ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹೇಳಿಕೆ ನೀಡಿದ್ದ ಕಾರಣಕ್ಕಾಗಿ ತನ್ನ ಮೇಲೆ ನಾಲ್ವರು ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ’ಐಸಾ’ ಸಂಘಟನೆಯ ೧೯ ವರ್ಷದ ವಿದ್ಯಾರ್ಥಿ ದೂರು ನೀಡಿದ್ದು, ನಗರದ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜುಲೈ ೨೮ರ ರಾತ್ರಿ ಜಾಲಹಳ್ಳಿ ಪ್ರದೇಶದಲ್ಲಿ ವಿದ್ಯಾರ್ಥಿ ಮನೆಗೆ ತೆರಳುತ್ತಿದ್ದಾಗ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದ ಮುಖವಾಡ ಧರಿಸಿದ್ದ ನಾಲ್ವರು ಅಪರಿಚಿತರು ಆತನನ್ನು ತಡೆದು ನಿಲ್ಲಿಸಿದ್ದಾರೆ. ಮರದ ದೊಣ್ಣೆಯಿಂದ ಆತನ ಬಲಗಾಲಿಗೆ ಹೊಡೆದು ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ವಿದ್ಯಾರ್ಥಿಯು ಇತ್ತೀಚೆಗೆ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದನೆನ್ನಲಾಗಿದೆ. ಈ ಘಟನೆಯನ್ನು ಖಂಡಿಸಿರುವ ’ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್’ ’ಎಬಿವಿಪಿ ಸಂಘಟನೆಯ ಕಾರ್ಯಕರ್ತರೇ ಈ ಕೃತ್ಯ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದೆ. ಆದರೆ ಈ ಆರೋಪವನ್ನು ತೀವ್ರವಾಗಿ ತಳ್ಳಿಹಾಕಿರುವ ಎಬಿವಿಪಿ ಬೆಂಗಳೂರು ಮಹಾನಗರ ಘಟಕ, "ಇದು ಸಂಪೂರ್ಣ ಆಧಾರರಹಿತ ಆರೋಪ. ಪೋಲಿಸ್ ದಾಖಲೆಗಳ ಪ್ರಕಾರ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇದಕ್ಕೂ ನಮ್ಮ ಸಂಘಟನೆಗೂ ಯಾವುದೇ ಸಂಬಂಧವಿಲ್ಲ" ಎಂದು ಸ್ಪಷ್ಟಪಡಿಸಿದೆ. ಅಲ್ಲದೆ, ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಆಗ್ರಹಿಸಿದೆ. ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಜಾಲಹಳ್ಳಿ ಠಾಣೆ ಪೊಲೀಸರು, ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹೇಳಿಕೆ ನೀಡಿದ್ದ ಕಾರಣಕ್ಕಾಗಿ ತನ್ನ ಮೇಲೆ ನಾಲ್ವರು ಅಪರಿಚಿತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ’ಐಸಾ’ ಸಂಘಟನೆಯ ೧೯ ವರ್ಷದ ವಿದ್ಯಾರ್ಥಿ ದೂರು ನೀಡಿದ್ದು, ನಗರದ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜುಲೈ ೨೮ರ ರಾತ್ರಿ ಜಾಲಹಳ್ಳಿ ಪ್ರದೇಶದಲ್ಲಿ ವಿದ್ಯಾರ್ಥಿ ಮನೆಗೆ ತೆರಳುತ್ತಿದ್ದಾಗ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದ ಮುಖವಾಡ ಧರಿಸಿದ್ದ ನಾಲ್ವರು ಅಪರಿಚಿತರು ಆತನನ್ನು ತಡೆದು ನಿಲ್ಲಿಸಿದ್ದಾರೆ. ಮರದ ದೊಣ್ಣೆಯಿಂದ ಆತನ ಬಲಗಾಲಿಗೆ ಹೊಡೆದು ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ವಿದ್ಯಾರ್ಥಿಯು ಇತ್ತೀಚೆಗೆ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದನೆನ್ನಲಾಗಿದೆ. ಈ ಘಟನೆಯನ್ನು ಖಂಡಿಸಿರುವ ’ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್’ ’ಎಬಿವಿಪಿ ಸಂಘಟನೆಯ ಕಾರ್ಯಕರ್ತರೇ ಈ ಕೃತ್ಯ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದೆ. ಆದರೆ ಈ ಆರೋಪವನ್ನು ತೀವ್ರವಾಗಿ ತಳ್ಳಿಹಾಕಿರುವ ಎಬಿವಿಪಿ ಬೆಂಗಳೂರು ಮಹಾನಗರ ಘಟಕ, "ಇದು ಸಂಪೂರ್ಣ ಆಧಾರರಹಿತ ಆರೋಪ. ಪೋಲಿಸ್ ದಾಖಲೆಗಳ ಪ್ರಕಾರ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇದಕ್ಕೂ ನಮ್ಮ ಸಂಘಟನೆಗೂ ಯಾವುದೇ ಸಂಬಂಧವಿಲ್ಲ" ಎಂದು ಸ್ಪಷ್ಟಪಡಿಸಿದೆ. ಅಲ್ಲದೆ, ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಆಗ್ರಹಿಸಿದೆ. ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಜಾಲಹಳ್ಳಿ ಠಾಣೆ ಪೊಲೀಸರು, ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದು ತನಿಖೆ ಮುಂದುವರಿಸಿದ್ದಾರೆ.
- ಕಾವೇರಿ ನೀರಿನ ವಿಚಾರದಲ್ಲಿ ಸಿಎಂ ಡಿಕೆ ಹೇಳಿಕೆ ಕುರಿತು ಏಕವಚನದಲ್ಲೇ ಮಹಿಳೆ ಟಾಕ್ | Veega News Kannada ಕಾವೇರಿ ನೀರಿನ ವಿಚಾರದಲ್ಲಿ ಸಿಎಂ ಡಿಕೆ ಹೇಳಿಕೆ ಕುರಿತು ಏಕವಚನದಲ್ಲೇ ಮಹಿಳೆ ಟಾಕ್ | Veega News Kannada1
- ನಾನೇನು ಲಾಭಿ ಮಾಡೋಕೆ ಹೋಗಿಲ್ಲ:ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಲಪಾಡ್ ಪ್ರತಿಕ್ರಿಯೆ ಬೆಂಗಳೂರು:ಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋದಾಗಲೆಲ್ಲಾ ನಲಪಾಡ್ ಫಾಲೋ ಮಾಡ್ತಿದ್ದು,ಈ ಬಾರಿಯಾದ್ರೂ ಮಂತ್ರಿಗಿರಿ ಪಡೆಯುವಲ್ಲಿ ತಂದೆ ಮತ್ತು ಮಗ ಸಕ್ಸಸ್ ಆಗ್ತಾರಾ?ಫೈನಲ್ ಲೀಸ್ಟ್ ನಲ್ಲಿ ಹೆಸರು ಇರುವಂತೆ ತಂದೆ ಮತ್ತು ಮಗ ಎಫರ್ಟ್ ಆಗ್ತಿದ್ದಾರೆ.ದೆಹಲಿಯಲ್ಲಿ ಸಿಎಂ ಭೇಟಿಯಾಗಿ ತಂದೆಗೆ ಸಚಿವಸ್ಥಾನ ಕೊಡಿಸಲು ಹ್ಯಾರೀಸ್ ಪುತ್ರ ನಲಪಾಡ್ ಪ್ಲಾನ್ ನಡೆಸಿದ್ದಾರೆ.ಇನ್ನೂ ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ನಲಪಾಡ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿಗಳು ದೆಹಲಿಗೆ ಹೋದಾಗ ಫ್ರೀಯಾಗಿ ಸಿಗ್ತಾರೆ ಅಂತ ಮಾತಾಡೋಕೆ ಹೋಗಿದ್ದೆ,ನಾನೇನು ಲಾಭಿ ಮಾಡೋಕೆ ಹೋಗಿಲ್ಲ, ನಮ್ಮ ಅಪ್ಪ ನಾಲ್ಕು ಬಾರಿ ಗೆದ್ದಿದ್ದಾರೆ, ಅವರು ಒಳ್ಳೆಯ ಕೆಲಸಗಳನ್ನ ಮಾಡಿದ್ದಾರೆ,ಕಡಲಸಗಳನ್ನ ನಡೆಸಿಕೊಂಡು ಬಂದಿದ್ದಾರೆ, ಅವರನ್ನ ಮಂತ್ರಿ ಮಂಡಲದಲ್ಲಿ ಸೇರ್ಸ್ತಾರೆ ಅನ್ನೋ ನಂಬಿಕೆ ನಮ್ಮ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳ ಮೇಲೆ ಇದೆ,ನಾವು ಯಾವುದೇ ಪ್ರಸ್ತಾಪ ಮಾಡಿಲ್ಲ, ಡೈಲಿ ಮುಖ ತೋರಿಸಿರ್ದೆ ನೆನಪು ಬರುತ್ತೆ ಎಂದು ನಲಪಾಡ್ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ.1
- "ದಮ್, ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ!" – ಉಡುಪಿ ಶಾಸಕ ಯಶ್ಪಾಲ್ ಸುವರ್ಣಗೆ ಬೂಡಾ ಅಧ್ಯಕ್ಷ ಬಳ್ಳಾರಿಯಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಮಾಧ್ಯಮಗಳ ಮುಂದೆ ಮಾತನಾಡಿದ ಬೂಡಾ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಉಡುಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿದ ಅವರು, "ದಮ್, ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ" ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ ಅವರು, "ರಾಹುಲ್ ಗಾಂಧಿ ವಿರುದ್ಧದ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು" ಎಂದು ಒತ್ತಾಯಿಸಿದ್ದಾರೆ. #Ballari #JSAnjaneyalu #YashpalSuvarna #RahulGandhi #Congress #BJP #KarnatakaPolitics #PoliticalNews #BreakingNews #BallariNews #CongressVsBJP #KarnatakaNews #ASNNews24Kannada #KannadaNews #LatestNews1
- *ಅಭಿಮಾನಿಗಳಿಂದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಹುಟ್ಟುಹಬ್ಬದ ಪ್ರಯುಕ್ತ ಅನ್ನದಾನ ಮತ್ತು ಕ್ರೀಡಾಕೂಟ* *ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ-ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ* ಭಾಗ್ಯನಗರ: ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು,ಕ್ರೀಡೆಯಿಂದ ಮನಸ್ಸು ಮತ್ತು ದೇಹ ಸದಢವಾಗಿರುತ್ತದೆ. ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಹೇಳಿದರು. ಪಟ್ಟಣದ 12ನೇ ವಾರ್ಡಿನ ಹಿಂಭಾಗದ ಕೊರ್ಲಕುಂಟೆ ಕ್ರಿಕೆಟ್ ಮೈದಾನದಲ್ಲಿ ಸಚಿವ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ಜನ್ಮದಿನದ ಅಂಗವಾಗಿ ಭಾಗ್ಯನಗರ ಬಿ.ಝೆಡ್ ಗ್ರೂಪ್ಸ್ ಹಾಗೂ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ಅಭಿಮಾನಿಗಳ ಬಳಗವತಿಯಿಂದ ಸತತ ನೇ ವರ್ಷದ ಕ್ರಿಕೆಟ್ ಟೂರ್ನೀ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ,ಮನುಷ್ಯನಿಗೆ ಕ್ರೀಡೆ ದೈಹಿಕ ಚಟುವಟಿಕೆ ಅಥವಾ ಮಾನಸಿಕ ಚಟುವಟಿಕೆ, ಸ್ಪರ್ಧೆ, ಮನರಂಜನೆ ಅಥವಾ ವ್ಯಾಯಾಮಕ್ಕಾಗಿ ನಡೆಸಲಾಗುತ್ತದೆ. ಕ್ರೀಡೆಯ ಮಹತ್ವವೆಂದರೆ ಅದು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ, ಜೀವನ ಕೌಶಲ್ಯಗಳನ್ನು ಕಲಿಸುತ್ತದೆ ಮತ್ತು ಸಮಾಜದಲ್ಲಿ ಏಕತೆಯನ್ನು ತರುತ್ತದೆ,ಮುಖ್ಯವಾಗಿ ಯುವಕರು ದುಶ್ಚಟಗಳನ್ನು ತ್ಯಜಿಸಿ ಸದೃಢ ದೇಹ ಹೊಂದಲು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕಿದೆ ಎಂದು ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮಾಜಿ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಾಗೇಪಲ್ಲಿ ಬಿ ಜೆಡ್ ಗ್ರೂಪ್ ಮತ್ತು ಜಮೀರ್ ಅಹ್ಮದ್ ಖಾನ್ ಅಭಿಮಾನಿಗಳಿಂದ ಅನ್ನದಾನ ಮತ್ತು ಕ್ರೀಡಾಕೂಟ ಹಾಗೂ ಸೇವಾ ಕಾರ್ಯಗಳು ನೆರವೇರಿಸಲಾಯಿತು. ಇದೇ ಸಂಧರ್ಭದಲ್ಲಿ ಪುರಸಭೆ ನಾಮ ನಿರ್ದೇಶನ ಸದಸ್ಯ ಹಾಗೂ ಬಿ ಜೆಡ್ ಗ್ರೂಪ್ ಅಧ್ಯಕ್ಷ ಅನ್ಸರ್ ಮಾತನಾಡಿ,ನಮ್ಮ ಅಲ್ಪಸಂಖ್ಯಾತರ ನಾಯಕರು ಹಾಗೂ ನಮ್ಮ ರಾಜ್ಯದ ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಪಟ್ಟಣದ ಗೂಳೂರು ವೃತ್ತದಲ್ಲಿ ಪ್ರೀತಿಯಿಂದ ವಿಶೇಷ ಅನ್ನದಾನ ಹಾಗೂ ಸಿಹಿ ವಿತರಿಸುವ ಮೂಲಕ ಬಾಗೇಪಲ್ಲಿ ಝೆಡ್ ಗ್ರೂಪ್ ವತಿಯಿಂದ ಸೇವಾ ಕಾರ್ಯಗಳು ಮಾಡಲಾಗುತ್ತಿದೆ, ಅವರಿಗೆ ಸದಾ ದೇವರ ಅನುಗ್ರಹ ಮತ್ತು ದೇವರ ಆಶೀರ್ವಾದ ಇರಬೇಕು ಎಂದು ಶುಭಹಾರೈಸುತ್ತೇನೆ ಎಂದರು. ಪಟ್ಟಣದ ವಿವಿಧ ವಾರ್ಡ್ ಗಳಿಂದ ಆಗಮಿಸಿದ್ದ ಸುಮಾರು 5 ಕ್ಕೂ ಹೆಚ್ಚು ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಪ್ರಥಮ ಬಹುಮಾನ 10,000 ಸಾವಿರ ರೂ.ನಗದು, ಟ್ರೋಫಿ, ದ್ವಿತೀಯ ಬಹುಮಾನ 5,000 ರೂಪಾಯಿ ನಗದು ಮತ್ತು ಟ್ರೋಫಿ ಹಾಗೂ ಪಾದ್ಯವಳಿಯಲ್ಲಿ ಭಾಗವಹಿಸಿದ ಆಟಗಾರರಿಗೆ ಕುಡಿಯುವ ನೀರು,ಉಟೋಪಚಾರ,ನೆನಪಿನ ಕಾಣಿಕೆ ನೀಡಲಾಗುವುದು ಎಂದು ಬಿ ಝೆಡ್ ಗ್ರೂಪ್ ಕ್ರಿಕೆಟ್ ಟೂರ್ನೀಮೆಂಟ್ ಆಯೋಜಕರು ತಿಳಿಸಿದ್ದಾರೆ. ಈ ಸಂಧರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಜಯಪ್ರಕಾಶ್,ಅಲ್ಪಸಂಖ್ಯಾತರ ಅಧ್ಯಕ್ಷ ವಸೀo,ಜುಬೇದ ಟ್ರಾನ್ಸ್ಪೋರ್ಟ್ ಆಸೀಫ್, ಅಬ್ಜಲ್,ಫೈರೋಜ್,ಜಾವಿದ್ ಕಾಯುo,ಪೀರ್,ಪರ್ವಿಜ್, ಮೂರ್ತಿ ಆಝಾಮ್,ಮಕ್ಕ ಮಸೀದಿ ಅಧ್ಯಕ್ಷ ಮನೋಹರ್ ರಫೀಕ್ ಸೇರಿದಂತೆ ವಿವಿಧ ತಂಡಗಳ ಕ್ರೀಡಾಪಟುಗಳು ಇದ್ದರು.4
- *ಕೋಲಾರದ ಜೆ.ಡಿ.ಎಸ್ ಮುಖಂಡರು ಹಾಗೂ ಕಾರ್ಯಕರ್ತರು ದಿವಂಗತ ಚನ್ನಮ್ಮ ದೇವೆಗೌಡರ ಉತ್ತರ ಕ್ರಿಯಾದಿ ಕಾರ್ಯದಲ್ಲಿ ಭಾಗಿ* ಕೋಲಾರ: ದಿವಂಗತ ಚನ್ನಮ್ಮ ದೇವೆಗೌಡರ ಉತ್ತರ ಕ್ರಿಯಾದಿ ಕಾರ್ಯಕ್ರಮಕ್ಕೆ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಜೆ.ಡಿ.ಎಸ್.ಮುಖಂಡ ಸಿ.ಎಂ.ಆರ್ .ಶ್ರೀನಾಥ್ ರವರ ನೇತೃತ್ವದಲ್ಲಿಸುಮಾರು 150 ಕ್ಕೂ ಹೆಚ್ಚಿನ ವಾಹನಗಳಲ್ಲಿನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಪ್ರಯಾಣ ಬೆಳೆಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಮುಖಂಡರುಗಳಾದ ವಕ್ಕಲೇರಿ ರಾಮು, ಬಾಬು ಮೌನಿ, ದೊಡ್ಡವಲ್ಲಬಿ ಲಕ್ಷ್ಮಣಗೌಡರು, ಬಣಕನಹಳ್ಳಿ ನಟರಾಜ್, ಶ್ರೀಮತಿ ಚೌಡೇಶ್ವರಿ ರಾಮು, ವಡಗೂರು ರಾಮು ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.4
- ಕೋಲಾರ ಯುವಶಕ್ತಿಯೇ ದೇಶದ ಆಸ್ತಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಮುಂದಾಗಲಿ ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ. ಬಿ.ಕೆ. ರವಿ ಯುವಶಕ್ತಿಯೇ ದೇಶದ ಆಸ್ತಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಮುಂದಾಗಲಿ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಕೆ. ರವಿ ಅವರು ಅಭಿಪ್ರಾಯಪಟ್ಟರು.ಇಂದು ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಮಂಗಸAದ್ರ, ಸುವರ್ಣಗಂಗೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಕೋಲಾರ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 'ವ್ಯಸನಮುಕ್ತ ದಿನಾಚರಣೆ'ಯಲ್ಲಿ ಭಾಗವಹಿಸಿದ್ದ ಅವರು ಮಾತನಾಡುತ್ತಿದ್ದರು. ಯುವಜನತೆ ಮಾದಕ ವ್ಯಸನಗಳಿಂದ ದೂರ ಉಳಿದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಕರೆ ನೀಡಿದರು. ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಅವರು,. "ಭಾರತದಲ್ಲಿ ಶೇ. 65ರಷ್ಟು ಯುವ ಜನಸಂಖ್ಯೆ ಇದ್ದು, ಈ ಯುವಶಕ್ತಿಯೇ ದೇಶದ ನಿಜವಾದ ಆಸ್ತಿ. ಯಾವುದೇ ಒಂದು ವ್ಯಸನವು ಕೇವಲ ವ್ಯಕ್ತಿಯನ್ನು ಮಾತ್ರ ಬಲಿಪಡೆಯುವುದಿಲ್ಲ, ಬದಲಾಗಿ ಇಡೀ ಕುಟುಂಬ ಹಾಗೂ ಸಮಾಜವನ್ನೇ ನಾಶ ಮಾಡುತ್ತದೆ. ಆದ್ದರಿಂದ ಇಂದಿನ ಯುವಕರು ಮಾದಕ ವಸ್ತುಗಳ ದಾಸರಾಗದೆ, ಸಮಾಜವನ್ನು ಮುನ್ನಡೆಸುವ ಮತ್ತು ದೇಶ ಕಟ್ಟುವ ಕಾರ್ಯದಲ್ಲಿ ಮುಂಚೂಣಿಯಲ್ಲಿರಬೇಕು," ಎಂದು ಅವರು ಪ್ರತಿಪಾದಿಸಿದರು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಪ್ರಭು ಎನ್. ಬಡಿಗೇರ್ ಅವರು ವಿವಿಧ ಕಾನೂನುಗಳ ಅರಿವನ್ನು ಮೂಡಿಸಿದರು. "ದೇಶದಲ್ಲಿ ಯಾರೂ ಕಾನೂನಿಗಿಂತ ದೊಡ್ಡವರಲ್ಲ. ತಾಯಿಯ ಗರ್ಭದಲ್ಲಿರುವ ಮಗುವಿನ ರಕ್ಷಣೆಯಿಂದ ಹಿಡಿದು (ಭ್ರೂಣಹತ್ಯೆ ನಿಷೇಧ), ಮನುಷ್ಯ ಸತ್ತ ನಂತರದ ಆಸ್ತಿ ಹಂಚಿಕೆಯವರೆಗೂ ಕಾನೂನು ಪ್ರತಿಯೊಬ್ಬರಿಗೂ ರಕ್ಷಣೆ ನೀಡುತ್ತದೆ. ಅದರಲ್ಲೂ ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ಪೋಕ್ಸೊ (POCSO) ಕಾಯ್ದೆ ಅತ್ಯಂತ ಕಠಿಣವಾಗಿದ್ದು, ಅಪರಾಧ ಸಾಬೀತಾದರೆ 20 ವರ್ಷಗಳವರೆಗೆ ಕಠಿಣ ಶಿಕ್ಷೆ ಕಟ್ಟಿಟ್ಟ ಬುತ್ತಿ. ಯುವಜನತೆ ಇಂತಹ ಕಾನೂನುಗಳ ಬಗ್ಗೆ ಅರಿವು ಬೆಳೆಸಿಕೊಂಡು ಸಮಾಜದ ಸತ್ಪ್ರಜೆಗಳಾಗಿ ಬದುಕಬೇಕು," ಎಂದು ಅವರು ಕಿವಿಮಾತು ಹೇಳಿದರು. ಕಾರ್ಯಕ್ರಮ ಉದ್ದೇಶಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀನಿವಾಸ್ ಅವರು ಮಾತನಾಡಿ 'ವ್ಯಸನ' ಎಂದರೆ ಚಟ ಅಥವಾ ಗೀಳು ಎಂದರ್ಥ. ಇಂದಿನ ಯುವಜನತೆ ಧೂಮಪಾನ, ಮದ್ಯಪಾನ ಹಾಗೂ ಮಾದಕ ದ್ರವ್ಯಗಳಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದರ ದುರದುಷ್ಟಕರ ಎಂದು ಕಳವಳ ವ್ಯಕ್ತಪಡಿಸಿದರು. ವೈಜ್ಞಾನಿಕವಾಗಿ ಗಮನಿಸಿದರೆ, ನಾವು ಪರೀಕ್ಷೆಯಲ್ಲಿ ಗೆದ್ದಾಗ ಅಥವಾ ಒಳ್ಳೆಯ ಸಿನಿಮಾ ನೋಡಿದಾಗ ನಮ್ಮ ಮೆದುಳಿನ 'ರಿವಾರ್ಡ್ ಸೆಂಟರ್' ಡೋಪಮೈನ್ (Dopamine) ಎಂಬ ರಾಸಾಯನಿಕವನ್ನು ಬಿಡುಗಡೆ ಮಾಡಿ ನಮಗೆ ಸಹಜವಾದ ಖುಷಿ ನೀಡುತ್ತದೆ. ಆದರೆ, ಮಾದಕ ವಸ್ತುಗಳನ್ನು ಸೇವಿಸಿದಾಗ ಕೃತಕವಾಗಿ ಇದೇ ಡೋಪಮೈನ್ ಬಿಡುಗಡೆಯಾಗುತ್ತದೆ. ಈ ಕೃತಕ ಖುಷಿಗಾಗಿ ಯುವಜನರು ವ್ಯಸನಕ್ಕೆ ದಾಸರಾಗುತ್ತಾರೆ. ಆರಂಭದಲ್ಲಿ ಒಂದು ಸಿಗರೇಟ್ನಿಂದ ಸಿಗುವ ತೃಪ್ತಿ, ಕ್ರಮೇಣ ಮೆದುಳು ಆ ರಾಸಾಯನಿಕಕ್ಕೆ ಒಗ್ಗಿಕೊಳ್ಳುವುದರಿಂದ (ಅಡಾಪ್ಟೇಶನ್) ನಾಲ್ಕು ಸಿಗರೇಟ್ ಸೇದಿದರೂ ಸಿಗುವುದಿಲ್ಲ. ಈ ಹಂತದಲ್ಲಿ ಚಟವನ್ನು ನಿಲ್ಲಿಸಿದರೆ ವಿಪರೀತ ಕೋಪ ಮತ್ತು ಹತಾಶೆಯಂತಹ 'ವಿತ್ಡ್ರಾವಲ್' ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಯಾವುದೇ ಕಾರಣಕ್ಕೂ ಸ್ನೇಹಿತರ ಒತ್ತಡಕ್ಕೆ ಮಣಿದು ಅಥವಾ ಕೇವಲ ಕುತೂಹಲಕ್ಕಾಗಿ ದುಶ್ಚಟಗಳನ್ನು ಪ್ರಾರಂಭಿಸಬಾರದು; ಮೊದಲ ಹೆಜ್ಜೆಯಲ್ಲೇ ಇದನ್ನು ಕಡ್ಡಾಯವಾಗಿ ತಿರಸ್ಕರಿಸಬೇಕು ಎಂದು ಅವರು ಕಿವಿಮಾತು ಹೇಳಿದರು. ಒಂದು ವೇಳೆ ಈಗಾಗಲೇ ವ್ಯಸನಕ್ಕೆ ತುತ್ತಾಗಿದ್ದರೆ, ದೃಢವಾದ ಇಚ್ಛಾಶಕ್ತಿ ಹಾಗೂ ವೈದ್ಯಕೀಯ ನೆರವಿನಿಂದ ಅದರಿಂದ ಸಂಪೂರ್ಣವಾಗಿ ಹೊರಬರಬಹುದು. ಇದಕ್ಕಾಗಿ ನಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಕೌನ್ಸಿಲಿಂಗ್ ಕೇಂದ್ರಗಳಲ್ಲಿ ಅಗತ್ಯ ಚಿಕಿತ್ಸೆ ಲಭ್ಯವಿದ್ದು, ಯುವಜನರು ಮುಜುಗರವಿಲ್ಲದೆ ಸಹಾಯ ಪಡೆಯಬೇಕು ಎಂದು ಅವರು ಕರೆ ನೀಡಿದರು. ಮಾದಕ ವಸ್ತುಗಳ ಸೇವನೆಯಿಂದ ಆಗುವ ಭೀಕರ ಪರಿಣಾಮಗಳ ಕುರಿತು ಮಾತನಾಡಿದ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಚಾರಿಣಿ, "ಮಾದಕ ವಸ್ತುಗಳು ನೇರವಾಗಿ ಮನುಷ್ಯನ ಮೆದುಳಿನ ರಿವಾರ್ಡ್ ಸೆಂಟರ್ ಮೇಲೆ ಪ್ರಭಾವ ಬೀರಿ, ಡೋಪಮೈನ್ ಬಿಡುಗಡೆ ಮಾಡುವ ಮೂಲಕ ವ್ಯಕ್ತಿಯನ್ನು ಸಂಪೂರ್ಣ ವ್ಯಸನಿಯನ್ನಾಗಿಸುತ್ತವೆ. ಇದರ ನಿರಂತರ ಸೇವನೆಯಿಂದ ಯಕೃತ್ತು ಹಾಗೂ ಮೂತ್ರಪಿಂಡಗಳ ವೈಫಲ್ಯ, ಬಂಜೆತನ ಮತ್ತು ರೋಗ ನಿರೋಧಕ ಶಕ್ತಿ ಕುಂದುವAತಹ ಗಂಭೀರ ಸಮಸ್ಯೆಗಳು ಎದುರಾಗುತ್ತವೆ. ಅಲ್ಲದೆ, ಮಾದಕ ವ್ಯಸನಿಗಳು ಒಂದೇ ಇಂಜೆಕ್ಷನ್ ಹಂಚಿಕೊಳ್ಳುವುದರಿAದ ಎಚ್.ಐ.ವಿ (HIV) ನಂತಹ ಮಾರಕ ರೋಗಗಳು ವೇಗವಾಗಿ ಹರಡುತ್ತವೆ," ಎಂದು ಎಚ್ಚರಿಸಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ್ ಅವರು ಪ್ರಸ್ತುತ ವಿದ್ಯಾವಂತರ ದುಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. "ಅಕ್ಷರಸ್ಥರಾದ ಮಾತ್ರಕ್ಕೆ ಎಲ್ಲರೂ ಬುದ್ಧಿವಂತರಾಗುವುದಿಲ್ಲ. ಇಂದು ವಿದ್ಯಾವಂತ ಯುವಜನತೆಯೇ ಅತಿ ಹೆಚ್ಚು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ದೊಡ್ಡ ವಿಪರ್ಯಾಸ. ರಾಜ್ಯದಲ್ಲಿನ ಇತ್ತೀಚಿನ ವರದಿಗಳ ಬಹಳಷ್ಟು ಜನರು ಎಚ್.ಐ.ವಿ ಸೋಂಕಿಗೆ ಒಳಗಾಗಿದ್ದಾರೆ. ಇದರಲ್ಲಿ ಯುವಕರ ಪ್ರಮಾಣವೇ ಹೆಚ್ಚಾಗಿರುವುದು ಸಮಾಜಕ್ಕೆ ಅತ್ಯಂತ ಮಾರಕವಾದ ಸಂಗತಿಯಾಗಿದೆ," ಎಂದು ಅವರು ಆತಂಕ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಡಾ. ಕೆ.ಎನ್. ಕವನ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಸಚಿವರು ಮೌಲ್ಯಮಾಪನ ಹಾಗೂ ನಿರ್ದೇಶಕಿ ಸುವರ್ಣಗಂಗೆ ಕ್ಯಾಂಪಸ್ ಹಾಗೂ ಪ್ರೊ ಕುಮುದ, ವಿತ್ತಾಧಿಕಾರಿ ಬಾಹುಬಲಿ, ಸಿಬ್ಬಂದಿಗಳು, ಎಲ್ಲಾ ಪ್ರಾಧ್ಯಪಕರು ಸೇರಿದಂತೆ ವಿವಿಧ ಇಲಾಖೆಗಳ ಗಣ್ಯರು ಉಪಸ್ಥಿತರಿದ್ದರು.1
- ನಿಮ್ಮೂರಲ್ಲಿ ವೇಗ| ರೇಷನ್ ದುಡ್ಡು ಬಂತು ಆದ್ರೆ ಗೃಹಲಕ್ಷ್ಮಿ ಹಣ ಬಂದಿಲ್ಲ| Veega News Kannada ನಿಮ್ಮೂರಲ್ಲಿ ವೇಗ| ರೇಷನ್ ದುಡ್ಡು ಬಂತು ಆದ್ರೆ ಗೃಹಲಕ್ಷ್ಮಿ ಹಣ ಬಂದಿಲ್ಲ| Veega News Kannada1
- ಕೆಆರ್ ಪುರದಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಬೆಂ,ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ಡಿ ,ಎಸ್ ರಮೇಶ್ ಚಾಲನೆ ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ಡಿ ,ಎಸ್ ರಮೇಶ್ ರಿಂದ ಚಾಲನೆ .ಆಯುಕ್ತ ರಮೇಶ್ ಅವರಿಗೆ ಕೆಆರ್ ಪುರ ಜಂಟಿ ಆಯುಕ್ತೆ ಡಾ . ಸುಧಾ ಸ್ವಪ್ನ ಸಾಥ್ .ಕೆಆರ್ ಪುರದ ಐಟಿಐ ಗೇಟ್ ನಿಂದ ಆರಂಭವಾಗಿರುವ ಅಭಿಯಾನ .ಕೆಆರ್ ಪುರ ಹಾಗೂ ಮಹದೇವಪುರ ವಲಯಗಳಲ್ಲಿ ಏಕಕಾಲ ಚಾಲನೆ ನೀಡಿರುವ ಆಯುಕ್ತ ರಮೇಶ್ .ಒಂದು ತಿಂಗಳ ಕಾಲ ನಡೆಯಲಿರುವ ಅಭಿಯಾನ .ಖಾಸಗೀ ಸ್ವತ್ತುಗಳಲ್ಲಿ ತ್ಯಾಜ್ಯ ತೆರವಿಗೆ ಮಾಲೀಕರಿಗೆ ೧೫ದಿನಗಳ ಗಡುವು.೧೫ ದಿನಗಳ ಬಳಿಕವೂ ತೆರವುವಾಗಿಲ್ಲ ಅಂದ್ರೆ ಮಾಲೀಕರೇ ತೆರಿಗೆ ಜೊತೆಗೆ ತ್ಯಾಜ್ಯ ನಿರ್ವಹಣಾ ವೆಚ್ಚ ಭರಿಸಬೇಕು1
- ಹೆಬ್ಬಾಳದಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ" ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಿಗ್ಗೆ ಹೆಬ್ಬಾಳ ಜಂಕ್ಷನ್ ಬಳಿ "ತ್ಯಾಜ್ಯದಿಂದ ಸ್ವಾತಂತ್ರ್ಯ" ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಎಸ್.ಆರ್. ವಿಶ್ವನಾಥ್, ಜಿ.ಬಿ.ಎ. ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಮೊದಲಾದವರು ಉಪಸ್ಥಿತರಿದ್ದರು.1