Shuru
Apke Nagar Ki App…
Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity. Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity. .
Bharat rajpurohit
Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity. Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity. .
More news from ಕರ್ನಾಟಕ and nearby areas
- ಚಳ್ಳಕೆರೆ: ದೈಹಿಕ ಶಿಕ್ಷಕರಿಗೆ ಕಾರ್ಯಗಾರವು ಒಂದು ಅಮೂಲ್ಯ ಅವಕಾಶವಾಗಿದೆ. ಇದು ಅವರಿಗೆ ಹೊಸ ತಂತ್ರಗಳು, ವಿಧಾನಗಳು ಮತ್ತು ಸಂಪನ್ಮೂಲಗಳನ್ನು ಒದಗಿಸುತ್ತದೆ ಮತ್ತು ಅವರ ವೃತ್ತಿಪರ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್ ಸುರೇಶ ಹೇಳಿದರು. ನಗರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ವತಿಯಿಂದ ಹಮ್ಮಿಕೊಂಡಿದ್ದ ದೈಹಿಕ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮದ ಉದ್ಘಾಟನೆಯನ್ನ ನೇರವೇರಿಸಿ ಅವರು ಮಾತನಾಡಿ.ಈ ವರ್ಷದಲ್ಲಿ ಎರಡು ಬಾರಿ ದೈಹಿಕ ಶಿಕ್ಷಕರ ಕಾರ್ಯಗಾರವನ್ನ ಹಮ್ನಿಕೊಂಡಿದ್ದು ಇಡಿ ವರ್ಷದ ದೈಹಿಕ ಶಿಕ್ಷಣ ವಿಭಾಗದ ಚಟುವಟಿಕೆಗಳ ಪುನರ್ ಅವಲೋಕ ನ ಮತ್ತು ಮಾಹಿತಿ ಮತ್ತು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ದೈಹಿಕ ಶಿಕ್ಷಣ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿದುಕೊಂದುಕೊಳ್ಳಬೇಕಾದಂತಹ ಕಾರ್ಯವೈಖರಿ ಬಗ್ಗೆ ಮತ್ತು ಮುಂದಿನ ಮಕ್ಕಳ ದೈಹಿಕ ,ಮಾನಸಿಕ, ಬೌಧಿಕ ವಿಕಾಸತೆ ಗೆ ದೈಹಿಕ ಶಿಕ್ಷಣ ಯಾವ ರೀತಿ ಅಡಿಪಾಯವನ್ನ ಹಾಕಬೇಕು ಎನ್ನುವುದನ್ನ ಚಿಂತನ ಮಂಥನ ಮಾಡಿಕೊಳ್ಳುವಂತಹ ಕಾರ್ಯ ಗಾರ ಇದಾಗಿದೆ. ಇಂತಹ ಕಾರ್ಯಕ್ರಮಗಳು ಕಲಿಕೆಗೆ ಪೂರಕವಾಗಿ ತುಂಬಾ ಅರ್ಥಪೂರ್ಣವಾಗಿವೆ. ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುವಂತಹ ಶಿಕ್ಷಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು... ದಹಿಕ ಶಿಕ್ಷಣದ ಜಿಲ್ಲಾ ಪರಿವೀಕ್ಷ ಕರದ ಚಿದಂಬರ ಸ್ವಾಮಿ ಮಾತನಾಡಿ. ಚಳಕೆರೆ ತಾಲೂಕಿನಲ್ಲಿ ದೈಹಿಕ ದೈಹಿಕ ಶಿಕ್ಷಕರ ಕಾರ್ಯ ಉತ್ತಮವಾಗಿದೆ. ಕ್ರೀಡೆ ಅಂತ ಬಂದಾಗ ವಿದ್ಯಾರ್ಥಿಗಳು ಚಳ್ಳಕೆರೆಯಿಂದ ಜಿಲ್ಲಾ ಮಟ್ಟ, ರಾಜ್ಯಮಟ್ಟ ರಾಷ್ಟ್ರಮಟ್ಟಕ್ಕೂ ಸಹ ಪ್ರತಿನಿಧಿಸಿದ್ದಾರೆ. ದೈಹಿಕ ಶಿಕ್ಷಕರ ಶ್ರಮವಾಗಿದೆ ಮುಂದಿನ ದಿನಗಳಲ್ಲಿ ಸಹ ಇದೇ ರೀತಿ ತಮ್ಮ ಕಾರ್ಯಗಳನ್ನ ಮಾಡಿ ಮಕ್ಕಳ ಪ್ರಗತಿಗೆ ಶ್ರಮಿಸಿ ಎಂದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಸಿಟಿ ವೀರೇಶ್ ಮಾತನಾಡಿ. ರಾಜ್ಯ ನೌಕರರ ಸಂಘದ ವತಿಯಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಇತ್ತೀಚಿಗೆ ತಾನೇ ನ್ಯಾಯಾಂಗ ಇಲಾಖೆ ,ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ತಾಲ್ಲೂಕಿನ ಹಲವು ಇಲಾಖೆಗಳು ಸೇರಿದಂತೆ ಕ್ರೀಡೆಯನ್ನು ಆಯೋಜನೆ ಮಾಡಲಾಗಿತ್ತು ಈ ಕ್ರಿಡೆಯಲ್ಲಿ ಶಿಕ್ಷಣ ಇಲಾಖೆಯಿಂದ ಉತ್ತಮ ಪ್ರದರ್ಶನ ಮಾಡಿ ಮೊದಲ ಬಹುಮಾನವನ್ನು ಗಳಿಸಿತ್ತು. ಇನ್ನು ಮುಂದಿನ ದಿನಗಳಲ್ಲಿ ಇಂತಹ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.. ಈಗಾಗಲೇ ಸರ್ಕಾರ ನೌಕರರ ಸಂಘ ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಬಹುಮಾನ ಪಡೆದವರಿಗೆ 5,000 ಹಾಗೂ ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಕ್ರೀಡಾಪಟುಗಳಿಗೆ 10,000 ನೀಡಲಾಗುವುದು. ಕ್ರೀಡಾಪೋತ್ಸಹವಾಗಿ ನೀಡಲು ನಮ್ಮ ಸಂಘ ತೀರ್ಮಾನಿಸಿದೆ ಎಂದರು.. ಈ ಕಾರ್ಯಕಾರದಲ್ಲಿ ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಿಪ್ಪೇಸ್ವಾಮಿ, ನಾಗರಾಜು.. ಗುರುಮೂರ್ತಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.. ಈ ಒಂದು ದಿನದ ಕಾರ್ಯ ಗಾರದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಪಾಥಲಿಂಗಪ್ಪ, ಚಳ್ಳಕೆರೆ ದೈಹಿಕ ಪರಿವೀಕ್ಷಕರಾದ ಸುನಿಲ್ ನಾಯ್ಕ್, ಸಿದ್ದಲಿಂಗಪ್ಪ ಕೆಟಿ .ವೇಲು ದೈಹಿಕ ಶಿಕ್ಷಕರಾದ ತಿಪ್ಪೇಸ್ವಾಮಿ, ಪ್ರಾಣೇಶ್, ಗಂಗೂಬಾಯಿ ಹಿರೇಮಠ ಹಾಗೂ ನಾಗರಾಜ್ ತಿಪ್ಪೇಸ್ವಾಮಿ ಗುರುಮೂರ್ತಿ.. ತಾಲೂಕಿನ ದೈಹಿಕ ಶಿಕ್ಷಕರು ಇದ್ದರು..1
- ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಬುದ್ಧ ಸರ್ಕಲ್ ನಲ್ಲೊ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದು ಚಿಕಿತ್ಸೆ ಪಲಿಸದೆ ವ್ಯಕ್ತಿ ಮೃತಪಟ್ಟಿದ್ದಾನೆ. ಬಾನುವಾರ ರಾತ್ರಿ 8.30 ರ ವೇಳೆ ಘಟನೆ ನಡೆದಿದ್ದು ಗಾಯಾಳು 42 ವರ್ಷದ ತಾಜ್ ಪೀರ್ ಚಿಕಿತ್ಸೆ ಪಲಿಸದೆ ಮೃತಪಟ್ಟಿದ್ದಾನೆ1
- ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಪಟ್ಟಣದಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಯ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಆಧಾರದ ಮೇಲೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದರಾಮ್ ಮಾರಿಹಾಳ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸ್ಥಳದಲ್ಲಿದ್ದ 12 ಗೃಹಬಳಕೆಯ ಖಾಲಿ ಗ್ಯಾಸ್ ಸಿಲಿಂಡರ್ಗಳು ಹಾಗೂ ಗ್ಯಾಸ್ ರೀಫಿಲ್ಲಿಂಗ್ ಮಾಡಲು ಬಳಸುತ್ತಿದ್ದ ಎರಡು ಯಂತ್ರಗಳು ಮತ್ತು ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಪಟ್ಟಣದ ತೊರೆಕೋಲಮ್ಮನಹಳ್ಳಿ ರಸ್ತೆಯ ಪಕ್ಕದ ಜಮೀನಿನಲ್ಲಿ ಅಕ್ರಮವಾಗಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ಗಳನ್ನು ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಕಾರು ಹಾಗೂ ಆಟೋ ರಿಕ್ಷಾಗಳಿಗೆ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿತ್ತು ಎಂಬ ಮಾಹಿತಿ ದೊರೆತಿತ್ತು. ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಉಂಟಾಗುವ ಸಾಧ್ಯತೆ ಇದ್ದರೂ ಸಹಾ, ಯಾವುದೇ ಸರ್ಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿರುವುದು ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ ಬಂದಿದೆ. ಈ ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆಯ ನಿರೀಕ್ಷಕರಾದ ಗಿರಿಧರ್ ಎಸ್.ಆರ್ ಕೂಡ ಭಾಗವಹಿಸಿದ್ದರು. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- ಗುಡೇಕೋಟೆಯಿಂದ ರಾಮಸಾಗರ ಮತ್ತು ದಿಬ್ಬದಹಳ್ಳಿ ಗುಡೇಕೋಟೆಯಲ್ಲಿರುವ ಚರಂಡಿಯ ಮಾಡಿದ್ದು ಡ್ರೈಜಿನೆಸ್ ತುಂಬಿ ಇಂಚನಾ ಊರಿನಲ್ಲಿ ಇರಕಂತ ಕಸ ಮತ್ತು ಪೇಪರ್ ಗಳು ಚರಂಡಿ ತುಂಬಿ ತುಳುಕಾಡಿ ರೋಡಿನಲ್ಲಿ ಬಂದಿದ್ದು ಡ್ರೈನೇಜ್ ಕಾಮಗಾರಿ ಸ್ವಲ್ಪ ಮಟ್ಟಿಗೆ ಹಾಗಿದ್ದು ದೃವ್ಯವಸ್ಥೆ ಕಂಡಿದ್ದು ಕೂಡಲೆ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ಪಂಚಾಯಿತಿ2
- Post by Dr CP Patel 8302083835 आयुष हॉस्पिटल1
- ಶಿವಮೊಗ್ಗ: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮಹಾಸಭಾ ಜಿಲ್ಲಾ ಸಮಿತಿ ಹಾಗೂ ಜಿಲ್ಲೆಯ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮ ವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡ ಲಾಯಿತು. ಒಳ ಮೀಸಲಾತಿ ಜಾರಿಗೊಳಿ ಸದೇ ಸರ್ಕಾರ ಮುಂದುವರಿದರೆ ರಾಜ್ಯಾ ದ್ಯಂತ ಉಗ್ರ ಹೋರಾಟ ನಡೆಸಲಾಗು ವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆ ಬಳಿಕ ಪ್ರತಿಭಟನಾಕಾ ರರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಂಘಟನೆ ಗಳ ಮುಖಂಡರು, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಯನ್ನು ಜಾರಿಗೆ ತರುವುದು ಸರ್ಕಾರದ ಚುನಾವಣಾ ಪ್ರಣಾಳಿಕೆ ಯಲ್ಲಿ ನೀಡಿದ ಪ್ರಮುಖ ಭರವಸೆ ಯಾಗಿತ್ತು. ಆದರೆ ಸರ್ಕಾರ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಳ್ಳದೆ ಕಾಲಹರಣ ಮಾಡುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾದಿಗ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ತಲತಲಾಂತರಗಳಿಂದ ಅನ್ಯಾಯ ಮತ್ತು ಶೋಷಣೆಗೆ ಒಳಗಾಗಿದ್ದು, ಸಮುದಾಯದ ಜನಸಂಖ್ಯೆಗೆ ಅನುಗುಣ ವಾಗಿ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಕಳೆದ 35 ವರ್ಷಗಳಿಂದ ಹೋರಾಟದ ಮೂಲಕ ಮುಂದಿಟ್ಟು ಕೊಂಡು ಬಂದಿದೆ. ಈ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಕೂಡ ಮಾನ್ಯತೆ ನೀಡಿದ್ದು, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂಬ ಐತಿಹಾಸಿಕ ತೀರ್ಪನ್ನು 2024ರ ಆಗಸ್ಟ್ 1 ರಂದು ನೀಡಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಆದರೆ ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರವೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ವಿಷಯದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರದೆ ಮೀನಾಮೇಷ ಎಣಿಸುತ್ತಿ ರುವುದು ಸಾಮಾಜಿಕ ನ್ಯಾಯದ ಪರವಾಗಿ ಹೋರಾಡುತ್ತಿರುವ ಸಮುದಾಯಗಳಿಗೆ ದೊಡ್ಡ ನಿರಾಶೆ ಯನ್ನುಂಟು ಮಾಡಿದೆ ಎಂದು ಮುಖಂಡರು ದೂರಿದರು. ಜಸ್ಟೀಸ್ ನಾಗಮೋಹನ್ ದಾಸ್ ಅವರ ವರದಿಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ಸ್ಪಷ್ಟ ಶಿಫಾರಸುಗಳು ನೀಡಲಾಗಿದೆ. ಶೇ.17ರಷ್ಟು ಮೀಸಲಾತಿ ಸಂಬಂಧಿಸಿದ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಇರುವುದನ್ನು ಉಲ್ಲೇಖಿಸಿದರೂ, ಈಗಿರುವ ಶೇ.15ರಷ್ಟು ಮೀಸಲಾತಿ ಯಲ್ಲಿಯೇ ಒಳ ಮೀಸಲಾತಿ ಜಾರಿಗೆ ಯಾವುದೇ ಕಾನೂನು ಅಡ್ಡಿಯಿಲ್ಲ ಎಂದು ರಾಜ್ಯದ ಅಡ್ವಕೇಟ್ ಜನರಲ್ ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು. ಇಂತಹ ಪರಿಸ್ಥಿತಿಯಲ್ಲಿಯೇ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಗೊಳಿಸದೇ ಸುಮಾರು 56,342 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಮುಂದಾಗಿ ರುವುದು ಪರಿಶಿಷ್ಟ ಜಾತಿಗಳಲ್ಲಿನ ಅಸ್ಪೃಶ್ಯ ಸಮುದಾಯಗಳ ಪಾಲಿಗೆ ಮರಣ ಶಾಸನದಂತಾಗಿದೆ ಎಂದು ಅವರು ಆರೋಪಿಸಿದರು. ಒಳ ಮೀಸಲಾತಿ ಇಲ್ಲದ ಮೀಸಲಾತಿ ವ್ಯರ್ಥವಾಗುತ್ತದೆ ಮತ್ತು ಅದು ಘೋರ ಸಾಮಾಜಿಕ ಅನ್ಯಾಯ ವಾಗುತ್ತದೆ ಎಂದು ಪ್ರತಿಭಟನಾ ಕಾರರು ಹೇಳಿದರು. ಈ ಹಿನ್ನೆಲೆಯಲ್ಲಿ ಮಾ: 27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ಸ್ಪಷ್ಟ ನಿರ್ಧಾರ ಕೈಗೊಳ್ಳ ಬೇಕು. ಯಾವುದೇ ಉಪಸಮಿತಿ ಅಥವಾ ಹೊಸ ಸಮಿತಿ ರಚಿಸುವ ಅವಶ್ಯಕತೆ ಇಲ್ಲ, ಏಕೆಂದರೆ ಜಸ್ಟೀಸ್ ನಾಗಮೋಹನ್ ದಾಸ್ ವರದಿಯಲ್ಲಿ ಎಲ್ಲ ವಿಷಯಗಳು ಸ್ಪಷ್ಟವಾಗಿ ಉಲ್ಲೇಖಗೊಂಡಿವೆ ಎಂದು ಮುಖಂಡರು ಒತ್ತಾಯಿಸಿದರು. ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ತೀರ್ಮಾನ ಕೈಗೊಂಡು, ಒಳ ಮೀಸಲಾತಿಯ ಅನ್ವಯವೇ 56,342 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಇಲ್ಲವಾದರೆ ಮಾದಿಗ ಮಹಾಸಭಾ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟಗಳು ರಾಜ್ಯಾದ್ಯಂತ ತೀವ್ರ ಉಗ್ರ ಹೋರಾಟ ನಡೆಸಲು ತಯಾರಾಗಿವೆ ಎಂದು ಅವರು ಎಚ್ಚರಿಸಿದರು. ಪ್ರತಿಭಟನೆ ಸಂದರ್ಭದಲ್ಲಿ ಕೆಲ ಹೋರಾಟ ಗಾರರು ಜಿಲ್ಲಾಧಿಕಾರಿ ಕಚೇರಿಯ ಒಳಗೆ ನುಗ್ಗಲು ಪ್ರಯತ್ನಿಸಿದರು.ಆದರೆ ಪೊಲೀಸರು ತಕ್ಷಣವೇ ಅವರನ್ನು ತಡೆದು ಪರಿಸ್ಥಿತಿಯನ್ನು ನಿಯಂತ್ರಿ ಸಿದರು. ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದರೂ ನಂತರ ಪರಿಸ್ಥಿತಿ ಶಾಂತಗೊಂಡಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಚ್. ಶಿವಾಜಿ, ಉಪಾಧ್ಯಕ್ಷ ರಮೇಶ್ ಇ,ಪ್ರಧಾನ ಕಾರ್ಯದರ್ಶಿ ತೇಜಸ್ ಆರ್, ಖಜಾಂಚಿ ಎಂ. ಶಿವಲಿಂಗಪ್ಪ, ಜಿಲ್ಲಾ ಮುಖಂಡ ತಿಮ್ಲಾಪುರ ಲೋಕೇಶಪ್ಪ, ಮಾಜಿ ನಗರಸಭಾ ಸದಸ್ಯ ಆರ್. ಶಿವಣ್ಣ, ಡಿಎಸ್ ಎಸ್ ಸಂಚಾಲಕ ಚಿನ್ನಯ್ಯ, ಸಮಾಜದ ಪ್ರಮುಖರಾದ ಮಂಜುನಾಥ ಎಸ್, ಸೂಲಯ್ಯ, ಅಣ್ಣಪ್ಪ ಪಿ, ಟಿ.ಹೆಚ್. ಹಾಲೇಶಪ್ಪ, ಅಣ್ಣಪ್ಪ ಎ.ಕೆ, ಹೆಚ್.ಎನ್. ಪ್ರಭು, ಮಂಜಪ್ಪ ಬೀರನಕೆರೆ, ನಗರಾಧ್ಯಕ್ಷ ಅಣ್ಣಪ್ಪ ಕೆ, ಶಿಕಾರಿಪುರ ಅಧ್ಯಕ್ಷ ಮುಗಳಗೆರೆ ಬಸವರಾಜ್, ಗ್ರಾಮಾಂತರ ಅಧ್ಯಕ್ಷ ನೀಲಪ್ಪ, ರಘು, ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ನಾಗರಾಜ್, ಭದ್ರಾವತಿ ತಾಲೂಕು ಅಧ್ಯಕ್ಷ ಮೈಲಾರಪ್ಪ, ಸೊರಬ ತಾಲೂಕು ಅಧ್ಯಕ್ಷ ಗಿಡ್ಡಪ್ಪ, ಯುವ ಘಟಕ ಜಿಲ್ಲಾಧ್ಯಕ್ಷ ನಿಖಿಲ್ ಮೂರ್ತಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಕೆಂಪಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.1
- Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity.1
- ಚಿತ್ರದುರ್ಗದ ಉಪಾಧ್ಯ ಹೋಟೆಲ್ ಬಳಿ ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನ ಪೊಲೀಸರು ವಷಕ್ಕೆ ಪಡೆದಿದ್ದಾರೆ. ಸೋಮವಾರ ಬೆಳಗ್ಗೆ 10 ಗಂಟೆಗೆ ಚಿತ್ರದುರ್ಗ ಹೊರವಲಯದ ಉಪಾಧ್ಯ ಹೋಟೆಲ್ ಬಳಿ ಘಟನೆ ನಡೆದಿದ್ದು ಶಿವಮೊಗ್ಗ ದಿಂದ ಚಿತ್ರದುರ್ಗ ಮೂಲಕ ತುಮಕೂರು ಕಡೆಗೆ ಹೊರಟಿದ್ದ ಒಂದು ಲಾರಿ ಲೋಡ್ ಸಂಪೂರ್ಣ ಅಕ್ಕಿಯನ್ನ ಪೊಲೀಸರು ವಷಕ್ಕೆ ಪಡೆದಿದ್ದಾರೆ.1
- Post by Asme4