ಸಂಸದ ಮಲ್ಲೇಶ್ ಬಾಬು, ಎಸ್ಪಿ ಶಿವಾಂಶು ರಜಪೂತ್ಗೆ ರಾಖಿ ಕಟ್ಟಿದ ಶಾಸಕಿ ರೂಪಕಲಾ ಶಶಿಧರ್: ಕೆಜಿಎಫ್ ಸಮಗ್ರ ಅಭಿವೃದ್ಧಿಗೆ ಕೈಜೋಡಿಸಲು ಕರೆ ಕೆ.ಜಿ.ಎಫ್: ರಕ್ಷಾಬಂಧನ ಹಬ್ಬದ ಅಂಗವಾಗಿ ಕೋಲಾರ ಸಂಸದ ಎಂ. ಮಲ್ಲೇಶ್ ಬಾಬು ಹಾಗೂ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶಿವಾಂಶು ರಜಪೂತ್ ಅವರಿಗೆ ಶಾಸಕಿ ರೂಪಕಲಾ ಶಶಿಧರ್ ಅವರು ರಾಖಿ ಕಟ್ಟಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸಂಸದರೊಂದಿಗೆ ಸಹೋದರನಂತೆ ಒಟ್ಟಾಗಿ ಕೆಲಸ ಮಾಡಲು ಸದಾ ಸಿದ್ಧ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕಿ ರೂಪಕಲಾ ಶಶಿಧರ್, "ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ್ದಾರೆ. ಕೇವಲ ವೇದಿಕೆ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕೆ.ಜಿ.ಎಫ್ ಕ್ಷೇತ್ರದ ರೈತರು, ಕಾರ್ಮಿಕರು ಹಾಗೂ ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ನಮ್ಮ ಪ್ರಮುಖ ಆದ್ಯತೆಯಾಗಬೇಕು. ಕ್ಷೇತ್ರದ ಹಿತದೃಷ್ಟಿಯಿಂದ ಸಂಸದರನ್ನು ನನ್ನ ಸಹೋದರನಂತೆ ಸ್ವೀಕರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಸಂಪೂರ್ಣವಾಗಿ ಕೈಜೋಡಿಸುತ್ತೇನೆ" ಎಂದು ತಿಳಿಸಿದರು. ಅಧಿಕಾರಿಗಳ ಧೋರಣೆಗೆ ತರಾಟೆ: ಕೆಲವು ಇಲಾಖೆಯ ಅಧಿಕಾರಿಗಳ ಜನವಿರೋಧಿ ಧೋರಣೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, "ಬಡವರು, ಕೂಲಿ ಕಾರ್ಮಿಕರು ಮತ್ತು ವಿಧವೆಯರು ತಮ್ಮ ಚಿಕ್ಕ ಮನೆಗಳ ನವೀಕರಣಕ್ಕೆ ಅನುಮತಿ ಕೇಳಿದರೆ ತಿಂಗಳುಗಟ್ಟಲೆ ಅಲೆದಾಡಿಸಲಾಗುತ್ತಿದೆ. ಆದರೆ, ಬೃಹತ್ ಕಟ್ಟಡಗಳನ್ನು ನಿರ್ಮಿಸುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇಂತಹ ತಾರತಮ್ಯ ಬಿಟ್ಟು ಅಧಿಕಾರಿಗಳು ಬಡವರ ವಿಷಯದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳಬೇಕು" ಎಂದು ಎಚ್ಚರಿಸಿದರು. ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಒತ್ತು: ಊರಿಗಾಂಪೇಟೆ ರೈಲ್ವೆ ಮೇಲ್ಸೇತುವೆ (ROB) ನಿರ್ಮಾಣದಿಂದ ಕ್ಷೇತ್ರಕ್ಕೆ ಹೊಸ ಕೈಗಾರಿಕೆಗಳು ಬಂದಾಗ ಸಂಪರ್ಕ ವ್ಯವಸ್ಥೆ ಸುಲಭವಾಗಲಿದೆ. ಈ ಕುರಿತು ರೈಲ್ವೆ ಇಲಾಖೆ ಹಾಗೂ ಕೇಂದ್ರ ಸರ್ಕಾರದ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಸದರೊಂದಿಗೆ ಚರ್ಚಿಸಿ ಯೋಜನೆ ಸಾಕಾರಗೊಳಿಸಲು ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.
ಸಂಸದ ಮಲ್ಲೇಶ್ ಬಾಬು, ಎಸ್ಪಿ ಶಿವಾಂಶು ರಜಪೂತ್ಗೆ ರಾಖಿ ಕಟ್ಟಿದ ಶಾಸಕಿ ರೂಪಕಲಾ ಶಶಿಧರ್: ಕೆಜಿಎಫ್ ಸಮಗ್ರ ಅಭಿವೃದ್ಧಿಗೆ ಕೈಜೋಡಿಸಲು ಕರೆ ಕೆ.ಜಿ.ಎಫ್: ರಕ್ಷಾಬಂಧನ ಹಬ್ಬದ ಅಂಗವಾಗಿ ಕೋಲಾರ ಸಂಸದ ಎಂ. ಮಲ್ಲೇಶ್ ಬಾಬು ಹಾಗೂ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶಿವಾಂಶು ರಜಪೂತ್ ಅವರಿಗೆ ಶಾಸಕಿ ರೂಪಕಲಾ ಶಶಿಧರ್ ಅವರು ರಾಖಿ ಕಟ್ಟಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸಂಸದರೊಂದಿಗೆ ಸಹೋದರನಂತೆ ಒಟ್ಟಾಗಿ ಕೆಲಸ ಮಾಡಲು ಸದಾ ಸಿದ್ಧ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕಿ ರೂಪಕಲಾ ಶಶಿಧರ್, "ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ್ದಾರೆ. ಕೇವಲ ವೇದಿಕೆ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕೆ.ಜಿ.ಎಫ್ ಕ್ಷೇತ್ರದ ರೈತರು, ಕಾರ್ಮಿಕರು ಹಾಗೂ ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ನಮ್ಮ ಪ್ರಮುಖ ಆದ್ಯತೆಯಾಗಬೇಕು. ಕ್ಷೇತ್ರದ ಹಿತದೃಷ್ಟಿಯಿಂದ ಸಂಸದರನ್ನು ನನ್ನ ಸಹೋದರನಂತೆ ಸ್ವೀಕರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಸಂಪೂರ್ಣವಾಗಿ ಕೈಜೋಡಿಸುತ್ತೇನೆ" ಎಂದು ತಿಳಿಸಿದರು. ಅಧಿಕಾರಿಗಳ ಧೋರಣೆಗೆ ತರಾಟೆ: ಕೆಲವು ಇಲಾಖೆಯ ಅಧಿಕಾರಿಗಳ ಜನವಿರೋಧಿ ಧೋರಣೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, "ಬಡವರು, ಕೂಲಿ ಕಾರ್ಮಿಕರು ಮತ್ತು ವಿಧವೆಯರು ತಮ್ಮ ಚಿಕ್ಕ ಮನೆಗಳ ನವೀಕರಣಕ್ಕೆ ಅನುಮತಿ ಕೇಳಿದರೆ ತಿಂಗಳುಗಟ್ಟಲೆ ಅಲೆದಾಡಿಸಲಾಗುತ್ತಿದೆ. ಆದರೆ, ಬೃಹತ್ ಕಟ್ಟಡಗಳನ್ನು ನಿರ್ಮಿಸುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇಂತಹ ತಾರತಮ್ಯ ಬಿಟ್ಟು ಅಧಿಕಾರಿಗಳು ಬಡವರ ವಿಷಯದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳಬೇಕು" ಎಂದು ಎಚ್ಚರಿಸಿದರು. ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಒತ್ತು: ಊರಿಗಾಂಪೇಟೆ ರೈಲ್ವೆ ಮೇಲ್ಸೇತುವೆ (ROB) ನಿರ್ಮಾಣದಿಂದ ಕ್ಷೇತ್ರಕ್ಕೆ ಹೊಸ ಕೈಗಾರಿಕೆಗಳು ಬಂದಾಗ ಸಂಪರ್ಕ ವ್ಯವಸ್ಥೆ ಸುಲಭವಾಗಲಿದೆ. ಈ ಕುರಿತು ರೈಲ್ವೆ ಇಲಾಖೆ ಹಾಗೂ ಕೇಂದ್ರ ಸರ್ಕಾರದ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಸದರೊಂದಿಗೆ ಚರ್ಚಿಸಿ ಯೋಜನೆ ಸಾಕಾರಗೊಳಿಸಲು ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.
- ಬೆಂಗಳೂರು : ಸಿದ್ಧಾಂತ-ಮೌಲ್ಯ ಬದಿಗಿಟ್ಟು ಅಧಿಕಾರಕ್ಕಾಗಿ ರಾಜಕಾರಣ: HDK ವಿರುದ್ಧ Priyank kharge ವಾಗ್ದಾಳಿ.!2
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಮೊದಲನೇ ದಿನದ ಉರುಸ್ ಕಾರ್ಯಕ್ರಮ ಶಾಂತಿಯುತವಾಗಿ ಆಚರಣೆ1
- ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಸಚಿವ ನಾಗೇಂದ್ರ ಬಿಜೆಪಿ ಪಾದಯಾತ್ರೆ ವಿಚಾರ. ಬಿಜೆಪಿಯವರ ಗೊಡ್ಡು ಬೆದರಿಕೆಗೆ ಯಾರೂ ಬೆದರಲ್ಲ. ದೇವನಹಳ್ಲಿ ಏರ್ಪೋರ್ಟ್. ಬಿಜೆಪಿ ಪಾದಯಾತ್ರೆ ವಿಚಾರ. ಬಿಜೆಪಿಯವರ ಗೊಡ್ಡು ಬೆದರಿಕೆಗೆ ಯಾರೂ ಬೆದರಲ್ಲ. ಇದೆಲ್ಲಾ ಒಂದು ಕುತಂತ್ರದಿಂದ ಮಾಡಿರುವತಂದ್ದು. ನಾನು ದಲಿತನೇ ನಾನು. ಈ ಮನುವಾದಿಗಳ ಹತ್ತಿರ ಜಗಳ ಆಡಬೇಕು ಅಂದರೆ ದಲಿತರ ಪರವಾಗಿ ಇವತ್ತಲ್ಲಾ ಅನಾದಿಕಾಲದಿಂದಲೂ ಬಂದಿದೆ. ಏರ್ಪೋರ್ಟ್ ನಲ್ಲಿ ಸಚಿವ ನಾಗೇಂದ್ರ ಹೇಳಿಕೆ2
- ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ನಮಗೆ ಅದರಿಂದ ತೊಂದರೆ ಆಗುತ್ತಿದೆ ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ನಮಗೆ ಅದರಿಂದ ತೊಂದರೆ ಆಗುತ್ತಿದೆ1
- ಸುದ್ದಿಗೊಷ್ಠಿ ಮದ್ಯೆ ಕಣ್ಣೀರಾಕಿದ ಸಚಿವ ನಾಗೇಂದ್ರ... ಕಣ್ಣೀರಾಕಿ ರಾಜೀನಾಮೆ ಘೋಷಿಸಿದ ನಾಗೇಂದ್ರ. ಶಾಸಕ ಸ್ಥಾನಕ್ಕೂ ರಾಜೀನಾಮೆ ನಿಡ್ತಿನಿ...!? ಬೆಂಗಳೂರು, ಆ.28: ವಿಧಾನಸೌಧದಲ್ಲಿ ಸಚಿವರಾದ ಬಿ. ನಾಗೇಂದ್ರ, ಅಜಯ್ ಸಿಂಗ್, ರಿಜ್ವಾನ್ ಅರ್ಷದ್, ನಾಸೀರ್ ಅಹಮದ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರ ಜಂಟಿ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಮಾತನಾಡಿದ ಸಚಿವ ಬಿ. ನಾಗೇಂದ್ರ, ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕಿತ್ತು. ಆದರೆ ವಿಪಕ್ಷದವರು ಸದನವನ್ನೇ ನಡೆಯಲು ಬಿಡಲಿಲ್ಲ ಎಂದು ಆರೋಪಿಸಿದರು. “ವಿಪಕ್ಷದವರು ಮನುಸ್ಮೃತಿಯನ್ನು ಜಾರಿಗೆ ತರಲು ಹೊರಟಿದ್ದಾರೆ. ಅವರಿಗೆ ಇದು ಯಾವ ಕಾಲ ಎಂಬುದು ಗೊತ್ತಿಲ್ಲ. ಇದು ಸಂವಿಧಾನದ ಕಾಲ, ಬಾಬಾಸಾಹೇಬರ ಕಾಲ” ಎಂದು ಹೇಳಿದರು. ರಾಮಾಯಣದ ಉತ್ತರಕಾಂಡದಲ್ಲಿನ ಶಂಬೂಕನ ಪ್ರಸಂಗವನ್ನು ಉಲ್ಲೇಖಿಸಿದ ನಾಗೇಂದ್ರ, ಇಂದಿನ ಯುಗದಲ್ಲಿ ಶಂಬೂಕನ ಹತ್ಯೆಯಾಗಲು ಸಾಧ್ಯವಿಲ್ಲ. ಸಂವಿಧಾನ ಶೂದ್ರರು, ದಲಿತರು, ಮಹಿಳೆಯರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುತ್ತಿದೆ ಎಂದರು. “ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕೆಪಿಎಸ್ಸಿ ಹಗರಣದ ಕುರಿತು ಚರ್ಚೆ ಮಾಡಬಹುದಿತ್ತು. ಶಾಸಕರು ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಬಹುದಿತ್ತು. ನಾವು ಎಲ್ಲದಕ್ಕೂ ಅವಕಾಶ ನೀಡುತ್ತಿದ್ದೆವು. ಆದರೆ ಯಾವುದೇ ಆಧಾರವಿಲ್ಲದ ವಿಚಾರಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ನಾಗೇಂದ್ರ ಆರೋಪಿಸಿದರು. 2024ರಲ್ಲೇ ರಾಜೀನಾಮೆ ನೀಡಿದ್ದೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ನಾಗೇಂದ್ರ, 2024ರಲ್ಲೇ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ ಎಂದು ಹೇಳಿದರು. “ನಂತರ ಎಸ್ಐಟಿ, ಸಿಐಡಿ ತನಿಖೆ ಎದುರಿಸಿದ್ದೇನೆ. ಕೇಂದ್ರದ ಇಡಿಯಿಂದ ನನ್ನನ್ನು ಬಂಧಿಸಲಾಗಿತ್ತು. ಜೈಲಿಗೂ ಹೋಗಿ ಬಂದಿದ್ದೇನೆ. ಎರಡು ಬಾರಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಮೊದಲ ಚಾರ್ಜ್ಶೀಟ್ನಲ್ಲಿ ನನ್ನ ಹೆಸರಿರಲಿಲ್ಲ. ಎರಡನೇ ಚಾರ್ಜ್ಶೀಟ್ನಲ್ಲಿ ನನ್ನ ಹೆಸರು ಸೇರಿಸಲಾಗಿದೆ” ಎಂದು ಹೇಳಿದರು. ತಾವು ಸಂವಿಧಾನಕ್ಕೆ ಗೌರವ ನೀಡುವುದಾಗಿ ತಿಳಿಸಿದ ನಾಗೇಂದ್ರ, ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಆದರೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಪ್ರಾಸಿಕ್ಯೂಷನ್ ವಿಚಾರದಲ್ಲಿ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. “ವಾಲ್ಮೀಕಿ ಹಗರಣದಲ್ಲಿ ನನ್ನ ಪಾತ್ರವಿಲ್ಲ” “ವಾಲ್ಮೀಕಿ ಹಗರಣದಲ್ಲಿ ನನ್ನ ಪಾತ್ರವಿಲ್ಲ. ನಾನು ಕೇವಲ ಸಚಿವನಾಗಿದ್ದೆ. ನಾನು ನೋಟ್ಶೀಟ್ ಹಾಕಿದ್ದೇನಾ? ಎಲ್ಲಾದರೂ ಸಹಿ ಹಾಕಿದ್ದೇನಾ? ನಾನು ಇದರಲ್ಲಿ ಭಾಗಿಯಾಗಿದ್ದೇನಾ?” ಎಂದು ಪ್ರಶ್ನಿಸಿದರು. ಅಕ್ರಮವಾಗಿ ವರ್ಗಾವಣೆಯಾಗಿದ್ದ ಹಣ ವಾಪಸ್ ಆಗಿದೆ ಎಂದು ಹೇಳಿದ ಅವರು, “ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಯಾರ ಅಧೀನದಲ್ಲಿದೆ? ನಿರ್ಮಲಾ ಸೀತಾರಾಮನ್ ಅವರ ಅಧೀನದಲ್ಲಿರುವ ಬ್ಯಾಂಕ್ ಅಲ್ಲವೇ? ಹಾಗಾದರೆ ಅವರ ಮೇಲೆ ಏಕೆ ತನಿಖೆ ನಡೆಯುತ್ತಿಲ್ಲ? ನಾನು ದಲಿತ ಎಂಬ ಕಾರಣಕ್ಕೆ ನನ್ನ ಮೇಲೆ ಕ್ರಮ ಕೈಗೊಳ್ಳಲಾಗಿದೆಯೇ?” ಎಂದು ಪ್ರಶ್ನಿಸಿದರು. ಈ ವೇಳೆ ನಾಗೇಂದ್ರ ಭಾವುಕರಾಗಿ ಮಾತನಾಡಿದರು. ಕಣ್ಣೀರು ಹಾಕಿದ ಅವರು ಟಿಶ್ಯೂ ಬಳಸಿ ಕಣ್ಣೊರೆಸಿಕೊಂಡರು. ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವ ಘೋಷಣೆ ಮುಖ್ಯಮಂತ್ರಿ, ಪಕ್ಷದ ವರಿಷ್ಠರಿಗೆ ಮುಜುಗರವಾಗಬಾರದು ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಕಾರಣಕ್ಕಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ನಾಗೇಂದ್ರ ಹೇಳಿದರು. “ಈಗ ನಾನು ನನ್ನ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ನನಗೆ ಆಗಿರುವ ಅನ್ಯಾಯವನ್ನು ನಾನು ಹೇಳುತ್ತೇನೆ. ಬನ್ನಿ ಅಖಾಡಕ್ಕೆ ಹೋಗೋಣ, ಜನತಾ ನ್ಯಾಯಾಲಯಕ್ಕೆ ಹೋಗೋಣ” ಎಂದು ಸವಾಲು ಹಾಕಿದರು. ಬಳ್ಳಾರಿ ಬಿಜೆಪಿ ನಾಯಕರಾದ ಬಿ. ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, “ರಾಮುಲಣ್ಣ, ನೀ ಬಾರಣ್ಣ, ನೀನೇ ಬಾ. ನನ್ನ ಸವಾಲು ಸ್ವೀಕರಿಸು. ಜನತಾ ನ್ಯಾಯಾಲಯಕ್ಕೆ ಹೋಗೋಣ” ಎಂದು ಸವಾಲು ಹಾಕಿದರು. “ನನ್ನ ಮೇಲೆ ಇಡಿ, ಸಿಬಿಐ ಬಿಡಬಹುದು. ಆದರೆ ನಿಮ್ಮ ಗೊಡ್ಡು ಬೆದರಿಕೆಗೆ ನಾನು ಬಗ್ಗುವುದಿಲ್ಲ. ನಾನು ಆರೋಪ ಮುಕ್ತನಾಗಿ ಹೊರಬರುವ ವಿಶ್ವಾಸವಿದೆ” ಎಂದು ನಾಗೇಂದ್ರ ಹೇಳಿದರು. ಬಳ್ಳಾರಿ ಜನರು ಈಗಾಗಲೇ ಬಿಜೆಪಿ ನಾಯಕರಿಗೆ ಎರಡು ಬಾರಿ ಛೀಮಾರಿ ಹಾಕಿದ್ದಾರೆ. ನೀವು ಚಲಾವಣೆಯಲ್ಲಿಲ್ಲದ ನಾಣ್ಯಗಳಾಗಿದ್ದೀರಿ ಎಂದು ಟೀಕಿಸಿದ ಅವರು, ತಮ್ಮ ವಿರುದ್ಧದ ಆರೋಪಗಳಿಗೆ ಜನತಾ ನ್ಯಾಯಾಲಯದಲ್ಲೇ ಉತ್ತರ ನೀಡುವುದಾಗಿ ಹೇಳಿದರು. ಕೊನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್, ಹರಿಪ್ರಸಾದ್ ಸೇರಿದಂತೆ ತಮ್ಮ ಪರ ನಿಂತ ಎಲ್ಲ ನಾಯಕರನ್ನು ಸ್ಮರಿಸಿದ ನಾಗೇಂದ್ರ, ಪಕ್ಷದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಅವರಿಗೆ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದರು.1
- ಇಂದು ನಡೆದ ಸರಣಿ ಅಪಘಾತ , ದಿನೇ ದಿನೇ ಹೆಚ್ಚಾಗುತ್ತಿದೆ ಬೆಂಗಳೂರಿನಲ್ಲಿ ಇಂತಹ ಪ್ರಕರಣಗಳು. ಇಂದು ಯಲಹಂಕದ ಏರ್ಪೋರ್ಟ್ ರಸ್ತೆಯ ಬಳಿ ನಡೆದ ಸರಣಿ ಅಪಘಾತ, ಇಂದು ಮಧ್ಯಾಹ್ನ ಸುಮಾರು ನಾಲ್ಕು ಗಂಟೆಗೆ ಈ ಘಟನೆ ನಡೆದಿದ್ದು ಸದ್ಯಕ್ಕೆ ಯಾರ ಪ್ರಾಣಿಗೂ ಹಾನಿಯಾಗಲಿಲ್ಲ ಆದರೆ ಗಾಡಿಗಳು ಮಾತ್ರ ಜಕಮ್ ಗೊಂಡಿವೆ1
- ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ! | ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ. ರಾಜೀನಾಮೆ ಘೋಷಿಸುವ ವೇಳೆ ಬಿ.ನಾಗೇಂದ್ರ ಅವರು ತೀವ್ರ ಭಾವುಕರಾಗಿ ಕಣ್ಣೀರಿಟ್ಟ ಘಟನೆ ಗಮನ ಸೆಳೆಯಿತು. ಯಾವುದೇ ಒತ್ತಡವಿಲ್ಲದೆ ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದರು. ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸುವುದಾಗಿ ತಿಳಿಸಿದ ಅವರು, ಪಕ್ಷದ ವರಿಷ್ಠರಿಗೂ ಮನವಿ ಮಾಡಿರುವುದಾಗಿ ಹೇಳಿದರು. ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮುಂದೇನು ಎಂಬ ಕುತೂಹಲ ಹೆಚ್ಚಾಗಿದೆ. ಸಂಪೂರ್ಣ ಸುದ್ದಿಗಾಗಿ ವಿಡಿಯೋ ನೋಡಿ ಮತ್ತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ನಲ್ಲಿ ತಿಳಿಸಿ. #BNagendra #ಬಿನಾಗೇಂದ್ರ #KarnatakaPolitics #KarnatakaNews #BreakingNews #PoliticalNews #BangaloreNews #Congress #Karnataka #KannadaNews #ರಾಜಕೀಯ #ರಾಜೀನಾಮೆ #ಬೆಂಗಳೂರು #asnnews24kannada1
- ಮೈಸೂರಿಗೆ ದಸರಾ ಗಜಪಡೆ ಭರ್ಜರಿ ಎಂಟ್ರಿ! ಆನೆಗಳಿಗೆ ಅದ್ಧೂರಿ ಸ್ವಾಗತ, ಸಂಭ್ರಮ ಹೆಚ್ಚಳ! ಮೈಸೂರಿಗೆ ದಸರಾ ಗಜಪಡೆ ಭರ್ಜರಿ ಎಂಟ್ರಿ! ಆನೆಗಳಿಗೆ ಅದ್ಧೂರಿ ಸ್ವಾಗತ, ಸಂಭ್ರಮ ಹೆಚ್ಚಳ!1
- ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚಾಗ್ತಿದೆ ರಾತ್ರಿ ವೇಳೆಯ ರಾಬರಿಗಳು ಬೆಂಗಳೂರು:ರಾಬರಿ ಮಾಡಲು ಹೊಂಚು ಹಾಕಿ ಕೂತಿದ್ದ ಕಳ್ಳರಿಂದ ಭೀಕರ ಆಕ್ಸಿಡೆಂಟ್ ದೇವನಹಳ್ಳಿ ಹೊರವಲಯದ ಬೈಚಾಪುರ ಬಳಿ ಇರುವ ಬ್ರಿಗೇಡ್ ಬಳಿ ನಡೆದಿದೆ.ಗಾಡಿಗಳನ್ನ ಅಡ್ಡ ಹಾಕಿ ಕಳ್ಳತನ ಮಾಡುವ ವೇಳೆ ಕಳ್ಳನಿಗೆ ಬೈಕ್ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಕಳ್ಳ ಮತ್ತು ಬೈಕ್ ಸವಾರರು ರಸ್ತೆಗೆ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ತಡರಾತ್ರಿ 1 ಗಂಟೆ ನಂತರ ರಾಬರಿ ಮಾಡಲು ಫೀಲ್ಡ್ ಗೆ ಇಬ್ಬರು ಕಳ್ಳರು ಇಳಿದಿದ್ರು.ರಸ್ತೆಯಲ್ಲಿ ದ್ವಿಚಕ್ರ ವಾಹನಗಳನ್ನ ಟಾರ್ಗೆಟ್ ಮಾಡಿ ರಾಬರಿಗೆ ಕಳ್ಳರು ಪ್ಲಾನ್ ನಡೆಸಿದ್ದು,ಬೈಕ್ ಸವಾರರನ್ನ ಅಡ್ಡಗಟ್ಟಿ ಮೊಬೈಲ್ ಮತ್ತು ಹಣವನ್ನ ರಾಬರಿ ಗ್ಯಾಂಗ್ ಪೀಕುತ್ತತ್ತು.ಇದೇ ವೇಳೆ ಬೈಕೊಂದಕ್ಕೆ ಅಡ್ಡ ಹಾಕಲು ಕಳ್ಳರಿಂದ ಪ್ರಯತ್ನ ನಡೆದಿದೆ.ಕಳ್ಳರು ರಸ್ತೆಗೆ ಅಡ್ಡ ಇರುವುದು ನೋಡಿ ಬೈಕ್ ಸವಾರ ಸ್ಪೀಡ್ ಹೆಚ್ಚಿಸಿದ್ದ.ಬೈಕ್ ಗೆ ಅಡ್ಡ ಬಂದ ಕಳ್ಳರಿಗೆ ಡಿಕ್ಕಿಯಾಗಿ ರಸ್ತೆಗೆ ಓರ್ವ ಕಳ್ಳ ಬಿದ್ದ,ಮತ್ತೊಬ್ಬ ಕಳ್ಳ ಬೈಕ್ ಸವಾರರ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ.ರಾತ್ರಿ ರಾಬರಿ ಪ್ರಕರಣ ನೋಡಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.ಕೂಡಲೇ ಪೊಲೀಸರು ಕಳ್ಳರನ್ನ ಮಟ್ಟ ಹಾಕಲು ಸಾರ್ವಜನಿಕರು ಆಗ್ರಹಿಸಿದ್ದಾರೆ.1