ಶಾಸಕ ರೇವಣ್ಣ ವಿರುದ್ಧ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಂಘಟನೆ ವತಿಯಿಂದ ಪ್ರತಿಭಟನೆ ಶಾಸಕ ರೇವಣ್ಣ ವಿರುದ್ಧ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಂಘಟನೆ ವತಿಯಿಂದ ಪ್ರತಿಭಟನೆ *ಕೂಡ್ಲಿಗಿ*: ದಲಿತ ಮಹಿಳೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರ ಕುರಿತು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ಕೂಡ್ಲಿಗಿ ತಾಲ್ಲೂಕಿನ ಮಹರ್ಷಿ ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ಹಾಗೂ ವಿವಿಧ ನಾಯಕ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಲ್, ಮದಕರಿ ನಾಯಕ ವೃತ್ತದಿಂದ ಸಾಗಿದ ಪ್ರತಿಭಟನಾಕಾರರು ಮೆರವಣಿಗೆ ಮುಖಾಂತರ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ನೀಡಿದರು. ಮಹಿಳಾ ಅಧಿಕಾರಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಕೂಡಲೇ ಶಾಸಕ ರೇವಣ್ಣ ರಾಜೀನಾಮೆ ನೀಡಬೇಕು, ಜಿಲ್ಲಾಧಿಕಾರಿ ಲತಾಕುಮಾರಿ ಅವರಿಗೆ ಕ್ಷಮೆ ಕೇಳಬೇಕು, ಮುಂದಿನ ದಿನಗಳಲ್ಲಿ ನಮ್ಮ ನಾಯಕ ಜನಾಂಗಷತಕ್ಕ ಪಾಠ ಕಲಿಸಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ಮಹಿಳೆಯರು ಹಾಗೂ ಅಧಿಕಾರಿಗಳ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕೂಡ್ಲಿಗಿ ತಾಲೂಕಿನ ಮಹರ್ಷಿ ವಾಲ್ಮೀಕಿ ನಾಯಕ ಸಮುದಾಯದ ನಿವೃತ್ತ ಇಒ ಜಿ. ಬಸಣ್ಣ, ತಳವಾರ್ ಶರಣಪ್ಪ, ಜಿಂಕಲ್ ನಾಗಮಣಿ, ಗುನ್ನಳ್ಳಿ ರಾಘವೇಂದ್ರ, ಕಾವಲಿ ಶಿವಪ್ಪನಾಯಕ, ವಾಲ್ಮೀಕಿ ಸಂಘದ ಅದ್ಯಕ್ಷ ಸುರೇಶ್, ಜಯರಾಮ್ ನಾಯಕ್, ಹುಡೇಂ ಪಾಪನಾಯಕ, ಅಶೋಕ್,ಕಾಟೇರ್ ಹಾಲೇಶ್, ರೖತಸಂಘದ ಮಹೇಶಪ್ಪ, ವಕೀಲ ಓಂಕಾರಪ್ಪ, ಮಹದೇವಪುರ ಓಬಯ್ಯ, ನಿವೃತ್ತ ಪ್ರಾಂಶುಪಾಲೆ ಕೋತ್ಲಮ್ಮ,ಹಾಲಸಾಗರ ಮಂಜಣ್ಣ, ಅಜಯ್, ಪಾಪಯ್ಯ, ಸಣ್ಣೊಬಯ್ಯ,ಗುಂಡುಮುಣಗು ಮಂಜಣ್ಣ, ಡಾ. ಸಿದ್ದೇಶ್, ಚಿರತಗುಂಡು ದಡ್ಡಯ್ಯ, ಗೋವಿಂದ ರೆಡ್ಡಿ, ರಾಮಸಾಗರ ರಾಜಶೇಖರ್, ಸೇರಿದಂತೆ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಶಾಸಕ ರೇವಣ್ಣ ವಿರುದ್ಧ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಂಘಟನೆ ವತಿಯಿಂದ ಪ್ರತಿಭಟನೆ ಶಾಸಕ ರೇವಣ್ಣ ವಿರುದ್ಧ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಂಘಟನೆ ವತಿಯಿಂದ ಪ್ರತಿಭಟನೆ *ಕೂಡ್ಲಿಗಿ*: ದಲಿತ ಮಹಿಳೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರ ಕುರಿತು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ಕೂಡ್ಲಿಗಿ ತಾಲ್ಲೂಕಿನ ಮಹರ್ಷಿ ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ಹಾಗೂ ವಿವಿಧ ನಾಯಕ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಲ್, ಮದಕರಿ ನಾಯಕ ವೃತ್ತದಿಂದ ಸಾಗಿದ ಪ್ರತಿಭಟನಾಕಾರರು ಮೆರವಣಿಗೆ ಮುಖಾಂತರ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ನೀಡಿದರು. ಮಹಿಳಾ ಅಧಿಕಾರಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಕೂಡಲೇ ಶಾಸಕ ರೇವಣ್ಣ ರಾಜೀನಾಮೆ ನೀಡಬೇಕು, ಜಿಲ್ಲಾಧಿಕಾರಿ ಲತಾಕುಮಾರಿ ಅವರಿಗೆ ಕ್ಷಮೆ ಕೇಳಬೇಕು, ಮುಂದಿನ ದಿನಗಳಲ್ಲಿ ನಮ್ಮ ನಾಯಕ ಜನಾಂಗಷತಕ್ಕ ಪಾಠ ಕಲಿಸಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ಮಹಿಳೆಯರು ಹಾಗೂ ಅಧಿಕಾರಿಗಳ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕೂಡ್ಲಿಗಿ ತಾಲೂಕಿನ ಮಹರ್ಷಿ ವಾಲ್ಮೀಕಿ ನಾಯಕ ಸಮುದಾಯದ ನಿವೃತ್ತ ಇಒ ಜಿ. ಬಸಣ್ಣ, ತಳವಾರ್ ಶರಣಪ್ಪ, ಜಿಂಕಲ್ ನಾಗಮಣಿ, ಗುನ್ನಳ್ಳಿ ರಾಘವೇಂದ್ರ, ಕಾವಲಿ ಶಿವಪ್ಪನಾಯಕ, ವಾಲ್ಮೀಕಿ ಸಂಘದ ಅದ್ಯಕ್ಷ ಸುರೇಶ್, ಜಯರಾಮ್ ನಾಯಕ್, ಹುಡೇಂ ಪಾಪನಾಯಕ, ಅಶೋಕ್,ಕಾಟೇರ್ ಹಾಲೇಶ್, ರೖತಸಂಘದ ಮಹೇಶಪ್ಪ, ವಕೀಲ ಓಂಕಾರಪ್ಪ, ಮಹದೇವಪುರ ಓಬಯ್ಯ, ನಿವೃತ್ತ ಪ್ರಾಂಶುಪಾಲೆ ಕೋತ್ಲಮ್ಮ,ಹಾಲಸಾಗರ ಮಂಜಣ್ಣ, ಅಜಯ್, ಪಾಪಯ್ಯ, ಸಣ್ಣೊಬಯ್ಯ,ಗುಂಡುಮುಣಗು ಮಂಜಣ್ಣ, ಡಾ. ಸಿದ್ದೇಶ್, ಚಿರತಗುಂಡು ದಡ್ಡಯ್ಯ, ಗೋವಿಂದ ರೆಡ್ಡಿ, ರಾಮಸಾಗರ ರಾಜಶೇಖರ್, ಸೇರಿದಂತೆ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
- ಕೊರಚರಹಟ್ಟಿಯಲ್ಲಿ ಶ್ರೀ ನೂಲಿ ಚಂದಯ್ಯ ಅವರ ಜಯಂತಿ ಅದ್ದೂರಿ ಆಚರಣೆ ಕೂಡ್ಲಿಗಿ: ತಾಲೂಕಿನ ಕೊರಚರಹಟ್ಟಿ ಗ್ರಾಮದಲ್ಲಿ ನೂಲಿ ಚಂದಯ್ಯ ಜಯಂತಿಯನ್ನು ಶುಕ್ರವಾರ ಅದ್ದೂರಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಯಂತಿ ಉತ್ಸವದ ಪ್ರಯುಕ್ತ ವಿವಿಧ ವಾದ್ಯ ಮೇಳಗಳೊಂದಿಗೆ ನಂದಿಕೋಲು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದ ಪ್ರಮುಖ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಉತ್ಸವದ ಸಂಭ್ರಮ ಮತ್ತಷ್ಟು ಕಳೆಗಟ್ಟಿತ್ತು. ವಾದ್ಯ ಮೇಳಗಳ ನಾದಕ್ಕೆ ನಂದಿಕೋಲು ಕುಣಿತ ಪ್ರದರ್ಶನ ಜನರ ಗಮನ ಸೆಳೆಯಿತು. ಗ್ರಾಮಸ್ಥರು ಹಾಗೂ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನೂಲಿ ಚಂದಯ್ಯ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು.1
- ಶಾಸಕ ರೇವಣ್ಣ ವಿರುದ್ಧ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಂಘಟನೆ ವತಿಯಿಂದ ಪ್ರತಿಭಟನೆ ಶಾಸಕ ರೇವಣ್ಣ ವಿರುದ್ಧ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಂಘಟನೆ ವತಿಯಿಂದ ಪ್ರತಿಭಟನೆ *ಕೂಡ್ಲಿಗಿ*: ದಲಿತ ಮಹಿಳೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರ ಕುರಿತು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ, ಕೂಡ್ಲಿಗಿ ತಾಲ್ಲೂಕಿನ ಮಹರ್ಷಿ ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ಹಾಗೂ ವಿವಿಧ ನಾಯಕ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಲ್, ಮದಕರಿ ನಾಯಕ ವೃತ್ತದಿಂದ ಸಾಗಿದ ಪ್ರತಿಭಟನಾಕಾರರು ಮೆರವಣಿಗೆ ಮುಖಾಂತರ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ನೀಡಿದರು. ಮಹಿಳಾ ಅಧಿಕಾರಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಕೂಡಲೇ ಶಾಸಕ ರೇವಣ್ಣ ರಾಜೀನಾಮೆ ನೀಡಬೇಕು, ಜಿಲ್ಲಾಧಿಕಾರಿ ಲತಾಕುಮಾರಿ ಅವರಿಗೆ ಕ್ಷಮೆ ಕೇಳಬೇಕು, ಮುಂದಿನ ದಿನಗಳಲ್ಲಿ ನಮ್ಮ ನಾಯಕ ಜನಾಂಗಷತಕ್ಕ ಪಾಠ ಕಲಿಸಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ಮಹಿಳೆಯರು ಹಾಗೂ ಅಧಿಕಾರಿಗಳ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕೂಡ್ಲಿಗಿ ತಾಲೂಕಿನ ಮಹರ್ಷಿ ವಾಲ್ಮೀಕಿ ನಾಯಕ ಸಮುದಾಯದ ನಿವೃತ್ತ ಇಒ ಜಿ. ಬಸಣ್ಣ, ತಳವಾರ್ ಶರಣಪ್ಪ, ಜಿಂಕಲ್ ನಾಗಮಣಿ, ಗುನ್ನಳ್ಳಿ ರಾಘವೇಂದ್ರ, ಕಾವಲಿ ಶಿವಪ್ಪನಾಯಕ, ವಾಲ್ಮೀಕಿ ಸಂಘದ ಅದ್ಯಕ್ಷ ಸುರೇಶ್, ಜಯರಾಮ್ ನಾಯಕ್, ಹುಡೇಂ ಪಾಪನಾಯಕ, ಅಶೋಕ್,ಕಾಟೇರ್ ಹಾಲೇಶ್, ರೖತಸಂಘದ ಮಹೇಶಪ್ಪ, ವಕೀಲ ಓಂಕಾರಪ್ಪ, ಮಹದೇವಪುರ ಓಬಯ್ಯ, ನಿವೃತ್ತ ಪ್ರಾಂಶುಪಾಲೆ ಕೋತ್ಲಮ್ಮ,ಹಾಲಸಾಗರ ಮಂಜಣ್ಣ, ಅಜಯ್, ಪಾಪಯ್ಯ, ಸಣ್ಣೊಬಯ್ಯ,ಗುಂಡುಮುಣಗು ಮಂಜಣ್ಣ, ಡಾ. ಸಿದ್ದೇಶ್, ಚಿರತಗುಂಡು ದಡ್ಡಯ್ಯ, ಗೋವಿಂದ ರೆಡ್ಡಿ, ರಾಮಸಾಗರ ರಾಜಶೇಖರ್, ಸೇರಿದಂತೆ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.1
- ಜಗಳೂರು ತಾಲ್ಲೂಕು ಬರಪಟ್ಟಿಗೆ ಸೇರಿಸಿ :ಬಿಜೆಪಿಯಿಂದ ಪ್ರತಿಭಟಿಸಿ ತಹಶಿಲ್ದಾರರಿಗೆ ಮನವಿ. ಜಗಳೂರು ತಾಲ್ಲೂಕು ಬರಪಟ್ಟಿಗೆ ಸೇರಿಸಿ : ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಸರಕಾರಕ್ಕೆ ಆಗ್ರಹ. ಜಗಳೂರು ತಾಲ್ಲೂಕು ಅತೀ ಹಿಂದುಳಿದ ಪ್ರದೇಶವೆಂದು ಡಾ.ನಂಜುಡಪ್ಪ ಅವರ ವರಧಿಯಲ್ಲಿ ಇದೇ ಇದನ್ನು ಅರಿತಾದರೂ ಸರಕಾರದ ಅಧಿಕಾರಿಗಳು ಸ್ಥಳೀಯ ಶಾಸಕರು ಮೊದಲನೇ ಪಟ್ಟಿಯಲ್ಲಿ ಜಗಳೂರು ಬರ ಪೀಡಿತ ತಾಲ್ಲೂಕು ಎಂದು ಘೋಷಣೆ ಯಾಗಬೇಕಾಗಿತ್ತು ಎಂದು ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಶಾಸಕರಿಗೆ ಆಗ್ರಹ ಮಾಡಿದರು. ಜಗಳೂರು ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಹೋರಾಟ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಮತ್ತು ಸ್ಥಳೀಯ ಶಾಸಕರ ವಿರುದ್ಧವಾಗಿ ಹೇಳಿಕೆಗಳನ್ನು ಕೂಗೂತ್ತಾ ಸಾಗಿದ ಪ್ರತಿಭಟನೆಕಾರಾರು ಮಹಾತ್ಮಗಾಂಧಿ ವೃತ್ತದಿಂದ ರಸ್ತೆಯ ಮೂಲಕ ಸರಕಾರ ವಿರುದ್ಧ ಮತ್ತು ಸಚಿವರ ವಿರುದ್ಧ ಘೋಷಣೆಕೂಗಿದ ಕಾರ್ಯಕರ್ತರು ಮಹಾತ್ಮಗಾಂಧಿ ಬಸ್ ನಿಲ್ದಾಣದ ಹತ್ತಿರ ಟೈರಿಗೆ ಬೆಂಕಿ ಹಚ್ವಿ ಆಕ್ರೋಶವನ್ನು ವ್ಯಕ್ತಪಡಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಸಾಗಿದ ಪ್ರತಿಭಟನಾ ಮೆರವಣಿಗೆ ನೇರವಾಗಿತಹಶೀಲ್ದಾರ್ ಕಛೇರಿಗೆ ತೆರಳಿ ಸರಕಾರದ ವಿರುದ್ಧ ಕೆಲಕಾಲ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿ ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಮಾತನಾಡಿ ದಾವಣಗೆರೆ ಜಿಲ್ಲೆಯಲ್ಲಿ ಅತೀ ಹಿಂದುಳಿದ ತಾಲ್ಲೂಕು ಎಂದರೆ ಪ್ರಥಮವಾಗಿ ಜಗಳೂರು ತಾಲ್ಲೂಕಿಗೆ ಮೊದಲ ಆಧ್ಯತೆಯನ್ನು ನೀಡಬೇಕಾಗಿತ್ತು ಆದರೆ ಇಲ್ಲಿ ಅಧಿಕಾರಿಗಳ ಬೇಜವಬ್ದಾರಿ ತನವೊ ಅಥಾವ ಶಾಸಕರಿಗೆ ಮಾಹಿತಿಯಿಲ್ಲದಿರುವುದೊ ಗೊತ್ತಿಲ್ಲ ನಮ್ಮ ತಾಲ್ಲೂಕು ಪ್ರಥಮ ಪಟ್ಟಿಯಲ್ಲಿ ಕೈ ಬಿಟ್ಟು ಹೋಗಿರುವುದು ದುರಂತವೇ ಸರಿ ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು. ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಮಾತನಾಡಿ ರಾಜ್ಯ ವಿರೋಧ ಪಕ್ಷದ ನಾಯಕರನ್ನು ಕರೆಯಿಸಿ ಬರ ಅಧ್ಯಾಯನ ಮಾಡಿಸಿ ಶಾಸಕರು ಮಾಡುವ ಕೆಲಸ ವಿರೋಧ ಪಕ್ಷದವರು ಮಾಡಿದ್ದೇವೆ ಅಧಿಕಾರಿಗಳು ವರಧಿ ಕೊಡುವ ಮುಂಚೆಯೇ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ರಾಜ್ಯ ಸರಕಾರಕ್ಕೆ ವರದಿ ನೀಡಿದ್ದರು ಎಂದರು. ರೈತ ಮುಖಂಡ ಸಿದ್ಧಯ್ಯನಕೋಟೆ ಭೀಮಣ್ಣ ಮಾತನಾಡಿ ರೈತರ ಬಗ್ಗೆ ಕಾಳಜಿ ಇರದ ತಹಶಿಲ್ದಾರರು ತಿಂಗಳಿಗೊಮ್ಮೆ ಸರಕಾರದ ಸಭೆಗೆ ಹಾಜರಾಗುತ್ತಿರಲ್ಲ ಅಂದು ಜಗಳೂರು ತಾಲ್ಲೂಕು ಮಳೆ ಮತ್ತುಬೆಳೆಯ ಬಗ್ಗೆ ವಿವರಣೆ ನೀಡುವುದಿಲ್ಲವೇ ಎಂದು ತಹಶಿಲ್ದಾರರ್ ರವರನ್ನು ಪ್ರಶ್ನೆಮಾಡಿದರು. ನಿಮ್ಮ ಕೆಳ ಹಂತದ ಅಧಿಕಾರಿಗಳು ಮತ್ತು ವಿ.ಎ.ಗಳು ಮತ್ತು ತೋಟಗಾರಿಕೆ,ಕೃಷಿ ಇಲಾಖೆ ಹಾಗೂ ಇನ್ನಿತರೆ ಮಳೆ ಮಾಪನ ಕೇಂದ್ರದವರು ಮಾಹಿತಿಯನ್ನು ನೀಡುವುದಿಲ್ಲವೇ ಎಂದು ಹೇರು ಧ್ವನಿಯಲ್ಲಿ ಪ್ರಶ್ನೆಮಾಡಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಂಡಲ ಅಧ್ಯಕ್ಷ ಎ.ಎಂ.ಮರುಳರಾಧ್ಯ ಮಾತನಾಡಿ ರಾಜ್ಯ ಸರಕಾರ ನಿನ್ನೆ ಬಿಡುಗಡೆ ಮಾಡಿದ ಬರಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ನೋಡಿ ನಮ್ಮ ತಾಲ್ಲೂಕು ಪ್ರಥಮ ಪಟ್ಟಿಯಲ್ಲು ಇಲ್ಲ ಎಂದು ಅಸಮಧಾನ ಗೊಂಡು ದೂರವಾಣಿ ಮೂಲಕ ಮಾನ್ಯಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದಾಗ ಜಗಳೂರು ತಾಲ್ಲೂಕು ಬರಪಟ್ಟಿಯಲ್ಲಿ ಇಲ್ಲ ಎಂದು ಪ್ರಶ್ನೆ ಮಾಡಿದೆ ? ಅದಕ್ಕೆ ಬಂದ ಉತ್ತರ ನಿಮ್ಮ ತಾಲ್ಲೂಕಿನಲ್ಲಿ ತೇವಾಂಶ ಹೆಚ್ಚಾಗಿ ಕಂಡು ಬಂದಿದೆ ಇದು ನಾವು ಮಾಡಿದ್ದಲ್ಲ ಸೆಟುಲೈಟ್ ಆಧಾರವಾಗಿಟ್ಟು ಕೊಂಡು ವರದಿಯನ್ನು ತಯಾರಿಸಲಾಗಿದೆ ಎಂಬ ಉತ್ತರವನ್ನು ನೀಡಿದರು. ಜಗಳೂರು ತಹಸೀಲ್ದಾರ್ ರವರಿಗೆ ವಿಚಾರಣೆ ಮಾಡಿದಾಗ ಅದೇ ಉತ್ತರ ಮುಂದುವರೆದಿದ್ದು ಇದಕ್ಕೆ ಬೇಸರಗೊಂಡ ನಾನು ನಮ್ಮ ತಾಲ್ಲೂಕಿನಲ್ಲಿ ಸೇವೆ ಮಾಡುವುದಕ್ಕೆ ಇಷ್ಟವಿಲ್ಲವೆಂದು ಬೇರೆಕಡೆ ಹೋಗಿ ಎಂದು ದೂರವಾಣಿಯಲ್ಲೇ ಉತ್ತರಿಸಿದೆ ಎಂದು. ಈ ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮುಖಂಡ ಬಿಸ್ತುವಳ್ಳಿಬಾಬು, ಬಿದರಕೆರೆ ರವಿ, ಜೆ.ವಿ.ನಾಗರಾಜ್, ಮರೇನಹಳ್ಳಿ ಕಾರ್ತಿಕ್, ರಘ ಜಾಗ್ವಾರ್ , ಲ್ಯಾಬ್ ಶಿವು, ಸೇರಿದಂತೆ ವಿವಿಧ ಘಟಕದ ಅಧ್ಯಕ್ಷರು,ಉಪಾಧ್ಯಕ್ಷರು ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.2
- ಹೊಸಪೇಟೆ ಹತ್ತಿರ ಕಮಲಾಪುರ ಬಳಿ ಇರುವ ಹಂಪಿಯಲ್ಲಿ ರಾತ್ರಿ ಲೇಟಿನ ತೊಂದರೆ ಇದೆ ಪ್ಲೀಸ್ ಸರಿ ಮಾಡಿ1
- ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ವಾಗ್ದಾಳಿ ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಹರಿಹಾಯ್ದಿದ್ದಾರೆ. ನಾಯಕನಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದ್ದು ನಾಯಕನಹಟ್ಟಿ ಸಂಡೂರು, ಮೊಳಕಾಲ್ಮೂರು ,ಕೂಡ್ಲಿಗಿ, ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಮೀಸಲಿಡಿ ಹಾಗೂ ಎಲ್ಲಾ ಕೆರೆಗಳಿಗೆ ನೀರು ತರುವಂತಹ ಕೆಲಸ ಕೆಲಸ ಮಾಡಿ ಹಾಗೂ ದನ ಕರೆಗಳಿಗೆ ಮೇವು ಕೊಡುವಂತ ಕೆಲಸ ಮಾಡಿ ಮಾಜಿ ಶಾಸಕ ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಬರಗಾಲ ಪ್ರದೇಶವೆಂದು ಘೋಷಣೆ ಮಾಡಬಹುದಾಗಿತ್ತಲ್ಲ ಯಾಕೆ ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡಲಿಲ್ಲ ಕಾಂಗ್ರೆಸ್ನವರು ಕ್ಷೇತ್ರವನ್ನು ಕಡೆಗಣಿಸಿದ್ದಾರೆ ಎಂದು ಆರೋಪ ಮಾಡಿದರು. ಮೊಳಕಾಲ್ಮೂರು ಶಾಸಕ ಗೋಪಾಲಕೃಷ್ಣರವರೆ ರಾಜ್ಯದಲ್ಲಿ ನಿಮ್ಮ ಸರ್ಕಾರ ಇದೆ ಯಲ್ಲ ಯಾಕೆ ಬರಗಾಲ ಪ್ರದೇಶವೆಂದು ಘೋಷಣೆ ಮಾಡಲಿಲ್ಲ. ಮೊಳಕಾಲ್ಮೂರು ಕ್ಷೇತ್ರವನ್ನು ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡದೆ ಹೋದರೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಅತ್ಯಂತ ಹಿಂದುಳಿದಂತ ಕ್ಷೇತ್ರವಾಗಿದೆ ರೈತರು ತೀರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರಿಂದ ರೈತರ ಆರ್ಥಿಕ ಪರಿಸ್ಥಿತಿ ಅದೇಗೆಟ್ಟಿದೆ ಬೆಳೆ ಕೈಗೆ ಸಿಗುವುದು ಅನುಮಾನವಾಗಿದ್ದು ಈ ಹಿನ್ನೆಲೆ ಶಾಸಕರು ಆದಷ್ಟು ಬೇಗ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡುವಂತೆ ಆಗ್ರಹ ಮಾಡಿದ್ದಾರೆ.1
- ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು. ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ನಗರದ ಕುವೆಂಪು ಆಂಗ್ಲ ಮಾಧ್ಯಮ ಪ್ರೌಢಶಾಲೆ ಆವರಣದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಹೈನುಗಾರಿಕೆಯಿಂದ ಜೀವನೋಪಾಯ’ ವಿಷಯದ ಚಿತ್ರಕಲಾ ಸ್ಪರ್ಧೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಮಾತನಾಡಿ ಶಿವಮೊಗ್ಗ ಹಾಲು ಒಕ್ಕೂಟದ ಚಿತ್ರದುರ್ಗ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಂದಿನಿ ಉತ್ಪನ್ನಗಳ ಪರಿಚಯ ಮಾಡಿಸುವುದು, ಹೈನುಗಾರಿಕೆಯಿಂದ ರೈತರಿಗೆ ಆಗುವ ಪ್ರಯೋಜನಗಳ ಕುರಿತು ಅರಿವು ಮೂಡಿಸುವುದು ಹಾಗೂ ವಿದ್ಯಾರ್ಥಿಗಳ ಅನಿಸಿಕೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಿಗೊಳಿಸಲು ವೇದಿಕೆ ಕಲ್ಪಿಸುವುದು ಸ್ಪರ್ಧೆಯ ಮುಖ್ಯ ಉದ್ದೇಶವಾಗಿದೆ.ಇಂದು ಗ್ರಾಮೀಣ ಭಾಗದ ಅನೇಕ ರೈತ ಕುಟುಂಬಗಳು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಹಲವರಿಗೆ ಇದು ಪ್ರಮುಖ ಜೀವನೋಪಾಯವಾಗಿದೆ. ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು. ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು. ಚಿತ್ರಕಲಾ ಸ್ಪರ್ಧೆಯಲ್ಲಿ ಗ್ರಾಮಾಂತರ ಪ್ರೌಢಶಾಲೆ, ಪರಶುರಾಂಪುರದ ಈಶ್ವರಮ್ಮ ಜೆ. ಪ್ರಥಮ, ಆದರ್ಶ ಶಾಲೆಯ ದ್ರಾಕ್ಷಾಯಿಣಿ ಎಲ್. ದ್ವಿತೀಯ ಹಾಗೂ ಸಾಗರ್ ಎಂ.ಡಿ. ತೃತೀಯ ಸ್ಥಾನ ಪಡೆದು ಬಹುಮಾನ ಗಳಿಸಿದರು. .1
- ತಪ್ಪು ಮಾಡಿದನ್ನ ಕೇಳಿ ದಂಡ ಹಾಕಿದರು. ಅದೇ ಇಲಾಖಾ ಸಿಬ್ಬಂದಿ ಬಾಡಿ ಕ್ಯಾಮ್ ಹಾಕದೆ ಇರೋದ್ನ ಪ್ರಶ್ನೆ ಮಾಡ್ತಾವ್ರೆ ಇವರಿಗೆ ದಂಡ ಹಾಕೊವ್ರು ಶಿಕ್ಷಿಸೊವ್ರು ಇಲ್ವೆ...ಐಜಿಪಿ/ಡಿಜಿಪಿ ಸಾಹೇಬ್ರೆ..!? ಜನಸಾಮಾನ್ಯರಿಗೊಂದು ಕಾನೂನು...ಮತ್ತೊಬ್ಬರಿಗೆ ಒಂದು ಕಾನೂನಾ..!? ಅದ್ಕೆ ಹೇಳೋದು ಶೀಘ್ರವಾಗಿ ಕ್ಯಾಮರಾ ಚಾಲಿತ ಮಾಡಿ ದಂಡ ಹಾಕೋ ಕೆಲಸ ಮಾಡಿ’ಅಂತ..!1
- ಹುಬ್ಬಳ್ಳಿಯಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ; ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಹಾಡಹಗಲೇ ರಸ್ತೆಯ ಮಧ್ಯದಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಂಚಲನ ಮೂಡಿಸಿದೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದೇಶ್ವರ ಪಾರ್ಕ್ ಬಳಿ ಈ ಘಟನೆ ನಡೆದಿದ್ದು, ಆ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಯ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸ್ಥಳಕ್ಕೆ ಭೇಟಿ ನೀಡಿ ವಿದ್ಯಾನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗಿದೆ. ಕೊಲೆಗೆ ಕಾರಣ ಮತ್ತು ಮೃತರ ಗುರುತು ಸೇರಿದಂತೆ ಘಟನೆಯ ಸಂಪೂರ್ಣ ವಿವರಗಳು ಸದ್ಯಕ್ಕೆ ಲಭ್ಯವಿಲ್ಲ. ಕೊಲೆಯ ಆರೋಪಿಗಳನ್ನು ಹುಡುಕಲು ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯ ನಂತರವೇ ಘಟನೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕು. ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡೆದ ಬರ್ಬರ ಹತ್ಯೆ ಪ್ರಕರಣ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.**1