Shuru
Apke Nagar Ki App…
ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ; ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ;
YADGIR NEWS
ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ; ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ;
More news from ಕರ್ನಾಟಕ and nearby areas
- ರಾಯಚೂರಿನಲ್ಲಿ ಸಚಿವ ಸ್ಥಾನಕ್ಕೆ ಆಗ್ರಹಿಸಿ ಆ.15ರಂದು ಪ್ರತಿಭಟನೆಗೆ ದಲಿತ ಪರ ಸಂಘಟನೆಗಳ ಕರೆ ರಾಯಚೂರು : ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿ, ಆಗಸ್ಟ್ 15ರಂದು ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಪರ ಸಂಘಟನೆಗಳ ಒಕ್ಕೂಟದ ಮುಖಂಡ ಎಸ್. ಮಾರೆಪ್ಪ 10 ಗಂಟೆಗೆ ತಿಳಿಸಿದರು. ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಚಿವ ಸ್ಥಾನ ಹಾಗೂ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ಜಿಲ್ಲೆಯ ಜನಪ್ರತಿನಿಧಿಗಳಿಗೆ ನೀಡಬೇಕು. ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬೇರೆ ಜಿಲ್ಲೆಯ ಸಚಿವರು ಬಂದರೆ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಲಾಗುವುದು ಎಂದು ಎಚ್ಚರಿಸಿದರು. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ರಾಜಕೀಯವಾಗಿ ಕಡೆಗಣನೆಗೆ ಒಳಗಾಗಿವೆ. ಈ ಭಾಗದ ಅಭಿವೃದ್ಧಿ ವಿಚಾರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಸಮರ್ಪಕವಾಗಿ ಧ್ವನಿ ಎತ್ತುತ್ತಿಲ್ಲ. ಬೇರೆ ಜಿಲ್ಲೆಗಳ ರಾಜಕಾರಣಿಗಳು ತಮ್ಮ ಜಿಲ್ಲೆಯ ಹಿತಾಸಕ್ತಿಗಾಗಿ ಒಗ್ಗಟ್ಟಿನಿಂದ ಹೋರಾಡುತ್ತಾರೆ. ಆದರೆ ರಾಯಚೂರು ಜಿಲ್ಲೆಯ ರಾಜಕಾರಣಿಗಳಲ್ಲಿ ಅಂತಹ ಬದ್ಧತೆ ಕಾಣುತ್ತಿಲ್ಲ ಎಂದು ಆರೋಪಿಸಿದರು. ಜಿಲ್ಲೆಯ ಅಭಿವೃದ್ಧಿಗಿಂತ ವೈಯಕ್ತಿಕ ಹಿತಾಸಕ್ತಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದಲೇ ಸಚಿವ ಸ್ಥಾನ ಕೈತಪ್ಪಿದೆ. ಪಕ್ಕದ ಕಲಬುರಗಿ ಹಾಗೂ ಕೊಪ್ಪಳ ಜಿಲ್ಲೆಗಳಿಂದ ಇಬ್ಬರು–ಮೂರು ಜನ ಶಾಸಕರು ಸಚಿವರಾಗಿದ್ದು, ಅವರೇ ನಮ್ಮ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ಬರುತ್ತಿದ್ದಾರೆ. ಆದರೂ ಜಿಲ್ಲೆಯ ಪರವಾಗಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದ ನಾಯಕರು ಯಾವುದೇ ಒಗ್ಗಟ್ಟಿನ ಧ್ವನಿ ಎತ್ತುತ್ತಿಲ್ಲ ಎಂದು ಟೀಕಿಸಿದರು. ಜಿಲ್ಲೆಗೆ ಸೂಕ್ತ ಸಚಿವ ಸ್ಥಾನ ಹಾಗೂ ಪ್ರಾತಿನಿಧ್ಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ. ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಬೇರೆ ಜಿಲ್ಲೆಯ ಸಚಿವರು ಧ್ವಜಾರೋಹಣಕ್ಕೆ ಬಂದರೆ ಪ್ರತಿಭಟನೆ ಮೂಲಕ ವಿರೋಧಿಸಲಾಗುವುದು ಎಂದು ಎಸ್. ಮಾರೆಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ದಲಿತ ಪರ ಸಂಘಟನೆಗಳ ಮುಖಂಡರಾದ ಹೇಮರಾಜ ಅಸ್ಕಿಹಾಳ, ಶ್ರೀನಿವಾಸ್, ಲಕ್ಷ್ಮಣ್, ತಾಯಪ್ಪ, ರವಿ, ನರಸಿಂಹಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.1
- ಆಗಸ್ಟ್ 9 ಕ್ಕೆ 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಕಾರ್ಯಕ್ರಮ. ಅಫಜಲಪುರ: ಪಟ್ಟಣದ ಶ್ರೀ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಇದೆ ಆಗಸ್ಟ್ 9 ರಂದು 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ ಎಂದು ಶ್ರೀ ಮಹಾಂತೇಶ್ವರ ವಿದ್ಯಾ ವರ್ದಕ ಶಾಲೆಯ ಹಳೆಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.1
- ಹರಿದಾಸ್ ಹಾರ್ಟ್ ಆಸ್ಪತ್ರೆಯ ಪ್ರಥಮ ವಾರ್ಷಿಕೋತ್ಸ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ1
- ಸರ್ಕಾರಿ ಶಾಲೆಗಳಲ್ಲಿನ ಗ್ಯಾಸ್ ಸಿಲಿಂಡರ್'ಗಳು ಕಳವು ಮಾಡುತಿದ್ದ ನಾಲ್ವರ ಬಂಧನ: ನಗರದಲ್ಲಿ ಎಸ್ಪಿ ಮಾಹಿತಿ ಭಾಲ್ಕಿ: ಸರ್ಕಾರಿ ಶಾಲೆಗಳಲ್ಲಿನ ಗ್ಯಾಸ್ ಸಿಲಿಂಡರ್'ಗಳು ಕಳವು ಮಾಡುತಿದ್ದ ನಾಲ್ವರ ಬಂಧನ: ನಗರದಲ್ಲಿ ಎಸ್ಪಿ ಮಾಹಿತಿ1
- ತುಂಗಭದ್ರಾ ಎಡದಂಡೆ ಕಾಲುವೆಗೆ ತಕ್ಷಣ ನೀರು ಹರಿಸಲು ಸಿರವಾರ ಭಾಗದ ರೈತರು ರಾಯಚೂರಿನಲ್ಲಿ ಆಗ್ರಹ ರಾಯಚೂರು : 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳನ್ನು ರಕ್ಷಿಸುವ ನಿಟ್ಟಿನಲ್ಲಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ತಕ್ಷಣ ನೀರು ಹರಿಸಬೇಕು ಎಂದು ತುಂಗಭದ್ರಾ ಎಡದಂಡೆ ಕಾಲುವೆ ರೈತರ ವೇದಿಕೆಯ ರಾಜ್ಯಾಧ್ಯಕ್ಷ ಶಂಕರಗೌಡ ಹರವಿ ರಾಜ್ಯ ಸರ್ಕಾರವನ್ನು ಮಂಗಳವಾರ 10.30 ನಿಮಿಷಕ್ಕೆ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದಲ್ಲಿ ಈಗಾಗಲೇ ಸುಮಾರು 50 ಟಿಎಂಸಿ ನೀರು ಸಂಗ್ರಹವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯೊಂದಿಗೆ ಒಳಹರಿವು ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ. ಹೀಗಾಗಿ ರೈತರ ಹಿತದೃಷ್ಟಿಯಿಂದ ಕೂಡಲೇ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು. ಕಾಲುವೆಯ ಗೇಜ್ಗಳನ್ನು ಸಮರ್ಪಕವಾಗಿ ದುರಸ್ತಿ ಮಾಡಿ, ನೀರಿನ ಪ್ರಮಾಣವನ್ನು ನಿಖರವಾಗಿ ಅಳೆಯುವ ವ್ಯವಸ್ಥೆ ಕಲ್ಪಿಸಬೇಕು. ಈ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದ್ದು, ಜಿಲ್ಲಾಧಿಕಾರಿಗಳು ಸಭೆಯಲ್ಲಿ ತೀರ್ಮಾನಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. 1970-80ರ ದಶಕಗಳಲ್ಲಿ ಜಲಾಶಯದಲ್ಲಿ 25ರಿಂದ 30 ದಿನಗಳಿಗೆ ಸಾಕಾಗುವಷ್ಟು ನೀರು ಸಂಗ್ರಹವಾದ ಕೂಡಲೇ ನೀರಾವರಿ ಕಾಲುವೆಗಳಿಗೆ ನೀರು ಹರಿಸಲಾಗುತ್ತಿತ್ತು. ನಂತರ ಬಂದ ಒಳಹರಿವಿನಿಂದ ಯಾವುದೇ ಸಮಸ್ಯೆ ಉಂಟಾಗುತ್ತಿರಲಿಲ್ಲ. ಆದರೆ ಈಗ ಅಧಿಕಾರಿಗಳು ಅತಿಯಾದ ಮುನ್ನೆಚ್ಚರಿಕೆ ಹಾಗೂ ರಕ್ಷಣಾತ್ಮಕ ನಿಲುವಿನಿಂದ ಕಾಲುವೆಗೆ ನೀರು ಹರಿಸಲು ವಿಳಂಬ ಮಾಡುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ ಎಂದು ಹೇಳಿದರು. ಈಗಾಗಲೇ ಹತ್ತಿ, ಭತ್ತ ಸೇರಿದಂತೆ ವಿವಿಧ ಮುಂಗಾರು ಬೆಳೆಗಳ ಬಿತ್ತನೆ ಪೂರ್ಣಗೊಂಡಿದ್ದು, ಬೆಳೆಗಳು 25ರಿಂದ 45 ದಿನಗಳ ಬೆಳವಣಿಗೆಯ ಹಂತದಲ್ಲಿವೆ. ಈ ಸಂದರ್ಭದಲ್ಲಿ ನೀರು ಹರಿಸದಿದ್ದರೆ ಬೆಳೆಗಳು ಒಣಗಿ ರೈತರಿಗೆ ಭಾರೀ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ಕಾಲುವೆಗೆ ನೀರು ಹರಿಸುವುದರಲ್ಲಿ ಮತ್ತಷ್ಟು ವಿಳಂಬವಾದರೆ ಕೃಷಿ ಉತ್ಪಾದನೆ ಕುಸಿತ, ಆಹಾರ ಧಾನ್ಯಗಳ ಕೊರತೆ, ಗ್ರಾಮೀಣ ಪ್ರದೇಶಗಳಲ್ಲಿ ರೈತರು ಹಾಗೂ ಕೃಷಿ ಕೂಲಿಕಾರರಿಗೆ ಉದ್ಯೋಗದ ಅಭಾವ, ಆರ್ಥಿಕ ಸಂಕಷ್ಟ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಲಿವೆ ಎಂದು ಅವರು ಹೇಳಿದರು. ಆದ್ದರಿಂದ ನಕಾರಾತ್ಮಕ ಮನೋಭಾವ ತೊರೆದು, ಪ್ರಕೃತಿಯ ಮೇಲೆ ವಿಶ್ವಾಸವಿಟ್ಟು ರೈತರ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ತಕ್ಷಣ ನೀರು ಹರಿಸುವಂತೆ ಶಂಕರಗೌಡ ಹರವಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ವೈ. ಬಸನಗೌಡ, ರಮೇಶ್ ನಾಡಗೌಡ, ನಾಗನಗೌಡ, ಶರಣಪ್ಪಗೌಡ, ಅಮರೇಶ್ ಹೊಸಮನಿ, ವೀರೇಂದ್ರ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.1
- ರಾಜೀನಾಮೆ ಕೊಟ್ಟರೆ ಕೆಲವೇ ನಿಮಿಷಗಳಲ್ಲಿ ಸ್ವೀಕರಿಸುತ್ತೇನೆ ಸಿ ಎಂ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ1
- ಕಮಲನಗರ ತಾಲೂಕಿನ ರೈತರಿಗೆ ಸಂತಸದ ಸುದ್ದಿ; ನಗರದಲ್ಲಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಮಾಹಿತಿ ಬೀದರ್: ಕಮಲನಗರ ತಾಲೂಕಿನ ರೈತರಿಗೆ ಸಂತಸದ ಸುದ್ದಿ; ನಗರದಲ್ಲಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಮಾಹಿತಿ1
- ಬಿಜಾಪುರದ ನಗರದಲ್ಲಿ ಮತ್ತೊಂದು ಅವಘಡ ಇಟಗಿ ಪೆಟ್ರೋಲ್ ಪಂಪ್ ಹತ್ತಿರ ಅಥಣಿ ರಸ್ತೆಯಲ್ಲಿ ಬಳಿಯ ಮೆಡಿಕಲ್ ಶಾಪಿನಲ್ಲಿ ಬೆಂಕಿ ಅವಗಡ ನಿನ್ನೆ ತಡ ರಾತ್ರಿ ನಡೆದಿದೆ1