಮದ ಪ್ರೆಸ್ಟೀಜ್ ಗ್ಲೆನ್ ವುಡ್ ನ   ಶ್ರೀ ವರಸಿದ್ಧ ವಿನಾಯಕ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಮುಗಿದ ನಂತರ
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಯಾವುದೇ ಕೆಲಸ ಮಾಡಬೇಕಾದರೂ ನಾವು ನಿಮಿತ್ತ ಮಾತ್ರ ಎಲ್ಲಾ ದೇವರ ಕೃಪೆಯಿಂದ ನಡೆಯುತ್ತದೆ.ದೇವಾಲಯದ ಕೆಲಸ ಹಾಗೂ ಪ್ರತಿಷ್ಠಾಪನೆ ವಿನಾಯಕನ ಕೃಪೆಯಿಂದ ಸಾಂಗವಾಗಿ ನೆರವೇರಿದೆ ಎಂದು ಹೇಳಿದರು.
ದೇವತಾ ಕಾರ್ಯದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿರವರು ಭಾಗವಹಿಸಿ ಹಿತವಚನಗಳನ್ನು ತಿಳಿಸಿದರು. ಅವರೊಂದಿಗೆ
ಮುಖಂಡರುಗಳಾದ ಕಾಟ್ಮನೂರು
ಪಾಪಣ್ಣ,ಕ್ರಾಸ್ ಮಂಜು,,ಜ್ಯೋತಿ ಪುರ
ವೇಣು ರವರುಗಳು ಆಗಮಿಸಿ ಶುಭಕೋರಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು.
ದೇವಾಲಯ ನಿರ್ಮಾಣಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದವರಿಗೆ ಧನ್ಯವಾದಗಳನ್ನು ತಿಳಿಸಿದ ಅವರು ಶ್ರೀ ವರಸಿದ್ಧಿ ವಿನಾಯಕ ಎಲ್ಲರ ಕಷ್ಟಗಳ ನಿವಾರಣೆ ಮಾಡಲಿ ಹಾಗೂ ಕಲವರ ಮನಸ್ಸುಗಳಲ್ಲಿರುವ ಕಲ್ಮಶಗಳನ್ನು ತೊಳೆದು ಹಾಕಲಿ ಎಂದು ಆಶಿಸಿದರು ಹಾಗೂ ದೇವಾಲಯದ ಶುಚಿತ್ವ ಕಾಪಾಡಿಕೊಂಡು ಮುನ್ನಡಿಸಿಕೊಂಡು ಹೋಗ ಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ದೇವಾಲಯದ ಅಧ್ಯಕ್ಷರಾದ ಪಿಳ್ಳಪ್ಪ,ಸ್ಥಳೀಯ ನಿವಾಸಿಗಳಾದ ಜನಾರ್ದನ್,
ಪರಿಷಿತ್,ನಿಕುನ್,ಚೌಧರಿ,ರಣವೀರ್, ರಂಚಿತ್,ಕೃಷ್ಣಾ ಸೇರಿದಂತೆ ಅನೇಕ ಮಹಿಳೆಯರು, ಮುಖಂಡರುಗಳು ಮತ್ತು ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    9 hrs ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಮೊದಲನೇ ದಿನದ ಉರುಸ್ ಕಾರ್ಯಕ್ರಮ ಶಾಂತಿಯುತವಾಗಿ ಆಚರಣೆ.
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ 
ಮುರುಗಮಲ್ಲ ಮೊದಲನೇ ದಿನದ ಉರುಸ್ ಕಾರ್ಯಕ್ರಮ ಶಾಂತಿಯುತವಾಗಿ ಆಚರಣೆ.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    1 hr ago
  • ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!
    1
    ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!
    user_NAYANNEWS
    NAYANNEWS
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು
    2
    ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ
ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು
ನೆಲಮಂಗಲ
ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ
ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ
ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ
ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು
ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ
ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ
ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    3 hrs ago
  • ಶಿಡ್ಲಘಟ್ಟ ತಾಲ್ಲೂಕಿನ ಚೀಮನಹಳ್ಳಿ ಸಮಾಜ ಸೇವಕ ಸಿಎಂ ಬೈರೇಗೌಡ ರು ಮುತ್ತೈದೆಯರಿಗೆ ಹರಿಶಿನ, ಕುಂಕುಮ, ಸೀರೆ ವಿತರಣೆ
    1
    ಶಿಡ್ಲಘಟ್ಟ ತಾಲ್ಲೂಕಿನ ಚೀಮನಹಳ್ಳಿ ಸಮಾಜ ಸೇವಕ ಸಿಎಂ ಬೈರೇಗೌಡ ರು ಮುತ್ತೈದೆಯರಿಗೆ ಹರಿಶಿನ, ಕುಂಕುಮ, ಸೀರೆ ವಿತರಣೆ
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    7 hrs ago
  • ಟಿಪ್ಪು ನಗರದಲ್ಲಿ ‘ಐ ಲವ್‌ ಮಹಮ್ಮದ್’ ಬೃಹತ್ ಬ್ಯಾನರ್! ಟಿಪ್ಪು ಕಟೌಟ್ ಪಕ್ಕದಲ್ಲೇ ಬ್ಯಾನರ್, ಮತ್ತೆ ಚರ್ಚೆ! ಟಿಪ್ಪು ನಗರದಲ್ಲಿ ‘ಐ ಲವ್‌ ಮಹಮ್ಮದ್’ ಬೃಹತ್ ಬ್ಯಾನರ್! ಟಿಪ್ಪು ಕಟೌಟ್ ಪಕ್ಕದಲ್ಲೇ ಬ್ಯಾನರ್, ಮತ್ತೆ ಚರ್ಚೆ!
    1
    ಟಿಪ್ಪು ನಗರದಲ್ಲಿ ‘ಐ ಲವ್‌ ಮಹಮ್ಮದ್’ ಬೃಹತ್ ಬ್ಯಾನರ್!
ಟಿಪ್ಪು ಕಟೌಟ್ ಪಕ್ಕದಲ್ಲೇ ಬ್ಯಾನರ್, ಮತ್ತೆ ಚರ್ಚೆ!
ಟಿಪ್ಪು ನಗರದಲ್ಲಿ ‘ಐ ಲವ್‌ ಮಹಮ್ಮದ್’ ಬೃಹತ್ ಬ್ಯಾನರ್!
ಟಿಪ್ಪು ಕಟೌಟ್ ಪಕ್ಕದಲ್ಲೇ ಬ್ಯಾನರ್, ಮತ್ತೆ ಚರ್ಚೆ!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಪಕ್ಷದಲ್ಲಿ ಎಲ್ಲರೂ ಶಿಸ್ತಿನ ಸಿಪಾಯಿಗಳು: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು:ಕಾಂಗ್ರೆಸ್ ಪಕ್ಷದಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಸೇರಿ ಎಲ್ಲರೂ ಶಿಸ್ತಿನ ಸಿಪಾಯಿಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಗರ ನಿವಾಸದ ಬಳಿ ಮಾಧ್ಯಮಗಳು ಸಚಿವ ನಾಗೇಂದ್ರ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ವದಂತಿಗಳಿವೆಯಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ಬುಧವಾರ ಈ ರೀತಿ ಪ್ರತಿಕ್ರಿಯಿಸಿದರು.
    1
    ಪಕ್ಷದಲ್ಲಿ ಎಲ್ಲರೂ ಶಿಸ್ತಿನ ಸಿಪಾಯಿಗಳು: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು:ಕಾಂಗ್ರೆಸ್ ಪಕ್ಷದಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಸೇರಿ ಎಲ್ಲರೂ ಶಿಸ್ತಿನ ಸಿಪಾಯಿಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರ ನಗರ ನಿವಾಸದ ಬಳಿ ಮಾಧ್ಯಮಗಳು ಸಚಿವ ನಾಗೇಂದ್ರ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ವದಂತಿಗಳಿವೆಯಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ಬುಧವಾರ ಈ ರೀತಿ ಪ್ರತಿಕ್ರಿಯಿಸಿದರು.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    7 hrs ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಉರುಸ್ ಮಹೋತ್ಸವ ಶಾಂತಿ,ಸೌಹಾರ್ದತೆಗೆ ಪ್ರಾರ್ಥಿಸಿದ:ದರ್ಗಾದಲ್ಲಿ ಜೆ.ಕೆ. ಕೃಷ್ಣಾರೆಡ್ಡಿ ವಿಶೇಷ ಪೂಜೆ
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ 
ಮುರುಗಮಲ್ಲ ಉರುಸ್ ಮಹೋತ್ಸವ ಶಾಂತಿ,ಸೌಹಾರ್ದತೆಗೆ ಪ್ರಾರ್ಥಿಸಿದ:ದರ್ಗಾದಲ್ಲಿ ಜೆ.ಕೆ. ಕೃಷ್ಣಾರೆಡ್ಡಿ ವಿಶೇಷ ಪೂಜೆ
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.