ಗುರುಮಠಕಲ್ ಮತಕ್ಷೇತ್ರ ಸೈದಾಪುರ ಎಪಿಎಂಸಿ ಆವರಣದಲ್ಲಿ ಜಾನುವಾರು ಸಂತೆ ಆರಂಭಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಸ್ಥಳ ಪರಿಶೀಲನೆ ನಡೆಸಿದರು. ಸೈದಾಪುರದಲ್ಲಿ ಜಾನುವಾರು ಸಂತೆ ಆರಂಭಿಸಿ ಮೂಲಸೌಕರ್ಯ ಕಲ್ಪಿಸಲು ಜಿಲ್ಲಾಡಳಿತಕ್ಕೆ ಉಮೇಶ್ ಮುದ್ನಾಳ ವಾರದ ಗಡುವು; ನಿರ್ಲಕ್ಷ್ಯ ವಹಿಸಿದರೆ ರಸ್ತೆ ಬಂದ್ ಹೋರಾಟದ ಎಚ್ಚರಿಕೆ ಗುರುಮಠಕಲ್ ಸೈದಾಪುರ ಪಟ್ಟಣದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಪ್ರತಿ ಗುರುವಾರ ನಡೆಯುವ ಸಂತೆಯಲ್ಲಿ ದನ-ಕರು, ಕುರಿ, ಆಡು ಹಾಗೂ ಕೋಳಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಒಂದು ವಾರದ ಗಡುವು ನೀಡಿದ್ದಾರೆ. ಸಂತೆ ಆವರಣಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿ ರೈತರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಸೈದಾಪುರದಲ್ಲಿ ಜಾನುವಾರು ಸಂತೆ ಆರಂಭಿಸುವುದರ ಜತೆಗೆ ರೈತರು ಹಾಗೂ ಜಾನುವಾರುಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಲ್ಲಿ ಎಪಿಎಂಸಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದರು. ಅವ್ಯವಸ್ಥೆಯ ಆಗರವಾದ ಸಂತೆ ಆವರಣ ಸಂತೆ ಆವರಣದಲ್ಲಿ ಜಾಲಿಕಂಟಿಗಳು ಬೆಳೆದು ವಿಷಜಂತುಗಳು ಸೇರಿಕೊಳ್ಳುವಂತಾಗಿದೆ. ಚರಂಡಿಯಲ್ಲಿ ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿದೆ. ಎಲ್ಲೆಡೆ ಅಸ್ವಚ್ಛತೆ ಕಂಡುಬರುತ್ತಿದ್ದು, ಕುಡುಕರ ಹಾವಳಿ ಹಾಗೂ ಅಕ್ರಮ ಚಟುವಟಿಕೆಗಳಿಗೂ ಅವಕಾಶವಾಗುತ್ತಿದೆ. ಕೆಲ ಭಾಗಗಳು ಭಿಕ್ಷುಕರು ಹಾಗೂ ಪುಂಡ-ಪೋಕರಿಗಳ ತಂಗುದಾಣದಂತಾಗಿವೆ. ಇದರಿಂದ ಸಂತೆಗಾಗಿ ಆಗಮಿಸುವ ರೈತರು ಹಾಗೂ ಸಾರ್ವಜನಿಕರು ಆತಂಕ ಎದುರಿಸುವಂತಾಗಿದೆ ಎಂದು ಮುದ್ನಾಳ ಹೇಳಿದರು. ಪ್ರತಿ ಗುರುವಾರ ಸಾವಿರಾರು ರೈತರು ಹಾಗೂ ವ್ಯಾಪಾರಿಗಳು ಆಗಮಿಸುವ ಸ್ಥಳದಲ್ಲಿ ಕನಿಷ್ಠ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ, ನೆರಳು ಸೇರಿದಂತೆ ಅಗತ್ಯ ಸೌಲಭ್ಯಗಳಿಲ್ಲದಿರುವುದು ಆಡಳಿತದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಅವರು ದೂರಿದರು. ಜಾನುವಾರುಗಳ ಆರೋಗ್ಯಕ್ಕೂ ಆದ್ಯತೆ ನೀಡಿ ಜಾನುವಾರು ಸಂತೆ ಆರಂಭಿಸಿದ ಬಳಿಕ ಪ್ರತಿ ವಾರ ಸಂತೆ ಆವರಣದಲ್ಲೇ ಪಶುವೈದ್ಯರನ್ನು ಕಡ್ಡಾಯವಾಗಿ ನಿಯೋಜಿಸಿ ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಬೇಕು. ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳನ್ನು ಕಟ್ಟಲು ಸಾಲುಸಾಲಾಗಿ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಬಿಸಿಲಿನ ತೀವ್ರತೆಯನ್ನು ಗಮನಿಸಿ ಜನರು ಹಾಗೂ ಜಾನುವಾರುಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ನೆರಳಿಗಾಗಿ ಮರಗಳನ್ನು ಬೆಳೆಸುವುದರ ಜತೆಗೆ ಅಗತ್ಯವಿರುವ ಕಡೆ ಶೆಡ್ ನಿರ್ಮಿಸಬೇಕು. ಎಪಿಎಂಸಿ ಆವರಣದಲ್ಲಿ ಉದ್ಯಾನ ನಿರ್ಮಿಸಿ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಕ್ರಮ ಕೈಗೊಳ್ಳಬೇಕು ಎಂದರು. ಶೆಡ್ಗಳ ಅಕ್ರಮ ಬಳಕೆಗೆ ಕಡಿವಾಣ ಎಪಿಎಂಸಿ ಆವರಣದಲ್ಲಿರುವ ಶೆಡ್ಗಳನ್ನು ಕೆಲವು ಖಾಸಗಿ ಅಂಗಡಿ ಮಾಲೀಕರು ಅಕ್ರಮವಾಗಿ ದಾಸ್ತಾನು ಮಾಡಲು ಬಳಸಿಕೊಳ್ಳುತ್ತಿದ್ದಾರೆ. ಇದಕ್ಕೆ ತಕ್ಷಣ ಕಡಿವಾಣ ಹಾಕಿ, ರೈತರ ಬಳಕೆಗೆ ಶೆಡ್ಗಳನ್ನು ಮುಕ್ತಗೊಳಿಸಬೇಕು ಎಂದು ಮುದ್ನಾಳ ಆಗ್ರಹಿಸಿದರು. ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಎಪಿಎಂಸಿ ಅಧಿಕಾರಿಗಳು ಕೂಡಲೇ ಸಂತೆ ಆವರಣಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿ ಪರಿಶೀಲಿಸಬೇಕು. ರೈತರು ಹಾಗೂ ಜಾನುವಾರುಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಒಂದು ವಾರದ ಗಡುವು ಜಿಲ್ಲಾಡಳಿತ ಹಾಗೂ ಎಪಿಎಂಸಿ ಅಧಿಕಾರಿಗಳು ಒಂದು ವಾರದೊಳಗೆ ಸಮಸ್ಯೆ ಪರಿಹರಿಸಿ ಜಾನುವಾರು ಸಂತೆ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಪ ಎಪಿಎಂಸಿ ಕಚೇರಿ ಮುಂಭಾಗದ ಯಾದಗಿರಿ–ರಾಯಚೂರು ಕರಿಬೆಟ್ಟ ಸರ್ಕಲ್ ಮುಖ್ಯರಸ್ತೆ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಉಮೇಶ್ ಕೆ. ಮುದ್ನಾಳ ಎಚ್ಚರಿಕೆ ನೀಡಿದರು. ಜಿಲ್ಲೆಯ ಪ್ರಮುಖ ಜಾನುವಾರು ಸಂತೆಗಳಾದ ಶುಕ್ರವಾರ ಶಹಾಪುರ, ಮಂಗಳವಾರ ಯಾದಗಿರಿ, ಸೋಮವಾರ ಗುರುಮಠಕಲ್ ಹಾಗೂ ಗುರುವಾರ ಸೈದಾಪುರದಲ್ಲೂ ವ್ಯವಸ್ಥಿತವಾಗಿ ಜಾನುವಾರು ಸಂತೆ ನಡೆಸುವ ಮೂಲಕ ರೈತರು ಹಾಗೂ ಜಾನುವಾರು ವ್ಯಾಪಾರಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.
ಗುರುಮಠಕಲ್ ಮತಕ್ಷೇತ್ರ ಸೈದಾಪುರ ಎಪಿಎಂಸಿ ಆವರಣದಲ್ಲಿ ಜಾನುವಾರು ಸಂತೆ ಆರಂಭಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಸ್ಥಳ ಪರಿಶೀಲನೆ ನಡೆಸಿದರು. ಸೈದಾಪುರದಲ್ಲಿ ಜಾನುವಾರು ಸಂತೆ ಆರಂಭಿಸಿ ಮೂಲಸೌಕರ್ಯ ಕಲ್ಪಿಸಲು ಜಿಲ್ಲಾಡಳಿತಕ್ಕೆ ಉಮೇಶ್ ಮುದ್ನಾಳ ವಾರದ ಗಡುವು; ನಿರ್ಲಕ್ಷ್ಯ ವಹಿಸಿದರೆ ರಸ್ತೆ ಬಂದ್ ಹೋರಾಟದ ಎಚ್ಚರಿಕೆ ಗುರುಮಠಕಲ್ ಸೈದಾಪುರ ಪಟ್ಟಣದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಪ್ರತಿ ಗುರುವಾರ ನಡೆಯುವ ಸಂತೆಯಲ್ಲಿ ದನ-ಕರು, ಕುರಿ, ಆಡು ಹಾಗೂ ಕೋಳಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಒಂದು ವಾರದ ಗಡುವು ನೀಡಿದ್ದಾರೆ. ಸಂತೆ ಆವರಣಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿ ರೈತರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ
ಅವರು, ಸೈದಾಪುರದಲ್ಲಿ ಜಾನುವಾರು ಸಂತೆ ಆರಂಭಿಸುವುದರ ಜತೆಗೆ ರೈತರು ಹಾಗೂ ಜಾನುವಾರುಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಲ್ಲಿ ಎಪಿಎಂಸಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದರು. ಅವ್ಯವಸ್ಥೆಯ ಆಗರವಾದ ಸಂತೆ ಆವರಣ ಸಂತೆ ಆವರಣದಲ್ಲಿ ಜಾಲಿಕಂಟಿಗಳು ಬೆಳೆದು ವಿಷಜಂತುಗಳು ಸೇರಿಕೊಳ್ಳುವಂತಾಗಿದೆ. ಚರಂಡಿಯಲ್ಲಿ ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿದೆ. ಎಲ್ಲೆಡೆ ಅಸ್ವಚ್ಛತೆ ಕಂಡುಬರುತ್ತಿದ್ದು, ಕುಡುಕರ ಹಾವಳಿ ಹಾಗೂ ಅಕ್ರಮ ಚಟುವಟಿಕೆಗಳಿಗೂ ಅವಕಾಶವಾಗುತ್ತಿದೆ. ಕೆಲ ಭಾಗಗಳು ಭಿಕ್ಷುಕರು ಹಾಗೂ ಪುಂಡ-ಪೋಕರಿಗಳ ತಂಗುದಾಣದಂತಾಗಿವೆ. ಇದರಿಂದ ಸಂತೆಗಾಗಿ ಆಗಮಿಸುವ ರೈತರು ಹಾಗೂ ಸಾರ್ವಜನಿಕರು ಆತಂಕ ಎದುರಿಸುವಂತಾಗಿದೆ ಎಂದು ಮುದ್ನಾಳ ಹೇಳಿದರು. ಪ್ರತಿ ಗುರುವಾರ ಸಾವಿರಾರು ರೈತರು ಹಾಗೂ ವ್ಯಾಪಾರಿಗಳು ಆಗಮಿಸುವ ಸ್ಥಳದಲ್ಲಿ ಕನಿಷ್ಠ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ, ನೆರಳು ಸೇರಿದಂತೆ ಅಗತ್ಯ ಸೌಲಭ್ಯಗಳಿಲ್ಲದಿರುವುದು ಆಡಳಿತದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಅವರು ದೂರಿದರು. ಜಾನುವಾರುಗಳ ಆರೋಗ್ಯಕ್ಕೂ ಆದ್ಯತೆ ನೀಡಿ ಜಾನುವಾರು
ಸಂತೆ ಆರಂಭಿಸಿದ ಬಳಿಕ ಪ್ರತಿ ವಾರ ಸಂತೆ ಆವರಣದಲ್ಲೇ ಪಶುವೈದ್ಯರನ್ನು ಕಡ್ಡಾಯವಾಗಿ ನಿಯೋಜಿಸಿ ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಬೇಕು. ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳನ್ನು ಕಟ್ಟಲು ಸಾಲುಸಾಲಾಗಿ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಬಿಸಿಲಿನ ತೀವ್ರತೆಯನ್ನು ಗಮನಿಸಿ ಜನರು ಹಾಗೂ ಜಾನುವಾರುಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ನೆರಳಿಗಾಗಿ ಮರಗಳನ್ನು ಬೆಳೆಸುವುದರ ಜತೆಗೆ ಅಗತ್ಯವಿರುವ ಕಡೆ ಶೆಡ್ ನಿರ್ಮಿಸಬೇಕು. ಎಪಿಎಂಸಿ ಆವರಣದಲ್ಲಿ ಉದ್ಯಾನ ನಿರ್ಮಿಸಿ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಕ್ರಮ ಕೈಗೊಳ್ಳಬೇಕು ಎಂದರು. ಶೆಡ್ಗಳ ಅಕ್ರಮ ಬಳಕೆಗೆ ಕಡಿವಾಣ ಎಪಿಎಂಸಿ ಆವರಣದಲ್ಲಿರುವ ಶೆಡ್ಗಳನ್ನು ಕೆಲವು ಖಾಸಗಿ ಅಂಗಡಿ ಮಾಲೀಕರು ಅಕ್ರಮವಾಗಿ ದಾಸ್ತಾನು ಮಾಡಲು ಬಳಸಿಕೊಳ್ಳುತ್ತಿದ್ದಾರೆ. ಇದಕ್ಕೆ ತಕ್ಷಣ ಕಡಿವಾಣ ಹಾಕಿ, ರೈತರ ಬಳಕೆಗೆ ಶೆಡ್ಗಳನ್ನು ಮುಕ್ತಗೊಳಿಸಬೇಕು ಎಂದು ಮುದ್ನಾಳ ಆಗ್ರಹಿಸಿದರು. ಜಿಲ್ಲಾಧಿಕಾರಿ ಹಾಗೂ
ಸಂಬಂಧಪಟ್ಟ ಎಪಿಎಂಸಿ ಅಧಿಕಾರಿಗಳು ಕೂಡಲೇ ಸಂತೆ ಆವರಣಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿ ಪರಿಶೀಲಿಸಬೇಕು. ರೈತರು ಹಾಗೂ ಜಾನುವಾರುಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಒಂದು ವಾರದ ಗಡುವು ಜಿಲ್ಲಾಡಳಿತ ಹಾಗೂ ಎಪಿಎಂಸಿ ಅಧಿಕಾರಿಗಳು ಒಂದು ವಾರದೊಳಗೆ ಸಮಸ್ಯೆ ಪರಿಹರಿಸಿ ಜಾನುವಾರು ಸಂತೆ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಪ ಎಪಿಎಂಸಿ ಕಚೇರಿ ಮುಂಭಾಗದ ಯಾದಗಿರಿ–ರಾಯಚೂರು ಕರಿಬೆಟ್ಟ ಸರ್ಕಲ್ ಮುಖ್ಯರಸ್ತೆ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಉಮೇಶ್ ಕೆ. ಮುದ್ನಾಳ ಎಚ್ಚರಿಕೆ ನೀಡಿದರು. ಜಿಲ್ಲೆಯ ಪ್ರಮುಖ ಜಾನುವಾರು ಸಂತೆಗಳಾದ ಶುಕ್ರವಾರ ಶಹಾಪುರ, ಮಂಗಳವಾರ ಯಾದಗಿರಿ, ಸೋಮವಾರ ಗುರುಮಠಕಲ್ ಹಾಗೂ ಗುರುವಾರ ಸೈದಾಪುರದಲ್ಲೂ ವ್ಯವಸ್ಥಿತವಾಗಿ ಜಾನುವಾರು ಸಂತೆ ನಡೆಸುವ ಮೂಲಕ ರೈತರು ಹಾಗೂ ಜಾನುವಾರು ವ್ಯಾಪಾರಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.
- ಗುರುಮಠಕಲ್ ಮತಕ್ಷೇತ್ರ ಸೈದಾಪುರ ಎಪಿಎಂಸಿ ಆವರಣದಲ್ಲಿ ಜಾನುವಾರು ಸಂತೆ ಆರಂಭಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಸ್ಥಳ ಪರಿಶೀಲನೆ ನಡೆಸಿದರು. ಸೈದಾಪುರದಲ್ಲಿ ಜಾನುವಾರು ಸಂತೆ ಆರಂಭಿಸಿ ಮೂಲಸೌಕರ್ಯ ಕಲ್ಪಿಸಲು ಜಿಲ್ಲಾಡಳಿತಕ್ಕೆ ಉಮೇಶ್ ಮುದ್ನಾಳ ವಾರದ ಗಡುವು; ನಿರ್ಲಕ್ಷ್ಯ ವಹಿಸಿದರೆ ರಸ್ತೆ ಬಂದ್ ಹೋರಾಟದ ಎಚ್ಚರಿಕೆ ಗುರುಮಠಕಲ್ ಸೈದಾಪುರ ಪಟ್ಟಣದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಪ್ರತಿ ಗುರುವಾರ ನಡೆಯುವ ಸಂತೆಯಲ್ಲಿ ದನ-ಕರು, ಕುರಿ, ಆಡು ಹಾಗೂ ಕೋಳಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಒಂದು ವಾರದ ಗಡುವು ನೀಡಿದ್ದಾರೆ. ಸಂತೆ ಆವರಣಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿ ರೈತರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಸೈದಾಪುರದಲ್ಲಿ ಜಾನುವಾರು ಸಂತೆ ಆರಂಭಿಸುವುದರ ಜತೆಗೆ ರೈತರು ಹಾಗೂ ಜಾನುವಾರುಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಲ್ಲಿ ಎಪಿಎಂಸಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದರು. ಅವ್ಯವಸ್ಥೆಯ ಆಗರವಾದ ಸಂತೆ ಆವರಣ ಸಂತೆ ಆವರಣದಲ್ಲಿ ಜಾಲಿಕಂಟಿಗಳು ಬೆಳೆದು ವಿಷಜಂತುಗಳು ಸೇರಿಕೊಳ್ಳುವಂತಾಗಿದೆ. ಚರಂಡಿಯಲ್ಲಿ ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿದೆ. ಎಲ್ಲೆಡೆ ಅಸ್ವಚ್ಛತೆ ಕಂಡುಬರುತ್ತಿದ್ದು, ಕುಡುಕರ ಹಾವಳಿ ಹಾಗೂ ಅಕ್ರಮ ಚಟುವಟಿಕೆಗಳಿಗೂ ಅವಕಾಶವಾಗುತ್ತಿದೆ. ಕೆಲ ಭಾಗಗಳು ಭಿಕ್ಷುಕರು ಹಾಗೂ ಪುಂಡ-ಪೋಕರಿಗಳ ತಂಗುದಾಣದಂತಾಗಿವೆ. ಇದರಿಂದ ಸಂತೆಗಾಗಿ ಆಗಮಿಸುವ ರೈತರು ಹಾಗೂ ಸಾರ್ವಜನಿಕರು ಆತಂಕ ಎದುರಿಸುವಂತಾಗಿದೆ ಎಂದು ಮುದ್ನಾಳ ಹೇಳಿದರು. ಪ್ರತಿ ಗುರುವಾರ ಸಾವಿರಾರು ರೈತರು ಹಾಗೂ ವ್ಯಾಪಾರಿಗಳು ಆಗಮಿಸುವ ಸ್ಥಳದಲ್ಲಿ ಕನಿಷ್ಠ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ, ನೆರಳು ಸೇರಿದಂತೆ ಅಗತ್ಯ ಸೌಲಭ್ಯಗಳಿಲ್ಲದಿರುವುದು ಆಡಳಿತದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಅವರು ದೂರಿದರು. ಜಾನುವಾರುಗಳ ಆರೋಗ್ಯಕ್ಕೂ ಆದ್ಯತೆ ನೀಡಿ ಜಾನುವಾರು ಸಂತೆ ಆರಂಭಿಸಿದ ಬಳಿಕ ಪ್ರತಿ ವಾರ ಸಂತೆ ಆವರಣದಲ್ಲೇ ಪಶುವೈದ್ಯರನ್ನು ಕಡ್ಡಾಯವಾಗಿ ನಿಯೋಜಿಸಿ ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಬೇಕು. ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳನ್ನು ಕಟ್ಟಲು ಸಾಲುಸಾಲಾಗಿ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಬಿಸಿಲಿನ ತೀವ್ರತೆಯನ್ನು ಗಮನಿಸಿ ಜನರು ಹಾಗೂ ಜಾನುವಾರುಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ನೆರಳಿಗಾಗಿ ಮರಗಳನ್ನು ಬೆಳೆಸುವುದರ ಜತೆಗೆ ಅಗತ್ಯವಿರುವ ಕಡೆ ಶೆಡ್ ನಿರ್ಮಿಸಬೇಕು. ಎಪಿಎಂಸಿ ಆವರಣದಲ್ಲಿ ಉದ್ಯಾನ ನಿರ್ಮಿಸಿ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿಡಲು ಕ್ರಮ ಕೈಗೊಳ್ಳಬೇಕು ಎಂದರು. ಶೆಡ್ಗಳ ಅಕ್ರಮ ಬಳಕೆಗೆ ಕಡಿವಾಣ ಎಪಿಎಂಸಿ ಆವರಣದಲ್ಲಿರುವ ಶೆಡ್ಗಳನ್ನು ಕೆಲವು ಖಾಸಗಿ ಅಂಗಡಿ ಮಾಲೀಕರು ಅಕ್ರಮವಾಗಿ ದಾಸ್ತಾನು ಮಾಡಲು ಬಳಸಿಕೊಳ್ಳುತ್ತಿದ್ದಾರೆ. ಇದಕ್ಕೆ ತಕ್ಷಣ ಕಡಿವಾಣ ಹಾಕಿ, ರೈತರ ಬಳಕೆಗೆ ಶೆಡ್ಗಳನ್ನು ಮುಕ್ತಗೊಳಿಸಬೇಕು ಎಂದು ಮುದ್ನಾಳ ಆಗ್ರಹಿಸಿದರು. ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಎಪಿಎಂಸಿ ಅಧಿಕಾರಿಗಳು ಕೂಡಲೇ ಸಂತೆ ಆವರಣಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿ ಪರಿಶೀಲಿಸಬೇಕು. ರೈತರು ಹಾಗೂ ಜಾನುವಾರುಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಒಂದು ವಾರದ ಗಡುವು ಜಿಲ್ಲಾಡಳಿತ ಹಾಗೂ ಎಪಿಎಂಸಿ ಅಧಿಕಾರಿಗಳು ಒಂದು ವಾರದೊಳಗೆ ಸಮಸ್ಯೆ ಪರಿಹರಿಸಿ ಜಾನುವಾರು ಸಂತೆ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಪ ಎಪಿಎಂಸಿ ಕಚೇರಿ ಮುಂಭಾಗದ ಯಾದಗಿರಿ–ರಾಯಚೂರು ಕರಿಬೆಟ್ಟ ಸರ್ಕಲ್ ಮುಖ್ಯರಸ್ತೆ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಉಮೇಶ್ ಕೆ. ಮುದ್ನಾಳ ಎಚ್ಚರಿಕೆ ನೀಡಿದರು. ಜಿಲ್ಲೆಯ ಪ್ರಮುಖ ಜಾನುವಾರು ಸಂತೆಗಳಾದ ಶುಕ್ರವಾರ ಶಹಾಪುರ, ಮಂಗಳವಾರ ಯಾದಗಿರಿ, ಸೋಮವಾರ ಗುರುಮಠಕಲ್ ಹಾಗೂ ಗುರುವಾರ ಸೈದಾಪುರದಲ್ಲೂ ವ್ಯವಸ್ಥಿತವಾಗಿ ಜಾನುವಾರು ಸಂತೆ ನಡೆಸುವ ಮೂಲಕ ರೈತರು ಹಾಗೂ ಜಾನುವಾರು ವ್ಯಾಪಾರಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.4
- ಯಾದಗಿರಿ ತಾಲೂಕಿನ ತಹಸಿಲ್ ಕಚೇರಿಯಲ್ಲಿ ಆಧಾರ್ ಕಾರ್ಡ್ ಅಪ್ಲೋಡ್ ಮತ್ತು ರೇಷನ್ ಕಾರ್ಡ್ ಕೆವೈಸಿ ಮಾಡಲು ಬೆಂಗಳೂರಿನಿಂದ ಆಗಮಿಸಿ ಒಳಗಡೆ ಕರ್ನಾಟಕ 1 ನಲ್ಲಿ ಬೆಳಗ್ಗೆ 3:00 ಯಿಂದ ಯಾದಗಿರಿಯ ತಾಲೂಕಿನ ಕಚೇರಿಯ ಒಳಗಡೆ ಜನ ಜಾತ್ರೆ ಆಗಿದೆ ಬೆಂಗಳೂರಿನಲ್ಲಿ ಬಂದು ಲೈನ್ ಅಲ್ಲಿ ನಿಂತುಕೊಂಡು ಆದರೂ ಕೂಡ ಸರಿಯಾಗಿ ನೆಟ್ವರ್ಕ್ ಇಲ್ಲ ಮತ್ತು ಜನರು ಕಿತ್ತಿ ಹಾಡುತ್ತಿದ್ದರೆ ಜಿಲ್ಲೆಯ 16 ವರ್ಷ ಆದರೂ ಕೂಡ ಜಿಲ್ಲಾ ಆಡಳಿತ ಇದನ್ನು ಗಮನಿಸಿ ಸರಿಪಡಿಸಬೇಕು ಈಗಾಗಲೇ ಯಾತಗಿರಿ ಜಿಲ್ಲೆಯ ಬರಗಲ ಆಗಿದೆ ಬೆಳೆ ಇಲ್ಲದ ಕಾರಣ ರೈತರು ಸಾಲ ಮಾಡಿ ಬೆಂಗಳೂರಿನಲ್ಲಿ ದುಡಿ ದುಡಿಯುತ್ತಾ ಇದ್ದರೂ ಕೂಡ ಈ ಕೆವೈಸಿ ರೇಷನ್ ಕಾರ್ಡ್ ಸಲುವಾಗಿ ಜಿಲ್ಲೆಗೆ ಆಗಮಿಸಿ ತಿದ್ದು ಇದನ್ನು ಬಹಳ ರೈತರು ಕೂಲಿ ಕಾರ್ಮಿಕರು ಕೆಲಸ ಬಿಟ್ಟು ಬೆಳಗ್ಗೆ ಮೂರು ಗಂಟೆಯಿಂದ ಸಾಲಗಿ ನಿಲ್ಲುತ್ತದೆ ಇದು ಯಾವ ಶಾಪ ರೈತರ ಗೋಳು ವರು ಯಾರು ಇಲ್ಲ ಸರ್ಕಾರವೇ ಕಣ್ಣು ಮುಚ್ಚಿ ಕುಂತಿದೆ ಜನ ಆಕ್ರೋಶ1
- YADGIR NEWS||ನೀರು ಬೇಕಾಗಿದೆ, ನೀರು ಬಿಡಿ||ಅನ್ನದಾತರ ಭಜನೆ ಮುಖಾಂತರ|| ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಹೋರಾಟ..! ಯಾದಗಿರಿ: ರಾಜ್ಯದಲ್ಲಿ ಆವರಿಸಿರುವ ಭೀಕರ ಬರದ ಹಿನ್ನೆಲೆಯಲ್ಲಿ ಬತ್ತಿಹೋದ ಕೆರೆಗಳಿಗೆ ನೀರು ಹರಿಸಿ ಭರ್ತಿ ಮಾಡುವಂತೆ ಆಗ್ರಹಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಹೋರಾಟ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲದೊಂದಿಗೆ ನಡೆದ ಪ್ರತಿಭಟನೆಯಲ್ಲಿ ರೈತರು ಭಜನೆ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು. ಬದ್ದೆಪಲ್ಲಿ ಹಾಗೂ ಮಲ್ಕಪನಳ್ಳಿ ಕೆರೆಗಳಿಗೆ ಏತ ನೀರಾವರಿ ಯೋಜನೆಯ ಮೂಲಕ ನೀರು ಹರಿಸಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಕೆಬಿಜೆಎನ್ಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆರೆಗಳು ಸಮರ್ಪಕವಾಗಿ ತುಂಬಿಲ್ಲ ಎಂದು ಆರೋಪಿಸಿದರು. ಮಳೆ ಕೈಕೊಟ್ಟ ಪರಿಣಾಮ ಕೆರೆಗಳು ಸಂಪೂರ್ಣ ಬತ್ತಿಹೋಗಿದ್ದು, ಕೆರೆ ನೀರನ್ನು ನಂಬಿ ಬೆಳೆ ಹಾಕಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾಗೂ ಜಾನುವಾರುಗಳಿಗಾಗಿ ತಕ್ಷಣ ನೀರು ಹರಿಸಬೇಕು ಎಂದು ಆಗ್ರಹಿಸಿದ ರೈತರು, “ನೀರು ಬೇಕಾಗಿದೆ, ನೀರು ಬಿಡಿ” ಎಂದು ಭಜನೆ ಮಾಡಿ ಪ್ರತಿಭಟಿಸಿದರು. ಕೆರೆಗಳು ತುಂಬುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.1
- ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್ಎಸ್ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್ಎಸ್ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.1
- ಅವೈಜ್ಞಾನಿಕವಾಗಿ ಟೋಲ್ ಗೇಟ್ ನಿರ್ಮಾಣ ಮಾಡಿದ್ದು ತೆರವುಗೊಳಿಸಲು ಆಗ್ರಹ ಅವೈಜ್ಞಾನಿಕವಾಗಿ ಟೋಲ್ ತುರ್ತಾಗಿ ತೆರವುಗೊಳಿಸಿ ಮುಂದಾಗುವ ಅವಘಡಗಳನ್ನು ತಪ್ಪಿಸಲು ಸರ್ಕಾರಗಳು ಮುಂದಾಗಬೇಕು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಒತ್ತಾಯ. ಅವೈಜ್ಞಾನಿಕವಾಗಿ ಟೋಲ್ನಿಂದ ಸಾಕಷ್ಟು ಬಡ ಚಾಲಕರು ಜೀವ ಬಲಿಯಾಗಿದ್ದು ಇನ್ನಷ್ಟು ಜೀವ ಬಲಿಯಾಗಬೇಕು ? ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪಿಸಿದ್ದಾರೆ. ಯಾದಗಿರಿ : ಬಡ ವಾಹನ ಚಾಲಕರ ನಿರಂತರ ಜೀವ ತೆಗೆಯುತ್ತಿರುವ ಯಾದಗಿರಿ ರಾಯಚೂರು ಹೆದ್ದಾರಿಗೆ ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲ್ನ್ನು ತುರ್ತಾಗಿ ತೆರವುಗೊಳ್ಳಿಸಿ ಇಂದೇ ಆದ ಅನಾವುತಗಳನ್ನು ಇನ್ನು ಮುಂದೇ ಅನಾವುತಗಳನ್ನು ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ ಯಾದಗಿರಿ ತಾಲ್ಲೂಕಿನ ಆರ್.ಹೊಸಳ್ಳಿ ಮತ್ತು ನಾಗಲಾಪುರ ಮಧ್ಯದಲ್ಲಿ ಬರುವ ಯಾದಗಿರಿ ರಾಯಚೂರು ಹೋಗುವ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲ್ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಬೇಟಿ ನೀಡಿ ಪರಿಶೀಲಿಸಿದ ನಂತರ ರೈತರ ಮತ್ತು ವಾಹನ ಸವಾರರ ಜೊತೆ ಚರ್ಚಿಸಿ ನಂತರ ದೀಡಿರ್ನ ಸ್ಥಳದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಈ ಟೋಲ್ನಲ್ಲಿ ವಿದ್ಯುತ್ ಲೈಟ್, ಸ್ಟೀಕರ್ ಸರಿಯಾಗಿ ಅಳವಡಸದೆ ಅವೈಜ್ಞಾನಿಕವಾಗಿ ನಿರ್ಮಿಸಿ ಈ ಟೋಲ್ನಲ್ಲಿ ಈಗಾಗಲೇ ಸಾಕಷ್ಟು ಜೀವಗಳು ಬಲಿಯಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರ ಇಲ್ಲಿವರೆಗೆ ಯಾವುದೇ ಕ್ರಮ ಕೈಗೊಳ್ಳದೇ ದಿವ್ಯ ನಿರ್ಲಕ್ಷವಹಿಸಿರುವುದು ಇದು ನಾಚೀಗೇಡಿನ ಸಂಗತಿ ಎಂದು ದಿನ ನಿತ್ಯ ಈ ರಸ್ತೆಯಲ್ಲಿ ಸಾವಿರಾರೂ ವಾಹನಗಳು ಸಂಚಾರ ಮಾಡುತ್ತಿದ್ದು ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲನ ಕಾರಣ ಬಡವ ಜೀವಗಳು ಬಲಿಯಾಗುತ್ತಿದ್ದು ಸಂಬAಧಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತು ಇನ್ನೆಷ್ಟು ಬಡಜೀವಿಗಳನ್ನು ಬಲಿಪಶು ಮಾಡುತ್ತಿದ್ದಿರಿ ಎಂದು ಕಾರವಾಗಿ ಪ್ರಶ್ನಿಸಿದರು. ತಕ್ಷಣ ಟೋಲ್ನ್ನು ತೆರವುಗೊಳ್ಳಿಸಿ ಮುಂದಾಗುವ ಅವಗಡಗಳನ್ನು ತಪ್ಪಿಸಲು ಸರ್ಕಾರಗಳು ಮುಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಟೋಲ್ ಸ್ಥಳದಲ್ಲೇ ಮುಖ್ಯ ರಸ್ತೆ ತಡೆದ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸರ್ಕಾರಗಳಿಗೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದೇ ಸಂದರ್ಬದಲ್ಲಿ ಮಲ್ಲೇಶಿ, ಪವನ. ತಿಪ್ಣ್ಣ, ಬಸಲಿಂಗಪ್ಪ, ಹಣಮಂತ, ಮರಲಿಂಗಪ್ಪ, ಮಹಾದೇವಪ್ಪ ಮೋನಪ್ಪ ಮಲ್ಲಪ್ಪ ಚಂದ್ರು ಸಿದ್ದು ತಿಮ್ಮಪ್ಪ ಮಲ್ಲಪ್ಪ ಆನಂದ ಭೀಮಪ್ಪ ಮಲ್ಲಪ್ಪ ಸಾಬು ಮಲ್ಲಪ್ಪ ಸೇರಿದಂತೆ ಅನೇಕು ಇದ್ದರು2
- ಮಧ್ಯರಾತ್ರಿ ಬಂದು ರೈತರ ಮನವಿ ಪಡೆದ ಕಲಬುರಗಿ ಜಿಲ್ಲಾಧಿಕಾರಿ, ಎಸ್ಪಿ ರೈತ ಸಂಘಟನೆಗಳು ಕರೆ ನೀಡಿದ್ದ ಹೋರಾಟಕ್ಕೆ ಮಣಿದು ಕಡೆಗೂ ಕಲಬುರಗಿ ಜಿಲ್ಲಾಧಿಕಾರಿಗಳು ಸೇಡಂಗೆ ಮಧ್ಯರಾತ್ರಿ ಭೇಟಿ ನೀಡಿ ಮನವಿ ಪಡೆದಿದ್ದಾರೆ. ಸೇಡಂ ತಾಲೂಕನ್ನು ಬರಗಾಲ ಪಟ್ಟಿಯಿಂದ ಕೈಬಿಟ್ಟಿರುವುದು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು.1
- ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಪರಮೇಶ್ವರ ಬೆನಕಿನಪಳ್ಳಿ ಸಂಗೀತ ಗಾಯಕ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಕಾಳಗಿ(ಇಂಗನಕಲ್) ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಈ ಸಂದರ್ಭದಲ್ಲಿ ಶ್ರೀ ಪೂಜ್ಯ ಗುರುಗಳಾದ ವೀರಭದ್ರಯ್ಯ ಸ್ವಾಮೀಜಿ ಗಾಯಕರು ಸಂಗೀತ ಗಾಯಕ ಪರಮೇಶ್ವರ ಬೆನಕಿನಪಳ್ಳಿ ಪ್ರಸಿದ್ಧ ಡೋಲು ವಾದಕರು ಸಿದ್ದಣ್ಣ ಮಗಿ ಮಲ್ಲಿಕಾರ್ಜುನ ಮಾನಕಾರ ಗಾಯಕ ಶಿವಲಿಂಗಣ್ಣ ಪಾಟೀಲ್ ಶಾಂತಪ್ಪಗೌಡ ಬಿರಾದಾರ ಕಂಠೆಪ್ಪಾ ಬಸವಂತರಾವ ಮಾನಕಾರ ಬಸವರಾಜ ಮಾವನೂರ ಶರಣಪ್ಪಾ ಚಂದ್ರಶೇಖರ ರವೀಂದ್ರ ಹಾಲಕಾಯಿ ಮಲ್ಲಣ್ಣ ಸಂತೋಷ ಬಿರಂಜಗಿ ಹಣಮಂತ ಶರಣು ಮಂಗಲಗಿ ನಾಗಣ್ಣ ಜಗದೇವಪ್ಪ ಬಡಿಗೇರ ಅನೇಕ ಭಕ್ತರು ಸಹಕಾರ ಕೊಟ್ಟು ಸುಗಮವಾಗಿ ಸಂಗೀತ ಜೊತೆಗೆ ಭಜನೆ ನಡೆಸಿಕೊಟ್ಟರು1
- ಯಾದಗಿರಿ ನಾಳೆ ಸೆಪ್ಟೆಂಬರ್ 17 ರಂದು ಸೃಷ್ಟಿಕರ್ತ ಭಗವಾನ್ ವಿಶ್ವಕರ್ಮ ಜಯಂತಿಯ ಶುಭಾಶಯಗಳು ಸನ್ಮಾನ್ಯ ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಇವರ ಶ್ರಮ ದಿಂದ ವಿಶ್ವಕರ್ಮ ಜಯಂತಿಯ ಆಚರಿಸುವಂತೆ ಅದು ಸೆಪ್ಟೆಂಬರ್ 17 ರಂದು ವಿಶ್ವಕರ್ಮರ ಹಬ್ಬ ಅಂತೆ ಮನೆ ಮನೆಯಲ್ಲಿ ವಿಶ್ವಕರ್ಮರು ಭಾವಚಿತ್ರಕ್ಕೆ ಪೂಜ್ಯ ಮಾಡಲು ಸೃಷ್ಟಿಕರ್ತನಾದ ಪ್ರೀತಿ ನಂಜುಂಡಿ ಇವರ ಶ್ರಮ1