ಪ್ಲಾಸ್ಟಿಕ್ ಮುಕ್ತ ಗ್ರಾಮದತ್ತ ನಗರಂಗೆರೆ: 'ಮನೆಗೊಂದು ಬಟ್ಟೆಯ ಕೈಚೀಲ' ವಿತರಣೆ ಹಾಗೂ ಪರಿಸರ ಜಾಗೃತಿ ಅಭಿಯಾನ ಯಶಸ್ವಿ ಪ್ಲಾಸ್ಟಿಕ್ ಮುಕ್ತ ಗ್ರಾಮದತ್ತ ನಗರಂಗೆರೆ: 'ಮನೆಗೊಂದು ಬಟ್ಟೆಯ ಕೈಚೀಲ' ವಿತರಣೆ ಹಾಗೂ ಪರಿಸರ ಜಾಗೃತಿ ಅಭಿಯಾನ ಯಶಸ್ವಿ ಚಳ್ಳಕೆರೆ:ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಸದುದ್ದೇಶದಿಂದ ತಾಲೂಕಿನ ನಗರಂಗೆರೆ ಗ್ರಾಮದಲ್ಲಿ 'ನಗರಂಗೆರೆ ಯಂಗ್ ಅಂಡ್ ಯೂತ್ ಅಸೋಸಿಯೇಷನ್' ವತಿಯಿಂದ 'ಮನೆಗೊಂದು ಬಟ್ಟೆಯ ಕೈಚೀಲ' ಎಂಬ ವಿನೂತನ ಪರಿಸರ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಸೆಪ್ಟೆಂಬರ್ 12ರ ಶನಿವಾರ ಸಂಜೆ ಹಾಗೂ 13ರ ಭಾನುವಾರ ಮುಂಜಾನೆ ಗ್ರಾಮದಲ್ಲಿ ಸಂಚರಿಸಿದ ಯುವಕರು, ಬರೋಬ್ಬರಿ 350ಕ್ಕೂ ಹೆಚ್ಚು ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ ತಲಾ ಒಂದೊಂದು ಬಟ್ಟೆಯ ಕೈಚೀಲವನ್ನು ವಿತರಿಸಿದರು. ದೈನಂದಿನ ಬಳಕೆಯಲ್ಲಿ ಮಾರಕ ಪ್ಲಾಸ್ಟಿಕ್ ಕವರ್ಗಳ ಬದಲಿಗೆ ಪರಿಸರ ಸ್ನೇಹಿ ಬಟ್ಟೆ ಚೀಲಗಳನ್ನೇ ಉಪಯೋಗಿಸುವಂತೆ ಗ್ರಾಮಸ್ಥರಲ್ಲಿ ಕಳಕಳಿಯ ಮನವಿ ಮಾಡಿದರು. ಅಭಿಯಾನದ ಉದ್ದಕ್ಕೂ ನೀರು ಉಳಿಸಿ, ಮರ ಬೆಳೆಸಿ, ಪ್ಲಾಸ್ಟಿಕ್ ತ್ಯಜಿಸಿ ಹಾಗೂ “ಇಂದಿನ ನಮ್ಮ ಜವಾಬ್ದಾರಿ – ನಾಳೆಯ ನಮ್ಮ ಭವಿಷ್ಯ ಎಂಬ ಘೋಷವಾಕ್ಯಗಳ ಮೂಲಕ ಯುವಕರು ಜನರಲ್ಲಿ ಪರಿಸರ ಕಾಳಜಿಯನ್ನು ಬಡಿದೆಬ್ಬಿಸಿದರು. ಈ ಜಾಗೃತಿ ಕಾರ್ಯಕ್ರಮವು ಗ್ರಾಮದ ಮುಖಂಡರಾದ ಕೆ.ಆರ್. ತಿಪ್ಪೇಸ್ವಾಮಿ ಹಾಗೂ ನಗರಂಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಮಂಜುನಾಥ್ ಅವರ ನೇತೃತ್ವದಲ್ಲಿ ನಡೆಯಿತು. ಊರಿನ ಹಲವು ಆಸಕ್ತ ಯುವಕರು ಇವರೊಂದಿಗೆ ಕೈಜೋಡಿಸಿ ಮನೆಮನೆಗೆ ತೆರಳಿ ಬಟ್ಟೆ ಚೀಲಗಳನ್ನು ಹಂಚುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಯುವಕರ ಈ ಅರ್ಥಪೂರ್ಣ ಕಾರ್ಯಕ್ಕೆ ಗ್ರಾಮಸ್ಥರಿಂದ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗಿದೆ. ಅಭಿಯಾನದಿಂದ ಪ್ರೇರೇಪಿತರಾದ ಹಲವರು, ಇನ್ನು ಮುಂದೆ ದಿನನಿತ್ಯದ ಬಳಕೆಯಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಗಣನೀಯವಾಗಿ ಕಡಿಮೆ ಮಾಡುವುದಾಗಿ ಹಾಗೂ ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸುವುದಾಗಿ ಭರವಸೆ ನೀಡಿದ್ದಾರೆ.
ಪ್ಲಾಸ್ಟಿಕ್ ಮುಕ್ತ ಗ್ರಾಮದತ್ತ ನಗರಂಗೆರೆ: 'ಮನೆಗೊಂದು ಬಟ್ಟೆಯ ಕೈಚೀಲ' ವಿತರಣೆ ಹಾಗೂ ಪರಿಸರ ಜಾಗೃತಿ ಅಭಿಯಾನ ಯಶಸ್ವಿ ಪ್ಲಾಸ್ಟಿಕ್ ಮುಕ್ತ ಗ್ರಾಮದತ್ತ ನಗರಂಗೆರೆ: 'ಮನೆಗೊಂದು ಬಟ್ಟೆಯ ಕೈಚೀಲ' ವಿತರಣೆ ಹಾಗೂ ಪರಿಸರ ಜಾಗೃತಿ ಅಭಿಯಾನ ಯಶಸ್ವಿ ಚಳ್ಳಕೆರೆ:ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಸದುದ್ದೇಶದಿಂದ ತಾಲೂಕಿನ ನಗರಂಗೆರೆ ಗ್ರಾಮದಲ್ಲಿ 'ನಗರಂಗೆರೆ ಯಂಗ್ ಅಂಡ್ ಯೂತ್ ಅಸೋಸಿಯೇಷನ್' ವತಿಯಿಂದ 'ಮನೆಗೊಂದು ಬಟ್ಟೆಯ ಕೈಚೀಲ' ಎಂಬ ವಿನೂತನ ಪರಿಸರ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಸೆಪ್ಟೆಂಬರ್ 12ರ ಶನಿವಾರ ಸಂಜೆ ಹಾಗೂ 13ರ ಭಾನುವಾರ ಮುಂಜಾನೆ ಗ್ರಾಮದಲ್ಲಿ ಸಂಚರಿಸಿದ ಯುವಕರು, ಬರೋಬ್ಬರಿ 350ಕ್ಕೂ ಹೆಚ್ಚು ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ ತಲಾ ಒಂದೊಂದು ಬಟ್ಟೆಯ ಕೈಚೀಲವನ್ನು ವಿತರಿಸಿದರು. ದೈನಂದಿನ ಬಳಕೆಯಲ್ಲಿ ಮಾರಕ ಪ್ಲಾಸ್ಟಿಕ್ ಕವರ್ಗಳ ಬದಲಿಗೆ ಪರಿಸರ ಸ್ನೇಹಿ ಬಟ್ಟೆ ಚೀಲಗಳನ್ನೇ ಉಪಯೋಗಿಸುವಂತೆ ಗ್ರಾಮಸ್ಥರಲ್ಲಿ ಕಳಕಳಿಯ ಮನವಿ ಮಾಡಿದರು. ಅಭಿಯಾನದ ಉದ್ದಕ್ಕೂ ನೀರು ಉಳಿಸಿ, ಮರ ಬೆಳೆಸಿ, ಪ್ಲಾಸ್ಟಿಕ್ ತ್ಯಜಿಸಿ ಹಾಗೂ “ಇಂದಿನ ನಮ್ಮ ಜವಾಬ್ದಾರಿ – ನಾಳೆಯ ನಮ್ಮ ಭವಿಷ್ಯ ಎಂಬ ಘೋಷವಾಕ್ಯಗಳ ಮೂಲಕ ಯುವಕರು ಜನರಲ್ಲಿ ಪರಿಸರ ಕಾಳಜಿಯನ್ನು ಬಡಿದೆಬ್ಬಿಸಿದರು. ಈ ಜಾಗೃತಿ ಕಾರ್ಯಕ್ರಮವು ಗ್ರಾಮದ ಮುಖಂಡರಾದ ಕೆ.ಆರ್. ತಿಪ್ಪೇಸ್ವಾಮಿ ಹಾಗೂ ನಗರಂಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಮಂಜುನಾಥ್ ಅವರ ನೇತೃತ್ವದಲ್ಲಿ ನಡೆಯಿತು. ಊರಿನ ಹಲವು ಆಸಕ್ತ ಯುವಕರು ಇವರೊಂದಿಗೆ ಕೈಜೋಡಿಸಿ ಮನೆಮನೆಗೆ ತೆರಳಿ ಬಟ್ಟೆ ಚೀಲಗಳನ್ನು ಹಂಚುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಯುವಕರ ಈ ಅರ್ಥಪೂರ್ಣ ಕಾರ್ಯಕ್ಕೆ ಗ್ರಾಮಸ್ಥರಿಂದ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗಿದೆ. ಅಭಿಯಾನದಿಂದ ಪ್ರೇರೇಪಿತರಾದ ಹಲವರು, ಇನ್ನು ಮುಂದೆ ದಿನನಿತ್ಯದ ಬಳಕೆಯಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಗಣನೀಯವಾಗಿ ಕಡಿಮೆ ಮಾಡುವುದಾಗಿ ಹಾಗೂ ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸುವುದಾಗಿ ಭರವಸೆ ನೀಡಿದ್ದಾರೆ.
- ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಅವರು ಇಂದು ಗೌರಸಮದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಇಡೀ ದಕ್ಷಿಣ ಭಾರತದಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು ಈ ದೇವಿಯ ಜಾತ್ರೆ ಮುಖಾಂತರ ಭಕ್ತಾದಿಗಳಿಂದ ಸಲ್ಲುವಂತಹ ಪ್ರತಿಯೊಂದು ಸಂಕಲ್ಪಗಳು ಈ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿಯನ್ನು ಜಗನ್ಮಾತೆಯಾದ ಮಾರಮ್ಮ ದೇವಿ ಕರುಣಿಸಲಿ ಇದರ ಮುಖಾಂತರ ಈ ಭಾಗದ ಜನ ಜೀವನದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಬದಲಾವಣೆ ತರಲಿ ಎಂದು ಆಶಿಸಿದರು ಸಂದರ್ಭದಲ್ಲಿ ಜಿಲ್ಲಾ ದಿಶಾ ಕಮಿ ಟಿಯ ಸದಸ್ಯ ಹೊನ್ನೂರ್ ಗೋವಿಂದಪ್ಪ ಬಿಜೆಪಿ ಮುಖಂಡರಾದ ಶ್ರೀನಿವಾಸ್ ಪ್ರದೀಪ್ ಕುಮಾರ್ ವಕೀಲರದ ಶಶಿ ಕುಮಾರ್ ಮಾಜಿ ಪ್ರದಾನ ಜಿ ಟಿ ಮಾರಣ್ಣ ಮುಂತಾದವರು ಹಾಜರಿದ್ದರು1
- ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.1
- ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ. ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ. ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.1
- ಗೌರಸಮುದ್ರ ಮಾರೆಮ್ಮ ಜಾತ್ರೆಯಲ್ಲಿ ಶಾಸಕರು ಎನ್. ವೈ. ಗೋಪಾಲಕೃಷ್ಣ ಭಾಗಿ .ಗೌರಸಮುದ್ರ ಜಾತ್ರೆಯಲ್ಲಿ ಶಾಸಕ ಎನ್. ವೈ. ಗೋಪಾಲಕೃಷ್ಣ ಭಾಗಿ ಮೊಳಕಾಲ್ಮುರು ಸುದ್ದಿ. ಗೌರಸಮುದ್ರ ಗ್ರಾಮದಲ್ಲಿ ನಡೆಯುತ್ತಿರುವ ಗೌರಸಮುದ್ರ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದ್ದು, ಮೊಳಕಾಲ್ಮುರು ಕ್ಷೇತ್ರದ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅವರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಾತ್ರೆಯ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳು ಹಾಗೂ ಆಯೋಜಕರಿಂದ ಮಾಹಿತಿ ಪಡೆದ ಶಾಸಕರು, ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಿದರು. ವಿಶೇಷವಾಗಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ನೆರವು ಹಾಗೂ ಮೆಡಿಕಲ್ ಕಿಟ್ಗಳ ಲಭ್ಯತೆ, ಪೊಲೀಸ್ ಭದ್ರತಾ ವ್ಯವಸ್ಥೆ ಮತ್ತು ಜಾತ್ರಾ ಸ್ಥಳದ ಶುಚಿತ್ವದ ಬಗ್ಗೆ ಮಾಹಿತಿ ಪಡೆದುಕೊಂಡರು. ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಹಾಗೂ ಸ್ವಚ್ಛತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಜಾತ್ರೆಯು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಅಧಿಕಾರಿಗಳು ಮತ್ತು ಆಯೋಜಕರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಶಾಸಕರು ತಿಳಿಸಿದರು. ಜಾತ್ರೆಯಲ್ಲಿ ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಾಗೇಶ್ ರೆಡ್ಡಿ, ಹಿರೇಹಳ್ಳಿ ವಕೀಲರು ಮಲ್ಲೇಶಿ ರಾಂಪುರ ಸಿದ್ದಬಸಪ್ಪ, ಶ್ರೀಕಾಂತ, ಪೊಲೀಸ್ ಇಲಾಖೆ ಸಾವಿರಾರು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ಧರ್ಶನ ಪಡೆದರು.1
- ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.1
- ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು. ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.1
- ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದು, ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ /ಸಿಡಿಮದ್ದುಗಳನ್ನು ಸಿಡಿಸುವುದರಿಂದ, ಮೆರವಣಿಗೆ ಮಾರ್ಗದಲ್ಲಿರುವ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇದ್ದು, ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯೋವೃದ್ಧರಿಗೆ. ಮಕ್ಕಳಿಗೆ ತೊಂದರೆಯಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ಹಾಗೂ ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 35. 36ರಡಿಯಲ್ಲಿ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಅಕ್ಟೋಬರ್ 5 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಾಂತ ಎಲ್ಲಾ ರೀತಿಯ ಕಲರ್ ಪೇಪರ್ బ్లాస్టింగా. ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ.1
- ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬಾಡಾ ಕ್ರಾಸ್ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ4