logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಗಣೇಶಮೂರ್ತಿ ಮೆರವಣಿಗೆಯಲ್ಲಿ‘ಬೇಡ ಬ್ರೋ’ಅಭಿಯಾನ:ಮಾದಕ ವಸ್ತುಗಳ ವಿರುದ್ಧಪ್ರತಿಜ್ಞೆ ಶಿವಮೊಗ್ಗ: ನಗರದ ಪ್ರೆಸ್ ಕಾಲೋನಿಯಲ್ಲಿ ನಡೆದ ಗಣೇಶೋತ್ಸವ ಸಮಾರಂಭವು, ಜನಜಾಗೃತಿ ಅಭಿಯಾನಕ್ಕೆ ವೇದಿಕೆ ಯಾಗಿತ್ತು. ಮಾದಕ ವಸ್ತುಗಳ ಬಳಕೆ ವಿರುದ್ಧ ನಾಗರಿಕರು ಪ್ರತಿಜ್ಞೆ ಸ್ವೀಕರಿಸಿದರು. ಭಗತ್ ಸಿಂಗ್ ರಸ್ತೆಯಲ್ಲಿ ಪ್ರತಿಷ್ಠಾ ಪಿಸಿದ್ದ ಗಣೇಶಮೂರ್ತಿ ಸ್ಥಳದಲ್ಲಿ ಮಾದಕ ವಸ್ತುಗಳ ವಿರುದ್ಧದ ‘ಬೇಡ ಬ್ರೋ’ ಅಭಿಯಾನ ಹಮ್ಮಿ ಕೊಳ್ಳಲಾಗಿತ್ತು. ‘ಗಾಂಜಾ, ಅಫೀಮು ಸೇರಿದಂತೆ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸುವುದಿಲ್ಲ. ಸಶಕ್ತ, ಆರೋಗ್ಯ ಯುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕೈ ಜೋಡಿಸುವುದಾಗಿ’ ಗಣೇಶಮೂರ್ತಿಯ ಎದುರು ನಾಗರಿಕರು ಪ್ರತಿಜ್ಞೆ ಸ್ವೀಕರಿಸಿದರು. ಪ್ರೆಸ್ ಕಾಲೋನಿ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘದ ಗೌರವಾ ಧ್ಯಕ್ಷ ರಾಮಚಂದ್ರಪ್ಪ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು. ಗಣೇಶೋತ್ಸವ ಸಮಾರಂಭದಲ್ಲಿ ಸಂಘದ ವತಿಯಿಂದ ಅರ್ಥ ಪೂರ್ಣ, ಸಮಾಜಮುಖಿ ಕಾರ್ಯ ಕ್ರಮ ಆಯೋಜಿಸಲಾಗಿದೆ’ ಎಂದು ತಿಳಿಸಿದರು. ಜಿಲ್ಲಾ ಅದಿಕೃತ ಪತ್ರ ಬರಹಗಾರರ ಸಂಘದ ರಾಜ್ಯ ಉಪಾಧ್ಯಕ್ಷ ಜಿ ಎಂ ಸುರೇಶ್ ಬಾಬು ಅವರು ಮಾತನಾಡಿ, ‘ಯುವ ಜನತೆಯು ಮಾದಕ ವಸ್ತುಗಳ ದಾಸರಾಗು ತ್ತಿರುವುದು ಆತಂಕಕಾರಿ ಸಂಗತಿ. ಈ ನಿಟ್ಟಿನಲ್ಲಿ ಭಾರೀ ದೊಡ್ಡ ಮಟ್ಟದ ಜನಜಾಗೃತಿ ನಡೆಯ ಬೇಕಾಗಿದೆ. ಹಾಗೆಯೇ ಮೊಬೈಲ್ ಫೋನ್ ಗೀಳಿನಿಂದಲೂ ಹೊರ ಬರಬೇಕಾಗಿದೆ’ ಎಂದರು. ಕರ್ನಾಟಕ ಗೃಹ ಮಂಡಳಿ ಅಧಿಕಾರಿ ಅನ್ವರ್ ಬಾಬು ಮಾತನಾಡಿ, ‘ಮಾದಕ ವಸ್ತುಗಳ ವಿರುದ್ದ ಜಾಗೃತಿ ಹಾಗೂ ಒಟ್ಟಾಗಿ ಗಣೇಶೋತ್ಸವ ಆಚರಿಸಿ ಸೌಹಾರ್ದತೆಯ ಸಂದೇಶ ನೀಡುವ ಈ ರೀತಿಯ ಕಾರ್ಯ ಕ್ರಮಗಳು ನಿಜಕ್ಕೂ ಸ್ವಾಗತಾರ್ಹ ವಾಗಿದೆ’ ಎಂದರು. ನಿವೃತ್ತ ಶಿಕ್ಷಕ ಮಹೇಶ್ ಎಲಿಗಾರ್ ಮಾತನಾಡಿ, ‘ಬ್ರಿಟಿಷರ ವಿರುದ್ದ ಹೋರಾಟಕ್ಕೆ ಗಣೇಶೋತ್ಸವ ವೇದಿಕೆ ಯಾಗಿತ್ತು. ಪ್ರಸ್ತುತ ಸಾಮಾಜಿಕ ಪಿಡುಗಗಳ ವಿರುದ್ದ ಹೋರಾಟಕ್ಕೆ ವೇದಿಕೆಯಾಗುತ್ತಿ ರುವುದು ಸ್ವಾಗತಾರ್ಹ ಸಂಗತಿ ಯಾಗಿದೆ’ ಎಂದರು. ಬೆಂಗಳೂರಿನ ಖಾಸಗಿ ಸಂಸ್ಥೆ ಉದ್ಯೋಗಿ ಗಳಾದ ರಂಗಪ್ಪ ಗುಡಮಗಟ್ಟೆ ಹಾಗೂ ಅವರ ಪತ್ನಿ ರಮ್ಯಾ ಅವರು ಮಾತನಾಡಿ, ‘ಮಾದಕ ವಸ್ತುಗಳಿಗೆ ನಮ್ಮ ಮಕ್ಕಳು ಬಲಿಯಾಗದಂತೆ ಎಚ್ಚರ ವಹಿಸಬೇಕು. ಮಕ್ಕಳ ಭವಿಷ್ಯ ಉಜ್ವಲವಾದರೆ, ಮುಂದಿನ ಪೀಳಿಗೆಯೂ ಸದೃಢವಾಗಲಿದೆ’ ಎಂದು ಅಭಿಪ್ರಾಯಪಟ್ಟರು. ಶಕ್ತಿ ಗ್ರೂಪ್ ನ ಪಾಲುದಾರರಾದ ಹರ್ಷ್, ನಿವೃತ್ತ ಕಾರ್ಯಪಾಲಕ ಅಭಿಯಂತರಾದ ಈಶ್ವರಪ್ಪ ಅವರು ವಿಭಿನ್ನ – ಅರ್ಥಪೂರ್ಣ ಗಣೇಶೋತ್ಸವ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪತ್ರಕರ್ತ ಬಿ. ರೇಣುಕೇಶ್ ಅವರು ವಹಿಸಿದ್ದರು. ಸ್ಥಳೀಯರಾದ ಯುವ ಮುಖಂಡ ಅಭಿನಂದನ್, ಮಾರುತಿ, ನಾಗರತ್ನ, ಲಕ್ಷ್ಮೀ ದಂಪತಿ, ಪದ್ಮನಾಭ್, ರಾಜಪ್ಪ, ವಿದ್ಯಾರ್ಥಿ ಗಳಾದ ಗೌತಮ್, ಉದಯ ಕುಮಾರ್, ಗಗನ್, ಸಿರಿ, ಷಣ್ಮುಖ, ಸಂಜಯ್, ಕಲ್ಕಿ, ಶಿವಾನಿ, ತೇಜಸ್ ಮೊದಲಾದವರಿದ್ದರು.

2 hrs ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
2 hrs ago
ad73a5c2-5327-40f1-9757-7a0f2f7433db

ಶಿವಮೊಗ್ಗ-ಗಣೇಶಮೂರ್ತಿ ಮೆರವಣಿಗೆಯಲ್ಲಿ‘ಬೇಡ ಬ್ರೋ’ಅಭಿಯಾನ:ಮಾದಕ ವಸ್ತುಗಳ ವಿರುದ್ಧಪ್ರತಿಜ್ಞೆ ಶಿವಮೊಗ್ಗ: ನಗರದ ಪ್ರೆಸ್ ಕಾಲೋನಿಯಲ್ಲಿ ನಡೆದ ಗಣೇಶೋತ್ಸವ ಸಮಾರಂಭವು, ಜನಜಾಗೃತಿ ಅಭಿಯಾನಕ್ಕೆ ವೇದಿಕೆ ಯಾಗಿತ್ತು. ಮಾದಕ ವಸ್ತುಗಳ ಬಳಕೆ ವಿರುದ್ಧ ನಾಗರಿಕರು ಪ್ರತಿಜ್ಞೆ ಸ್ವೀಕರಿಸಿದರು. ಭಗತ್ ಸಿಂಗ್ ರಸ್ತೆಯಲ್ಲಿ ಪ್ರತಿಷ್ಠಾ ಪಿಸಿದ್ದ ಗಣೇಶಮೂರ್ತಿ ಸ್ಥಳದಲ್ಲಿ ಮಾದಕ ವಸ್ತುಗಳ ವಿರುದ್ಧದ ‘ಬೇಡ ಬ್ರೋ’ ಅಭಿಯಾನ ಹಮ್ಮಿ ಕೊಳ್ಳಲಾಗಿತ್ತು. ‘ಗಾಂಜಾ, ಅಫೀಮು ಸೇರಿದಂತೆ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸುವುದಿಲ್ಲ. ಸಶಕ್ತ, ಆರೋಗ್ಯ ಯುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕೈ ಜೋಡಿಸುವುದಾಗಿ’ ಗಣೇಶಮೂರ್ತಿಯ ಎದುರು ನಾಗರಿಕರು ಪ್ರತಿಜ್ಞೆ ಸ್ವೀಕರಿಸಿದರು. ಪ್ರೆಸ್ ಕಾಲೋನಿ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘದ ಗೌರವಾ ಧ್ಯಕ್ಷ ರಾಮಚಂದ್ರಪ್ಪ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು. ಗಣೇಶೋತ್ಸವ ಸಮಾರಂಭದಲ್ಲಿ ಸಂಘದ ವತಿಯಿಂದ ಅರ್ಥ ಪೂರ್ಣ, ಸಮಾಜಮುಖಿ ಕಾರ್ಯ ಕ್ರಮ ಆಯೋಜಿಸಲಾಗಿದೆ’ ಎಂದು ತಿಳಿಸಿದರು. ಜಿಲ್ಲಾ ಅದಿಕೃತ ಪತ್ರ ಬರಹಗಾರರ ಸಂಘದ ರಾಜ್ಯ ಉಪಾಧ್ಯಕ್ಷ ಜಿ ಎಂ ಸುರೇಶ್ ಬಾಬು ಅವರು ಮಾತನಾಡಿ, ‘ಯುವ ಜನತೆಯು ಮಾದಕ ವಸ್ತುಗಳ ದಾಸರಾಗು ತ್ತಿರುವುದು ಆತಂಕಕಾರಿ ಸಂಗತಿ. ಈ ನಿಟ್ಟಿನಲ್ಲಿ ಭಾರೀ ದೊಡ್ಡ ಮಟ್ಟದ ಜನಜಾಗೃತಿ ನಡೆಯ ಬೇಕಾಗಿದೆ. ಹಾಗೆಯೇ ಮೊಬೈಲ್ ಫೋನ್ ಗೀಳಿನಿಂದಲೂ ಹೊರ ಬರಬೇಕಾಗಿದೆ’ ಎಂದರು. ಕರ್ನಾಟಕ ಗೃಹ ಮಂಡಳಿ ಅಧಿಕಾರಿ ಅನ್ವರ್

7d6ffdf2-61af-4992-a7cf-90d6431855f2

ಬಾಬು ಮಾತನಾಡಿ, ‘ಮಾದಕ ವಸ್ತುಗಳ ವಿರುದ್ದ ಜಾಗೃತಿ ಹಾಗೂ ಒಟ್ಟಾಗಿ ಗಣೇಶೋತ್ಸವ ಆಚರಿಸಿ ಸೌಹಾರ್ದತೆಯ ಸಂದೇಶ ನೀಡುವ ಈ ರೀತಿಯ ಕಾರ್ಯ ಕ್ರಮಗಳು ನಿಜಕ್ಕೂ ಸ್ವಾಗತಾರ್ಹ ವಾಗಿದೆ’ ಎಂದರು. ನಿವೃತ್ತ ಶಿಕ್ಷಕ ಮಹೇಶ್ ಎಲಿಗಾರ್ ಮಾತನಾಡಿ, ‘ಬ್ರಿಟಿಷರ ವಿರುದ್ದ ಹೋರಾಟಕ್ಕೆ ಗಣೇಶೋತ್ಸವ ವೇದಿಕೆ ಯಾಗಿತ್ತು. ಪ್ರಸ್ತುತ ಸಾಮಾಜಿಕ ಪಿಡುಗಗಳ ವಿರುದ್ದ ಹೋರಾಟಕ್ಕೆ ವೇದಿಕೆಯಾಗುತ್ತಿ ರುವುದು ಸ್ವಾಗತಾರ್ಹ ಸಂಗತಿ ಯಾಗಿದೆ’ ಎಂದರು. ಬೆಂಗಳೂರಿನ ಖಾಸಗಿ ಸಂಸ್ಥೆ ಉದ್ಯೋಗಿ ಗಳಾದ ರಂಗಪ್ಪ ಗುಡಮಗಟ್ಟೆ ಹಾಗೂ ಅವರ ಪತ್ನಿ ರಮ್ಯಾ ಅವರು ಮಾತನಾಡಿ, ‘ಮಾದಕ ವಸ್ತುಗಳಿಗೆ ನಮ್ಮ ಮಕ್ಕಳು ಬಲಿಯಾಗದಂತೆ ಎಚ್ಚರ ವಹಿಸಬೇಕು. ಮಕ್ಕಳ ಭವಿಷ್ಯ ಉಜ್ವಲವಾದರೆ, ಮುಂದಿನ ಪೀಳಿಗೆಯೂ ಸದೃಢವಾಗಲಿದೆ’ ಎಂದು ಅಭಿಪ್ರಾಯಪಟ್ಟರು. ಶಕ್ತಿ ಗ್ರೂಪ್ ನ ಪಾಲುದಾರರಾದ ಹರ್ಷ್, ನಿವೃತ್ತ ಕಾರ್ಯಪಾಲಕ ಅಭಿಯಂತರಾದ ಈಶ್ವರಪ್ಪ ಅವರು ವಿಭಿನ್ನ – ಅರ್ಥಪೂರ್ಣ ಗಣೇಶೋತ್ಸವ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪತ್ರಕರ್ತ ಬಿ. ರೇಣುಕೇಶ್ ಅವರು ವಹಿಸಿದ್ದರು. ಸ್ಥಳೀಯರಾದ ಯುವ ಮುಖಂಡ ಅಭಿನಂದನ್, ಮಾರುತಿ, ನಾಗರತ್ನ, ಲಕ್ಷ್ಮೀ ದಂಪತಿ, ಪದ್ಮನಾಭ್, ರಾಜಪ್ಪ, ವಿದ್ಯಾರ್ಥಿ ಗಳಾದ ಗೌತಮ್, ಉದಯ ಕುಮಾರ್, ಗಗನ್, ಸಿರಿ, ಷಣ್ಮುಖ, ಸಂಜಯ್, ಕಲ್ಕಿ, ಶಿವಾನಿ, ತೇಜಸ್ ಮೊದಲಾದವರಿದ್ದರು.

More news from ಕರ್ನಾಟಕ and nearby areas
  • ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
    1
    ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    13 hrs ago
  • ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    1
    ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ 
ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ  ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ  
ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ.
ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು.
ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ  ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    22 hrs ago
  • ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು.  ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು.  ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    1
    ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ

ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು. 
ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು. 
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    19 hrs ago
  • ಶಿವಮೊಗ್ಗ,: ತನು ಜ್ಯೂಸ್ ಸೆಂಟರ್ ಬೇಟಿ ನೀಡಿದ ಅಧಿಕಾರಿಗಳ ತಂಡ ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ತನು ಜ್ಯೂಸ್ ಸೆಂಟರ್ ಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದಾಗ ಕೊಳೆತ ಹಣ್ಣುಗಳನ್ನು ಶೇಖರಿಸಿಟ್ಟಿದ್ದ ಬ್ರಿಡ್ಜ್ ತಪಾಸಣೆ ಮಾಡಿದಾಗ ಸೇಬು, ಮೂಸಂಬಿ, ಕಲ್ಲಂಗಡಿ, ಅವಕೊಡ,ದ್ರಾಕ್ಷಿ, ಬಾಳೆಹಣ್ಣು, ಮಾವಿನಹಣ್ಣು , ಬೆಣ್ಣೆ ಹಣ್ಣು,ಹೀಗೆ ಹಲವಾರು ಹಣ್ಣುಗಳಿಂದ ಜ್ಯೂಸ್ ತಯಾರಿಸಿ ಸಾರ್ವಜನಿಕರಿಗೆ ಕೊಡುತ್ತಿರುವುದು ಕಂಡುಬಂದಿದ್ದು ಹಾಗೂ ಕೆಲವರು ಆಸ್ಪತ್ರೆಯ ರೋಗಿಗಳಿಗೂ ಸಹ ಇದೇ ಕೊಳೆತ ಹಣ್ಣಿನಿಂದ ಜ್ಯೂಸ್ ತೆಗೆದುಕೊಂಡು ಹೋಗಿರುವುದು ಕೂಡ ಗಮನಕ್ಕೆ ಬಂದಿರುವುದು ಕಂಡು ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ ಕೂಡಲೇ ಇದನ್ನು ಸೀಜ್ ಮಾಡಲಾಗಿದೆ. ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
    1
    ಶಿವಮೊಗ್ಗ,: ತನು ಜ್ಯೂಸ್ ಸೆಂಟರ್ ಬೇಟಿ ನೀಡಿದ ಅಧಿಕಾರಿಗಳ ತಂಡ ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳಲಾಗಿದೆ.
ಶಿವಮೊಗ್ಗ ತನು ಜ್ಯೂಸ್ ಸೆಂಟರ್ ಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದಾಗ ಕೊಳೆತ ಹಣ್ಣುಗಳನ್ನು  ಶೇಖರಿಸಿಟ್ಟಿದ್ದ ಬ್ರಿಡ್ಜ್ ತಪಾಸಣೆ ಮಾಡಿದಾಗ ಸೇಬು, ಮೂಸಂಬಿ, ಕಲ್ಲಂಗಡಿ, ಅವಕೊಡ,ದ್ರಾಕ್ಷಿ, ಬಾಳೆಹಣ್ಣು, ಮಾವಿನಹಣ್ಣು , ಬೆಣ್ಣೆ ಹಣ್ಣು,ಹೀಗೆ ಹಲವಾರು ಹಣ್ಣುಗಳಿಂದ  ಜ್ಯೂಸ್ ತಯಾರಿಸಿ ಸಾರ್ವಜನಿಕರಿಗೆ ಕೊಡುತ್ತಿರುವುದು ಕಂಡುಬಂದಿದ್ದು ಹಾಗೂ ಕೆಲವರು ಆಸ್ಪತ್ರೆಯ ರೋಗಿಗಳಿಗೂ ಸಹ ಇದೇ ಕೊಳೆತ ಹಣ್ಣಿನಿಂದ ಜ್ಯೂಸ್ ತೆಗೆದುಕೊಂಡು ಹೋಗಿರುವುದು ಕೂಡ ಗಮನಕ್ಕೆ ಬಂದಿರುವುದು ಕಂಡು ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ ಕೂಡಲೇ ಇದನ್ನು  ಸೀಜ್ ಮಾಡಲಾಗಿದೆ. ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
    user_Press Narashimha swamy SN
    Press Narashimha swamy SN
    Newspaper publisher ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
    2 hrs ago
  • ಹಾವೇರಿ: ವಂದೇ ಮಾತರಂನ ಕೇವಲ 2 ಚರಣಗಳನ್ನು ಮಾತ್ರ ಹಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಹಾವೇರಿ ನಗರ ಮಂಡಲ ತೀವ್ರವಾಗಿ ಖಂಡಿಸಿದೆ. 1937ರಲ್ಲಿ ಕಾಂಗ್ರೆಸ್ ಮುಸ್ಲಿಂ ಲೀಗ್ ಒತ್ತಡಕ್ಕೆ ಮಣಿದು ವಂದೇ ಮಾತರಂಗೆ 2 ಚರಣಗಳಿಗೆ ಕತ್ತರಿ ಹಾಕಿತ್ತು. ಇದು ಸಂವಿಧಾನದ ತೀರ್ಮಾನವಲ್ಲ, ಕಾಂಗ್ರೆಸ್‌ನ ರಾಜಕೀಯ ನಿರ್ಧಾರ. 24 ಜನವರಿ 1950ರಲ್ಲಿ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಜನಗಣಮನ ಮತ್ತು ವಂದೇ ಮಾತರಂ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಅಧಿಕೃತವಾಗಿ ಹೇಳಿದ್ದರು. ತುಷ್ಟೀಕರಣ ರಾಜಕಾರಣಕ್ಕಾಗಿ ಕಾಂಗ್ರೆಸ್ ಇಂದು ಮತ್ತೆ ವಂದೇ ಮಾತರಂಗೆ ಕತ್ತರಿ ಹಾಕಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇಂದು ವಂದೇ ಮಾತರಂಗೆ ಕತ್ತರಿ ಹಾಕುವವರು ನಾಳೆ ಕುವೆಂಪು ರಚಿತ ನಾಡಗೀತೆಗೆ ಕತ್ತರಿ ಹಾಕುತ್ತಾರಾ? ಎಂದು ಪ್ರಶ್ನಿಸಿದೆ. ನೇಣುಗಂಬ ಏರಿದರೂ ವಂದೇ ಮಾತರಂ ಹಾಡುತ್ತೇವೆ ಎಂದಿದ್ದ ಕಾಂಗ್ರೆಸ್, ಈಗ ನೇಣುಗಂಬಕ್ಕೆ ಏರಿಸಿದರೂ ಹಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿರುವುದು ಖಂಡನೀಯ ಎಂದು ಹಾವೇರಿ ವಿಧಾನಸಭಾ ಕೊಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರದ ಸಿದ್ದರಾಜು ಕಲಕೋಟಿ, ನಗರ ಮಂಡಲ ಅಧ್ಯಕ್ಷ *ಕಿರಣ್ ಚನಬಸಪ್ಪ ಕೊಳ್ಳಿ ಈರಣ್ಣ ಹೇರೂರು, ಅಲ್ಲಾಬಾಕ್ಸ್ ತಿಮ್ಮಾಪುರ, ನಿರಂಜನ್ ಹೇರೂರು ನಗರ ಮಂಡಲದ ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಲಕ್ಷ್ಮಣ ಬೆಟಗೇರಿ, ಮಾರುತಿ ಸವಣುರ ಗಿರೀಶ್ ಶೆಟ್ಟಿ, ಹೊನ್ನಪ್ಪ ಮಾಳಗಿ ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರು ಸೇರಿ ಭಾಗವಹಿಸಿದ್ದರು *
    1
    ಹಾವೇರಿ: ವಂದೇ ಮಾತರಂನ ಕೇವಲ 2 ಚರಣಗಳನ್ನು ಮಾತ್ರ ಹಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಹಾವೇರಿ ನಗರ ಮಂಡಲ ತೀವ್ರವಾಗಿ ಖಂಡಿಸಿದೆ.

1937ರಲ್ಲಿ ಕಾಂಗ್ರೆಸ್ ಮುಸ್ಲಿಂ ಲೀಗ್ ಒತ್ತಡಕ್ಕೆ ಮಣಿದು ವಂದೇ ಮಾತರಂಗೆ 2 ಚರಣಗಳಿಗೆ ಕತ್ತರಿ ಹಾಕಿತ್ತು. ಇದು ಸಂವಿಧಾನದ ತೀರ್ಮಾನವಲ್ಲ, ಕಾಂಗ್ರೆಸ್‌ನ ರಾಜಕೀಯ ನಿರ್ಧಾರ. 24 ಜನವರಿ 1950ರಲ್ಲಿ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಜನಗಣಮನ ಮತ್ತು ವಂದೇ ಮಾತರಂ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಅಧಿಕೃತವಾಗಿ ಹೇಳಿದ್ದರು.
ತುಷ್ಟೀಕರಣ ರಾಜಕಾರಣಕ್ಕಾಗಿ ಕಾಂಗ್ರೆಸ್ ಇಂದು ಮತ್ತೆ ವಂದೇ ಮಾತರಂಗೆ ಕತ್ತರಿ ಹಾಕಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇಂದು ವಂದೇ ಮಾತರಂಗೆ ಕತ್ತರಿ ಹಾಕುವವರು ನಾಳೆ ಕುವೆಂಪು ರಚಿತ ನಾಡಗೀತೆಗೆ ಕತ್ತರಿ ಹಾಕುತ್ತಾರಾ? ಎಂದು ಪ್ರಶ್ನಿಸಿದೆ.
ನೇಣುಗಂಬ ಏರಿದರೂ ವಂದೇ ಮಾತರಂ ಹಾಡುತ್ತೇವೆ ಎಂದಿದ್ದ ಕಾಂಗ್ರೆಸ್, ಈಗ ನೇಣುಗಂಬಕ್ಕೆ ಏರಿಸಿದರೂ ಹಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿರುವುದು ಖಂಡನೀಯ ಎಂದು ಹಾವೇರಿ ವಿಧಾನಸಭಾ ಕೊಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರದ ಸಿದ್ದರಾಜು ಕಲಕೋಟಿ, ನಗರ ಮಂಡಲ ಅಧ್ಯಕ್ಷ *ಕಿರಣ್ ಚನಬಸಪ್ಪ  ಕೊಳ್ಳಿ ಈರಣ್ಣ ಹೇರೂರು, ಅಲ್ಲಾಬಾಕ್ಸ್ ತಿಮ್ಮಾಪುರ, ನಿರಂಜನ್ ಹೇರೂರು  ನಗರ ಮಂಡಲದ ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಲಕ್ಷ್ಮಣ ಬೆಟಗೇರಿ, ಮಾರುತಿ ಸವಣುರ ಗಿರೀಶ್ ಶೆಟ್ಟಿ, ಹೊನ್ನಪ್ಪ ಮಾಳಗಿ ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರು ಸೇರಿ ಭಾಗವಹಿಸಿದ್ದರು *
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    1 hr ago
  • ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.
    1
    ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್! ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!
    1
    ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್!
ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    13 hrs ago
  • ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ
    4
    ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ

ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ
ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು.
ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ.
ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ
    user_ದೇವರಾಜ್ ಕೆ ನೆಲ್ಲಿಹಂಕಲು
    ದೇವರಾಜ್ ಕೆ ನೆಲ್ಲಿಹಂಕಲು
    Local News Reporter ಚನ್ನಗಿರಿ, ದಾವಣಗೆರೆ, ಕರ್ನಾಟಕ•
    32 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.