Shuru
Apke Nagar Ki App…
ಬಸ್ನಲ್ಲಿ ನಡೆದಿದ್ದ ಚಿನ್ನ ಕಳ್ಳತನ ಕೇಸ್: ಆರೋಪಿ ಅರೆಸ್ಟ್; ಆರೋಪಿ ಅಂದರ್ ಆಗಿದ್ದು ಹೇಗೆ? ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುವಿನ ಹೋಟೇಲ್ ವೊಂದರ ಬಳಿ ನಿಲ್ಲಿಸಿದ್ದ ಬಸ್ ನಿಂದ ಚಿನ್ನಾಭರಣ ಕಳವು ನಡೆಸಿದ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ . ಮಧ್ಯಪ್ರದೇಶದ ನಿವಾಸಿ ಸಮದ್ ಖಾನ್ (37) ಬಂಧಿತ ಆರೋಪಿ. 2025 ರ ನವೆಂಬರ್ 19 ರಂದು ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುವಿನಲ್ಲಿರುವ ಹೋಟೆಲ್ ಬಳಿ ನಿಲ್ಲಿಸಿದ್ದ ಖಾಸಗಿ ಬಸ್ ನಲ್ಲಿ ಬ್ಯಾಗಿನೊಳಗೆ ಇರಿಸಲಾಗಿದ್ದ ಬ್ರಹ್ಮಾವರ ಮೂಲದ ದಂಪತಿಗಳು ರೂಪಾಯಿ 20 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ ಕಳವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಚಿನ್ನಾಭರಣಗಳನ್ನು ವಶಪಡಿಸಿಕೊಂಡು, ಆತನನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ
Shamsheer Budoli
ಬಸ್ನಲ್ಲಿ ನಡೆದಿದ್ದ ಚಿನ್ನ ಕಳ್ಳತನ ಕೇಸ್: ಆರೋಪಿ ಅರೆಸ್ಟ್; ಆರೋಪಿ ಅಂದರ್ ಆಗಿದ್ದು ಹೇಗೆ? ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುವಿನ ಹೋಟೇಲ್ ವೊಂದರ ಬಳಿ ನಿಲ್ಲಿಸಿದ್ದ ಬಸ್ ನಿಂದ ಚಿನ್ನಾಭರಣ ಕಳವು ನಡೆಸಿದ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ . ಮಧ್ಯಪ್ರದೇಶದ ನಿವಾಸಿ ಸಮದ್ ಖಾನ್ (37) ಬಂಧಿತ ಆರೋಪಿ. 2025 ರ ನವೆಂಬರ್ 19 ರಂದು ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುವಿನಲ್ಲಿರುವ ಹೋಟೆಲ್ ಬಳಿ ನಿಲ್ಲಿಸಿದ್ದ ಖಾಸಗಿ ಬಸ್ ನಲ್ಲಿ ಬ್ಯಾಗಿನೊಳಗೆ ಇರಿಸಲಾಗಿದ್ದ ಬ್ರಹ್ಮಾವರ ಮೂಲದ ದಂಪತಿಗಳು ರೂಪಾಯಿ 20 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ ಕಳವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಚಿನ್ನಾಭರಣಗಳನ್ನು ವಶಪಡಿಸಿಕೊಂಡು, ಆತನನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ
More news from ಕರ್ನಾಟಕ and nearby areas
- ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ನೇತೃತ್ವದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ರಂಝಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವು ಸಂತ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಕ್ಯಾಸ್ಟಲಿನೋ, ಬಿಎಂ ರೋಹಿಣಿ, ಮಾಜಿ ಮೇಯರ್ ಕೆ. ಅಶ್ರಫ್ ಮುಂತಾದವರು ಉಪಸ್ಥಿತರಿದ್ದರು. ಇದೇ ವೇಳೆ ಸರ್ವಧರ್ಮೀಯರು ಸೇರಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.1
- *ಭಾರತ ನಲ್ಲಿ ವೈರಲ್*1
- ಇಸ್ರೇಲ್–ಇರಾನ್ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದ್ದು, ಮೈಸೂರಿನ ಹೋಟೆಲ್ ಉದ್ಯಮಕ್ಕೆ ಆತಂಕ ಉಂಟಾಗಿದೆ. ಈಗಾಗಲೇ ಕಳೆದ ಮೂರು ವಾರಗಳಲ್ಲಿ ಅನಿಲದ ಬೆಲೆ ಏರಿಕೆಯಾಗಿದೆ ಎಂದು ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಸುಮಾರು 1500 ಹೋಟೆಲ್ಗಳು ಕಾರ್ಯನಿರ್ವಹಿಸುತ್ತಿದ್ದು, 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಈ ಉದ್ಯಮದ ಮೇಲೆ ಅವಲಂಬಿತರಿದ್ದಾರೆ. ಅನಿಲ ಪೂರೈಕೆ ಸಮಸ್ಯೆ ಮುಂದುವರಿದರೆ ಹಲವಾರು ಹೋಟೆಲ್ಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು ಎಂದು ಸಂಘ ಮನವಿ ಮಾಡಿದೆ.1
- ಮೈಸೂರು: ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಶಿಕ್ಷಕಿಯವರಾದ ಶ್ರೀಮತಿ ಎ.ಸಿ. ನೇತ್ರಾವತಿ ಹಾಗೂ ಶ್ರೀ ಎಂ.ಡಿ. ಗುರುಸ್ವಾಮಿ ದಂಪತಿಗಳ ಪುತ್ರರಾದ ಶ್ರೀ ಎಂ.ಜಿ. ನಾಗದೇವ ಅವರು 2026ನೇ ಸಾಲಿನ ಜೆಇಇ ಪರೀಕ್ಷೆಯಲ್ಲಿ ಶೇ. 99.97 ಅಂಕಗಳನ್ನು ಪಡೆದು ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅಪಾರ ಸಂತಸಕ್ಕೆ ಕಾರಣವಾಗಿದೆ. ಈ ಸಾಧನೆಯ ಹಿನ್ನೆಲೆ ಅವರ ಕುಟುಂಬ ವರ್ಗದವರು ವಿದ್ಯಾರ್ಥಿಗಳೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಉದ್ದೇಶದಿಂದ ವಿಶೇಷ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದರು. ಸುತ್ತೂರು ಜೆಎಸ್ಎಸ್ ವಸತಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ವಿಶೇಷ ಪ್ರಸಾದ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗದೇವ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಗ್ರಾಮೀಣ ಹಿನ್ನೆಲೆಯಲ್ಲೂ ಉತ್ತಮ ಮಾರ್ಗದರ್ಶನ ಮತ್ತು ಪರಿಶ್ರಮ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ನಾಗದೇವ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು. ಬಾಲ್ಯದಿಂದಲೇ ಅಧ್ಯಯನದಲ್ಲಿ ಆಸಕ್ತಿ ತೋರಿದ ಅವರು ನಿಯಮಿತ ಅಧ್ಯಯನ, ಪೋಷಕರ ಮಾರ್ಗದರ್ಶನ ಹಾಗೂ ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಉತ್ಸಾಹ ಮತ್ತು ಪ್ರೇರಣೆ ಮೂಡಿಸುವ ಉದ್ದೇಶದಿಂದ ಕುಟುಂಬ ವರ್ಗದವರು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿ ನಾಗದೇವ ಅವರ ಸಾಧನೆ ನಮಗೆಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಊಟವನ್ನು ವಿತರಿಸಿದರು. ನಾಗದೇವ ಅವರ ಸಾಧನೆಗೆ ಶಾಲೆಯ ಎಲ್ಲರೂ ಅಭಿನಂದನೆ ಸಲ್ಲಿಸಿ ಅವರ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.1
- ಚಳ್ಳಕೆರೆ, ಮಾ.10 : ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ಕೈಗೊಂಡಿದ್ದ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು. ತಾಲ್ಲೂಕಿನ ಗರಣಿ ಕ್ರಾಸ್ ಬಳಿ ಮಂಗಳವಾರ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆ ನಡೆಸಿದ ರೈತರು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಕೂದಲೆಳೆ ಅಂತರದಲ್ಲಿಯೇ ರೈತಸಂಘದ ಕಾರ್ಯಕರ್ತರು ಮಾ.2ರಂದು ಉಪವಾಸ ಆರಂಭಿಸಿ ಐದು ದಿನಗಳ ಕಾಲ ಮುಂದುವರಿಸಿದ್ದರೂ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ, ಮನವೊಲಿಸುವ ಸಣ್ಣ ಪ್ರಯತ್ನವನ್ನೇ ಮಾಡಲಿಲ್ಲ ಎಂದು ದೂರಿದರು. ಪ್ರತಿದಿನ ವಿವಿಧ ಸಂಘಟನೆಗಳು ಆಗಮಿಸಿ ಬೆಂಬಲ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಬೇಕೆಂದು ಆಗ್ರಹಿಸಿದರು ಸರ್ವಾಧಿಕಾರಿ ರೀತಿ ವರ್ತಿಸಿದ್ದಾರೆ. ಪರಿಣಾಮ ರೈತನಾಯಕ ಉಪವಾಸ ಸತ್ಯಾಗ್ರಹದಿಂದ ಕುಸಿದುಬಿದ್ದು ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತçಚಿಕಿತ್ಸೆಗೆ 15 ಲಕ್ಷ ರೂ. ವೆಚ್ಚವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ತಿಪ್ಪೇಸ್ವಾಮಿ ಅವರ ಆರೋಗ್ಯ ವಿಚಾರಿಸುವ ಮಾನವೀಯತೆಯನ್ನು ಜಿಲ್ಲಾಡಳಿತ, ಜನಪ್ರತಿನಿಧಿಗಳು ಮಾಡಿಲ್ಲದಿರುವುದು ಹೋರಾಟಗಾರರಿಗೆ ಅಪಮಾನ ಮಾಡುವ ನಡೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತಂಘದ ರಾಜ್ಯ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ಸಾರ್ವಜನಿಕರ ಸಂಕಷ್ಟ, ಹೋರಾಟಗಾರರ ಕೂಗಿಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ಆದರೆ, ಐದು ದಿನಗಳಿಂದ ಉಪವಾಸ ನಿರತರಾಗಿದ್ದ ತಿಪ್ಪೇಸ್ವಾಮಿ ಅವರನ್ನು ಅತ್ಯಂತ ಅಪಮಾನಕರವಾಗಿ ಜಿಲ್ಲಾಧಿಕಾರಿ ನಡೆಸಿಕೊಂಡಿದ್ದಾರೆ. ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸದ ಪರಿಣಾಮ ಉಪವಾಸ ಮುಂದುವರಿಸಿದ್ದೇ ಅನಾರೋಗ್ಯಕ್ಕೆ ಒಳಗಾಗಲು ಮುಖ್ಯ ಕಾರಣ ಎಂದರು. ರೈತನಾಯಕ ಅನಾರೋಗ್ಯಕ್ಕೆ ಒಳಗಾಗಲಿ ಎಂಬ ಉದ್ದೇಶದಿಂದಲೇ ಅವರು ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿಲ್ಲವೆಂಬ ಸಂಶಯ ಮೂಡುತ್ತದೆ. ಇದೊಂದು ಸರ್ಕಾರಿ ವ್ಯವಸ್ಥೆ ಪರೋಕ್ಷವಾಗಿ ಕೊಲೆ ಯತ್ನ ನಡೆಸಿದೆ ಎಂದು ದೂರಿದರು. ಆಸ್ಪತ್ರೆಗೆ ಸೇರಿ ಐದು ದಿನಗಳಾಗಿದ್ದರೂ ಇಲ್ಲಿಯವರೆಗೂ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸ ಅಧಿಕಾರಿಗಳು ಮಾಡಿಲ್ಲ. ಅಧಿಕಾರಿಗಳ ನಡೆ ಉದ್ಧಟನದಿಂದ ಕೂಡಿದೆ. ಇಂತಹ ಡಿಸಿಯನ್ನು ಯಾವುದೇ ಕಾರಣಕ್ಕೂ ಚಿತ್ರದುರ್ಗದಲ್ಲಿ ಇರಲು ಬಿಡಬಾರದು ಎಂದರು. ಟಿ.ವೆAಕಟೇಶ್ ಜಿಲ್ಲೆಗೆ ಆಗಮಿಸಿ ಎರಡೂವರೆ ವರ್ಷ ಆಗಿದ್ದರೂ ಇಲ್ಲಿಯವರೆಗೂ ಯಾವ ಕಾರಣಕ್ಕೆ ಅವರನ್ನೇ ಮುಂದುವರಿಸಲಾಗುತ್ತಿದೆ ಎಂದು ಪ್ರಶ್ನೀಸಿದ ಬಸವರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಎಟಿಎಂ ರೀತಿ ಬೆಂಬಲವಾಗಿ ನಿಂತಿದ್ದಾರೆ. ಈ ಕಾರಣಕ್ಕೆ ವೆಂಕಟೇಶ್ ಅವರನ್ನು ಉಳಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು. ಭ್ರಷ್ಟಾಚಾರದಲ್ಲಿ ಮುಳುಗಿರುವ ಅಧಿಕಾರಿಗಳು, ಜನಪ್ರತಿನಿಧಿಗಳು ಕೊನೇ ಪಕ್ಷ ಹೋರಾಟಗಾರರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಲಿ. ಜಿಲ್ಲೆಯ ಜನರ ಹಿತಕ್ಕಾಗಿ ಯಾವುದೇ ವ್ಯಕ್ತಿ ಚಳವಳಿ ಕೈಗೊಂಡರೇ ಅವರ ಮನವಿ ಆಲಿಸುವ ಬದ್ಧತೆ ಪ್ರದರ್ಶಿಸಲಿ ಎಂದು ಆಗ್ರಹಿಸಿದರು. ಜಿಲ್ಲಾಧ್ಯಕ್ಷ ಮರ್ಲಹಳ್ಳಿ ರವಿಕುಮಾರ್ ಮಾತನಾಡಿ, ದೇಶಕ್ಕೆ ಅನ್ನ ಕೊಡುವ ರೈತ ಉಪವಾಸ ಕುಳಿತ ತಕ್ಷಣವೇ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಬೇಕಾಗಿತ್ತು. ಆದರೆ, ಅವರು ನಿರ್ಲಕ್ಷö್ಯ ತೋರಿದ್ದರ ಪರಿಣಾಮ ರೈತನಾಯಕ ಕೆ.ಟಿ.ತಿಪ್ಪೇಸ್ವಾಮಿ ಕುಸಿದುಬಿದ್ದು ಆಸ್ಪತ್ರೆ ಸೇರುವಂತಾಗಿದೆ. ಈಗಲಾದರೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಮಾನವೀಯತೆ ಪ್ರದರ್ಶಿಸಲಿ ಎಂದು ತಿಳಿಸಿದರು. ತಾಲ್ಲೂಕಾಧ್ಯಕ್ಷ ಮಲ್ಲಸಮುದ್ರ ಗಂಗಾಧರ್, ಮುಖಂಡರಾದ ಸೂರಮ್ಮನಹಳ್ಳಿ ರಾಜಣ್ಣ, ಪ್ರಶಾಂತ್ರೆಡ್ಡಿ, ಮಿಠ್ಯಾನಾಯ್ಕ, ಓಬನಾಯ್ಕ್, ಚಂದ್ರಶೇಖರ ನಾಯಕ, ಹೀರೇಹಳ್ಳಿ ತಿಪ್ಪೇಸ್ವಾಮಿ, ಎದ್ದಲು ತಿಪ್ಪೇಸ್ವಾಮಿ, ಪಾಪಯ್ಯ, ಬಸವರಾಜ್, ರಾಜಣ್ಣ ಇತರರಿದ್ದರು. .1
- ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆ ಬಳಿ ಮೃತ ಮಹಿಳೆಯ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಧಾಖಲಾಗಿದ್ದ ಮಹಿಳೆ ಹೆರಿಗೆ ನಂತರ ಮೃತಪಟ್ಟಿದ್ದು ಮಗು ಚಿಕಿತ್ಸೆ ಪಡೆಯುತ್ತಿದ್ದು ಶಿಲ್ಪ ಎಂಬ ಮಹಿಳೆ ಸಾವನ್ನಪ್ಪಿದ್ದು ಮಹಿಳೆ ಸಾವಿಗೆ ವೈದ್ಯರು ಹಾಗೂ ಜಿಲ್ಲಾ ಸರ್ಜನ್ ಅವರೆ ಕಾರಣ ಎಂದು ಆರೋಪಿಸಿದ್ದಾರೆ1
- ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ ಗೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹೊಸ ನೀರಲಗಿ ಗ್ರಾಮದ ವಕೀಲರಾದ ಸಿದ್ದನಗೌಡ ವೀರಭದ್ರ ಗೌಡ ಪಾಟೀಲ ಚುನಾವಣಾ ಕಣಕ್ಕೆ2
- ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಾಲಿವುಡ್ ನಟ ಅರ್ಜುನ್ ಕಪೂರ್ ಮೂರು ದಿನಗಳಿಂದ ಇರುವುದಾಗಿ ತಿಳಿದುಬಂದಿದೆ. ಮಾರ್ಚ್ 7 ರಂದು ಸುಬ್ರಹ್ಮಣ್ಯ ಕ್ಕೆ ಆಗಮಿಸಿದ್ದ ಅವರು ಮಾರ್ಚ್ 8 ರಂದು ಸರ್ಪ ಸಂಸ್ಕಾರ ಸೇವೆ ನಡೆಸಿದ್ದಾಗಿ ತಿಳಿದು ಬಂದಿದ್ದು, ಮಾರ್ಚ್ 9 ರಂದು ಆಶ್ಲೇಷ ಬಲಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಸುಬ್ರಹ್ಮಣ್ಯದ ಔರಮ್ ವಸತಿ ಗೃಹದಲ್ಲಿ ತಂಗಿದ್ದ ಅವರನ್ನು ದೇವಾಲಯ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಗೌರವಿಸಿದರು. ಈ ಸಂದರ್ಭ ಪಿ.ಆರ್.ಒ ಜಯರಾಮ ರಾವ್, ಮನ್ಮಥ ಬಟ್ಟೋಡಿ, ಪೊಲೀಸ್ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.1