logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ವೀವ್ಸ್‌ಗಾಗಿ ಜನರು ಏನೇನೋ ಸಾಹಸ, ರೀಲ್ಸ್‌ಗಳನ್ನು ಮಾಡುವುದು ಸಾಮಾನ್ಯವಾಗಿದೆ. ಆದರೆ ಮಧ್ಯಪ್ರದೇಶದ ಪ್ರೇಮಿಗಳ ಜೋಡಿಯೊಂದು ಮಾಡಿದ ಹೊಸ ಬಗೆಯ ಸ್ಟಂಟ್ ಉಲ್ಟಾ ಹೊಡೆದಿದ್ದು, ಕೊನೆಗೆ ಸಂಚಾರಿ ಪೊಲೀಸರ ದಂಡದೊಂದಿಗೆ ಮುಕ್ತಾಯವಾಗಿದೆ. ಆಗಿದ್ದೇನು? ಮಧ್ಯಪ್ರದೇಶದ ಗ್ವಾಲಿಯರ್ ಮೂಲದ ಆದಿತ್ಯ ಎಂಬ ಯುವಕನ ಕಾರಿಗೆ ಆತನ ಗೆಳತಿ ವಿಶಿಷ್ಟ ರೀತಿಯಲ್ಲಿ ಅಲಂಕಾರ ಮಾಡಲು ಮುಂದಾಗಿದ್ದಾಳೆ. ತನ್ನ ಲಿಪ್‌ಸ್ಟಿಕ್‌ನಿಂದ ಕಾರಿನ ತುಂಬ ಬರೋಬ್ಬರಿ 3,400 ಮುತ್ತಿನ (Kiss) ಗುರುತುಗಳನ್ನು ಮೂಡಿಸಿದ್ದಾಳೆ. ಇಡೀ ಕಾರಿನ ಮೇಲೆ ಲಿಪ್‌ಸ್ಟಿಕ್ ಮಾರ್ಕ್ಸ್ ಹಾಕಿದ ನಂತರ, ಆದಿತ್ಯ ಅದೇ ಕಾರಿನಲ್ಲಿ ನಗರದ ರಸ್ತೆಗಳಲ್ಲಿ ರೌಂಡ್ಸ್ ಹೊಡೆದಿದ್ದಾನೆ. ವೈರಲ್ ವಿಡಿಯೋ & ಪೊಲೀಸರ ಎಂಟ್ರಿ... ಕಾರಿನ ತುಂಬ ಮುತ್ತಿನ ಗುರುತುಗಳಿರುವ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಗ್ವಾಲಿಯರ್ ಟ್ರಾಫಿಕ್ ಪೊಲೀಸರು ರಂಗಕ್ಕಿಳಿದಿದ್ದಾರೆ. ನಿಯಮ ಉಲ್ಲಂಘನೆ: ವಾಹನ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಕಾರಿನ ಮೂಲ ಸ್ವರೂಪಕ್ಕೆ ಬದಲಾವಣೆ ಮಾಡಿದ್ದಕ್ಕಾಗಿ ಆದಿತ್ಯನಿಗೆ ಪೊಲೀಸರು ₹5,500 ದಂಡ ವಿಧಿಸಿದ್ದಾರೆ. ಕಾರು ಕ್ಲೀನಿಂಗ್ ಶಿಕ್ಷೆ: ದಂಡ ಹಾಕಿದ್ದಷ್ಟೇ ಅಲ್ಲದೆ, ಕಾರಿನ ಮೇಲೆ ಹಾಕಿದ್ದ ಎಲ್ಲಾ ಲಿಪ್‌ಸ್ಟಿಕ್ ಮಾರ್ಕ್‌ಗಳನ್ನು ಆತನ ಕೈಯಿಂದಲೇ ಉಜ್ಜಿ ತೊಳೆಯುವಂತೆ ಪೊಲೀಸರು ಮಾಡಿದ್ದಾರೆ. ಪ್ರೀತಿಯ ಪ್ರದರ್ಶನ ಮಾಡಲು ಹೋಗಿ ದುಬಾರಿ ದಂಡ ಕಟ್ಟುವುದರ ಜೊತೆಗೆ ಕಾರು ತೊಳೆಯುವಂತಾದ ಈ ಘಟನೆ ಸದ್ಯ ನೆಟ್ಟಿಗರಲ್ಲಿ ಭರ್ಜರಿ ನಗು ತರಿಸಿದೆ.

1 hr ago
user_Anand Kumar
Anand Kumar
Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
1 hr ago
eeb43b4a-4e1c-438a-ac9a-2606757d217b

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ವೀವ್ಸ್‌ಗಾಗಿ ಜನರು ಏನೇನೋ ಸಾಹಸ, ರೀಲ್ಸ್‌ಗಳನ್ನು ಮಾಡುವುದು ಸಾಮಾನ್ಯವಾಗಿದೆ. ಆದರೆ ಮಧ್ಯಪ್ರದೇಶದ ಪ್ರೇಮಿಗಳ ಜೋಡಿಯೊಂದು ಮಾಡಿದ ಹೊಸ ಬಗೆಯ ಸ್ಟಂಟ್ ಉಲ್ಟಾ ಹೊಡೆದಿದ್ದು, ಕೊನೆಗೆ ಸಂಚಾರಿ ಪೊಲೀಸರ ದಂಡದೊಂದಿಗೆ ಮುಕ್ತಾಯವಾಗಿದೆ. ಆಗಿದ್ದೇನು? ಮಧ್ಯಪ್ರದೇಶದ ಗ್ವಾಲಿಯರ್ ಮೂಲದ ಆದಿತ್ಯ ಎಂಬ ಯುವಕನ ಕಾರಿಗೆ ಆತನ ಗೆಳತಿ ವಿಶಿಷ್ಟ ರೀತಿಯಲ್ಲಿ ಅಲಂಕಾರ ಮಾಡಲು ಮುಂದಾಗಿದ್ದಾಳೆ. ತನ್ನ ಲಿಪ್‌ಸ್ಟಿಕ್‌ನಿಂದ ಕಾರಿನ ತುಂಬ ಬರೋಬ್ಬರಿ 3,400 ಮುತ್ತಿನ (Kiss) ಗುರುತುಗಳನ್ನು ಮೂಡಿಸಿದ್ದಾಳೆ. ಇಡೀ ಕಾರಿನ ಮೇಲೆ ಲಿಪ್‌ಸ್ಟಿಕ್ ಮಾರ್ಕ್ಸ್ ಹಾಕಿದ ನಂತರ, ಆದಿತ್ಯ ಅದೇ ಕಾರಿನಲ್ಲಿ ನಗರದ ರಸ್ತೆಗಳಲ್ಲಿ ರೌಂಡ್ಸ್ ಹೊಡೆದಿದ್ದಾನೆ. ವೈರಲ್ ವಿಡಿಯೋ & ಪೊಲೀಸರ ಎಂಟ್ರಿ... ಕಾರಿನ ತುಂಬ ಮುತ್ತಿನ ಗುರುತುಗಳಿರುವ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಗ್ವಾಲಿಯರ್ ಟ್ರಾಫಿಕ್ ಪೊಲೀಸರು ರಂಗಕ್ಕಿಳಿದಿದ್ದಾರೆ. ನಿಯಮ ಉಲ್ಲಂಘನೆ: ವಾಹನ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಕಾರಿನ ಮೂಲ ಸ್ವರೂಪಕ್ಕೆ ಬದಲಾವಣೆ ಮಾಡಿದ್ದಕ್ಕಾಗಿ ಆದಿತ್ಯನಿಗೆ ಪೊಲೀಸರು ₹5,500 ದಂಡ ವಿಧಿಸಿದ್ದಾರೆ. ಕಾರು ಕ್ಲೀನಿಂಗ್ ಶಿಕ್ಷೆ: ದಂಡ ಹಾಕಿದ್ದಷ್ಟೇ ಅಲ್ಲದೆ, ಕಾರಿನ ಮೇಲೆ ಹಾಕಿದ್ದ ಎಲ್ಲಾ ಲಿಪ್‌ಸ್ಟಿಕ್ ಮಾರ್ಕ್‌ಗಳನ್ನು ಆತನ ಕೈಯಿಂದಲೇ ಉಜ್ಜಿ ತೊಳೆಯುವಂತೆ ಪೊಲೀಸರು ಮಾಡಿದ್ದಾರೆ. ಪ್ರೀತಿಯ ಪ್ರದರ್ಶನ ಮಾಡಲು ಹೋಗಿ ದುಬಾರಿ ದಂಡ ಕಟ್ಟುವುದರ ಜೊತೆಗೆ ಕಾರು ತೊಳೆಯುವಂತಾದ ಈ ಘಟನೆ ಸದ್ಯ ನೆಟ್ಟಿಗರಲ್ಲಿ ಭರ್ಜರಿ ನಗು ತರಿಸಿದೆ.

More news from ಕರ್ನಾಟಕ and nearby areas
  • "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    1
    "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ 

ಕಲ್ಯಾಣ ವಾರ್ತೆ -ಯಾದಗಿರಿ 
ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. 
೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು.
*ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ 
೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು  ಕೋಲಿ ಸಮಾಜದ ಆಶಯವಾಗಿದೆ*-"
*ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    user_DR. S.S. NAYAK
    DR. S.S. NAYAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    13 hrs ago
  • ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿದಿದೆ: ಜೆ.ಶರಣಪ್ಪ ಗೌಡ. ಸಿರವಾರ: ಟಿಎಲ್ಬಿಸಿ ಎಡದಂಡೆ ನಾಲೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ಮಂಗಳವಾರ ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ವಾಡಿಕೆಗಿಂತ ಮಳೆಯಾಗದ ಹಿನ್ನೆಲೆಯಲ್ಲಿ ಬರಗಾಲ ಉಂಟಾಗಿದೆ‌. ಬೆಳೆಗಳನ್ನು ಉಳಿಸಿಕೊಳ್ಳಲು ರೈತರ ಹರಸಾಹಸ ಪಡುವಂತಾಗಿದೆ ಎಂದರು‌. ರಾಯಚೂರು, ಮಾನ್ವಿ ಮತ್ತು ಸಿರವಾರ ತಾಲೂಕಿನ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹೋರಾಟದಲ್ಲಿ ಮಾಜಿ ಶಾಸಕರುಗಳಾದ ರಾಜಾ ವೆಂಕಟಪ್ಪ ನಾಯಕ, ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ರೈತ ಸಂಘದ ಮುಖಂಡ ಚಾಮರಸ ಮಾಲೀ ಪಾಟೀಲ್, ಹೋರಾಟಗಾರರಾದ ಶಂಕರಗೌಡ ಹರವಿ, ಎನ್‌. ಉದಯಕುಮಾರ್ ಸಾಹುಕಾರ, ಜೆ.ದೇವರಾಜ ಗೌಡ, ಅಮರೇಶ ಚಾಗಭಾವಿ, ನಾಗರಾಜ ಗೌಡ, ಸವಾರೆಪ್ಪ, ಬಡ್ಡ ಹನುಮಂತ, ರಾಜಪ್ಪ ಹೊನ್ನಟಗಿ, ಮಲ್ಲಪ್ಪ ದೊಡ್ಮನೆ, ದಾನಪ್ಪ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ರೈತರು ಪಾಲ್ಗೊಂಡಿದ್ದರು.
    2
    ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ.
ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ.
ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿದಿದೆ: ಜೆ.ಶರಣಪ್ಪ ಗೌಡ.
ಸಿರವಾರ: ಟಿಎಲ್ಬಿಸಿ ಎಡದಂಡೆ ನಾಲೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು  
ಖಂಡಿಸಿ ರೈತರು ಮಂಗಳವಾರ ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ವಾಡಿಕೆಗಿಂತ ಮಳೆಯಾಗದ ಹಿನ್ನೆಲೆಯಲ್ಲಿ ಬರಗಾಲ ಉಂಟಾಗಿದೆ‌. ಬೆಳೆಗಳನ್ನು ಉಳಿಸಿಕೊಳ್ಳಲು ರೈತರ ಹರಸಾಹಸ ಪಡುವಂತಾಗಿದೆ ಎಂದರು‌.
ರಾಯಚೂರು, ಮಾನ್ವಿ ಮತ್ತು ಸಿರವಾರ  ತಾಲೂಕಿನ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹೋರಾಟದಲ್ಲಿ ಮಾಜಿ ಶಾಸಕರುಗಳಾದ ರಾಜಾ ವೆಂಕಟಪ್ಪ ನಾಯಕ, ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ರೈತ ಸಂಘದ ಮುಖಂಡ ಚಾಮರಸ ಮಾಲೀ ಪಾಟೀಲ್, ಹೋರಾಟಗಾರರಾದ ಶಂಕರಗೌಡ ಹರವಿ, ಎನ್‌. ಉದಯಕುಮಾರ್ ಸಾಹುಕಾರ, ಜೆ.ದೇವರಾಜ ಗೌಡ, ಅಮರೇಶ ಚಾಗಭಾವಿ, ನಾಗರಾಜ ಗೌಡ, ಸವಾರೆಪ್ಪ, ಬಡ್ಡ ಹನುಮಂತ, ರಾಜಪ್ಪ ಹೊನ್ನಟಗಿ, ಮಲ್ಲಪ್ಪ ದೊಡ್ಮನೆ, ದಾನಪ್ಪ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ರೈತರು ಪಾಲ್ಗೊಂಡಿದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    12 hrs ago
  • ಸಿಂಧನೂರು ಕ್ಷೇತ್ರದಲ್ಲಿ 43,115 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಸಿಂಧನೂರು: ರಾಷ್ಟ್ರೀಯ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಬಳಿಕ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 43,115 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ದೇಸಾಯಿ ತಿಳಿಸಿದ್ದಾರೆ. ಮಂಗಳವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರದಲ್ಲಿ 2,40,941 ಮತದಾರರಿದ್ದರು. ಪರಿಷ್ಕರಣೆ ವೇಳೆ ಮೃತಪಟ್ಟ 6,778, ಶಾಶ್ವತವಾಗಿ ಸ್ಥಳಾಂತರಗೊಂಡ 31,954, ಗೈರುಹಾಜರಿದ್ದ 1,555 ಹಾಗೂ ಡಬಲ್ ಮತದಾರರಾಗಿದ್ದ 2,805 ಮಂದಿಯ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇತರ ಕಾರಣಗಳಿಂದ 23 ಮತದಾರರ ಹೆಸರನ್ನೂ ಡಿಲೀಟ್ ಮಾಡಲಾಗಿದೆ. 2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಒಟ್ಟು 17.90ರಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ ನಗರ ವ್ಯಾಪ್ತಿಯಲ್ಲಿ 20,799 ಹಾಗೂ ಗ್ರಾಮೀಣ ಪ್ರದೇಶದಲ್ಲಿ 22,351 ಮತದಾರರ ಹೆಸರುಗಳು ಡಿಲೀಟ್ ಆಗಿವೆ. ಅರ್ಹ ಮತದಾರರ ಹೆಸರು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದರೆ, ನಿಗದಿತ 13 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಸಲ್ಲಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಕ್ಷೇತ್ರದಲ್ಲಿ 269 ಮತಗಟ್ಟೆಗಳಿದ್ದವು. 1,200ಕ್ಕೂ ಅಧಿಕ ಮತದಾರರಿರುವ ಕಾರಣ ಮಾಡಶಿರವಾರ, ಪಗಡದಿನ್ನಿ ಹಾಗೂ ಬೂದಿಹಾಳ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ವಿ.ಹೆಚ್.ಎ. ಆ್ಯಪ್ ಮೂಲಕ ಮತದಾರರ ಸೇರ್ಪಡೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅರುಣ್ ಕುಮಾರ್ ದೇಸಾಯಿ ಹೇಳಿದರು.
    1
    ಸಿಂಧನೂರು ಕ್ಷೇತ್ರದಲ್ಲಿ 43,115 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್
ಸಿಂಧನೂರು: ರಾಷ್ಟ್ರೀಯ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಬಳಿಕ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 43,115 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ದೇಸಾಯಿ ತಿಳಿಸಿದ್ದಾರೆ.
ಮಂಗಳವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರದಲ್ಲಿ 2,40,941 ಮತದಾರರಿದ್ದರು. ಪರಿಷ್ಕರಣೆ ವೇಳೆ ಮೃತಪಟ್ಟ 6,778, ಶಾಶ್ವತವಾಗಿ ಸ್ಥಳಾಂತರಗೊಂಡ 31,954, ಗೈರುಹಾಜರಿದ್ದ 1,555 ಹಾಗೂ ಡಬಲ್ ಮತದಾರರಾಗಿದ್ದ 2,805 ಮಂದಿಯ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇತರ ಕಾರಣಗಳಿಂದ 23 ಮತದಾರರ ಹೆಸರನ್ನೂ ಡಿಲೀಟ್ ಮಾಡಲಾಗಿದೆ.
2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಒಟ್ಟು 17.90ರಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ ನಗರ ವ್ಯಾಪ್ತಿಯಲ್ಲಿ 20,799 ಹಾಗೂ ಗ್ರಾಮೀಣ ಪ್ರದೇಶದಲ್ಲಿ 22,351 ಮತದಾರರ ಹೆಸರುಗಳು ಡಿಲೀಟ್ ಆಗಿವೆ.
ಅರ್ಹ ಮತದಾರರ ಹೆಸರು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದರೆ, ನಿಗದಿತ 13 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಸಲ್ಲಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ ಎಂದು ಅವರು ತಿಳಿಸಿದರು.
ಈ ಹಿಂದೆ ಕ್ಷೇತ್ರದಲ್ಲಿ 269 ಮತಗಟ್ಟೆಗಳಿದ್ದವು. 1,200ಕ್ಕೂ ಅಧಿಕ ಮತದಾರರಿರುವ ಕಾರಣ ಮಾಡಶಿರವಾರ, ಪಗಡದಿನ್ನಿ ಹಾಗೂ ಬೂದಿಹಾಳ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ವಿ.ಹೆಚ್.ಎ. ಆ್ಯಪ್ ಮೂಲಕ ಮತದಾರರ ಸೇರ್ಪಡೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅರುಣ್ ಕುಮಾರ್ ದೇಸಾಯಿ ಹೇಳಿದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    15 hrs ago
  • ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿ ಸಂಭ್ರಮದ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ ಕಾಳಗಿ: ತಾಲೂಕಿನ ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿರುವ ಸುಕ್ಷೇತ್ರ ಕನ್ನಡಗಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಮಾಸದ ಎರಡನೇ ಸೋಮವಾರ ಅಪಾರ ಭಕ್ತ ಸಮೂಹವು‌ ಭಕ್ತಿಯಿಂದ ಕನ್ನಡಗಿ ಮಲ್ಲಿಕಾರ್ಜುನ ಮಾಹರಾಜ ಕೀ ಜೈ ಎಂಬ ಜಯಘೋಷಗಳನ್ನು ಕೂಗುತ್ತಾ ಮಲ್ಲಿಕಾರ್ಜುನ ಮೂರ್ತಿಯ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು. ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಎರಡನೇ ಸೋಮವಾರ ನಸುಕಿನ‌ ಜಾವ ಕನ್ನಡಗಿ ಮಲ್ಲಿಕಾರ್ಜುನ ಮೂಲ ಕರ್ತೃ ಗದ್ದುಗೆಗೆ ಹಾಗೂ ದೇವಸ್ಥಾನವನ್ನು ವಿವಿಧ ಪುಷ್ಪಾಲಾಂಕರಗಳಿಂದ ಅಲಂಕಾರ ಮಾಡಲಾಗಿತ್ತು. ಮೂಲ ಕತೃ ಗದ್ದುಗೆಗೆ ಅರ್ಚಕರ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ, ಧಾರಾಭಿಷೇಕ, ಮಹಾ ಮಂಗಳಾರತಿ ಜರುಗಿತು. ಮಧ್ಯಾಹ್ನ ಹೇರೂರ (ಕೆ) ಗ್ರಾಮದ ಮುಖಂಡ ಬಸವರಾಜ ಪಾಟೀಲ ಹೇರೂರ ನೇತೃತ್ವದಲ್ಲಿ ಭಜನಾ ಮಂಡಳಿ ದೇವಸ್ಥಾನಕ್ಕೆ ತಲುಪುತ್ತಿದ್ದಂತೆ ಅಲಂಕೃತ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳ, ಭಜನೆ, ನಂದಿಕೋಲು, ಪುರವಂತರ ಕುಣಿತದೊಂದಿಗೆ ದೇವಸ್ಥಾನ ಸುತ್ತಲು ಐದು ಸುತ್ತು ಭವ್ಯ ಮೆರವಣಿಗೆ ಜರುಗಿತು. ಭಕ್ತರು 'ಕನ್ನಡಗಿ ಮಲ್ಲಿಕಾರ್ಜುನ ಮಹಾರಾಜ ಕೀ ಜೈ' ಎಂದು ಜಯಘೋಷ ಕೂಗುತ್ತಾ ಪಲ್ಲಕ್ಕಿ ಉತ್ಸವಕ್ಕೆ ಉತ್ತುತ್ತಿ, ಬಾಳೆ ಹಣ್ಣು, ನಾಣ್ಯ ಎಸೆದು ಭಕ್ತಿ ಸಮರ್ಪಿಸಿದರು. ವಿವಿಧ ಗ್ರಾಮಗಳಿಂದ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಪ್ರಸಾದ,‌ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಕಾಯಿಕರ್ಪೂರ ಮಾಡಿ, ನೈವೇದ್ಯ ಅರ್ಪಿಸಿದರು. ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಭಕ್ತ ಜಗಧೀಶ್ ಜವಳಿ ರಾಜನಾಳ ಅವರು ದೇವಸ್ಥಾನವನ್ನು ಸಂಪೂರ್ಣವಾಗಿ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿರುವುದು ನೇರೆದಿದ್ದ ಭಕ್ತರಿಗೆ ಆಕರ್ಷಿಣಿಯವಾಗಿತ್ತು. ದೇವಸ್ಥಾನ ಸಮಿತಿ ಅಧ್ಯಕ್ಷ ಸುಭಾಶ್ಚಂದ್ರ ಮಾಲಿಪಾಟೀಲ ಕನ್ನಡಗಿ, ಮುಖಂಡರಾದ ಬಸವರಾಜ ಪಾಟೀಲ ಹೇರೂರ, ಸಿದ್ದಣ್ಣ ತಳವಾರ, ಶಿವಕುಮಾರ್ ಪಾಟೀಲ ಹೇರೂರ, ವಿಜಯಕುಮಾರ್ ಪಾಟೀಲ, ಚನ್ನವೀರಪ್ಪ ಮಾಲಿಪಾಟೀಲ, ವಿಜಯಕುಮಾರ ಪೂಜಾರಿ, ಶಾಮರಾಯ ಕನ್ನಡಗಿ, ಗುರಲಿಂಗಪ್ಪ ಪಾಟೀಲ, ಮಲ್ಲಣ್ಣ ನಾಯಕೋಡಿ, ಶಾಂತಕುಮಾರ ತಳವಾರ, ಎಚ್.ಬಿ. ಪಾಟೀಲ, ಮಲ್ಲಿಕಾರ್ಜುನ ವಕೀಲರು ಹಾಗೂ ಕಲಬುರಗಿ, ಹೆರೂರ (ಕೆ), ನಾಗೂರ, ಶೆಳ್ಳಗಿ, ಸಾವತಖೇಡ, ಜೀವನ ಮಾರಡಗಿ, ಹೆಬ್ಬಾಳ ಸೇರಿದಂತೆ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಕಾಳಗಿ ಪೊಲೀಸ್ ಠಾಣೆ ಪಿಎಸ್‌ಐ ತಿಮ್ಮಯ್ಯ ಬಿ.ಕೆ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿತ್ತು.
    1
    ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿ ಸಂಭ್ರಮದ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ
ಕಾಳಗಿ: ತಾಲೂಕಿನ ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿರುವ ಸುಕ್ಷೇತ್ರ ಕನ್ನಡಗಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಮಾಸದ ಎರಡನೇ ಸೋಮವಾರ ಅಪಾರ ಭಕ್ತ ಸಮೂಹವು‌ ಭಕ್ತಿಯಿಂದ ಕನ್ನಡಗಿ ಮಲ್ಲಿಕಾರ್ಜುನ ಮಾಹರಾಜ ಕೀ ಜೈ ಎಂಬ ಜಯಘೋಷಗಳನ್ನು ಕೂಗುತ್ತಾ ಮಲ್ಲಿಕಾರ್ಜುನ ಮೂರ್ತಿಯ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು.
ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಎರಡನೇ ಸೋಮವಾರ ನಸುಕಿನ‌ ಜಾವ ಕನ್ನಡಗಿ ಮಲ್ಲಿಕಾರ್ಜುನ ಮೂಲ ಕರ್ತೃ ಗದ್ದುಗೆಗೆ ಹಾಗೂ ದೇವಸ್ಥಾನವನ್ನು ವಿವಿಧ ಪುಷ್ಪಾಲಾಂಕರಗಳಿಂದ ಅಲಂಕಾರ ಮಾಡಲಾಗಿತ್ತು. ಮೂಲ ಕತೃ ಗದ್ದುಗೆಗೆ ಅರ್ಚಕರ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ, ಧಾರಾಭಿಷೇಕ, ಮಹಾ ಮಂಗಳಾರತಿ ಜರುಗಿತು.
ಮಧ್ಯಾಹ್ನ ಹೇರೂರ (ಕೆ) ಗ್ರಾಮದ ಮುಖಂಡ ಬಸವರಾಜ ಪಾಟೀಲ ಹೇರೂರ ನೇತೃತ್ವದಲ್ಲಿ ಭಜನಾ ಮಂಡಳಿ ದೇವಸ್ಥಾನಕ್ಕೆ ತಲುಪುತ್ತಿದ್ದಂತೆ ಅಲಂಕೃತ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳ, ಭಜನೆ, ನಂದಿಕೋಲು, ಪುರವಂತರ ಕುಣಿತದೊಂದಿಗೆ ದೇವಸ್ಥಾನ ಸುತ್ತಲು ಐದು ಸುತ್ತು ಭವ್ಯ ಮೆರವಣಿಗೆ ಜರುಗಿತು. ಭಕ್ತರು 'ಕನ್ನಡಗಿ ಮಲ್ಲಿಕಾರ್ಜುನ ಮಹಾರಾಜ ಕೀ ಜೈ' ಎಂದು ಜಯಘೋಷ ಕೂಗುತ್ತಾ ಪಲ್ಲಕ್ಕಿ ಉತ್ಸವಕ್ಕೆ ಉತ್ತುತ್ತಿ, ಬಾಳೆ ಹಣ್ಣು, ನಾಣ್ಯ ಎಸೆದು ಭಕ್ತಿ ಸಮರ್ಪಿಸಿದರು.
ವಿವಿಧ ಗ್ರಾಮಗಳಿಂದ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಪ್ರಸಾದ,‌ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಕಾಯಿಕರ್ಪೂರ ಮಾಡಿ, ನೈವೇದ್ಯ ಅರ್ಪಿಸಿದರು. ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಭಕ್ತ ಜಗಧೀಶ್ ಜವಳಿ ರಾಜನಾಳ ಅವರು ದೇವಸ್ಥಾನವನ್ನು ಸಂಪೂರ್ಣವಾಗಿ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿರುವುದು ನೇರೆದಿದ್ದ ಭಕ್ತರಿಗೆ ಆಕರ್ಷಿಣಿಯವಾಗಿತ್ತು.
ದೇವಸ್ಥಾನ ಸಮಿತಿ ಅಧ್ಯಕ್ಷ ಸುಭಾಶ್ಚಂದ್ರ ಮಾಲಿಪಾಟೀಲ ಕನ್ನಡಗಿ, ಮುಖಂಡರಾದ ಬಸವರಾಜ ಪಾಟೀಲ ಹೇರೂರ, ಸಿದ್ದಣ್ಣ ತಳವಾರ, ಶಿವಕುಮಾರ್ ಪಾಟೀಲ ಹೇರೂರ, ವಿಜಯಕುಮಾರ್ ಪಾಟೀಲ,   ಚನ್ನವೀರಪ್ಪ ಮಾಲಿಪಾಟೀಲ, ವಿಜಯಕುಮಾರ ಪೂಜಾರಿ, ಶಾಮರಾಯ ಕನ್ನಡಗಿ, ಗುರಲಿಂಗಪ್ಪ ಪಾಟೀಲ, ಮಲ್ಲಣ್ಣ ನಾಯಕೋಡಿ, ಶಾಂತಕುಮಾರ ತಳವಾರ, ಎಚ್.ಬಿ. ಪಾಟೀಲ, ಮಲ್ಲಿಕಾರ್ಜುನ ವಕೀಲರು ಹಾಗೂ ಕಲಬುರಗಿ, ಹೆರೂರ (ಕೆ), ನಾಗೂರ, ಶೆಳ್ಳಗಿ, ಸಾವತಖೇಡ, ಜೀವನ ಮಾರಡಗಿ, ಹೆಬ್ಬಾಳ ಸೇರಿದಂತೆ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಕಾಳಗಿ ಪೊಲೀಸ್ ಠಾಣೆ ಪಿಎಸ್‌ಐ ತಿಮ್ಮಯ್ಯ ಬಿ.ಕೆ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿತ್ತು.
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    20 hrs ago
  • ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.
    1
    ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.
ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
  • ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಗುಂಡಣ್ಣ ಡಿಗ್ಗಿ ಮಾತುಗಳಿಗೆ ಸಭಿಕರಿಂದ ಭರ್ಜರಿ ಚಪ್ಪಾಳೆ, ನಗೆ
    1
    ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಗುಂಡಣ್ಣ ಡಿಗ್ಗಿ ಮಾತುಗಳಿಗೆ ಸಭಿಕರಿಂದ ಭರ್ಜರಿ ಚಪ್ಪಾಳೆ, ನಗೆ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    19 hrs ago
  • ಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿ ಸಿಂದಗಿ : ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಿ, ರೈತರ ನೆರವಿಗೆ ಧಾವಿಸಬೇಕು ಎಂದು ರೈತ ಹೋರಾಟಗಾರ ಪೀರು ಕೇರೂರ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು. ಅಲ್ಲದೆ, ಕೇಂದ್ರ ಸರ್ಕಾರವೂ ರೈತರ ನೆರವಿಗೆ ಬಂದು ಅಗತ್ಯ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ರಾಜಕೀಯ ಹಗ್ಗಜಗ್ಗಾಟದಲ್ಲಿ ರೈತರ ಸಮಸ್ಯೆಗಳನ್ನು ಮರೆತು ಕುಳಿತಿವೆ ಎಂದು ಪೀರು ಕೇರೂರ ಆರೋಪಿಸಿದರು. ರೈತರ ಸಂಕಷ್ಟಕ್ಕೆ ಸರ್ಕಾರಗಳು ಕೂಡಲೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪೀರು ಕೇರೂರ ಎಚ್ಚರಿಕೆ ನೀಡಿದರು.
    1
    ಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿ
ಸಿಂದಗಿ : ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಿ, ರೈತರ ನೆರವಿಗೆ ಧಾವಿಸಬೇಕು ಎಂದು ರೈತ ಹೋರಾಟಗಾರ ಪೀರು ಕೇರೂರ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು. ಅಲ್ಲದೆ, ಕೇಂದ್ರ ಸರ್ಕಾರವೂ ರೈತರ ನೆರವಿಗೆ ಬಂದು ಅಗತ್ಯ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ರಾಜಕೀಯ ಹಗ್ಗಜಗ್ಗಾಟದಲ್ಲಿ ರೈತರ ಸಮಸ್ಯೆಗಳನ್ನು ಮರೆತು ಕುಳಿತಿವೆ ಎಂದು ಪೀರು ಕೇರೂರ ಆರೋಪಿಸಿದರು.
ರೈತರ ಸಂಕಷ್ಟಕ್ಕೆ ಸರ್ಕಾರಗಳು ಕೂಡಲೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪೀರು ಕೇರೂರ ಎಚ್ಚರಿಕೆ ನೀಡಿದರು.
    user_NERA NUDI NEWS
    NERA NUDI NEWS
    ಸಿಂದಗಿ, ವಿಜಯಪುರ, ಕರ್ನಾಟಕ•
    23 hrs ago
  • ಆ.26 ರಂದು ಅಖಿಲಭಾರತ ಕ್ರೈಸ್ತ ಮಹಾಸಭಾ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ- ರಾಮಕೃಷ್ಣ ಪ್ರಸಾದ ರಾಯಚೂರು : ಅಖಿಲ ಭಾರತ ಕ್ರೈಸ್ತ ಮಹಾಸಭಾದ ಜಿಲ್ಲಾಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆ.26 ರಂದು ನಗರದ ಪಂಡಿತ ಸಿದ್ದರಾಮ ರಂಗಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ರಾಮಕೃಷ್ಣ ಪ್ರಸಾದ.ಎಂ ಹೇಳಿದರು. ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ಅಂದು ಬೆಳಿಗ್ಗೆ ಆರ್‌ಟಿಓ ವೃತ್ತದಿಂದ ರಂಗಮಂದಿರದವರೆಗೆ ಬೈಕ್ ರ್ಯಾಲಿ ನಡೆಸಲಾಗುತ್ತದೆ. ನಂತರ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಮಹಾಸಭಾ ರಾಜ್ಯಾಧ್ಯಕ್ಷ ಪ್ರಜ್ವಲ್ ಸ್ವಾಮಿ ಆಗಮಿಸಲಿದ್ದಾರೆ. ಶಾಸಕರುಗಳಾದ ಡಾ.ಶಿವರಾಜ ಪಾಟೀಲ್, ಗ್ರಾಮೀಣ ಶಾಸಕ ದದ್ದಲ್ ಬಸನಗೌಡ, ಎ.ವಸಂತಕುಮಾರ, ಮಾಜಿ ಸಚಿವ ಎನ್‌.ಎಸ್.ಭೋಸರಾಜ, ಕೆ.ಶಿವನಗೌಡ ನಾಯಕ ಸೇರಿದಂತೆ ಅನೇಕ ರಾಜಕೀಯ ಗಣ್ಯರು, ವಿವಿಧ ಸಭಾಪಾಲಕರು, ಸಮಾಜಬಾಂಧವರು ಭಾಗವಹಿಸಲಿದ್ದಾರೆ ಎಂದರು. ಸಭಾಪಾಲಕ ಜಾನ್‌ವೆಸ್ಲಿ ಮಾತನಾಡಿ ಕ್ರೈಸ್ತ ಮಹಾಸಭಾದ ಕಾರ್ಯಕ್ರಮ ದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ರಾಜ್ಯ ಹಾಗೂ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದರು.
    1
    ಆ.26 ರಂದು ಅಖಿಲಭಾರತ ಕ್ರೈಸ್ತ ಮಹಾಸಭಾ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ- ರಾಮಕೃಷ್ಣ ಪ್ರಸಾದ
ರಾಯಚೂರು : ಅಖಿಲ ಭಾರತ ಕ್ರೈಸ್ತ ಮಹಾಸಭಾದ ಜಿಲ್ಲಾಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆ.26 ರಂದು ನಗರದ ಪಂಡಿತ ಸಿದ್ದರಾಮ ರಂಗಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ರಾಮಕೃಷ್ಣ ಪ್ರಸಾದ.ಎಂ ಹೇಳಿದರು.
ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ಅಂದು ಬೆಳಿಗ್ಗೆ ಆರ್‌ಟಿಓ ವೃತ್ತದಿಂದ ರಂಗಮಂದಿರದವರೆಗೆ ಬೈಕ್ ರ್ಯಾಲಿ ನಡೆಸಲಾಗುತ್ತದೆ. ನಂತರ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಮಹಾಸಭಾ ರಾಜ್ಯಾಧ್ಯಕ್ಷ ಪ್ರಜ್ವಲ್ ಸ್ವಾಮಿ ಆಗಮಿಸಲಿದ್ದಾರೆ. ಶಾಸಕರುಗಳಾದ ಡಾ.ಶಿವರಾಜ ಪಾಟೀಲ್, ಗ್ರಾಮೀಣ ಶಾಸಕ ದದ್ದಲ್ ಬಸನಗೌಡ, ಎ.ವಸಂತಕುಮಾರ, ಮಾಜಿ ಸಚಿವ ಎನ್‌.ಎಸ್.ಭೋಸರಾಜ, ಕೆ.ಶಿವನಗೌಡ ನಾಯಕ ಸೇರಿದಂತೆ ಅನೇಕ ರಾಜಕೀಯ ಗಣ್ಯರು, ವಿವಿಧ ಸಭಾಪಾಲಕರು, ಸಮಾಜಬಾಂಧವರು ಭಾಗವಹಿಸಲಿದ್ದಾರೆ ಎಂದರು.
ಸಭಾಪಾಲಕ ಜಾನ್‌ವೆಸ್ಲಿ ಮಾತನಾಡಿ ಕ್ರೈಸ್ತ ಮಹಾಸಭಾದ ಕಾರ್ಯಕ್ರಮ ದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ರಾಜ್ಯ ಹಾಗೂ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.