ಶಿವಮೊಗ್ಗ-ರಂಜಾನ್ ಹಬ್ಬಕ್ಕೆ ಮುನ್ನವೇ ಈದ್ಗಾ ಮೈದಾನಕ್ಕೆ ಬ್ಯಾರಿಕೆಡ್:ಹಿಂದೂ ಸಂಘಟನೆ ಗಳಕ್ರೋಶ ಶಿವಮೊಗ್ಗ: ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ವಾಹನ ನಿಲುಗಡೆ ವಿಚಾರವಾಗಿ ಸ್ವಲ್ಪ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಇಂದು ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಈದ್ಗಾ ಮೈದಾನದ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಮೈದಾನದ ಸ್ವಚ್ಛತೆಗಾಗಿ ಬ್ಯಾರಿಕೇಡ್ ಅಳವಡಿಸಿರುವುದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮಾ: 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡು ವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. ಈ ಕೋರಿಕೆಯ ಮೇರೆಗೆ ಪಾಲಿಕೆ ಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು. ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಎಸ್ಪಿ ನಿಖಿಲ್ ಬಿ.ಪಾರ್ಕಿಂಗ್ ಸಮಸ್ಯೆ ಯಾಗದಂತೆ ಪಾಲಿಕೆ ಅಧಿಕಾರಿ ಗಳೊಂದಿಗೆ ಚರ್ಚಿಸಲಾಗಿದೆ. ಯುಗಾದಿ ಹಬ್ಬದ ಕಾರಣ ಕೆಲಸ ಗಾರರ ಕೊರತೆ ಎದುರಾಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಮುಂಚಿತವಾಗಿ ಸ್ವಚ್ಛತೆ ಆರಂಭಿಸ ಲಾಗಿದೆ.ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಶಾಂತಿಯುತವಾಗಿ ಹಬ್ಬ ಆಚರಿಸಲು ಎಲ್ಲಾ ಮುಖಂಡರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಶಿವಮೊಗ್ಗ-ರಂಜಾನ್ ಹಬ್ಬಕ್ಕೆ ಮುನ್ನವೇ ಈದ್ಗಾ ಮೈದಾನಕ್ಕೆ ಬ್ಯಾರಿಕೆಡ್:ಹಿಂದೂ ಸಂಘಟನೆ ಗಳಕ್ರೋಶ ಶಿವಮೊಗ್ಗ: ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ವಾಹನ ನಿಲುಗಡೆ ವಿಚಾರವಾಗಿ ಸ್ವಲ್ಪ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಇಂದು ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಈದ್ಗಾ ಮೈದಾನದ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಮೈದಾನದ ಸ್ವಚ್ಛತೆಗಾಗಿ ಬ್ಯಾರಿಕೇಡ್ ಅಳವಡಿಸಿರುವುದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮಾ: 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡು ವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. ಈ ಕೋರಿಕೆಯ ಮೇರೆಗೆ ಪಾಲಿಕೆ ಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು. ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಎಸ್ಪಿ ನಿಖಿಲ್ ಬಿ.ಪಾರ್ಕಿಂಗ್ ಸಮಸ್ಯೆ ಯಾಗದಂತೆ ಪಾಲಿಕೆ ಅಧಿಕಾರಿ ಗಳೊಂದಿಗೆ ಚರ್ಚಿಸಲಾಗಿದೆ. ಯುಗಾದಿ ಹಬ್ಬದ ಕಾರಣ ಕೆಲಸ ಗಾರರ ಕೊರತೆ ಎದುರಾಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಮುಂಚಿತವಾಗಿ ಸ್ವಚ್ಛತೆ ಆರಂಭಿಸ ಲಾಗಿದೆ.ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಶಾಂತಿಯುತವಾಗಿ ಹಬ್ಬ ಆಚರಿಸಲು ಎಲ್ಲಾ ಮುಖಂಡರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
- ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಬುದ್ಧ ಸರ್ಕಲ್ ನಲ್ಲೊ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದು ಚಿಕಿತ್ಸೆ ಪಲಿಸದೆ ವ್ಯಕ್ತಿ ಮೃತಪಟ್ಟಿದ್ದಾನೆ. ಬಾನುವಾರ ರಾತ್ರಿ 8.30 ರ ವೇಳೆ ಘಟನೆ ನಡೆದಿದ್ದು ಗಾಯಾಳು 42 ವರ್ಷದ ತಾಜ್ ಪೀರ್ ಚಿಕಿತ್ಸೆ ಪಲಿಸದೆ ಮೃತಪಟ್ಟಿದ್ದಾನೆ1
- Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity.1
- ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಅವರು ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಏಕಾಗ್ರತೆ ಮತ್ತು ಪರಿಶ್ರಮದಿಂದ ಪರೀಕ್ಷೆಯನ್ನು ಎದುರಿಸಬೇಕು ಎಂದು ಅವರು ಸಂದೇಶ ನೀಡಿದ್ದಾರೆ.1
- #ವಿರಾಟ್ ಹಿಂದೂ ಸಮಾಜೋತ್ಸವ.1
- ಗುಡೆಕೋಟೆ ಹಿಂದ ಹೋಗುವ ರಾಮಸಾಗರ ಹಟ್ಟಿ ದಿಬ್ಬದಲಿ ಗುಡೆಕೋಟೆಯಲ್ಲಿ ಚರಂಡಿ ವ್ಯವಸ್ಥೆ ಇದ್ದು ಚರಂಡಿ ತುಂಬಿ ರೋಡ್ ನಲ್ಲಿ ಓಡಾಡುವ ದುರ್ವ್ಯವಸ್ಥೆಯಾಗಿದ್ದು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಹಿಡಿ ಗುಡೆಕೋಟೆ ಒಂದೇ ಚರಂಡಿಯಲ್ಲಿ ಬರುತ್ತಿದ್ದು ಪೇಪರ್ ಮತ್ತು ಊರಿನ ಎಲ್ಲಾ ಗಲೀಜ್ ತುಂಬಿ ತುಳುಕಾಡುತ್ತಿದ್ದು ಗುಡೆಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ವರದಿ2
- ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೆಮ್ಮಾರದಲ್ಲಿ ಜೀಪು ಪಲ್ಟಿಯಾಗಿ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಜೀಪು ಚಾಲಕ ದೇವಿಪ್ರಸಾದ್ ಗಾಯಗೊಂಡವರಾಗಿದ್ದಾರೆ. ಇವರು ಉಪ್ಪಿನಂಗಡಿಯಿಂದ ಕೊಯಿಲ ಕಡೆಗೆ ಬರುತ್ತಿದ್ದ ವೇಳೆ ಕೆಮ್ಮಾರದಲ್ಲಿ ನಿಯಂತ್ರಣ ತಪ್ಫಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಸ್ಥಳೀಯ ಯುವಕರಾದ ಹನೀಫ್ ಅಳಕೆ, ನವಾಝ್, ಝುಬೈರ್ ಹಾಗೂ ಹಬೀಬ್ರವರು ಗಾಯಾಳುವನ್ನು ಮೇಲೆತ್ತಿ, ಹನೀಫ್ರವರ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ದೇವಿಪ್ರಸಾದ್ರವರು ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.1
- ಚಳ್ಳಕೆರೆ: ದೈಹಿಕ ಶಿಕ್ಷಕರಿಗೆ ಕಾರ್ಯಗಾರವು ಒಂದು ಅಮೂಲ್ಯ ಅವಕಾಶವಾಗಿದೆ. ಇದು ಅವರಿಗೆ ಹೊಸ ತಂತ್ರಗಳು, ವಿಧಾನಗಳು ಮತ್ತು ಸಂಪನ್ಮೂಲಗಳನ್ನು ಒದಗಿಸುತ್ತದೆ ಮತ್ತು ಅವರ ವೃತ್ತಿಪರ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್ ಸುರೇಶ ಹೇಳಿದರು. ನಗರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ವತಿಯಿಂದ ಹಮ್ಮಿಕೊಂಡಿದ್ದ ದೈಹಿಕ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮದ ಉದ್ಘಾಟನೆಯನ್ನ ನೇರವೇರಿಸಿ ಅವರು ಮಾತನಾಡಿ.ಈ ವರ್ಷದಲ್ಲಿ ಎರಡು ಬಾರಿ ದೈಹಿಕ ಶಿಕ್ಷಕರ ಕಾರ್ಯಗಾರವನ್ನ ಹಮ್ನಿಕೊಂಡಿದ್ದು ಇಡಿ ವರ್ಷದ ದೈಹಿಕ ಶಿಕ್ಷಣ ವಿಭಾಗದ ಚಟುವಟಿಕೆಗಳ ಪುನರ್ ಅವಲೋಕ ನ ಮತ್ತು ಮಾಹಿತಿ ಮತ್ತು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ದೈಹಿಕ ಶಿಕ್ಷಣ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿದುಕೊಂದುಕೊಳ್ಳಬೇಕಾದಂತಹ ಕಾರ್ಯವೈಖರಿ ಬಗ್ಗೆ ಮತ್ತು ಮುಂದಿನ ಮಕ್ಕಳ ದೈಹಿಕ ,ಮಾನಸಿಕ, ಬೌಧಿಕ ವಿಕಾಸತೆ ಗೆ ದೈಹಿಕ ಶಿಕ್ಷಣ ಯಾವ ರೀತಿ ಅಡಿಪಾಯವನ್ನ ಹಾಕಬೇಕು ಎನ್ನುವುದನ್ನ ಚಿಂತನ ಮಂಥನ ಮಾಡಿಕೊಳ್ಳುವಂತಹ ಕಾರ್ಯ ಗಾರ ಇದಾಗಿದೆ. ಇಂತಹ ಕಾರ್ಯಕ್ರಮಗಳು ಕಲಿಕೆಗೆ ಪೂರಕವಾಗಿ ತುಂಬಾ ಅರ್ಥಪೂರ್ಣವಾಗಿವೆ. ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುವಂತಹ ಶಿಕ್ಷಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು... ದಹಿಕ ಶಿಕ್ಷಣದ ಜಿಲ್ಲಾ ಪರಿವೀಕ್ಷ ಕರದ ಚಿದಂಬರ ಸ್ವಾಮಿ ಮಾತನಾಡಿ. ಚಳಕೆರೆ ತಾಲೂಕಿನಲ್ಲಿ ದೈಹಿಕ ದೈಹಿಕ ಶಿಕ್ಷಕರ ಕಾರ್ಯ ಉತ್ತಮವಾಗಿದೆ. ಕ್ರೀಡೆ ಅಂತ ಬಂದಾಗ ವಿದ್ಯಾರ್ಥಿಗಳು ಚಳ್ಳಕೆರೆಯಿಂದ ಜಿಲ್ಲಾ ಮಟ್ಟ, ರಾಜ್ಯಮಟ್ಟ ರಾಷ್ಟ್ರಮಟ್ಟಕ್ಕೂ ಸಹ ಪ್ರತಿನಿಧಿಸಿದ್ದಾರೆ. ದೈಹಿಕ ಶಿಕ್ಷಕರ ಶ್ರಮವಾಗಿದೆ ಮುಂದಿನ ದಿನಗಳಲ್ಲಿ ಸಹ ಇದೇ ರೀತಿ ತಮ್ಮ ಕಾರ್ಯಗಳನ್ನ ಮಾಡಿ ಮಕ್ಕಳ ಪ್ರಗತಿಗೆ ಶ್ರಮಿಸಿ ಎಂದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಸಿಟಿ ವೀರೇಶ್ ಮಾತನಾಡಿ. ರಾಜ್ಯ ನೌಕರರ ಸಂಘದ ವತಿಯಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಇತ್ತೀಚಿಗೆ ತಾನೇ ನ್ಯಾಯಾಂಗ ಇಲಾಖೆ ,ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ತಾಲ್ಲೂಕಿನ ಹಲವು ಇಲಾಖೆಗಳು ಸೇರಿದಂತೆ ಕ್ರೀಡೆಯನ್ನು ಆಯೋಜನೆ ಮಾಡಲಾಗಿತ್ತು ಈ ಕ್ರಿಡೆಯಲ್ಲಿ ಶಿಕ್ಷಣ ಇಲಾಖೆಯಿಂದ ಉತ್ತಮ ಪ್ರದರ್ಶನ ಮಾಡಿ ಮೊದಲ ಬಹುಮಾನವನ್ನು ಗಳಿಸಿತ್ತು. ಇನ್ನು ಮುಂದಿನ ದಿನಗಳಲ್ಲಿ ಇಂತಹ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.. ಈಗಾಗಲೇ ಸರ್ಕಾರ ನೌಕರರ ಸಂಘ ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಬಹುಮಾನ ಪಡೆದವರಿಗೆ 5,000 ಹಾಗೂ ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಕ್ರೀಡಾಪಟುಗಳಿಗೆ 10,000 ನೀಡಲಾಗುವುದು. ಕ್ರೀಡಾಪೋತ್ಸಹವಾಗಿ ನೀಡಲು ನಮ್ಮ ಸಂಘ ತೀರ್ಮಾನಿಸಿದೆ ಎಂದರು.. ಈ ಕಾರ್ಯಕಾರದಲ್ಲಿ ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಿಪ್ಪೇಸ್ವಾಮಿ, ನಾಗರಾಜು.. ಗುರುಮೂರ್ತಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.. ಈ ಒಂದು ದಿನದ ಕಾರ್ಯ ಗಾರದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಪಾಥಲಿಂಗಪ್ಪ, ಚಳ್ಳಕೆರೆ ದೈಹಿಕ ಪರಿವೀಕ್ಷಕರಾದ ಸುನಿಲ್ ನಾಯ್ಕ್, ಸಿದ್ದಲಿಂಗಪ್ಪ ಕೆಟಿ .ವೇಲು ದೈಹಿಕ ಶಿಕ್ಷಕರಾದ ತಿಪ್ಪೇಸ್ವಾಮಿ, ಪ್ರಾಣೇಶ್, ಗಂಗೂಬಾಯಿ ಹಿರೇಮಠ ಹಾಗೂ ನಾಗರಾಜ್ ತಿಪ್ಪೇಸ್ವಾಮಿ ಗುರುಮೂರ್ತಿ.. ತಾಲೂಕಿನ ದೈಹಿಕ ಶಿಕ್ಷಕರು ಇದ್ದರು..1
- ಚಿತ್ರದುರ್ಗದ ಉಪಾಧ್ಯ ಹೋಟೆಲ್ ಬಳಿ ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನ ಪೊಲೀಸರು ವಷಕ್ಕೆ ಪಡೆದಿದ್ದಾರೆ. ಸೋಮವಾರ ಬೆಳಗ್ಗೆ 10 ಗಂಟೆಗೆ ಚಿತ್ರದುರ್ಗ ಹೊರವಲಯದ ಉಪಾಧ್ಯ ಹೋಟೆಲ್ ಬಳಿ ಘಟನೆ ನಡೆದಿದ್ದು ಶಿವಮೊಗ್ಗ ದಿಂದ ಚಿತ್ರದುರ್ಗ ಮೂಲಕ ತುಮಕೂರು ಕಡೆಗೆ ಹೊರಟಿದ್ದ ಒಂದು ಲಾರಿ ಲೋಡ್ ಸಂಪೂರ್ಣ ಅಕ್ಕಿಯನ್ನ ಪೊಲೀಸರು ವಷಕ್ಕೆ ಪಡೆದಿದ್ದಾರೆ.1
- Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity.1