Shuru
Apke Nagar Ki App…
ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಶಹಾಪುರದ ದಲಿತ ಸಂಘಟನೆಗಳ ಒಕ್ಕೂಟದಿಂದ ನಡೆಸಿದ ಧರಣಿ ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಶಹಾಪುರದ ದಲಿತ ಸಂಘಟನೆಗಳ ಒಕ್ಕೂಟದಿಂದ ನಡೆಸಿದ ಧರಣಿ ಸ್ಥಳಕ್ಕೆ ಭೇಟಿ ನೀಡಿ,ಅವರ ಅಹವಾಲುಗಳನ್ನು ಆಲಿಸಿ,ದಲಿತರು ಸೇರಿದಂತೆ ಎಲ್ಲಾ ವರ್ಗದ ಜನರು ಸುಖ ನೆಮ್ಮದಿಯಿಂದ ಬದುಕಲು ನಮಗೆ ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಅಂತಹದ್ದರಲ್ಲಿ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಯುವ ಯಾವುದೇ ದೌರ್ಜನ್ಯ ಹಾಗೂ ಕಾನೂನುಬಾಹೀರವಾದ ಪ್ರಕರಣಗಳನ್ನು ನಮ್ಮ ಸರಕಾರ ಎಂದಿಗೂ ಸಹಿಸುವುದಿಲ್ಲ.ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ಬದ್ಧವಾಗಿದೆ. ಕೂಡಲೇ ಈ ಬಗ್ಗೆ ಸರಕಾರದ ಗಮನಕ್ಕೆ ಹಾಗೂ ವಿಶೇಷವಾಗಿ ಸಮಾಜಕಲ್ಯಾಣ ಹಾಗೂ ಗೃಹ ಇಲಾಖೆಯ ಮಂತ್ರಿಗಳ ಗಮನಕ್ಕೆ ತಂದು ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಲಾಯಿತು
ಲೋಕಲ್ ಸ್ಟಾರ್ ನ್ಯೂಸ್
ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಶಹಾಪುರದ ದಲಿತ ಸಂಘಟನೆಗಳ ಒಕ್ಕೂಟದಿಂದ ನಡೆಸಿದ ಧರಣಿ ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಶಹಾಪುರದ ದಲಿತ ಸಂಘಟನೆಗಳ ಒಕ್ಕೂಟದಿಂದ ನಡೆಸಿದ ಧರಣಿ ಸ್ಥಳಕ್ಕೆ ಭೇಟಿ ನೀಡಿ,ಅವರ ಅಹವಾಲುಗಳನ್ನು ಆಲಿಸಿ,ದಲಿತರು ಸೇರಿದಂತೆ ಎಲ್ಲಾ ವರ್ಗದ ಜನರು ಸುಖ ನೆಮ್ಮದಿಯಿಂದ ಬದುಕಲು ನಮಗೆ ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಅಂತಹದ್ದರಲ್ಲಿ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಯುವ ಯಾವುದೇ ದೌರ್ಜನ್ಯ ಹಾಗೂ ಕಾನೂನುಬಾಹೀರವಾದ ಪ್ರಕರಣಗಳನ್ನು ನಮ್ಮ ಸರಕಾರ ಎಂದಿಗೂ ಸಹಿಸುವುದಿಲ್ಲ.ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ಬದ್ಧವಾಗಿದೆ. ಕೂಡಲೇ ಈ ಬಗ್ಗೆ ಸರಕಾರದ ಗಮನಕ್ಕೆ ಹಾಗೂ ವಿಶೇಷವಾಗಿ ಸಮಾಜಕಲ್ಯಾಣ ಹಾಗೂ ಗೃಹ ಇಲಾಖೆಯ ಮಂತ್ರಿಗಳ ಗಮನಕ್ಕೆ ತಂದು ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಲಾಯಿತು
More news from ಕರ್ನಾಟಕ and nearby areas
- ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿದಿದೆ: ಜೆ.ಶರಣಪ್ಪ ಗೌಡ. ಸಿರವಾರ: ಟಿಎಲ್ಬಿಸಿ ಎಡದಂಡೆ ನಾಲೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ಮಂಗಳವಾರ ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ವಾಡಿಕೆಗಿಂತ ಮಳೆಯಾಗದ ಹಿನ್ನೆಲೆಯಲ್ಲಿ ಬರಗಾಲ ಉಂಟಾಗಿದೆ. ಬೆಳೆಗಳನ್ನು ಉಳಿಸಿಕೊಳ್ಳಲು ರೈತರ ಹರಸಾಹಸ ಪಡುವಂತಾಗಿದೆ ಎಂದರು. ರಾಯಚೂರು, ಮಾನ್ವಿ ಮತ್ತು ಸಿರವಾರ ತಾಲೂಕಿನ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹೋರಾಟದಲ್ಲಿ ಮಾಜಿ ಶಾಸಕರುಗಳಾದ ರಾಜಾ ವೆಂಕಟಪ್ಪ ನಾಯಕ, ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ರೈತ ಸಂಘದ ಮುಖಂಡ ಚಾಮರಸ ಮಾಲೀ ಪಾಟೀಲ್, ಹೋರಾಟಗಾರರಾದ ಶಂಕರಗೌಡ ಹರವಿ, ಎನ್. ಉದಯಕುಮಾರ್ ಸಾಹುಕಾರ, ಜೆ.ದೇವರಾಜ ಗೌಡ, ಅಮರೇಶ ಚಾಗಭಾವಿ, ನಾಗರಾಜ ಗೌಡ, ಸವಾರೆಪ್ಪ, ಬಡ್ಡ ಹನುಮಂತ, ರಾಜಪ್ಪ ಹೊನ್ನಟಗಿ, ಮಲ್ಲಪ್ಪ ದೊಡ್ಮನೆ, ದಾನಪ್ಪ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ರೈತರು ಪಾಲ್ಗೊಂಡಿದ್ದರು.2
- "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*1
- ಕರ್ನಾಟಕದಲ್ಲಿ ಗಣಪತಿಗೆ ಮೆರವಣಿಗೆಗೆ ಡಿಜೆ ಅನುಮತಿ ಇಲ್ಲಾ ಎಂದ ಗೃಹ ಮಂತ್ರಿ ಪಿಯಾಂಕ :ಖರ್ಗೆ ವಿರುದ್ಧ ಬಿ ಜೆ ಪಿ ಮುಖಂಡರು ಗಣಪತಿಗೆ ಯಾಕೆ ಡಿಜಿ ಇಲ್ಲಾ ಗೃಹ ಮಂತ್ರಿಯ ರೆ ಮುಸಾಲ್ಮಾನರಿಗೆ ನಾಲಕ್ಕು ಐದು ಸಲಾ ಮೈಕ್ ಹಚ್ಚಿ ನಮಾಜ್ ಮಾಡುತ್ತಾರೆ ನಮಗ ಏಕೆ ಇಲ್ಲ ಹೇಳಿ ಗೃಹ ಮಂತ್ರಿ ಯರೆ ನಮಗೂ ಡಿಜಿ ಪರ್ಮಿಷನ್ ಕೊಡಬೇಕು ಇಲ್ಲಾಂದ್ರೆ ನಾವು ಬಿಡುವುದಿಲ್ಲ ಬಿಜೆಪಿ ಮುಖಂಡ ರಾಜ ಹೇಳಿಕೆ1
- ಸಿಂಧನೂರು ಕ್ಷೇತ್ರದಲ್ಲಿ 43,115 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಸಿಂಧನೂರು: ರಾಷ್ಟ್ರೀಯ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಬಳಿಕ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 43,115 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ದೇಸಾಯಿ ತಿಳಿಸಿದ್ದಾರೆ. ಮಂಗಳವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರದಲ್ಲಿ 2,40,941 ಮತದಾರರಿದ್ದರು. ಪರಿಷ್ಕರಣೆ ವೇಳೆ ಮೃತಪಟ್ಟ 6,778, ಶಾಶ್ವತವಾಗಿ ಸ್ಥಳಾಂತರಗೊಂಡ 31,954, ಗೈರುಹಾಜರಿದ್ದ 1,555 ಹಾಗೂ ಡಬಲ್ ಮತದಾರರಾಗಿದ್ದ 2,805 ಮಂದಿಯ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇತರ ಕಾರಣಗಳಿಂದ 23 ಮತದಾರರ ಹೆಸರನ್ನೂ ಡಿಲೀಟ್ ಮಾಡಲಾಗಿದೆ. 2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಒಟ್ಟು 17.90ರಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ ನಗರ ವ್ಯಾಪ್ತಿಯಲ್ಲಿ 20,799 ಹಾಗೂ ಗ್ರಾಮೀಣ ಪ್ರದೇಶದಲ್ಲಿ 22,351 ಮತದಾರರ ಹೆಸರುಗಳು ಡಿಲೀಟ್ ಆಗಿವೆ. ಅರ್ಹ ಮತದಾರರ ಹೆಸರು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದರೆ, ನಿಗದಿತ 13 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಸಲ್ಲಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಕ್ಷೇತ್ರದಲ್ಲಿ 269 ಮತಗಟ್ಟೆಗಳಿದ್ದವು. 1,200ಕ್ಕೂ ಅಧಿಕ ಮತದಾರರಿರುವ ಕಾರಣ ಮಾಡಶಿರವಾರ, ಪಗಡದಿನ್ನಿ ಹಾಗೂ ಬೂದಿಹಾಳ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ವಿ.ಹೆಚ್.ಎ. ಆ್ಯಪ್ ಮೂಲಕ ಮತದಾರರ ಸೇರ್ಪಡೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅರುಣ್ ಕುಮಾರ್ ದೇಸಾಯಿ ಹೇಳಿದರು.1
- ಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿ ಸಿಂದಗಿ : ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಿ, ರೈತರ ನೆರವಿಗೆ ಧಾವಿಸಬೇಕು ಎಂದು ರೈತ ಹೋರಾಟಗಾರ ಪೀರು ಕೇರೂರ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು. ಅಲ್ಲದೆ, ಕೇಂದ್ರ ಸರ್ಕಾರವೂ ರೈತರ ನೆರವಿಗೆ ಬಂದು ಅಗತ್ಯ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ರಾಜಕೀಯ ಹಗ್ಗಜಗ್ಗಾಟದಲ್ಲಿ ರೈತರ ಸಮಸ್ಯೆಗಳನ್ನು ಮರೆತು ಕುಳಿತಿವೆ ಎಂದು ಪೀರು ಕೇರೂರ ಆರೋಪಿಸಿದರು. ರೈತರ ಸಂಕಷ್ಟಕ್ಕೆ ಸರ್ಕಾರಗಳು ಕೂಡಲೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪೀರು ಕೇರೂರ ಎಚ್ಚರಿಕೆ ನೀಡಿದರು.1
- ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಗುಂಡಣ್ಣ ಡಿಗ್ಗಿ ಮಾತುಗಳಿಗೆ ಸಭಿಕರಿಂದ ಭರ್ಜರಿ ಚಪ್ಪಾಳೆ, ನಗೆ1
- ಆ.26 ರಂದು ಅಖಿಲಭಾರತ ಕ್ರೈಸ್ತ ಮಹಾಸಭಾ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ- ರಾಮಕೃಷ್ಣ ಪ್ರಸಾದ ರಾಯಚೂರು : ಅಖಿಲ ಭಾರತ ಕ್ರೈಸ್ತ ಮಹಾಸಭಾದ ಜಿಲ್ಲಾಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆ.26 ರಂದು ನಗರದ ಪಂಡಿತ ಸಿದ್ದರಾಮ ರಂಗಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ರಾಮಕೃಷ್ಣ ಪ್ರಸಾದ.ಎಂ ಹೇಳಿದರು. ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ಅಂದು ಬೆಳಿಗ್ಗೆ ಆರ್ಟಿಓ ವೃತ್ತದಿಂದ ರಂಗಮಂದಿರದವರೆಗೆ ಬೈಕ್ ರ್ಯಾಲಿ ನಡೆಸಲಾಗುತ್ತದೆ. ನಂತರ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಮಹಾಸಭಾ ರಾಜ್ಯಾಧ್ಯಕ್ಷ ಪ್ರಜ್ವಲ್ ಸ್ವಾಮಿ ಆಗಮಿಸಲಿದ್ದಾರೆ. ಶಾಸಕರುಗಳಾದ ಡಾ.ಶಿವರಾಜ ಪಾಟೀಲ್, ಗ್ರಾಮೀಣ ಶಾಸಕ ದದ್ದಲ್ ಬಸನಗೌಡ, ಎ.ವಸಂತಕುಮಾರ, ಮಾಜಿ ಸಚಿವ ಎನ್.ಎಸ್.ಭೋಸರಾಜ, ಕೆ.ಶಿವನಗೌಡ ನಾಯಕ ಸೇರಿದಂತೆ ಅನೇಕ ರಾಜಕೀಯ ಗಣ್ಯರು, ವಿವಿಧ ಸಭಾಪಾಲಕರು, ಸಮಾಜಬಾಂಧವರು ಭಾಗವಹಿಸಲಿದ್ದಾರೆ ಎಂದರು. ಸಭಾಪಾಲಕ ಜಾನ್ವೆಸ್ಲಿ ಮಾತನಾಡಿ ಕ್ರೈಸ್ತ ಮಹಾಸಭಾದ ಕಾರ್ಯಕ್ರಮ ದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ರಾಜ್ಯ ಹಾಗೂ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದರು.1
- ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ...... ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ. ತುರ್ವಿಹಾಳ: ಪಟ್ಟಣದ ಸರ್ವೆ ನಂ.14ರ ಶರಣಪ್ಪ ಮೆಗಳಡಕ್ಕಿ ಅವರ ಹೊಲದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಮೂರು ಎಮ್ಮೆ ಹಾಗೂ ಒಂದು ಆಕಳು ಮೃತಪಟ್ಟಿದ್ದು, ಎರಡು ಎಮ್ಮೆ ಮತ್ತು ನಾಲ್ಕು ಮೇಕೆರಗಳು ಗಾಯಗೊಂಡಿವೆ. ಘಟನೆಯಿಂದ ಸುಮಾರು 15 ಲಕ್ಷ ನಷ್ಟ ಸಂಭವಿಸಿದೆ ಎಂದು ಸಂತ್ರಸ್ತ ಶರಣಪ್ಪ ಮೆಗಳಡಕ್ಕಿ ತಿಳಿಸಿದ್ದಾರೆ. ವಿದ್ಯುತ್ ಅವಘಡದ ಪರಿಣಾಮ ಜಾನುವಾರುಗಳ ಸಾವಿನ ಜತೆಗೆ ಒಂದು ತೊಲೆ ಬಂಗಾರ ಹಾಗೂ 1.60 ಲಕ್ಷ ನಗದು ಹಣವೂ ನಷ್ಟವಾಗಿದೆ. ಜಾನುವಾರುಗಳ ಸಾವಿನಿಂದ ಹಾಗೂ ಇತರೆ ವಸ್ತುಗಳ ಹಾನಿಯಿಂದ ಕುಟುಂಬಕ್ಕೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ. ಆದ್ದರಿಂದ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಸೂಕ್ತವಾಗಿ ಪರಿಶೀಲಿಸಿ, ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಶರಣಪ್ಪ ಮೆಗಳಡಕ್ಕಿ ಮನವಿ ಮಾಡಿದ್ದಾರೆ. ಸ್ಥಳ ಪರಿಶೀಲನೆ: ಘಟನೆ ಕುರಿತು ಮಾಹಿತಿ ಪಡೆದ ತುರ್ವಿಹಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷ ಶರಣಪ್ಪ ಹೋಸಗೌಡರ್ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಜಾನುವಾರುಗಳು ಹಾಗೂ ಸ್ಥಳವನ್ನು ಪರಿಶೀಲಿಸಿದರು. ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದ ಅವರು, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ (ಆರ್ಐ) ಉಮಾಪತಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಕುರಿತು ಪರಿಶೀಲನೆ ನಡೆಸಿ, ಹಾನಿಯ ವಿವರಗಳನ್ನು ದಾಖಲಿಸಿಕೊಂಡರು.2