logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಮಯೋಚಿತವಾಗಿ ದೂರು ಅರ್ಜಿಗಳನ್ನು ವಿಲೆಮಾಡಿ: ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಚಿಕ್ಕಬಳ್ಳಾಪುರ : ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಯೋಚಿತವಾಗಿ ಹಾಗೂ ಸಂದರ್ಭೋಚಿತವಾಗಿ ಕೆಲಸ ಮಾಡದೆ ಅರ್ಜಿ ವಿಲೆವಾರಿ ಮಾಡಲು ವಿಳಂಬ ಧೋರಣೆ ತೋರುವುದು ಕೂಡ ಕರ್ತವ್ಯ ಲೋಪವಾಗಿದ್ದು, ಅಂತಹವರ ಮೇಲೂ ಕೂಡ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಅಧಿಕಾರಿಗಳಿಗೆ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯತ್ ನ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಚಿಕ್ಕಬಳ್ಳಾಪುರ, ಗೌರಿಬಿದನೂರು, ಮಂಚೇನಹಳ್ಳಿ ಹಾಗೂ ಗುಡಿಬಂಡೆ ತಾಲ್ಲೂಕುಗಳಿಗೆ ಸಂಬಂಧಪಟ್ಟ ಲೋಕಾಯುಕ್ತದಲ್ಲಿ ದಾಖಲಾಗಿರುವ ದೂರು ಪ್ರಕರಣಗಳ ವಿಚಾರಣೆಯನ್ನು ನಡೆಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಫೆಬ್ರವರಿ ಮಾಹೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಬಾಗೇಪಲ್ಲಿ, ಶಿಡ್ಲಘಟ್ಟ ಹಾಗೂ ಚೇಳೂರು ತಾಲ್ಲೂಕುಗಳಿಗೆ ಸಂಬಂಧಪಟ್ಟ ಪ್ರಕರಣಗಳನ್ನು ವಿಚಾರಣೆ ನಡೆಸಿ ಶೇ. 65 ರಷ್ಟು ಪ್ರಕರಣಗಳನ್ನು ಸ್ಥಳದಲ್ಲೆ ವಿಲೆವಾರಿ ಮಾಡಲಾಗಿತ್ತು. ಅದರ ಮುಂದುವರಿದ ಭಾಗವಾಗಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿ ತನಿಖೆಗೆ ಬಾಕಿ ಇರುವ 73 ದೂರು ಪ್ರಕರಣಗಳಲ್ಲಿ ಇಂದು ವಿಚಾರಣೆ ನಡೆಸಲಾಗಿದೆ. ಬಹುತೇಕ ಪ್ರಕರಣಗಳು ಇತ್ಯರ್ಥವಾಗಿವೆ. ಕಂದಾಯ, ಗ್ರಾಮೀಣ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳೆ ಹೆಚ್ಚಿನ ಸಂಖ್ಯೆಯಲ್ಲಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉತ್ತಮ ಸ್ಪಂದನೆ ನೀಡಿದ್ದು, ವಿಚಾರಣೆಯು ಶಾಂತಿಯುತವಾಗಿ ಜರುಗಿತು. ಇತ್ಯರ್ಥಗೊಂಡ ಪ್ರಕರಣಗಳಲ್ಲಿ ದೂರುದಾರರು ನೆಮ್ಮದಿಯ ಮಾತುಗಳನ್ನಾಡಿ ಧನ್ಯವಾದಗಳನ್ನು ತಿಳಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಸರ್ಕಾರದ ಯಾವುದೇ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರಿಗೆ ಸಾರ್ವಜನಿಕರಿಂದ ಯಾವುದೇ ದೂರು ಅಥವಾ ಅರ್ಜಿ ಬಂದಲ್ಲಿ ಅದನ್ನು ಮೊದಲು ಪರಿಶೀಲಿಸಿ ತಮ್ಮ ವ್ಯಾಪ್ತಿಗೆ ಬರುತ್ತದೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಂಡು, ಒಂದು ವೇಳೆ ತಮ್ಮ ವ್ಯಾಪ್ತಿಗೆ ಬರುತ್ತದೆ ಎನ್ನುವುದಾದರೆ ಆ ದೂರು, ಅರ್ಜಿಗೆ ಸಂದರ್ಭೋಚಿತವಾಗಿ, ಸಮಯೋಚಿತವಾಗಿ ಆದಷ್ಟು ಶೀಘ್ರವಾಗಿ ಕಾನೂನಾತ್ಮಕವಾಗಿ ಪರಿಹಾರ ದೊರಕಿಸಿಕೊಡಬೇಕು. ಒಂದು ವೇಳೆ ಆ ದೂರು ಅಥವಾ ಅರ್ಜಿ ತಮ್ಮ ವ್ಯಾಪ್ತಿಗೆ ಬರದಿದ್ದಲ್ಲಿ ಸಂಬಂಧಿಸಿದ ದೂರುದಾರ ಅಥವಾ ಅರ್ಜಿದಾರರನ್ನು ಕರೆಯಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ದೂರು ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡಿ ಮುಕ್ತಿ ದೊರಕಿಸಿಕೊಡಬೇಕೆ ಹೊರತು ಅನವಶ್ಯಕವಾಗಿ  ಕಾಲಹರಣ ಮಾಡಬಾರದು. ಸಂವಿಧಾನವು ಸರ್ಕಾರದ ಮೂಲಕ ನೀಡಿರುವ ಹುದ್ದೆ, ಸ್ಥಾನಮಾನ, ಅವಕಾಶ ಹಕ್ಕುಗಳನ್ನು ಸಾರ್ವಜನಿಕರ ಸೇವೆ ಅಥವಾ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಬಳಸಬೇಕು. ಇದು ಸಂವಿಧಾನ ನೀಡಿರುವ ಕರ್ತವ್ಯವಾಗಿದ್ದು, ಅದನ್ನು ನ್ಯಾಯಯುತ ರೀತಿ ಮಾರ್ಗದಲ್ಲಿ ಕಾರ್ಯಗತಗೊಳಿಸಲು ಹಿಂಜರಿಯುವುದು ಬೇಡ. ಯಾವುದೇ ಸಾರ್ವಜನಿಕರು ವೃಥಾ ದುರುದ್ದೇಶಪೂರಿತವಾಗಿ ದೂರು ಅಥವಾ ಅರ್ಜಿ ನೀಡುವುದಿಲ್ಲ. ಸಾರ್ವಜನಿಕರೂ ಈ ವಿಚಾರದಲ್ಲಿ ಅತ್ಯಂತ ಹೊಣೆಗಾರಿಕೆ ಮತ್ತು ಬದ್ಧತೆಯಿಂದ ನಡೆದುಕೊಳ್ಳಬೇಕು. ಸಾರ್ವಜನಿಕರು ಯಾವುದೇ ಅಧಿಕಾರಿ ಅಥವಾ ನೌಕರರ ವಿರುದ್ಧದ ದೂರು ಅರ್ಜಿಯನ್ನು ಸಕಾರಾತ್ಮಕವಾಗಿ ನೀಡಬೇಕೇ ಹೊರತು ದುರುದ್ದೇಶಪೂರಿತವಾಗಿ ಅಲ್ಲ. ಅಧಿಕಾರಿ ಮತ್ತು ನೌಕರರು ಸಾರ್ವಜನಿಕರ ಸಮಸ್ಯೆ, ಕುಂದುಕೊರತೆ ದೂರು ಅರ್ಜಿಗಳನ್ನು ಪರಿಶೀಲಿಸದೆ ಏಕಾಏಕಿ‌ ನಕಾರಾತ್ಮಕ ಮನೋಧೋರಣೆಯಿಂದ ನೋಡಬಾರದು. ನ್ಯಾಯಾಲಯಗಳಿಗೆ ಹೋಗುವವರೆಲ್ಲಾ ಜಗಳ ಮಾಡುವವರಲ್ಲ. ಬದಲಿಗೆ, ತಮ್ಮ ಹಕ್ಕು ಬಾಧ್ಯತೆಗಳನ್ನು ಕಾನೂನಾತ್ಮಕವಾಗಿ ಸ್ಥಾಪಿಸಿಕೊಳ್ಳಲು, ಪರಿಹರಿಸಿಕೊಳ್ಳಲು ಬಂದವರಾಗಿರುತ್ತಾರೆ ಎಂಬ ಸಾಮಾನ್ಯ ವಿಷಯವನ್ನು ಸೂಕ್ಷ್ಮವಾಗಿ ಗ್ರಹಿಸಬೇಕು. ಕೆಲಸವನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡುತ್ತೇನೆಂಬ ಸಂಕಲ್ಪ ಮತ್ತು ಶಪಥ ಮಾಡಬೇಕೆಂದು ಸಲಹೆ ನೀಡಿದರು. ಅರ್ಹರಿಗೆ ಸರ್ಕಾರಿ ಸೇವೆಗಳು ದೊರಕಬೇಕು. ಕಾನೂನಿನಡಿ ಉತ್ಪತ್ತಿಯಾಗುವ ಹಕ್ಕುಗಳ ರಕ್ಷಣೆಯಾಗಬೇಕು. ಕಾನುನಿನಡಿ ಉತ್ಪತ್ತಿಯಾಗುವ ಸೌಲತ್ತುಗಳು ಯಾವುದೇ ಒತ್ತಡಗಳಿಗೆ, ಪ್ರಲೋಬನೆಗಳಿಗೆ ಒಳಗಾಗದೆ ವಸ್ತುನಿಷ್ಠವಾಗಿ ಅರ್ಹರಿಗೆ ತಲುಪಬೇಕು. ಆಗ ನಾವು ಸರ್ಕಾರಿ ನೌಕರಿಯ ಸೇವೆಗೆ ಸೇರಿದ್ದಕ್ಕೆ ಸಾರ್ಥಕವಾಗುತ್ತದೆ. ಯಾವುದೇ ನಿರೀಕ್ಷೆ ಇಲ್ಲದೆ, ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲರ ಮನೋಭಾವನೆ ಬದಲಾವಣೆ ಆಗಬೇಕು ಎಂದು ಉಪಲೋಕಾಯುಕ್ತರು  ಆಡಳಿತ ವರ್ಗಕ್ಕೆ ನೀತಿ ಪಾಠ ತಿಳಿಸಿದರು.  ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಪ್ರಭು, ಜಿ.  ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿರಣ್ ಎಂ ಪಾಟೀಲ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್  ನ್ಯಾಯಾಧೀಶರಾದ ಶಿಲ್ಪ, ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷಾ,ಲೋಕಾಯುಕ್ತದ ಎಸ್.ಪಿ. ಆಂಟೋನಿ ಜಾನ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ದೂರುದಾರರು  ಇದ್ದರು.

16 hrs ago
user_Venkey Manu
Venkey Manu
ಪ್ರಕರ್ತರು ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
16 hrs ago
ba109eb7-1643-4ad5-a62d-9ce050c1b39f

ಸಮಯೋಚಿತವಾಗಿ ದೂರು ಅರ್ಜಿಗಳನ್ನು ವಿಲೆಮಾಡಿ: ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಚಿಕ್ಕಬಳ್ಳಾಪುರ : ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಯೋಚಿತವಾಗಿ ಹಾಗೂ ಸಂದರ್ಭೋಚಿತವಾಗಿ ಕೆಲಸ ಮಾಡದೆ ಅರ್ಜಿ ವಿಲೆವಾರಿ ಮಾಡಲು ವಿಳಂಬ ಧೋರಣೆ ತೋರುವುದು ಕೂಡ ಕರ್ತವ್ಯ ಲೋಪವಾಗಿದ್ದು, ಅಂತಹವರ ಮೇಲೂ ಕೂಡ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಅಧಿಕಾರಿಗಳಿಗೆ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯತ್ ನ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಚಿಕ್ಕಬಳ್ಳಾಪುರ, ಗೌರಿಬಿದನೂರು, ಮಂಚೇನಹಳ್ಳಿ ಹಾಗೂ ಗುಡಿಬಂಡೆ ತಾಲ್ಲೂಕುಗಳಿಗೆ ಸಂಬಂಧಪಟ್ಟ ಲೋಕಾಯುಕ್ತದಲ್ಲಿ ದಾಖಲಾಗಿರುವ ದೂರು ಪ್ರಕರಣಗಳ ವಿಚಾರಣೆಯನ್ನು ನಡೆಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಫೆಬ್ರವರಿ ಮಾಹೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಬಾಗೇಪಲ್ಲಿ, ಶಿಡ್ಲಘಟ್ಟ ಹಾಗೂ ಚೇಳೂರು ತಾಲ್ಲೂಕುಗಳಿಗೆ ಸಂಬಂಧಪಟ್ಟ ಪ್ರಕರಣಗಳನ್ನು ವಿಚಾರಣೆ ನಡೆಸಿ ಶೇ. 65 ರಷ್ಟು ಪ್ರಕರಣಗಳನ್ನು ಸ್ಥಳದಲ್ಲೆ ವಿಲೆವಾರಿ ಮಾಡಲಾಗಿತ್ತು. ಅದರ ಮುಂದುವರಿದ ಭಾಗವಾಗಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿ ತನಿಖೆಗೆ ಬಾಕಿ ಇರುವ 73 ದೂರು ಪ್ರಕರಣಗಳಲ್ಲಿ ಇಂದು ವಿಚಾರಣೆ ನಡೆಸಲಾಗಿದೆ. ಬಹುತೇಕ ಪ್ರಕರಣಗಳು ಇತ್ಯರ್ಥವಾಗಿವೆ. ಕಂದಾಯ, ಗ್ರಾಮೀಣ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳೆ ಹೆಚ್ಚಿನ ಸಂಖ್ಯೆಯಲ್ಲಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉತ್ತಮ ಸ್ಪಂದನೆ ನೀಡಿದ್ದು, ವಿಚಾರಣೆಯು ಶಾಂತಿಯುತವಾಗಿ ಜರುಗಿತು. ಇತ್ಯರ್ಥಗೊಂಡ ಪ್ರಕರಣಗಳಲ್ಲಿ ದೂರುದಾರರು ನೆಮ್ಮದಿಯ ಮಾತುಗಳನ್ನಾಡಿ ಧನ್ಯವಾದಗಳನ್ನು ತಿಳಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಸರ್ಕಾರದ ಯಾವುದೇ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರಿಗೆ ಸಾರ್ವಜನಿಕರಿಂದ ಯಾವುದೇ ದೂರು ಅಥವಾ ಅರ್ಜಿ ಬಂದಲ್ಲಿ ಅದನ್ನು ಮೊದಲು ಪರಿಶೀಲಿಸಿ ತಮ್ಮ ವ್ಯಾಪ್ತಿಗೆ ಬರುತ್ತದೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಂಡು, ಒಂದು ವೇಳೆ ತಮ್ಮ ವ್ಯಾಪ್ತಿಗೆ ಬರುತ್ತದೆ ಎನ್ನುವುದಾದರೆ ಆ ದೂರು, ಅರ್ಜಿಗೆ ಸಂದರ್ಭೋಚಿತವಾಗಿ, ಸಮಯೋಚಿತವಾಗಿ ಆದಷ್ಟು ಶೀಘ್ರವಾಗಿ ಕಾನೂನಾತ್ಮಕವಾಗಿ ಪರಿಹಾರ ದೊರಕಿಸಿಕೊಡಬೇಕು. ಒಂದು ವೇಳೆ ಆ ದೂರು ಅಥವಾ ಅರ್ಜಿ ತಮ್ಮ ವ್ಯಾಪ್ತಿಗೆ ಬರದಿದ್ದಲ್ಲಿ ಸಂಬಂಧಿಸಿದ ದೂರುದಾರ ಅಥವಾ ಅರ್ಜಿದಾರರನ್ನು ಕರೆಯಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ದೂರು ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡಿ ಮುಕ್ತಿ ದೊರಕಿಸಿಕೊಡಬೇಕೆ ಹೊರತು ಅನವಶ್ಯಕವಾಗಿ  ಕಾಲಹರಣ ಮಾಡಬಾರದು. ಸಂವಿಧಾನವು ಸರ್ಕಾರದ ಮೂಲಕ ನೀಡಿರುವ ಹುದ್ದೆ, ಸ್ಥಾನಮಾನ, ಅವಕಾಶ ಹಕ್ಕುಗಳನ್ನು ಸಾರ್ವಜನಿಕರ ಸೇವೆ ಅಥವಾ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಬಳಸಬೇಕು. ಇದು ಸಂವಿಧಾನ ನೀಡಿರುವ ಕರ್ತವ್ಯವಾಗಿದ್ದು, ಅದನ್ನು ನ್ಯಾಯಯುತ ರೀತಿ ಮಾರ್ಗದಲ್ಲಿ ಕಾರ್ಯಗತಗೊಳಿಸಲು ಹಿಂಜರಿಯುವುದು ಬೇಡ. ಯಾವುದೇ ಸಾರ್ವಜನಿಕರು ವೃಥಾ ದುರುದ್ದೇಶಪೂರಿತವಾಗಿ ದೂರು ಅಥವಾ ಅರ್ಜಿ ನೀಡುವುದಿಲ್ಲ. ಸಾರ್ವಜನಿಕರೂ ಈ ವಿಚಾರದಲ್ಲಿ ಅತ್ಯಂತ ಹೊಣೆಗಾರಿಕೆ ಮತ್ತು ಬದ್ಧತೆಯಿಂದ ನಡೆದುಕೊಳ್ಳಬೇಕು. ಸಾರ್ವಜನಿಕರು ಯಾವುದೇ ಅಧಿಕಾರಿ ಅಥವಾ ನೌಕರರ ವಿರುದ್ಧದ ದೂರು ಅರ್ಜಿಯನ್ನು ಸಕಾರಾತ್ಮಕವಾಗಿ ನೀಡಬೇಕೇ ಹೊರತು ದುರುದ್ದೇಶಪೂರಿತವಾಗಿ ಅಲ್ಲ. ಅಧಿಕಾರಿ ಮತ್ತು ನೌಕರರು ಸಾರ್ವಜನಿಕರ ಸಮಸ್ಯೆ, ಕುಂದುಕೊರತೆ ದೂರು ಅರ್ಜಿಗಳನ್ನು ಪರಿಶೀಲಿಸದೆ ಏಕಾಏಕಿ‌ ನಕಾರಾತ್ಮಕ ಮನೋಧೋರಣೆಯಿಂದ ನೋಡಬಾರದು. ನ್ಯಾಯಾಲಯಗಳಿಗೆ ಹೋಗುವವರೆಲ್ಲಾ ಜಗಳ ಮಾಡುವವರಲ್ಲ. ಬದಲಿಗೆ, ತಮ್ಮ ಹಕ್ಕು ಬಾಧ್ಯತೆಗಳನ್ನು ಕಾನೂನಾತ್ಮಕವಾಗಿ ಸ್ಥಾಪಿಸಿಕೊಳ್ಳಲು, ಪರಿಹರಿಸಿಕೊಳ್ಳಲು ಬಂದವರಾಗಿರುತ್ತಾರೆ ಎಂಬ ಸಾಮಾನ್ಯ ವಿಷಯವನ್ನು ಸೂಕ್ಷ್ಮವಾಗಿ ಗ್ರಹಿಸಬೇಕು. ಕೆಲಸವನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡುತ್ತೇನೆಂಬ ಸಂಕಲ್ಪ ಮತ್ತು ಶಪಥ ಮಾಡಬೇಕೆಂದು ಸಲಹೆ ನೀಡಿದರು. ಅರ್ಹರಿಗೆ ಸರ್ಕಾರಿ ಸೇವೆಗಳು ದೊರಕಬೇಕು. ಕಾನೂನಿನಡಿ ಉತ್ಪತ್ತಿಯಾಗುವ ಹಕ್ಕುಗಳ ರಕ್ಷಣೆಯಾಗಬೇಕು. ಕಾನುನಿನಡಿ ಉತ್ಪತ್ತಿಯಾಗುವ ಸೌಲತ್ತುಗಳು ಯಾವುದೇ ಒತ್ತಡಗಳಿಗೆ, ಪ್ರಲೋಬನೆಗಳಿಗೆ ಒಳಗಾಗದೆ ವಸ್ತುನಿಷ್ಠವಾಗಿ ಅರ್ಹರಿಗೆ ತಲುಪಬೇಕು. ಆಗ ನಾವು ಸರ್ಕಾರಿ ನೌಕರಿಯ ಸೇವೆಗೆ ಸೇರಿದ್ದಕ್ಕೆ ಸಾರ್ಥಕವಾಗುತ್ತದೆ. ಯಾವುದೇ ನಿರೀಕ್ಷೆ ಇಲ್ಲದೆ, ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲರ ಮನೋಭಾವನೆ ಬದಲಾವಣೆ ಆಗಬೇಕು ಎಂದು ಉಪಲೋಕಾಯುಕ್ತರು  ಆಡಳಿತ ವರ್ಗಕ್ಕೆ ನೀತಿ ಪಾಠ ತಿಳಿಸಿದರು.  ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಪ್ರಭು, ಜಿ.  ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿರಣ್ ಎಂ ಪಾಟೀಲ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್  ನ್ಯಾಯಾಧೀಶರಾದ ಶಿಲ್ಪ, ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷಾ,ಲೋಕಾಯುಕ್ತದ ಎಸ್.ಪಿ. ಆಂಟೋನಿ ಜಾನ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ದೂರುದಾರರು  ಇದ್ದರು.

More news from ಕರ್ನಾಟಕ and nearby areas
  • ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್
    1
    ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • सहेली के साथ संबंध बनाने का दबाव! बेंगलुरु में थाने पहुंचा पीड़ित पति, बोला- पत्नी की 'एक्स्ट्रा डिमांड' से तंग हूं बेंगलुरु के अमृतहल्ली इलाके से एक चौंकाने वाला कानूनी मामला सामने आया है. आमतौर पर महिलाओं की ओर से दर्ज कराए जाने वाले प्रताड़ना के मामलों के उलट, यहां एक पति ने अपनी पत्नी पर यौन शोषण और गंभीर मानसिक क्रूरता के आरोप लगाते हुए पुलिस का दरवाजा खटखटाया है. बेंगलुरु के अमृतहल्ली पुलिस स्टेशन में एक ऐसा मामला दर्ज हुआ है, जिसे कानूनी जानकार 'रेयर' मान रहे हैं. एक शख्स ने अपनी पत्नी के खिलाफ शिकायत दर्ज कराते हुए आरोप लगाया है कि वह लंबे समय से यौन और मानसिक क्रूरता का शिकार हो रहा है. पति का दावा है कि उसकी पत्नी उसे अप्राकृतिक यौन कृत्यों के लिए मजबूर करती थी और विरोध करने पर उसे प्रताड़ित किया जाता था. अश्लील वीडियो और 'यूनिक' डिमांड्स अमृतहल्ली पुलिस स्टेशन में दर्ज शिकायत के अनुसार, पीड़ित पति ने आरोप लगाया कि उसकी पत्नी उसे अक्सर अश्लील वीडियो भेजती थी और उन वीडियो में दिखाए गए कृत्यों को दोहराने के लिए दबाव डालती थी. इतना ही नहीं, पति का दावा है कि पत्नी उसे अपनी सहेलियों के साथ शारीरिक संबंध बनाने के लिए भी मजबूर करती थी और अपनी 'इंटिमेट यादें' दोस्तों के साथ साझा करने पर जोर देती थी. एक्स्ट्रा-मैरिटल अफेयर का विवाद शिकायतकर्ता ने आरोप लगाया कि उसकी पत्नी ने खुलेआम स्वीकार किया है कि उसके पुराने और वर्तमान में अन्य पुरुषों के साथ संबंध हैं. पत्नी का कहना है कि पति की आर्थिक स्थिति उसकी 'हाई-फाई लाइफस्टाइल' को सपोर्ट नहीं कर सकती. पति ने पत्नी पर शराब की लत और दोस्तों के साथ घंटों समय बिताने का भी आरोप लगाया है.
    1
    सहेली के साथ संबंध बनाने का दबाव! बेंगलुरु में थाने पहुंचा पीड़ित पति, बोला- पत्नी की 'एक्स्ट्रा डिमांड' से तंग हूं
बेंगलुरु के अमृतहल्ली इलाके से एक चौंकाने वाला कानूनी मामला सामने आया है. आमतौर पर महिलाओं की ओर से दर्ज कराए जाने वाले प्रताड़ना के मामलों के उलट, यहां एक पति ने अपनी पत्नी पर यौन शोषण और गंभीर मानसिक क्रूरता के आरोप लगाते हुए पुलिस का दरवाजा खटखटाया है.
बेंगलुरु के अमृतहल्ली पुलिस स्टेशन में एक ऐसा मामला दर्ज हुआ है, जिसे कानूनी जानकार 'रेयर' मान रहे हैं. एक शख्स ने अपनी पत्नी के खिलाफ शिकायत दर्ज कराते हुए आरोप लगाया है कि वह लंबे समय से यौन और मानसिक क्रूरता का शिकार हो रहा है. पति का दावा है कि उसकी पत्नी उसे अप्राकृतिक यौन कृत्यों के लिए मजबूर करती थी और विरोध करने पर उसे प्रताड़ित किया जाता था.
अश्लील वीडियो और 'यूनिक' डिमांड्स
अमृतहल्ली पुलिस स्टेशन में दर्ज शिकायत के अनुसार, पीड़ित पति ने आरोप लगाया कि उसकी पत्नी उसे अक्सर अश्लील वीडियो भेजती थी और उन वीडियो में दिखाए गए कृत्यों को दोहराने के लिए दबाव डालती थी. इतना ही नहीं, पति का दावा है कि पत्नी उसे अपनी सहेलियों के साथ शारीरिक संबंध बनाने के लिए भी मजबूर करती थी और अपनी 'इंटिमेट यादें' दोस्तों के साथ साझा करने पर जोर देती थी.
एक्स्ट्रा-मैरिटल अफेयर का विवाद
शिकायतकर्ता ने आरोप लगाया कि उसकी पत्नी ने खुलेआम स्वीकार किया है कि उसके पुराने और वर्तमान में अन्य पुरुषों के साथ संबंध हैं. पत्नी का कहना है कि पति की आर्थिक स्थिति उसकी 'हाई-फाई लाइफस्टाइल' को सपोर्ट नहीं कर सकती. पति ने पत्नी पर शराब की लत और दोस्तों के साथ घंटों समय बिताने का भी आरोप लगाया है.
    user_Ritesh chauksi
    Ritesh chauksi
    Dodda Ballapur, Bengaluru Rural•
    53 min ago
  • ದೇವನಹಳ್ಳಿ ಆಂಜನೇಯ ಸ್ವಾಮಿ ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಫೈಟ್. ಅಭಯಾ ವಿರಾಂಜನೇಯಸ್ವಾಮಿ ದೇಗುಲ ವಿಚಾರದಲ್ಲಿ ವಿವಾದ. ಎರಡು ಗುಂಪುಗಳ ನಡುವೆ ದೇಗುಲದ ಅಸ್ತಿತ್ವಕ್ಕಾಗಿ ಗುಂಪು ಘರ್ಷಣೆ. ಎರಡು ಕಡೆ ಗುಂಪು ಘರ್ಷಣೆ ಹಿನ್ನಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ. ದೇವನಹಳ್ಳಿ ತಾಲೂಕಿನ ವಿಜಯಪುರದ ಟೋಲ್ ಗೇಟ್ ಬಳಿ ಇರುವ ಅಭಯಾಂಜನೇಯ ದೇಗುಲ. ಅರ್ಚಕ ಲೋಕನಾಥಚಾರಿ ದೇವಾಲಯದ ನಿರ್ಮಾತೃ ಪ್ರಕಾಶ್ ಕಡೆಯವರ ನಡುವೆ ವಿವಾದ. ವಿಜಯಪುರ ಪಟ್ಟಣ ಪೊಲೀಸರಿಂದ ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ. ಲಾಠಿ ಬೀಸಿ ಗುಂಪುಗಳನ್ನ ಚದುರಿಸಿದ ವಿಜಯಪುರ ಇನ್ಸ್ ಪೆಕ್ಟರ್ ಪ್ರಶಾಂತ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ
    2
    ದೇವನಹಳ್ಳಿ
ಆಂಜನೇಯ ಸ್ವಾಮಿ ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಫೈಟ್.
ಅಭಯಾ ವಿರಾಂಜನೇಯಸ್ವಾಮಿ ದೇಗುಲ ವಿಚಾರದಲ್ಲಿ ವಿವಾದ.
ಎರಡು ಗುಂಪುಗಳ ನಡುವೆ ದೇಗುಲದ ಅಸ್ತಿತ್ವಕ್ಕಾಗಿ ಗುಂಪು ಘರ್ಷಣೆ.
ಎರಡು ಕಡೆ ಗುಂಪು ಘರ್ಷಣೆ ಹಿನ್ನಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ.
ದೇವನಹಳ್ಳಿ ತಾಲೂಕಿನ ವಿಜಯಪುರದ ಟೋಲ್ ಗೇಟ್ ಬಳಿ ಇರುವ ಅಭಯಾಂಜನೇಯ ದೇಗುಲ.
ಅರ್ಚಕ ಲೋಕನಾಥಚಾರಿ ದೇವಾಲಯದ ನಿರ್ಮಾತೃ ಪ್ರಕಾಶ್ ಕಡೆಯವರ ನಡುವೆ ವಿವಾದ.
ವಿಜಯಪುರ ಪಟ್ಟಣ ಪೊಲೀಸರಿಂದ ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ.
ಲಾಠಿ ಬೀಸಿ ಗುಂಪುಗಳನ್ನ ಚದುರಿಸಿದ ವಿಜಯಪುರ ಇನ್ಸ್ ಪೆಕ್ಟರ್ ಪ್ರಶಾಂತ್.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    21 hrs ago
  • ​ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್! ​ನಡೆದಿದ್ದೇನು ಗೊತ್ತಾ? ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    2
    ​ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು! ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!
​ನಡೆದಿದ್ದೇನು ಗೊತ್ತಾ? ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ.
​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ.
​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    39 min ago
  • *ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು!* *ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!* *​ನಡೆದಿದ್ದೇನು ಗೊತ್ತಾ?* ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ. ​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ವರದಿ:-ಸೀನ. ಟಿ ಚಿಂತಾಮಣಿ
    4
    *ಚಿಂತಾಮಣಿ:-ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದ ತಾಯಿ-ಮಗನಿಗೆ ಕಾದಿತ್ತು ಘೋರ ವಿಪತ್ತು!*
*ಹೌದು, ದೈವದ ದರ್ಶನಕ್ಕೆಂದು ಭಕ್ತಿಯಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಮೃತ್ಯುರೂಪಿಯಾಗಿ ಬಂದಿದೆ ಈ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್!*
*​ನಡೆದಿದ್ದೇನು ಗೊತ್ತಾ?*
ಬೂರಗಮಾಕಲಹಳ್ಳಿಯ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರ್ ತಿರುಗುತ್ತಿದ್ದ ವೇಳೆ, ಅತಿ ವೇಗವಾಗಿ ಬಂದ ಬೈಕ್ ನೇರವಾಗಿ ಕಾರಿಗೆ ಡಿಕ್ಕಿ ಹೊಡೆದಿದೆ. 
ಈ ಭೀಕರ ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಅವರಿಗೆ ತೀವ್ರ ಗಾಯಗಳಾಗಿದ್ದು, ಕಾರಿನ ಮುಂಭಾಗ ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ.
​ಸದ್ಯ ಗಾಯಾಳುಗಳಿಗೆ ಪಕ್ಕದಲ್ಲೇ ಇರುವ ಜಿ ಇ ಎಫ್ ಕಣ್ಣಿನ ಆಸ್ಪತ್ರೆಯಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ.
ಬೂರಗಮಾಕಲಹಳ್ಳಿ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಮಿತಿಮೀರುತ್ತಿವೆ. 
ಅತಿ ವೇಗದ ಚಾಲನೆಯೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗುತ್ತಿದೆ.
​ಈ ಘಟನೆಯಿಂದ ರೊಚ್ಚಿಗೆದ್ದಿರುವ ಸಾರ್ವಜನಿಕರು ಮತ್ತು ಸ್ಥಳೀಯರು, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆಯು ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ವರದಿ:-ಸೀನ. ಟಿ
ಚಿಂತಾಮಣಿ
    user_KRUTHI NEWS KANNADA
    KRUTHI NEWS KANNADA
    News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    47 min ago
  • ಡಾ. ಹೇಮಾವತಿ ವಿ ಹೆಗ್ಡೆ ಯವರ ಹುಟ್ಟುಹಬ್ಬದ ಪ್ರಯುಕ್ತ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಬಾಗೇಪಲ್ಲಿ:-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಾಗೇಪಲ್ಲಿ ತಾಲ್ಲೂಕು ಯೋಜನಾ ಕಚೇರಿ ವ್ಯಾಪ್ತಿಯ ವಾಸ್ತಲ್ಯ ಮಾಶಾಸನ ಪಡೆಯುತ್ತಿರುವ 71 ಫಲಾನುಭವಿ ಕುಟುಂಬಗಳಿಗೆ ಡಾ. ಹೇಮಾವತಿ ಹೆಗ್ಡೆಯವರ 75 ನೇ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಬಾಗೇಪಲ್ಲಿ ತಾಲ್ಲೂಕು ವಲಯದಲ್ಲಿ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಾದ ಅಂಜನಮ್ಮ,ನಾಗರತ್ನಮ್ಮ,ನಜರೀನಾ ಅವರಿಗೆ ಹಣ್ಣು ಹಂಪಲು ನೀಡಿ ಯೋಗ ಕ್ಷೇಮವನ್ನು ವಿಚಾರಿಸಿದ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಪ್ರವೀಣ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನ ವಿಕಾಸ ಯೋಜನೆಯ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ 75 ನೇ ಹುಟ್ಟಿದ ಹಬ್ಬದ ಪ್ರಯುಕ್ತ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಾದ ಬಾಗೇಪಲ್ಲಿ ತಾಲ್ಲೂಕು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಬಿಸಿ ಟ್ರಸ್ಟ್ ಬಾಗೇಪಲ್ಲಿ ಕ್ಷೇತ್ರದ ವ್ಯಾಪ್ತಿಯ ಸುಮಾರು 71 ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಹೇಮಾವತಿ ವಿ. ಹೆಗ್ಗಡೆ ಅವರು ಅಬಲೆಯರನ್ನು ಸಬಲರನ್ನಾಗಿ" ಸುವ, ಸೌಲಭ್ಯವಂಚಿತರಿಗಾಗಿ, ಬಡಮಹಿಳೆಯರಿಗಾಗಿ ಮನ ಮಿಡಿಯುವ, ದುರ್ಬಲ ವರ್ಗದ ಮಹಿಳೆಯರನ್ನು ಗುರುತಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಲವಾರು ಸಂಘ-ಸಂಸ್ಥೆಗಳನ್ನು ರಚಿಸುವ ಮೂಲಕ ನಾಡಿನಾದ್ಯಂತ ಸಾಮಾಜಿಕ, ಸಾಂಸ್ಕೃತಿಕ,ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನ ಮನ್ನಣೆ ಗಳಿಸಿದ ಸಾಕಾರಮೂತಿ೯ ಶ್ರೀಮತಿ ಹೇಮಾವತಿ ಅಮ್ಮನವರ ಜನ್ಮದಿನ ಪ್ರಯುಕ್ತ ಇಂದು ಸುಮಾರು71 ಸದಸ್ಯರಿಗೆ ಹಣ್ಣು ಹಂಪಲು ನೀಡಿ ಅವರ ಹುಟ್ಟಿದ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಎಂದು ಹೇಳಿದರು. ಈ ಸಂಧರ್ಭ ಜ್ಞಾನವಿಕಾಸ ಸಮನ್ವಯಧಿಕಾರಿ ಇಂದಿರಾ ಸೇವಾಪ್ರತಿನಿಧಿ ಲಕ್ಷ್ಮೀನರಸಮ್ಮ ರವರು ಉಪಸ್ಥಿತರಿದ್ದರು
    2
    ಡಾ. ಹೇಮಾವತಿ ವಿ ಹೆಗ್ಡೆ ಯವರ ಹುಟ್ಟುಹಬ್ಬದ ಪ್ರಯುಕ್ತ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ
ಬಾಗೇಪಲ್ಲಿ:-ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಾಗೇಪಲ್ಲಿ ತಾಲ್ಲೂಕು ಯೋಜನಾ ಕಚೇರಿ ವ್ಯಾಪ್ತಿಯ ವಾಸ್ತಲ್ಯ ಮಾಶಾಸನ ಪಡೆಯುತ್ತಿರುವ 71 ಫಲಾನುಭವಿ ಕುಟುಂಬಗಳಿಗೆ ಡಾ. ಹೇಮಾವತಿ ಹೆಗ್ಡೆಯವರ 75 ನೇ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಬಾಗೇಪಲ್ಲಿ ತಾಲ್ಲೂಕು
ವಲಯದಲ್ಲಿ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಾದ ಅಂಜನಮ್ಮ,ನಾಗರತ್ನಮ್ಮ,ನಜರೀನಾ ಅವರಿಗೆ ಹಣ್ಣು ಹಂಪಲು ನೀಡಿ ಯೋಗ ಕ್ಷೇಮವನ್ನು ವಿಚಾರಿಸಿದ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಪ್ರವೀಣ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತದನಂತರ ಮಾತನಾಡಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನ ವಿಕಾಸ ಯೋಜನೆಯ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ 75 ನೇ ಹುಟ್ಟಿದ ಹಬ್ಬದ ಪ್ರಯುಕ್ತ ಮಾಶಾಸನ ಪಡೆಯುವ ವಾತ್ಸಲ್ಯ ಸದಸ್ಯರಾದ ಬಾಗೇಪಲ್ಲಿ ತಾಲ್ಲೂಕು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಬಿಸಿ ಟ್ರಸ್ಟ್  ಬಾಗೇಪಲ್ಲಿ ಕ್ಷೇತ್ರದ ವ್ಯಾಪ್ತಿಯ ಸುಮಾರು 71 ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಹೇಮಾವತಿ ವಿ. ಹೆಗ್ಗಡೆ ಅವರು
ಅಬಲೆಯರನ್ನು ಸಬಲರನ್ನಾಗಿ" ಸುವ, ಸೌಲಭ್ಯವಂಚಿತರಿಗಾಗಿ, ಬಡಮಹಿಳೆಯರಿಗಾಗಿ ಮನ ಮಿಡಿಯುವ, ದುರ್ಬಲ ವರ್ಗದ ಮಹಿಳೆಯರನ್ನು ಗುರುತಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಲವಾರು ಸಂಘ-ಸಂಸ್ಥೆಗಳನ್ನು ರಚಿಸುವ ಮೂಲಕ ನಾಡಿನಾದ್ಯಂತ ಸಾಮಾಜಿಕ, ಸಾಂಸ್ಕೃತಿಕ,ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನ ಮನ್ನಣೆ ಗಳಿಸಿದ ಸಾಕಾರಮೂತಿ೯  ಶ್ರೀಮತಿ ಹೇಮಾವತಿ ಅಮ್ಮನವರ ಜನ್ಮದಿನ  ಪ್ರಯುಕ್ತ  ಇಂದು ಸುಮಾರು71 ಸದಸ್ಯರಿಗೆ ಹಣ್ಣು ಹಂಪಲು ನೀಡಿ ಅವರ ಹುಟ್ಟಿದ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಎಂದು ಹೇಳಿದರು.
ಈ ಸಂಧರ್ಭ ಜ್ಞಾನವಿಕಾಸ ಸಮನ್ವಯಧಿಕಾರಿ ಇಂದಿರಾ ಸೇವಾಪ್ರತಿನಿಧಿ 
ಲಕ್ಷ್ಮೀನರಸಮ್ಮ
ರವರು ಉಪಸ್ಥಿತರಿದ್ದರು
    user_Gopala Reddy R N
    Gopala Reddy R N
    Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    1 hr ago
  • ಕಾಫಿ ಶಾಪ್ ಬಳಿ ಡ್ರಗ್ಸ್ ಗಲಾಟೆ ಸಿಬ್ಬಂದಿ-ಯುವಕರ ನಡುವೆ ಹಲ್ಲೆ ಪ್ರಕರಣಮಂಗಳವಾರ ರಾತ್ರಿ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್ ಬಳಿ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪಿನ ನಡುವೆ ಗಲಾಟೆ ನಡೆದ ಘಟನೆ ಆತಂಕ ಮೂಡಿಸಿದೆ. ಹೋಟೆಲ್ ಬಳಿ ಕೆಲ ಯುವಕರು ಸಿರಿಂಜ್ ಮೂಲಕ ಮಾದಕ ದ್ರವ್ಯ ಸೇವಿಸುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಅವರನ್ನು ಪ್ರಶ್ನಿಸಿ ಹೊರಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಯುವಕರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಪ್ರತಿಯಾಗಿ ಸಿಬ್ಬಂದಿಯೂ ಹಲ್ಲೆ ನಡೆಸಿದ ಪರಿಣಾಮ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
    1
    ಕಾಫಿ ಶಾಪ್ ಬಳಿ ಡ್ರಗ್ಸ್ ಗಲಾಟೆ
ಸಿಬ್ಬಂದಿ-ಯುವಕರ ನಡುವೆ ಹಲ್ಲೆ ಪ್ರಕರಣಮಂಗಳವಾರ ರಾತ್ರಿ ಕೊತ್ತನೂರಿನ ಭಾರತಿ ಸಿಟಿಯ ಕಾಫಿ ಶಾಪ್ ಬಳಿ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಗುಂಪಿನ ನಡುವೆ ಗಲಾಟೆ ನಡೆದ ಘಟನೆ ಆತಂಕ ಮೂಡಿಸಿದೆ. ಹೋಟೆಲ್ ಬಳಿ ಕೆಲ ಯುವಕರು ಸಿರಿಂಜ್ ಮೂಲಕ ಮಾದಕ ದ್ರವ್ಯ ಸೇವಿಸುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಅವರನ್ನು ಪ್ರಶ್ನಿಸಿ ಹೊರಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಆಕ್ರೋಶಗೊಂಡ ಯುವಕರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಪ್ರತಿಯಾಗಿ ಸಿಬ್ಬಂದಿಯೂ ಹಲ್ಲೆ ನಡೆಸಿದ ಪರಿಣಾಮ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ನಿಷ್ಠೆಯಿಂದ ಕೆಲಸ ಮಾಡಿದರೆ ಬಿಜೆಪಿಗೆ ಗೆಲುವು ಖಚಿತ ಬಿಜೆಪಿ ಪಕ್ಷದ ಮುಖಂಡರು ಸಿ. ಮುನಿರಾಜು ಬಾಗೇಪಲ್ಲಿ:-ಕೇಂದ್ರದ ಯೋಜನೆಗಳನ್ನು ಪ್ರತಿ ಮನೆಗೂ ತೆರಳಿ ಧೈರ್ಯ ಮತ್ತು ಅಭಿಮಾನದಿಂದ ತಿಳಿಸಿ ನಿಷ್ಠೆಯಿಂದ ಕೆಲಸ ಮಾಡಿದರೆ ಬಿಜೆಪಿಗೆ ಗೆಲುವು ಖಚಿತ ಬಿಜೆಪಿ ಪಕ್ಷದ ಮುಖಂಡರು ಸಿ. ಮುನಿರಾಜು ಅವರು ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದರು. ಮುಂಬರುವ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಸಾಂಸ್ಥಿಕ ಬಲವರ್ಧನೆಗಾಗಿ ಬುಧವಾರ ಬಿಎಲ್‌ಎ–2 ಕಾರ್ಯಗಾರ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದಕ್ಕೂ ಮುನ್ನ ಬಿಜೆಪಿ ನಾಯಕರು ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಹಾಗೂ ಪಂಡಿತ ದೀನದಯಾಳ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಬಿಜೆಪಿ ಮುಖಂಡ ಸಿ.ಮುನಿರಾಜು ಮಾತನಾಡಿ, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ, ಪಾರದರ್ಶಕವಾಗಿ ಮತದಾನ ನಡೆಯುವಂತೆ ನೋಡಿಕೊಳ್ಳುವುದು ಪಕ್ಷದ ಪ್ರಮುಖ ಆದ್ಯತೆ. ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸಲು ಕಾರ್ಯಕರ್ತರು ನಿಗಾವಹಿಸಬೇಕು ಎಂದರು. ವಿಶೇಷವಾಗಿ ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕುವುದು, ವಲಸೆ ಹೋದವರ, ವಿಳಾಸ ಬದಲಾವಣೆ ಹಾಗೂ ಹೊಸ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡಬೇಕು. ಒಂದಕ್ಕಿಂತ ಹೆಚ್ಚು ಕಡೆ ಹೆಸರಿರುವ ಮತದಾರರನ್ನು ಗುರುತಿಸಿ ಪಟ್ಟಿಯನ್ನು ಸರಿಪಡಿಸುವತ್ತ ಗಮನಹರಿಸಬೇಕೆಂದು ಮನವಿ ಮಾಡಿದರು. ರಾಜ್ಯದಲ್ಲಿ ನಾ-ಕೊಡೆ ನೀ-ಬಿಡೆ ಎಂಬ ಅನಿಶ್ಚಿತತೆ ಸರ್ಕಾರದಲ್ಲಿ ಸೃಜನ ಪಕ್ಷಪಾತ, ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಸ್ಥಿರ ಸರ್ಕಾರ ಬರಬೇಕಾದರೆ ಬಿಎಲ್‌ಎ ಕಾರ್ಯಕರ್ತರು ಯಾವುದೇ ಆಮಿಷಕ್ಕೆ ಒಳಗಾಗದೆ ಸೇನಾನಿಗಳಂತೆ ನಿರಂತರ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಈ ಅಭಿಯಾನದ ಮೂಲಕ ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸುವ ಮತ್ತು ಅನರ್ಹರನ್ನು ಹೊರಹಾಕುವ ಮೂಲಕ 2028ರ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ವಿಧಾನ ಸಭೆ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದು ಹೇಳಿದರು. ಬಾಗೇಪಲ್ಲಿ ಮಂಡಲಾದ್ಯಕ್ಷ ಆರ್.ಪ್ರತಾಪ್ ಮಾತನಾಡಿ 70 ವರ್ಷ ಕಾಂಗ್ರೆಸ್ ಮಾಡದ ಕೆಲಸವನ್ನು ಮೋದಿ ಕೇವಲ 16 ವರ್ಷದಲ್ಲಿ ಮಾಡಿ ತೋರಿಸಿದ್ದಾನೆ. ಪ್ರಪಂಚದ ಶ್ರೀಮಂತ ರಾಷ್ಟ್ರಗಳಲ್ಲಿ ಭಾರತ ಮುಂಚೂಣಿಯಲ್ಲಿದೆ. ಬಿಜೆಪಿ ಜಗತ್ತಿನ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ದೇಶದ ದಿಕ್ಕನ್ನೇ ಬದಲಿಸಿರುವ ಬಿಜೆಪಿಯಲ್ಲಿ ನಾವೆಲ್ಲ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವುದು ನಮ್ಮ ಹೆಮ್ಮೆ ಎಂದು ಭಾವಿಸಬೇಕೆಂದರು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ಯಾವಾಗ ಬೇಕಾದರೂ ಬರಬಹುದು. ಕಾರ್ಯಕರ್ತರು ಯಾವಾಗಲೂ ಸನ್ನದ್ಧರಾಗಬೇಕು. ಪಕ್ಷ ಯಾರನ್ನೇ ಗುರುತಿಸಿ ಅಭ್ಯರ್ಥಿಯನ್ನಾಗಿಸಿದರೂ ಅವರನ್ನು ಗೆಲ್ಲಿಸಬೇಕೆಂದರು. ಸಭೆಯಲ್ಲಿ ಕಾರ್ಯಕ್ರಮದ ಬಿಎಲ್‌ಎ 2 ಸಹ ಉಸ್ತುವಾರಿ ಎಂ.ಕೆ.ವಾಸುದೇವ್,ಮಾತನಾಡಿ ಮಾತನಾಡಿ, ಪಕ್ಷದ ಅಡಿಪಾಯವೇ ಕಾರ್ಯಕರ್ತರು. ಮುಂಬರುವ ಸವಾಲುಗಳನ್ನು ಎದುರಿಸಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಬೇಕು. ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಬ್ಬರ ಮನೆಮನೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ತಳಮಟ್ಟದಿಂದ ಹಿಡಿದು ರಾಷ್ಟ್ರ ಮಟ್ಟದವರೆಗೆ ಶ್ರಮಿಸುವ ಕಾರ್ಯಕರ್ತರನ್ನು ಗುರುತಿಸುವ ಏಕೈಕ ಪಕ್ಷ ಬಿಜೆಪಿ. ಪಕ್ಷ ಆಯೋಜಿಸುವ ತರಬೇತಿ, ಮಾಹಿತಿ ಕಾರ್ಯಾಗಾರ, ಪ್ರಶಿಕ್ಷಣ ಶಿಬಿರಗಳಲ್ಲಿ ಹೆಚ್ಚು ಪಾಲ್ಗೊಳ್ಳುವುದರಿಂದ ಪಕ್ಷದ ಮೇಲಿನ ಬದ್ಧತೆ ಬಲವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಗುಡಿಬಂಡೆ ಮಂಡಲಾ ಅದ್ಯಕ್ಷ ಗೆಂಗಿರೆಡ್ಡಿ ಹಾಗೂ ಬಿಜೆಪಿ ಮಹಿಳಾ ಮುಖಂಡರು ಹಾಜರಿದ್ದರು.
    2
    ನಿಷ್ಠೆಯಿಂದ ಕೆಲಸ ಮಾಡಿದರೆ ಬಿಜೆಪಿಗೆ ಗೆಲುವು ಖಚಿತ ಬಿಜೆಪಿ ಪಕ್ಷದ ಮುಖಂಡರು ಸಿ. ಮುನಿರಾಜು
ಬಾಗೇಪಲ್ಲಿ:-ಕೇಂದ್ರದ ಯೋಜನೆಗಳನ್ನು ಪ್ರತಿ ಮನೆಗೂ ತೆರಳಿ ಧೈರ್ಯ ಮತ್ತು ಅಭಿಮಾನದಿಂದ ತಿಳಿಸಿ ನಿಷ್ಠೆಯಿಂದ ಕೆಲಸ ಮಾಡಿದರೆ ಬಿಜೆಪಿಗೆ ಗೆಲುವು ಖಚಿತ ಬಿಜೆಪಿ ಪಕ್ಷದ ಮುಖಂಡರು ಸಿ. ಮುನಿರಾಜು ಅವರು ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದರು.
ಮುಂಬರುವ ಚುನಾವಣೆ ಹಿನ್ನೆಲೆ ಬಿಜೆಪಿ ತನ್ನ ಸಾಂಸ್ಥಿಕ ಬಲವರ್ಧನೆಗಾಗಿ ಬುಧವಾರ  ಬಿಎಲ್‌ಎ–2 ಕಾರ್ಯಗಾರ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ 
ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ
ಹಮ್ಮಿಕೊಳ್ಳಲಾಗಿತ್ತು.
ಇದಕ್ಕೂ ಮುನ್ನ ಬಿಜೆಪಿ ನಾಯಕರು ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಹಾಗೂ ಪಂಡಿತ ದೀನದಯಾಳ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ಬಿಜೆಪಿ ಮುಖಂಡ ಸಿ.ಮುನಿರಾಜು ಮಾತನಾಡಿ, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ, ಪಾರದರ್ಶಕವಾಗಿ ಮತದಾನ ನಡೆಯುವಂತೆ ನೋಡಿಕೊಳ್ಳುವುದು ಪಕ್ಷದ ಪ್ರಮುಖ ಆದ್ಯತೆ. ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸಲು ಕಾರ್ಯಕರ್ತರು ನಿಗಾವಹಿಸಬೇಕು ಎಂದರು.
ವಿಶೇಷವಾಗಿ ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕುವುದು, ವಲಸೆ ಹೋದವರ, ವಿಳಾಸ ಬದಲಾವಣೆ ಹಾಗೂ ಹೊಸ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡಬೇಕು. ಒಂದಕ್ಕಿಂತ ಹೆಚ್ಚು ಕಡೆ ಹೆಸರಿರುವ ಮತದಾರರನ್ನು ಗುರುತಿಸಿ ಪಟ್ಟಿಯನ್ನು ಸರಿಪಡಿಸುವತ್ತ ಗಮನಹರಿಸಬೇಕೆಂದು ಮನವಿ ಮಾಡಿದರು.
ರಾಜ್ಯದಲ್ಲಿ ನಾ-ಕೊಡೆ ನೀ-ಬಿಡೆ ಎಂಬ ಅನಿಶ್ಚಿತತೆ ಸರ್ಕಾರದಲ್ಲಿ ಸೃಜನ ಪಕ್ಷಪಾತ, ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಸ್ಥಿರ ಸರ್ಕಾರ ಬರಬೇಕಾದರೆ ಬಿಎಲ್‌ಎ ಕಾರ್ಯಕರ್ತರು ಯಾವುದೇ ಆಮಿಷಕ್ಕೆ ಒಳಗಾಗದೆ ಸೇನಾನಿಗಳಂತೆ ನಿರಂತರ ಮತದಾರ ಪಟ್ಟಿ  ಪರಿಷ್ಕರಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಈ ಅಭಿಯಾನದ ಮೂಲಕ ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸುವ ಮತ್ತು ಅನರ್ಹರನ್ನು ಹೊರಹಾಕುವ ಮೂಲಕ 2028ರ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ವಿಧಾನ ಸಭೆ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದು ಹೇಳಿದರು.
ಬಾಗೇಪಲ್ಲಿ ಮಂಡಲಾದ್ಯಕ್ಷ ಆರ್.ಪ್ರತಾಪ್ ಮಾತನಾಡಿ 70 ವರ್ಷ ಕಾಂಗ್ರೆಸ್ ಮಾಡದ ಕೆಲಸವನ್ನು ಮೋದಿ ಕೇವಲ 16 ವರ್ಷದಲ್ಲಿ ಮಾಡಿ ತೋರಿಸಿದ್ದಾನೆ. ಪ್ರಪಂಚದ ಶ್ರೀಮಂತ ರಾಷ್ಟ್ರಗಳಲ್ಲಿ ಭಾರತ ಮುಂಚೂಣಿಯಲ್ಲಿದೆ. ಬಿಜೆಪಿ ಜಗತ್ತಿನ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ದೇಶದ ದಿಕ್ಕನ್ನೇ ಬದಲಿಸಿರುವ ಬಿಜೆಪಿಯಲ್ಲಿ ನಾವೆಲ್ಲ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವುದು ನಮ್ಮ ಹೆಮ್ಮೆ ಎಂದು ಭಾವಿಸಬೇಕೆಂದರು.
ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ಯಾವಾಗ ಬೇಕಾದರೂ ಬರಬಹುದು. ಕಾರ್ಯಕರ್ತರು ಯಾವಾಗಲೂ ಸನ್ನದ್ಧರಾಗಬೇಕು. ಪಕ್ಷ ಯಾರನ್ನೇ ಗುರುತಿಸಿ ಅಭ್ಯರ್ಥಿಯನ್ನಾಗಿಸಿದರೂ ಅವರನ್ನು ಗೆಲ್ಲಿಸಬೇಕೆಂದರು.
ಸಭೆಯಲ್ಲಿ ಕಾರ್ಯಕ್ರಮದ ಬಿಎಲ್‌ಎ 2 ಸಹ ಉಸ್ತುವಾರಿ ಎಂ.ಕೆ.ವಾಸುದೇವ್,ಮಾತನಾಡಿ
ಮಾತನಾಡಿ, ಪಕ್ಷದ ಅಡಿಪಾಯವೇ ಕಾರ್ಯಕರ್ತರು. ಮುಂಬರುವ ಸವಾಲುಗಳನ್ನು ಎದುರಿಸಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಬೇಕು. ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಬ್ಬರ ಮನೆಮನೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ತಳಮಟ್ಟದಿಂದ ಹಿಡಿದು ರಾಷ್ಟ್ರ ಮಟ್ಟದವರೆಗೆ ಶ್ರಮಿಸುವ ಕಾರ್ಯಕರ್ತರನ್ನು ಗುರುತಿಸುವ ಏಕೈಕ ಪಕ್ಷ ಬಿಜೆಪಿ. ಪಕ್ಷ ಆಯೋಜಿಸುವ ತರಬೇತಿ, ಮಾಹಿತಿ ಕಾರ್ಯಾಗಾರ, ಪ್ರಶಿಕ್ಷಣ ಶಿಬಿರಗಳಲ್ಲಿ ಹೆಚ್ಚು ಪಾಲ್ಗೊಳ್ಳುವುದರಿಂದ ಪಕ್ಷದ ಮೇಲಿನ ಬದ್ಧತೆ ಬಲವಾಗುತ್ತದೆ ಎಂದರು.
ಈ  ಸಂದರ್ಭದಲ್ಲಿ ಗುಡಿಬಂಡೆ ಮಂಡಲಾ ಅದ್ಯಕ್ಷ ಗೆಂಗಿರೆಡ್ಡಿ ಹಾಗೂ ಬಿಜೆಪಿ ಮಹಿಳಾ ಮುಖಂಡರು ಹಾಜರಿದ್ದರು.
    user_Gopala Reddy R N
    Gopala Reddy R N
    Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.