Shuru
Apke Nagar Ki App…
ಹಾವೇರಿಯ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಶ್ರೀ ರೇಣುಕಾ ದೇವದರ್ ಸರ್ಜಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹೃದಯ ಸ್ಟಂಟ್ ಜೋಡಣೆಯ ವಿಭಾಗದ ಉದ್ಘಾಟನಾ ಸಮಾರಂಭಕ್ಕೆ ಹಾವೇರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ನೆಹರು ಚ. ಓಲೇಕಾರ ಅವರು ಭೇಟಿ ನೀಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ಸರ್ಜಿ ಆಸ್ಪತ್ರೆಯ ಡಾ. ಮಧು, ಶ್ರೀ ಶಿವರಾಜ ಮತ್ತಿಹಳ್ಳಿ, ಶ್ರೀ ನಾಗರಾಜ ಬಸೆಗಣ್ಣಿ, ಶ್ರೀ ಬಾಬುಸಾಬ್ ಮೊಮೀನಗಾರ, ಶ್ರೀ ಜಗದೀಶ ಸವಣೂರ, ಶ್ರೀ ಈರಣ್ಣ ಪಟ್ಟಣಶೆಟ್ಟಿ ಹಾಗೂ ಶ್ರೀ ಶಂಭು ಕಳಸದ ಅವರು ಉಪಸ್ಥಿತರಿದ್ದರು. ಇವರೊಂದಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಸುನೀಲ್ ಲ್ ಬೆಟಗೇರಿ
ಹಾವೇರಿಯ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಶ್ರೀ ರೇಣುಕಾ ದೇವದರ್ ಸರ್ಜಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹೃದಯ ಸ್ಟಂಟ್ ಜೋಡಣೆಯ ವಿಭಾಗದ ಉದ್ಘಾಟನಾ ಸಮಾರಂಭಕ್ಕೆ ಹಾವೇರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ನೆಹರು ಚ. ಓಲೇಕಾರ ಅವರು ಭೇಟಿ ನೀಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ಸರ್ಜಿ ಆಸ್ಪತ್ರೆಯ ಡಾ. ಮಧು, ಶ್ರೀ ಶಿವರಾಜ ಮತ್ತಿಹಳ್ಳಿ, ಶ್ರೀ ನಾಗರಾಜ ಬಸೆಗಣ್ಣಿ, ಶ್ರೀ ಬಾಬುಸಾಬ್ ಮೊಮೀನಗಾರ, ಶ್ರೀ ಜಗದೀಶ ಸವಣೂರ, ಶ್ರೀ ಈರಣ್ಣ ಪಟ್ಟಣಶೆಟ್ಟಿ ಹಾಗೂ ಶ್ರೀ ಶಂಭು ಕಳಸದ ಅವರು ಉಪಸ್ಥಿತರಿದ್ದರು. ಇವರೊಂದಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
More news from ಕರ್ನಾಟಕ and nearby areas
- ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರು ದೇಶ ಪ್ರೇಮಿಗಳಿಗೆ ಅಕೌಂಟ್ ಇರಬೇಕಲ್ವಾ ಎಂದು ಪ್ರಶ್ನಿಸಿ ತೀವ್ರವಾಗಿ ಕಿಡಿಕಾರಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಆಕ್ರೋಶವನ್ನು ಹೊರಹಾಕಿರುವ ಅವರು, ದೇಶಪ್ರೇಮಿಗಳ ಅಕೌಂಟ್ ಕುರಿತಾಗಿ ನೇರ ಪ್ರಶ್ನೆಯನ್ನು ಎತ್ತುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.1
- ಹಾವೇರಿಯ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಹಾವೇರಿ ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕಾರಿಣಿ ಸಭೆ ಜರುಗಿತು. ಈ ಸಭೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಶಾಸಕರುಗಳಾದ ಶಿವರಾಜ ಸಜ್ಜನ, ಅರುಣಕುಮಾರ ಪೂಜಾರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ವಿ.ಸಂಕನೂರ ಮತ್ತು ಶ್ರೀ ಲಿಂಗರಾಜ ಪಾಟೀಲ್ ಉಪಸ್ಥಿತರಿದ್ದರು. ಇವರೊಂದಿಗೆ ಪಕ್ಷದ ಮುಖಂಡರುಗಳಾದ ದತ್ತಾತ್ರೇಯ, ಭರತ ಬೊಮ್ಮಾಯಿ, ಡಾ. ಬಸವರಾಜ ಕೇಲಗಾರ, ಜಯತೀರ್ಥ ಕಟ್ಟಿ, ಡಿ.ಎಸ್ ಮಾಳಗಿ ಹಾಗೂ ಗವಿಸಿದ್ದಪ್ಪ ದ್ಯಾಮಣ್ಣವರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಮುಖಂಡರು ಭಾಗವಹಿಸಿದ್ದರು.1
- ಧಾರವಾಡ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಹಾಗೂ ಶಾಸಕ ಸಿ.ಸಿ ಪಾಟೀಲ ಅವರು, ಜಿ.ಬಿ.ಎ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರವು ಕುಂಟು ನೆಪ ಹೇಳುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಚುನಾವಣೆ ನಡೆಸಲು ಚುನಾವಣಾ ಆಯೋಗವು ಸಿದ್ಧತೆ ಮಾಡಿಕೊಂಡಿದ್ದರೂ ಸಹ, ಸರ್ಕಾರವು ಚುನಾವಣೆಯನ್ನು ಮುಂದೂಡುವ ಉದ್ದೇಶದಿಂದ ಎಸ್.ಐ.ಆರ್ ಎಂಬ ಕುಂಟು ನೆಪವನ್ನು ಹೇಳಿ ಅರ್ಜಿ ಸಲ್ಲಿಸಿದೆ ಎಂದು ಅವರು ದೂರಿದ್ದಾರೆ. ಪ್ರತಿಯೊಂದಕ್ಕೂ ಎಸ್.ಐ.ಆರ್ ಎನ್ನುವುದು ಸೂಕ್ತವಲ್ಲ ಮತ್ತು ಬಹುತೇಕ ಕಾಂಗ್ರೆಸ್ ಮುಖಂಡರಿಗೆ ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವೇ ಇಲ್ಲ ಎಂದು ಅವರು ಟೀಕಿಸಿದ್ದಾರೆ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಜಿ.ಬಿ.ಎ ಚುನಾವಣೆ ನಡೆದಿಲ್ಲ ಎಂದಾಕ್ಷಣ ಈ ಸರ್ಕಾರವೂ ಅದನ್ನು ನಡೆಸಬಾರದೇ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದಿದ್ದು, ಇನ್ನು ಆರು ತಿಂಗಳು ಇರುವಾಗಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಹೇಳಿದರು. ನಮಗೆ ಇರುವುದೇ ನಾಲ್ಕೂವರೆ ವರ್ಷಗಳ ಅಧಿಕಾರ ಅವಧಿಯಾಗಿದ್ದು, ಈ ಅವಧಿಯಲ್ಲೇ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.1
- ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಹಳೆನಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಸುತ್ತಲೂ ಕಸದ ರಾಶಿ ಹಾಗೂ ಕೊಚ್ಛೆ ತುಂಬಿಕೊಂಡಿದ್ದು, ಈ ಬಗ್ಗೆ ಕೂಡಲೇ ಗಮನಹರಿಸಿ ಸ್ವಚ್ಛತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ. ಎನ್. ರಾಜು ಅವರು ವಿಧಾನ ಪರಿಷತ್ ಶಾಸಕಿ ಬಲ್ಕಿಷ್ ಬಾನು ಅವರಿಗೆ ಒತ್ತಾಯಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಬಡ ಕುಟುಂಬಗಳ ಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರು ರೋಗರುಜಿನಗಳಿಗೆ ತುತ್ತಾಗುವ ಮುನ್ನವೇ ಶಾಲಾ ಆವರಣವನ್ನು ಸ್ವಚ್ಛಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಶಿವಮೊಗ್ಗ ಹಳೆನಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಆವರಣದಲ್ಲಿ ಕೊಚ್ಛೆ ತುಂಬಿಕೊಂಡಿರುವ ಪರಿಸ್ಥಿತಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.1
- ಶಿಕಾರಿಪುರದಲ್ಲಿ ಕಳೆದ ವರ್ಷ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಸಂಗೀತಾ ಅವರ ಪ್ರಕರಣವು ಒಂದು ವರ್ಷದ ಬಳಿಕ ಮಿಸ್ಸಿಂಗ್ ಪ್ರಕರಣ ದಾಖಲಾಗುತ್ತಿದ್ದಂತೆ ತಡವಾಗಿ ಬೆಳಕಿಗೆ ಬಂದಿರುವುದು ಅತ್ಯಂತ ದುಃಖಕರ, ಅಮಾನವೀಯ ಮತ್ತು ತೀವ್ರವಾಗಿ ಖಂಡನೀಯವಾಗಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ. ಮಗಳ ಸಾವಿನಿಂದ ತೀವ್ರ ಆಘಾತಕ್ಕೊಳಗಾಗಿರುವ ಆ ನಿರಪರಾಧಿ ಕುಟುಂಬದ ಆಕ್ರಂದನ ಮನ ಕಲಕುವಂತಿದ್ದು, ಸಂಸದರು ಸಂಗೀತಾ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ದುಃಖತಪ್ತ ತಂದೆ ಹಾಗೂ ಕುಟುಂಬದ ಸಮಸ್ತ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ. ಈ ಸೂಕ್ಷ್ಮ ಹಾಗೂ ಗಂಭೀರ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಹೊರಬರಬೇಕಾದರೆ ಮತ್ತು ಈ ಸುದೀರ್ಘ ವಿಳಂಬಕ್ಕೆ ಕಾರಣವಾದ ಅಂಶಗಳು ಬಯಲಾಗಬೇಕಾದರೆ, ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ವಿಶೇಷ ತನಿಖಾ ತಂಡ (SIT) ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಕಟ್ಟುನಿಟ್ಟಾಗಿ ಒತ್ತಾಯಿಸಿದ್ದಾರೆ. ಪ್ರಕರಣದ ಆರೋಪಿಗಳು ಈಗಾಗಲೇ ಬಂಧನಕ್ಕೊಳಗಾಗಿದ್ದು, ಯಾವುದೇ ಕಾರಣಕ್ಕೂ ರಾಜಕೀಯ ಪ್ರಭಾವಕ್ಕೆ ಮಣಿಯದೆ ತಪ್ಪಿತಸ್ಥರಿಗೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣಾತಿಕಠಿಣ ಶಿಕ್ಷೆಯಾಗಬೇಕು ಹಾಗೂ ಈ ಶೋಷಿತ ಕುಟುಂಬಕ್ಕೆ ಶೀಘ್ರವಾಗಿ ಸೂಕ್ತ ನ್ಯಾಯ ಮತ್ತು ಭದ್ರತೆ ದೊರೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸಂಸದರು ಸ್ಪಷ್ಟಪಡಿಸಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಮುಖಂಡ ಕೆ.ಎಸ್. ಗುರುಮೂರ್ತಿ, ತಾಲೂಕು ಬಿಜೆಪಿ ಅಧ್ಯಕ್ಷ ಹನುಮಂತಪ್ಪ ಸಂಕ್ಲಾಪುರ ಹಾಗೂ ಬಣಜಾರ್ ಸಮಾಜದ ಮುಖಂಡರಾದ ರಾಮ ನಾಯ್ಕ್, ಬಂಗಾರಿ ನಾಯ್ಕ್, ರಮೇಶ್ ನಾಯ್ಕ್, ಸುರೇಶ್ ನಾಯ್ಕ್, ವಿಜಯಲಕ್ಷ್ಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.1
- ರಾಜ್ಯದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಅದರ ನೀರು ಇದೇ ಮೊದಲ ಬಾರಿಗೆ ಕೂಡ್ಲಿಗಿ ತಾಲೂಕಿಗೆ ತಲುಪಿದೆ. ರಾಜವಾಳ ಜಾಕ್ವೆಲ್ ಮೂಲಕ ಈ ನೀರನ್ನು ತಾಲೂಕಿಗೆ ಯಶಸ್ವಿಯಾಗಿ ಹರಿಸಲಾಗಿದ್ದು, ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ತಾಲೂಕಿನ ಪ್ರಮುಖ ಕೆರೆಗಳನ್ನು ತುಂಬಿಸುವ ಕಾರ್ಯ ಆರಂಭವಾಗಲಿದ್ದು, ಇದು ರೈತರಿಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ದೊಡ್ಡ ಆಶಾಕಿರಣವಾಗಿದೆ.1
- ಶಿವಮೊಗ್ಗ ಜಿಲ್ಲೆಯ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ನಡೆದ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ 21 ವರ್ಷದ ಸಚಿನ್ ಎಂಬ ಯುವಕ, ಮಾಂಸಾಹಾರ ಸೇವಿಸುವಾಗ ಗಂಟಲಿನಲ್ಲಿ ಚಿಕನ್ ಮೂಳೆ ಸಿಲುಕಿಕೊಂಡು ಸಾವನ್ನಪ್ಪಿದ್ದಾನೆ. ಏಪ್ರಿಲ್ 17, 2026ರಂದು ರಾತ್ರಿ ಈ ಪಾರ್ಟಿ ನಡೆದಿದ್ದು, ಊಟದ ನಂತರ ಸಚಿನ್ ನಿರ್ಮಾಣ ಹಂತದ ಮನೆಯೊಂದರ ಬಳಿ ತೆರಳಿದ್ದನು. ಮರುದಿನ ಮುಂಜಾನೆ ಆತ ಅಲ್ಲಿ ಶವವಾಗಿ ಪತ್ತೆಯಾಗಿದ್ದನು. ಮರಣೋತ್ತರ ಪರೀಕ್ಷೆಯ ನಂತರ, ಆತನ ಗಂಟಲಿನಲ್ಲಿ ಆಹಾರದ ಮೂಳೆ ಸಿಲುಕಿಕೊಂಡಿದ್ದೇ ಸಾವಿಗೆ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ. ಈ ಘಟನೆ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಹಾರ ಸೇವಿಸುವಾಗ ನಿಧಾನವಾಗಿ, ಚೆನ್ನಾಗಿ ಅಗಿದು ತಿನ್ನಬೇಕು ಮತ್ತು ಮೂಳೆ ಇರುವ ಆಹಾರವನ್ನು ತಿನ್ನುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಎಚ್ಚರಿಸಲಾಗಿದೆ.1