logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್‌ಗಾರ್ ಯೋಜನೆ (PMVBRY) ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗ ಪಡೆಯುವವರಿಗೆ ₹15,000 ವರೆಗೆ ಪ್ರೋತ್ಸಾಹ ಧನ ಲಭ್ಯವಾಗಲಿದೆ. ಈ ಯೋಜನೆಯು ಉದ್ಯೋಗದಾತರಿಗೂ ಸಾವಿರಾರು ರೂಪಾಯಿ ಪ್ರೋತ್ಸಾಹ ಧನ ಒದಗಿಸಲಿದೆ. ಈ ಯೋಜನೆ 2025ರ ಆಗಸ್ಟ್ 1ರಿಂದ ಜಾರಿಗೆ ಬಂದಿದ್ದು, 2027ರ ಜುಲೈ 31ರವರೆಗೆ ಅನ್ವಯವಾಗಲಿದೆ. ಉತ್ಪಾದನಾ ಘಟಕಗಳಿಗೆ 2029ರವರೆಗೆ ವಿಸ್ತರಣೆ ಸೌಲಭ್ಯವನ್ನೂ ನೀಡಲಾಗಿದೆ. ಪ್ರಧಾನಮಂತ್ರಿಯವರು 2026ರ ಜೂನ್ 19ರಂದು ನವದೆಹಲಿಯಲ್ಲಿ ಯೋಜನೆಯ ಸೌಲಭ್ಯಗಳನ್ನು ಬಿಡುಗಡೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ, ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲೂ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

3 hrs ago
user_A News24Kannada
A News24Kannada
Newsagent Bengaluru East, Bengaluru Urban•
3 hrs ago

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್‌ಗಾರ್ ಯೋಜನೆ (PMVBRY) ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗ ಪಡೆಯುವವರಿಗೆ ₹15,000 ವರೆಗೆ ಪ್ರೋತ್ಸಾಹ ಧನ ಲಭ್ಯವಾಗಲಿದೆ. ಈ ಯೋಜನೆಯು ಉದ್ಯೋಗದಾತರಿಗೂ ಸಾವಿರಾರು ರೂಪಾಯಿ ಪ್ರೋತ್ಸಾಹ ಧನ ಒದಗಿಸಲಿದೆ. ಈ ಯೋಜನೆ 2025ರ ಆಗಸ್ಟ್ 1ರಿಂದ ಜಾರಿಗೆ ಬಂದಿದ್ದು, 2027ರ ಜುಲೈ 31ರವರೆಗೆ ಅನ್ವಯವಾಗಲಿದೆ. ಉತ್ಪಾದನಾ ಘಟಕಗಳಿಗೆ 2029ರವರೆಗೆ ವಿಸ್ತರಣೆ ಸೌಲಭ್ಯವನ್ನೂ ನೀಡಲಾಗಿದೆ. ಪ್ರಧಾನಮಂತ್ರಿಯವರು 2026ರ ಜೂನ್ 19ರಂದು ನವದೆಹಲಿಯಲ್ಲಿ ಯೋಜನೆಯ ಸೌಲಭ್ಯಗಳನ್ನು ಬಿಡುಗಡೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ, ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲೂ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

More news from ಕರ್ನಾಟಕ and nearby areas
  • ರೀಲ್ ಕ್ರಿಯೇಟರ್ ಸೋನು ಶೆಟ್ಟಿ ಅವರು ಡಿ.ಕೆ. ಶಿವಕುಮಾರ್ ಅವರನ್ನು ಕ್ಷಮೆಯಾಚಿಸಿದ್ದಾರೆ. "ನನ್ನಿಂದಾಗಿ ತಪ್ಪಾಗಿದೆ, ಕ್ಷಮಿಸಿ" ಎಂದು ಅವರು ಹೇಳಿದ್ದಾರೆ.
    1
    ರೀಲ್ ಕ್ರಿಯೇಟರ್ ಸೋನು ಶೆಟ್ಟಿ ಅವರು ಡಿ.ಕೆ. ಶಿವಕುಮಾರ್ ಅವರನ್ನು ಕ್ಷಮೆಯಾಚಿಸಿದ್ದಾರೆ. "ನನ್ನಿಂದಾಗಿ ತಪ್ಪಾಗಿದೆ, ಕ್ಷಮಿಸಿ" ಎಂದು ಅವರು ಹೇಳಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್‌ಗಾರ್ ಯೋಜನೆ (PMVBRY) ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗ ಪಡೆಯುವವರಿಗೆ ₹15,000 ವರೆಗೆ ಪ್ರೋತ್ಸಾಹ ಧನ ಲಭ್ಯವಾಗಲಿದೆ. ಈ ಯೋಜನೆಯು ಉದ್ಯೋಗದಾತರಿಗೂ ಸಾವಿರಾರು ರೂಪಾಯಿ ಪ್ರೋತ್ಸಾಹ ಧನ ಒದಗಿಸಲಿದೆ. ಈ ಯೋಜನೆ 2025ರ ಆಗಸ್ಟ್ 1ರಿಂದ ಜಾರಿಗೆ ಬಂದಿದ್ದು, 2027ರ ಜುಲೈ 31ರವರೆಗೆ ಅನ್ವಯವಾಗಲಿದೆ. ಉತ್ಪಾದನಾ ಘಟಕಗಳಿಗೆ 2029ರವರೆಗೆ ವಿಸ್ತರಣೆ ಸೌಲಭ್ಯವನ್ನೂ ನೀಡಲಾಗಿದೆ. ಪ್ರಧಾನಮಂತ್ರಿಯವರು 2026ರ ಜೂನ್ 19ರಂದು ನವದೆಹಲಿಯಲ್ಲಿ ಯೋಜನೆಯ ಸೌಲಭ್ಯಗಳನ್ನು ಬಿಡುಗಡೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ, ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲೂ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.
    1
    ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್‌ಗಾರ್ ಯೋಜನೆ (PMVBRY) ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗ ಪಡೆಯುವವರಿಗೆ ₹15,000 ವರೆಗೆ ಪ್ರೋತ್ಸಾಹ ಧನ ಲಭ್ಯವಾಗಲಿದೆ. ಈ ಯೋಜನೆಯು ಉದ್ಯೋಗದಾತರಿಗೂ ಸಾವಿರಾರು ರೂಪಾಯಿ ಪ್ರೋತ್ಸಾಹ ಧನ ಒದಗಿಸಲಿದೆ.

ಈ ಯೋಜನೆ 2025ರ ಆಗಸ್ಟ್ 1ರಿಂದ ಜಾರಿಗೆ ಬಂದಿದ್ದು, 2027ರ ಜುಲೈ 31ರವರೆಗೆ ಅನ್ವಯವಾಗಲಿದೆ. ಉತ್ಪಾದನಾ ಘಟಕಗಳಿಗೆ 2029ರವರೆಗೆ ವಿಸ್ತರಣೆ ಸೌಲಭ್ಯವನ್ನೂ ನೀಡಲಾಗಿದೆ. ಪ್ರಧಾನಮಂತ್ರಿಯವರು 2026ರ ಜೂನ್ 19ರಂದು ನವದೆಹಲಿಯಲ್ಲಿ ಯೋಜನೆಯ ಸೌಲಭ್ಯಗಳನ್ನು ಬಿಡುಗಡೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ, ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲೂ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.
    user_A News24Kannada
    A News24Kannada
    Newsagent Bengaluru East, Bengaluru Urban•
    3 hrs ago
  • ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಲ್ಲಿ ಅಡ್ಡ ಮತದಾನದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಜೆಡಬ್ಲ್ಯೂ ಮ್ಯಾರಿಯಟ್ ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗುತ್ತಿದೆ. ಈ ಪ್ರಕ್ರಿಯೆಯ ಭಾಗವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರೆಸಾರ್ಟ್‌ಗೆ ಆಗಮಿಸಿದ್ದು, ಶಾಸಕರು ಬರುವುದಕ್ಕೂ ಮುನ್ನ ರೆಸಾರ್ಟ್ ವೀಕ್ಷಣೆ ನಡೆಸಿದ್ದಾರೆ.
    1
    ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಲ್ಲಿ ಅಡ್ಡ ಮತದಾನದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಜೆಡಬ್ಲ್ಯೂ ಮ್ಯಾರಿಯಟ್ ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗುತ್ತಿದೆ. ಈ ಪ್ರಕ್ರಿಯೆಯ ಭಾಗವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರೆಸಾರ್ಟ್‌ಗೆ ಆಗಮಿಸಿದ್ದು, ಶಾಸಕರು ಬರುವುದಕ್ಕೂ ಮುನ್ನ ರೆಸಾರ್ಟ್ ವೀಕ್ಷಣೆ ನಡೆಸಿದ್ದಾರೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    4 hrs ago
  • ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ವಿರೋಧ ಪಕ್ಷಗಳ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮಾಗಡಿ ಶಾಸಕ ಬಾಲಕೃಷ್ಣ ಅವರು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲಾಗದ ಬಿಜೆಪಿ ಮತ್ತು ಜೆಡಿಎಸ್‌ನ ಒಕ್ಕಲಿಗ ನಾಯಕರು ಅವರನ್ನು ರಾಜಕೀಯವಾಗಿ ಹಣಿಯಲು ಈ ಯೋಜನೆಯ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೂ ಭೂಸ್ವಾಧೀನ ಪ್ರಕ್ರಿಯೆ ನಡೆದಿತ್ತು ಮತ್ತು ಕೆಲವು ರೈತರು ವಿರೋಧ ವ್ಯಕ್ತಪಡಿಸಿದ್ದರು. ಆಗ ಕುಮಾರಸ್ವಾಮಿ ಮತ್ತು ಆರ್. ಅಶೋಕ್ ಅವರು ರೈತರ ಪರ ಹೋರಾಟಕ್ಕೆ ಏಕೆ ಬರಲಿಲ್ಲ ಎಂದು ಬಾಲಕೃಷ್ಣ ಪ್ರಶ್ನಿಸಿದರು. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಯೋಜನೆ ಕೈಬಿಡಲಿಲ್ಲ ಏಕೆ, ರೈತರು ಮನವಿ ಮಾಡಿದ್ದರೂ ಅಶೋಕ್ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಲಿಲ್ಲ ಏಕೆ ಎಂದೂ ಅವರು ಕೇಳಿದರು. ಈ ಯೋಜನೆಯನ್ನು ಡಿ.ಕೆ. ಶಿವಕುಮಾರ್ ಪ್ರಾರಂಭಿಸಿಲ್ಲ, ಕುಮಾರಸ್ವಾಮಿ ಅವರು ಪ್ರಾರಂಭಿಸಿದ್ದರು. ರೈತರು ರೆಡ್‌ಜೋನ್ ತೆಗೆಯಲು ಅಥವಾ ಪರಿಹಾರ ನೀಡಲು ಮನವಿ ಮಾಡಿದ ಕಾರಣ ನಮ್ಮ ಸರ್ಕಾರ ಬಂದ ಮೇಲೆ ಯೋಜನೆಗೆ ಚಾಲನೆ ನೀಡಲಾಯಿತು ಎಂದು ಬಾಲಕೃಷ್ಣ ಸ್ಪಷ್ಟಪಡಿಸಿದರು. ಬಿಜೆಪಿ ನಾಯಕರ ನಿಯೋಗ ಬಿಡದಿಗೆ ಭೇಟಿ ನೀಡಿ ಟೌನ್‌ಶಿಪ್ ವಿರುದ್ಧ ಹೋರಾಟ ಮಾಡಿರುವ ಬಗ್ಗೆ ಮಾತನಾಡಿದ ಬಾಲಕೃಷ್ಣ, ಜಗದೀಶ್ ಶೆಟ್ಟರ್ ಕೆಐಎಡಿಬಿ ಸಚಿವರಾಗಿದ್ದಾಗ 1 ಸಾವಿರ ಎಕರೆ ಭೂಸ್ವಾಧೀನಕ್ಕೆ ಮುಂದಾದಾಗ ತಾವು ವಿರೋಧ ವ್ಯಕ್ತಪಡಿಸಿದ್ದಾಗಿ ತಿಳಿಸಿದರು. ಆಗ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದಾಗ, ವಿಜಯೇಂದ್ರ ಅವರು ತಾವು ಹೋರಾಟ ಮಾಡದಂತೆ ಕೇಳಿಕೊಂಡು, ಕಾನೂನಾತ್ಮಕವಾಗಿ ಉತ್ತಮ ಬೆಲೆ ಕೊಡಿಸುವ ಭರವಸೆ ನೀಡಿ, ಏರೋನಾಟಿಕಲ್ ಕೈಗಾರಿಕೆ ತರುವ ಆಲೋಚನೆ ಇದೆ, ಸಹಕಾರ ನೀಡಿ ಎಂದಿದ್ದಾಗಿ ಬಾಲಕೃಷ್ಣ ಹೇಳಿದರು. ತಮ್ಮ ಮತ್ತು ವಿಜಯೇಂದ್ರ ಭೇಟಿಯ ಫೋಟೋಗಳನ್ನು ಸಹ ಬಹಿರಂಗಪಡಿಸಿದರು. ಬಿಜೆಪಿ ನಾಯಕರು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು. ಬಿಡದಿ ಪ್ರದೇಶದಲ್ಲಿ ಬಹುತೇಕ ಕೃಷಿ ಭೂಮಿ ಉಳಿದಿಲ್ಲ, ರಿಯಲ್ ಎಸ್ಟೇಟ್ ಮೂಲಕ ನಿವೇಶನ ಮಾಡಲಾಗಿದೆ ಎಂದು ಬಾಲಕೃಷ್ಣ ಹೇಳಿದರು. ಕುಮಾರಸ್ವಾಮಿ ಅವರು ರೆಡ್‌ಜೋನ್ ಮಾಡದಿದ್ದರೆ ಈ ಭೂಮಿ ರಿಯಲ್ ಎಸ್ಟೇಟ್ ಮಾಫಿಯಾ ಪಾಲಾಗುತ್ತಿತ್ತು. ರೆಡ್‌ಜೋನ್ ಕಾರಣದಿಂದ ಭೂಮಿ ಪರಿವರ್ತನೆ ಆಗದೆ ಕೃಷಿ ಭೂಮಿಯಾಗಿಯೇ ಉಳಿದಿವೆ ಎಂದು ಅವರು ತಿಳಿಸಿದರು. ಈ ಯೋಜನೆಗೆ ರೈತರಿಂದ ವಿರೋಧ ವ್ಯಕ್ತವಾಗುತ್ತಿದ್ದರೂ, ಬಹುಸಂಖ್ಯಾತ ರೈತರು ಭೂಮಿ ನೀಡಲು ಒಪ್ಪಿದ್ದಾರೆ. ಯೋಜನೆಯನ್ನು ಬೆಂಬಲಿಸುವವರು ಆದಷ್ಟು ಬೇಗ ಹಣ ನೀಡುವಂತೆ ಪ್ರತಿಭಟನೆಗೆ ಸಿದ್ಧರಾಗಿದ್ದಾರೆ. ಒಪ್ಪದ ರೈತರ ಮನವೊಲಿಸಿ ಯೋಜನೆ ಜಾರಿ ಮಾಡುತ್ತೇವೆ. ಈ ಭಾಗ ರೆಡ್‌ಜೋನ್ ಆಗಿರುವ ಕಾರಣ ರೈತರಿಗೆ ತಮ್ಮ ಜಮೀನು ಮಾರಲು ಕಡಿಮೆ ಬೆಲೆ ಕೇಳುತ್ತಿದ್ದು, ಜನರು ಬೇಸತ್ತು ಯೋಜನೆ ಜಾರಿಯಾಗಬೇಕೆಂದು ಬಯಸುತ್ತಿದ್ದಾರೆ. ಯೋಜನೆಯನ್ನು ಯಾವುದೇ ಕಾರಣಕ್ಕೂ ಡಿನೋಟಿಫಿಕೇಶನ್ ಮಾಡಲು ಸಾಧ್ಯವಿಲ್ಲ ಎಂದು ಬಾಲಕೃಷ್ಣ ಸ್ಪಷ್ಟಪಡಿಸಿದರು. ರೈತರಿಗೆ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚಿನ ಪರಿಹಾರ ನಿಗದಿಪಡಿಸಲಾಗಿದೆ. ರೆಡ್‌ಜೋನ್ ಕಾರಣದಿಂದ ಎಸ್.ಆರ್. ಮೌಲ್ಯ ಹೆಚ್ಚಾಗದೆ ತಟಸ್ಥವಾಗಿ ಉಳಿದು, ಪ್ರತಿ ಎಕರೆಗೆ 1.50 ಕೋಟಿ ನಿಗದಿಯಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಸುಪ್ರೀಂ ಕೋರ್ಟ್ ಆದೇಶಗಳನ್ನು ಉಲ್ಲೇಖಿಸಿ 2.50 ಕೋಟಿಗೆ ಪರಿಹಾರ ನಿಗದಿಪಡಿಸಿದ್ದು, ಇದನ್ನು ರೈತರು ಒಪ್ಪಿದ್ದರು ಎಂದು ಬಾಲಕೃಷ್ಣ ಹೇಳಿದರು. ಕಾನೂನು ಪ್ರಕಾರ ಎಸ್.ಆರ್. ಮೌಲ್ಯದ ಮೂರುಪಟ್ಟು ಪರಿಹಾರ ನೀಡಬೇಕಾಗಿದ್ದರೂ, ನಮ್ಮ ಸರ್ಕಾರ ಐದರಿಂದ ಆರು ಪಟ್ಟು ಹೆಚ್ಚಿನ ಪರಿಹಾರ ನೀಡುತ್ತಿದೆ ಎಂದು ಅವರು ತಿಳಿಸಿದರು. ಕೆಲವರು ಸರ್ಕಾರದ ಬಳಿ ಹಣವಿಲ್ಲ, ರೈತರನ್ನು ಅತಂತ್ರ ಮಾಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ, ಆದರೆ ನಾವು ಹಣಕಾಸು ಮೂಲವನ್ನು ತಿಳಿಸಿದ್ದೇವೆ ಎಂದು ಹೇಳಿದರು. ಜಮೀನುರಹಿತ ರೈತರಿಗೂ ಪರಿಹಾರವಾಗಿ ನಿವೇಶನ ನೀಡುವ ಭರವಸೆ ನೀಡಲಾಗಿದೆ. ಈ ಯೋಜನೆಗೆ ದೇವನಹಳ್ಳಿ ಮತ್ತು ಇತರೆ ಭಾಗಗಳಿಗಿಂತ ಹೆಚ್ಚಿನ ಪರಿಹಾರ ನೀಡಲಾಗಿದೆ ಎಂದು ಬಾಲಕೃಷ್ಣ ಪ್ರತಿಪಾದಿಸಿದರು. ಯೋಜನೆ ರದ್ದುಪಡಿಸುವುದಾಗಿ ಬಿಜೆಪಿ ನಾಯಕರು ಹೇಳಿಕೆ ನೀಡಿರುವುದಕ್ಕೆ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ರದ್ದುಪಡಿಸಬಹುದಿತ್ತಲ್ಲವೇ, ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದ್ದಾರೆ ಎಂದು ಬಾಲಕೃಷ್ಣ ಪ್ರಶ್ನಿಸಿದರು. ಟೌನ್‌ಶಿಪ್ ಮಾಡಲು ರೈತರ ಜಾಗ ಪಡೆಯುವುದು ಅನಿವಾರ್ಯ, ರೈತರ ಜಾಗವಿಲ್ಲದೆ ಟೌನ್‌ಶಿಪ್ ಹೇಗೆ ಸಾಧ್ಯ ಎಂದೂ ಅವರು ವಿರೋಧ ಪಕ್ಷದವರನ್ನು ಪ್ರಶ್ನಿಸಿದರು. ಕುಮಾರಸ್ವಾಮಿ ಅವರು ತಮ್ಮ ಚಾಳಿ ಬಿಟ್ಟಿಲ್ಲ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಬಾಲಕೃಷ್ಣ, ಶಿವಕುಮಾರ್ ಸಿಎಂ ಆದ ಬಳಿಕವೇ ಏಕೆ ಇಷ್ಟು ಹೋರಾಟ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ ಅವರೇ ಈ ಭಾಗದ ಜನರಿಗೆ 40% ಅಭಿವೃದ್ಧಿಪಡಿಸಿದ ಭೂಮಿಯನ್ನು ಪರಿಹಾರವಾಗಿ ನೀಡುವುದಾಗಿ ಭರವಸೆ ನೀಡಿದ್ದ ವಿಡಿಯೋವನ್ನು ತಾವು ತೋರಿಸುವುದಾಗಿ ಹೇಳಿದರು. ರೈತರಿಗೆ ಪರಿಹಾರದ ಮೊತ್ತ ಕಡಿಮೆಯಾದರೆ, 50% ಅಭಿವೃದ್ಧಿಪಡಿಸಿದ ಭೂಮಿಯನ್ನೇ ನೀಡುವುದಾಗಿ, ಆಗ ಇಂದಿನ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ಹಣ ಸಿಗುತ್ತದೆ ಎಂದು ತಿಳಿಸಿದರು. ಸಣ್ಣ ರೈತರಿಗೆ ಅನುಕೂಲವಾಗಲೆಂದು ಹಣದ ಪರಿಹಾರ ಹೆಚ್ಚಿಸಲಾಗಿದೆ. ಸುಮಾರು 80% ಜನರು ಹಣ ಬೇಡ, ಭೂಮಿ ಹಂಚಿಕೆ ಮಾಡಿ ಎಂದು ಹೇಳುತ್ತಿದ್ದಾರೆ. ಇದು ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ಪ್ರಯತ್ನವೇ ಹೊರತು, ರೈತರ ಪರವಾಗಿ ಯಾರೂ ಇಲ್ಲ ಎಂದು ಬಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು. ವಿಶೇಷವಾಗಿ ತಮ್ಮ ಸಮುದಾಯದ ಬೇರೆ ಪಕ್ಷಗಳ ನಾಯಕರಿಗೆ ಶಿವಕುಮಾರ್ ಮುಖ್ಯಮಂತ್ರಿಯಾಗಿರುವುದು ಸಹಿಸಲು ಆಗುತ್ತಿಲ್ಲ ಎಂದು ಆರೋಪಿಸಿದರು. ಸಿದ್ದರಾಮಯ್ಯ ದೊಡ್ಡ ಮನಸ್ಸು ಮಾಡಿ ಅಧಿಕಾರ ಬಿಟ್ಟುಕೊಟ್ಟಿರುವುದು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದರು.
    1
    ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ವಿರೋಧ ಪಕ್ಷಗಳ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮಾಗಡಿ ಶಾಸಕ ಬಾಲಕೃಷ್ಣ ಅವರು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲಾಗದ ಬಿಜೆಪಿ ಮತ್ತು ಜೆಡಿಎಸ್‌ನ ಒಕ್ಕಲಿಗ ನಾಯಕರು ಅವರನ್ನು ರಾಜಕೀಯವಾಗಿ ಹಣಿಯಲು ಈ ಯೋಜನೆಯ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೂ ಭೂಸ್ವಾಧೀನ ಪ್ರಕ್ರಿಯೆ ನಡೆದಿತ್ತು ಮತ್ತು ಕೆಲವು ರೈತರು ವಿರೋಧ ವ್ಯಕ್ತಪಡಿಸಿದ್ದರು. ಆಗ ಕುಮಾರಸ್ವಾಮಿ ಮತ್ತು ಆರ್. ಅಶೋಕ್ ಅವರು ರೈತರ ಪರ ಹೋರಾಟಕ್ಕೆ ಏಕೆ ಬರಲಿಲ್ಲ ಎಂದು ಬಾಲಕೃಷ್ಣ ಪ್ರಶ್ನಿಸಿದರು. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಯೋಜನೆ ಕೈಬಿಡಲಿಲ್ಲ ಏಕೆ, ರೈತರು ಮನವಿ ಮಾಡಿದ್ದರೂ ಅಶೋಕ್ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಲಿಲ್ಲ ಏಕೆ ಎಂದೂ ಅವರು ಕೇಳಿದರು. ಈ ಯೋಜನೆಯನ್ನು ಡಿ.ಕೆ. ಶಿವಕುಮಾರ್ ಪ್ರಾರಂಭಿಸಿಲ್ಲ, ಕುಮಾರಸ್ವಾಮಿ ಅವರು ಪ್ರಾರಂಭಿಸಿದ್ದರು. ರೈತರು ರೆಡ್‌ಜೋನ್ ತೆಗೆಯಲು ಅಥವಾ ಪರಿಹಾರ ನೀಡಲು ಮನವಿ ಮಾಡಿದ ಕಾರಣ ನಮ್ಮ ಸರ್ಕಾರ ಬಂದ ಮೇಲೆ ಯೋಜನೆಗೆ ಚಾಲನೆ ನೀಡಲಾಯಿತು ಎಂದು ಬಾಲಕೃಷ್ಣ ಸ್ಪಷ್ಟಪಡಿಸಿದರು.

ಬಿಜೆಪಿ ನಾಯಕರ ನಿಯೋಗ ಬಿಡದಿಗೆ ಭೇಟಿ ನೀಡಿ ಟೌನ್‌ಶಿಪ್ ವಿರುದ್ಧ ಹೋರಾಟ ಮಾಡಿರುವ ಬಗ್ಗೆ ಮಾತನಾಡಿದ ಬಾಲಕೃಷ್ಣ, ಜಗದೀಶ್ ಶೆಟ್ಟರ್ ಕೆಐಎಡಿಬಿ ಸಚಿವರಾಗಿದ್ದಾಗ 1 ಸಾವಿರ ಎಕರೆ ಭೂಸ್ವಾಧೀನಕ್ಕೆ ಮುಂದಾದಾಗ ತಾವು ವಿರೋಧ ವ್ಯಕ್ತಪಡಿಸಿದ್ದಾಗಿ ತಿಳಿಸಿದರು. ಆಗ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದಾಗ, ವಿಜಯೇಂದ್ರ ಅವರು ತಾವು ಹೋರಾಟ ಮಾಡದಂತೆ ಕೇಳಿಕೊಂಡು, ಕಾನೂನಾತ್ಮಕವಾಗಿ ಉತ್ತಮ ಬೆಲೆ ಕೊಡಿಸುವ ಭರವಸೆ ನೀಡಿ, ಏರೋನಾಟಿಕಲ್ ಕೈಗಾರಿಕೆ ತರುವ ಆಲೋಚನೆ ಇದೆ, ಸಹಕಾರ ನೀಡಿ ಎಂದಿದ್ದಾಗಿ ಬಾಲಕೃಷ್ಣ ಹೇಳಿದರು. ತಮ್ಮ ಮತ್ತು ವಿಜಯೇಂದ್ರ ಭೇಟಿಯ ಫೋಟೋಗಳನ್ನು ಸಹ ಬಹಿರಂಗಪಡಿಸಿದರು. ಬಿಜೆಪಿ ನಾಯಕರು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಬಿಡದಿ ಪ್ರದೇಶದಲ್ಲಿ ಬಹುತೇಕ ಕೃಷಿ ಭೂಮಿ ಉಳಿದಿಲ್ಲ, ರಿಯಲ್ ಎಸ್ಟೇಟ್ ಮೂಲಕ ನಿವೇಶನ ಮಾಡಲಾಗಿದೆ ಎಂದು ಬಾಲಕೃಷ್ಣ ಹೇಳಿದರು. ಕುಮಾರಸ್ವಾಮಿ ಅವರು ರೆಡ್‌ಜೋನ್ ಮಾಡದಿದ್ದರೆ ಈ ಭೂಮಿ ರಿಯಲ್ ಎಸ್ಟೇಟ್ ಮಾಫಿಯಾ ಪಾಲಾಗುತ್ತಿತ್ತು. ರೆಡ್‌ಜೋನ್ ಕಾರಣದಿಂದ ಭೂಮಿ ಪರಿವರ್ತನೆ ಆಗದೆ ಕೃಷಿ ಭೂಮಿಯಾಗಿಯೇ ಉಳಿದಿವೆ ಎಂದು ಅವರು ತಿಳಿಸಿದರು. ಈ ಯೋಜನೆಗೆ ರೈತರಿಂದ ವಿರೋಧ ವ್ಯಕ್ತವಾಗುತ್ತಿದ್ದರೂ, ಬಹುಸಂಖ್ಯಾತ ರೈತರು ಭೂಮಿ ನೀಡಲು ಒಪ್ಪಿದ್ದಾರೆ. ಯೋಜನೆಯನ್ನು ಬೆಂಬಲಿಸುವವರು ಆದಷ್ಟು ಬೇಗ ಹಣ ನೀಡುವಂತೆ ಪ್ರತಿಭಟನೆಗೆ ಸಿದ್ಧರಾಗಿದ್ದಾರೆ. ಒಪ್ಪದ ರೈತರ ಮನವೊಲಿಸಿ ಯೋಜನೆ ಜಾರಿ ಮಾಡುತ್ತೇವೆ. ಈ ಭಾಗ ರೆಡ್‌ಜೋನ್ ಆಗಿರುವ ಕಾರಣ ರೈತರಿಗೆ ತಮ್ಮ ಜಮೀನು ಮಾರಲು ಕಡಿಮೆ ಬೆಲೆ ಕೇಳುತ್ತಿದ್ದು, ಜನರು ಬೇಸತ್ತು ಯೋಜನೆ ಜಾರಿಯಾಗಬೇಕೆಂದು ಬಯಸುತ್ತಿದ್ದಾರೆ. ಯೋಜನೆಯನ್ನು ಯಾವುದೇ ಕಾರಣಕ್ಕೂ ಡಿನೋಟಿಫಿಕೇಶನ್ ಮಾಡಲು ಸಾಧ್ಯವಿಲ್ಲ ಎಂದು ಬಾಲಕೃಷ್ಣ ಸ್ಪಷ್ಟಪಡಿಸಿದರು.

ರೈತರಿಗೆ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚಿನ ಪರಿಹಾರ ನಿಗದಿಪಡಿಸಲಾಗಿದೆ. ರೆಡ್‌ಜೋನ್ ಕಾರಣದಿಂದ ಎಸ್.ಆರ್. ಮೌಲ್ಯ ಹೆಚ್ಚಾಗದೆ ತಟಸ್ಥವಾಗಿ ಉಳಿದು, ಪ್ರತಿ ಎಕರೆಗೆ 1.50 ಕೋಟಿ ನಿಗದಿಯಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಸುಪ್ರೀಂ ಕೋರ್ಟ್ ಆದೇಶಗಳನ್ನು ಉಲ್ಲೇಖಿಸಿ 2.50 ಕೋಟಿಗೆ ಪರಿಹಾರ ನಿಗದಿಪಡಿಸಿದ್ದು, ಇದನ್ನು ರೈತರು ಒಪ್ಪಿದ್ದರು ಎಂದು ಬಾಲಕೃಷ್ಣ ಹೇಳಿದರು. ಕಾನೂನು ಪ್ರಕಾರ ಎಸ್.ಆರ್. ಮೌಲ್ಯದ ಮೂರುಪಟ್ಟು ಪರಿಹಾರ ನೀಡಬೇಕಾಗಿದ್ದರೂ, ನಮ್ಮ ಸರ್ಕಾರ ಐದರಿಂದ ಆರು ಪಟ್ಟು ಹೆಚ್ಚಿನ ಪರಿಹಾರ ನೀಡುತ್ತಿದೆ ಎಂದು ಅವರು ತಿಳಿಸಿದರು. ಕೆಲವರು ಸರ್ಕಾರದ ಬಳಿ ಹಣವಿಲ್ಲ, ರೈತರನ್ನು ಅತಂತ್ರ ಮಾಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ, ಆದರೆ ನಾವು ಹಣಕಾಸು ಮೂಲವನ್ನು ತಿಳಿಸಿದ್ದೇವೆ ಎಂದು ಹೇಳಿದರು. ಜಮೀನುರಹಿತ ರೈತರಿಗೂ ಪರಿಹಾರವಾಗಿ ನಿವೇಶನ ನೀಡುವ ಭರವಸೆ ನೀಡಲಾಗಿದೆ. ಈ ಯೋಜನೆಗೆ ದೇವನಹಳ್ಳಿ ಮತ್ತು ಇತರೆ ಭಾಗಗಳಿಗಿಂತ ಹೆಚ್ಚಿನ ಪರಿಹಾರ ನೀಡಲಾಗಿದೆ ಎಂದು ಬಾಲಕೃಷ್ಣ ಪ್ರತಿಪಾದಿಸಿದರು.

ಯೋಜನೆ ರದ್ದುಪಡಿಸುವುದಾಗಿ ಬಿಜೆಪಿ ನಾಯಕರು ಹೇಳಿಕೆ ನೀಡಿರುವುದಕ್ಕೆ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ರದ್ದುಪಡಿಸಬಹುದಿತ್ತಲ್ಲವೇ, ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದ್ದಾರೆ ಎಂದು ಬಾಲಕೃಷ್ಣ ಪ್ರಶ್ನಿಸಿದರು. ಟೌನ್‌ಶಿಪ್ ಮಾಡಲು ರೈತರ ಜಾಗ ಪಡೆಯುವುದು ಅನಿವಾರ್ಯ, ರೈತರ ಜಾಗವಿಲ್ಲದೆ ಟೌನ್‌ಶಿಪ್ ಹೇಗೆ ಸಾಧ್ಯ ಎಂದೂ ಅವರು ವಿರೋಧ ಪಕ್ಷದವರನ್ನು ಪ್ರಶ್ನಿಸಿದರು.

ಕುಮಾರಸ್ವಾಮಿ ಅವರು ತಮ್ಮ ಚಾಳಿ ಬಿಟ್ಟಿಲ್ಲ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಬಾಲಕೃಷ್ಣ, ಶಿವಕುಮಾರ್ ಸಿಎಂ ಆದ ಬಳಿಕವೇ ಏಕೆ ಇಷ್ಟು ಹೋರಾಟ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ ಅವರೇ ಈ ಭಾಗದ ಜನರಿಗೆ 40% ಅಭಿವೃದ್ಧಿಪಡಿಸಿದ ಭೂಮಿಯನ್ನು ಪರಿಹಾರವಾಗಿ ನೀಡುವುದಾಗಿ ಭರವಸೆ ನೀಡಿದ್ದ ವಿಡಿಯೋವನ್ನು ತಾವು ತೋರಿಸುವುದಾಗಿ ಹೇಳಿದರು. ರೈತರಿಗೆ ಪರಿಹಾರದ ಮೊತ್ತ ಕಡಿಮೆಯಾದರೆ, 50% ಅಭಿವೃದ್ಧಿಪಡಿಸಿದ ಭೂಮಿಯನ್ನೇ ನೀಡುವುದಾಗಿ, ಆಗ ಇಂದಿನ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ಹಣ ಸಿಗುತ್ತದೆ ಎಂದು ತಿಳಿಸಿದರು. ಸಣ್ಣ ರೈತರಿಗೆ ಅನುಕೂಲವಾಗಲೆಂದು ಹಣದ ಪರಿಹಾರ ಹೆಚ್ಚಿಸಲಾಗಿದೆ. ಸುಮಾರು 80% ಜನರು ಹಣ ಬೇಡ, ಭೂಮಿ ಹಂಚಿಕೆ ಮಾಡಿ ಎಂದು ಹೇಳುತ್ತಿದ್ದಾರೆ. ಇದು ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ಪ್ರಯತ್ನವೇ ಹೊರತು, ರೈತರ ಪರವಾಗಿ ಯಾರೂ ಇಲ್ಲ ಎಂದು ಬಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು. ವಿಶೇಷವಾಗಿ ತಮ್ಮ ಸಮುದಾಯದ ಬೇರೆ ಪಕ್ಷಗಳ ನಾಯಕರಿಗೆ ಶಿವಕುಮಾರ್ ಮುಖ್ಯಮಂತ್ರಿಯಾಗಿರುವುದು ಸಹಿಸಲು ಆಗುತ್ತಿಲ್ಲ ಎಂದು ಆರೋಪಿಸಿದರು. ಸಿದ್ದರಾಮಯ್ಯ ದೊಡ್ಡ ಮನಸ್ಸು ಮಾಡಿ ಅಧಿಕಾರ ಬಿಟ್ಟುಕೊಟ್ಟಿರುವುದು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದರು.
    user_ಶಿವು.ಎಸ್ ದೊಡ್ಡಆಲಹಳ್ಳಿ
    ಶಿವು.ಎಸ್ ದೊಡ್ಡಆಲಹಳ್ಳಿ
    Local News Reporter Ramanagara, Karnataka•
    1 hr ago
  • ಕೋಲಾರದಲ್ಲಿ ಶ್ರೇಯ ಆಸ್ಪತ್ರೆಯ ವೈದ್ಯರಾದ ಕೃಷ್ಣಯಶೆಟ್ಟಿ ಅವರ ನಿರ್ಲಕ್ಷ್ಯ ಮತ್ತು ಆಸ್ಪತ್ರೆಯ ಆಡಳಿತದ ವಿರುದ್ಧ ಧರಣಿ ನಡೆಸಲಾಗಿದೆ. ಈ ಧರಣಿಯು ಕೋಲಾರದಲ್ಲಿ ನಡೆದಿದೆ.
    1
    ಕೋಲಾರದಲ್ಲಿ ಶ್ರೇಯ ಆಸ್ಪತ್ರೆಯ ವೈದ್ಯರಾದ ಕೃಷ್ಣಯಶೆಟ್ಟಿ ಅವರ ನಿರ್ಲಕ್ಷ್ಯ ಮತ್ತು ಆಸ್ಪತ್ರೆಯ ಆಡಳಿತದ ವಿರುದ್ಧ ಧರಣಿ ನಡೆಸಲಾಗಿದೆ. ಈ ಧರಣಿಯು ಕೋಲಾರದಲ್ಲಿ ನಡೆದಿದೆ.
    user_True news kolar Ayub Pasha
    True news kolar Ayub Pasha
    Advertising agency ಕೋಲಾರ, ಕೋಲಾರ, ಕರ್ನಾಟಕ•
    1 hr ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    15 hrs ago
  • ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಿರೇಬಿದನೂರಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸರ್ಕಾರಿ ಕಟ್ಟಡ ಕಾಮಗಾರಿ ಸ್ಥಳದಲ್ಲಿ ನಡೆದ ದುರ್ಘಟನೆಯಲ್ಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಬಂದಿರುವ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅದೇ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ರಾಜಪಾಲ್ ಮತ್ತು ಶ್ವೇತಾ ದಂಪತಿಯ ಮಗಳು ಪಲ್ಲವಿ (1.5) ದುರಂತವಾಗಿ ಸಾವನ್ನಪ್ಪಿದ್ದಾಳೆ. ಕಾಮಗಾರಿ ಸ್ಥಳದಲ್ಲಿ ಲಿಫ್ಟ್ ನಿರ್ಮಾಣಕ್ಕಾಗಿ ಅಗಲವಾದ ಗುಂಡಿ ತೋಡಲಾಗಿದ್ದು, ಇತ್ತೀಚಿನ ಮಳೆಯಿಂದಾಗಿ ಅದರಲ್ಲಿ ಸಾಕಷ್ಟು ನೀರು ತುಂಬಿಕೊಂಡಿತ್ತು. ಆಟವಾಡುತ್ತಿದ್ದ ವೇಳೆ ಮಗು ಪಲ್ಲವಿ ನೀರು ತುಂಬಿದ್ದ ಗುಂಡಿಗೆ ಜಾರಿ ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಅಪಾಯಕಾರಿ ಗುಂಡಿಯ ಸುತ್ತ ಯಾವುದೇ ಸುರಕ್ಷತಾ ಬೇಲಿ, ಎಚ್ಚರಿಕೆ ಫಲಕ ಅಥವಾ ರಕ್ಷಣಾ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಘಟನೆ ನಂತರ, ದೂರದ ಊರಿನಿಂದ ಜೀವನೋಪಾಯಕ್ಕಾಗಿ ಗೌರಿಬಿದನೂರಿಗೆ ಬಂದಿದ್ದ ಕುಟುಂಬಕ್ಕೆ ಸ್ಥಳೀಯವಾಗಿ ಯಾವುದೇ ಸಂಬಂಧಿಕರು ಅಥವಾ ಬೆಂಬಲಿಗರು ಇಲ್ಲದ ಕಾರಣ, ಅವರು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿ ಮುಂಭಾಗದಲ್ಲೇ ಕಣ್ಣೀರು ಹಾಕುತ್ತಿರುವ ದೃಶ್ಯ ಕಂಡುಬಂದಿತು. ಇದನ್ನು ಕಂಡ ಸಾರ್ವಜನಿಕರು ಮತ್ತು ಸ್ಥಳೀಯರು ಕುಟುಂಬದ ನೋವಿಗೆ ಸ್ಪಂದಿಸಿದರು. ಕಾಮಗಾರಿ ಸ್ಥಳದಲ್ಲಿ ಕನಿಷ್ಠ ಸುರಕ್ಷತಾ ಕ್ರಮಗಳನ್ನು ಅನುಸರಿಸಿದ್ದರೆ ಅಮಾಯಕ ಮಗುವಿನ ಜೀವ ಉಳಿಯಬಹುದಾಗಿತ್ತು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರನ ಬೇಜವಾಬ್ದಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಮೃತ ಮಗುವಿನ ಕುಟುಂಬಕ್ಕೆ ಸರ್ಕಾರದಿಂದ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸದ ಗುತ್ತಿಗೆದಾರನ ವಿರುದ್ಧ ಹಾಗೂ ಮೇಲ್ವಿಚಾರಣೆಯ ಜವಾಬ್ದಾರಿ ಹೊಂದಿದ್ದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ದುರ್ಘಟನೆ ನಿರ್ಮಾಣ ಕಾಮಗಾರಿಗಳಲ್ಲಿ ಸುರಕ್ಷತಾ ಕ್ರಮಗಳ ಅಗತ್ಯತೆಯನ್ನು ಮತ್ತೊಮ್ಮೆ ನೆನಪಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.
    4
    ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಿರೇಬಿದನೂರಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸರ್ಕಾರಿ ಕಟ್ಟಡ ಕಾಮಗಾರಿ ಸ್ಥಳದಲ್ಲಿ ನಡೆದ ದುರ್ಘಟನೆಯಲ್ಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಬಂದಿರುವ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅದೇ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ರಾಜಪಾಲ್ ಮತ್ತು ಶ್ವೇತಾ ದಂಪತಿಯ ಮಗಳು ಪಲ್ಲವಿ (1.5) ದುರಂತವಾಗಿ ಸಾವನ್ನಪ್ಪಿದ್ದಾಳೆ. ಕಾಮಗಾರಿ ಸ್ಥಳದಲ್ಲಿ ಲಿಫ್ಟ್ ನಿರ್ಮಾಣಕ್ಕಾಗಿ ಅಗಲವಾದ ಗುಂಡಿ ತೋಡಲಾಗಿದ್ದು, ಇತ್ತೀಚಿನ ಮಳೆಯಿಂದಾಗಿ ಅದರಲ್ಲಿ ಸಾಕಷ್ಟು ನೀರು ತುಂಬಿಕೊಂಡಿತ್ತು. ಆಟವಾಡುತ್ತಿದ್ದ ವೇಳೆ ಮಗು ಪಲ್ಲವಿ ನೀರು ತುಂಬಿದ್ದ ಗುಂಡಿಗೆ ಜಾರಿ ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಅಪಾಯಕಾರಿ ಗುಂಡಿಯ ಸುತ್ತ ಯಾವುದೇ ಸುರಕ್ಷತಾ ಬೇಲಿ, ಎಚ್ಚರಿಕೆ ಫಲಕ ಅಥವಾ ರಕ್ಷಣಾ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಘಟನೆ ನಂತರ, ದೂರದ ಊರಿನಿಂದ ಜೀವನೋಪಾಯಕ್ಕಾಗಿ ಗೌರಿಬಿದನೂರಿಗೆ ಬಂದಿದ್ದ ಕುಟುಂಬಕ್ಕೆ ಸ್ಥಳೀಯವಾಗಿ ಯಾವುದೇ ಸಂಬಂಧಿಕರು ಅಥವಾ ಬೆಂಬಲಿಗರು ಇಲ್ಲದ ಕಾರಣ, ಅವರು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿ ಮುಂಭಾಗದಲ್ಲೇ ಕಣ್ಣೀರು ಹಾಕುತ್ತಿರುವ ದೃಶ್ಯ ಕಂಡುಬಂದಿತು. ಇದನ್ನು ಕಂಡ ಸಾರ್ವಜನಿಕರು ಮತ್ತು ಸ್ಥಳೀಯರು ಕುಟುಂಬದ ನೋವಿಗೆ ಸ್ಪಂದಿಸಿದರು. ಕಾಮಗಾರಿ ಸ್ಥಳದಲ್ಲಿ ಕನಿಷ್ಠ ಸುರಕ್ಷತಾ ಕ್ರಮಗಳನ್ನು ಅನುಸರಿಸಿದ್ದರೆ ಅಮಾಯಕ ಮಗುವಿನ ಜೀವ ಉಳಿಯಬಹುದಾಗಿತ್ತು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರನ ಬೇಜವಾಬ್ದಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

ಮೃತ ಮಗುವಿನ ಕುಟುಂಬಕ್ಕೆ ಸರ್ಕಾರದಿಂದ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸದ ಗುತ್ತಿಗೆದಾರನ ವಿರುದ್ಧ ಹಾಗೂ ಮೇಲ್ವಿಚಾರಣೆಯ ಜವಾಬ್ದಾರಿ ಹೊಂದಿದ್ದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ದುರ್ಘಟನೆ ನಿರ್ಮಾಣ ಕಾಮಗಾರಿಗಳಲ್ಲಿ ಸುರಕ್ಷತಾ ಕ್ರಮಗಳ ಅಗತ್ಯತೆಯನ್ನು ಮತ್ತೊಮ್ಮೆ ನೆನಪಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.
    user_KRUTHI NEWS KANNADA
    KRUTHI NEWS KANNADA
    News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    4 hrs ago
  • ಪಾಂಡವಪುರದಲ್ಲಿ 2 ವರ್ಷದ ಮಗು ನೀರಿನ ಸಂಪಿಗೆ ಬಿದ್ದು ಸಾವನ್ನಪ್ಪಿದೆ. ಈ ಘಟನೆಯಿಂದಾಗಿ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.
    1
    ಪಾಂಡವಪುರದಲ್ಲಿ 2 ವರ್ಷದ ಮಗು ನೀರಿನ ಸಂಪಿಗೆ ಬಿದ್ದು ಸಾವನ್ನಪ್ಪಿದೆ. ಈ ಘಟನೆಯಿಂದಾಗಿ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.