logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪ್ರತಿ ದಿನದ ತಾಜಾ ಹಾಗೂ ರಾಜಕೀಯ ಸುದ್ದಿಗಳನ್ನು ತಿಳಿದುಕೊಳ್ಳಲು ಅಂತರಗಂಗೆ ಕನ್ನಡ ದಿನ ಪತ್ರಿಕೆಯನ್ನು ತಪ್ಪದೆ ಓದುವಂತೆ ಕೋರಲಾಗಿದೆ.

1 hr ago
user_ಎಸ್.ಎನ್.ಪ್ರಕಾಶ್
ಎಸ್.ಎನ್.ಪ್ರಕಾಶ್
ಕೋಲಾರ, ಕೋಲಾರ, ಕರ್ನಾಟಕ•
1 hr ago
74548e7d-28ce-4130-b40e-62eb5a4a9d96
38d96acd-a5eb-439d-97c0-c4bea2a47766
3a1e188f-607e-4e89-bc06-8cf4ca80788c
d23b6092-8b98-4472-b033-59c62c200a1a

ಪ್ರತಿ ದಿನದ ತಾಜಾ ಹಾಗೂ ರಾಜಕೀಯ ಸುದ್ದಿಗಳನ್ನು ತಿಳಿದುಕೊಳ್ಳಲು ಅಂತರಗಂಗೆ ಕನ್ನಡ ದಿನ ಪತ್ರಿಕೆಯನ್ನು ತಪ್ಪದೆ ಓದುವಂತೆ ಕೋರಲಾಗಿದೆ.

More news from ಕರ್ನಾಟಕ and nearby areas
  • ಕೋಲಾರ ಜಿಲ್ಲೆಯ ವೇಮಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೆಟ್ಟಹೊಸಪುರ ವಾರ್ಡ್ 2 ರ ಬಳಿ ಇರುವ ಆರ್.ಎಸ್. ರಾಕ್ ಸ್ಯಾಂಡ್ ಕ್ರಷರ್ ಘಟಕದಲ್ಲಿ ಭೀಕರ ಅವಘಡ ಸಂಭವಿಸಿದೆ. ಪಶ್ಚಿಮ ಬಂಗಾಳದಿಂದ ಹೊಟ್ಟೆಪಾಡಿಗಾಗಿ ವಲಸೆ ಬಂದಿದ್ದ ಟಿಪ್ಪರ್ ಚಾಲಕ ಸುಬೇದ್, ನೂರು ಅಡಿ ಆಳದ ಕಲ್ಲು ಕ್ವಾರಿಗೆ ಟಿಪ್ಪರ್ ಸಮೇತ ಉರುಳಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜುಲೈ 5 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕ್ರಷರ್ ನಿರ್ವಹಣೆಯ ಬೇಜವಾಬ್ದಾರಿ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳ ಕೊರತೆಯೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಈ ಭೀಕರ ದುರಂತವನ್ನು ಮುಚ್ಚಿಹಾಕಲು ಕ್ರಷರ್ ಮಾಲೀಕರು ತೀವ್ರ ಯತ್ನ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಧ್ಯಮಗಳು ಮತ್ತು ಸಂಘಟನೆಗಳಿಗೆ ವಿಷಯ ತಿಳಿಯದಂತೆ ಎರಡು ದಿನಗಳ ಕಾಲ ಕ್ರಷರ್ ಒಳಗೆ ಯಾರಿಗೂ ಪ್ರವೇಶ ನೀಡದೆ ಬಂದೋಬಸ್ತ್ ಮಾಡಲಾಗಿತ್ತು. ಅಲ್ಲದೆ, ಮೃತ ಚಾಲಕನ ಬಡ ಕುಟುಂಬಕ್ಕೆ ಹಣದ ಆಮಿಷ ಒಡ್ಡಿ ಅವರಿಂದಲೇ ದೂರು ಕೊಡಿಸಲು ಮಾಲೀಕರು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ಬಹಿರಂಗವಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿದ್ದು, ಕಾನೂನು ರಕ್ಷಕರೆನ್ನಿಸಿಕೊಂಡವರೇ ಭಕ್ಷಕರ ರಕ್ಷಣೆಗೆ ನಿಂತಿದ್ದಾರಾ ಎಂಬ ಗಂಭೀರ ಪ್ರಶ್ನೆಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ನೊಂದ ಕುಟುಂಬಕ್ಕೆ ನ್ಯಾಯ ಹಾಗೂ ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಮೇಡಿಹಾಳ ಮುನಿಆಂಜಿನಪ್ಪ ಹಾಗೂ ಕಲ್ವಮಂಜಲಿ ರಾಮುಶಿವಣ್ಣ ನೇತೃತ್ವದಲ್ಲಿ ಪ್ರಗತಿಪರ ಸಂಘಟನೆಗಳು ವೇಮಗಲ್ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸಿವೆ. ಕ್ರಷರ್ ಮಾಲೀಕನ ವಿರುದ್ಧ ದೂರು ದಾಖಲಿಸುವುದರ ಜೊತೆಗೆ, ಸರ್ಕಾರದ ನಿಯಮಗಳನ್ನು ಪಾಲಿಸದ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾಗಿ ಜಾಣ ಕುರುಡರಂತೆ ವರ್ತಿಸುತ್ತಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೋದಂಡರಾಮಯ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ, ನಾಗನಾಳ ಶಂಕರ್, ರಾಂಪುರ ಮುನಿರಾಜು, ಚನ್ನಪ್ಪನಹಳ್ಳಿ ನಾಗರಾಜ್, ಸುಳದೇನಹಳ್ಳಿ ವೆಂಕಟರಾಜು ಮತ್ತು ವೇಮಗಲ್ ಬಹದ್ದೂರ್ ಖಾನ್ ಉಪಸ್ಥಿತರಿದ್ದರು.
    3
    ಕೋಲಾರ ಜಿಲ್ಲೆಯ ವೇಮಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೆಟ್ಟಹೊಸಪುರ ವಾರ್ಡ್ 2 ರ ಬಳಿ ಇರುವ ಆರ್.ಎಸ್. ರಾಕ್ ಸ್ಯಾಂಡ್ ಕ್ರಷರ್ ಘಟಕದಲ್ಲಿ ಭೀಕರ ಅವಘಡ ಸಂಭವಿಸಿದೆ. ಪಶ್ಚಿಮ ಬಂಗಾಳದಿಂದ ಹೊಟ್ಟೆಪಾಡಿಗಾಗಿ ವಲಸೆ ಬಂದಿದ್ದ ಟಿಪ್ಪರ್ ಚಾಲಕ ಸುಬೇದ್, ನೂರು ಅಡಿ ಆಳದ ಕಲ್ಲು ಕ್ವಾರಿಗೆ ಟಿಪ್ಪರ್ ಸಮೇತ ಉರುಳಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜುಲೈ 5 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕ್ರಷರ್ ನಿರ್ವಹಣೆಯ ಬೇಜವಾಬ್ದಾರಿ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳ ಕೊರತೆಯೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

ಈ ಭೀಕರ ದುರಂತವನ್ನು ಮುಚ್ಚಿಹಾಕಲು ಕ್ರಷರ್ ಮಾಲೀಕರು ತೀವ್ರ ಯತ್ನ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಧ್ಯಮಗಳು ಮತ್ತು ಸಂಘಟನೆಗಳಿಗೆ ವಿಷಯ ತಿಳಿಯದಂತೆ ಎರಡು ದಿನಗಳ ಕಾಲ ಕ್ರಷರ್ ಒಳಗೆ ಯಾರಿಗೂ ಪ್ರವೇಶ ನೀಡದೆ ಬಂದೋಬಸ್ತ್ ಮಾಡಲಾಗಿತ್ತು. ಅಲ್ಲದೆ, ಮೃತ ಚಾಲಕನ ಬಡ ಕುಟುಂಬಕ್ಕೆ ಹಣದ ಆಮಿಷ ಒಡ್ಡಿ ಅವರಿಂದಲೇ ದೂರು ಕೊಡಿಸಲು ಮಾಲೀಕರು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ಬಹಿರಂಗವಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿದ್ದು, ಕಾನೂನು ರಕ್ಷಕರೆನ್ನಿಸಿಕೊಂಡವರೇ ಭಕ್ಷಕರ ರಕ್ಷಣೆಗೆ ನಿಂತಿದ್ದಾರಾ ಎಂಬ ಗಂಭೀರ ಪ್ರಶ್ನೆಗಳು ಕೇಳಿಬರುತ್ತಿವೆ.

ಇದರ ಬೆನ್ನಲ್ಲೇ, ನೊಂದ ಕುಟುಂಬಕ್ಕೆ ನ್ಯಾಯ ಹಾಗೂ ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಮೇಡಿಹಾಳ ಮುನಿಆಂಜಿನಪ್ಪ ಹಾಗೂ ಕಲ್ವಮಂಜಲಿ ರಾಮುಶಿವಣ್ಣ ನೇತೃತ್ವದಲ್ಲಿ ಪ್ರಗತಿಪರ ಸಂಘಟನೆಗಳು ವೇಮಗಲ್ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸಿವೆ. ಕ್ರಷರ್ ಮಾಲೀಕನ ವಿರುದ್ಧ ದೂರು ದಾಖಲಿಸುವುದರ ಜೊತೆಗೆ, ಸರ್ಕಾರದ ನಿಯಮಗಳನ್ನು ಪಾಲಿಸದ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾಗಿ ಜಾಣ ಕುರುಡರಂತೆ ವರ್ತಿಸುತ್ತಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೋದಂಡರಾಮಯ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ, ನಾಗನಾಳ ಶಂಕರ್, ರಾಂಪುರ ಮುನಿರಾಜು, ಚನ್ನಪ್ಪನಹಳ್ಳಿ ನಾಗರಾಜ್, ಸುಳದೇನಹಳ್ಳಿ ವೆಂಕಟರಾಜು ಮತ್ತು ವೇಮಗಲ್ ಬಹದ್ದೂರ್ ಖಾನ್ ಉಪಸ್ಥಿತರಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    1 hr ago
  • ಕೋಲಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಓಂ ಶಕ್ತಿ ಚಲಪತಿ ಅವರು, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ದೇಶದೊಳಗೆ ಅಕ್ರಮವಾಗಿ ನುಸುಳಿರುವವರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಕಾನೂನುಬಾಹಿರ ಕ್ರಮವನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಎಚ್ಚರಿಸಿರುವ ಅವರು, ರಾಜ್ಯದ ಜನರ ಹಿತಾಸಕ್ತಿ, ದೇಶದ ಆಂತರಿಕ ಭದ್ರತೆ ಹಾಗೂ ಕಾನೂನುಬದ್ಧ ವ್ಯವಸ್ಥೆಗೆ ಧಕ್ಕೆಯಾಗುವ ಯಾವುದೇ ನಿರ್ಧಾರವನ್ನು ತಾವಾಗಲಿ ಅಥವಾ ತಮ್ಮ ಪಕ್ಷವಾಗಲಿ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು. ದೇಶದ ಕಾನೂನಿನ ಪ್ರಕಾರ ಅರ್ಹರಾಗಿರುವ ಜನರಿಗೆ ಮಾತ್ರ ಅಗತ್ಯ ದಾಖಲೆಗಳನ್ನು ನೀಡಬೇಕು ಮತ್ತು ಅಕ್ರಮ ನುಸುಳುಕೋರರಿಗೆ ಯಾವುದೇ ರೀತಿಯ ಮಾನ್ಯತೆ ಅಥವಾ ರಾಜಾಶ್ರಯ ನೀಡಬಾರದು ಎಂಬುದು ನಮ್ಮ ಸ್ಪಷ್ಟ ನಿಲುವು ಎಂದು ಅವರು ಪ್ರತಿಪಾದಿಸಿದರು. ಈ ಸೂಕ್ಷ್ಮ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಮತ್ತು ಈ ಪ್ರಕ್ರಿಯೆಯ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಅನುಮಾನ ಹಾಗೂ ಆತಂಕಗಳಿಗೆ ತಕ್ಷಣವೇ ಸ್ಪಷ್ಟ ಉತ್ತರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಮಾಜಿ ಸಂಸದರು ಮುನಿಸ್ವಾಮಿ, ಜಿಲ್ಲಾ ಉಪಾಧ್ಯಕ್ಷರು ವಿಜಿ ಕುಮಾರ್, ಪ್ರಕೋಷ್ಟಗಳ ಸಂಚಾಲಕರು ಮಾಗೇರಿ ನಾರಾಯಣಸ್ವಾಮಿ, ನಗರ ಘಟಕ ಅಧ್ಯಕ್ಷರು ಸಾಮಾ ಅನಿಲ್ ಬಾಬು, ತಿಮ್ಮರಾಯಪ್ಪ, ಕೆಂಬೋಡಿ ನಾರಾಯಣಸ್ವಾಮಿ, ಗೋವಿಂದರಾಜ್, ಮೋರ್ಚಾ ಬಾಲಾಜಿ, ಸೂರಿ ಮತ್ತು ಮಂಜುನಾಥ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
    2
    ಕೋಲಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಓಂ ಶಕ್ತಿ ಚಲಪತಿ ಅವರು, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ದೇಶದೊಳಗೆ ಅಕ್ರಮವಾಗಿ ನುಸುಳಿರುವವರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಕಾನೂನುಬಾಹಿರ ಕ್ರಮವನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಎಚ್ಚರಿಸಿರುವ ಅವರು, ರಾಜ್ಯದ ಜನರ ಹಿತಾಸಕ್ತಿ, ದೇಶದ ಆಂತರಿಕ ಭದ್ರತೆ ಹಾಗೂ ಕಾನೂನುಬದ್ಧ ವ್ಯವಸ್ಥೆಗೆ ಧಕ್ಕೆಯಾಗುವ ಯಾವುದೇ ನಿರ್ಧಾರವನ್ನು ತಾವಾಗಲಿ ಅಥವಾ ತಮ್ಮ ಪಕ್ಷವಾಗಲಿ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು. ದೇಶದ ಕಾನೂನಿನ ಪ್ರಕಾರ ಅರ್ಹರಾಗಿರುವ ಜನರಿಗೆ ಮಾತ್ರ ಅಗತ್ಯ ದಾಖಲೆಗಳನ್ನು ನೀಡಬೇಕು ಮತ್ತು ಅಕ್ರಮ ನುಸುಳುಕೋರರಿಗೆ ಯಾವುದೇ ರೀತಿಯ ಮಾನ್ಯತೆ ಅಥವಾ ರಾಜಾಶ್ರಯ ನೀಡಬಾರದು ಎಂಬುದು ನಮ್ಮ ಸ್ಪಷ್ಟ ನಿಲುವು ಎಂದು ಅವರು ಪ್ರತಿಪಾದಿಸಿದರು.

ಈ ಸೂಕ್ಷ್ಮ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಮತ್ತು ಈ ಪ್ರಕ್ರಿಯೆಯ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಅನುಮಾನ ಹಾಗೂ ಆತಂಕಗಳಿಗೆ ತಕ್ಷಣವೇ ಸ್ಪಷ್ಟ ಉತ್ತರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಮಾಜಿ ಸಂಸದರು ಮುನಿಸ್ವಾಮಿ, ಜಿಲ್ಲಾ ಉಪಾಧ್ಯಕ್ಷರು ವಿಜಿ ಕುಮಾರ್, ಪ್ರಕೋಷ್ಟಗಳ ಸಂಚಾಲಕರು ಮಾಗೇರಿ ನಾರಾಯಣಸ್ವಾಮಿ, ನಗರ ಘಟಕ ಅಧ್ಯಕ್ಷರು ಸಾಮಾ ಅನಿಲ್ ಬಾಬು, ತಿಮ್ಮರಾಯಪ್ಪ, ಕೆಂಬೋಡಿ ನಾರಾಯಣಸ್ವಾಮಿ, ಗೋವಿಂದರಾಜ್, ಮೋರ್ಚಾ ಬಾಲಾಜಿ, ಸೂರಿ ಮತ್ತು ಮಂಜುನಾಥ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
    user_ಜನಪರ ಸುದ್ದಿ 91
    ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    13 hrs ago
  • ಕೋಲಾರದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಾಮಲ್ತ್ ನಗರದಲ್ಲಿ ಶುಕ್ರವಾರ ಬೆಳಗ್ಗೆ ಅನಾಮಿಕರು ಪೋಲೀಸರೊಂದಿಗೆ ಜಾಗದ ಸರ್ವೆಗೆ ಮುಂದಾದಾಗ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುಮಾರು 1989ರಿಂದಲೂ ಈ ಜಾಗಕ್ಕೆ ಸಂಬಂಧಿಸಿದ ಮೂಲ ದಾಖಲೆಗಳು ತಮ್ಮ ಬಳಿಯೇ ಇವೆ ಎಂದು ಸ್ಥಳೀಯರು ಹಾಗೂ ಜಾಗದ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅನಾಮಿಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಜಾಗದ ಮಾಲೀಕರು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಎನ್‌ಎಕೆ (NAK) ಕಾಯಿದೆಯ ಪ್ರಕಾರ ಪಾಣಿ ಮತ್ತು ಮ್ಯುಟೇಷನ್ ದಾಖಲೆಗಳು ಲಭ್ಯವಿದ್ದರೂ, ಇಂತಹ ಅಕ್ರಮ ಸರ್ವೆಗೆ ಮುಂದಾಗಿರುವುದು ಆತಂಕಕ್ಕೆ ಕಾರಣವಾಗಿದೆ.
    1
    ಕೋಲಾರದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಾಮಲ್ತ್ ನಗರದಲ್ಲಿ ಶುಕ್ರವಾರ ಬೆಳಗ್ಗೆ ಅನಾಮಿಕರು ಪೋಲೀಸರೊಂದಿಗೆ ಜಾಗದ ಸರ್ವೆಗೆ ಮುಂದಾದಾಗ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುಮಾರು 1989ರಿಂದಲೂ ಈ ಜಾಗಕ್ಕೆ ಸಂಬಂಧಿಸಿದ ಮೂಲ ದಾಖಲೆಗಳು ತಮ್ಮ ಬಳಿಯೇ ಇವೆ ಎಂದು ಸ್ಥಳೀಯರು ಹಾಗೂ ಜಾಗದ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅನಾಮಿಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಜಾಗದ ಮಾಲೀಕರು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಎನ್‌ಎಕೆ (NAK) ಕಾಯಿದೆಯ ಪ್ರಕಾರ ಪಾಣಿ ಮತ್ತು ಮ್ಯುಟೇಷನ್ ದಾಖಲೆಗಳು ಲಭ್ಯವಿದ್ದರೂ, ಇಂತಹ ಅಕ್ರಮ ಸರ್ವೆಗೆ ಮುಂದಾಗಿರುವುದು ಆತಂಕಕ್ಕೆ ಕಾರಣವಾಗಿದೆ.
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    23 hrs ago
  • ಬಂಗಾರಪೇಟೆ ತಾಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಸಂಸದ ಎಸ್ ಮುನಿಸ್ವಾಮಿ ಅವರ ಹೇಳಿಕೆಯು ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಿದೆ ಎಂದು ಪಿಎಪಿಎಂಎಸ್ ಉಪಾಧ್ಯಕ್ಷ ಅ.ನಾ ಹರೀಶ್ ತೀವ್ರವಾಗಿ ಗುಡುಗಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಂಸದ ಎಸ್ ಮುನಿಸ್ವಾಮಿ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಕ್ಷೇತ್ರಕ್ಕೆ ಯಾವುದೇ ಅನುದಾನವನ್ನು ತರದೆ ಅನಗತ್ಯವಾಗಿ ಕಾಲಹರಣ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ಇಂದು ಶಾಸಕ ಎಸ್ ಎನ್ ನಾರಾಯಣಸ್ವಾಮಿ ಅವರ ಅಭಿವೃದ್ಧಿ ಕಾರ್ಯಗಳನ್ನು ಕಂಡು ಸಹಿಸದೆ, ಮಾಜಿ ಸಂಸದರು ಅನಗತ್ಯವಾಗಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ದುರುದ್ದೇಶದಿಂದ ಈ ಅಭಿವೃದ್ಧಿ ಕಾರ್ಯಗಳಿಗೆ ಆಕ್ಷೇಪ ವ್ಯಕ್ತಪಡಿಸುತ್ತಿರುವುದು ಯಾವುದೇ ರೀತಿಯಲ್ಲೂ ಸಮಂಜಸವಲ್ಲ ಎಂದು ಹರೀಶ್ ಕಿಡಿಕಾರಿದ್ದಾರೆ. ಈ ಸಂದರ್ಭದಲ್ಲಿ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಣಿಂಬೆಲೆ ಶ್ರೀನಿವಾಸ್, ಮಾಜಿ ಪುರಸಭೆ ಅಧ್ಯಕ್ಷ ಗೋವಿಂದ, ಮಾಜಿ ಪುರಸಭೆ ಸದಸ್ಯ ಸುಹೇಲ್, ಯುವ ಮುಖಂಡರಾದ ಶಫೀಕ್, ಅರುಣ್ ಹಾಗೂ ಶಿವರಾಜ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
    1
    ಬಂಗಾರಪೇಟೆ ತಾಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಸಂಸದ ಎಸ್ ಮುನಿಸ್ವಾಮಿ ಅವರ ಹೇಳಿಕೆಯು ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಿದೆ ಎಂದು ಪಿಎಪಿಎಂಎಸ್ ಉಪಾಧ್ಯಕ್ಷ ಅ.ನಾ ಹರೀಶ್ ತೀವ್ರವಾಗಿ ಗುಡುಗಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಂಸದ ಎಸ್ ಮುನಿಸ್ವಾಮಿ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಕ್ಷೇತ್ರಕ್ಕೆ ಯಾವುದೇ ಅನುದಾನವನ್ನು ತರದೆ ಅನಗತ್ಯವಾಗಿ ಕಾಲಹರಣ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಇಂದು ಶಾಸಕ ಎಸ್ ಎನ್ ನಾರಾಯಣಸ್ವಾಮಿ ಅವರ ಅಭಿವೃದ್ಧಿ ಕಾರ್ಯಗಳನ್ನು ಕಂಡು ಸಹಿಸದೆ, ಮಾಜಿ ಸಂಸದರು ಅನಗತ್ಯವಾಗಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ದುರುದ್ದೇಶದಿಂದ ಈ ಅಭಿವೃದ್ಧಿ ಕಾರ್ಯಗಳಿಗೆ ಆಕ್ಷೇಪ ವ್ಯಕ್ತಪಡಿಸುತ್ತಿರುವುದು ಯಾವುದೇ ರೀತಿಯಲ್ಲೂ ಸಮಂಜಸವಲ್ಲ ಎಂದು ಹರೀಶ್ ಕಿಡಿಕಾರಿದ್ದಾರೆ. ಈ ಸಂದರ್ಭದಲ್ಲಿ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಣಿಂಬೆಲೆ ಶ್ರೀನಿವಾಸ್, ಮಾಜಿ ಪುರಸಭೆ ಅಧ್ಯಕ್ಷ ಗೋವಿಂದ, ಮಾಜಿ ಪುರಸಭೆ ಸದಸ್ಯ ಸುಹೇಲ್, ಯುವ ಮುಖಂಡರಾದ ಶಫೀಕ್, ಅರುಣ್ ಹಾಗೂ ಶಿವರಾಜ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    40 min ago
  • ಮುಳಬಾಗಿಲು ತಾಲೂಕಿನ ಅಂಬ್ಳಿಕಲ್ ಗ್ರಾಮದಲ್ಲಿ ನೂತನ ಹೈ ಮಾಸ್ಕ್ ದೀಪದ ಉದ್ಘಾಟನಾ ಕಾರ್ಯಕ್ರಮ ಜರುಗಿದೆ. ಕ್ಷೇತ್ರದ ಶಾಸಕರಾದ ಸಮೃದ್ಧಿ ಮಂಜುನಾಥ್ ಅವರು ಈ ಹೈ ಮಾಸ್ಕ್ ದೀಪವನ್ನು ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
    1
    ಮುಳಬಾಗಿಲು ತಾಲೂಕಿನ ಅಂಬ್ಳಿಕಲ್ ಗ್ರಾಮದಲ್ಲಿ ನೂತನ ಹೈ ಮಾಸ್ಕ್ ದೀಪದ ಉದ್ಘಾಟನಾ ಕಾರ್ಯಕ್ರಮ ಜರುಗಿದೆ. ಕ್ಷೇತ್ರದ ಶಾಸಕರಾದ ಸಮೃದ್ಧಿ ಮಂಜುನಾಥ್ ಅವರು ಈ ಹೈ ಮಾಸ್ಕ್ ದೀಪವನ್ನು ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    12 hrs ago
  • ಮೈಸೂರಿನ ಅಪೋಲೋ ಆಸ್ಪತ್ರೆಯ ವೈದ್ಯರು ಎಸ್ ಜಾನಕಿ ಅವರ ಕುರಿತು ಏನು ಹೇಳಿದ್ದಾರೆ ಎಂಬ ಕುತೂಹಲಕಾರಿ ಪ್ರಶ್ನೆ ಮೂಡಿದೆ. ಎಸ್ ಜಾನಕಿ ಅವರ ಬಗ್ಗೆ ಆಸ್ಪತ್ರೆಯ ವೈದ್ಯರು ನೀಡಿರುವ ಹೇಳಿಕೆಯ ಕುರಿತು ತೀವ್ರ ಕುತೂಹಲ ವ್ಯಕ್ತವಾಗಿದೆ.
    1
    ಮೈಸೂರಿನ ಅಪೋಲೋ ಆಸ್ಪತ್ರೆಯ ವೈದ್ಯರು ಎಸ್ ಜಾನಕಿ ಅವರ ಕುರಿತು ಏನು ಹೇಳಿದ್ದಾರೆ ಎಂಬ ಕುತೂಹಲಕಾರಿ ಪ್ರಶ್ನೆ ಮೂಡಿದೆ. ಎಸ್ ಜಾನಕಿ ಅವರ ಬಗ್ಗೆ ಆಸ್ಪತ್ರೆಯ ವೈದ್ಯರು ನೀಡಿರುವ ಹೇಳಿಕೆಯ ಕುರಿತು ತೀವ್ರ ಕುತೂಹಲ ವ್ಯಕ್ತವಾಗಿದೆ.
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    9 hrs ago
  • ಕರ್ನಾಟಕದಲ್ಲಿ ಐಎಂಎ (IMA) ಪ್ರಕರಣದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಕೆಯಾಗಿರುವ ಮನವಿ ಕುರಿತು ಕಾನೂನು ಪ್ರಕಾರವೇ ಕ್ರಮವಾಗಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಯಾರೂ ಕಾನೂನಿಗಿಂತ ಮೇಲಲ್ಲ ಹಾಗೂ ಮೊದಲೇ ಅಂತಿಮ ತೀರ್ಮಾನಕ್ಕೆ ಬರುವುದು ಸರಿಯಲ್ಲ ಎಂದು ಹೇಳಿದ ಅವರು, ರಾಜ್ಯಪಾಲರು ಅನುಮತಿ ನೀಡಿದ ಬಳಿಕ ಮುಂದಿನ ಬೆಳವಣಿಗೆಗಳನ್ನು ನೋಡೋಣ ಎಂದು ತಿಳಿಸಿದರು. ಇದೇ ವೇಳೆ ಪಿಆರ್‌ಸಿ (ನಿವಾಸ ಪ್ರಮಾಣಪತ್ರ) ವಿವಾದದ ಕುರಿತು ಮಾತನಾಡಿದ ಗೃಹ ಸಚಿವರು, ಪಿಆರ್‌ಸಿ ನೀಡುವುದು ಸರ್ಕಾರಿ ಅಧಿಕಾರಿಗಳ ಕೆಲಸವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ ಎಂದು ಸ್ಪಷ್ಟಪಡಿಸಿದರು. ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಹೇಳಿದ ಅವರು, ಅಕ್ರಮ ವಲಸಿಗರಿಗೆ ಪಿಆರ್‌ಸಿ ನೀಡಲಾಗುತ್ತಿದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿ, ಅದನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದರು. ರಾಜ್ಯ ಸರ್ಕಾರ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪೌರತ್ವ ಸಾಬೀತಿಗೆ ಯಾವ ದಾಖಲೆ ಬೇಕು ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಲಿ ಎಂದು ಪ್ರಶ್ನಿಸಿದರು. ಅಲ್ಲದೆ, ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಸ್ಪಷ್ಟತೆ ಇಲ್ಲದ ಕಾರಣ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು. ಮತ್ತೊಂದೆಡೆ, ಕೆಪಿಎಸ್‌ಸಿ (KPSC) ವಿಚಾರಕ್ಕೆ ಸಂಬಂಧಿಸಿದ ಆರೋಪಗಳು ಸಾಂವಿಧಾನಿಕ ಸಂಸ್ಥೆಯ ವ್ಯಾಪ್ತಿಗೆ ಬರುವ ವಿಷಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಸರ್ಕಾರ ಕೇವಲ ಸಾಕ್ಷ್ಯ ಒದಗಿಸಬಹುದೇ ಹೊರತು, ಅಂತಿಮ ಕ್ರಮ ಕೈಗೊಳ್ಳುವುದು ಆಯೋಗದ ಜವಾಬ್ದಾರಿಯಾಗಿದೆ ಎಂದ ಅವರು, ಆಯೋಗದಲ್ಲಿ ಸದ್ಯ ಸಮನ್ವಯ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಕೊರತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟರು. ಇದು ಯಾವುದೇ ರಾಜ್ಯಕ್ಕೂ ಒಳ್ಳೆಯ ಬೆಳವಣಿಗೆಯಲ್ಲ ಎಂದು ವಿಷಾದಿಸಿದ ಅವರು, ಸಾರ್ವಜನಿಕ ಸೇವಾ ಆಯೋಗದ ವಿಶ್ವಾಸಾರ್ಹತೆಯನ್ನು ಆಯೋಗವೇ ಪುನಃಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
    1
    ಕರ್ನಾಟಕದಲ್ಲಿ ಐಎಂಎ (IMA) ಪ್ರಕರಣದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಕೆಯಾಗಿರುವ ಮನವಿ ಕುರಿತು ಕಾನೂನು ಪ್ರಕಾರವೇ ಕ್ರಮವಾಗಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಯಾರೂ ಕಾನೂನಿಗಿಂತ ಮೇಲಲ್ಲ ಹಾಗೂ ಮೊದಲೇ ಅಂತಿಮ ತೀರ್ಮಾನಕ್ಕೆ ಬರುವುದು ಸರಿಯಲ್ಲ ಎಂದು ಹೇಳಿದ ಅವರು, ರಾಜ್ಯಪಾಲರು ಅನುಮತಿ ನೀಡಿದ ಬಳಿಕ ಮುಂದಿನ ಬೆಳವಣಿಗೆಗಳನ್ನು ನೋಡೋಣ ಎಂದು ತಿಳಿಸಿದರು.

ಇದೇ ವೇಳೆ ಪಿಆರ್‌ಸಿ (ನಿವಾಸ ಪ್ರಮಾಣಪತ್ರ) ವಿವಾದದ ಕುರಿತು ಮಾತನಾಡಿದ ಗೃಹ ಸಚಿವರು, ಪಿಆರ್‌ಸಿ ನೀಡುವುದು ಸರ್ಕಾರಿ ಅಧಿಕಾರಿಗಳ ಕೆಲಸವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ ಎಂದು ಸ್ಪಷ್ಟಪಡಿಸಿದರು. ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಹೇಳಿದ ಅವರು, ಅಕ್ರಮ ವಲಸಿಗರಿಗೆ ಪಿಆರ್‌ಸಿ ನೀಡಲಾಗುತ್ತಿದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿ, ಅದನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದರು. ರಾಜ್ಯ ಸರ್ಕಾರ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪೌರತ್ವ ಸಾಬೀತಿಗೆ ಯಾವ ದಾಖಲೆ ಬೇಕು ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಲಿ ಎಂದು ಪ್ರಶ್ನಿಸಿದರು. ಅಲ್ಲದೆ, ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಸ್ಪಷ್ಟತೆ ಇಲ್ಲದ ಕಾರಣ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು.

ಮತ್ತೊಂದೆಡೆ, ಕೆಪಿಎಸ್‌ಸಿ (KPSC) ವಿಚಾರಕ್ಕೆ ಸಂಬಂಧಿಸಿದ ಆರೋಪಗಳು ಸಾಂವಿಧಾನಿಕ ಸಂಸ್ಥೆಯ ವ್ಯಾಪ್ತಿಗೆ ಬರುವ ವಿಷಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಸರ್ಕಾರ ಕೇವಲ ಸಾಕ್ಷ್ಯ ಒದಗಿಸಬಹುದೇ ಹೊರತು, ಅಂತಿಮ ಕ್ರಮ ಕೈಗೊಳ್ಳುವುದು ಆಯೋಗದ ಜವಾಬ್ದಾರಿಯಾಗಿದೆ ಎಂದ ಅವರು, ಆಯೋಗದಲ್ಲಿ ಸದ್ಯ ಸಮನ್ವಯ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಕೊರತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟರು. ಇದು ಯಾವುದೇ ರಾಜ್ಯಕ್ಕೂ ಒಳ್ಳೆಯ ಬೆಳವಣಿಗೆಯಲ್ಲ ಎಂದು ವಿಷಾದಿಸಿದ ಅವರು, ಸಾರ್ವಜನಿಕ ಸೇವಾ ಆಯೋಗದ ವಿಶ್ವಾಸಾರ್ಹತೆಯನ್ನು ಆಯೋಗವೇ ಪುನಃಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    18 hrs ago
  • ಕೋಲಾರ ತಾಲ್ಲೂಕಿನ ವಕ್ಕಲೇರಿ ಹೋಬಳಿಯ ಚುಂಚದೇನಹಳ್ಳಿಯಲ್ಲಿ ನೆಲೆಸಿರುವ ಶ್ರೀ ರುಕ್ಕಿಣೀ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿಯ ಮರು ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಉದ್ಘಾಟನಾ ಮಹೋತ್ಸವವು ಇದೇ 12ರ ಭಾನುವಾರ ನಡೆಯಲಿದೆ ಎಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ. ಭಗವಂತನ ಪ್ರೇರಣೆಯಿಂದ ಈ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿವೆ ಎಂದು ಮುಖಂಡರು ಮಾಹಿತಿ ನೀಡಿದ್ದಾರೆ. ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ಸ್ವಾಮಿಯ ದಿವ್ಯ ದರ್ಶನ ಪಡೆದು, ತಮ್ಮ ಮನೋವಾಂಚಲ್ಯಗಳನ್ನು ನೆರವೇರಿಸಿಕೊಳ್ಳುವಂತೆ ಹಾಗೂ ತೀರ್ಥ ಪ್ರಸಾದ ಸ್ವೀಕರಿಸಬೇಕಾಗಿ ಕೋರಲಾಗಿದೆ. ಈ ವೇಳೆ ಗ್ರಾಮದ ಮುಖಂಡರಾದ ಡಿ. ರಾಮಚಂದ್ರಪ್ಪ, ಮಾಜಿ ಸದಸ್ಯ ಸಿ.ವಿ. ಮುನಿರಾಜು, ಎಸ್. ನಾರಾಯಣಸ್ವಾಮಿ, ರಾಮಣ್ಣ, ರಾಮಯ್ಯ, ಅನಿಲಕುಮಾರ, ವಿವೇಕ್, ಡಿ. ರಾಮಣ್ಣ, ಗುರುಮೂರ್ತಿ, ಜಯರಾಮ್, ಅರ್ಚಕರಾದ ರಾಮಾಚಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    2
    ಕೋಲಾರ ತಾಲ್ಲೂಕಿನ ವಕ್ಕಲೇರಿ ಹೋಬಳಿಯ ಚುಂಚದೇನಹಳ್ಳಿಯಲ್ಲಿ ನೆಲೆಸಿರುವ ಶ್ರೀ ರುಕ್ಕಿಣೀ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿಯ ಮರು ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಉದ್ಘಾಟನಾ ಮಹೋತ್ಸವವು ಇದೇ 12ರ ಭಾನುವಾರ ನಡೆಯಲಿದೆ ಎಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ. ಭಗವಂತನ ಪ್ರೇರಣೆಯಿಂದ ಈ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿವೆ ಎಂದು ಮುಖಂಡರು ಮಾಹಿತಿ ನೀಡಿದ್ದಾರೆ.

ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ಸ್ವಾಮಿಯ ದಿವ್ಯ ದರ್ಶನ ಪಡೆದು, ತಮ್ಮ ಮನೋವಾಂಚಲ್ಯಗಳನ್ನು ನೆರವೇರಿಸಿಕೊಳ್ಳುವಂತೆ ಹಾಗೂ ತೀರ್ಥ ಪ್ರಸಾದ ಸ್ವೀಕರಿಸಬೇಕಾಗಿ ಕೋರಲಾಗಿದೆ. ಈ ವೇಳೆ ಗ್ರಾಮದ ಮುಖಂಡರಾದ ಡಿ. ರಾಮಚಂದ್ರಪ್ಪ, ಮಾಜಿ ಸದಸ್ಯ ಸಿ.ವಿ. ಮುನಿರಾಜು, ಎಸ್. ನಾರಾಯಣಸ್ವಾಮಿ, ರಾಮಣ್ಣ, ರಾಮಯ್ಯ, ಅನಿಲಕುಮಾರ, ವಿವೇಕ್, ಡಿ. ರಾಮಣ್ಣ, ಗುರುಮೂರ್ತಿ, ಜಯರಾಮ್, ಅರ್ಚಕರಾದ ರಾಮಾಚಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.