ಶಿವಮೊಗ್ಗ-ಕಾರಾಗೃಹ ಇಲಾಖೆ ಯಲ್ಲಿ ಉದ್ಯೋಗಾವಕಾಶ: ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಶಿವಮೊಗ್ಗ : ರಾಜ್ಯದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಖಾಲಿ ಇರುವ ವೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಅಲ್ಲಿಯವರೆಗೆ ತಾತ್ಕಾಲಿಕ ವ್ಯವಸ್ಥೆಯಾಗಿ ಮಾಜಿ ಸೈನಿಕರನ್ನು ನೇಮಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಈ ಯೋಜನೆಯಡಿ ಒಟ್ಟು 11 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿವಮೊಗ್ಗ ಮಾತ್ರವಲ್ಲದೆ ನೆರೆಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಮಾಜಿ ಸೈನಿಕರಿಗೂ ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತಿಯಿರುವ ಮಾಜಿ ಸೈನಿಕರು ತಮ್ಮ ಸಂಪೂರ್ಣ ವಯೋಮಿತಿ, ಅನುಭವ ಮತ್ತು ವೈಯಕ್ತಿಕ ವಿವರಗಳನ್ನು ಒಳಗೊಂಡ ಲಿಖಿತ ಅರ್ಜಿಯನ್ನು ಸಿದ್ಧಪಡಿಸಿಕೊಂಡು ಏಪ್ರಿಲ್ 24ರ ಒಳಗಾಗಿ ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಸಲ್ಲಿಸಬೇಕು. ಈ ಕುರಿತು ಮಾಹಿತಿ ನೀಡಿರುವ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ಅವರು, ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ 08182-220925 ಸಂಖ್ಯೆಗೆ ಕರೆ ಮಾಡಬಹುದು ಅಥವಾsoldiersshimoga@gmail.com ಇಮೇಲ್ ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಶಿವಮೊಗ್ಗ-ಕಾರಾಗೃಹ ಇಲಾಖೆ ಯಲ್ಲಿ ಉದ್ಯೋಗಾವಕಾಶ: ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಶಿವಮೊಗ್ಗ : ರಾಜ್ಯದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಖಾಲಿ ಇರುವ ವೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಅಲ್ಲಿಯವರೆಗೆ ತಾತ್ಕಾಲಿಕ ವ್ಯವಸ್ಥೆಯಾಗಿ ಮಾಜಿ ಸೈನಿಕರನ್ನು ನೇಮಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಈ ಯೋಜನೆಯಡಿ ಒಟ್ಟು 11 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿವಮೊಗ್ಗ ಮಾತ್ರವಲ್ಲದೆ ನೆರೆಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಮಾಜಿ ಸೈನಿಕರಿಗೂ ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತಿಯಿರುವ ಮಾಜಿ ಸೈನಿಕರು ತಮ್ಮ ಸಂಪೂರ್ಣ ವಯೋಮಿತಿ, ಅನುಭವ ಮತ್ತು ವೈಯಕ್ತಿಕ ವಿವರಗಳನ್ನು ಒಳಗೊಂಡ ಲಿಖಿತ ಅರ್ಜಿಯನ್ನು ಸಿದ್ಧಪಡಿಸಿಕೊಂಡು ಏಪ್ರಿಲ್ 24ರ ಒಳಗಾಗಿ ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಸಲ್ಲಿಸಬೇಕು. ಈ ಕುರಿತು ಮಾಹಿತಿ ನೀಡಿರುವ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ಅವರು, ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ 08182-220925 ಸಂಖ್ಯೆಗೆ ಕರೆ ಮಾಡಬಹುದು ಅಥವಾsoldiersshimoga@gmail.com ಇಮೇಲ್ ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
- Post by Rahul shetty Rahul shetty Rahu1
- ಶಿವಮೊಗ್ಗ: ಭದ್ರಾವತಿ ನಗರದ ಹೃದಯ ಭಾಗದಲ್ಲಿ ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಛೇರಿ ಸಮೀಪ ನೂತನವಾಗಿ ನಿರ್ಮಾಣಗೊಂಡಿ ರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉದ್ಘಾಟನೆ ಗೊಳಿಸದೆ ಅವಮಾನಗೊಳಿಸಿರುವುದು ಖಂಡನೀಯ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಕ್ರೋಶ ವ್ಯಕ್ತಪಡಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನ ಅಂಬೇಡ್ಕರ್ ಭವನ ಮುಖ್ಯಮಂತ್ರಿ ಸಿದ್ದರಾ ಮಯ್ಯರವರು ಉದ್ಘಾಟಿಸ ಬೇಕೆಂಬುದು ಕ್ಷೇತ್ರದ ನಾಗರೀಕರ ಬೇಡಿಕೆಯಾಗಿತ್ತು. ಸಿದ್ದರಾಮಯ್ಯರವರು ಪಕ್ಕದ ತರೀಕೆರೆ ತಾಲೂಕಿನ ಶಾಸಕರ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ದ್ದರು. ಅಲ್ಲದೆ ಬಾಳೆ ಹೊನ್ನೂರಿನ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿ ದ್ದಾರೆ. ಆದರೆ ಈ ಕ್ಷೇತ್ರಕ್ಕೆ ಆಗಮಿ ಸದೆ ಅಂಬೇಡ್ಕರ್ರವರಿಗೆ ಅವಮಾನಗೊಳಿಸಿದ್ದಾರೆ. ಕ್ಷೇತ್ರದ ಎಂಪಿಎಂ ಅಭಿವೃದ್ಧಿಪಡಿಸುವು ದಾಗಿ ಭರವಸೆ ನೀಡಿದ್ದ ಸಿದ್ದರಾಮ ಯ್ಯರವರು ಇದುವರೆಗೂ ಅಭಿವೃದ್ಧಿಪಡಿಸದೆ ನಿರ್ಲಕ್ಷ್ಯವಹಿಸಿ ರುವುದು ಖಂಡನೀಯ. ಪದೇ ಪದೇ ಕ್ಷೇತ್ರದ ಜನರಿಗೆ ಅವಮಾನ ಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯರವರ ವಿರುದ್ಧ ಪ್ರತಿಭಟನೆ ನಡೆಸುವು ದಾಗಿ ಎಚ್ಚರಿಸಿದರು. ಅಂಬೇಡ್ಕರ್ ಭವನ ನಿರ್ಮಾಣ ದಲ್ಲಿ ಪ್ರಮುಖ ಪಾತ್ರವಹಿಸಿರುವ ಮಾಜಿ ಶಾಸಕ ಎಂ.ಜೆ ಅಪ್ಪಾಜಿ, ಹಾಲಿ ಶಾಸಕ ಬಿ.ಕೆ ಸಂಗಮೇಶ್ವರ್, ಸಂಸದ ಬಿ.ವೈ ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖೆ ಹಾಗು ನಗರಸಭೆ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಅಲ್ಲದೆ ಭವನ ನಿರ್ಮಾಣಕ್ಕೆ ಹೋರಾಟ ನಡೆಸಿದ ಹಾಗು ಉದ್ಘಾಟನೆ ಕಾರ್ಯಕ್ರಮ ಯಶಸ್ವಿಗೊಳಿಸಿದ ಪ್ರತಿಯೊಬ್ಬ ರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.ಉದ್ಘಾಟನಾ ಕಾರ್ಯ ಕ್ರಮದಲ್ಲಿ ಅಂಬೇಡ್ಕರ್ ಭವನ ಕ್ಕಾಗಿ ಹೋರಾಟ ನಡೆಸಿದ ನಿಜವಾದ ಹೋರಾಟಗಾರರನ್ನು ಕಡೆಗಣಿಸಲಾಗಿದೆ. ಈ ಹಿನ್ನಲೆ ಯಲ್ಲಿ ಜೂ.21 ರಂದು ಹೋರಾಟ ಗಾರರಾದ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣ, ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ನೆನಪಿನಲ್ಲಿ ಅಂಬೇಡ್ಕರ್ ಭವನ ದಲ್ಲಿ ಸಮಿತಿಯಿಂದ ನಿಜವಾದ ಹೋರಾಟಗಾರ ರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು. ಕಳೆದ 2 ದಿನಗಳ ಹಿಂದೆ ನಿಧನ ಹೊಂದಿದ ಸಮಿತಿ ಕಾರ್ಯಾಧ್ಯಕ್ಷ ರಾದ ಐ.ಎಲ್ ಅರುಣ್ ಕುಮಾರ್ ಅವರು, ಕಳೆದ 50 ವರ್ಷಗಳಿಂದ ದೀನ ದಲಿತರ ಸೇವೆ ಸಲ್ಲಿಸುತ್ತಾ ಹಲವಾರು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನ ತುಂಬಾ ನೋವುಂಟು ಮಾಡಿದ್ದು, ಸಮಿತಿ ಪದಾಧಿಕಾರಿ ಗಳು, ಸದಸ್ಯರು ಶ್ರದ್ದಾಂಜಲಿ ಸಲ್ಲಿಸುತ್ತೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ರಾದ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಶಾರದಮ್ಮ, ನಗರಸಭೆ ಮಾಜಿ ಸದಸ್ಯೆ ಶೋಭಾ ರವಿಕುಮಾರ್, ಹಳೇನಗರ ಮನೆ ಮಾಲೀಕರ ಸಂಘದ ಅಧ್ಯಕ್ಷ ಟಿ.ಜಿ ಬಸವರಾಜಯ್ಯ, ದಲಿತ ಮುಖಂಡರಾದ ವಿಜಿಯಮ್ಮ ಸೇರಿದಂತೆ ಸಮಿತಿ ಪದಾಧಿ ಕಾರಿಗಳು, ಮುಖಂಡರು ಉಪಸ್ಥಿತರಿದ್ದರು.1
- ಬನ್ನಿ ನಮ್ಮನ್ನು ಸಂಪರ್ಕಿಸಿ3
- ಮದಕರಿಪುರ ಗ್ರಾಮದ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು ಖುದ್ದು ಗ್ರಾಮಸ್ತರೆ ಸ್ವಚ್ಚತೆ ಮಾಡಿದ್ದಾರೆ. ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದ್ದು ಖುದ್ದು ಗ್ರಾಮಸ್ತರೆ ಚರಂಡಿಗಿಳಿದು ಸ್ವಚ್ಚತೆ ಮಾಡಿದ್ದಾರೆ. ಇನ್ನೂ ಮದಕರಿಪುರ ಗ್ರಾಮದಲ್ಲಿ ಚರಂಡಿಗಳು ಕಟ್ಟಿಕೊಂಡು ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ರೋಗ ರುಜುನೆಗಳ ಬೀತಿ ಹೆಚ್ಚಾಗಿದೆ.1
- Post by Suresh Belagere1
- ಜಗಳೂರು:ಜಗಳೂರು ತಾಲ್ಲೂಕಿನಾಧ್ಯಂತ ಬಿಸಿಲಿನತಾಪಮಾನಹೆಚ್ಚುತ್ತಿದ್ದು ಜನರ ಆತಂಕಕೂಡ ಹೆಚ್ಚುತ್ತಾ ಹೋಗುತ್ತಿದೆ. ಅಬ್ಬಾ..ಅಬ್ಬಾ ಏನು ಬಿಸಿಲು ಮಾರಾಯ... ಒಂದು ಎಲೆಯೂ ಮುಸುಕುತ್ತಿಲ್ಲಾ ಎನ್ನುವ ಮಾತು ಜನರ ಬಾಯಲ್ಲಿ ಸರ್ವೆಸಾಮಾನ್ಯವಾಗಿ ಬಿಟ್ಟಿದೆ ! ಎಂದು ಕಾಣವೋ ಇಂತದೊಂದು ಬಿಸಿಲು ಎನ್ನುತ್ತ ಅವರಿಗೆ ಮನಸ್ಸಿಗೆ ಎಲ್ಲಿ ನೆಮ್ಮದಿ ಅನ್ನಿಸುತ್ತದೊ ಅಲ್ಲಿ ಕುಳಿತು ಉಸ್ಸು ಬುಸ್ಸು ಎನ್ನುತ್ತಾ ಗಾಳಿ ಹೊಡೆದು ಕೊಳ್ಳುತ್ತಾ ಮುಂದೆ ಸಾಗುತ್ತಾರೆ... ಇಂತಾ ಬಿಸಿಲಿನ ಜಳಕ್ಕೆ ಕುಳಿತೊವರು ಉಂಟೆ ಎಂಬಂತೆ ಮೈಹಿಗೆ ತೀಟೆ ಸೊಪ್ಪು ಅಚ್ಚಿಸಿಕೊಂಡವರ ರೀತಿ... ಗಾಳಿಯನ್ನು ಹೊಡೆದು ಕೊಳ್ಳುತ್ತಾ ಕಾಲಕಳೆಯುವ ಪರಿಸ್ಥಿತಿಯಾಗಿದೆ ನಮ್ಮ ಜನರ ಪಾಡು.... ಇನ್ನೂ ಮುಂಗಾರು ಎಂಟ್ರಿಕೊಟ್ರೆ... ತುಸು ಸೆಕೆ ಕಡಿಮೆಯಾಗುತ್ತದೆ ಎಂಬುವುದು ಕೆಲವರ ಅಭಿಪ್ರಾಯವಾಗಿದೆ.2
- nagaraja is good for gowda jpn1
- Post by Suresh Belagere1