logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಆಲಮಟ್ಟಿ ಜಲಶಯಕ್ಕೆ ಮುಂದಿನ (48) ಗಂಟೆಗಳಲ್ಲಿ ಸುಮಾರು (2) ಲಕ್ಷ ಕ್ಯೂಸಕವರೆಗೆ ನೀರು ಹರಿದು ಒಳ ಹರಿವು ಸಾದ್ಯತೆ

2 hrs ago
user_Sharanugouda Patil
Sharanugouda Patil
Muddebihal, Vijayapura•
2 hrs ago

ಆಲಮಟ್ಟಿ ಜಲಶಯಕ್ಕೆ ಮುಂದಿನ (48) ಗಂಟೆಗಳಲ್ಲಿ ಸುಮಾರು (2) ಲಕ್ಷ ಕ್ಯೂಸಕವರೆಗೆ ನೀರು ಹರಿದು ಒಳ ಹರಿವು ಸಾದ್ಯತೆ

More news from ಕರ್ನಾಟಕ and nearby areas
  • ಕುಷ್ಟಗಿ ತಾಯಿ-ಮಕ್ಕಳ ಆಸ್ಪತ್ರೆ: ಆರಂಭವಾಗಿ ಕೇವಲ 15 ದಿನಗಳಲ್ಲೇ ಮೂಲಸೌಕರ್ಯಗಳ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ ಕುಷ್ಟಗಿ: ಸುಮಾರು ರೂ.27 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯೋಜನೆಯಡಿ ನಿರ್ಮಿಸಲಾದ 100 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ಕಾರ್ಯಾರಂಭವಾಗಿ ಕೇವಲ 15 ದಿನಗಳಲ್ಲೇ ಹಲವು ಮೂಲಸೌಕರ್ಯಗಳು ಹಾಳಾಗಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಅನುಮಾನಗಳಿಗೆ ಕಾರಣವಾಗಿದೆ. ಹೆರಿಗೆ ಹಾಗೂ ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭವಾಗಿದ್ದರೂ, ಸುರಕ್ಷಿತ ಮತ್ತು ಗುಣಮಟ್ಟದ ಆರೋಗ್ಯ ಸೇವೆಗೆ ಅಗತ್ಯವಾದ ಮೂಲಸೌಲಭ್ಯಗಳು ಇನ್ನೂ ಪೂರ್ಣಗೊಂಡಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಬಿಸಿನೀರು, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಗರ್ಭಿಣಿಯರು, ಬಾಣಂತಿಯರು ಹಾಗೂ ನವಜಾತ ಶಿಶುಗಳಿಗೆ ಅಗತ್ಯವಾದ ಶುದ್ಧ ಕುಡಿಯುವ ನೀರು ಮತ್ತು ಬಿಸಿನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಆಸ್ಪತ್ರೆಯ ಮೇಲ್ಭಾಗದಲ್ಲಿ ಅಳವಡಿಸಿರುವ ಸೋಲಾರ್ ವಾಟರ್ ಹೀಟರ್‌ನ ಗಾಜಿನ ಟ್ಯೂಬ್‌ಗಳು ಒಡೆದು ನುಚ್ಚುನೂರಾಗಿವೆ. ಕುಡಿಯುವ ನೀರಿನ ಶುದ್ಧೀಕರಣ ಘಟಕದ ಎರಡು ಬಾಗಿಲುಗಳು ಕಿತ್ತುಹೋಗಿದ್ದು, ಒಳಗಿರುವ ಯಂತ್ರೋಪಕರಣಗಳು ಯಾವುದೇ ಭದ್ರತೆಯಿಲ್ಲದೆ ಬಿದ್ದಿರುವುದರಿಂದ ಅವು ಹಾನಿಗೊಳಗಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಲೈಟ್, ಫ್ಯಾನ್‌ಗಳ ದೋಷ; ಸುರಕ್ಷತೆಗೂ ಪ್ರಶ್ನೆ ಆಸ್ಪತ್ರೆಯ ಹಲವೆಡೆ ಅಳವಡಿಸಿರುವ ಎಲ್‌ಇಡಿ ಟ್ಯೂಬ್‌ಲೈಟ್‌ಗಳು ಜೊತ ಬಿದ್ದುದ್ದು ಕಂಡು ಬಂದಿದೆ,ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಕೆಲವು ಫ್ಯಾನ್‌ಗಳು ಕೂಡ ಚಾಲನೆಯಲ್ಲಿಲ್ಲ. ಮೇಲ್ಚಾವಣಿಯ ಮೇಲಿನ ನೀರಿನ ಪೈಪ್‌ಲೈನ್ ಹಾಗೂ ವಿದ್ಯುತ್ ಸರಬರಾಜು ಪೈಪ್‌ಲೈನ್‌ಗಳು ಸುರಕ್ಷತಾ ಕ್ರಮಗಳಿಲ್ಲದೆ ಹೊರಗಡೆ ತೆರೆದ ಸ್ಥಿತಿಯಲ್ಲಿರುವುದರಿಂದ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಲಾಗಿದೆ. ವೈದ್ಯರು, ಸಿಬ್ಬಂದಿ ಕೊರತೆ 100 ಹಾಸಿಗೆಗಳ ಆಸ್ಪತ್ರೆಯಾಗಿದ್ದರೂ ಅಗತ್ಯ ಸಂಖ್ಯೆಯ ತಜ್ಞ ವೈದ್ಯರು, ನರ್ಸ್‌ಗಳು ಹಾಗೂ ಇತರ ವೈದ್ಯಕೀಯ ಸಿಬ್ಬಂದಿ ಲಭ್ಯವಿಲ್ಲ. ಸಿಬ್ಬಂದಿ ಕೊರತೆಯಿಂದ ಆರೋಗ್ಯ ಸೇವೆ ಹಾಗೂ ಆಸ್ಪತ್ರೆಯ ಸ್ವಚ್ಛತೆ ನಿರ್ವಹಣೆಯ ಮೇಲೂ ಪರಿಣಾಮ ಬೀರಿದೆ. ಆಸ್ಪತ್ರೆಯ ಕೆಲ ಭಾಗಗಳಲ್ಲಿ ಈಗಾಗಲೇ ಜೇಡರ ಬಲೆಗಳು ಕಾಣಿಸಿಕೊಂಡಿವೆ. ಕಟ್ಟಡದ ಗಾತ್ರಕ್ಕೆ ಅನುಗುಣವಾಗಿ ಹೆಚ್ಚಿನ ಸ್ವಚ್ಛತಾ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಬಸ್ ಸೌಲಭ್ಯ ಇಲ್ಲ; ಆಟೋಗಳ ದರ ದಬ್ಬಾಳಿಕೆ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಿಂದ ಸುಮಾರು 2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ ನೇರ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲ. ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ರೋಗಿಗಳು ಆಟೋಗಳನ್ನು ಅವಲಂಬಿಸಬೇಕಾಗಿದ್ದು, ಕೆಲ ಆಟೋ ಚಾಲಕರು ಅಧಿಕ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಕೇಂದ್ರ ಬಸ್ ನಿಲ್ದಾಣದಿಂದ ಆಸ್ಪತ್ರೆಗೆ ನೇರ ಬಸ್ ಸೇವೆ ಆರಂಭಿಸುವಂತೆ ಸಾರ್ವಜನಿಕರು ಸರ್ಕಾರವನ್ನು ಆಗ್ರಹಿಸಿದ್ದಾರೆ. ದಿಕ್ಕು ಸೂಚನಾ ಫಲಕಗಳ ಕೊರತೆ ಆಸ್ಪತ್ರೆಯೊಳಗೆ ಹೆರಿಗೆ ವಾರ್ಡ್, ತುರ್ತು ಚಿಕಿತ್ಸಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಿಗೆ ದಾರಿ ತೋರಿಸುವ ಸೂಚನಾ ಫಲಕಗಳ ಕೊರತೆಯಿಂದ ಗ್ರಾಮೀಣ ಭಾಗಗಳಿಂದ ಬರುವ ರೋಗಿಗಳು ಹಾಗೂ ಸಾರ್ವಜನಿಕರು ಆಸ್ಪತ್ರೆಯೊಳಗೆ ಸಂಚರಿಸಲು ತೊಂದರೆ ಅನುಭವಿಸುತ್ತಿದ್ದಾರೆ. ಸಂಪರ್ಕ ರಸ್ತೆ ದುಸ್ಥಿತಿ ತಹಶೀಲ್ದಾರ್ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಮೂಲಕ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ಗುಂಡಿಗಳು ನಿರ್ಮಾಣಗೊಂಡಿವೆ. ಕೆಲವೆಡೆ ವಿದ್ಯುತ್ ಕಂಬಗಳು ರಸ್ತೆಯ ಅಂಚಿನಲ್ಲೇ ಇರುವುದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಎರಡು ವಾಹನಗಳು ಎದುರುಬಂದರೆ ಸುಗಮವಾಗಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹಿರಿಯ ಅಧಿಕಾರಿಗಳ ಭೇಟಿ ಆಗ್ರಹ ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆಯ ನಡುವೆಯೇ ಹೆರಿಗೆ ಹಾಗೂ ಸ್ತ್ರೀರೋಗ ಚಿಕಿತ್ಸಾ ಸೇವೆ ಆರಂಭಿಸಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಜೊತೆಗೆ ಕುಡಿಯುವ ನೀರು, ಬಿಸಿನೀರು, ವಿದ್ಯುತ್, ವೈದ್ಯರು, ಸಿಬ್ಬಂದಿ ಹಾಗೂ ಸಾರಿಗೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ತಕ್ಷಣ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ.ಶಾಸಕ ದೊಡ್ಡನಗೌಡ ಎಚ್. ಪಾಟೀಲ್,"ಆಸ್ಪತ್ರೆಯ ಕಾಮಗಾರಿ ಸಂಪೂರ್ಣವಾಗಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಂಡ ಬಳಿಕವೇ ಹಸ್ತಾಂತರ ಮಾಡಬೇಕು ಎಂದು ನಾನು ಸೂಚಿಸಿದ್ದೆ. ಆದರೆ ಅದಕ್ಕೂ ಮುನ್ನವೇ ಅವಸರದಲ್ಲಿ ಆಸ್ಪತ್ರೆಯನ್ನು ಉದ್ಘಾಟಿಸಿ ಕಾರ್ಯಾರಂಭ ಮಾಡಲಾಗಿದೆ. ಈ ಹಿಂದಿನ ಮುಖ್ಯಮಂತ್ರಿಗಳ ಕೊಪ್ಪಳ ಆಗಮನದ ಹಿನ್ನೆಲೆಯಲ್ಲಿ ಅವರಿಂದ ಉದ್ಘಾಟಿಸುವ ಸಲುವಾಗಿ ಅಧಿಕಾರಿಗಳ ಒತ್ತಡ ಹಾಗೂ ಅವಸರದ ನಿರ್ಧಾರದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ," ಎಂದು ಹೇಳಿದರು. "ಆಸ್ಪತ್ರೆಯ ದುರಸ್ತಿ ಕಾಮಗಾರಿ ಹಾಗೂ ಮೂಲಸೌಕರ್ಯಗಳ ಸ್ಥಿತಿಯನ್ನು ಪರಿಶೀಲಿಸಲು ಶೀಘ್ರವೇ ಸ್ಥಳಕ್ಕೆ ಭೇಟಿ ನೀಡಲಾಗುವುದು. ಕಾಮಗಾರಿಯನ್ನು ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಪೂರ್ಣಗೊಳಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು," ಎಂದು ಹೇಳಿದರು. ವೈದ್ಯಾಧಿಕಾರಿ ಡಾ. ಚಂದ್ರಕಲಾ ಸ್ಪಷ್ಟನೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಚಂದ್ರಕಲಾ ಮಾತನಾಡಿ, "ತಾಯಿ-ಮಕ್ಕಳ ಆಸ್ಪತ್ರೆಯ ಕಟ್ಟಡವನ್ನು ಗುತ್ತಿಗೆದಾರರು ಅಥವಾ ಇಂಜಿನಿಯರ್‌ಗಳು ಇನ್ನೂ ಅಧಿಕೃತವಾಗಿ ನಮಗೆ ಹಸ್ತಾಂತರ ಮಾಡಿಲ್ಲ. ಕಟ್ಟಡದ ನಕ್ಷೆಯನ್ನು ಮಾತ್ರ ನೀಡಿದ್ದಾರೆ. ಸಾರ್ವಜನಿಕರು ಹಾಗೂ ಮೇಲಾಧಿಕಾರಿಗಳ ಒತ್ತಡದಿಂದ ಆಸ್ಪತ್ರೆಯ ಕಾರ್ಯಾಚರಣೆಯನ್ನು ಆರಂಭಿಸಿದ್ದೇವೆ," ಎಂದು ಹೇಳಿದರು. "ಆಸ್ಪತ್ರೆಯ ಮೇಲ್ಭಾಗದಲ್ಲಿರುವ ನೀರು ಶುದ್ಧೀಕರಣ ಘಟಕದ ಬಾಗಿಲುಗಳು ಕಿತ್ತುಹೋಗಿವೆ. ಸೋಲಾರ್ ವಾಟರ್ ಹೀಟರ್‌ನ ಗಾಜುಗಳು ಒಡೆದಿವೆ. ಕೊಠಡಿಗಳ ಬಾಗಿಲುಗಳು, ಲೈಟಿಂಗ್ ವ್ಯವಸ್ಥೆ ಹಾಗೂ ಫ್ಯಾನ್‌ಗಳಲ್ಲಿ ಲೋಪದೋಷಗಳಿದ್ದು, ಕೆಲವು ಫ್ಯಾನ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಪ್ರಸ್ತುತ ನಾವು ಸ್ವಂತವಾಗಿ ಒಂದು ಫ್ಯಾನ್ ಅಳವಡಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದೇವೆ," ಎಂದು ವಿವರಿಸಿದರು. "ಈ ಎಲ್ಲಾ ಸಮಸ್ಯೆಗಳು ಹಾಗೂ ಅಪೂರ್ಣ ಕಾಮಗಾರಿಯ ಕುರಿತು ಸಂಬಂಧಪಟ್ಟ ಇಂಜಿನಿಯರ್‌ಗೆ ಅಧಿಕೃತವಾಗಿ ಪತ್ರ ಬರೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು," ಎಂದು ಅವರು ತಿಳಿಸಿದರು.
    4
    ಕುಷ್ಟಗಿ ತಾಯಿ-ಮಕ್ಕಳ ಆಸ್ಪತ್ರೆ: ಆರಂಭವಾಗಿ ಕೇವಲ 15 ದಿನಗಳಲ್ಲೇ ಮೂಲಸೌಕರ್ಯಗಳ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ
ಕುಷ್ಟಗಿ: ಸುಮಾರು ರೂ.27 ಕೋಟಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯೋಜನೆಯಡಿ ನಿರ್ಮಿಸಲಾದ 100 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ಕಾರ್ಯಾರಂಭವಾಗಿ ಕೇವಲ 15 ದಿನಗಳಲ್ಲೇ ಹಲವು ಮೂಲಸೌಕರ್ಯಗಳು ಹಾಳಾಗಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಅನುಮಾನಗಳಿಗೆ ಕಾರಣವಾಗಿದೆ. ಹೆರಿಗೆ ಹಾಗೂ ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭವಾಗಿದ್ದರೂ, ಸುರಕ್ಷಿತ ಮತ್ತು ಗುಣಮಟ್ಟದ ಆರೋಗ್ಯ ಸೇವೆಗೆ ಅಗತ್ಯವಾದ ಮೂಲಸೌಲಭ್ಯಗಳು ಇನ್ನೂ ಪೂರ್ಣಗೊಂಡಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.
ಬಿಸಿನೀರು, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ
ಗರ್ಭಿಣಿಯರು, ಬಾಣಂತಿಯರು ಹಾಗೂ ನವಜಾತ ಶಿಶುಗಳಿಗೆ ಅಗತ್ಯವಾದ ಶುದ್ಧ ಕುಡಿಯುವ ನೀರು ಮತ್ತು ಬಿಸಿನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಆಸ್ಪತ್ರೆಯ ಮೇಲ್ಭಾಗದಲ್ಲಿ ಅಳವಡಿಸಿರುವ ಸೋಲಾರ್ ವಾಟರ್ ಹೀಟರ್‌ನ ಗಾಜಿನ ಟ್ಯೂಬ್‌ಗಳು ಒಡೆದು ನುಚ್ಚುನೂರಾಗಿವೆ.
ಕುಡಿಯುವ ನೀರಿನ ಶುದ್ಧೀಕರಣ ಘಟಕದ ಎರಡು ಬಾಗಿಲುಗಳು ಕಿತ್ತುಹೋಗಿದ್ದು, ಒಳಗಿರುವ ಯಂತ್ರೋಪಕರಣಗಳು ಯಾವುದೇ ಭದ್ರತೆಯಿಲ್ಲದೆ ಬಿದ್ದಿರುವುದರಿಂದ ಅವು ಹಾನಿಗೊಳಗಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಲೈಟ್, ಫ್ಯಾನ್‌ಗಳ ದೋಷ; ಸುರಕ್ಷತೆಗೂ ಪ್ರಶ್ನೆ
ಆಸ್ಪತ್ರೆಯ ಹಲವೆಡೆ ಅಳವಡಿಸಿರುವ ಎಲ್‌ಇಡಿ ಟ್ಯೂಬ್‌ಲೈಟ್‌ಗಳು ಜೊತ ಬಿದ್ದುದ್ದು ಕಂಡು ಬಂದಿದೆ,ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಕೆಲವು ಫ್ಯಾನ್‌ಗಳು ಕೂಡ ಚಾಲನೆಯಲ್ಲಿಲ್ಲ. ಮೇಲ್ಚಾವಣಿಯ ಮೇಲಿನ ನೀರಿನ ಪೈಪ್‌ಲೈನ್ ಹಾಗೂ ವಿದ್ಯುತ್ ಸರಬರಾಜು ಪೈಪ್‌ಲೈನ್‌ಗಳು ಸುರಕ್ಷತಾ ಕ್ರಮಗಳಿಲ್ಲದೆ ಹೊರಗಡೆ ತೆರೆದ ಸ್ಥಿತಿಯಲ್ಲಿರುವುದರಿಂದ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಲಾಗಿದೆ.
ವೈದ್ಯರು, ಸಿಬ್ಬಂದಿ ಕೊರತೆ
100 ಹಾಸಿಗೆಗಳ ಆಸ್ಪತ್ರೆಯಾಗಿದ್ದರೂ ಅಗತ್ಯ ಸಂಖ್ಯೆಯ ತಜ್ಞ ವೈದ್ಯರು, ನರ್ಸ್‌ಗಳು ಹಾಗೂ ಇತರ ವೈದ್ಯಕೀಯ ಸಿಬ್ಬಂದಿ ಲಭ್ಯವಿಲ್ಲ. ಸಿಬ್ಬಂದಿ ಕೊರತೆಯಿಂದ ಆರೋಗ್ಯ ಸೇವೆ ಹಾಗೂ ಆಸ್ಪತ್ರೆಯ ಸ್ವಚ್ಛತೆ ನಿರ್ವಹಣೆಯ ಮೇಲೂ ಪರಿಣಾಮ ಬೀರಿದೆ. ಆಸ್ಪತ್ರೆಯ ಕೆಲ ಭಾಗಗಳಲ್ಲಿ ಈಗಾಗಲೇ ಜೇಡರ ಬಲೆಗಳು ಕಾಣಿಸಿಕೊಂಡಿವೆ. ಕಟ್ಟಡದ ಗಾತ್ರಕ್ಕೆ ಅನುಗುಣವಾಗಿ ಹೆಚ್ಚಿನ ಸ್ವಚ್ಛತಾ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬಸ್ ಸೌಲಭ್ಯ ಇಲ್ಲ; ಆಟೋಗಳ ದರ ದಬ್ಬಾಳಿಕೆ
ಪಟ್ಟಣದ ಕೇಂದ್ರ ಬಸ್ ನಿಲ್ದಾಣದಿಂದ ಸುಮಾರು 2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ ನೇರ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲ. ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ರೋಗಿಗಳು ಆಟೋಗಳನ್ನು ಅವಲಂಬಿಸಬೇಕಾಗಿದ್ದು, ಕೆಲ ಆಟೋ ಚಾಲಕರು ಅಧಿಕ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ.
ಕೇಂದ್ರ ಬಸ್ ನಿಲ್ದಾಣದಿಂದ ಆಸ್ಪತ್ರೆಗೆ ನೇರ ಬಸ್ ಸೇವೆ ಆರಂಭಿಸುವಂತೆ ಸಾರ್ವಜನಿಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ದಿಕ್ಕು ಸೂಚನಾ ಫಲಕಗಳ ಕೊರತೆ
ಆಸ್ಪತ್ರೆಯೊಳಗೆ ಹೆರಿಗೆ ವಾರ್ಡ್, ತುರ್ತು ಚಿಕಿತ್ಸಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಿಗೆ ದಾರಿ ತೋರಿಸುವ ಸೂಚನಾ ಫಲಕಗಳ ಕೊರತೆಯಿಂದ ಗ್ರಾಮೀಣ ಭಾಗಗಳಿಂದ ಬರುವ ರೋಗಿಗಳು ಹಾಗೂ ಸಾರ್ವಜನಿಕರು ಆಸ್ಪತ್ರೆಯೊಳಗೆ ಸಂಚರಿಸಲು ತೊಂದರೆ ಅನುಭವಿಸುತ್ತಿದ್ದಾರೆ.
ಸಂಪರ್ಕ ರಸ್ತೆ ದುಸ್ಥಿತಿ
ತಹಶೀಲ್ದಾರ್ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಮೂಲಕ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ಗುಂಡಿಗಳು ನಿರ್ಮಾಣಗೊಂಡಿವೆ. ಕೆಲವೆಡೆ ವಿದ್ಯುತ್ ಕಂಬಗಳು ರಸ್ತೆಯ ಅಂಚಿನಲ್ಲೇ ಇರುವುದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಎರಡು ವಾಹನಗಳು ಎದುರುಬಂದರೆ ಸುಗಮವಾಗಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಹಿರಿಯ ಅಧಿಕಾರಿಗಳ ಭೇಟಿ ಆಗ್ರಹ
ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆಯ ನಡುವೆಯೇ ಹೆರಿಗೆ ಹಾಗೂ ಸ್ತ್ರೀರೋಗ ಚಿಕಿತ್ಸಾ ಸೇವೆ ಆರಂಭಿಸಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಜೊತೆಗೆ ಕುಡಿಯುವ ನೀರು, ಬಿಸಿನೀರು, ವಿದ್ಯುತ್, ವೈದ್ಯರು, ಸಿಬ್ಬಂದಿ ಹಾಗೂ ಸಾರಿಗೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ತಕ್ಷಣ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ.ಶಾಸಕ ದೊಡ್ಡನಗೌಡ ಎಚ್. ಪಾಟೀಲ್,"ಆಸ್ಪತ್ರೆಯ ಕಾಮಗಾರಿ ಸಂಪೂರ್ಣವಾಗಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಂಡ ಬಳಿಕವೇ ಹಸ್ತಾಂತರ ಮಾಡಬೇಕು ಎಂದು ನಾನು ಸೂಚಿಸಿದ್ದೆ. ಆದರೆ ಅದಕ್ಕೂ ಮುನ್ನವೇ ಅವಸರದಲ್ಲಿ ಆಸ್ಪತ್ರೆಯನ್ನು ಉದ್ಘಾಟಿಸಿ ಕಾರ್ಯಾರಂಭ ಮಾಡಲಾಗಿದೆ. ಈ ಹಿಂದಿನ ಮುಖ್ಯಮಂತ್ರಿಗಳ ಕೊಪ್ಪಳ ಆಗಮನದ ಹಿನ್ನೆಲೆಯಲ್ಲಿ ಅವರಿಂದ ಉದ್ಘಾಟಿಸುವ ಸಲುವಾಗಿ ಅಧಿಕಾರಿಗಳ ಒತ್ತಡ ಹಾಗೂ ಅವಸರದ ನಿರ್ಧಾರದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ," ಎಂದು ಹೇಳಿದರು.
"ಆಸ್ಪತ್ರೆಯ ದುರಸ್ತಿ ಕಾಮಗಾರಿ ಹಾಗೂ ಮೂಲಸೌಕರ್ಯಗಳ ಸ್ಥಿತಿಯನ್ನು ಪರಿಶೀಲಿಸಲು ಶೀಘ್ರವೇ ಸ್ಥಳಕ್ಕೆ ಭೇಟಿ ನೀಡಲಾಗುವುದು. ಕಾಮಗಾರಿಯನ್ನು ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಪೂರ್ಣಗೊಳಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು," ಎಂದು ಹೇಳಿದರು.
ವೈದ್ಯಾಧಿಕಾರಿ ಡಾ. ಚಂದ್ರಕಲಾ ಸ್ಪಷ್ಟನೆ
ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಚಂದ್ರಕಲಾ ಮಾತನಾಡಿ, "ತಾಯಿ-ಮಕ್ಕಳ ಆಸ್ಪತ್ರೆಯ ಕಟ್ಟಡವನ್ನು ಗುತ್ತಿಗೆದಾರರು ಅಥವಾ ಇಂಜಿನಿಯರ್‌ಗಳು ಇನ್ನೂ ಅಧಿಕೃತವಾಗಿ ನಮಗೆ ಹಸ್ತಾಂತರ ಮಾಡಿಲ್ಲ. ಕಟ್ಟಡದ ನಕ್ಷೆಯನ್ನು ಮಾತ್ರ ನೀಡಿದ್ದಾರೆ. ಸಾರ್ವಜನಿಕರು ಹಾಗೂ ಮೇಲಾಧಿಕಾರಿಗಳ ಒತ್ತಡದಿಂದ ಆಸ್ಪತ್ರೆಯ ಕಾರ್ಯಾಚರಣೆಯನ್ನು ಆರಂಭಿಸಿದ್ದೇವೆ," ಎಂದು ಹೇಳಿದರು.
"ಆಸ್ಪತ್ರೆಯ ಮೇಲ್ಭಾಗದಲ್ಲಿರುವ ನೀರು ಶುದ್ಧೀಕರಣ ಘಟಕದ ಬಾಗಿಲುಗಳು ಕಿತ್ತುಹೋಗಿವೆ. ಸೋಲಾರ್ ವಾಟರ್ ಹೀಟರ್‌ನ ಗಾಜುಗಳು ಒಡೆದಿವೆ. ಕೊಠಡಿಗಳ ಬಾಗಿಲುಗಳು, ಲೈಟಿಂಗ್ ವ್ಯವಸ್ಥೆ ಹಾಗೂ ಫ್ಯಾನ್‌ಗಳಲ್ಲಿ ಲೋಪದೋಷಗಳಿದ್ದು, ಕೆಲವು ಫ್ಯಾನ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಪ್ರಸ್ತುತ ನಾವು ಸ್ವಂತವಾಗಿ ಒಂದು ಫ್ಯಾನ್ ಅಳವಡಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದೇವೆ," ಎಂದು ವಿವರಿಸಿದರು.
"ಈ ಎಲ್ಲಾ ಸಮಸ್ಯೆಗಳು ಹಾಗೂ ಅಪೂರ್ಣ ಕಾಮಗಾರಿಯ ಕುರಿತು ಸಂಬಂಧಪಟ್ಟ ಇಂಜಿನಿಯರ್‌ಗೆ ಅಧಿಕೃತವಾಗಿ ಪತ್ರ ಬರೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು," ಎಂದು ಅವರು ತಿಳಿಸಿದರು.
    user_Maruti Gumagera
    Maruti Gumagera
    Local News Reporter ಕುಷ್ಟಗಿ, ಕೊಪ್ಪಳ, ಕರ್ನಾಟಕ•
    1 hr ago
  • ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ 27 ಕೋಟಿ ರೂಪಾಯಿಯ ತಾಯಿ-ಮಕ್ಕಳ ಆಸ್ಪತ್ರೆ ಅವ್ಯವಸ್ಥೆ. ವರದಿ:- ಪವಾಡೆಪ್ಪ ಚೌಡ್ಕಿ ಕುಷ್ಟಗಿ:- ಪಟ್ಟಣದಲ್ಲಿ ನೂತನವಾಗಿ ಆರಂಭವಾಗಿರುವ ಸುಮಾರು 27 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 100 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಬೇಕಾದ ಮೂಲಭೂತ ಸೌಕರ್ಯಗಳು ಇದ್ದರು ಸಹ ಎಲ್ಲವು ಇಲ್ಲದಂತೆ ಆಗಿದೆ ಕೆಲವು ಇನ್ನು‌ ಸೌಲಭ್ಯಗಳು ಸರಿಯಾಗಿ ಇಲ್ಲದ ಕಾರಣ ಈ ಆಸ್ಪತ್ರೆಯನ್ನು ತರಾತುರಿಯಲ್ಲಿ ಆರಂಭ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. *ಅವ್ಯವಸ್ಥೆಗಳ ನಡುವೆಯೇ ಹೆರಿಗೆ ಸೇವೆ ಆರಂಭ ಸಾರ್ವಜನಿಕರ ಆಕ್ರೋಶ* ಚಿಕ್ಕಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಹಾಗೂ ಜನತೆಗೆ ಬೇಕಾಗುವ ಗುಣಮಟ್ಟದ ಆರೋಗ್ಯ ಸೇವೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಬಾಣಂತಿರಿಗೆ ಬೇಕಾದ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲದೆ ಆಸ್ಪತ್ರೆಗೆ ಅಳವಡಿಸಿರುವ ಸೋಲಾರ್ ವಾಟರ್ ಇಟರ್ ಟುಬೂಗಳು ಹೊಡೆದು ಹಾಳಾಗಿ ಹೋಗಿವೆ. ಈ ಎಲ್ಲಾ ಸೋಲಾರ್ ಟುಬೂಗಳು ಅವ್ಯವಸ್ಥೆಯಿಂದ ಕೆಲ ವಸ್ತುಗಳು ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ ಹಾಳಾಗಿ ಒಡೆದು ಹೋಗಿವೆ. ಈ ಆಸ್ಪತ್ರೆಯ ಸ್ಥಿತ ಇದೇ ರೀತಿಯಾಗಿ ಮುಂದುವರೆದರೆ ಇದರಿಂದ ಸಾರ್ವಜನಿಕರು ಮತ್ತು ಗರ್ಭಿಣಿಯರು ಹಾಗೂ ಬಾಣಂತಿಯರು ಮತ್ತು ಚಿಕ್ಕ ಮಕ್ಕಳು ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. *ಆಸ್ಪತ್ರೆಯಲ್ಲಿ ಕೆಲ ವಿದ್ಯುತ್ ಲೈಟ್ ಗಳು ಮತ್ತು ಪ್ಯಾನ್ ಗಳು ಬಂದ್.* ಆಸ್ಪತ್ರೆಯಲ್ಲಿ ಸಮರ್ಪಕ ಕುಡಿಯುವ ನೀರು, ಬಿಸಿನೀರಿನ ವ್ಯವಸ್ಥೆ, ನಿರಂತರ ವಿದ್ಯುತ್ ಪೂರೈಕೆ, ಸೇರಿದಂತೆ ಹಲವು ಅಗತ್ಯ ಸೌಲಭ್ಯಗಳು ಪೂರ್ಣ ಪ್ರಮಾಣದಲ್ಲಿ ಲಭ್ಯವಿಲ್ಲದೆ ಎಲ್ಲವು ಅವ್ಯವಸ್ಥೆಯಾಗಿ ಕೂಡಿದ್ದು ಎಲ್ಲವು ಬಂದ್ ಆಗಿರುವಂತದ್ದು ಕಂಡು ಬಂದಿದೆ. *ವೈದ್ಯರ ಕೊರತೆ ಮತ್ತು ಸಿಬ್ಬಂದಿಗಳ ಕೊರತೆ ಎದುರುಸುತ್ತಿರುವ ಆಸ್ಪತ್ರೆ* ಆಸ್ಪತ್ರೆಗೆ ತಕ್ಕಂತೆ ಬೇಕಾಗುವ ವೈದ್ಯಕೀಯ ಸೇವೆಗೆ ಅಗತ್ಯವಿರುವ ಸಿಬ್ಬಂದಿಯ ಕೊರತೆಯೂ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಮತ್ತು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು ಪ್ರತಿನಿತ್ಯ ಕಾರ್ಯನಿರ್ವಹಣೆಯ ಮೇಲೆ ಮತ್ತು ರೋಗಿಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದರೆ ತಪ್ಪಾಗಲಾರದು. *ಕೇಂದ್ರ ಬಸ್ ನಿಲ್ದಾಣದಿಂದ 2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ ಸಾರಿಗೆ ವ್ಯವಸ್ಥೆಗೆ ಆಗ್ರಹ.* ಪಟ್ಟಣದ ಬಸ್ ನಿಲ್ದಾಣದಿಂದ ಸರಿ ಸುಮಾರು ಎರಡು ಮೂರು ಕಿ.ಮಿ. ದೂರವಿದ್ದು ಗರ್ಭಿಣಿಯರಿಗೆ ಮತ್ತು ಸಾರ್ವಜನಿಕರಿಗೆ ನಡೆದುಕೊಂಡು ಹೋಗಲು ಬಹಳ ಕಷ್ಟವಾಗುತ್ತಿದ್ದು ಬಸ್ ನಿಲ್ದಾಣದಿಂದ ಬಸ್ ಸೌಕರ್ಯ ಇಲ್ಲದೆ ಬರಿ ಆಟೋಗಳನ್ನು ನೆಚ್ಚಿಕೊಂಡು ಆಸ್ಪತ್ರೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಚಾಲಕರು ತಮಗೆ ಮನಬಂದಂತೆ ಆಟೋ ಬಾಡಿಗೆ ಏರಿಗೆ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರೀಯ ಬಸ್ ನಿಲ್ದಾಣದಿಂದ ಆಸ್ಪತ್ರೆಯ ವರಗೆ ಬಸ್ ಬೀಡಬೇಕು ಎಂದು ಸಾರ್ವಜನಿಕರು ಆಗ್ರಹವಾಗಿದೆ. *ಆಸ್ಪತ್ರೆಯಲ್ಲಿ ಮಾರ್ಗ ಸೂಚಿಸುವ ನಾಮ ಫಲಕಗಳು ಇಲ್ಲ.* ಆಸ್ಪತ್ರೆಯ ಒಳಗಡೆ ಹೆರಿಗೆ ಕೊಠಡಿ ಮತ್ತು ರೋಗಿಗಳ ಹತ್ತಿರ ತರಳಬೇಕು ಎಂದರೆ ಸರಿಯಾದ ಮಾರ್ಗವನ್ನು ಸೂಚಿಸುವ ದಿಕ್ಕು ಸೂಚನಾ ಫಲಕಗಳು ಇಲ್ಲದೆ ಆಸ್ಪತ್ರೆಗೆ ಬರುವ ಸಾರ್ವಜನಿಕರು ಕೊರತೆಯನ್ನು ಎದುರಿಸಬೇಕಾಗಿದೆ. ಮತ್ತು ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದು ಆಸ್ಪತ್ರೆಗೆ ಬಂದ ರೋಗಿಗಳು ಅವಳನ್ನು ತೊಂಡಿಕೊಂಡಿದ್ದಾರೆ. *ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಹದೆಗೆಟ್ಟ ಮಾರ್ಗದ ರಸ್ತೆ.* ತಹಶೀಲ್ದಾರ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು ಈ ರಸ್ತೆಯು ಹದಗೆಟ್ಟಿದ್ದು, ಸುತ್ತಮುತ್ತಲಿನ ಮೂಲಸೌಕರ್ಯಗಳ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕೆಲವು ಕಡೆ ವಿದ್ಯುತ್ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಮತ್ತು ವಿದ್ಯುತ್ ಕಂಬಗಳು ರಸ್ತೆಯ ಪಕ್ಕದಲ್ಲಿ ಇದ್ದು ಯಾವುದೇ ಎರಡು ಗಾಡಿಗಳು ಬಂದರೆ ಸಾಕು ಅದಲು ಬದಲು ಆದಲು ಮತ್ತು ಹೋಗಲು ಮತ್ತು ಬರಲು ಸರಿಯಾದ ರಸ್ತೆ ಇಲ್ಲದೆ ರಸ್ತೆಯ ಅಕ್ಕ ಪಕ್ಕದಲ್ಲಿ ತೆಗ್ಗು ದಿನ್ನೆಗಳು ಇವೆ ಈ ರಸ್ತೆ ಬಹಳ ಇರ್ಕಟ್ಟಾಗಿದ್ದು ಎದ್ದು ಕಾಣುತ್ತಿದೆ ಎಂಬ ಆರೋಪಗಳಿವೆ. ಕೂಡಲೇ ಸರಿ ಪಡಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭಗೊಂಡಿರುವುದು ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ರೋಗಿಗಳ ಸುರಕ್ಷತೆ ಹಾಗೂ ಆರೋಗ್ಯ ಸೇವೆಯ ಗುಣಮಟ್ಟದ ದೃಷ್ಟಿಯಿಂದ ಅಗತ್ಯ ಮೂಲಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ಆಸ್ಪತ್ರೆಯಿಂದ ಬಾಡಿಯಲ್ಲಿ ಅಳವಡಿಸಲಾಗಿರುವ ಸೋಲಾರ್ ಟುಬೂಗಳು ಹೊಡೆದು ಆಹಾಳಾಗಿ ನುಚ್ಚುನುರಾಗಿದ್ದು ಕಂಡು ಬಂದಿದೆ ನೀರಿನ ಶುದ್ದ ಕುಡಿಯುವ ನೀರಿನ ಘಟದ ಕೋಣಿಯ ಎರಡು ಘಟಕದ ಬಾಗಿಲು ಸಂಪೂರ್ಣ ಕಿತ್ತು ಹೋಗಿವೆ ಘಟಕದ ಮಿಷನ್ ಗಳು ಸುರಕ್ಷೆತೆ ಇಲ್ಲ. ಅವುಗಳನ್ನು ಸುಸಜ್ಜಿತವಾಗಿ ಇಡಬೇಕಾಗಿದೆ ಆಸ್ಪತ್ರೆ ‌ಕಟ್ಟಿದಕ್ಕೆ ಸರಕಾರದ ಹಣ ನಷ್ಟವಾಗದಂತೆ ಮತ್ತು ಯಾವುದೇ ಕಾರಣಕ್ಕು ಆಸ್ಪತ್ರೆಯನ್ನು ಆಳಾಗಲು ಬೀಡಬಾರದು ಎಂಬುವದೆ ಸಾರ್ವಜನಿಕರ ಆಸೆಯಾಗಿದೆ ಎಂದು ಹೇಳಬಹುದು. ಬೈಟ್:- ಆಸ್ಪತ್ರೆಯನ್ನು ಸಂಪೂರ್ಣ ಆಗುವವರೆಗೂ ಹಸ್ತಾಂತರ ಜವಾಬ್ದಾರಿ ತೆಗೆದುಕೊಳ್ಳಬೇಡಿ ಎಂದು ತಾಲೂಕ ವೈದ್ಯಾಧಿಕಾರಿ ತಿಳಿಸಿದ್ದೆ ಆದರೆ ತರಾತೂರಿಯಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರಿಂದ ಕೊಪ್ಪಳದಲ್ಲಿ ಉದ್ಘಾಟನೆ ಮಾಡಿದರು. ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಸರಿಯಾಗಿ ನಿರ್ವಹಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. *ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ* -------------------------------- ಹೌದು ಆಸ್ಪತ್ರೆಯಲ್ಲಿ ಕೆಲ ಕೊಠಡಿಯಲ್ಲಿ ವಿದ್ಯುತ್ ಲೈಟ್ ಮತ್ತು ಪ್ಯಾನ್ ಇಲ್ಲ ಇದ್ದರು ಸರಿಯಾಗಿ ಕಾರ್ಯನಿರ್ವಸುತ್ತಿಲ್ಲ ಆದರೆ ಈ ಆಸ್ಪತ್ರೆ ಆರಂಭವಾಗಿದ್ದರು ಸಂಬಂಧಿಸಿದ ಏಜೆನ್ಸಿ ಯವರು ಸಹ ನಮಗೆ ಇನ್ನು ಹಸ್ತಾಂತರ ಮಾಡಿಲ್ಲ ಸಂಪೂರ್ಣ ಆಗುವವರೆಗೂ ಜವಾಬ್ದಾರಿ ತೆಗೆದುಕೊಳ್ಳುವದಿಲ್ಲ ಇನ್ನು ಸ್ವಲ್ಪ ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇವೆ ಸರಿ ಮಾಡಬೇಕಾಗಿದೆ. *ಡಾ.ಚಂದ್ರಕಲಾ ತಾಲೂಕು ವೈದ್ಯಾಧಿಕಾರಿ.*
    2
    ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ 27 ಕೋಟಿ ರೂಪಾಯಿಯ ತಾಯಿ-ಮಕ್ಕಳ ಆಸ್ಪತ್ರೆ ಅವ್ಯವಸ್ಥೆ.
ವರದಿ:- ಪವಾಡೆಪ್ಪ ಚೌಡ್ಕಿ
ಕುಷ್ಟಗಿ:- ಪಟ್ಟಣದಲ್ಲಿ ನೂತನವಾಗಿ ಆರಂಭವಾಗಿರುವ ಸುಮಾರು 27 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ  ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 100 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಬೇಕಾದ ಮೂಲಭೂತ ಸೌಕರ್ಯಗಳು ಇದ್ದರು ಸಹ ಎಲ್ಲವು ಇಲ್ಲದಂತೆ ಆಗಿದೆ ಕೆಲವು ಇನ್ನು‌ ಸೌಲಭ್ಯಗಳು ಸರಿಯಾಗಿ ಇಲ್ಲದ ಕಾರಣ ಈ   ಆಸ್ಪತ್ರೆಯನ್ನು ತರಾತುರಿಯಲ್ಲಿ ಆರಂಭ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
*ಅವ್ಯವಸ್ಥೆಗಳ ನಡುವೆಯೇ ಹೆರಿಗೆ ಸೇವೆ ಆರಂಭ  ಸಾರ್ವಜನಿಕರ ಆಕ್ರೋಶ* 
ಚಿಕ್ಕಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಹಾಗೂ ಜನತೆಗೆ ಬೇಕಾಗುವ ಗುಣಮಟ್ಟದ ಆರೋಗ್ಯ ಸೇವೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಬಾಣಂತಿರಿಗೆ  ಬೇಕಾದ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲದೆ ಆಸ್ಪತ್ರೆಗೆ ಅಳವಡಿಸಿರುವ ಸೋಲಾರ್ ವಾಟರ್ ಇಟರ್ ಟುಬೂಗಳು ಹೊಡೆದು ಹಾಳಾಗಿ ಹೋಗಿವೆ. ಈ ಎಲ್ಲಾ ಸೋಲಾರ್ ಟುಬೂಗಳು ಅವ್ಯವಸ್ಥೆಯಿಂದ ಕೆಲ ವಸ್ತುಗಳು ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ  ಹಾಳಾಗಿ ಒಡೆದು ಹೋಗಿವೆ.
ಈ ಆಸ್ಪತ್ರೆಯ ಸ್ಥಿತ ಇದೇ  ರೀತಿಯಾಗಿ ಮುಂದುವರೆದರೆ ಇದರಿಂದ ಸಾರ್ವಜನಿಕರು ಮತ್ತು  ಗರ್ಭಿಣಿಯರು ಹಾಗೂ ಬಾಣಂತಿಯರು ಮತ್ತು ಚಿಕ್ಕ ಮಕ್ಕಳು ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
*ಆಸ್ಪತ್ರೆಯಲ್ಲಿ ಕೆಲ ವಿದ್ಯುತ್ ಲೈಟ್ ಗಳು ಮತ್ತು ಪ್ಯಾನ್ ಗಳು ಬಂದ್.* 
ಆಸ್ಪತ್ರೆಯಲ್ಲಿ ಸಮರ್ಪಕ ಕುಡಿಯುವ ನೀರು, ಬಿಸಿನೀರಿನ ವ್ಯವಸ್ಥೆ, ನಿರಂತರ ವಿದ್ಯುತ್ ಪೂರೈಕೆ,  ಸೇರಿದಂತೆ ಹಲವು ಅಗತ್ಯ ಸೌಲಭ್ಯಗಳು ಪೂರ್ಣ ಪ್ರಮಾಣದಲ್ಲಿ ಲಭ್ಯವಿಲ್ಲದೆ ಎಲ್ಲವು ಅವ್ಯವಸ್ಥೆಯಾಗಿ ಕೂಡಿದ್ದು ಎಲ್ಲವು ಬಂದ್ ಆಗಿರುವಂತದ್ದು ಕಂಡು ಬಂದಿದೆ.
*ವೈದ್ಯರ ಕೊರತೆ ಮತ್ತು ಸಿಬ್ಬಂದಿಗಳ ಕೊರತೆ ಎದುರುಸುತ್ತಿರುವ ಆಸ್ಪತ್ರೆ* 
ಆಸ್ಪತ್ರೆಗೆ ತಕ್ಕಂತೆ ಬೇಕಾಗುವ ವೈದ್ಯಕೀಯ ಸೇವೆಗೆ ಅಗತ್ಯವಿರುವ ಸಿಬ್ಬಂದಿಯ ಕೊರತೆಯೂ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಮತ್ತು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು   ಪ್ರತಿನಿತ್ಯ ಕಾರ್ಯನಿರ್ವಹಣೆಯ ಮೇಲೆ ಮತ್ತು ರೋಗಿಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದರೆ ತಪ್ಪಾಗಲಾರದು.
*ಕೇಂದ್ರ ಬಸ್ ನಿಲ್ದಾಣದಿಂದ  2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ  ಸಾರಿಗೆ ವ್ಯವಸ್ಥೆಗೆ ಆಗ್ರಹ.* 
ಪಟ್ಟಣದ ಬಸ್ ನಿಲ್ದಾಣದಿಂದ ಸರಿ ಸುಮಾರು  ಎರಡು ಮೂರು ಕಿ.ಮಿ. ದೂರವಿದ್ದು ಗರ್ಭಿಣಿಯರಿಗೆ ಮತ್ತು ಸಾರ್ವಜನಿಕರಿಗೆ ನಡೆದುಕೊಂಡು ಹೋಗಲು ಬಹಳ ಕಷ್ಟವಾಗುತ್ತಿದ್ದು ಬಸ್ ನಿಲ್ದಾಣದಿಂದ ಬಸ್ ಸೌಕರ್ಯ ಇಲ್ಲದೆ ಬರಿ ಆಟೋಗಳನ್ನು ನೆಚ್ಚಿಕೊಂಡು ಆಸ್ಪತ್ರೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಚಾಲಕರು ತಮಗೆ  ಮನಬಂದಂತೆ ಆಟೋ ಬಾಡಿಗೆ ಏರಿಗೆ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರೀಯ ಬಸ್ ನಿಲ್ದಾಣದಿಂದ  ಆಸ್ಪತ್ರೆಯ ವರಗೆ ಬಸ್ ಬೀಡಬೇಕು ಎಂದು ಸಾರ್ವಜನಿಕರು ಆಗ್ರಹವಾಗಿದೆ.
*ಆಸ್ಪತ್ರೆಯಲ್ಲಿ ಮಾರ್ಗ ಸೂಚಿಸುವ ನಾಮ ಫಲಕಗಳು ಇಲ್ಲ.* 
ಆಸ್ಪತ್ರೆಯ ಒಳಗಡೆ ಹೆರಿಗೆ ಕೊಠಡಿ  ಮತ್ತು ರೋಗಿಗಳ ಹತ್ತಿರ ತರಳಬೇಕು ಎಂದರೆ ಸರಿಯಾದ ಮಾರ್ಗವನ್ನು ಸೂಚಿಸುವ ದಿಕ್ಕು ಸೂಚನಾ ಫಲಕಗಳು ಇಲ್ಲದೆ ಆಸ್ಪತ್ರೆಗೆ ಬರುವ ಸಾರ್ವಜನಿಕರು ಕೊರತೆಯನ್ನು ಎದುರಿಸಬೇಕಾಗಿದೆ. ಮತ್ತು ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದು  ಆಸ್ಪತ್ರೆಗೆ ಬಂದ ರೋಗಿಗಳು  ಅವಳನ್ನು ತೊಂಡಿಕೊಂಡಿದ್ದಾರೆ.
*ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಹದೆಗೆಟ್ಟ ಮಾರ್ಗದ ರಸ್ತೆ.* 
ತಹಶೀಲ್ದಾರ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು ಈ ರಸ್ತೆಯು  ಹದಗೆಟ್ಟಿದ್ದು, ಸುತ್ತಮುತ್ತಲಿನ ಮೂಲಸೌಕರ್ಯಗಳ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕೆಲವು ಕಡೆ ವಿದ್ಯುತ್ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಮತ್ತು ವಿದ್ಯುತ್ ಕಂಬಗಳು ರಸ್ತೆಯ ಪಕ್ಕದಲ್ಲಿ ಇದ್ದು ಯಾವುದೇ ಎರಡು ಗಾಡಿಗಳು ಬಂದರೆ ಸಾಕು ಅದಲು ಬದಲು ಆದಲು ಮತ್ತು ಹೋಗಲು ಮತ್ತು ಬರಲು ಸರಿಯಾದ ರಸ್ತೆ ಇಲ್ಲದೆ ರಸ್ತೆಯ ಅಕ್ಕ ಪಕ್ಕದಲ್ಲಿ ತೆಗ್ಗು ದಿನ್ನೆಗಳು ಇವೆ ಈ ರಸ್ತೆ ಬಹಳ ಇರ್ಕಟ್ಟಾಗಿದ್ದು ಎದ್ದು ಕಾಣುತ್ತಿದೆ ಎಂಬ ಆರೋಪಗಳಿವೆ. ಕೂಡಲೇ ಸರಿ ಪಡಿಸಬೇಕಾಗಿದೆ.
ಇಂತಹ ಪರಿಸ್ಥಿತಿಯಲ್ಲಿಯೇ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭಗೊಂಡಿರುವುದು ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ರೋಗಿಗಳ ಸುರಕ್ಷತೆ ಹಾಗೂ ಆರೋಗ್ಯ ಸೇವೆಯ ಗುಣಮಟ್ಟದ ದೃಷ್ಟಿಯಿಂದ ಅಗತ್ಯ ಮೂಲಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಆಸ್ಪತ್ರೆಯಿಂದ ಬಾಡಿಯಲ್ಲಿ ಅಳವಡಿಸಲಾಗಿರುವ ಸೋಲಾರ್ ಟುಬೂಗಳು ಹೊಡೆದು ಆಹಾಳಾಗಿ ನುಚ್ಚುನುರಾಗಿದ್ದು  ಕಂಡು ಬಂದಿದೆ ನೀರಿನ ಶುದ್ದ ಕುಡಿಯುವ ನೀರಿನ ಘಟದ ಕೋಣಿಯ  ಎರಡು ಘಟಕದ ಬಾಗಿಲು ಸಂಪೂರ್ಣ ಕಿತ್ತು ಹೋಗಿವೆ ಘಟಕದ ಮಿಷನ್ ಗಳು ಸುರಕ್ಷೆತೆ ಇಲ್ಲ.  ಅವುಗಳನ್ನು ಸುಸಜ್ಜಿತವಾಗಿ ಇಡಬೇಕಾಗಿದೆ ಆಸ್ಪತ್ರೆ ‌ಕಟ್ಟಿದಕ್ಕೆ  ಸರಕಾರದ ಹಣ ನಷ್ಟವಾಗದಂತೆ ಮತ್ತು ಯಾವುದೇ ಕಾರಣಕ್ಕು ಆಸ್ಪತ್ರೆಯನ್ನು ಆಳಾಗಲು ಬೀಡಬಾರದು ಎಂಬುವದೆ ಸಾರ್ವಜನಿಕರ ಆಸೆಯಾಗಿದೆ ಎಂದು ಹೇಳಬಹುದು.
ಬೈಟ್:-  ಆಸ್ಪತ್ರೆಯನ್ನು ಸಂಪೂರ್ಣ ಆಗುವವರೆಗೂ ಹಸ್ತಾಂತರ ಜವಾಬ್ದಾರಿ ತೆಗೆದುಕೊಳ್ಳಬೇಡಿ ಎಂದು ತಾಲೂಕ ವೈದ್ಯಾಧಿಕಾರಿ ತಿಳಿಸಿದ್ದೆ ಆದರೆ ತರಾತೂರಿಯಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರಿಂದ ಕೊಪ್ಪಳದಲ್ಲಿ ಉದ್ಘಾಟನೆ ಮಾಡಿದರು. 
ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಸರಿಯಾಗಿ ನಿರ್ವಹಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
*ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ  ದೊಡ್ಡನಗೌಡ ಪಾಟೀಲ* 
--------------------------------
ಹೌದು ಆಸ್ಪತ್ರೆಯಲ್ಲಿ ಕೆಲ ಕೊಠಡಿಯಲ್ಲಿ ವಿದ್ಯುತ್ ಲೈಟ್ ಮತ್ತು ಪ್ಯಾನ್ ಇಲ್ಲ ಇದ್ದರು ಸರಿಯಾಗಿ ಕಾರ್ಯನಿರ್ವಸುತ್ತಿಲ್ಲ ಆದರೆ ಈ ಆಸ್ಪತ್ರೆ ಆರಂಭವಾಗಿದ್ದರು ಸಂಬಂಧಿಸಿದ ಏಜೆನ್ಸಿ ಯವರು ಸಹ ನಮಗೆ  ಇನ್ನು ಹಸ್ತಾಂತರ ಮಾಡಿಲ್ಲ ಸಂಪೂರ್ಣ ಆಗುವವರೆಗೂ ಜವಾಬ್ದಾರಿ ತೆಗೆದುಕೊಳ್ಳುವದಿಲ್ಲ ಇನ್ನು ಸ್ವಲ್ಪ  ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇವೆ ಸರಿ ಮಾಡಬೇಕಾಗಿದೆ.
*ಡಾ.ಚಂದ್ರಕಲಾ ತಾಲೂಕು ವೈದ್ಯಾಧಿಕಾರಿ.*
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    5 hrs ago
  • ಸಚಿವ ಸ್ಥಾನಕ್ಕೆ ₹150 ಕೋಟಿ ಬೇಡಿಕೆ?" | ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಹೇಳಿಕೆಯಲ್ಲಿ ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ₹150 ಕೋಟಿ ರೂಪಾಯಿಗಳವರೆಗೆ ಹಣ ಬೇಡಿಕೆ ಇಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಸ್ಥಾನಗಳ ಹಂಚಿಕೆ, ಪ್ರಮುಖ ಖಾತೆಗಳ ನೀಡಿಕೆ ಹಾಗೂ ಅಭಿವೃದ್ಧಿ ಅನುದಾನದ ಕೊರತೆ ಕುರಿತು ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜ್ಯದ ಆಡಳಿತ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. #DKShivakumar #DoddanagoudaPatil #KarnatakaPolitics #Congress #BJP #MinisterPost #PoliticalNews #BreakingNews #KarnatakaNews #ASNNews24Kannada #KannadaNews #LatestNews #ViralNews #karnataka
    1
    ಸಚಿವ ಸ್ಥಾನಕ್ಕೆ ₹150 ಕೋಟಿ ಬೇಡಿಕೆ?" | ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಶಾಸಕ
ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಹೇಳಿಕೆಯಲ್ಲಿ ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ₹150 ಕೋಟಿ ರೂಪಾಯಿಗಳವರೆಗೆ ಹಣ ಬೇಡಿಕೆ ಇಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಚಿವ ಸ್ಥಾನಗಳ ಹಂಚಿಕೆ, ಪ್ರಮುಖ ಖಾತೆಗಳ ನೀಡಿಕೆ ಹಾಗೂ ಅಭಿವೃದ್ಧಿ ಅನುದಾನದ ಕೊರತೆ ಕುರಿತು ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜ್ಯದ ಆಡಳಿತ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
#DKShivakumar #DoddanagoudaPatil #KarnatakaPolitics #Congress #BJP #MinisterPost #PoliticalNews #BreakingNews #KarnatakaNews #ASNNews24Kannada #KannadaNews #LatestNews #ViralNews #karnataka
    user_AsnNews24Kannada
    AsnNews24Kannada
    Local News Reporter Kushtagi, Koppal•
    12 hrs ago
  • ಮಹಾನ್ ಗುರು ಎಚ್ ಟಿ ಕುಲಕರ್ಣಿ ಅವರಿಗೆ ಅನಂತ ಕೋಟಿ ನಮನಗಳು ಎಚ್ ಟಿ ಕುಲಕರ್ಣಿ ಗುರುಗಳ ಅಂತಿಮ ಸಂಸ್ಕಾರ
    1
    ಮಹಾನ್ ಗುರು ಎಚ್ ಟಿ ಕುಲಕರ್ಣಿ ಅವರಿಗೆ ಅನಂತ ಕೋಟಿ ನಮನಗಳು ಎಚ್ ಟಿ ಕುಲಕರ್ಣಿ ಗುರುಗಳ ಅಂತಿಮ ಸಂಸ್ಕಾರ
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    Pharmacist ಸಿಂದಗಿ, ವಿಜಯಪುರ, ಕರ್ನಾಟಕ•
    14 hrs ago
  • ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ? ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ? ದೇವದುರ್ಗ: ತಾಲೂಕಿನ ನಗರಗುಂಡ ಗ್ರಾಮದಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಬೆನ್ನಲ್ಲೇ, ಇದೀಗ ದೇವದುರ್ಗ ಪಟ್ಟಣದ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಗುಡ್ಡ ಪ್ರದೇಶದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. ಕಳೆದ ಕೆಲ ದಿನಗಳಿಂದ ತಾಲೂಕಿನ ವಿವಿಧೆಡೆ ಚಿರತೆಗಳ ಓಡಾಟದ ಕುರಿತು ವರದಿಯಾಗುತ್ತಿದ್ದು, ಇದೀಗ ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಚಿರತೆ ಕಾಣಿಸಿಕೊಂಡಿರುವ ಕುರಿತು ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆ ವಲಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಚಲನವಲನ ಹಾಗೂ ಜಾಡು ಪತ್ತೆಹಚ್ಚಲು ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಮೂಲಕ ನಿಗಾ ವಹಿಸುತ್ತಿದ್ದು, ಗುಡ್ಡ ಪ್ರದೇಶದಲ್ಲಿ ಚಿರತೆಯ ಇರುವಿಕೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ತಾಲೂಕಿನ ವಿವಿಧೆಡೆ ಕಾಣಿಸಿಕೊಳ್ಳುತ್ತಿರುವ ಚಿರತೆಗಳು ವಲಸೆ ಬಂದಿರುವ ಚಿರತೆಗಳಾಗಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಗುಡ್ಡ ಹಾಗೂ ಅರಣ್ಯ ಪ್ರದೇಶದ ಸುತ್ತಮುತ್ತಲಿನ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಚಿರತೆ ಕಂಡುಬಂದಲ್ಲಿ ಅದರ ಸಮೀಪಕ್ಕೆ ತೆರಳದೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
    2
    ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ?
ದೇವದುರ್ಗದಲ್ಲಿ ಮತ್ತೆ ಚಿರತೆ ಆತಂಕ: ಶಿಕ್ಷಣಾಧಿಕಾರಿ ಕಚೇರಿ ಹಿಂಭಾಗದ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ?
ದೇವದುರ್ಗ: ತಾಲೂಕಿನ ನಗರಗುಂಡ ಗ್ರಾಮದಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಬೆನ್ನಲ್ಲೇ, ಇದೀಗ ದೇವದುರ್ಗ ಪಟ್ಟಣದ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿರುವ ಗುಡ್ಡ ಪ್ರದೇಶದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.
ಕಳೆದ ಕೆಲ ದಿನಗಳಿಂದ ತಾಲೂಕಿನ ವಿವಿಧೆಡೆ ಚಿರತೆಗಳ ಓಡಾಟದ ಕುರಿತು ವರದಿಯಾಗುತ್ತಿದ್ದು, ಇದೀಗ ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಚಿರತೆ ಕಾಣಿಸಿಕೊಂಡಿರುವ ಕುರಿತು ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆ ವಲಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಚಿರತೆಯ ಚಲನವಲನ ಹಾಗೂ ಜಾಡು ಪತ್ತೆಹಚ್ಚಲು ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಮೂಲಕ ನಿಗಾ ವಹಿಸುತ್ತಿದ್ದು, ಗುಡ್ಡ ಪ್ರದೇಶದಲ್ಲಿ ಚಿರತೆಯ ಇರುವಿಕೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ತಾಲೂಕಿನ ವಿವಿಧೆಡೆ ಕಾಣಿಸಿಕೊಳ್ಳುತ್ತಿರುವ ಚಿರತೆಗಳು ವಲಸೆ ಬಂದಿರುವ ಚಿರತೆಗಳಾಗಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಟ್ಟಣದ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಗುಡ್ಡ ಹಾಗೂ ಅರಣ್ಯ ಪ್ರದೇಶದ ಸುತ್ತಮುತ್ತಲಿನ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಚಿರತೆ ಕಂಡುಬಂದಲ್ಲಿ ಅದರ ಸಮೀಪಕ್ಕೆ ತೆರಳದೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    3 hrs ago
  • ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ ದಿನಾಂಕ: 31-07-2026 ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 📰 ಜಾಲಹಳ್ಳಿ–ದೇವದುರ್ಗ ಬ್ರೇಕಿಂಗ್ ನ್ಯೂಸ್ ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ ದಿನಾಂಕ: 31-07-2026 ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಣವೇ ಭವಿಷ್ಯದ ಬುನಾದಿ ವಿಶೇಷ ಉಪನ್ಯಾಸ ನೀಡಿದ ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ ಅವರು, "ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ. ಸಮಯದ ಸದ್ಬಳಕೆ ಮಾಡಿಕೊಂಡು ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬಹುದು. ವಿದ್ಯಾರ್ಥಿಗಳು ಕಾಲೇಜು, ಪೋಷಕರು ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು" ಎಂದು ಕರೆ ನೀಡಿದರು ಮುಖ್ಯ ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶ್ರೀ ಸಿದ್ದನಗೌಡ ಮಾಲಿ ಪಾಟೀಲ (ಬಾಗೂರು) ಅವರು ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು ಅತ್ಯಗತ್ಯ. ಪೋಷಕರು ಕಷ್ಟಪಟ್ಟು ಮಕ್ಕಳನ್ನು ಓದಿಸುತ್ತಿದ್ದು, ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿ ಅವರ ಹೆಸರು ತರಬೇಕು ಎಂದರು. ನಿವೃತ್ತ ಪ್ರಾಚಾರ್ಯ ಶ್ರೀ ಉಮೇಶ್ ಹೆಸರೂರು ಅವರು, ಮಾತನಾಡಿ ಕಠಿಣ ಪರಿಶ್ರಮ ಮತ್ತು ಗುರಿಯೊಂದಿಗೆ ವ್ಯಾಸಂಗ ಮಾಡಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು. --_----------------- ಬಾಕ್ಸ್ ನಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್ ಅವರು, ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅವರು ಹೇಳಿದ ಸಂದೇಶ ಎಲ್ಲರ ಗಮನ ಸೆಳೆಯಿತು: «"ಮೊಬೈಲ್ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ನೋಡು, ನಾನು ನಿನಗೆ ತಲೆ ತಗ್ಗಿಸುವಂತೆ ಮಾಡುತ್ತೇನೆ. ಪುಸ್ತಕ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ಓದು, ನಾನು ನಿನಗೆ ತಲೆ ಎತ್ತುವಂತೆ ಮಾಡುತ್ತೇನೆ."»ಪುಸ್ತಕ ಓದುವದು ಕಡೆ ಹೆಚ್ಚು ಗಮನ ಹರಿಸಿ ಎಂದು ಹೇಳಿದರು ----------------===- ಬಾಕ್ಸ್ ನಲ್ಲಿ ಅಧ್ಯಕ್ಷೀಯ ಭಾಷಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಮಾತನಾಡಿ, ಜಾಲಹಳ್ಳಿ ಕಾಲೇಜು ಇಂದು ಉತ್ತಮ ಮಟ್ಟಕ್ಕೆ ಬೆಳೆಯಲು ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು ಅವರ ಸೇವೆ ಮತ್ತು ದೂರದೃಷ್ಟಿಯೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು. 2006ರಲ್ಲಿ ಆರಂಭವಾದ ಕಾಲೇಜಿನ ಬೆಳವಣಿಗೆಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಿದರು. ------------------- ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಅವರು, ಮಾತನಾಡಿ ಜಾಲಹಳ್ಳಿ ಶಾಲೆಯಲ್ಲಿ ಓದಿದ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಅಧಿಕಾರಿಗಳಾಗಿದ್ದಾರೆ. ನೂತನ ವಿದ್ಯಾರ್ಥಿಗಳು ಕೂಡ ಅದೇ ರೀತಿಯಲ್ಲಿ ಸಾಧನೆ ಮಾಡಬೇಕು ಎಂದು ಪ್ರೋತ್ಸಾಹಿಸಿದರು. ಪತ್ರಕರ್ತ ಶ್ರೀ ಮೌನೇಶ್ ಜಾಲಹಳ್ಳಿ ಅವರು ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ಕರೆ ನೀಡಿದರು. ಭೂದಾನಿಗಳು ಹಾಗೂ ಸಾಧಕರಿಗೆ ಸನ್ಮಾನ ಕಾಲೇಜಿಗೆ ಜಾಗವನ್ನು ದಾನವಾಗಿ ನೀಡಿದ ಉದಾರ ಮನಸ್ಸಿನ ಶ್ರೀ ಅಮರೇಶ ತಂದೆ ನೀಲಕಂಠಪ್ಪ ಮೆಣಸಿನಕಾಯಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಇದೆ ವೇಳೆ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಅವರಿಗೆ ಸನ್ಮಾನ ಮಾಡಲಾಯಿತು, ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು)ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಬಹುಮಾನ ವಿತರಿಸಲಾಯಿತು. - ಶ್ರೀದೇವಿ ಶರಣಪ್ಪ (ಜಾಲಹಳ್ಳಿ) – 564 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ. ರಾಜ್ಯಶಾಸ್ತ್ರದಲ್ಲಿ 99/100 ಹಾಗೂ ಸಮಾಜಶಾಸ್ತ್ರದಲ್ಲಿ 99/100 ಅಂಕ ಗಳಿಸಿದ್ದರು. ಕಾಲೇಜಿನಿಂದ ₹1,500 ಹಾಗೂ ನಿವೃತ್ತ ಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹3,000 ನಗದು ಬಹುಮಾನ ನೀಡಿ ಗೌರವಿಸಲಾಯಿತು. - ಪವಿತ್ರಾ ಬಸವರಾಜ್ ಬಂಡಿ (ಜಾಲಹಳ್ಳಿ) – ಕಾಲೇಜಿಗೆ ದ್ವಿತೀಯ ಸ್ಥಾನ. ಕನ್ನಡ ವಿಷಯದಲ್ಲಿ 100/100 ಅಂಕ ಗಳಿಸಿದ್ದು, ಕಾಲೇಜು ಹಾಗೂ ನಿವೃತ್ತಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹2,000 ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. - ಪೂರ್ಣಿಮಾ (ಜಾಲಹಳ್ಳಿ) – 544 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಕಾಲೇಜಿನ ವತಿಯಿಂದ ಗೌರವಿಸಲಾಯಿತು. ಇದರ ಜೊತೆಗೆ ಸಂಸ್ಕೃತ ವಿಭಾಗ ಹಾಗೂ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ನೃತ್ಯ, ನಾಟಕ, ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನೂತನ ವಿದ್ಯಾರ್ಥಿಗಳು ಮತ್ತು ಹಿರಿಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು. ಉಪಸ್ಥಿತಿ ಕಾರ್ಯಕ್ರಮದಲ್ಲಿಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು,ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು) ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ . ಸರ್ಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯಗುರು ನಿಂಗಪ್ಪ, ಇಂಗ್ಲಿಷ್ ಉಪನ್ಯಾಸಕ ಶೇಖರ್, ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಬಾಬುಮಿಯಾ ಟೇಲರ್, ಹಿರಿಯ ಉಪನ್ಯಾಸಕರಾದ ವಿರೂಪಣ್ಣ, ಬಸವರಾಜ್, ಪ್ರಕಾಶ್, ಚನ್ನಬಸವ, ಬಸವರಾಜ್ ಸೋಮನಂಬರಡಿ, ಹನುಮೇಶ್, ಪೂರ್ಣಿಮಾ ಮೇಡಂ ಸೇರಿದಂತೆ ಉಪನ್ಯಾಸಕ ವೃಂದ, ಸಿಬ್ಬಂದಿ, ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಉಪನ್ಯಾಸಕ ಬಸವರಾಜ್ ರಸ್ತಾಪುರ್ ಅವರು ನೆರವೇರಿಸಿದರು. ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
    4
    ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ

ದಿನಾಂಕ: 31-07-2026
ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ

ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


📰 ಜಾಲಹಳ್ಳಿ–ದೇವದುರ್ಗ ಬ್ರೇಕಿಂಗ್ ನ್ಯೂಸ್
ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ
ದಿನಾಂಕ: 31-07-2026
ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ
ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಶಿಕ್ಷಣವೇ ಭವಿಷ್ಯದ ಬುನಾದಿ
ವಿಶೇಷ ಉಪನ್ಯಾಸ ನೀಡಿದ ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ ಅವರು, "ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ. ಸಮಯದ ಸದ್ಬಳಕೆ ಮಾಡಿಕೊಂಡು ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬಹುದು. ವಿದ್ಯಾರ್ಥಿಗಳು ಕಾಲೇಜು, ಪೋಷಕರು ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು" ಎಂದು ಕರೆ ನೀಡಿದರು
ಮುಖ್ಯ ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
ಶ್ರೀ ಸಿದ್ದನಗೌಡ ಮಾಲಿ ಪಾಟೀಲ (ಬಾಗೂರು) ಅವರು ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು ಅತ್ಯಗತ್ಯ. ಪೋಷಕರು ಕಷ್ಟಪಟ್ಟು ಮಕ್ಕಳನ್ನು ಓದಿಸುತ್ತಿದ್ದು, ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿ ಅವರ ಹೆಸರು ತರಬೇಕು ಎಂದರು.
ನಿವೃತ್ತ ಪ್ರಾಚಾರ್ಯ ಶ್ರೀ ಉಮೇಶ್ ಹೆಸರೂರು ಅವರು, ಮಾತನಾಡಿ ಕಠಿಣ ಪರಿಶ್ರಮ ಮತ್ತು ಗುರಿಯೊಂದಿಗೆ ವ್ಯಾಸಂಗ ಮಾಡಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು.
--_-----------------
ಬಾಕ್ಸ್ ನಲ್ಲಿ
ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್ ಅವರು, ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅವರು ಹೇಳಿದ ಸಂದೇಶ ಎಲ್ಲರ ಗಮನ ಸೆಳೆಯಿತು:
«"ಮೊಬೈಲ್ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ನೋಡು, ನಾನು ನಿನಗೆ ತಲೆ ತಗ್ಗಿಸುವಂತೆ ಮಾಡುತ್ತೇನೆ.
ಪುಸ್ತಕ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ಓದು, ನಾನು ನಿನಗೆ ತಲೆ ಎತ್ತುವಂತೆ ಮಾಡುತ್ತೇನೆ."»ಪುಸ್ತಕ ಓದುವದು ಕಡೆ ಹೆಚ್ಚು ಗಮನ ಹರಿಸಿ ಎಂದು ಹೇಳಿದರು 
----------------===-
ಬಾಕ್ಸ್ ನಲ್ಲಿ
ಅಧ್ಯಕ್ಷೀಯ ಭಾಷಣ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಮಾತನಾಡಿ, ಜಾಲಹಳ್ಳಿ ಕಾಲೇಜು ಇಂದು ಉತ್ತಮ ಮಟ್ಟಕ್ಕೆ ಬೆಳೆಯಲು ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು ಅವರ ಸೇವೆ ಮತ್ತು ದೂರದೃಷ್ಟಿಯೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು. 2006ರಲ್ಲಿ ಆರಂಭವಾದ ಕಾಲೇಜಿನ ಬೆಳವಣಿಗೆಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಿದರು.
-------------------
ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಅವರು, ಮಾತನಾಡಿ ಜಾಲಹಳ್ಳಿ ಶಾಲೆಯಲ್ಲಿ ಓದಿದ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಅಧಿಕಾರಿಗಳಾಗಿದ್ದಾರೆ. ನೂತನ ವಿದ್ಯಾರ್ಥಿಗಳು ಕೂಡ ಅದೇ ರೀತಿಯಲ್ಲಿ ಸಾಧನೆ ಮಾಡಬೇಕು ಎಂದು ಪ್ರೋತ್ಸಾಹಿಸಿದರು.
ಪತ್ರಕರ್ತ ಶ್ರೀ ಮೌನೇಶ್ ಜಾಲಹಳ್ಳಿ ಅವರು ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ಕರೆ ನೀಡಿದರು.
ಭೂದಾನಿಗಳು ಹಾಗೂ ಸಾಧಕರಿಗೆ ಸನ್ಮಾನ
ಕಾಲೇಜಿಗೆ ಜಾಗವನ್ನು ದಾನವಾಗಿ ನೀಡಿದ ಉದಾರ ಮನಸ್ಸಿನ ಶ್ರೀ ಅಮರೇಶ ತಂದೆ ನೀಲಕಂಠಪ್ಪ ಮೆಣಸಿನಕಾಯಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಇದೆ ವೇಳೆ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಅವರಿಗೆ ಸನ್ಮಾನ ಮಾಡಲಾಯಿತು, ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು)ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ
2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಬಹುಮಾನ ವಿತರಿಸಲಾಯಿತು.
- ಶ್ರೀದೇವಿ ಶರಣಪ್ಪ (ಜಾಲಹಳ್ಳಿ) – 564 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ. ರಾಜ್ಯಶಾಸ್ತ್ರದಲ್ಲಿ 99/100 ಹಾಗೂ ಸಮಾಜಶಾಸ್ತ್ರದಲ್ಲಿ 99/100 ಅಂಕ ಗಳಿಸಿದ್ದರು. ಕಾಲೇಜಿನಿಂದ ₹1,500 ಹಾಗೂ ನಿವೃತ್ತ ಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹3,000 ನಗದು ಬಹುಮಾನ ನೀಡಿ ಗೌರವಿಸಲಾಯಿತು.
- ಪವಿತ್ರಾ ಬಸವರಾಜ್ ಬಂಡಿ (ಜಾಲಹಳ್ಳಿ) – ಕಾಲೇಜಿಗೆ ದ್ವಿತೀಯ ಸ್ಥಾನ. ಕನ್ನಡ ವಿಷಯದಲ್ಲಿ 100/100 ಅಂಕ ಗಳಿಸಿದ್ದು, ಕಾಲೇಜು ಹಾಗೂ ನಿವೃತ್ತಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹2,000 ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
- ಪೂರ್ಣಿಮಾ (ಜಾಲಹಳ್ಳಿ) – 544 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಕಾಲೇಜಿನ ವತಿಯಿಂದ ಗೌರವಿಸಲಾಯಿತು.
ಇದರ ಜೊತೆಗೆ ಸಂಸ್ಕೃತ ವಿಭಾಗ ಹಾಗೂ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ
ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ನೃತ್ಯ, ನಾಟಕ, ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನೂತನ ವಿದ್ಯಾರ್ಥಿಗಳು ಮತ್ತು ಹಿರಿಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.
ಉಪಸ್ಥಿತಿ
ಕಾರ್ಯಕ್ರಮದಲ್ಲಿಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು,ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು)  ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ .
ಸರ್ಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯಗುರು ನಿಂಗಪ್ಪ, ಇಂಗ್ಲಿಷ್ ಉಪನ್ಯಾಸಕ ಶೇಖರ್, ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಬಾಬುಮಿಯಾ ಟೇಲರ್, ಹಿರಿಯ ಉಪನ್ಯಾಸಕರಾದ ವಿರೂಪಣ್ಣ, ಬಸವರಾಜ್, ಪ್ರಕಾಶ್, ಚನ್ನಬಸವ, ಬಸವರಾಜ್ ಸೋಮನಂಬರಡಿ, ಹನುಮೇಶ್, ಪೂರ್ಣಿಮಾ ಮೇಡಂ ಸೇರಿದಂತೆ ಉಪನ್ಯಾಸಕ ವೃಂದ, ಸಿಬ್ಬಂದಿ, ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಉಪನ್ಯಾಸಕ ಬಸವರಾಜ್ ರಸ್ತಾಪುರ್ ಅವರು ನೆರವೇರಿಸಿದರು.
ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    12 hrs ago
  • ವಿಜಯಪುರ ವಿಮಾನ ನಿಲ್ದಾಣ : ಮೂರು ತಿಂಗಳಲ್ಲಿ ವಿಮಾನ ಹಾರಾಟದ ನಿರೀಕ್ಷೆ ವಿಜಯಪುರ : ಅರ್ಧಕ್ಕೆ ನಿಲ್ಲುವ ಭೀತಿಯಲ್ಲಿದ್ದ ವಿಜಯಪುರ ವಿಮಾನ ನಿಲ್ದಾಣ ಯೋಜನೆಗೆ ಮರುಜೀವ ನೀಡಿ, ಶೀಘ್ರವೇ ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ.ಪಾಟೀಲ್‌ರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ವಕ್ತಾರ ಎಸ್‌.ಎಂ.ಪಾಟೀಲ್ ಗಣಿಹಾರ ತಿಳಿಸಿದರು. ಶುಕ್ರವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ತಾಂತ್ರಿಕ ಹಾಗೂ ಕಾನೂನು ಸಂಕಷ್ಟಕ್ಕೆ ಸಿಲುಕಿ ನೆನೆಗುದಿಗೆ ಬಿದ್ದಿದ್ದ ವಿಮಾನ ನಿಲ್ದಾಣ ಯೋಜನೆಗೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದೆ. ಮುಂದಿನ ಮೂರೇ ತಿಂಗಳಲ್ಲಿ ವಿಮಾನ ಹಾರಾಟ ಆರಂಭವಾಗುವ ಆಶಾವಾದ ಮೂಡಿದೆ ಎಂದು ಗಣಿಹಾರ ಹೇಳಿದರು.
    1
    ವಿಜಯಪುರ ವಿಮಾನ ನಿಲ್ದಾಣ : ಮೂರು ತಿಂಗಳಲ್ಲಿ ವಿಮಾನ ಹಾರಾಟದ ನಿರೀಕ್ಷೆ
ವಿಜಯಪುರ : ಅರ್ಧಕ್ಕೆ ನಿಲ್ಲುವ ಭೀತಿಯಲ್ಲಿದ್ದ ವಿಜಯಪುರ ವಿಮಾನ ನಿಲ್ದಾಣ ಯೋಜನೆಗೆ ಮರುಜೀವ ನೀಡಿ, ಶೀಘ್ರವೇ ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ.
ಎಂ.ಬಿ.ಪಾಟೀಲ್‌ರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ವಕ್ತಾರ ಎಸ್‌.ಎಂ.ಪಾಟೀಲ್ ಗಣಿಹಾರ ತಿಳಿಸಿದರು.
ಶುಕ್ರವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ತಾಂತ್ರಿಕ ಹಾಗೂ ಕಾನೂನು ಸಂಕಷ್ಟಕ್ಕೆ ಸಿಲುಕಿ ನೆನೆಗುದಿಗೆ ಬಿದ್ದಿದ್ದ ವಿಮಾನ ನಿಲ್ದಾಣ ಯೋಜನೆಗೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದೆ. ಮುಂದಿನ ಮೂರೇ ತಿಂಗಳಲ್ಲಿ ವಿಮಾನ ಹಾರಾಟ ಆರಂಭವಾಗುವ ಆಶಾವಾದ ಮೂಡಿದೆ ಎಂದು ಗಣಿಹಾರ ಹೇಳಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    23 hrs ago
  • ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
    1
    ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    16 hrs ago
  • ಅಗಸ್ಟ್‌ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ. ಅಗಸ್ಟ್‌ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ ಅಫಜಲಪುರ, ಜು. 29: ಯುವ ವಿಕಾಸ ವೇದಿಕೆ ಅಫಜಲಪುರದ ಸಂಯುಕ್ತಾಶ್ರಯದಲ್ಲಿ ಆಗಸ್ಟ್‌ 9ರಂದು ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಲಾಗಿದೆ. ತಾಲೂಕಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಅಫಜಲಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಂ. ವೈ. ಪಾಟೀಲ ವಹಿಸಲಿದ್ದು, ಜೆ. ಎಂ. ಕೊರಬು ಉದ್ಘಾಟಿಸಲಿದ್ದಾರೆ. ಪೂಜ್ಯ ಡಾ. ಚನ್ನಮಲ್ಲ ಶಿವಾಚಾರ್ಯರು ಹಾಗೂ ಗೋಳಸಾರ ಕ್ಷೇತ್ರದ ಅಭಿನವ ಶ್ರೀ ಪುಂಡಲಿಂಗ ಶಿವಯೋಗಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ರಾಜ್ಯ ಮಟ್ಟದ ಈ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ₹51,000, ದ್ವಿತೀಯ ಸ್ಥಾನ ಪಡೆದವರಿಗೆ ₹25,000 ಹಾಗೂ ತೃತೀಯ ಸ್ಥಾನ ಪಡೆದವರಿಗೆ ₹15,000 ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಮುಖಂಡರು, ಗಣ್ಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ವಿಶೇಷವಾಗಿ ಧಾರವಾಡದ ಸ್ಪರ್ಧಾ ಜೀನಿಯಸ್ ಅಕಾಡೆಮಿ ಸಂಸ್ತಾಪಕರಾದ ಶ್ರೀ ಸಿದ್ದಣ್ಣ ದಳವಾಯಿ, ಹಾಗೂ ಇನ್ಸೈಟ್ ಐಎಎಸ್ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ಜೀ ಬಿ ವಿನಯಕುಮಾರ ಭಾಗವಹಿಸಲಿದ್ದು ಹಾಗಾಗಿ ವಿದ್ಯಾರ್ಥಿಗಳು ಈ ಅಪರೂಪದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಜಕರು ಕೋರಿದ್ದಾರೆ.
    1
    ಅಗಸ್ಟ್‌ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ.
ಅಗಸ್ಟ್‌ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ
ಅಫಜಲಪುರ, ಜು. 29: ಯುವ ವಿಕಾಸ ವೇದಿಕೆ ಅಫಜಲಪುರದ ಸಂಯುಕ್ತಾಶ್ರಯದಲ್ಲಿ ಆಗಸ್ಟ್‌ 9ರಂದು ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ತಾಲೂಕಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಅಫಜಲಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಂ. ವೈ. ಪಾಟೀಲ ವಹಿಸಲಿದ್ದು, ಜೆ. ಎಂ. ಕೊರಬು ಉದ್ಘಾಟಿಸಲಿದ್ದಾರೆ. ಪೂಜ್ಯ ಡಾ. ಚನ್ನಮಲ್ಲ ಶಿವಾಚಾರ್ಯರು ಹಾಗೂ ಗೋಳಸಾರ ಕ್ಷೇತ್ರದ ಅಭಿನವ ಶ್ರೀ ಪುಂಡಲಿಂಗ ಶಿವಯೋಗಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ರಾಜ್ಯ ಮಟ್ಟದ ಈ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ₹51,000, ದ್ವಿತೀಯ ಸ್ಥಾನ ಪಡೆದವರಿಗೆ ₹25,000 ಹಾಗೂ ತೃತೀಯ ಸ್ಥಾನ ಪಡೆದವರಿಗೆ ₹15,000 ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಮುಖಂಡರು, ಗಣ್ಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ವಿಶೇಷವಾಗಿ ಧಾರವಾಡದ ಸ್ಪರ್ಧಾ ಜೀನಿಯಸ್ ಅಕಾಡೆಮಿ ಸಂಸ್ತಾಪಕರಾದ ಶ್ರೀ ಸಿದ್ದಣ್ಣ ದಳವಾಯಿ, ಹಾಗೂ ಇನ್ಸೈಟ್ ಐಎಎಸ್ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ಜೀ ಬಿ ವಿನಯಕುಮಾರ ಭಾಗವಹಿಸಲಿದ್ದು ಹಾಗಾಗಿ ವಿದ್ಯಾರ್ಥಿಗಳು ಈ ಅಪರೂಪದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಜಕರು ಕೋರಿದ್ದಾರೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.