logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ ಜಿಲ್ಲೆಯ ಸಿಂದಗಿ ನಗರದ ವಿದ್ಯಾಚೇತನ ಪ್ರಕಾಶನವು ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯ ಮಟ್ಟದ ಬಾಲಸಾಹಿತ್ಯ ಪುರಸ್ಕಾರಕ್ಕಾಗಿ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಿದೆ. ೨೦೨೫ರ ಜನವರಿ ೧ ರಿಂದ ಡಿಸೆಂಬರ್ ೩೧ರ ಅವಧಿಯಲ್ಲಿ ಪ್ರಥಮ ಮುದ್ರಣಗೊಂಡ ಕಥೆ, ಕವನ ಹಾಗೂ ಕಾದಂಬರಿ ಕೃತಿಗಳನ್ನು ಸ್ಪರ್ಧೆಗೆ ಕಳುಹಿಸಬಹುದಾಗಿದೆ. ಈ ಮೂರು ವಿಭಾಗಗಳಿಗೆ ಪ್ರತ್ಯೇಕವಾಗಿ ತಲಾ ಐದು ಸಾವಿರ ರೂಪಾಯಿ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಲೇಖಕರನ್ನು ಗೌರವಿಸಲಾಗುತ್ತದೆ. 18 ವರ್ಷದೊಳಗಿನ ಮಕ್ಕಳೂ ತಮ್ಮ ಸ್ವರಚಿತ ಕೃತಿಗಳನ್ನು ಕಳುಹಿಸಬಹುದಾಗಿದ್ದು, ಅವರಿಗಾಗಿ ಪ್ರತಿ ವಿಭಾಗಕ್ಕೆ ಎರಡು ಸಾವಿರ ರೂಪಾಯಿ ನಗದು ಬಹುಮಾನದೊಂದಿಗೆ “ಚಿಗುರು” ಪ್ರಶಸ್ತಿ ನೀಡಲಾಗುತ್ತದೆ. ಆದರೆ, ಯಾವುದೇ ವಿಭಾಗದಲ್ಲಿ ಮೂರಕ್ಕಿಂತ ಕಡಿಮೆ ಕೃತಿಗಳು ಬಂದರೆ ಆ ವಿಭಾಗಕ್ಕೆ ಸ್ಪರ್ಧೆ ನಡೆಸಲಾಗುವುದಿಲ್ಲ. ಆಸಕ್ತ ಲೇಖಕರು ತಮ್ಮ ಕೃತಿಯ ನಾಲ್ಕು ಪ್ರತಿಗಳನ್ನು ದಿನಾಂಕ ೧೦-೮-೨೦೨೬ ರೊಳಗಾಗಿ ನೋಂದಾಯಿತ ಅಂಚೆ ಮೂಲಕ ಕಳುಹಿಸಬೇಕು. ಕೃತಿಗಳನ್ನು ಕಳುಹಿಸಬೇಕಾದ ವಿಳಾಸ: ಹ.ಮ. ಪೂಜಾರ, ಸಂಚಾಲಕರು, ವಿದ್ಯಾಚೇತನ ಪ್ರಕಾಶನ, ಶ್ರೀ ಸಂಗಮೇಶ್ವರ ಬಡಾವಣೆ, ಸಿಂದಗಿ-586128, ವಿಜಯಪುರ ಜಿಲ್ಲೆ. ಸ್ಪರ್ಧೆಗೆ ಬಂದ ಕೃತಿಗಳನ್ನು ಮರಳಿ ನೀಡಲಾಗುವುದಿಲ್ಲ. ಹಾಗೆಯೇ, ಒಮ್ಮೆ ಪ್ರಶಸ್ತಿ ಪಡೆದವರು ಅದೇ ವಿಭಾಗಕ್ಕೆ ಮತ್ತೊಮ್ಮೆ ಕೃತಿ ಕಳಿಸುವಂತಿಲ್ಲ; ಆದರೆ ಪ್ರಶಸ್ತಿ ಪಡೆದ ಮೂರು ವರ್ಷಗಳ ನಂತರ ಬೇರೆ ವಿಭಾಗಕ್ಕಾಗಿ ಕೃತಿ ಕಳುಹಿಸಬಹುದು ಎಂದು ಪ್ರಕಾಶನದ ಸಂಚಾಲಕರಾದ ಹ.ಮ. ಪೂಜಾರ ತಿಳಿಸಿದ್ದಾರೆ.

1 hr ago
user_Ravichandra Malled
Ravichandra Malled
Journalist ಸಿಂದಗಿ, ವಿಜಯಪುರ, ಕರ್ನಾಟಕ•
1 hr ago
ff8f338e-6e31-4035-a26c-c4f4f06d5951

ವಿಜಯಪುರ ಜಿಲ್ಲೆಯ ಸಿಂದಗಿ ನಗರದ ವಿದ್ಯಾಚೇತನ ಪ್ರಕಾಶನವು ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯ ಮಟ್ಟದ ಬಾಲಸಾಹಿತ್ಯ ಪುರಸ್ಕಾರಕ್ಕಾಗಿ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಿದೆ. ೨೦೨೫ರ ಜನವರಿ ೧ ರಿಂದ ಡಿಸೆಂಬರ್ ೩೧ರ ಅವಧಿಯಲ್ಲಿ ಪ್ರಥಮ ಮುದ್ರಣಗೊಂಡ ಕಥೆ, ಕವನ ಹಾಗೂ ಕಾದಂಬರಿ ಕೃತಿಗಳನ್ನು ಸ್ಪರ್ಧೆಗೆ ಕಳುಹಿಸಬಹುದಾಗಿದೆ. ಈ ಮೂರು ವಿಭಾಗಗಳಿಗೆ ಪ್ರತ್ಯೇಕವಾಗಿ ತಲಾ ಐದು ಸಾವಿರ ರೂಪಾಯಿ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಲೇಖಕರನ್ನು ಗೌರವಿಸಲಾಗುತ್ತದೆ. 18 ವರ್ಷದೊಳಗಿನ ಮಕ್ಕಳೂ ತಮ್ಮ ಸ್ವರಚಿತ ಕೃತಿಗಳನ್ನು ಕಳುಹಿಸಬಹುದಾಗಿದ್ದು, ಅವರಿಗಾಗಿ ಪ್ರತಿ ವಿಭಾಗಕ್ಕೆ ಎರಡು ಸಾವಿರ ರೂಪಾಯಿ ನಗದು ಬಹುಮಾನದೊಂದಿಗೆ “ಚಿಗುರು” ಪ್ರಶಸ್ತಿ ನೀಡಲಾಗುತ್ತದೆ. ಆದರೆ, ಯಾವುದೇ ವಿಭಾಗದಲ್ಲಿ ಮೂರಕ್ಕಿಂತ ಕಡಿಮೆ ಕೃತಿಗಳು ಬಂದರೆ ಆ ವಿಭಾಗಕ್ಕೆ ಸ್ಪರ್ಧೆ ನಡೆಸಲಾಗುವುದಿಲ್ಲ. ಆಸಕ್ತ ಲೇಖಕರು ತಮ್ಮ ಕೃತಿಯ ನಾಲ್ಕು ಪ್ರತಿಗಳನ್ನು ದಿನಾಂಕ ೧೦-೮-೨೦೨೬ ರೊಳಗಾಗಿ ನೋಂದಾಯಿತ ಅಂಚೆ ಮೂಲಕ ಕಳುಹಿಸಬೇಕು. ಕೃತಿಗಳನ್ನು ಕಳುಹಿಸಬೇಕಾದ ವಿಳಾಸ: ಹ.ಮ. ಪೂಜಾರ, ಸಂಚಾಲಕರು, ವಿದ್ಯಾಚೇತನ ಪ್ರಕಾಶನ, ಶ್ರೀ ಸಂಗಮೇಶ್ವರ ಬಡಾವಣೆ, ಸಿಂದಗಿ-586128, ವಿಜಯಪುರ ಜಿಲ್ಲೆ. ಸ್ಪರ್ಧೆಗೆ ಬಂದ ಕೃತಿಗಳನ್ನು ಮರಳಿ ನೀಡಲಾಗುವುದಿಲ್ಲ. ಹಾಗೆಯೇ, ಒಮ್ಮೆ ಪ್ರಶಸ್ತಿ ಪಡೆದವರು ಅದೇ ವಿಭಾಗಕ್ಕೆ ಮತ್ತೊಮ್ಮೆ ಕೃತಿ ಕಳಿಸುವಂತಿಲ್ಲ; ಆದರೆ ಪ್ರಶಸ್ತಿ ಪಡೆದ ಮೂರು ವರ್ಷಗಳ ನಂತರ ಬೇರೆ ವಿಭಾಗಕ್ಕಾಗಿ ಕೃತಿ ಕಳುಹಿಸಬಹುದು ಎಂದು ಪ್ರಕಾಶನದ ಸಂಚಾಲಕರಾದ ಹ.ಮ. ಪೂಜಾರ ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • ವಿಜಯಪುರ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸುವಂತಹ ವಿದ್ಯಮಾನವೊಂದು ನಡೆದಿದ್ದು, ಯತ್ನಾಳ್ ಅವರು "ನಾಳೆಯಿಂದ ನಾನೇ ಸಂಚಾರ ಮಾಡ್ತೇನೆ" ಎಂದು ಘೋಷಿಸಿದ್ದಾರೆ. ಯತ್ನಾಳ್ ಅವರ ಈ ನೇರ ಹೇಳಿಕೆಯು ವಿಜಯಪುರದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಹಾಗೂ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
    1
    ವಿಜಯಪುರ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸುವಂತಹ ವಿದ್ಯಮಾನವೊಂದು ನಡೆದಿದ್ದು, ಯತ್ನಾಳ್ ಅವರು "ನಾಳೆಯಿಂದ ನಾನೇ ಸಂಚಾರ ಮಾಡ್ತೇನೆ" ಎಂದು ಘೋಷಿಸಿದ್ದಾರೆ. ಯತ್ನಾಳ್ ಅವರ ಈ ನೇರ ಹೇಳಿಕೆಯು ವಿಜಯಪುರದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಹಾಗೂ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • ಮನೆಯಲ್ಲೇ ರೆಸ್ಟೋರೆಂಟ್ ಶೈಲಿಯ ರುಚಿಕರವಾದ ಪಾಲಕ್ ಪನೀರ್ ಮಸಾಲಾ ತಯಾರಿಸುವ ಸುಲಭ ವಿಧಾನ ಇಲ್ಲಿದೆ. ಇದು ಚಪಾತಿ, ರೋಟಿ ಮತ್ತು ನಾನ್ ಜೊತೆ ಸವಿಯಲು ಅದ್ಭುತವಾಗಿರುತ್ತದೆ. ಈ ರೆಸಿಪಿಗೆ ಬೇಕಾಗುವ ಪ್ರಮುಖ ಪದಾರ್ಥಗಳೆಂದರೆ 2 ಕಟ್ಟು ಪಾಲಕ್ ಸೊಪ್ಪು, 200 ಗ್ರಾಂ ಪನೀರ್, 1 ಸಣ್ಣಗೆ ಹೆಚ್ಚಿದ ಈರುಳ್ಳಿ, 1 ಹೆಚ್ಚಿದ ಟೊಮೆಟೊ, 2-3 ಹಸಿಮೆಣಸಿನಕಾಯಿ, 1 ಚಮಚ ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಅರ್ಧ ಚಮಚ ಜೀರಿಗೆ, ಅರ್ಧ ಚಮಚ ಅಚ್ಚಖಾರದ ಪುಡಿ, 1 ಚಮಚ ಧನಿಯಾ ಪುಡಿ, ಕಾಲು ಚಮಚ ಗರಂ ಮಸಾಲಾ, 3 ಚಮಚ ಬೆಣ್ಣೆ ಅಥವಾ ಎಣ್ಣೆ, 2 ಚಮಚ ಫ್ರೆಶ್ ಕ್ರೀಮ್ ಅಥವಾ ಹಾಲಿನ ಕೆನೆ ಮತ್ತು ರುಚಿಗೆ ತಕ್ಕಷ್ಟು ಉಪ್ಪು. ಇದನ್ನು ತಯಾರಿಸಲು ಮೊದಲು ಪಾಲಕ್ ಸೊಪ್ಪನ್ನು ಚೆನ್ನಾಗಿ ತೊಳೆದು, ಕುದಿಯುವ ನೀರಿಗೆ ಹಾಕಿ 2 ನಿಮಿಷ ಬೇಯಿಸಿ (Blanch) ತಕ್ಷಣವೇ ತಣ್ಣೀರಿಗೆ ಹಾಕಬೇಕು. ಇದರಿಂದ ಸೊಪ್ಪಿನ ಹಸಿರು ಬಣ್ಣ ಹಾಗೇ ಉಳಿಯುತ್ತದೆ. ಆಮೇಲೆ ಇದನ್ನು ಹಸಿಮೆಣಸಿನಕಾಯಿ ಜೊತೆ ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಬೇಕು. ನಂತರ ಒಂದು ಪ್ಯಾನ್‌ನಲ್ಲಿ ಸ್ವಲ್ಪ ಬೆಣ್ಣೆ ಹಾಕಿ ಪನೀರ್ ತುಂಡುಗಳನ್ನು ಹಗುರವಾಗಿ ಫ್ರೈ ಮಾಡಿ ಎತ್ತಿಟ್ಟುಕೊಳ್ಳಬೇಕು. ಅದೇ ಪ್ಯಾನ್‌ಗೆ ಮತ್ತಷ್ಟು ಎಣ್ಣೆ ಅಥವಾ ಬೆಣ್ಣೆ ಹಾಕಿ ಜೀರಿಗೆ ಒಗ್ಗರಣೆ ಕೊಟ್ಟು, ಹೆಚ್ಚಿದ ಈರುಳ್ಳಿ ಮತ್ತು ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಹಸಿ ವಾಸನೆ ಹೋಗುವವರೆಗೆ ಹುರಿಯಬೇಕು. ಬಳಿಕ ಟೊಮೆಟೊ ಹಾಕಿ ಮೆತ್ತಗಾಗುವವರೆಗೆ ಬೇಯಿಸಿ, ಅದಕ್ಕೆ ಅರಿಶಿನ, ಖಾರದ ಪುಡಿ, ಧನಿಯಾ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಮಿಕ್ಸ್ ಮಾಡಬೇಕು. ಕೊನೆಯ ಹಂತದಲ್ಲಿ, ಹುರಿದ ಮಸಾಲಾಕ್ಕೆ ರುಬ್ಬಿದ ಪಾಲಕ್ ಮಿಶ್ರಣವನ್ನು ಸೇರಿಸಿ, ಸ್ವಲ್ಪ ನೀರು ಹಾಕಿ 5 ನಿಮಿಷ ಮಧ್ಯಮ ಉರಿಯಲ್ಲಿ ಕುದಿಸಬೇಕು. ಕೊನೆಯದಾಗಿ ಗರಂ ಮಸಾಲಾ, ಫ್ರೈ ಮಾಡಿದ ಪನೀರ್ ತುಂಡುಗಳು ಮತ್ತು ಫ್ರೆಶ್ ಕ್ರೀಮ್ ಸೇರಿಸಿ 2 ನಿಮಿಷ ಸಣ್ಣ ಉರಿಯಲ್ಲಿ ಬೇಯಿಸಿದರೆ ರುಚಿಕರವಾದ ಪಾಲಕ್ ಪನೀರ್ ಸಿದ್ಧವಾಗುತ್ತದೆ. ಈ ರೆಸಿಪಿಯಲ್ಲಿ ನಿಮಗೆ ಡಾಬಾ ಸ್ಟೈಲ್ ಟ್ವಿಸ್ಟ್ ಬೇಕೇ ಅಥವಾ ತೂಕ ಇಳಿಸಿಕೊಳ್ಳಲು ಡಯಟ್ ಫ್ರೆಂಡ್ಲಿ ವಿಧಾನ ಬೇಕೇ ಎಂಬ ಹೆಚ್ಚಿನ ಮಾಹಿತಿಯನ್ನೂ ಸಹ ಪಡೆಯಬಹುದು.
    1
    ಮನೆಯಲ್ಲೇ ರೆಸ್ಟೋರೆಂಟ್ ಶೈಲಿಯ ರುಚಿಕರವಾದ ಪಾಲಕ್ ಪನೀರ್ ಮಸಾಲಾ ತಯಾರಿಸುವ ಸುಲಭ ವಿಧಾನ ಇಲ್ಲಿದೆ. ಇದು ಚಪಾತಿ, ರೋಟಿ ಮತ್ತು ನಾನ್ ಜೊತೆ ಸವಿಯಲು ಅದ್ಭುತವಾಗಿರುತ್ತದೆ. ಈ ರೆಸಿಪಿಗೆ ಬೇಕಾಗುವ ಪ್ರಮುಖ ಪದಾರ್ಥಗಳೆಂದರೆ 2 ಕಟ್ಟು ಪಾಲಕ್ ಸೊಪ್ಪು, 200 ಗ್ರಾಂ ಪನೀರ್, 1 ಸಣ್ಣಗೆ ಹೆಚ್ಚಿದ ಈರುಳ್ಳಿ, 1 ಹೆಚ್ಚಿದ ಟೊಮೆಟೊ, 2-3 ಹಸಿಮೆಣಸಿನಕಾಯಿ, 1 ಚಮಚ ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಅರ್ಧ ಚಮಚ ಜೀರಿಗೆ, ಅರ್ಧ ಚಮಚ ಅಚ್ಚಖಾರದ ಪುಡಿ, 1 ಚಮಚ ಧನಿಯಾ ಪುಡಿ, ಕಾಲು ಚಮಚ ಗರಂ ಮಸಾಲಾ, 3 ಚಮಚ ಬೆಣ್ಣೆ ಅಥವಾ ಎಣ್ಣೆ, 2 ಚಮಚ ಫ್ರೆಶ್ ಕ್ರೀಮ್ ಅಥವಾ ಹಾಲಿನ ಕೆನೆ ಮತ್ತು ರುಚಿಗೆ ತಕ್ಕಷ್ಟು ಉಪ್ಪು.

ಇದನ್ನು ತಯಾರಿಸಲು ಮೊದಲು ಪಾಲಕ್ ಸೊಪ್ಪನ್ನು ಚೆನ್ನಾಗಿ ತೊಳೆದು, ಕುದಿಯುವ ನೀರಿಗೆ ಹಾಕಿ 2 ನಿಮಿಷ ಬೇಯಿಸಿ (Blanch) ತಕ್ಷಣವೇ ತಣ್ಣೀರಿಗೆ ಹಾಕಬೇಕು. ಇದರಿಂದ ಸೊಪ್ಪಿನ ಹಸಿರು ಬಣ್ಣ ಹಾಗೇ ಉಳಿಯುತ್ತದೆ. ಆಮೇಲೆ ಇದನ್ನು ಹಸಿಮೆಣಸಿನಕಾಯಿ ಜೊತೆ ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಬೇಕು. ನಂತರ ಒಂದು ಪ್ಯಾನ್‌ನಲ್ಲಿ ಸ್ವಲ್ಪ ಬೆಣ್ಣೆ ಹಾಕಿ ಪನೀರ್ ತುಂಡುಗಳನ್ನು ಹಗುರವಾಗಿ ಫ್ರೈ ಮಾಡಿ ಎತ್ತಿಟ್ಟುಕೊಳ್ಳಬೇಕು. ಅದೇ ಪ್ಯಾನ್‌ಗೆ ಮತ್ತಷ್ಟು ಎಣ್ಣೆ ಅಥವಾ ಬೆಣ್ಣೆ ಹಾಕಿ ಜೀರಿಗೆ ಒಗ್ಗರಣೆ ಕೊಟ್ಟು, ಹೆಚ್ಚಿದ ಈರುಳ್ಳಿ ಮತ್ತು ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಹಸಿ ವಾಸನೆ ಹೋಗುವವರೆಗೆ ಹುರಿಯಬೇಕು. ಬಳಿಕ ಟೊಮೆಟೊ ಹಾಕಿ ಮೆತ್ತಗಾಗುವವರೆಗೆ ಬೇಯಿಸಿ, ಅದಕ್ಕೆ ಅರಿಶಿನ, ಖಾರದ ಪುಡಿ, ಧನಿಯಾ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಮಿಕ್ಸ್ ಮಾಡಬೇಕು.

ಕೊನೆಯ ಹಂತದಲ್ಲಿ, ಹುರಿದ ಮಸಾಲಾಕ್ಕೆ ರುಬ್ಬಿದ ಪಾಲಕ್ ಮಿಶ್ರಣವನ್ನು ಸೇರಿಸಿ, ಸ್ವಲ್ಪ ನೀರು ಹಾಕಿ 5 ನಿಮಿಷ ಮಧ್ಯಮ ಉರಿಯಲ್ಲಿ ಕುದಿಸಬೇಕು. ಕೊನೆಯದಾಗಿ ಗರಂ ಮಸಾಲಾ, ಫ್ರೈ ಮಾಡಿದ ಪನೀರ್ ತುಂಡುಗಳು ಮತ್ತು ಫ್ರೆಶ್ ಕ್ರೀಮ್ ಸೇರಿಸಿ 2 ನಿಮಿಷ ಸಣ್ಣ ಉರಿಯಲ್ಲಿ ಬೇಯಿಸಿದರೆ ರುಚಿಕರವಾದ ಪಾಲಕ್ ಪನೀರ್ ಸಿದ್ಧವಾಗುತ್ತದೆ. ಈ ರೆಸಿಪಿಯಲ್ಲಿ ನಿಮಗೆ ಡಾಬಾ ಸ್ಟೈಲ್ ಟ್ವಿಸ್ಟ್ ಬೇಕೇ ಅಥವಾ ತೂಕ ಇಳಿಸಿಕೊಳ್ಳಲು ಡಯಟ್ ಫ್ರೆಂಡ್ಲಿ ವಿಧಾನ ಬೇಕೇ ಎಂಬ ಹೆಚ್ಚಿನ ಮಾಹಿತಿಯನ್ನೂ ಸಹ ಪಡೆಯಬಹುದು.
    user_Chethana Muniswamygowda
    Chethana Muniswamygowda
    Press advisory Kolhar, Vijayapura•
    4 hrs ago
  • ಕಲಬುರಗಿ ಜಿಲ್ಲೆಯ ಚಿತಾಪುರ ವ್ಯಾಪ್ತಿಯಲ್ಲಿ ರವಿವಾರದಂದೂ ಸಹ ಬಿಎಲ್‌ಒಗಳು (BLO) ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿಮ್ಮ ವ್ಯಾಪ್ತಿಯ ಬಿಎಲ್‌ಒಗಳು ಕೆಲಸ ಮಾಡುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ತಮ್ಮ ಬಿಎಲ್‌ಒಗಳನ್ನು ಭೇಟಿ ಮಾಡುವಂತೆ ತಿಳಿಸಲಾಗಿದೆ.
    1
    ಕಲಬುರಗಿ ಜಿಲ್ಲೆಯ ಚಿತಾಪುರ ವ್ಯಾಪ್ತಿಯಲ್ಲಿ ರವಿವಾರದಂದೂ ಸಹ ಬಿಎಲ್‌ಒಗಳು (BLO) ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿಮ್ಮ ವ್ಯಾಪ್ತಿಯ ಬಿಎಲ್‌ಒಗಳು ಕೆಲಸ ಮಾಡುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ತಮ್ಮ ಬಿಎಲ್‌ಒಗಳನ್ನು ಭೇಟಿ ಮಾಡುವಂತೆ ತಿಳಿಸಲಾಗಿದೆ.
    user_Rajkumar Mugali
    Rajkumar Mugali
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    13 hrs ago
  • ಯಾದಗಿರಿ ಜಿಲ್ಲೆಯಲ್ಲಿ ಜನರ ನಿದ್ದೆಗೆಡಿಸಿದ್ದ ಒಬ್ಬ ಕಳ್ಳ ಕೊನೆಗೂ ಪೊಲೀಸ್ ವಶಕ್ಕೆ ಬಂದಿದ್ದಾನಾದರೂ, ಇನ್ನುಳಿದ ಹಲವು ಕಳ್ಳತನ ಪ್ರಕರಣಗಳ ಆರೋಪಿಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಳ್ಳತನದ ಪ್ರಕರಣಗಳಿಗೆ ತಕ್ಷಣವೇ ಕಡಿವಾಣ ಹಾಕಲು ವಿಶೇಷ ತನಿಖಾ ತಂಡವನ್ನು (SIT) ರಚಿಸುವಂತೆ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುತ್ನಾಳ್ ಅವರು ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್ಪಿ) ಮನವಿ ಮಾಡಿದ್ದಾರೆ. ಸಾರ್ವಜನಿಕರ ಭದ್ರತೆ ಹಾಗೂ ರೈತರ ಆಸ್ತಿಯ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕು ಎಂದು ಒತ್ತಾಯಿಸಿರುವ ಅವರು, ಉಳಿದ ಎಲ್ಲಾ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಸಂಘಟಿತ ಕಳ್ಳರ ಜಾಲವನ್ನು ಬೇರು ಸಮೇತ ಬಯಲಿಗೆಳೆದು ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಹಾಗೂ ರೈತರ ಆಸ್ತಿಗೆ ಶಾಶ್ವತ ರಕ್ಷಣೆ ಒದಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
    1
    ಯಾದಗಿರಿ ಜಿಲ್ಲೆಯಲ್ಲಿ ಜನರ ನಿದ್ದೆಗೆಡಿಸಿದ್ದ ಒಬ್ಬ ಕಳ್ಳ ಕೊನೆಗೂ ಪೊಲೀಸ್ ವಶಕ್ಕೆ ಬಂದಿದ್ದಾನಾದರೂ, ಇನ್ನುಳಿದ ಹಲವು ಕಳ್ಳತನ ಪ್ರಕರಣಗಳ ಆರೋಪಿಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಳ್ಳತನದ ಪ್ರಕರಣಗಳಿಗೆ ತಕ್ಷಣವೇ ಕಡಿವಾಣ ಹಾಕಲು ವಿಶೇಷ ತನಿಖಾ ತಂಡವನ್ನು (SIT) ರಚಿಸುವಂತೆ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುತ್ನಾಳ್ ಅವರು ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್ಪಿ) ಮನವಿ ಮಾಡಿದ್ದಾರೆ.

ಸಾರ್ವಜನಿಕರ ಭದ್ರತೆ ಹಾಗೂ ರೈತರ ಆಸ್ತಿಯ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕು ಎಂದು ಒತ್ತಾಯಿಸಿರುವ ಅವರು, ಉಳಿದ ಎಲ್ಲಾ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಸಂಘಟಿತ ಕಳ್ಳರ ಜಾಲವನ್ನು ಬೇರು ಸಮೇತ ಬಯಲಿಗೆಳೆದು ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಹಾಗೂ ರೈತರ ಆಸ್ತಿಗೆ ಶಾಶ್ವತ ರಕ್ಷಣೆ ಒದಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    23 hrs ago
  • ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟು ಭೀಕರ ಬರಗಾಲದ ಛಾಯೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಸಕಾಲಕ್ಕೆ ಮಳೆ ಬಂದು ನಾಡು ಸುಭಿಕ್ಷವಾಗಲಿ ಎಂದು ಆಶಿಸಿ ಕತ್ತೆಗಳ ಮದುವೆಯನ್ನು ಅತ್ಯಂತ ವಿಜೃಂಭಣೆ ಹಾಗೂ ಅದ್ದೂರಿಯಾಗಿ ನೆರವೇರಿಸಲಾಗಿದೆ. ಗ್ರಾಮೀಣ ಭಾಗದ ವಿಶಿಷ್ಟ ಜನಪದ ನಂಬಿಕೆಯಂತೆ, ಮಳೆ ದೇವರಾದ ವರುಣ ದೇವನನ್ನು ಒಲಿಸಿಕೊಳ್ಳಲು ಸಾರ್ವಜನಿಕರು ಹಾಗೂ ರೈತ ಬಾಂಧವರು ಒಗ್ಗೂಡಿ ಈ ವಿಶಿಷ್ಟ ಆಚರಣೆಯನ್ನು ಹಮ್ಮಿಕೊಂಡಿದ್ದರು. ಊರಿನ ಗೌಡರ ಮನೆಯಲ್ಲಿ ಶಾಸ್ತ್ರೋಕ್ತವಾಗಿ ಜರುಗಿದ ಈ ಕಲ್ಯಾಣ ಮಹೋತ್ಸವಕ್ಕೆ ಮಹಾದೇವ ಗೌಡರು ಹಾಗೂ ಪ್ರವೀಣ ಗೌಡರು ಪೂಜೆ ಸಲ್ಲಿಸಿದರು. ಮಲ್ಲಿಕಾರ್ಜುನ ಮಠಪತಿ, ಗಿರೀಶ ಜೋಶಿ ಹಾಗೂ ಅಪ್ಪಯ್ಯ ಹಿರೇಮಠ ಅವರ ನೇತೃತ್ವದಲ್ಲಿ ಸಾಮಾನ್ಯ ಮದುವೆಯಂತೆಯೇ ಸಕಲ ಸಂಪ್ರದಾಯಗಳೊಂದಿಗೆ ಕತ್ತೆಗಳ ವಿವಾಹ ಕಾರ್ಯ ನೆರವೇರಿತು. ಕತ್ತೆಗಳಿಗೆ ಮಂಗಲ ಸ್ನಾನ ಮಾಡಿಸಿ, ಅರಿಶಿನ-ಕುಂಕುಮ ಹಚ್ಚಿ, ನೂತನ ವಸ್ತ್ರ ಹಾಗೂ ಹೂವಿನ ಹಾರಗಳಿಂದ ಶೃಂಗರಿಸಲಾಗಿತ್ತು. ಮಂಗಲ ವಾದ್ಯಗಳ ಭಿನ್ನ ಧ್ವನಿ ಹಾಗೂ ಮಂತ್ರಘೋಷಗಳ ನಡುವೆ ಕತ್ತೆಗಳ ಮದುವೆ ಶಾಸ್ತ್ರೋಕ್ತವಾಗಿ ಸಂಪನ್ನಗೊಂಡಿತು. ಮದುವೆಯ ನಂತರ ಶೃಂಗರಿತ ಕತ್ತೆಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅತ್ಯಂತ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಗ್ರಾಮಸ್ಥರು, ಮಹಿಳೆಯರು ಹಾಗೂ ಯುವಕರು ಸಂಭ್ರಮದಿಂದ ಪಾಲ್ಗೊಂಡಿದ್ದರು. 'ಹೊತ್ತ ಬಂದಾಗ ಕತ್ತೆ ಕಾಲು ಹಿಡಿಯಬೇಕು' ಎಂಬ ಗಾದೆ ಮಾತಿನಂತೆ, ಗ್ರಾಮದ ಅಗಸಿಯಲ್ಲಿ ಪ್ರವೀಣ ಗೌಡರು ಹಾಗೂ ಖಂಡೇರಾವ ಘೋರ್ಪಡೆ ಅವರು ಕತ್ತೆಗಳ ಕಾಲನ್ನು ಹಿಡಿದು ವರುಣ ದೇವನು ಪ್ರಸನ್ನನಾಗಿ ಸಕಾಲಕ್ಕೆ ಉತ್ತಮ ಮಳೆ ಕರುಣಿಸಲಿ ಎಂದು ಭಕ್ತಿಭಾವದಿಂದ ಪ್ರಾರ್ಥಿಸಿದರು. ಬರಗಾಲ ಎದುರಾದಾಗ ಕತ್ತೆಗಳ ಮದುವೆ ಮಾಡುವ ಮೂಲಕ ಪ್ರಕೃತಿ ಮಾತೆಯನ್ನು ಬೇಡಿಕೊಳ್ಳುವುದು ಹಿರಿಯರ ಕಾಲದಿಂದಲೂ ನಡೆದುಬಂದ ಸಂಪ್ರದಾಯವಾಗಿದ್ದು, ಇದರಿಂದ ಸದ್ಯದಲ್ಲೇ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಲಿದೆ ಎಂದು ಗ್ರಾಮಸ್ಥರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಅಪೂರ್ವ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ಸಿದರಾಯ ತೋಡಕರ, ಅಸ್ಲಾಂ ಮುಲ್ಲಾ, ಅಶೋಕ ಪೂಜಾರಿ, ರಾಮಣ್ಣ ಮಗದುಮ್ಮ, ಆರ್ ಎಂ ಪಾಟೀಲ, ಚಿದಾನಂದ ಜಾಲಿಹಾಳ ಸೇರಿದಂತೆ ಹಲವು ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು ಎಂದು ವಿಶೇಷ ಪ್ರತಿನಿಧಿ ಮಹೇಶ್ ಶರ್ಮಾ ವರದಿ ಮಾಡಿದ್ದಾರೆ.
    1
    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟು ಭೀಕರ ಬರಗಾಲದ ಛಾಯೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಸಕಾಲಕ್ಕೆ ಮಳೆ ಬಂದು ನಾಡು ಸುಭಿಕ್ಷವಾಗಲಿ ಎಂದು ಆಶಿಸಿ ಕತ್ತೆಗಳ ಮದುವೆಯನ್ನು ಅತ್ಯಂತ ವಿಜೃಂಭಣೆ ಹಾಗೂ ಅದ್ದೂರಿಯಾಗಿ ನೆರವೇರಿಸಲಾಗಿದೆ. ಗ್ರಾಮೀಣ ಭಾಗದ ವಿಶಿಷ್ಟ ಜನಪದ ನಂಬಿಕೆಯಂತೆ, ಮಳೆ ದೇವರಾದ ವರುಣ ದೇವನನ್ನು ಒಲಿಸಿಕೊಳ್ಳಲು ಸಾರ್ವಜನಿಕರು ಹಾಗೂ ರೈತ ಬಾಂಧವರು ಒಗ್ಗೂಡಿ ಈ ವಿಶಿಷ್ಟ ಆಚರಣೆಯನ್ನು ಹಮ್ಮಿಕೊಂಡಿದ್ದರು.

ಊರಿನ ಗೌಡರ ಮನೆಯಲ್ಲಿ ಶಾಸ್ತ್ರೋಕ್ತವಾಗಿ ಜರುಗಿದ ಈ ಕಲ್ಯಾಣ ಮಹೋತ್ಸವಕ್ಕೆ ಮಹಾದೇವ ಗೌಡರು ಹಾಗೂ ಪ್ರವೀಣ ಗೌಡರು ಪೂಜೆ ಸಲ್ಲಿಸಿದರು. ಮಲ್ಲಿಕಾರ್ಜುನ ಮಠಪತಿ, ಗಿರೀಶ ಜೋಶಿ ಹಾಗೂ ಅಪ್ಪಯ್ಯ ಹಿರೇಮಠ ಅವರ ನೇತೃತ್ವದಲ್ಲಿ ಸಾಮಾನ್ಯ ಮದುವೆಯಂತೆಯೇ ಸಕಲ ಸಂಪ್ರದಾಯಗಳೊಂದಿಗೆ ಕತ್ತೆಗಳ ವಿವಾಹ ಕಾರ್ಯ ನೆರವೇರಿತು. ಕತ್ತೆಗಳಿಗೆ ಮಂಗಲ ಸ್ನಾನ ಮಾಡಿಸಿ, ಅರಿಶಿನ-ಕುಂಕುಮ ಹಚ್ಚಿ, ನೂತನ ವಸ್ತ್ರ ಹಾಗೂ ಹೂವಿನ ಹಾರಗಳಿಂದ ಶೃಂಗರಿಸಲಾಗಿತ್ತು. ಮಂಗಲ ವಾದ್ಯಗಳ ಭಿನ್ನ ಧ್ವನಿ ಹಾಗೂ ಮಂತ್ರಘೋಷಗಳ ನಡುವೆ ಕತ್ತೆಗಳ ಮದುವೆ ಶಾಸ್ತ್ರೋಕ್ತವಾಗಿ ಸಂಪನ್ನಗೊಂಡಿತು. ಮದುವೆಯ ನಂತರ ಶೃಂಗರಿತ ಕತ್ತೆಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅತ್ಯಂತ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಗ್ರಾಮಸ್ಥರು, ಮಹಿಳೆಯರು ಹಾಗೂ ಯುವಕರು ಸಂಭ್ರಮದಿಂದ ಪಾಲ್ಗೊಂಡಿದ್ದರು.

'ಹೊತ್ತ ಬಂದಾಗ ಕತ್ತೆ ಕಾಲು ಹಿಡಿಯಬೇಕು' ಎಂಬ ಗಾದೆ ಮಾತಿನಂತೆ, ಗ್ರಾಮದ ಅಗಸಿಯಲ್ಲಿ ಪ್ರವೀಣ ಗೌಡರು ಹಾಗೂ ಖಂಡೇರಾವ ಘೋರ್ಪಡೆ ಅವರು ಕತ್ತೆಗಳ ಕಾಲನ್ನು ಹಿಡಿದು ವರುಣ ದೇವನು ಪ್ರಸನ್ನನಾಗಿ ಸಕಾಲಕ್ಕೆ ಉತ್ತಮ ಮಳೆ ಕರುಣಿಸಲಿ ಎಂದು ಭಕ್ತಿಭಾವದಿಂದ ಪ್ರಾರ್ಥಿಸಿದರು. ಬರಗಾಲ ಎದುರಾದಾಗ ಕತ್ತೆಗಳ ಮದುವೆ ಮಾಡುವ ಮೂಲಕ ಪ್ರಕೃತಿ ಮಾತೆಯನ್ನು ಬೇಡಿಕೊಳ್ಳುವುದು ಹಿರಿಯರ ಕಾಲದಿಂದಲೂ ನಡೆದುಬಂದ ಸಂಪ್ರದಾಯವಾಗಿದ್ದು, ಇದರಿಂದ ಸದ್ಯದಲ್ಲೇ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಲಿದೆ ಎಂದು ಗ್ರಾಮಸ್ಥರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಅಪೂರ್ವ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ಸಿದರಾಯ ತೋಡಕರ, ಅಸ್ಲಾಂ ಮುಲ್ಲಾ, ಅಶೋಕ ಪೂಜಾರಿ, ರಾಮಣ್ಣ ಮಗದುಮ್ಮ, ಆರ್ ಎಂ ಪಾಟೀಲ, ಚಿದಾನಂದ ಜಾಲಿಹಾಳ ಸೇರಿದಂತೆ ಹಲವು ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು ಎಂದು ವಿಶೇಷ ಪ್ರತಿನಿಧಿ ಮಹೇಶ್ ಶರ್ಮಾ ವರದಿ ಮಾಡಿದ್ದಾರೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    7 hrs ago
  • ಯಾದಗಿರಿಯಲ್ಲಿ ವ್ಯಕ್ತಿಯೊಬ್ಬರು ತಾವು ಸಾವಯವ ವಸ್ತುಗಳನ್ನು ಬಳಕೆ ಮಾಡುತ್ತಿರುವುದಾಗಿ ತಿಳಿಸಿದ್ದು, ಇತರರಿಗೂ ಸಹ ಇವುಗಳನ್ನು ಬಳಸುವಂತೆ ಪ್ರೋತ್ಸಾಹಿಸಿದ್ದಾರೆ. ನಮ್ಮ ಭೂಮಿಗಾಗಿ ಸಾವಯವ ವಸ್ತುಗಳನ್ನು ಬಳಕೆ ಮಾಡಿ ಎಂದು ಕರೆ ನೀಡಿರುವ ಇವರು, ಆಸಕ್ತರು ಸಂಪರ್ಕಿಸಲು 9008959177 ಮೊಬೈಲ್ ಸಂಖ್ಯೆಯನ್ನು ಹಂಚಿಕೊಂಡಿದ್ದಾರೆ.
    1
    ಯಾದಗಿರಿಯಲ್ಲಿ ವ್ಯಕ್ತಿಯೊಬ್ಬರು ತಾವು ಸಾವಯವ ವಸ್ತುಗಳನ್ನು ಬಳಕೆ ಮಾಡುತ್ತಿರುವುದಾಗಿ ತಿಳಿಸಿದ್ದು, ಇತರರಿಗೂ ಸಹ ಇವುಗಳನ್ನು ಬಳಸುವಂತೆ ಪ್ರೋತ್ಸಾಹಿಸಿದ್ದಾರೆ. ನಮ್ಮ ಭೂಮಿಗಾಗಿ ಸಾವಯವ ವಸ್ತುಗಳನ್ನು ಬಳಕೆ ಮಾಡಿ ಎಂದು ಕರೆ ನೀಡಿರುವ ಇವರು, ಆಸಕ್ತರು ಸಂಪರ್ಕಿಸಲು 9008959177 ಮೊಬೈಲ್ ಸಂಖ್ಯೆಯನ್ನು ಹಂಚಿಕೊಂಡಿದ್ದಾರೆ.
    user_ಶರಣಪ್ಪ ರೈತ ಸಂಘದ ಗೌರವಾಧ್ಯಕ್ಷ N
    ಶರಣಪ್ಪ ರೈತ ಸಂಘದ ಗೌರವಾಧ್ಯಕ್ಷ N
    ಯಾದಗಿರಿ, ಯಾದಗಿರಿ, ಕರ್ನಾಟಕ•
    9 hrs ago
  • ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದರಿಂದ ಅಲ್ಲಿ ಬರಗಾಲದ ಪರಿಸ್ಥಿತಿ ಉಂಟಾಗಿದೆ. ಆದರೆ, ಮಹಾರಾಷ್ಟ್ರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಕೃಷ್ಣ ನದಿಯ ನೀರಿನ ಒಳಹರಿವು ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ ಉಂಟಾಗಿರುವ ಈ ಮಳೆಯ ತೀವ್ರತೆಯ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆಯೇ ಎಂಬ ಪ್ರಶ್ನೆ ಮೂಡಿದೆ.
    1
    ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದರಿಂದ ಅಲ್ಲಿ ಬರಗಾಲದ ಪರಿಸ್ಥಿತಿ ಉಂಟಾಗಿದೆ. ಆದರೆ, ಮಹಾರಾಷ್ಟ್ರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಕೃಷ್ಣ ನದಿಯ ನೀರಿನ ಒಳಹರಿವು ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ ಉಂಟಾಗಿರುವ ಈ ಮಳೆಯ ತೀವ್ರತೆಯ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆಯೇ ಎಂಬ ಪ್ರಶ್ನೆ ಮೂಡಿದೆ.
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    21 hrs ago
  • ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಕ್ರಾಸ್ ಸಮೀಪ ನಡೆದ ಜಗಳದಲ್ಲಿ 35 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಾಹಿತಿ ಪ್ರಕಾರ, ಬಾಬುರಾವ್‌ ಮಹಾದೇವ ಜಮಾದಾರ ಅವರೊಂದಿಗೆ ಬಂದಿದ್ದ ಸೋಲಾಪುರ ಮೂಲದ ಅಪ್ಪಾಸಾಬ ಮಕಾಶಿ ಹಾಗೂ ಹಲಸಂಗಿ ಗ್ರಾಮದ ವಿಕಾಸ್ ಮೀನಾಕ್ಷಿ ತಳವಾರ ಅವರ ನಡುವೆ ಮೊದಲು ಮಾತಿನ ಚಕಮಕಿ ನಡೆದಿದೆ. ಈ ಮಾತಿನ ಚಕಮಕಿಯು ಬಳಿಕ ಜಗಳಕ್ಕೆ ತಿರುಗಿದ್ದು, ಜಗಳದ ವೇಳೆ ನಡೆದ ಹಲ್ಲೆಯಿಂದಾಗಿ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಘಟನೆಯಿಂದಾಗಿ ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಂತಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ತನಿಖೆಯ ನಂತರವಷ್ಟೇ ಘಟನೆಗೆ ನಿಖರವಾದ ಕಾರಣ ಏನೆಂಬುದು ತಿಳಿಯಬೇಕಿದೆ.
    1
    ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಕ್ರಾಸ್ ಸಮೀಪ ನಡೆದ ಜಗಳದಲ್ಲಿ 35 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಾಹಿತಿ ಪ್ರಕಾರ, ಬಾಬುರಾವ್‌ ಮಹಾದೇವ ಜಮಾದಾರ ಅವರೊಂದಿಗೆ ಬಂದಿದ್ದ ಸೋಲಾಪುರ ಮೂಲದ ಅಪ್ಪಾಸಾಬ ಮಕಾಶಿ ಹಾಗೂ ಹಲಸಂಗಿ ಗ್ರಾಮದ ವಿಕಾಸ್ ಮೀನಾಕ್ಷಿ ತಳವಾರ ಅವರ ನಡುವೆ ಮೊದಲು ಮಾತಿನ ಚಕಮಕಿ ನಡೆದಿದೆ. ಈ ಮಾತಿನ ಚಕಮಕಿಯು ಬಳಿಕ ಜಗಳಕ್ಕೆ ತಿರುಗಿದ್ದು, ಜಗಳದ ವೇಳೆ ನಡೆದ ಹಲ್ಲೆಯಿಂದಾಗಿ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಘಟನೆಯಿಂದಾಗಿ ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಂತಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ತನಿಖೆಯ ನಂತರವಷ್ಟೇ ಘಟನೆಗೆ ನಿಖರವಾದ ಕಾರಣ ಏನೆಂಬುದು ತಿಳಿಯಬೇಕಿದೆ.
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.