ತಿಪಟೂರಿನಲ್ಲಿ ‘ಟಾಕ್ಸಿಕ್’ ಸಂಭ್ರಮಕ್ಕೆ ಅಭಿಮಾನಿಗಳ ಭರ್ಜರಿ ಸ್ವಾಗತ ತಿಪಟೂರಿನಲ್ಲಿ ‘ಟಾಕ್ಸಿಕ್’ ಸಂಭ್ರಮಕ್ಕೆ ಅಭಿಮಾನಿಗಳ ಭರ್ಜರಿ ಸ್ವಾಗತ! ತಿಪಟೂರಿನಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಿದ್ದು, ಅಭಿಮಾನಿಗಳ ಸಂಭ್ರಮ ಜೋರಾಗಿದೆ. ತಿಪಟೂರಿನ ಲಕ್ಷ್ಮೀ ಚಿತ್ರಮಂದಿರದ ಮುಂದೆ ಯಶ್ ಅವರ ಕಟೌಟ್ಗೆ ಹಾಲು ಸುರಿಸಿ, ಪಟಾಕಿ ಸಿಡಿಸಿ, ನಾಸಿಕ್ ವಾದ್ಯದ ಸದ್ದಿಗೆ ಅಭಿಮಾನಿಗಳು ಕುಣಿದು ಕುಪ್ಪಳಿಸುವ ಮೂಲಕ ಸಿನಿಮಾ ಬಿಡುಗಡೆಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ತಿಪಟೂರಿನ ಲಕ್ಷ್ಮೀ ಹಾಗೂ ಗಣೇಶ ಚಿತ್ರಮಂದಿರಗಳಲ್ಲಿ ‘ಟಾಕ್ಸಿಕ್’ ಸಿನಿಮಾ ತೆರೆಕಂಡಿದೆ. ಆದರೆ, ಒಂದು ಕಡೆ ಅಭಿಮಾನಿಗಳ ಸಂಭ್ರಮ ಜೋರಾಗಿದ್ದರೆ, ಮತ್ತೊಂದೆಡೆ ಸಿನಿಮಾ ವೀಕ್ಷಿಸಿದ ಕೆಲ ಪ್ರೇಕ್ಷಕರಿಂದ ಚಿತ್ರದ ಬಗ್ಗೆ ನಕಾರಾತ್ಮಕ ಪ್ರತಿಕ್ರಿಯೆಗಳು ಕೇಳಿಬಂದಿವೆ. ಇನ್ನು ಗಣೇಶ ಚಿತ್ರಮಂದಿರದಲ್ಲಿ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿ, ಚಿತ್ರಮಂದಿರ ಬಹುತೇಕ ಖಾಲಿ ಹೊಡೆಯುತ್ತಿರುವ ದೃಶ್ಯಗಳು ಕಂಡುಬಂದಿವೆ. ಒಟ್ಟಿನಲ್ಲಿ, ತಿಪಟೂರಿನಲ್ಲಿ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ದಿನ ಅಭಿಮಾನಿಗಳ ಸಂಭ್ರಮ ಒಂದೆಡೆಯಾದರೆ, ಪ್ರೇಕ್ಷಕರ ಮಿಶ್ರ ಪ್ರತಿಕ್ರಿಯೆ ಮತ್ತೊಂದೆಡೆ ಗಮನ ಸೆಳೆದಿದೆ.
ತಿಪಟೂರಿನಲ್ಲಿ ‘ಟಾಕ್ಸಿಕ್’ ಸಂಭ್ರಮಕ್ಕೆ ಅಭಿಮಾನಿಗಳ ಭರ್ಜರಿ ಸ್ವಾಗತ ತಿಪಟೂರಿನಲ್ಲಿ ‘ಟಾಕ್ಸಿಕ್’ ಸಂಭ್ರಮಕ್ಕೆ ಅಭಿಮಾನಿಗಳ ಭರ್ಜರಿ ಸ್ವಾಗತ! ತಿಪಟೂರಿನಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಿದ್ದು, ಅಭಿಮಾನಿಗಳ ಸಂಭ್ರಮ ಜೋರಾಗಿದೆ. ತಿಪಟೂರಿನ ಲಕ್ಷ್ಮೀ ಚಿತ್ರಮಂದಿರದ ಮುಂದೆ ಯಶ್ ಅವರ ಕಟೌಟ್ಗೆ ಹಾಲು ಸುರಿಸಿ, ಪಟಾಕಿ ಸಿಡಿಸಿ, ನಾಸಿಕ್ ವಾದ್ಯದ ಸದ್ದಿಗೆ ಅಭಿಮಾನಿಗಳು ಕುಣಿದು ಕುಪ್ಪಳಿಸುವ ಮೂಲಕ ಸಿನಿಮಾ ಬಿಡುಗಡೆಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ತಿಪಟೂರಿನ ಲಕ್ಷ್ಮೀ ಹಾಗೂ ಗಣೇಶ ಚಿತ್ರಮಂದಿರಗಳಲ್ಲಿ ‘ಟಾಕ್ಸಿಕ್’ ಸಿನಿಮಾ ತೆರೆಕಂಡಿದೆ. ಆದರೆ, ಒಂದು ಕಡೆ ಅಭಿಮಾನಿಗಳ ಸಂಭ್ರಮ ಜೋರಾಗಿದ್ದರೆ, ಮತ್ತೊಂದೆಡೆ ಸಿನಿಮಾ ವೀಕ್ಷಿಸಿದ ಕೆಲ ಪ್ರೇಕ್ಷಕರಿಂದ ಚಿತ್ರದ ಬಗ್ಗೆ ನಕಾರಾತ್ಮಕ ಪ್ರತಿಕ್ರಿಯೆಗಳು ಕೇಳಿಬಂದಿವೆ. ಇನ್ನು ಗಣೇಶ ಚಿತ್ರಮಂದಿರದಲ್ಲಿ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿ, ಚಿತ್ರಮಂದಿರ ಬಹುತೇಕ ಖಾಲಿ ಹೊಡೆಯುತ್ತಿರುವ ದೃಶ್ಯಗಳು ಕಂಡುಬಂದಿವೆ. ಒಟ್ಟಿನಲ್ಲಿ, ತಿಪಟೂರಿನಲ್ಲಿ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ದಿನ ಅಭಿಮಾನಿಗಳ ಸಂಭ್ರಮ ಒಂದೆಡೆಯಾದರೆ, ಪ್ರೇಕ್ಷಕರ ಮಿಶ್ರ ಪ್ರತಿಕ್ರಿಯೆ ಮತ್ತೊಂದೆಡೆ ಗಮನ ಸೆಳೆದಿದೆ.
- ಮರ್ಯಾದೆ ಪುರುಷ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡಿ ಭಕ್ತಿ ಹೆಚ್ಚಲಿ, ಭಕ್ತರು ಭಗವಂತನಿಗೆ ಪ್ರೀತಿ ಪಾತ್ರರಾಗಿ ಭಕ್ತಿ ಹೆಚ್ಚಿಸಿ ಭಗವಂತನೇ ಒಬ್ಬನೇ ಶಾಶ್ವತ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವ ಧೂತ ಸ್ವಾಮಿಜಿ ಮರ್ಯಾದೆ ಪುರುಷ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡಿ ಭಕ್ತಿ ಹೆಚ್ಚಲಿ, ಭಕ್ತರು ಭಗವಂತನಿಗೆ ಪ್ರೀತಿ ಪಾತ್ರರಾಗಿ ಭಕ್ತಿ ಹೆಚ್ಚಿಸಿ ಭಗವಂತನೇ ಒಬ್ಬನೇ ಶಾಶ್ವತ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವ ಧೂತ ಸ್ವಾಮಿಜಿ ಹೇಳಿದರು ಶಿರಾ ತಾಲೂಕಿನ ಬರಗೂರು ಗ್ರಾಮದಲ್ಲಿ ಶ್ರೀರಾಮ ನೂತನ ದೇವಸ್ಥಾನದ ವಿಗ್ರಹ ಮತ್ತು ವಿಮಾನ ಗೋಪುರ ಕಳಸ ಪ್ರತಿಷ್ಠಾಪನ ಮಹೋತ್ಸವದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ದೇವಸ್ಥಾನಗಳ ಪರಂಪರೆಯನ್ನು ಕೆಲವು ಸಾವಿರ ವರ್ಷಗಳ ಹಿಂದೆ ನಾವು ಮಾಡಿದ್ದು ನಮ್ಮ ನೋವು ನಲಿವು ದುಃಖಗಳನ್ನು ದೇವರಿಗೆ ಸಮರ್ಪಿಸುವ ಮೂಲಕ ನೆಮ್ಮದಿ ಕಾಣಲು ಭಕ್ತ ಮತ್ತು ಭಗವಂತನ ನಡುವಿನ ಒಪ್ಪಂದವೇ ದೇವಸ್ಥಾನಗಳ ನಿರ್ಮಿಸಿ ನಮಗೂ ಜಗತ್ತಿಗೆ ಒಳ್ಳೆಯದನ್ನು ಬಯಸುತ್ತೇವೆ, ಪ್ರಕೃತಿಯೇ ದೇವರು ಪಂಚಮ ಭೂತಗಳನ್ನು ದೇವರೆಂದು ಪೂಜಿಸಿ ನಂಬಿದವರು, ನಿರಾಕಾರ ಆಕಾರವಿಲ್ಲ ಇಡೀ ಬ್ರಹ್ಮಾಂಡವೇ ಅವನ ಅಸ್ತಿತ್ವವಾಗಿದೆ ಎಂದು ನಂಬಿದವರು ಎಂದರು. ಶ್ರೀ ರಾಮ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ ಬೊಪ್ಪಣ್ಣ ಮಾತನಾಡಿ 1972ರಲ್ಲಿ ಶ್ರೀ ರಾಮನ ಪುಟ್ಟ ಗುಡಿ ನಿರ್ಮಿಸಿ ಪೂಜೆ, ಪುನಸ್ಕಾರ ನೆರವೇರಿಸುತ್ತಿದ್ದೆವು ಕಳೆದ ಮೂರು ವರ್ಷಗಳಿಂದ ನೂತನ ದೇವಾಲಯ ನಿರ್ಮಾಣದ ಕಾರ್ಯ ಆರಂಭಿಸಿ ಇಂದು ಶ್ರೀರಾಮ ಭಕ್ತರ ದರ್ಶನಕ್ಕೆ ಅನುವು ಮಾಡಲಾಗಿದೆ, ಬರಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ. ಹಾಲಗುಂಡೆಗೌಡ ಮಾತನಾಡಿ ಶಿರಾ ತಾಲೂಕಿನಲ್ಲಿ ಸಾಕಷ್ಟು ಬರದ ಛಾಯೆ ಆವರಿಸುತ್ತಿದ್ದು ಬೋರ್ ಗಳಲ್ಲಿ ನೀರು ಸೇರಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದ್ದು ಮದಲೂರು ಕೆರೆಗೆ ಹೇಮಾವತಿ ನೀರನ್ನು ಹರಿಸುವಂತೆ ಶ್ರೀಗಳು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಮದಲೂರು ಕೆರೆಗೆ ನೀರು ಹರಿಸುವಂತೆ ಹೇಳಿದರು. ಬರಗೂರುಗೆ ಆಗಮಿಸಿದ ಸ್ಪಟಿಕಪುರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಮಹಾ ಸ್ವಾಮೀಜಿಗಳಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಶ್ರೀರಾಮ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಗೌರವ ಅಧ್ಯಕ್ಷ ಬಿ.ಕೆ.ಲಕ್ಷ್ಮಣಗೌಡ, ಉಪಾಧ್ಯಕ್ಷ ಬಿ.ಸಿ. ರಮೇಶ್, ಕಾರ್ಯದರ್ಶಿ ಬಿ.ವಿ.ರೇಣುಕಾ ಪ್ರಸಾದ್, ಸಹ ಕಾರ್ಯದರ್ಶಿ, ಮುದ್ದುಕೃಷ್ಣೇಗೌಡ, ಖಜಾಂಚಿ ಹನುಮಂತರಾಯಪ್ಪ, ಸಂಘಟನಾ ಕಾರ್ಯದರ್ಶಿ ಜಯರಾಮಯ್ಯ, ಮುಖಂಡ ಬೀರಲಿಂಗೇಗೌಡ, ಸತೀಶ್, ಓಂಕಾರಪ್ಪ, ಮಂಜುನಾಥ್ ಆರ್, ಶ್ರೀರಾಮ ದೇವಸ್ಥಾನ ಸೇವಾ ಸಮಿತಿ ಕಾರ್ಯಕಾರಿ ಮಂಡಳಿ ಸದಸ್ಯರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.1
- ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.1
- ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ------------- ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. 27 ಪಂಚಾಯಿತಿಗಳಲ್ಲೂ ಸಂಘ ರಚನೆ: ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.1
- ಸಾರ್ವಜನಿಕ ಸ್ಥಳದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದ ಹೆಲ್ತ್ ಕೇರ್ ಸೆಂಟರ್ಗೆ 40 ಸಾವಿರ ರೂ. ದಂಡ ಬೆಂಗಳೂರು:ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುರಪ್ಪನಪಾಳ್ಯ ಪ್ರದೇಶದಲ್ಲಿ ನಿಯಮಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ಸುರಿದ ಕ್ಲಿನಿಕ್ಗೆ ದಂಡ ವಿಧಿಸಲಾಗಿದೆ. ಇಂದು ಬೆಳಿಗ್ಗೆ ಬಿಟಿಎಂ ಲೇಔಟ್ 1ನೇ ಹಂತದ ಗುರಪ್ಪನಪಾಳ್ಯದ 9ನೇ ಮುಖ್ಯರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ವೈದ್ಯಕೀಯ ತ್ಯಾಜ್ಯಗಳಾದ ಸೂಜಿಗಳು, ಸಿರಿಂಜ್, ಪ್ಲಾಸ್ಟರ್ ಗಳು, ಮಾತ್ರೆ ಡಬ್ಬಗಳು ಹಾಗೂ ಇನ್ನಿತರ ಅಪಾಯಕಾರಿ ವೈದ್ಯಕೀಯ ತ್ಯಾಜ್ಯಗಳನ್ನು ಸುರಿದಿರುವುದನ್ನ ಗಮನಿಸಿದ ಪೌರಕಾರ್ಮಿಕರು ಮಾರ್ಷಲ್ ಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಮಾರ್ಷಲ್ ಗಳು ತ್ಯಾಜ್ಯಗಳನ್ನು ಪರಿಶೀಲಿಸಿದಾಗ ವೈದ್ಯಕೀಯ ತ್ಯಾಜ್ಯಗಳೊಡನೆ ಹೆಲ್ತ್ ಕೇರ್ ಸೆಂಟರ್ ಪ್ರಿಸ್ಕ್ರಿಪ್ಷನ್ ಪತ್ರಗಳು ಕಂಡುಬಂದಿದ್ದ ಮೇರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿರುವವರ ಮಾಹಿತಿ ಪತ್ತೆಯಾಗಿರುತ್ತದೆ. ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದು ಪಾಲಿಕೆಯ ಮಾರ್ಷಲ್ಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಮೇಲಧಿಕಾರಿಗಳ ನಿರ್ದೇಶನದ ಮೇರೆಗೆ ಸ್ಥಳಕ್ಕೆ ಧಾವಿಸಿದ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್ಗಳು, ಸಾರ್ವಜನಿಕರ ಆರೋಗ್ಯ ಮತ್ತು ಪರಿಸರಕ್ಕೆ ಹಾನಿಯುಂಟು ಮಾಡುವ ರೀತಿಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ಸುರಿದಿರುವ ಹೆಲ್ತ್ ಕೇರ್ ಸೆಂಟರ್ಗೆ ಸ್ಥಳದಲ್ಲೇ 40,000 ದಂಡ ವಿಧಿಸಿ, ಡಿಜಿಟಲ್ ಪಾವತಿ ಮೂಲಕ ವಸೂಲಿ ಮಾಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್ ಭಾಗವಹಿಸಿದ್ದರು.1
- ‘ಟಾಕ್ಸಿಕ್’ ರಿಲೀಸ್, ಥಿಯೇಟರ್ಗಳಲ್ಲಿ ಯಶ್ ಹವಾ! ರಾಯನ ಎಂಟ್ರಿಗೆ ಅಭಿಮಾನಿಗಳಿಂದ ಭರ್ಜರಿ ಸೆಲೆಬ್ರೇಷನ್! ‘ಟಾಕ್ಸಿಕ್’ ರಿಲೀಸ್, ಥಿಯೇಟರ್ಗಳಲ್ಲಿ ಯಶ್ ಹವಾ! ರಾಯನ ಎಂಟ್ರಿಗೆ ಅಭಿಮಾನಿಗಳಿಂದ ಭರ್ಜರಿ ಸೆಲೆಬ್ರೇಷನ್!1
- ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್,ರೈತಮುಖಂಡರಿಂದ ಕಡಿಮೆ ಆರ್ ಎಸ್ ಮುತ್ತಿಗೆ,ಬಂಧನ ಬಿಡುಗಡೆ ಮಂಡ್ಯ- ಶ್ರೀರಂಗಪಟ್ಟಣದ ಕೆ. ರ್ ಎಸ್ ಆಣೆಕಟ್ಟೆಯಿಂದ ನೀರು ಹರಿಸುತ್ತದೆ ಇರುವುದನ್ನ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ಕೆಆರ್ ಎಸ್ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ತಮಿಳು ನಾಡು ಏಜೆಂಟ್ ನಂತೆ ವರ್ತಿಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗಿ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹಮಾಡಿದ್ರು, ರಾಜ್ಯಸರ್ಕಾರದ ವಿರುದ್ದ ದಿಕ್ಕಾರ ಕೂಗಿದ್ರು. ರಾಜ್ಯಹಾಗೂ ಕೇಂದ್ರ ಸರ್ಕಾದ ವಿರುದ್ದ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ರು, ಪ್ರತಿಭನಾ ಕಾರರನ್ನು ಪೊಲೀಸ್ ಬಂದಿಸಿದರು, ಕನ್ನಡ ಹೋರಾಟಗಾರರು ವಾಟಾಳ್ ನಾಗರು ಮತ್ತು ರೈತ ಹೋರಾಟಗಾರ ರಾಜ್ಯಾಧ್ಯಕ್ಷರಾದ ಇಂಗಲಗುಪ್ಪೆ ಕೃಷ್ಣೆಗೌಡ ಮತ್ತಿತರರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು..1
- ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಪುಟ್ ಪಾತ್ ರಸ್ತೆಯನ್ನ ಒತ್ತುವರಿ ಮಾಡಿಕೊಂಡಿದ್ದ ಕೆಲ ಅಂಗಡಿಗಳ ಮಾಲೀಕರು ಸೀಮೆಂಟ್ ಮೂಲಕ ನಿರ್ಮಿಸಿ ಕೊಂಡಿದ್ದ ಮೆಟ್ಟಿಲುಗಳನ್ನು ಜೆಸಿಬಿಯಿಂದ ತೆರವು ಕಳೆದ ನಾಲ್ಕು ದಿನಗಳ ಹಿಂದೆಯೇ ಒತ್ತುವರಿ ತೆರವು ಮಾಡುವುದಾಗಿ ಸೂಚಿಸಿದ್ದ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣ2
- ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಪಕ್ಷದ ಶಾಸಕರೊಂದಿಗೆ ಚರ್ಚಿಸಿದ ಸಿಎಂ ಬೆಂಗಳೂರು:ಗೃಹ ಕೃಷ್ಣದಲ್ಲಿ ಮಂಗಳವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಪಕ್ಷದ ಶಾಸಕರೊಂದಿಗೆ ಚರ್ಚಿಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಚಿವರಗಳಾದ ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ ಖರ್ಗೆ, ಮಧು ಬಂಗಾರಪ್ಪ, ಬಿ.ಬಸವಂತಪ್ಪ, ಸತೀಶ್ ಜಾರಿಕಿಹೊಳಿ, ಹೆಚ್.ಸಿ ಬಾಲಕೃಷ್ಣ, ಶಿವಲಿಂಗೇಗೌಡ, , ಎಸ್.ಎಸ್ ಮಲ್ಲಿಕಾರ್ಜುನ, ಟಿ.ರಘುಮೂರ್ತಿ, ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ರವರು ಸೇರಿದಂತೆ ಶಾಸಕರುಗಳು ಉಪಸ್ಥಿತರಿದ್ದರು.1