ಪ್ರಯಾಣಿಕರೇ ಎಚ್ಚರ! ಗೊರಗುಂಟೆಪಾಳ್ಯದಲ್ಲಿ ಸೌತೆಕಾಯಿ, ಹಣ್ಣು ಮಾರಾಟದ ಹೆಸರಲ್ಲಿ ನಡೀತಿದೆಯೇ ವಂಚನೆ? ಮೆಜೆಸ್ಟಿಕ್ನಿಂದ ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರೇ ಗಮನಿಸಿ. ನಿಮ್ಮ ಪ್ರಯಾಣದ ಹಾದಿಯಲ್ಲಿ ಬಾಯಾರಿಕೆ ಅಥವಾ ಹಸಿವು ನೀಗಿಸಿಕೊಳ್ಳಲು ನೀವು ಕೊಳ್ಳುವ ಹಣ್ಣುಗಳು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! ವ್ಯಾಪಾರಿಗಳು ಕೊಳೆತ ಸ್ಥಿತಿಯಲ್ಲಿರುವ ಸೌತೆಕಾಯಿ ಹಾಗೂ ಅನಾನಸ್ ಹಣ್ಣುಗಳನ್ನು ಆಯ್ದುಕೊಳ್ಳುತ್ತಾರೆ. ಇವುಗಳ ಕೆಟ್ಟ ಭಾಗಗಳನ್ನು ಕತ್ತರಿಸಿ ಹಾಕಿ, ಉಳಿದ ಭಾಗಗಳನ್ನು ಸಣ್ಣ ತುಂಡುಗಳಾಗಿ ಮಾಡಿ ಆಕರ್ಷಕವಾಗಿ ಕಾಣುವಂತೆ ಪ್ಲಾಸ್ಟಿಕ್ ಕವರ್ಗಳಲ್ಲಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ಈ ಹಣ್ಣುಗಳನ್ನು ಮಾರಾಟ ಮಾಡುವವರು ಕನಿಷ್ಠ ನೈರ್ಮಲ್ಯದ ಜ್ಞಾನವನ್ನೂ ಹೊಂದಿರುವುದಿಲ್ಲ. ಶೌಚಾಲಯದ ಬಳಕೆಯ ನಂತರ ಸರಿಯಾಗಿ ಕೈ ತೊಳೆಯದೆ, ಅದೇ ಅಶುದ್ಧ ಕೈಗಳಿಂದ ಹಣ್ಣುಗಳನ್ನು ಕತ್ತರಿಸಿ ಪ್ಯಾಕ್ ಮಾಡಲಾಗುತ್ತಿದೆ. ಇದು ನೇರವಾಗಿ ಮಾರಕ ಬ್ಯಾಕ್ಟೀರಿಯಾಗಳು ಮತ್ತು ವೈರಸ್ಗಳು ಹರಡಲು ಕಾರಣವಾಗುತ್ತಿದೆ.ಪ್ಲಾಸ್ಟಿಕ್ ಕವರ್ಗಳಲ್ಲಿ ದೀರ್ಘಕಾಲ ಇಟ್ಟಿರುವ ಇಂತಹ ಅಶುದ್ಧ ಹಣ್ಣುಗಳನ್ನು ಸೇವಿಸುವುದರಿಂದ ಕಾಲರಾ, ಟೈಫಾಯ್ಡ್, ವಾಂತಿ-ಭೇದಿ ಹಾಗೂ ಫುಡ್ ಪಾಯಿಸನಿಂಗ್ (Food Poisoning) ಆಗುವ ಸಾಧ್ಯತೆ ದಟ್ಟವಾಗಿದೆ.ದೂರದ ಪ್ರಯಾಣದ ಸಮಯದಲ್ಲಿ ಇದು ಪ್ರಯಾಣಿಕರನ್ನು ತೀವ್ರ ಸಂಕಷ್ಟಕ್ಕೆ ಈಡುಮಾಡಬಹುದು. ಕೇವಲ 2 ರೂಪಾಯಿ ಬೆಲೆಗೂ ಯೋಗ್ಯವಲ್ಲದ ಇಂತಹ ಕಳಪೆ ಗುಣಮಟ್ಟದ ಹಣ್ಣಿನ ಪ್ಯಾಕೆಟ್ಗಳನ್ನು ಕಿಟಕಿಯ ಬಳಿ 20 ರಿಂದ 30 ರೂಪಾಯಿಗಳಿಗೆ ಮಾರಾಟ ಮಾಡುವ ಮೂಲಕ ಸಾರ್ವಜನಿಕರನ್ನು ಆರ್ಥಿಕವಾಗಿ ಲೂಟಿ ಮಾಡಲಾಗುತ್ತಿದೆ. ರಸ್ತೆ ಬದಿಯಲ್ಲಿ ಅಥವಾ ಸಿಗ್ನಲ್ಗಳಲ್ಲಿ ಕತ್ತರಿಸಿ ಪ್ಲಾಸ್ಟಿಕ್ ಕವರ್ನಲ್ಲಿ ಪ್ಯಾಕ್ ಮಾಡಿದ ಹಣ್ಣುಗಳನ್ನು ಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸಿ.ಸಾಧ್ಯವಾದಷ್ಟು ಮನೆಯಿಂದಲೇ ಪೂರ್ತಿಯಾದ ಹಣ್ಣುಗಳನ್ನು ಅಥವಾ ಶುದ್ಧವಾದ ಕುಡಿಯುವ ನೀರನ್ನು ಕೊಂಡೊಯ್ಯುವುದು ಉತ್ತಮ. ನಿಮ್ಮ ಸಹ-ಪ್ರಯಾಣಿಕರು ಇಂತಹ ಹಣ್ಣುಗಳನ್ನು ಕೊಳ್ಳುತ್ತಿದ್ದರೆ, ಅವರಿಗೆ ಆಗಬಹುದಾದ ಆರೋಗ್ಯದ ಅಪಾಯದ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿ. ಹೊಟ್ಟೆಪಾಡಿಗಾಗಿ ವ್ಯಾಪಾರ ಮಾಡುವುದು ತಪ್ಪಲ್ಲ, ಆದರೆ ಅಶುದ್ಧ ಆಹಾರವನ್ನು ಮಾರಿ ಜನರ ಪ್ರಾಣದ ಜೊತೆ ಚೆಲ್ಲಾಟವಾಡುವುದು ಖಂಡನೀಯ. ಸಾರ್ವಜನಿಕರಾದ ನಾವು ಎಚ್ಚೆತ್ತುಕೊಂಡಾಗ ಮಾತ್ರ ಇಂತಹ ವಂಚನೆಗಳಿಗೆ ಅಂತಿಮ ತೆರೆ ಎಳೆಯಲು ಸಾಧ್ಯ. ನ್ಯೂಸ್ : ಅರ್ಜುನ್ ಬ್ಯಾಡರಹಳ್ಳಿ 🙏
ಪ್ರಯಾಣಿಕರೇ ಎಚ್ಚರ! ಗೊರಗುಂಟೆಪಾಳ್ಯದಲ್ಲಿ ಸೌತೆಕಾಯಿ, ಹಣ್ಣು ಮಾರಾಟದ ಹೆಸರಲ್ಲಿ ನಡೀತಿದೆಯೇ ವಂಚನೆ? ಮೆಜೆಸ್ಟಿಕ್ನಿಂದ ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರೇ ಗಮನಿಸಿ. ನಿಮ್ಮ ಪ್ರಯಾಣದ ಹಾದಿಯಲ್ಲಿ ಬಾಯಾರಿಕೆ ಅಥವಾ ಹಸಿವು ನೀಗಿಸಿಕೊಳ್ಳಲು ನೀವು ಕೊಳ್ಳುವ ಹಣ್ಣುಗಳು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! ವ್ಯಾಪಾರಿಗಳು ಕೊಳೆತ ಸ್ಥಿತಿಯಲ್ಲಿರುವ ಸೌತೆಕಾಯಿ ಹಾಗೂ ಅನಾನಸ್ ಹಣ್ಣುಗಳನ್ನು ಆಯ್ದುಕೊಳ್ಳುತ್ತಾರೆ. ಇವುಗಳ ಕೆಟ್ಟ ಭಾಗಗಳನ್ನು ಕತ್ತರಿಸಿ ಹಾಕಿ, ಉಳಿದ ಭಾಗಗಳನ್ನು ಸಣ್ಣ ತುಂಡುಗಳಾಗಿ ಮಾಡಿ ಆಕರ್ಷಕವಾಗಿ ಕಾಣುವಂತೆ ಪ್ಲಾಸ್ಟಿಕ್ ಕವರ್ಗಳಲ್ಲಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ಈ ಹಣ್ಣುಗಳನ್ನು ಮಾರಾಟ ಮಾಡುವವರು ಕನಿಷ್ಠ ನೈರ್ಮಲ್ಯದ ಜ್ಞಾನವನ್ನೂ ಹೊಂದಿರುವುದಿಲ್ಲ. ಶೌಚಾಲಯದ ಬಳಕೆಯ ನಂತರ ಸರಿಯಾಗಿ ಕೈ ತೊಳೆಯದೆ, ಅದೇ ಅಶುದ್ಧ ಕೈಗಳಿಂದ ಹಣ್ಣುಗಳನ್ನು ಕತ್ತರಿಸಿ ಪ್ಯಾಕ್ ಮಾಡಲಾಗುತ್ತಿದೆ. ಇದು ನೇರವಾಗಿ ಮಾರಕ ಬ್ಯಾಕ್ಟೀರಿಯಾಗಳು ಮತ್ತು ವೈರಸ್ಗಳು ಹರಡಲು ಕಾರಣವಾಗುತ್ತಿದೆ.ಪ್ಲಾಸ್ಟಿಕ್ ಕವರ್ಗಳಲ್ಲಿ ದೀರ್ಘಕಾಲ ಇಟ್ಟಿರುವ ಇಂತಹ ಅಶುದ್ಧ ಹಣ್ಣುಗಳನ್ನು ಸೇವಿಸುವುದರಿಂದ ಕಾಲರಾ, ಟೈಫಾಯ್ಡ್, ವಾಂತಿ-ಭೇದಿ ಹಾಗೂ ಫುಡ್ ಪಾಯಿಸನಿಂಗ್ (Food Poisoning) ಆಗುವ ಸಾಧ್ಯತೆ ದಟ್ಟವಾಗಿದೆ.ದೂರದ ಪ್ರಯಾಣದ ಸಮಯದಲ್ಲಿ ಇದು ಪ್ರಯಾಣಿಕರನ್ನು ತೀವ್ರ ಸಂಕಷ್ಟಕ್ಕೆ ಈಡುಮಾಡಬಹುದು. ಕೇವಲ 2 ರೂಪಾಯಿ ಬೆಲೆಗೂ ಯೋಗ್ಯವಲ್ಲದ ಇಂತಹ ಕಳಪೆ ಗುಣಮಟ್ಟದ ಹಣ್ಣಿನ ಪ್ಯಾಕೆಟ್ಗಳನ್ನು ಕಿಟಕಿಯ ಬಳಿ 20 ರಿಂದ 30 ರೂಪಾಯಿಗಳಿಗೆ ಮಾರಾಟ ಮಾಡುವ ಮೂಲಕ ಸಾರ್ವಜನಿಕರನ್ನು ಆರ್ಥಿಕವಾಗಿ ಲೂಟಿ ಮಾಡಲಾಗುತ್ತಿದೆ. ರಸ್ತೆ ಬದಿಯಲ್ಲಿ ಅಥವಾ ಸಿಗ್ನಲ್ಗಳಲ್ಲಿ ಕತ್ತರಿಸಿ ಪ್ಲಾಸ್ಟಿಕ್ ಕವರ್ನಲ್ಲಿ ಪ್ಯಾಕ್ ಮಾಡಿದ ಹಣ್ಣುಗಳನ್ನು ಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸಿ.ಸಾಧ್ಯವಾದಷ್ಟು ಮನೆಯಿಂದಲೇ ಪೂರ್ತಿಯಾದ ಹಣ್ಣುಗಳನ್ನು ಅಥವಾ ಶುದ್ಧವಾದ ಕುಡಿಯುವ ನೀರನ್ನು ಕೊಂಡೊಯ್ಯುವುದು ಉತ್ತಮ. ನಿಮ್ಮ ಸಹ-ಪ್ರಯಾಣಿಕರು ಇಂತಹ ಹಣ್ಣುಗಳನ್ನು ಕೊಳ್ಳುತ್ತಿದ್ದರೆ, ಅವರಿಗೆ ಆಗಬಹುದಾದ ಆರೋಗ್ಯದ ಅಪಾಯದ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿ. ಹೊಟ್ಟೆಪಾಡಿಗಾಗಿ ವ್ಯಾಪಾರ ಮಾಡುವುದು ತಪ್ಪಲ್ಲ, ಆದರೆ ಅಶುದ್ಧ ಆಹಾರವನ್ನು ಮಾರಿ ಜನರ ಪ್ರಾಣದ ಜೊತೆ ಚೆಲ್ಲಾಟವಾಡುವುದು ಖಂಡನೀಯ. ಸಾರ್ವಜನಿಕರಾದ ನಾವು ಎಚ್ಚೆತ್ತುಕೊಂಡಾಗ ಮಾತ್ರ ಇಂತಹ ವಂಚನೆಗಳಿಗೆ ಅಂತಿಮ ತೆರೆ ಎಳೆಯಲು ಸಾಧ್ಯ. ನ್ಯೂಸ್ : ಅರ್ಜುನ್ ಬ್ಯಾಡರಹಳ್ಳಿ 🙏
- ಮೆಜೆಸ್ಟಿಕ್ನಿಂದ ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರೇ ಗಮನಿಸಿ. ನಿಮ್ಮ ಪ್ರಯಾಣದ ಹಾದಿಯಲ್ಲಿ ಬಾಯಾರಿಕೆ ಅಥವಾ ಹಸಿವು ನೀಗಿಸಿಕೊಳ್ಳಲು ನೀವು ಕೊಳ್ಳುವ ಹಣ್ಣುಗಳು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! ವ್ಯಾಪಾರಿಗಳು ಕೊಳೆತ ಸ್ಥಿತಿಯಲ್ಲಿರುವ ಸೌತೆಕಾಯಿ ಹಾಗೂ ಅನಾನಸ್ ಹಣ್ಣುಗಳನ್ನು ಆಯ್ದುಕೊಳ್ಳುತ್ತಾರೆ. ಇವುಗಳ ಕೆಟ್ಟ ಭಾಗಗಳನ್ನು ಕತ್ತರಿಸಿ ಹಾಕಿ, ಉಳಿದ ಭಾಗಗಳನ್ನು ಸಣ್ಣ ತುಂಡುಗಳಾಗಿ ಮಾಡಿ ಆಕರ್ಷಕವಾಗಿ ಕಾಣುವಂತೆ ಪ್ಲಾಸ್ಟಿಕ್ ಕವರ್ಗಳಲ್ಲಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ಈ ಹಣ್ಣುಗಳನ್ನು ಮಾರಾಟ ಮಾಡುವವರು ಕನಿಷ್ಠ ನೈರ್ಮಲ್ಯದ ಜ್ಞಾನವನ್ನೂ ಹೊಂದಿರುವುದಿಲ್ಲ. ಶೌಚಾಲಯದ ಬಳಕೆಯ ನಂತರ ಸರಿಯಾಗಿ ಕೈ ತೊಳೆಯದೆ, ಅದೇ ಅಶುದ್ಧ ಕೈಗಳಿಂದ ಹಣ್ಣುಗಳನ್ನು ಕತ್ತರಿಸಿ ಪ್ಯಾಕ್ ಮಾಡಲಾಗುತ್ತಿದೆ. ಇದು ನೇರವಾಗಿ ಮಾರಕ ಬ್ಯಾಕ್ಟೀರಿಯಾಗಳು ಮತ್ತು ವೈರಸ್ಗಳು ಹರಡಲು ಕಾರಣವಾಗುತ್ತಿದೆ.ಪ್ಲಾಸ್ಟಿಕ್ ಕವರ್ಗಳಲ್ಲಿ ದೀರ್ಘಕಾಲ ಇಟ್ಟಿರುವ ಇಂತಹ ಅಶುದ್ಧ ಹಣ್ಣುಗಳನ್ನು ಸೇವಿಸುವುದರಿಂದ ಕಾಲರಾ, ಟೈಫಾಯ್ಡ್, ವಾಂತಿ-ಭೇದಿ ಹಾಗೂ ಫುಡ್ ಪಾಯಿಸನಿಂಗ್ (Food Poisoning) ಆಗುವ ಸಾಧ್ಯತೆ ದಟ್ಟವಾಗಿದೆ.ದೂರದ ಪ್ರಯಾಣದ ಸಮಯದಲ್ಲಿ ಇದು ಪ್ರಯಾಣಿಕರನ್ನು ತೀವ್ರ ಸಂಕಷ್ಟಕ್ಕೆ ಈಡುಮಾಡಬಹುದು. ಕೇವಲ 2 ರೂಪಾಯಿ ಬೆಲೆಗೂ ಯೋಗ್ಯವಲ್ಲದ ಇಂತಹ ಕಳಪೆ ಗುಣಮಟ್ಟದ ಹಣ್ಣಿನ ಪ್ಯಾಕೆಟ್ಗಳನ್ನು ಕಿಟಕಿಯ ಬಳಿ 20 ರಿಂದ 30 ರೂಪಾಯಿಗಳಿಗೆ ಮಾರಾಟ ಮಾಡುವ ಮೂಲಕ ಸಾರ್ವಜನಿಕರನ್ನು ಆರ್ಥಿಕವಾಗಿ ಲೂಟಿ ಮಾಡಲಾಗುತ್ತಿದೆ. ರಸ್ತೆ ಬದಿಯಲ್ಲಿ ಅಥವಾ ಸಿಗ್ನಲ್ಗಳಲ್ಲಿ ಕತ್ತರಿಸಿ ಪ್ಲಾಸ್ಟಿಕ್ ಕವರ್ನಲ್ಲಿ ಪ್ಯಾಕ್ ಮಾಡಿದ ಹಣ್ಣುಗಳನ್ನು ಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸಿ.ಸಾಧ್ಯವಾದಷ್ಟು ಮನೆಯಿಂದಲೇ ಪೂರ್ತಿಯಾದ ಹಣ್ಣುಗಳನ್ನು ಅಥವಾ ಶುದ್ಧವಾದ ಕುಡಿಯುವ ನೀರನ್ನು ಕೊಂಡೊಯ್ಯುವುದು ಉತ್ತಮ. ನಿಮ್ಮ ಸಹ-ಪ್ರಯಾಣಿಕರು ಇಂತಹ ಹಣ್ಣುಗಳನ್ನು ಕೊಳ್ಳುತ್ತಿದ್ದರೆ, ಅವರಿಗೆ ಆಗಬಹುದಾದ ಆರೋಗ್ಯದ ಅಪಾಯದ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿ. ಹೊಟ್ಟೆಪಾಡಿಗಾಗಿ ವ್ಯಾಪಾರ ಮಾಡುವುದು ತಪ್ಪಲ್ಲ, ಆದರೆ ಅಶುದ್ಧ ಆಹಾರವನ್ನು ಮಾರಿ ಜನರ ಪ್ರಾಣದ ಜೊತೆ ಚೆಲ್ಲಾಟವಾಡುವುದು ಖಂಡನೀಯ. ಸಾರ್ವಜನಿಕರಾದ ನಾವು ಎಚ್ಚೆತ್ತುಕೊಂಡಾಗ ಮಾತ್ರ ಇಂತಹ ವಂಚನೆಗಳಿಗೆ ಅಂತಿಮ ತೆರೆ ಎಳೆಯಲು ಸಾಧ್ಯ. ನ್ಯೂಸ್ : ಅರ್ಜುನ್ ಬ್ಯಾಡರಹಳ್ಳಿ 🙏1
- ಜಾನುಕೊಂಡ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಿಡಿಓ ಗೆ ಸದಸ್ಯನೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದು ವೀಡಿಯೋ ವೈರಲ್ ಆಗಿದೆ. ಇನ್ನೂ ಜಾನುಕೊಂಡ ಗ್ರಾಮ ಪಂಚಾಯತಿ ಸದಸ್ಯ ಚಂದ್ರು ಅವರು ಜಾನುಕೊಂಡ ಗ್ರಾಮ ಪಂಚಾಯಿತಿ ಪಿಡಿಒ ಮುಕುಂದ ಅವರಿಗೆ ಅಸಂಭ್ಯವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ವಿಡಿಯೋ ಎಲ್ಲೆಡೆ ವೈರಲಾಗುತ್ತಿದೆ1
- ಚತ್ರದುರ್ಗ :ಮುಖ್ಯಮಂತ್ರಿ ಸಿದ್ದರಾಮಯ್ಯ ಇವರನ್ನ ಭೇಟಿ ಮಾಡಿ ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚಿನ ಅನುದಾನಕ್ಕೆ ನಾವು ಮನವಿ ಮಾಡಿದ್ದೇವು. ನಮ್ಮ ಮನವಿಗೆ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದ್ದಾರೆ. ಇಂದು ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಶಾಸಕರ ಪ್ರವಾಸದ ಬಗ್ಗೆ ಮಾಧ್ಯಮದ ಪ್ರತಿನಿಧಿಗಳು ಕೇಳಿದಾಗ. ಕೈ ಶಾಸಕ ಖಾಸಗಿತಾಗಿ ವಿದೇಶ ಪ್ರವಾಸ ಹೋಗುತ್ತಿದ್ದಾರೆ ಶಾಸಕರ ಪ್ರವಾಸದ ಬಗ್ಗೆ ಅನುಮಾನ ಪಡುವ ಅಗತ್ಯ ಇಲ್ಲ ಎಂದಿದ್ದಾರೆ..1
- Post by ಚಂದು ಕನ್ನಡಿಗ ಚಳ್ಳಕೆರೆ1
- ಮೊಳಕಾಲ್ಮೂರು ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಗೊಳಿಸಿದರು ಼಼಼಼಼಼ಕೊಂಡ್ಲಹಳ್ಳಿ ಗ್ರಾಮದಲ್ಲಿ ಸಿಎಂ ವಿಶೇಷ ಅನುದಾನದಲ್ಲಿ 14ವರೆ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ,2024 25 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ ಬಂಧಿತ ಅನುದಾನ ದಡಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕೇಂದ್ರ ಹಾಗೂ ನೂತನ ಪಶು ಚಿಕಿತ್ಸಾಲಯ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ನಿರ್ಮಾಣಗೊಂಡ 5 ಲಕ್ಷದ ನೂತನ ರಥ ಮಂಟಪ ವನ್ನು ಲೋಕಾರ್ಪಣೆಗೊಳಿಸಿದರು಼಼಼಼ ಇದೆ ವೇಳೆ ಬಿಇಒ ಈ ನಿರ್ಮಲಾದೇವಿ ಪ್ರದೇಶ ಕುರುಬರ ಸಂಘದ ಮಾಜಿ ನಿರ್ದೇಶಕ ಎಸ್.ಕೆ .ಗುರುಲಿಂಗಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂಎಲ್ ಪವಿತ್ರ ಪ್ರದೀಪ್, ಪಿಡಿಓ ಎನ್ ಪಾಲಯ್ಯ, ಕಾರ್ಯದರ್ಶಿ ಕೃಷ್ಣಪ್ಪ ,ಮುಖಂಡರಾದ ಟಿ ತಿಪ್ಪೇಸ್ವಾಮಿ, ಟಿ ಸಿದ್ದಲಿಂಗಪ್ಪ, ಬಿಎಂ.ತಿಪ್ಪೇಸ್ವಾಮಿ, ಸುಧರ್ಮ, ಪಿ ಆರ್ ಈಡಿ ಎಇಇ ಲಿಂಗರಾಜ್ ,ಕ್ರೆಡಿಲ್ ಎಇಇ ನಟರಾಜ್ ಸಂಗೋಪನ ತಾಲೂಕು ಸಹಾಯಕ ನಿರ್ದೇಶಕ ಹೆಚ್ .ರಂಗಪ್ಪ ,,ಸಿಡಿಪಿಓ ನವೀನ್ ಕುಮಾರ್ ಶಾಸಕರ ಆಪ್ತ ಸಹಾಯಕ ಶ್ರೀಕಾಂತ್, ಪಿಎಸ್ಐ ಬಾಹುಬಲಿ, ಬಿಎನ್ ಬೀರಲಿಂಗಪ್ಪ, ಮುಖ್ಯ ಶಿಕ್ಷಕ ಸಿ ಚಂದ್ರಶೇಖರ್ ಎಸ್ ಡಿ ಎಮ್ ಸಿ ಅಧ್ಯಕ್ಷರು ಅಧ್ಯಕ್ಷರು, ಪದಾಧಿಕಾರಿಗಳು ,ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.4
- Ramzan tournament..kolar aluminfield.1
- ಕಡೂರು : ಬಹುತೇಕ ಮಾರ್ಚ್ ತಿಂಗಳಲ್ಲಿ ಕಡೂರಿನಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿಶ್ರೀನಿವಾಸ್ ತಿಳಿಸಿದರು. ಪಟ್ಟಣದ ಕನ್ನಡ ಭವನದಲ್ಲಿ ಸಮ್ಮೇಳನದ ಪೂರ್ವಭಾವಿ ಸಿದ್ದತೆಯ ಮೊದಲ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಭೂತಪೂರ್ವ ಯಶಸ್ವಿಗೆ ಒತ್ತುಕೊಡಲಾಗಿದೆ. ಈಗಾಗಲೇ ಸಮ್ಮೇಳನಾಧ್ಯಕ್ಷರ ಆಯ್ಕೆಯ ಕುರಿತು ಜಿಲ್ಲೆಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತ ನಿರ್ಣಯದೊಂದಿಗೆ ಆಯ್ಕೆಗೊಳಿಸಲಾಗುತ್ತದೆ. ಸಮ್ಮೇಳನದ ಮಹಾಪೋಷಕರಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಚಿಕ್ಕಮಗಳೂರು, ಹಾಸನ ಕ್ಷೇತ್ರದ ಸಂಸದರು ಹಾಗೂ ವಿಧಾನಪರಿಷತ್ ಸದಸ್ಯರುಗಳನ್ನು ಮತ್ತು ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಅವರನ್ನು ಸಮಿತಿಯ ಪೋಷಕರನ್ನಾಗಿ ಆಯ್ಕೆಗೊಳಿಸಲಾಗಿದೆ. ಕ್ಷೇತ್ರದ ಮಾಜಿ ಶಾಸಕರು ಒಳಗೊಂಡAತೆ ವಿವಿಧ ಉಪಸಮಿತಿಗಳಲ್ಲಿ ಪದಾಧಿಕಾರಿಗಳನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಶಾಸಕರ ನೇತೃತ್ವ ಹಾಗೂ ಸ್ವಾಗತಸಮಿತಿ ಅಧ್ಯಕ್ಷರ ಸಮ್ಮುಖದಲ್ಲಿ ಸಿದ್ದತೆ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದರು. ಈ ಬಾರಿಯ ಸಮ್ಮೇಳನದಲ್ಲಿ ಅಂತರಾಷ್ಟಿçÃಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನುಮುಷ್ತಾಕ್ ಅವರನ್ನು ಆಹ್ವಾನಿಸಲಾಗುತ್ತದೆ. ಶೋಷಿತ ಸಮುದಾಯದ ಜಿಲ್ಲೆಯ ಸೂಕ್ತ ವ್ಯಕ್ತಿಯನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆಗೊಳಿಸಲು ಪೂರ್ವಭಾವಿ ಸಭೆಯಲ್ಲಿ ಆಶಯವ್ಯಕ್ತಗೊಂಡಿದ್ದು, ಫೆ.22ರಂದು ಎನ್.ಆರ್.ಪುರದಲ್ಲಿ ನಡೆಯುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಂತಿಮವಾಗಿ ಆಯ್ಕೆಗೊಳಿಸಲಾಗುತ್ತದೆ ಎಂದರು. ಸ್ವಾಗತ ಸಮಿತಿಯ ಅಧ್ಯಕ್ಷ ಭಂಡಾರಿಶ್ರೀನಿವಾಸ್ ಮಾತನಾಡಿ, ಈ ಹಿಂದೆ ತಾಲ್ಲೂಕಿನ ಚಟ್ನಳ್ಳಿ ಹಾಗೂ ಬೀರೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಮ್ಮೇಳನವು ಈ ಬಾರಿ ವಿಶೇಷವಾಗಿ ಕಡೂರಿಗೆ 21ನೇ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡದ ಕೆಲಸಕ್ಕೆ ಎಲ್ಲರ ವಿಶ್ವಾಸವನ್ನು ಪಡೆದು ಸಮ್ಮೇಳನದ ಯಶಸ್ವಿಗೆ ಒತ್ತುಕೊಡಲಾಗುತ್ತದೆ. ಮುಖ್ಯವಾಗಿ ಸಮ್ಮೇಳನಾಧ್ಯಕ್ಷರನ್ನಾಗಿ ಶೋಷಿತ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಬೇಕೆಂಬುದು ಸಮಿತಿಯ ಒಕ್ಕೂರಲ ಅಭಿಪ್ರಾಯವಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಉಪಸಮಿತಿಗಳನ್ನು ರಚಿಸುವ ಮೂಲಕ ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸಿ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ತಿರ್ಮಾನಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷರಾದ ಚಿಕ್ಕನಲ್ಲೂರು ಪರಮೇಶ್, ರವಿದಳವಾಯಿ, ಯರದಕೆರೆ ರಾಜಪ್ಪ, ಸಿಂಗಟಗೆರೆ ಸಿದ್ದಪ್ಪ, ಸೀತಾಲಕ್ಷಿö್ಮÃ, ಟಿ.ಆರ್. ರೇಣುಕಯ್ಯ, ಗೋವಿಂದಸ್ವಾಮಿ, ಕೆ.ಜಿ. ವಸಂತಕುಮಾರ್, ಪುರಸಭೆ ಮಾಜಿ ಸದಸ್ಯ ಗೋವಿಂದರಾಜು, ಗೆದ್ಲೇಹಳ್ಳಿ ಜಗದೀಶ್, ಎನ್.ಎಚ್. ನಂಜುAಡಸ್ವಾಮಿ, ಷಣ್ಮುಖಪ್ಪ, ನಾಗರಾಜ್, ಆರ್.ಜಿ. ಕೃಷ್ಣಸ್ವಾಮಿ, ಹಿರೇನಲ್ಲೂರು ಶ್ರೀನಿವಾಸ್, ಶಿವಲಿಂಗಸ್ವಾಮಿ ಮತ್ತಿತರಿದ್ದರು.4
- ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಾಲೇನಹಳ್ಳಿ ಗ್ರಾಮದ ಕಾಡುಗೊಲ್ಲ ಸಮಾಜದ ಪ್ರತಿಭಾನ್ವಿತ ಯುವತಿ ಶ್ರೀಮತಿ ಕಾವ್ಯ ಟಿ. ಅವರು ಕೃಷಿ ವಿಜ್ಞಾನ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ವದ ಸಂಶೋಧನೆಗಾಗಿ ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯು (ICAR-IARI) 'ಡಾಕ್ಟರ್ ಆಫ್ ಫಿಲಾಸಫಿ' (Ph.D) ಪದವಿಯನ್ನು ನೀಡಿ ಗೌರವಿಸಿದೆ. ನವದೆಹಲಿಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಐಸಿಎಆರ್–ಐಎಆರ್ಐ ಸಂಸ್ಥೆಯ ಭವ್ಯ ಘಟಿಕೋತ್ಸವ ಸಮಾರಂಭದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಕಾವ್ಯ ಅವರಿಗೆ ಅಧಿಕೃತವಾಗಿ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿ ಅಭಿನಂದಿಸಿದರು. ಡಾ. ಕಾವ್ಯ ಅವರು "ಭತ್ತದ ಗದ್ದೆಗಳಿಂದ ಮೀಥೈಲೋಟ್ರೋಫಿಕ್ ಬ್ಯಾಕ್ಟೀರಿಯಾಗಳ ಪ್ರತ್ಯೇಕತೆ ಮತ್ತು ಗುಣಲಕ್ಷಣಗಳು ಹಾಗೂ ಸಸ್ಯ ಬೆಳವಣಿಗೆಯ ಉತ್ತೇಜನ ಮತ್ತು ಮಣ್ಣಿನ ಇಂಗಾಲದ ಸ್ವಾಧೀನದಲ್ಲಿ ಅವುಗಳ ಪಾತ್ರ" ಎಂಬ ವಿಷಯದ ಕುರಿತು ಪ್ರೌಢ ಪ್ರಬಂಧವನ್ನು ಮಂಡಿಸಿದ್ದರು. ನವದೆಹಲಿಯ ಪ್ರತಿಷ್ಠಿತ ಐಸಿಎಆರ್–ಐಎಆರ್ಐ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ. ಗೀತಾ ಸಿಂಗ್ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮಣ್ಣಿನ ಫಲವತ್ತತೆಯನ್ನು ಕಾಪಾಡುವಲ್ಲಿ ಮತ್ತು ಹವಾಮಾನ ಬದಲಾವಣೆಯ ಸವಾಲುಗಳ ನಡುವೆ ಸುಸ್ಥಿರ ಕೃಷಿಯನ್ನು ಉತ್ತೇಜಿಸುವಲ್ಲಿ ಈ ಸಂಶೋಧನೆಯು ಬಹಳ ಮುಖ್ಯವಾಗಿದೆ. ವಿಶೇಷವಾಗಿ ಭತ್ತದ ಬೆಳೆಯ ಸಸ್ಯಗಳ ಬೆಳವಣಿಗೆಯನ್ನು ನೈಸರ್ಗಿಕವಾಗಿ ಹೆಚ್ಚಿಸುವ ಮತ್ತು ಮಣ್ಣಿನಲ್ಲಿ ಇಂಗಾಲದ ಅಂಶವನ್ನು ಸಂಗ್ರಹಿಸುವ ಬ್ಯಾಕ್ಟೀರಿಯಾಗಳ ಪಾತ್ರವನ್ನು ಇವರ ಸಂಶೋಧನೆಯು ಸಾಬೀತುಪಡಿಸಿದೆ. ಇದು ಕೃಷಿ ಕ್ಷೇತ್ರದಲ್ಲಿ ಮಣ್ಣಿನ ಆರೋಗ್ಯ ವೃದ್ಧಿಗೆ ಹೊಸ ದಾರಿಯನ್ನು ತೋರಿಸಿಕೊಟ್ಟಿದೆ. ಗ್ರಾಮೀಣ ಭಾಗದ ಹಿನ್ನೆಲೆಯ ಯುವತಿಯೊಬ್ಬರು ರಾಷ್ಟ್ರಮಟ್ಟದ ಉನ್ನತ ಸಂಸ್ಥೆಯಲ್ಲಿ ಸಂಶೋಧನೆ ನಡೆಸಿ ಸಾಧನೆ ಮಾಡಿರುವುದು ಹಿರಿಯೂರು ತಾಲೂಕು ಮತ್ತು ಚಿತ್ರದುರ್ಗ ಜಿಲ್ಲೆಗೆ ಕೀರ್ತಿ ತಂದಿದೆ. ಕೃಷಿ ಪ್ರಧಾನವಾದ ಚಿತ್ರದುರ್ಗದ ಮಣ್ಣಿನ ಮಗಳ ಈ ಸಾಧನೆಯು ಈ ಭಾಗದ ರೈತ ಸಮುದಾಯಕ್ಕೆ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿಯಿರುವ ಯುವಕ-ಯುವತಿಯರಿಗೆ ಸ್ಫೂರ್ತಿಯಾಗಿದೆ.1