ಶಿವಮೊಗ್ಗ-ಸರ್ಕಾರಿ ಮಹಿಳಾ ಕಾಲೇಜಿನ ಸ್ವಂತ ಕಟ್ಟಡ ಮಂಜೂರಾತಿಗೆ ಕಾಂಗ್ರೆಸ್ ಮನವಿ ಶಿವಮೊಗ್ಗ: ನಗರದ ಏಕೈಕ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ನಿವೇಶನ ಹಾಗೂ ಸ್ವಂತ ಕಟ್ಟಡ ಮಂಜೂರು ಮಾಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ ರಮೇಶ್ ಶಂಕರಘಟ್ಟ ಮನವಿ ಮಾಡಿದ್ದಾರೆ. ಅವರು ಶನಿವಾರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣ ನೀಡುತ್ತಾ ಬರುತ್ತಿರುವ ಪ್ರತಿಷ್ಠಿತ ಕಾಲೇಜಾಗಿದ್ದು, ಸುಮಾರು 250 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿ ದ್ದಾರೆ. ವ್ಯಾಸಂಗಕ್ಕಾಗಿ ಪ್ರತಿವರ್ಷ ಸಾವಿರಾರು ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ ಸ್ಥಳಾವಕಾಶದ ಕೊರತೆ ಹಿನ್ನಲೆಯಲ್ಲಿ ಅನೇಕ ವಿದ್ಯಾರ್ಥಿನಿ ಯರು ಪ್ರವೇಶಾವಕಾಶದಿಂದ ವಂಚಿತ ರಾಗುತ್ತಿದ್ದಾರೆ ಎಂದು ರಮೇಶ್ ಮನವಿಯಲ್ಲಿ ತಿಳಿಸಿದ್ದಾರೆ. 2014ರಿಂದ ಕರ್ನಾಟಕ ಸಂಘದ ಪಕ್ಕದ ಶಾಲಾ ಕಟ್ಟಡದಲ್ಲಿ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ತರಗತಿಗಳು ನಡೆಯುತ್ತಿದ್ದು, ಕಾಲೇಜು ಸಾಕಷ್ಟು ಸ್ಥಳಾವಕಾಶದ ಕೊರತೆ ಅನುಭವಿಸುತ್ತಿದೆ. ಅದೇ ಆವರಣದಲ್ಲಿ ಮಹಿಳಾ ಪಿಯು ಕಾಲೇಜು, ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳು ಇರುವುದರಿಂದ, ಒಮ್ಮೆ 1ನೇ ತರಗತಿ ಪ್ರವೇಶ ಪಡೆದ ಹೆಣ್ಣು ಮಗಳು ಪದವಿಯನ್ನು ಪಡೆದು ಹೊರಬರಲು ಅವಕಾಶವಿದೆ. ಆದ್ದರಿಂದ ಈಗ ಕಾಲೇಜು ನಡೆಯುತ್ತಿರುವ ಆವರಣದಲ್ಲಿಯೇ ಕಾಲೇಜಿಗೆ ನಿವೇಶನ ಹಾಗೂ ಕಟ್ಟಡವನ್ನು ಒದಗಿಸಿ ಕೊಡಬೇಕಾಗಿ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕಿಸ್ ಬಾನು,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕಲಗೋಡು ರತ್ನಾಕರ್, ದೇವಿ ಕುಮಾರ್ ವಿಜಯಕುಮಾರ್, ಯು ಶಿವಾನಂದ ಜಿ.ಡಿ. ಮಂಜುನಾಥ್ ಉಪಸ್ಥಿತರಿದ್ದರು.
ಶಿವಮೊಗ್ಗ-ಸರ್ಕಾರಿ ಮಹಿಳಾ ಕಾಲೇಜಿನ ಸ್ವಂತ ಕಟ್ಟಡ ಮಂಜೂರಾತಿಗೆ ಕಾಂಗ್ರೆಸ್ ಮನವಿ ಶಿವಮೊಗ್ಗ: ನಗರದ ಏಕೈಕ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ನಿವೇಶನ ಹಾಗೂ ಸ್ವಂತ ಕಟ್ಟಡ ಮಂಜೂರು ಮಾಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ ರಮೇಶ್ ಶಂಕರಘಟ್ಟ ಮನವಿ ಮಾಡಿದ್ದಾರೆ. ಅವರು ಶನಿವಾರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣ ನೀಡುತ್ತಾ ಬರುತ್ತಿರುವ ಪ್ರತಿಷ್ಠಿತ ಕಾಲೇಜಾಗಿದ್ದು, ಸುಮಾರು 250 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿ ದ್ದಾರೆ. ವ್ಯಾಸಂಗಕ್ಕಾಗಿ ಪ್ರತಿವರ್ಷ ಸಾವಿರಾರು ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ ಸ್ಥಳಾವಕಾಶದ ಕೊರತೆ ಹಿನ್ನಲೆಯಲ್ಲಿ ಅನೇಕ ವಿದ್ಯಾರ್ಥಿನಿ ಯರು ಪ್ರವೇಶಾವಕಾಶದಿಂದ ವಂಚಿತ ರಾಗುತ್ತಿದ್ದಾರೆ ಎಂದು ರಮೇಶ್ ಮನವಿಯಲ್ಲಿ ತಿಳಿಸಿದ್ದಾರೆ. 2014ರಿಂದ ಕರ್ನಾಟಕ ಸಂಘದ ಪಕ್ಕದ ಶಾಲಾ ಕಟ್ಟಡದಲ್ಲಿ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ತರಗತಿಗಳು ನಡೆಯುತ್ತಿದ್ದು, ಕಾಲೇಜು ಸಾಕಷ್ಟು ಸ್ಥಳಾವಕಾಶದ ಕೊರತೆ ಅನುಭವಿಸುತ್ತಿದೆ. ಅದೇ ಆವರಣದಲ್ಲಿ ಮಹಿಳಾ ಪಿಯು ಕಾಲೇಜು, ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳು ಇರುವುದರಿಂದ, ಒಮ್ಮೆ 1ನೇ ತರಗತಿ ಪ್ರವೇಶ ಪಡೆದ ಹೆಣ್ಣು ಮಗಳು ಪದವಿಯನ್ನು ಪಡೆದು ಹೊರಬರಲು ಅವಕಾಶವಿದೆ. ಆದ್ದರಿಂದ ಈಗ ಕಾಲೇಜು ನಡೆಯುತ್ತಿರುವ ಆವರಣದಲ್ಲಿಯೇ ಕಾಲೇಜಿಗೆ ನಿವೇಶನ ಹಾಗೂ ಕಟ್ಟಡವನ್ನು ಒದಗಿಸಿ ಕೊಡಬೇಕಾಗಿ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕಿಸ್ ಬಾನು,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕಲಗೋಡು ರತ್ನಾಕರ್, ದೇವಿ ಕುಮಾರ್ ವಿಜಯಕುಮಾರ್, ಯು ಶಿವಾನಂದ ಜಿ.ಡಿ. ಮಂಜುನಾಥ್ ಉಪಸ್ಥಿತರಿದ್ದರು.
- ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..1
- "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ1
- ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali1
- ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ1
- Post by AAJ KI DASTAK NEWS KARNATAKA1
- *ಭಾರತ ನಲ್ಲಿ ವೈರಲ್*1
- ಯತ್ತಂಬಾಡಿ ಪ್ರಾಥಮಿಕ ಶಾಲೆಯನ್ನು ರಾಜ್ಯದಲ್ಲೇ ಮಾದರಿ ಶಾಲೆ ಮಾಡುವ ಗುರಿ ನಮ್ಮದು , ಉದ್ಯಮಿ ಹೇಮಂತ್. ಹಲಗೂರು:- ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವುಗಳು ಮುಂದಾಗಿದ್ದೇವೆ .ಯತ್ತಂಬಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಜಿಲ್ಲೆ ಯಲ್ಲೇ ಅಲ್ಲ ರಾಜ್ಯದಲ್ಲೇ ನಾನು ಮತ್ತು ನಮ್ಮ ಸ್ನೇಹಿತರು ಸೇರಿ ಮಾದರಿ ಶಾಲೆಯನ್ನಾಗಿ ಮಾಡುವ ಗುರಿಯನ್ನಾಗಿ ಇಟ್ಟುಕೊಂಡಿದ್ದೇವೆ .ಎಂದು ಬೆಂಗಳೂರಿನ ಉದ್ಯಮಿ ಹೇಮಂತ್ ತಿಳಿಸಿದರು. ಸಮೀಪದ ಯತ್ತಂಬಾಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಎಂಬ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಈಗ ಸರ್ಕಾರಿ ಶಾಲೆ ಎಂದರೆ ಅದು ಸರ್ಕಾರಕ್ಕೆ ಸೇರಿದ ಶಾಲೆ, ಸರ್ಕಾರ ಎಂದರೆ ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರ ,ಜೆಡಿಎಸ್ ಸರ್ಕಾರ ಎಂಬ ಭಾವನೆ ಇದೆ. ಇದನ್ನೆಲ್ಲಾ ಹೊರತುಪಡಿಸಿ ಈ ಶಾಲೆ ನಮ್ಮ ಶಾಲೆ ,ನಮ್ಮೆಲ್ಲರ ಶಾಲೆ ಎಂಬ ಗೌರವ ನಮ್ಮಲ್ಲಿ ಬೆಳೆಯಬೇಕು. ಜಯರಾಮು ರವರ ಮೂಲಕ ನಾವು ಈ ಊರಿಗೆ ಕಾಲಿಟ್ಟಿದ್ದೇವೆ ಈ ಊರಿಗೂ ನಮಗೂ ಒಂದು ಋಣಾನುಬಂಧ ಬೆಳೆದಿದೆ .ಈ ಶಾಲೆಯಲ್ಲಿ ನಮಗೊಂದು ಸ್ಥಾನ ಸಿಕ್ಕಿದೆ ಅದು ಉಳಿಯಬೇಕಿದ್ದರೆ ಈ ಶಾಲೆ ಅತ್ಯುನ್ನತ ಮಟ್ಟಕ್ಕೆ ತಲುಪಬೇಕಾದರೆ ಏನೇನುಅಗತ್ಯವಿದೆ ಅದನ್ನೆಲ್ಲ ನಾವು ಪೂರೈಸಲು ಸಿದ್ಧರಿದ್ದೇವೆ. ನಮ್ಮ ಸಂಪಾದನೆಯ ಒಂದು ಭಾಗವನ್ನು ಮೀಸಲಿಟ್ಟುಈ ಶಾಲೆಯನ್ನು ಜಿಲ್ಲೆಯಲ್ಲಿ ಅತ್ಯುತ್ತಮ ಶಾಲೆಯಾಗಿಮಾಡಲು ನನ್ನ ಸ್ನೇಹಿತರ ಸಹಕಾರ ಇದೆ ಎಂಬ ಭಾವನೆಯಿಂದ ಮಾತು ಕೊಡುತ್ತೇನೆ. ಪೋಷಕರೆ ನಿಮ್ಮ ಸಹಕಾರ ನಿಮ್ಮ ಮಕ್ಕಳಿಗೆ ಇರಲಿ, ಗುರುಗಳಿಗೂ ಇರಲಿ ಈ ಮಕ್ಕಳನ್ನು ಉನ್ನತ ಮಟ್ಟದಲ್ಲಿ ನೋಡಲು ಬಯಸುತ್ತೇವೆ. ಇತರ ಶಾಲೆಗಳಿಗೂ ಇದು ಒಂದು ಮಾದರಿ ಶಾಲೆ ಆಗಬೇಕು ಹಾಗೆ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಮತ್ತೋರ್ವ ಉದ್ದಮಿ, ಜಯ ರಾಮು ಮಾತನಾಡುತ್ತಾ, ಹಳ್ಳಿಯಲ್ಲಿ ಬಹುತೇಕ ಸರ್ಕಾರಿ ಶಾಲೆಗಳು ಮುಚ್ಚುವಂತ ಪರಿಸ್ಥಿತಿ ಬಂದಿದೆ ,ಅಂತಹ ಸಂದರ್ಭದಲ್ಲಿ ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಮನೆ ತುಂಬಿಸಿಕೊಳ್ಳುವ ಸುಗ್ಗಿ ಹಬ್ಬಸಂಕ್ರಾಂತಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ನಮ್ಮ ಕಣ್ಮನ ತುಂಬಿಸಿದ ಇಲ್ಲಿಯ ಶಿಕ್ಷಕ ವೃಂದ ಮತ್ತು ಮಕ್ಕಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಹಳ್ಳಿಯ ಶಾಲೆಗಳಲ್ಲಿ ಓದಿ ವಿದ್ಯಾವಂತರಾಗಿ ಪಟ್ಟಣಗಳಲ್ಲಿ ಉದ್ಯೋಗ ನಿಮಿತ್ತ ಒತ್ತಡದ ಜೀವನ ನಡೆಸುತ್ತಿರುವ ನನ್ನ ಕುಟುಂಬದವರು ಮತ್ತು ಸಹೋದ್ಯೋಗಿಗಳನ್ನು ಕರೆತಂದು ಇಲ್ಲಿ ಸಮಯ ಕಳೆದದ್ದಕ್ಕೆ ಅವರಿಗೂ ಧನ್ಯವಾದಗಳು. ದೂರದ ಬೆಟ್ಟ ನುಣ್ಣಗೆ ಎಂದು ಪೋಷಕರು ತಮ್ಮ ಮಕ್ಕಳನ್ನು ಹಳ್ಳಿ ಶಾಲೆ ಬಿಟ್ಟು ಪಟ್ಟಣದ ಆಂಗ್ಲ ಮಾಧ್ಯಮದ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಹಳ್ಳಿ ಶಾಲೆಗಳು ಮುಚ್ಚಲ್ಪಡುತ್ತಿವೆ ಆದುದರಿಂದ ನಾವು ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೈಜೋಡಿಸೋಣ ಎಂದರು. ಶಾಲೆಯ ಮೈದಾನದಲ್ಲಿ ನಿರ್ಮಿಸಲ್ಪಟ್ಟ ಧಾನ್ಯಗಳ ಒಕ್ಕಣೆಯ ಕಣ, ಹೂವಿನಿಂದ ಅಲಂಕರಿಸಿದಧಾನ್ಯಗಳ ರಾಶಿ, ರಟ್ಟಿನಲ್ಲಿ ನಿರ್ಮಿಸಲಾದ ಹಳ್ಳಿಮನೆ, ನೀರು ಸೇದುವ ಬಾವಿ, ಎತ್ತಿನ ಬಂಡಿ ,ಒಣ ಹುಲ್ಲಿನ ಮೆದೆ, ಮೊರಗಳಲ್ಲಿ ತುಂಬಿಟ್ಟ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು, ಹೆಂಗಸು ಮತ್ತುಗಂಡಸಿನ ಚಿತ್ರವನ್ನು ಬಿಡಿಸಿರುವ ಮಡಿಕೆಗಳು, ಪಕ್ಷಿಗಳಿಂದ ಧಾನ್ಯವನ್ನು ಸಂರಕ್ಷಿಸಲು ಹೊಲಗಳಲ್ಲಿರಿಸುವ ಬೆದರು ಬೊಂಬೆಗಳು,ಎಳ್ಳು ಬೆಲ್ಲ ಕೊಬ್ಬರಿ ಮಿಶ್ರಣ, ಪೂಜಾ ಸಾಮಗ್ರಿಗಳು ಒಟ್ಟಾರೆ ಶಾಲೆಯ ಆವರಣ ಹಳ್ಳಿಯ ಸೊಬಗನ್ನು ಪ್ರತಿಬಿಂಬಿಸುತ್ತಿತ್ತು. ಇದೇ ಸಂದರ್ಭದಲ್ಲಿ ಯತ್ತಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ, ಪುಟ್ಟಸ್ವಾಮಾಚಾರಿ, ಸಿ ಆರ್. ಪಿ .ಶಿಕ್ಷಕ ರೇವಣ್ಣ ಹಾಗೂ ಬೆಂಗಳೂರಿನ ಉದ್ಯಮಿಗಳಾದ ಜಯರಾಮು ಶಿವಕುಮಾರ್, ವೀರಣ್ಣ, ಹೇಮಂತ್ ಮತ್ತು ಇತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ಶಿಕ್ಷಕ ವಿಶ್ವನಾಥ ಸೇರದಂತೆ ಶಿಕ್ಷಕ ವೃಂದ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ರಮೇಶ್, ಉಪಾಧ್ಯಕ್ಷರಾದ ಸೋಮಶೇಖರ್, ಶಿವಲಿಂಗೇಗೌಡ, ಕೆಂಚೇಗೌಡ, ಕೆಂಪೇಗೌಡ, ಕೆಂಪರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು. ಯತ್ತಂಬಾಡಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದು.1
- 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...1