logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗ್ರಾಮೀಣ ಶಾಲೆಗಳ ಮಕ್ಕಳ ಕಲಿಕೆಗೆ ಬೆಸ್ಟ್ ಫೌಂಡೇಶನ್ ಹೊಸ ಹೆಜ್ಜೆ ಶಿಡ್ಲಘಟ್ಟ: ಸಾಮಾಜಿಕ ವಿಕಾಸಕ್ಕಾಗಿ ಉತ್ತಮ ಪರಿಸರ ನಿರ್ಮಿಸುವ ಉದ್ದೇಶದಿಂದ ಆರಂಭವಾಗಿರುವ ಬೆಸ್ಟ್ ಫೌಂಡೇಶನ್ ಸೇವಾ ಸಂಸ್ಥೆಯು ತನ್ನ ಸಮಾಜಮುಖಿ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಿದೆ. ಬೆಟರ್ ಎನ್ವಿರಾನ್ಮೆಂಟ್ ಫಾರ್ ಸೋಷಿಯಲ್ ಟ್ರಾನ್ಸ್‌ಫಾರ್ಮೇಷನ್ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಯನ್ನು ನ್ಯಾಷನಲ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳು, ನಿವೃತ್ತ ಪ್ರಾಂಶುಪಾಲರು ಹಾಗೂ ರಸಾಯನಶಾಸ್ತ್ರ ಪ್ರಾಧ್ಯಾಪಕರಾದ ಪ್ರೊಫೆಸರ್ ಸಿ. ನಾಗರಾಜ್ ಅವರ ಮಾರ್ಗದರ್ಶನದಲ್ಲಿ ಆರಂಭಿಸಿದ್ದಾರೆ. ಸಂಸ್ಥೆಯ ಪ್ರಾರಂಭೋತ್ಸವದ ಅಂಗವಾಗಿ ಶಿಡ್ಲಘಟ್ಟ ತಾಲೂಕಿನ ಸಾದಲಿ ಹೋಬಳಿಯ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಗತ್ಯವಿರುವ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ವಿತರಿಸುವ ಮೂಲಕ ಸೇವಾ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಪೂಸಾಗನದೊಡ್ಡಿ ಸರ್ಕಾರಿ ಶಾಲೆಗೆ ಧ್ವನಿವರ್ಧಕ ವ್ಯವಸ್ಥೆ, ಇರಗಂಪಲ್ಲಿ ಸರ್ಕಾರಿ ಶಾಲೆಗೆ ಬಣ್ಣದ ವೈ-ಫೈ ಮುದ್ರಕ ಹಾಗೂ ಕೋಟಗಲ್ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬೆಸ್ಟ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿ.ವಿ. ಲೋಕೇಶ್ ಗೌಡ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಿ ಮಕ್ಕಳ ಕಲಿಕೆಯನ್ನು ಉತ್ತೇಜಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ಉತ್ತಮ ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯವನ್ನು ರೂಪಿಸಿ, ತನ್ಮೂಲಕ ಉತ್ತಮ ಸಮಾಜದ ನಿರ್ಮಾಣ ಹಾಗೂ ಸಾಮಾಜಿಕ ವಿಕಾಸಕ್ಕೆ ಬಲವರ್ಧನೆ ನೀಡುವ ಉದ್ದೇಶದಿಂದ ವಿವಿಧ ಸೇವಾ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸಂಸ್ಥೆಯ ಸೇವಾ ಕಾರ್ಯಗಳನ್ನು ಇನ್ನಷ್ಟು ವ್ಯಾಪಕವಾಗಿ ವಿಸ್ತರಿಸುವ ಚಿಂತನೆ ಇದೆ ಎಂದು ಹೇಳಿದರು. ಸಮಾನ ಮನಸ್ಕರು ಹಾಗೂ ನಿಸ್ವಾರ್ಥ ಸೇವಾ ಮನೋಭಾವ ಹೊಂದಿರುವ ಪ್ರತಿಯೊಬ್ಬರೂ ಸಂಸ್ಥೆಯೊಂದಿಗೆ ಕೈಜೋಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ, ವಿಜ್ಞಾನ ವಿಷಯಗಳ ಸ್ಲೈಡ್ ಪ್ರದರ್ಶನ, ಉಪನ್ಯಾಸ ಕಾರ್ಯಕ್ರಮಗಳು, ಗಿಡ ನೆಡುವುದು ಹಾಗೂ ಪರಿಸರ ಜಾಗೃತಿ ಮೂಡಿಸುವುದು ಸಂಸ್ಥೆಯ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು. ಸಂಸ್ಥೆಯ ಮಾರ್ಗದರ್ಶಕರು ಹಾಗೂ ನಿವೃತ್ತ ಪ್ರಾಂಶುಪಾಲರಾದ ಶ್ರೀ ಸಿ. ನಾಗರಾಜ್ ಮಾತನಾಡಿ, ನಿಜವಾದ ಪ್ರತಿಭೆ ಗ್ರಾಮೀಣ ಸರ್ಕಾರಿ ಶಾಲೆಗಳ ಮಕ್ಕಳಲ್ಲಿಯೂ ಸಾಕಷ್ಟಿದೆ. ಇಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಮ್ಮ ಹಳೆಯ ವಿದ್ಯಾರ್ಥಿಗಳು ಕೈಗೊಂಡಿರುವ ಈ ಮಹತ್ವದ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಸರ್ಕಾರಿ ಶಾಲೆಗಳ ಶಿಕ್ಷಕರು ಮಕ್ಕಳ ಶೈಕ್ಷಣಿಕ ಪ್ರಗತಿಯ ಕಡೆಗೆ ಇನ್ನಷ್ಟು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು. ಉತ್ತಮ ಶಿಕ್ಷಣ ನೀಡುವ ಮೂಲಕ ಸರ್ಕಾರಿ ಶಾಲೆಗಳು ಕಾರ್ಪೊರೇಟ್ ಶಾಲೆಗಳೊಂದಿಗೆ ಸ್ಪರ್ಧಿಸುವ ಮಟ್ಟಕ್ಕೆ ಬೆಳೆಯಬೇಕು. ಇದಕ್ಕಾಗಿ ಶಿಕ್ಷಕರಲ್ಲಿ ಸಮರ್ಪಣಾ ಮನೋಭಾವ ಅಗತ್ಯವಾಗಿದ್ದು, ಪೋಷಕರು ಸಹ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಶಿಕ್ಷಣ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಸಂಬಂಧಿಸಿದ ಇನ್ನಷ್ಟು ಜನಪರ ಮತ್ತು ಸೇವಾಮುಖಿ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುವ ಉದ್ದೇಶವನ್ನು ಬೆಸ್ಟ್ ಫೌಂಡೇಶನ್ ಹೊಂದಿದೆ. ಕಾರ್ಯಕ್ರಮದಲ್ಲಿ ಯುವ ಉದ್ಯಮಿ ಶ್ರೀ ಮಧುಸೂದನ್ ರೆಡ್ಡಿ, ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಶ್ರೀ ಪ್ರಸಾದ್, ಕೃಷಿ ತಜ್ಞರು ಹಾಗೂ ವಿದ್ಯಾಸಂಸ್ಥೆಯ ಮುಖಂಡ ಶ್ರೀ ಬಾಬುರಾಜ್, ಎಂ.ಎಸ್. ರಾಮಯ್ಯ ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗದ ಮುಖ್ಯಸ್ಥ ಡಾ. ಹರ್ಷವರ್ಧನ್, ಅಧ್ಯಾಪಕಿ ಶ್ರೀಮತಿ ಪರಿಮಳ ವಿಶ್ವನಾಥ್ ಹಾಗೂ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಶ್ರೀ ಜಿ. ಮಂಜುನಾಥ್ ಸೇರಿದಂತೆ ಹಲವರು ಭಾಗವಹಿಸಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ

17 hrs ago
user_Nandi Rajesh Press reporter
Nandi Rajesh Press reporter
ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
17 hrs ago
bdf3e8fc-d9d0-4d96-b0e9-6b1025204537

ಗ್ರಾಮೀಣ ಶಾಲೆಗಳ ಮಕ್ಕಳ ಕಲಿಕೆಗೆ ಬೆಸ್ಟ್ ಫೌಂಡೇಶನ್ ಹೊಸ ಹೆಜ್ಜೆ ಶಿಡ್ಲಘಟ್ಟ: ಸಾಮಾಜಿಕ ವಿಕಾಸಕ್ಕಾಗಿ ಉತ್ತಮ ಪರಿಸರ ನಿರ್ಮಿಸುವ ಉದ್ದೇಶದಿಂದ ಆರಂಭವಾಗಿರುವ ಬೆಸ್ಟ್ ಫೌಂಡೇಶನ್ ಸೇವಾ ಸಂಸ್ಥೆಯು ತನ್ನ ಸಮಾಜಮುಖಿ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಿದೆ. ಬೆಟರ್ ಎನ್ವಿರಾನ್ಮೆಂಟ್ ಫಾರ್ ಸೋಷಿಯಲ್ ಟ್ರಾನ್ಸ್‌ಫಾರ್ಮೇಷನ್ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಯನ್ನು ನ್ಯಾಷನಲ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳು, ನಿವೃತ್ತ ಪ್ರಾಂಶುಪಾಲರು ಹಾಗೂ ರಸಾಯನಶಾಸ್ತ್ರ ಪ್ರಾಧ್ಯಾಪಕರಾದ ಪ್ರೊಫೆಸರ್ ಸಿ. ನಾಗರಾಜ್ ಅವರ ಮಾರ್ಗದರ್ಶನದಲ್ಲಿ ಆರಂಭಿಸಿದ್ದಾರೆ. ಸಂಸ್ಥೆಯ ಪ್ರಾರಂಭೋತ್ಸವದ ಅಂಗವಾಗಿ ಶಿಡ್ಲಘಟ್ಟ ತಾಲೂಕಿನ ಸಾದಲಿ ಹೋಬಳಿಯ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅಗತ್ಯವಿರುವ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ವಿತರಿಸುವ ಮೂಲಕ ಸೇವಾ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಪೂಸಾಗನದೊಡ್ಡಿ ಸರ್ಕಾರಿ ಶಾಲೆಗೆ ಧ್ವನಿವರ್ಧಕ ವ್ಯವಸ್ಥೆ, ಇರಗಂಪಲ್ಲಿ ಸರ್ಕಾರಿ ಶಾಲೆಗೆ ಬಣ್ಣದ ವೈ-ಫೈ ಮುದ್ರಕ ಹಾಗೂ ಕೋಟಗಲ್ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬೆಸ್ಟ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿ.ವಿ. ಲೋಕೇಶ್ ಗೌಡ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಿ ಮಕ್ಕಳ ಕಲಿಕೆಯನ್ನು ಉತ್ತೇಜಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ಉತ್ತಮ ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯವನ್ನು ರೂಪಿಸಿ, ತನ್ಮೂಲಕ ಉತ್ತಮ ಸಮಾಜದ ನಿರ್ಮಾಣ ಹಾಗೂ ಸಾಮಾಜಿಕ ವಿಕಾಸಕ್ಕೆ ಬಲವರ್ಧನೆ ನೀಡುವ ಉದ್ದೇಶದಿಂದ ವಿವಿಧ ಸೇವಾ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸಂಸ್ಥೆಯ ಸೇವಾ ಕಾರ್ಯಗಳನ್ನು ಇನ್ನಷ್ಟು ವ್ಯಾಪಕವಾಗಿ ವಿಸ್ತರಿಸುವ ಚಿಂತನೆ ಇದೆ ಎಂದು ಹೇಳಿದರು. ಸಮಾನ ಮನಸ್ಕರು ಹಾಗೂ ನಿಸ್ವಾರ್ಥ ಸೇವಾ ಮನೋಭಾವ ಹೊಂದಿರುವ ಪ್ರತಿಯೊಬ್ಬರೂ ಸಂಸ್ಥೆಯೊಂದಿಗೆ ಕೈಜೋಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ, ವಿಜ್ಞಾನ ವಿಷಯಗಳ ಸ್ಲೈಡ್ ಪ್ರದರ್ಶನ, ಉಪನ್ಯಾಸ ಕಾರ್ಯಕ್ರಮಗಳು, ಗಿಡ ನೆಡುವುದು ಹಾಗೂ ಪರಿಸರ ಜಾಗೃತಿ ಮೂಡಿಸುವುದು ಸಂಸ್ಥೆಯ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು. ಸಂಸ್ಥೆಯ ಮಾರ್ಗದರ್ಶಕರು ಹಾಗೂ ನಿವೃತ್ತ ಪ್ರಾಂಶುಪಾಲರಾದ ಶ್ರೀ ಸಿ. ನಾಗರಾಜ್ ಮಾತನಾಡಿ, ನಿಜವಾದ ಪ್ರತಿಭೆ ಗ್ರಾಮೀಣ ಸರ್ಕಾರಿ ಶಾಲೆಗಳ ಮಕ್ಕಳಲ್ಲಿಯೂ ಸಾಕಷ್ಟಿದೆ. ಇಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಮ್ಮ ಹಳೆಯ ವಿದ್ಯಾರ್ಥಿಗಳು ಕೈಗೊಂಡಿರುವ ಈ ಮಹತ್ವದ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಸರ್ಕಾರಿ ಶಾಲೆಗಳ ಶಿಕ್ಷಕರು ಮಕ್ಕಳ ಶೈಕ್ಷಣಿಕ ಪ್ರಗತಿಯ ಕಡೆಗೆ ಇನ್ನಷ್ಟು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು. ಉತ್ತಮ ಶಿಕ್ಷಣ ನೀಡುವ ಮೂಲಕ ಸರ್ಕಾರಿ ಶಾಲೆಗಳು ಕಾರ್ಪೊರೇಟ್ ಶಾಲೆಗಳೊಂದಿಗೆ ಸ್ಪರ್ಧಿಸುವ ಮಟ್ಟಕ್ಕೆ ಬೆಳೆಯಬೇಕು. ಇದಕ್ಕಾಗಿ ಶಿಕ್ಷಕರಲ್ಲಿ ಸಮರ್ಪಣಾ ಮನೋಭಾವ ಅಗತ್ಯವಾಗಿದ್ದು, ಪೋಷಕರು ಸಹ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಶಿಕ್ಷಣ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಸಂಬಂಧಿಸಿದ ಇನ್ನಷ್ಟು ಜನಪರ ಮತ್ತು ಸೇವಾಮುಖಿ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುವ ಉದ್ದೇಶವನ್ನು ಬೆಸ್ಟ್ ಫೌಂಡೇಶನ್ ಹೊಂದಿದೆ. ಕಾರ್ಯಕ್ರಮದಲ್ಲಿ ಯುವ ಉದ್ಯಮಿ ಶ್ರೀ ಮಧುಸೂದನ್ ರೆಡ್ಡಿ, ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಶ್ರೀ ಪ್ರಸಾದ್, ಕೃಷಿ ತಜ್ಞರು ಹಾಗೂ ವಿದ್ಯಾಸಂಸ್ಥೆಯ ಮುಖಂಡ ಶ್ರೀ ಬಾಬುರಾಜ್, ಎಂ.ಎಸ್. ರಾಮಯ್ಯ ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗದ ಮುಖ್ಯಸ್ಥ ಡಾ. ಹರ್ಷವರ್ಧನ್, ಅಧ್ಯಾಪಕಿ ಶ್ರೀಮತಿ ಪರಿಮಳ ವಿಶ್ವನಾಥ್ ಹಾಗೂ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಶ್ರೀ ಜಿ. ಮಂಜುನಾಥ್ ಸೇರಿದಂತೆ ಹಲವರು ಭಾಗವಹಿಸಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ

More news from ಕರ್ನಾಟಕ and nearby areas
  • **ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ **ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ |* "*'ದಿ ಕ್ರೆಸೆಂಟ್ ಶಾಲೆಯ'** ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಸಮಾರಂಭದಲ್ಲಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು, ಪ್ರಗತಿಪರ ಚಿಂತಕರು ಹಾಗೂ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಉದ್ಯಮಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಿಕ ಸಂದೇಶ ನೀಡಿದರು.* --- "ಶಿಡ್ಲಘಟ್ಟದ ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ **ಬೆಂಗಳೂರಿನ ಜಯನಗರ ಕಾನೂನು ಮಹಾವಿದ್ಯಾಲಯದ ಪ್ರಗತಿಪರ ಚಿಂತಕರಾದ ರಾಜಣ್ಣ** ಹಾಗೂ ಅವರ ಶಿಷ್ಯರಾದ **ಪೊಲೀಸ್ ಮಹಾ ನಿರ್ದೇಶಕರು (DGP/IGP) ಅರುಣ್ ಚಕ್ರವರ್ತಿ** ಅವರು ಆಗಮಿಸಿ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪೊಲೀಸ್ ಮಹಾ ನಿರ್ದೇಶಕರಾದ ಅರುಣ್ ಚಕ್ರವರ್ತಿ ಅವರು, *'ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸದ ಅವಧಿಯಲ್ಲಿ ಕಠಿಣ ಪರಿಶ್ರಮ ವಹಿಸಿ, ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ತಾವು ಕಲಿತ ಶಾಲೆಗೆ ಹಾಗೂ ಹೆತ್ತ ತಂದೆ-ತಾಯಿಗೆ ಕೀರ್ತಿ ತರಬೇಕು'* ಎಂದು ಸ್ಪೂರ್ತಿದಾಯಕ ಕರೆ ನೀಡಿದರು. ಇದೇ ವೇಳೆ ಮಾತನಾಡಿದ **ದಿ ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಮಹಮ್ಮದ್ ತಮೀಮ್ ಅನ್ಸಾರಿ** ಅವರು, *'ನಮ್ಮ ಶಾಲೆಯ ಉದ್ಘಾಟನೆಗೆ ಆಗಮಿಸಿರುವ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅರುಣ್ ಚಕ್ರವರ್ತಿಯವರಂತೆಯೇ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಶ್ರೇಷ್ಠ ಹುದ್ದೆಗೇರಬೇಕು'* ಎಂದು ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು."* --- "ಈ ಕಾರ್ಯಕ್ರಮದಲ್ಲಿ ತಂತ್ರಜ್ಞಾನ ಹಾಗೂ ಸಾಮಾಜಿಕ ಕ್ಷೇತ್ರದ ಹಲವಾರು ಗಣ್ಯರು ಭಾಗವಹಿಸಿದ್ದರು: ಡಿಸಿ ಆರ್ ಎ ನಲ್ಲಿ ಡಿಸಿಪಿಯಾಗಿ ಕರ್ನಾಟಕ ರಾಜ್ಯದಲ್ಲಿ ದಲಿತರಿಗೆ ಏನು ತೊಂದರೆ ಆಗ್ತಾ ಇದೆ ಅವಳೆ ಎಲ್ಲವನ್ನೂ ಸರಿ ಮಾಡಿ ಉತ್ತಮವಾದ ಸೇವೆಯನ್ನು ಸಲ್ಲಿಸಿದ್ದಾರೆ ನಾಗರಿಕ ಹಕ್ಕು ಜಾರಿ ನಿರ್ದೇಶನಲಯದಲ್ಲಿ ಇದುವರೆಗೂ ಯಾರು ಸಹ ಮಾಡದೇ ಇರತಕ್ಕಂತಹ ಕೆಲಸವನ್ನು ಅರುಣ್ ಚಕ್ರವರ್ತಿ ಅವರು ಮಾಡಿದ್ದಾರೆಂದು ಸುರೇಶ್ ಅವರು ತಿಳಿಸಿದರು ನಂತರ ಅರುಣ್ ಚಕ್ರವರ್ತಿ ಅವರು ಆಶಾಕಿರಣ ಅಂಧ ಮಕ್ಕಳು ಶಾಲೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿ ಕೆ ಕತ್ತರಿಸಿ ಮಕ್ಕಳಿಗೆ ಸಿಹಿ ಹಂಚಿದರು * **ರವಿಶಂಕರ್** - ಸ್ಥಾಪಕ ನಿರ್ದೇಶಕರು, ಆಪ್ಟಿ ಸಾಫ್ಟ್‌ವೇರ್ * **ಅಭಿರಾಮ್ ಸುರೇಶ್** - ಸಿಇಒ, ಎಗ್ನೋಮಿಷಿಯನ್ ರೋಬೋಟಿಕ್ಸ್ ಕಂಪನಿ ಲಿಯೋ ಕ್ಲಬ್ ನ ಅದ್ಯಕ್ಷರಾದ * **ಶ್ರೀಕಾಂತ್ ಲಿಯೋ ಲೋಕೇಶ್** - ಸೇರಿದಂತೆ ಹಲವು ಗಣ್ಯರು, ಶಿಕ್ಷಕರು ಹಾಗೂ ಪೋಷಕರು ಹಾಜರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು." --- "ಶಿಕ್ಷಣದ ಜೊತೆಗೆ ಉನ್ನತ ಗುರಿ ಮತ್ತು ಸಾಧನೆಯ ಹಾದಿ ತೋರಿಸಿದ ಈ ಉದ್ಘಾಟನಾ ಸಮಾರಂಭವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ತುಂಬಿದೆ. ವರದಿ:- ಅರಿಕೆರೆ ಮುನಿರಾಜು, ಪ್ರಧಾನ ವರದಿಗಾರರು, ಸಮತಾ ನ್ಯೂಸ್, ಶಿಡ್ಲಘಟ್ಟ.** *(ನಿರೂಪಕಿ)* ಇನ್ನಷ್ಟು ತಾಜಾ ಹಾಗೂ ವರದಿಗಳಿಗಾಗಿ 'ಸಮತಾ ನ್ಯೂಸ್' ಯೂಟ್ಯೂಬ್ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಮತ್ತು ಸಬ್‌ಸ್ಕ್ರೈಬ್ ಮಾಡಿ. ಧನ್ಯವಾದಗಳು!" --- *(Video Description / Description Box ಗಾಗಿ):** > #Sidlaghatta #ShidlaghattaNews #ArunChakravarthy #CrescentSchool #SantanaNews #KarnatakaNews #SidlaghattaEducation
    1
    **ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ 
**ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ |*
"*'ದಿ ಕ್ರೆಸೆಂಟ್ ಶಾಲೆಯ'** ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಸಮಾರಂಭದಲ್ಲಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು, ಪ್ರಗತಿಪರ ಚಿಂತಕರು ಹಾಗೂ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಉದ್ಯಮಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಿಕ ಸಂದೇಶ ನೀಡಿದರು.*
---
"ಶಿಡ್ಲಘಟ್ಟದ ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ **ಬೆಂಗಳೂರಿನ ಜಯನಗರ ಕಾನೂನು ಮಹಾವಿದ್ಯಾಲಯದ ಪ್ರಗತಿಪರ ಚಿಂತಕರಾದ ರಾಜಣ್ಣ** ಹಾಗೂ ಅವರ ಶಿಷ್ಯರಾದ **ಪೊಲೀಸ್ ಮಹಾ ನಿರ್ದೇಶಕರು (DGP/IGP) ಅರುಣ್ ಚಕ್ರವರ್ತಿ** ಅವರು ಆಗಮಿಸಿ ನೂತನ ಕಟ್ಟಡವನ್ನು ಉದ್ಘಾಟಿಸಿದರು.
ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪೊಲೀಸ್ ಮಹಾ ನಿರ್ದೇಶಕರಾದ ಅರುಣ್ ಚಕ್ರವರ್ತಿ ಅವರು, *'ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸದ ಅವಧಿಯಲ್ಲಿ ಕಠಿಣ ಪರಿಶ್ರಮ ವಹಿಸಿ, ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ತಾವು ಕಲಿತ ಶಾಲೆಗೆ ಹಾಗೂ ಹೆತ್ತ ತಂದೆ-ತಾಯಿಗೆ ಕೀರ್ತಿ ತರಬೇಕು'* ಎಂದು ಸ್ಪೂರ್ತಿದಾಯಕ ಕರೆ ನೀಡಿದರು.
ಇದೇ ವೇಳೆ ಮಾತನಾಡಿದ **ದಿ ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಮಹಮ್ಮದ್ ತಮೀಮ್ ಅನ್ಸಾರಿ** ಅವರು, *'ನಮ್ಮ ಶಾಲೆಯ ಉದ್ಘಾಟನೆಗೆ ಆಗಮಿಸಿರುವ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅರುಣ್ ಚಕ್ರವರ್ತಿಯವರಂತೆಯೇ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಶ್ರೇಷ್ಠ ಹುದ್ದೆಗೇರಬೇಕು'* ಎಂದು ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು."*
---
"ಈ ಕಾರ್ಯಕ್ರಮದಲ್ಲಿ ತಂತ್ರಜ್ಞಾನ ಹಾಗೂ ಸಾಮಾಜಿಕ ಕ್ಷೇತ್ರದ ಹಲವಾರು ಗಣ್ಯರು ಭಾಗವಹಿಸಿದ್ದರು:
ಡಿಸಿ ಆರ್ ಎ ನಲ್ಲಿ ಡಿಸಿಪಿಯಾಗಿ ಕರ್ನಾಟಕ ರಾಜ್ಯದಲ್ಲಿ ದಲಿತರಿಗೆ ಏನು ತೊಂದರೆ ಆಗ್ತಾ ಇದೆ ಅವಳೆ ಎಲ್ಲವನ್ನೂ ಸರಿ ಮಾಡಿ ಉತ್ತಮವಾದ ಸೇವೆಯನ್ನು ಸಲ್ಲಿಸಿದ್ದಾರೆ ನಾಗರಿಕ ಹಕ್ಕು ಜಾರಿ ನಿರ್ದೇಶನಲಯದಲ್ಲಿ ಇದುವರೆಗೂ ಯಾರು ಸಹ ಮಾಡದೇ ಇರತಕ್ಕಂತಹ ಕೆಲಸವನ್ನು ಅರುಣ್ ಚಕ್ರವರ್ತಿ ಅವರು ಮಾಡಿದ್ದಾರೆಂದು ಸುರೇಶ್ ಅವರು ತಿಳಿಸಿದರು
ನಂತರ ಅರುಣ್ ಚಕ್ರವರ್ತಿ ಅವರು ಆಶಾಕಿರಣ ಅಂಧ ಮಕ್ಕಳು ಶಾಲೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿ ಕೆ ಕತ್ತರಿಸಿ ಮಕ್ಕಳಿಗೆ ಸಿಹಿ ಹಂಚಿದರು
* **ರವಿಶಂಕರ್** - ಸ್ಥಾಪಕ ನಿರ್ದೇಶಕರು, ಆಪ್ಟಿ ಸಾಫ್ಟ್‌ವೇರ್ 
* **ಅಭಿರಾಮ್ ಸುರೇಶ್** - ಸಿಇಒ, ಎಗ್ನೋಮಿಷಿಯನ್ ರೋಬೋಟಿಕ್ಸ್ ಕಂಪನಿ ಲಿಯೋ ಕ್ಲಬ್ ನ ಅದ್ಯಕ್ಷರಾದ 
* **ಶ್ರೀಕಾಂತ್ ಲಿಯೋ ಲೋಕೇಶ್** -
ಸೇರಿದಂತೆ ಹಲವು ಗಣ್ಯರು, ಶಿಕ್ಷಕರು ಹಾಗೂ ಪೋಷಕರು ಹಾಜರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು."
---
"ಶಿಕ್ಷಣದ ಜೊತೆಗೆ ಉನ್ನತ ಗುರಿ ಮತ್ತು ಸಾಧನೆಯ ಹಾದಿ ತೋರಿಸಿದ ಈ ಉದ್ಘಾಟನಾ ಸಮಾರಂಭವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ತುಂಬಿದೆ.
ವರದಿ:- ಅರಿಕೆರೆ ಮುನಿರಾಜು, ಪ್ರಧಾನ ವರದಿಗಾರರು, ಸಮತಾ ನ್ಯೂಸ್, ಶಿಡ್ಲಘಟ್ಟ.**
*(ನಿರೂಪಕಿ)* ಇನ್ನಷ್ಟು ತಾಜಾ  ಹಾಗೂ ವರದಿಗಳಿಗಾಗಿ 'ಸಮತಾ ನ್ಯೂಸ್' ಯೂಟ್ಯೂಬ್ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಮತ್ತು ಸಬ್‌ಸ್ಕ್ರೈಬ್ ಮಾಡಿ. ಧನ್ಯವಾದಗಳು!"
---
*(Video Description / Description Box ಗಾಗಿ):**
> #Sidlaghatta #ShidlaghattaNews #ArunChakravarthy #CrescentSchool #SantanaNews #KarnatakaNews #SidlaghattaEducation
    user_ಅರಿಕೆರೆ ಮುನಿರಾಜು ಡಿ
    ಅರಿಕೆರೆ ಮುನಿರಾಜು ಡಿ
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    10 hrs ago
  • ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಪುಟ್ ಪಾತ್ ರಸ್ತೆಯನ್ನ ಒತ್ತುವರಿ ಮಾಡಿಕೊಂಡಿದ್ದ ಕೆಲ ಅಂಗಡಿಗಳ ಮಾಲೀಕರು ಸೀಮೆಂಟ್ ಮೂಲಕ ನಿರ್ಮಿಸಿ ಕೊಂಡಿದ್ದ ಮೆಟ್ಟಿಲುಗಳನ್ನು ಜೆಸಿಬಿಯಿಂದ ತೆರವು ಕಳೆದ ನಾಲ್ಕು ದಿನಗಳ ಹಿಂದೆಯೇ ಒತ್ತುವರಿ ತೆರವು ಮಾಡುವುದಾಗಿ ಸೂಚಿಸಿದ್ದ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣ
    2
    ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ
ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ
ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ
ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ
ಪುಟ್ ಪಾತ್ ರಸ್ತೆಯನ್ನ ಒತ್ತುವರಿ ಮಾಡಿಕೊಂಡಿದ್ದ ಕೆಲ ಅಂಗಡಿಗಳ ಮಾಲೀಕರು
ಸೀಮೆಂಟ್ ಮೂಲಕ ನಿರ್ಮಿಸಿ ಕೊಂಡಿದ್ದ ಮೆಟ್ಟಿಲುಗಳನ್ನು ಜೆಸಿಬಿಯಿಂದ ತೆರವು
ಕಳೆದ ನಾಲ್ಕು ದಿನಗಳ ಹಿಂದೆಯೇ ಒತ್ತುವರಿ ತೆರವು ಮಾಡುವುದಾಗಿ ಸೂಚಿಸಿದ್ದ ಅಧಿಕಾರಿಗಳು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    10 hrs ago
  • ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಮಾತನಾಡುತ್ತಾ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ಗುಡಿಬಂಡೆ ಚೇಳೂರು ತಾಲೂಕುಗಳ ಎಲ್ಲರಿಗೂ ನಮಸ್ಕಾರಗಳನ್ನು ತಿಳಿಸುತ್ತಾ ಪ್ರತಿ ವರ್ಷದಂತೆ ಈ ವರ್ಷವೂ ನನ್ನ ಎಸ್ ಎನ್ ಸುಬ್ಬಾರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಿನಾಂಕ 26.08.2026 ರ ಬುಧವಾರ ಗಡಿದಿಂ ಶ್ರೀ ಕ್ಷೇತ್ರದಲ್ಲಿ 23 ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ ಹಮ್ಮಿಕೊಂಡಿದ್ದು ತಾವೆಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿ ವಧು ವರರನ್ನು ಆಶೀರ್ವದಿಸಿ ಕಾರ್ಯಕ್ರಮ ಯಶಸ್ವಿ ಮಾಡಲು ಕೋರುತ್ತೇನೆ ಎಂದು ತಿಳಿಸಿದರು
    1
    ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಮಾತನಾಡುತ್ತಾ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ಗುಡಿಬಂಡೆ ಚೇಳೂರು ತಾಲೂಕುಗಳ ಎಲ್ಲರಿಗೂ ನಮಸ್ಕಾರಗಳನ್ನು ತಿಳಿಸುತ್ತಾ 
ಪ್ರತಿ ವರ್ಷದಂತೆ ಈ ವರ್ಷವೂ ನನ್ನ ಎಸ್ ಎನ್ ಸುಬ್ಬಾರೆಡ್ಡಿ ಚಾರಿಟೇಬಲ್ ಟ್ರಸ್ಟ್  ವತಿಯಿಂದ ದಿನಾಂಕ 26.08.2026 ರ ಬುಧವಾರ ಗಡಿದಿಂ ಶ್ರೀ ಕ್ಷೇತ್ರದಲ್ಲಿ 23 ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ ಹಮ್ಮಿಕೊಂಡಿದ್ದು ತಾವೆಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿ ವಧು ವರರನ್ನು ಆಶೀರ್ವದಿಸಿ ಕಾರ್ಯಕ್ರಮ ಯಶಸ್ವಿ ಮಾಡಲು ಕೋರುತ್ತೇನೆ ಎಂದು ತಿಳಿಸಿದರು
    user_Shashi Kumar
    Shashi Kumar
    ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    11 hrs ago
  • ಲೊಕೇಶನ್ ಒಂದು ಹತ್ತಿರ ಹಾಕಿ ಇನ್ನೊಂದು ಹತ್ತಿರ ಬಾ ಅಂತಾರೆ ಇದನ್ನ ಯಾರು ಕೇಳ್ತಾರೆ? ಲೊಕೇಶನ್ ಒಂದು ಹತ್ತಿರ ಹಾಕಿ ಇನ್ನೊಂದು ಹತ್ತಿರ ಬಾ ಅಂತಾರೆ ಇದನ್ನ ಯಾರು ಕೇಳ್ತಾರೆ?
    1
    ಲೊಕೇಶನ್ ಒಂದು ಹತ್ತಿರ ಹಾಕಿ ಇನ್ನೊಂದು 
ಹತ್ತಿರ ಬಾ ಅಂತಾರೆ ಇದನ್ನ ಯಾರು ಕೇಳ್ತಾರೆ?
ಲೊಕೇಶನ್ ಒಂದು ಹತ್ತಿರ ಹಾಕಿ ಇನ್ನೊಂದು 
ಹತ್ತಿರ ಬಾ ಅಂತಾರೆ ಇದನ್ನ ಯಾರು ಕೇಳ್ತಾರೆ?
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    9 hrs ago
  • ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಸರಬರಾಜಾಗಿಲ್ಲ: ಯು.ಟಿ. ಖಾದರ್ ರಾಜ್ಯದ ಯಾವುದೇ ಸರ್ಕಾರಿ ಆಸ್ಪತ್ರೆಗಳಿಗೆ ನಕಲಿ ಅಥವಾ ಕಳಪೆ ಮಟ್ಟದ ಔಷಧಿಗಳನ್ನು ಸರಬರಾಜು ಮಾಡಲಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸ್ಪಷ್ಟನೆ ನೀಡಿದ್ದಾರೆ. ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಸರ್ಕಾರ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ. ಒಂದು ವೇಳೆ ಎಲ್ಲಾದರೂ ಸರ್ಕಾರಿ ಆಸ್ಪತ್ರೆಗಳಿಗೆ ನಕಲಿ ಮಾತ್ರೆ ಅಥವಾ ಔಷಧಿ ಪೂರೈಕೆಯಾಗಿರುವುದು ಕಣ್ಣಿಗೆ ಬಿದ್ದರೆ, ಅಂತಹ ಏಜೆನ್ಸಿಗಳು ಹಾಗೂ ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ. ಕೃತಕ ಪನ್ನೀರ್‌ ಬಳಕೆ ನಿಷೇಧ ಇದೇ ವೇಳೆ ಆಹಾರ ಭದ್ರತೆ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ರಾಜ್ಯದಲ್ಲಿ ಕೃತಕವಾಗಿ ತಯಾರಿಸುವ ಪನ್ನೀರ್ ಮಾರಾಟ ಮತ್ತು ಬಳಕೆಯನ್ನು ಸತತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ನಿಷೇಧದ ಬಿಸಿ ಕೇವಲ ಕೃತಕ ಪನ್ನೀರ್‌ಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಸಾರ್ವಜನಿಕ ಆರೋಗ್ಯಕ್ಕೆ ಹಾನಿಯುಂಟುಮಾಡುವ ಎಲ್ಲಾ ರೀತಿಯ ನಕಲಿ ಹಾಗೂ ಕೃತಕ ಆಹಾರ ಉತ್ಪನ್ನಗಳಿಗೂ ಈ ನಿಯಮ ಅನ್ವಯಿಸಲಿದೆ ಎಂದು ಅವರು ಕಟ್ಟುನಿಟ್ಟಾಗಿ ಪುನರುಚ್ಚರಿಸಿದ್ದಾರೆ. ಆಹಾರ ಸುರಕ್ಷತಾ ಕಾಯ್ದೆಯಡಿ ಸದ್ಯಕ್ಕೆ ನಿಷೇಧ ಹೇರಲು ಆಯುಕ್ತರಿಗೆ ಒಂದು ವರ್ಷದ ಮಟ್ಟಿಗೆ ಮಾತ್ರ ಕಾನೂನಾತ್ಮಕ ಅಧಿಕಾರವಿರುತ್ತದೆ. ಈ ನಿಷೇಧದ ಅವಧಿ ಮುಗಿದ ನಂತರ ಪರಿಸ್ಥಿತಿಗೆ ಅನುಗುಣವಾಗಿ ನಿಯಮಗಳನ್ನು ನವೀಕರಿಸಲಾಗುವುದು ಅಥವಾ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಸೂಕ್ತ ಕಾಯ್ದೆ ರೂಪಿಸಲಾಗುವುದು ಎಂದು ತಿಳಿಸಿದರು. ಇನ್ನೊಂದೆಡೆ, ರಾಜ್ಯದಲ್ಲಿ ಸಕ್ರಿಯವಾಗಿರುವ ನಕಲಿ ಔಷಧಿ ಜಾಲದ ಬೆನ್ನೆಲುಬು ಮುರಿಯಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಈಗಾಗಲೇ ಅಖಾಡಕ್ಕಿಳಿದಿದ್ದು, ಸೂಕ್ತ ಮಾಹಿತಿ ಸಂಗ್ರಹಿಸಿ ತನಿಖೆಯನ್ನು ತೀವ್ರಗೊಳಿಸಿದೆ. ಅನೈತಿಕ ಹಾಗೂ ಅಕ್ರಮ ಚಟುವಟಿಕೆಗಳಿಗೆ ತಿಲಾಂಜಲಿ ಹಾಡಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ಸತತ ದಾಳಿಗಳನ್ನು ನಡೆಸುತ್ತಿದ್ದಾರೆ ಎಂದು ಸಚಿವರು ವಿವರಿಸಿದ್ದಾರೆ. ನಕಲಿ ಔಷಧಗಳನ್ನು ಗುರುತಿಸುವುದೇ ದೊಡ್ಡ ಸವಾಲು - ಹಾಲೋಗ್ರಾಂ, ಕ್ಯೂಆರ್ ಕೋಡ್ ಅಳವಡಿಕೆಗೆ ಐಎಂಎ ಆಗ್ರಹ ಇತ್ತೀಚೆಗೆ ರಾಜ್ಯದಲ್ಲಿ (Karnataka) ನಕಲಿ ಔಷಧ (Fake Medicine) ಜಾಲ ಬಯಲಾದ ಬೆನ್ನಲ್ಲೇ, ಅಸಲಿ ಮತ್ತು ನಕಲಿ ಔಷಧಗಳನ್ನು ಗುರುತಿಸುವುದು ವೈದ್ಯರು (Doctors), ಫಾರ್ಮಸಿಸ್ಟ್‌ಗಳು ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ನಕಲಿ ಔಷಧ ತಯಾರಕರು ಅಸಲಿ ಉತ್ಪನ್ನಗಳನ್ನೇ ಹೋಲುವಂತೆ ಪ್ಯಾಕಿಂಗ್, ಲೇಬಲಿಂಗ್ ಹಾಗೂ ಬ್ಯಾಚ್ ವಿವರಗಳನ್ನು ನಿಖರವಾಗಿ ನಕಲು ಮಾಡುತ್ತಿದ್ದಾರೆ. ಇದರಿಂದಾಗಿ ಮೇಲ್ನೋಟಕ್ಕೆ ಅಥವಾ ಸಾಮಾನ್ಯ ಪರಿಶೀಲನೆಯಿಂದ ಇವುಗಳನ್ನು ಪತ್ತೆಹಚ್ಚುವುದು ಅಸಾಧ್ಯವಾಗಿದೆ. ಈ ನಕಲಿ ಉತ್ಪನ್ನಗಳನ್ನು ಖಚಿತವಾಗಿ ಗುರುತಿಸಲು ಪ್ರಯೋಗಾಲಯ ಪರೀಕ್ಷೆಯ ಅಗತ್ಯ ಎದುರಾಗುತ್ತಿದ್ದು, ನಕಲಿ ಔಷಧಗಳು ರೋಗಿಗಳ ಕೈಗೆ ತಲುಪುವ ಭೀತಿ ವ್ಯಕ್ತವಾಗಿದೆ. ವೈದ್ಯರ ಸೂಕ್ತ ಸಲಹೆಯ ಹೊರತಾಗಿಯೂ ಇಂತಹ ಔಷಧ ಸೇವನೆಯಿಂದ ರೋಗಿಗಳ ಚಿಕಿತ್ಸೆಯ ಮೇಲೆ ತೀವ್ರ ಪರಿಣಾಮ ಬೀರುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರೋಗಿಗಳ ಸುರಕ್ಷತೆಗಾಗಿ ತಂತ್ರಜ್ಞಾನ ಆಧಾರಿತ ಭದ್ರತಾ ವ್ಯವಸ್ಥೆ ರೂಪಿಸಲು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA) ಮುಂದಾಗಿದೆ. ರಾಜ್ಯದಲ್ಲಿ ಮಾರಾಟವಾಗುವ ಪ್ರತಿಯೊಂದು ಔಷಧಕ್ಕೂ ವಿಶಿಷ್ಟ ಹಾಲೋಗ್ರಾಂ ಅಥವಾ ಕ್ಯೂಆರ್ (QR) ಕೋಡ್‌ನಂತಹ ಡಿಜಿಟಲ್ ಗುರುತುಗಳನ್ನು ಅಳವಡಿಸಬೇಕೆಂದು ಐಎಂಎ ಸರ್ಕಾರಕ್ಕೆ ಮನವಿ ಮಾಡಿದೆ. ಈ ವ್ಯವಸ್ಥೆಯಿಂದ ಗ್ರಾಹಕರು ಹಾಗೂ ಔಷಧ ಮಾರಾಟಗಾರರು ಸುಲಭವಾಗಿ ಔಷಧದ ಅಸಲಿತನವನ್ನು ಪರಿಶೀಲಿಸಲು ಸಾಧ್ಯವಾಗಲಿದ್ದು, ಔಷಧ ತಯಾರಿಕೆಯಿಂದ ಹಿಡಿದು ರೋಗಿಗೆ ತಲುಪುವವರೆಗಿನ ಇಡೀ ಪೂರೈಕೆ ವ್ಯವಸ್ಥೆಯ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲು ನೆರವಾಗಲಿದೆ.
    1
    ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಸರಬರಾಜಾಗಿಲ್ಲ: ಯು.ಟಿ. ಖಾದರ್
ರಾಜ್ಯದ ಯಾವುದೇ ಸರ್ಕಾರಿ ಆಸ್ಪತ್ರೆಗಳಿಗೆ  ನಕಲಿ ಅಥವಾ ಕಳಪೆ ಮಟ್ಟದ ಔಷಧಿಗಳನ್ನು  ಸರಬರಾಜು ಮಾಡಲಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸ್ಪಷ್ಟನೆ ನೀಡಿದ್ದಾರೆ.
ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಸರ್ಕಾರ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ. ಒಂದು ವೇಳೆ ಎಲ್ಲಾದರೂ ಸರ್ಕಾರಿ ಆಸ್ಪತ್ರೆಗಳಿಗೆ ನಕಲಿ ಮಾತ್ರೆ ಅಥವಾ ಔಷಧಿ ಪೂರೈಕೆಯಾಗಿರುವುದು ಕಣ್ಣಿಗೆ ಬಿದ್ದರೆ, ಅಂತಹ ಏಜೆನ್ಸಿಗಳು ಹಾಗೂ ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.
ಕೃತಕ ಪನ್ನೀರ್‌ ಬಳಕೆ ನಿಷೇಧ
ಇದೇ ವೇಳೆ ಆಹಾರ ಭದ್ರತೆ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ರಾಜ್ಯದಲ್ಲಿ ಕೃತಕವಾಗಿ ತಯಾರಿಸುವ ಪನ್ನೀರ್ ಮಾರಾಟ ಮತ್ತು ಬಳಕೆಯನ್ನು ಸತತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ನಿಷೇಧದ ಬಿಸಿ ಕೇವಲ ಕೃತಕ ಪನ್ನೀರ್‌ಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಸಾರ್ವಜನಿಕ ಆರೋಗ್ಯಕ್ಕೆ ಹಾನಿಯುಂಟುಮಾಡುವ ಎಲ್ಲಾ ರೀತಿಯ ನಕಲಿ ಹಾಗೂ ಕೃತಕ ಆಹಾರ ಉತ್ಪನ್ನಗಳಿಗೂ ಈ ನಿಯಮ ಅನ್ವಯಿಸಲಿದೆ ಎಂದು ಅವರು ಕಟ್ಟುನಿಟ್ಟಾಗಿ ಪುನರುಚ್ಚರಿಸಿದ್ದಾರೆ.
ಆಹಾರ ಸುರಕ್ಷತಾ ಕಾಯ್ದೆಯಡಿ ಸದ್ಯಕ್ಕೆ ನಿಷೇಧ ಹೇರಲು ಆಯುಕ್ತರಿಗೆ ಒಂದು ವರ್ಷದ ಮಟ್ಟಿಗೆ ಮಾತ್ರ ಕಾನೂನಾತ್ಮಕ ಅಧಿಕಾರವಿರುತ್ತದೆ. ಈ ನಿಷೇಧದ ಅವಧಿ ಮುಗಿದ ನಂತರ ಪರಿಸ್ಥಿತಿಗೆ ಅನುಗುಣವಾಗಿ ನಿಯಮಗಳನ್ನು ನವೀಕರಿಸಲಾಗುವುದು ಅಥವಾ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಸೂಕ್ತ ಕಾಯ್ದೆ ರೂಪಿಸಲಾಗುವುದು ಎಂದು ತಿಳಿಸಿದರು.
ಇನ್ನೊಂದೆಡೆ, ರಾಜ್ಯದಲ್ಲಿ ಸಕ್ರಿಯವಾಗಿರುವ ನಕಲಿ ಔಷಧಿ ಜಾಲದ ಬೆನ್ನೆಲುಬು ಮುರಿಯಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಈಗಾಗಲೇ ಅಖಾಡಕ್ಕಿಳಿದಿದ್ದು, ಸೂಕ್ತ ಮಾಹಿತಿ ಸಂಗ್ರಹಿಸಿ ತನಿಖೆಯನ್ನು ತೀವ್ರಗೊಳಿಸಿದೆ. ಅನೈತಿಕ ಹಾಗೂ ಅಕ್ರಮ ಚಟುವಟಿಕೆಗಳಿಗೆ ತಿಲಾಂಜಲಿ ಹಾಡಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ಸತತ ದಾಳಿಗಳನ್ನು ನಡೆಸುತ್ತಿದ್ದಾರೆ ಎಂದು ಸಚಿವರು ವಿವರಿಸಿದ್ದಾರೆ.
ನಕಲಿ ಔಷಧಗಳನ್ನು ಗುರುತಿಸುವುದೇ ದೊಡ್ಡ ಸವಾಲು - ಹಾಲೋಗ್ರಾಂ, ಕ್ಯೂಆರ್ ಕೋಡ್ ಅಳವಡಿಕೆಗೆ ಐಎಂಎ ಆಗ್ರಹ
ಇತ್ತೀಚೆಗೆ ರಾಜ್ಯದಲ್ಲಿ (Karnataka) ನಕಲಿ ಔಷಧ (Fake Medicine) ಜಾಲ ಬಯಲಾದ ಬೆನ್ನಲ್ಲೇ, ಅಸಲಿ ಮತ್ತು ನಕಲಿ ಔಷಧಗಳನ್ನು ಗುರುತಿಸುವುದು ವೈದ್ಯರು (Doctors), ಫಾರ್ಮಸಿಸ್ಟ್‌ಗಳು ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ನಕಲಿ ಔಷಧ ತಯಾರಕರು ಅಸಲಿ ಉತ್ಪನ್ನಗಳನ್ನೇ ಹೋಲುವಂತೆ ಪ್ಯಾಕಿಂಗ್, ಲೇಬಲಿಂಗ್ ಹಾಗೂ ಬ್ಯಾಚ್ ವಿವರಗಳನ್ನು ನಿಖರವಾಗಿ ನಕಲು ಮಾಡುತ್ತಿದ್ದಾರೆ. ಇದರಿಂದಾಗಿ ಮೇಲ್ನೋಟಕ್ಕೆ ಅಥವಾ ಸಾಮಾನ್ಯ ಪರಿಶೀಲನೆಯಿಂದ ಇವುಗಳನ್ನು ಪತ್ತೆಹಚ್ಚುವುದು ಅಸಾಧ್ಯವಾಗಿದೆ. ಈ ನಕಲಿ ಉತ್ಪನ್ನಗಳನ್ನು ಖಚಿತವಾಗಿ ಗುರುತಿಸಲು ಪ್ರಯೋಗಾಲಯ ಪರೀಕ್ಷೆಯ ಅಗತ್ಯ ಎದುರಾಗುತ್ತಿದ್ದು, ನಕಲಿ ಔಷಧಗಳು ರೋಗಿಗಳ ಕೈಗೆ ತಲುಪುವ ಭೀತಿ ವ್ಯಕ್ತವಾಗಿದೆ. ವೈದ್ಯರ ಸೂಕ್ತ ಸಲಹೆಯ ಹೊರತಾಗಿಯೂ ಇಂತಹ ಔಷಧ ಸೇವನೆಯಿಂದ ರೋಗಿಗಳ ಚಿಕಿತ್ಸೆಯ ಮೇಲೆ ತೀವ್ರ ಪರಿಣಾಮ ಬೀರುವ ಆತಂಕ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ರೋಗಿಗಳ ಸುರಕ್ಷತೆಗಾಗಿ ತಂತ್ರಜ್ಞಾನ ಆಧಾರಿತ ಭದ್ರತಾ ವ್ಯವಸ್ಥೆ ರೂಪಿಸಲು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA) ಮುಂದಾಗಿದೆ. ರಾಜ್ಯದಲ್ಲಿ ಮಾರಾಟವಾಗುವ ಪ್ರತಿಯೊಂದು ಔಷಧಕ್ಕೂ ವಿಶಿಷ್ಟ ಹಾಲೋಗ್ರಾಂ ಅಥವಾ ಕ್ಯೂಆರ್ (QR) ಕೋಡ್‌ನಂತಹ ಡಿಜಿಟಲ್ ಗುರುತುಗಳನ್ನು ಅಳವಡಿಸಬೇಕೆಂದು ಐಎಂಎ ಸರ್ಕಾರಕ್ಕೆ ಮನವಿ ಮಾಡಿದೆ. ಈ ವ್ಯವಸ್ಥೆಯಿಂದ ಗ್ರಾಹಕರು ಹಾಗೂ ಔಷಧ ಮಾರಾಟಗಾರರು ಸುಲಭವಾಗಿ ಔಷಧದ ಅಸಲಿತನವನ್ನು ಪರಿಶೀಲಿಸಲು ಸಾಧ್ಯವಾಗಲಿದ್ದು, ಔಷಧ ತಯಾರಿಕೆಯಿಂದ ಹಿಡಿದು ರೋಗಿಗೆ ತಲುಪುವವರೆಗಿನ ಇಡೀ ಪೂರೈಕೆ ವ್ಯವಸ್ಥೆಯ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲು ನೆರವಾಗಲಿದೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    19 hrs ago
  • ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ: ವಿಕಾಸಸೌಧದ ಗೇಟ್​ ಬಳಿ ಭಾರಿ ಹೈಡ್ರಾಮಾ ಬೆಂಗಳೂರು;ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದ್ದು, ವಿಕಾಸಸೌಧದ ಗೇಟ್​ ಬಳಿ ಭಾರಿ ಹೈಡ್ರಾಮಾವೇ ನಡೆದಿದೆ. ವಿಧಾನಸೌಧಕ್ಕೆ ಒಳನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟಿದ್ದು, ವಿಪಕ್ಷ ನಾಯಕ ಆರ್​​.ಅಶೋಕ್​​, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಪರಿಷತ್​​ ಸದಸ್ಯರಾದ ಸಿಟಿ ರವಿ ಮತ್ತು ರವಿಕುಮಾರ್ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ. ವಿಕಾಸಸೌಧ ಗೇಟ್ ಮುಂಭಾಗದ ರಸ್ತೆಯಲ್ಲಿಯೇ ಕುಳಿತು ಬಿಜೆಪಿಗರು ಪ್ರತಿಭಟನೆ ನಡೆಸಿದ್ದು, ವಶಕ್ಕೆ ಪಡೆದ ಬಿಜೆಪಿಗರನ್ನು ಪೊಲೀಸರು ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ದಿದ್ದಾರೆ.
    1
    ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ: ವಿಕಾಸಸೌಧದ ಗೇಟ್​ ಬಳಿ ಭಾರಿ ಹೈಡ್ರಾಮಾ
ಬೆಂಗಳೂರು;ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದ್ದು, ವಿಕಾಸಸೌಧದ ಗೇಟ್​ ಬಳಿ ಭಾರಿ ಹೈಡ್ರಾಮಾವೇ ನಡೆದಿದೆ. ವಿಧಾನಸೌಧಕ್ಕೆ ಒಳನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟಿದ್ದು, ವಿಪಕ್ಷ ನಾಯಕ ಆರ್​​.ಅಶೋಕ್​​, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಪರಿಷತ್​​ ಸದಸ್ಯರಾದ ಸಿಟಿ ರವಿ ಮತ್ತು ರವಿಕುಮಾರ್ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ. ವಿಕಾಸಸೌಧ ಗೇಟ್ ಮುಂಭಾಗದ ರಸ್ತೆಯಲ್ಲಿಯೇ ಕುಳಿತು ಬಿಜೆಪಿಗರು ಪ್ರತಿಭಟನೆ ನಡೆಸಿದ್ದು, ವಶಕ್ಕೆ ಪಡೆದ ಬಿಜೆಪಿಗರನ್ನು ಪೊಲೀಸರು ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ದಿದ್ದಾರೆ.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    21 hrs ago
  • *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*
    2
    *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*




*ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*





*ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*





*ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*




*ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    30 min ago
  • ಗುಡಿಬಂಡೆ ತಾಲೂಕಿನಲ್ಲಿ ಬದುಕಿರುವ ಮುಸ್ಲಿಂ ಮಹಿಳೆಗೆ ಮರಣ ಪ್ರಮಾಣ ಪತ್ರವನ್ನು ನೀಡಿರುವ ಅಧಿಕಾರಿಗಳು ಇದರ ವಿರುದ್ಧ ರೊಚ್ಚಿಗೆದ್ದ ಚಿಕ್ಬಳ್ಳಾಪುರದ ಸಂಸದರಾದ ಡಾಕ್ಟರ್ ಕೆ ಸುಧಾಕರ್
    1
    ಗುಡಿಬಂಡೆ ತಾಲೂಕಿನಲ್ಲಿ ಬದುಕಿರುವ ಮುಸ್ಲಿಂ ಮಹಿಳೆಗೆ ಮರಣ ಪ್ರಮಾಣ ಪತ್ರವನ್ನು ನೀಡಿರುವ ಅಧಿಕಾರಿಗಳು ಇದರ ವಿರುದ್ಧ ರೊಚ್ಚಿಗೆದ್ದ ಚಿಕ್ಬಳ್ಳಾಪುರದ ಸಂಸದರಾದ ಡಾಕ್ಟರ್ ಕೆ ಸುಧಾಕರ್
    user_Shashi Kumar
    Shashi Kumar
    ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.