YADGIR BREAKING NEWS || ನರಹಂತಕರ ಅಟ್ಟಹಾಸ: ಶಹಾಪುರದಲ್ಲಿ ಅಮಾನವೀಯ ಕೃತ್ಯ, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ! ಶಹಾಪುರ: ಜಿಲ್ಲೆಯಲ್ಲಿ ಮಾನವೀಯತೆ ಮಕಾಡೆ ಮಲಗಿದೆ. ಹೆಣ್ಣುಮಕ್ಕಳ ರಕ್ಷಣೆ ಎಂಬುದು ಕೇವಲ ಮಾತಿಗೆ ಸೀಮಿತವಾಗಿದೆಯೇ ಎನ್ನುವ ಅನುಮಾನ ಮೂಡುವಂತೆ ಶಹಾಪುರ ತಾಲೂಕಿನ ಗ್ರಾಮದಲ್ಲಿ ಪೈಶಾಚಿಕ ಕೃತ್ಯವೊಂದು ಜರುಗಿದೆ. ಹಸುಳೆ ಎಂದು ನೋಡದೆ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ದಾಳಿ ನಡೆಸಿ, ಇಡೀ ಜಿಲ್ಲೆಯೇ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಘಟನೆಯ ಹಿನ್ನೆಲೆ: ನಡುರಾತ್ರಿಯ ನರಕದರ್ಶನ ರವಿವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಬಾಲಕಿ ಬಹಿರ್ದೆಸೆಗೆ ತೆರಳಿದಾಗ, ಕಾದು ಕುಳಿತಿದ್ದ ಕಾಮುಕರು ಆಕೆಯ ಮೇಲೆ ಎರಗಿದ್ದಾರೆ. ಬಾಲಕಿಯ ಮೈಮೇಲಿದ್ದ ಹೊದಿಕೆಯಿಂದಲೇ (ದುಪ್ಪಟ್ಟಾ) ಆಕೆಯ ಕೈಕಾಲುಗಳನ್ನು ಕಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಯಾವುದೋ ವಾಹನ ಬರುವ ಸದ್ದು ಕೇಳಿ ಹೆದರಿದ ಪಾಪಿಗಳು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಕಾಲುವೆ ಪಕ್ಕದಲ್ಲಿ ಎಸೆದು ಪರಾರಿಯಾಗಿದ್ದಾರೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಗ್ರಾಮಸ್ಥರು ಬಾಲಕಿಯನ್ನು ಕಂಡು ಪೋಷಕರಿಗೆ ವಿಷಯ ಮುಟ್ಟಿಸಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಕಿ ಪಡೆ ಭೇಟಿ - ಚಿಕಿತ್ಸೆ ಮುಂದುವರಿಕೆ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃತ್ವಿಕ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿ, ಘಟನೆಯ ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಬಾಲಕಿ ಚೇತರಿಸಿಕೊಳ್ಳುತ್ತಿದ್ದು, ತಂದೆ ನೀಡಿದ ದೂರಿನ ಮೇರೆಗೆ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ‘ಮೌನ’ಕ್ಕೆ ಆಕ್ರೋಶ ಇಂತಹ ಗಂಭೀರ ಘಟನೆ ನಡೆದಿದ್ದರೂ ಇಡೀ ದಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕಣ್ಣೆತ್ತಿ ನೋಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇಲಾಖೆಯ ಈ ನಿರ್ಲಕ್ಷ್ಯ ಧೋರಣೆಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, "ಅಧಿಕಾರಿಗಳು ಏತಕ್ಕಾಗಿ ಇದ್ದಾರೆ?" ಎಂಬ ಪ್ರಶ್ನೆ ಮೂಡಿದೆ. ಪೊಲೀಸ್ ಇನ್ಸ್ಪೆಕ್ಟರ್ ಹೇಳಿಕೆ: "ಬಾಲಕಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಈಗಾಗಲೇ ಬಾಲಕಿಯ ಹೇಳಿಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದೇವೆ. ತಪ್ಪಿತಸ್ಥರನ್ನು ಪತ್ತೆಹಚ್ಚಲು ತನಿಖೆ ಚುರುಕುಗೊಳಿಸಲಾಗಿದೆ." — ಎಸ್. ಎಂ ಪಾಟೀಲ್, ಪಿಐ ಶಹಾಪುರ ಯುವ ಮುಖಂಡರ ಆಕ್ರೋಶ: "ಜಿಲ್ಲೆಯಲ್ಲಿ ಸ್ತ್ರೀಪೀಡಕರ ಅಟ್ಟಹಾಸ ಮಿತಿಮೀರಿದೆ. ಸರಣಿ ಪ್ರಕರಣಗಳು ನಡೆಯುತ್ತಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಈ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಆಗಲೇ ಸಮಾಜಕ್ಕೆ ಎಚ್ಚರಿಕೆ ರವಾನೆಯಾಗಲು ಸಾಧ್ಯ." — ರಾಯಪ್ಪ ಚಲುವಾದಿ, ಯುವ ಮುಖಂಡರು ತನಿಖೆ ಮುಂದುವರಿದಿದೆ... ಕಾಮುಕರ ಬೇಟೆಗೆ ಪೊಲೀಸರು ಬಲೆ ಬೀಸಿದ್ದಾರೆ. YADGIR BREAKING NEWS || ನರಹಂತಕರ ಅಟ್ಟಹಾಸ: ಶಹಾಪುರದಲ್ಲಿ ಅಮಾನವೀಯ ಕೃತ್ಯ, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ! ಶಹಾಪುರ: ಜಿಲ್ಲೆಯಲ್ಲಿ ಮಾನವೀಯತೆ ಮಕಾಡೆ ಮಲಗಿದೆ. ಹೆಣ್ಣುಮಕ್ಕಳ ರಕ್ಷಣೆ ಎಂಬುದು ಕೇವಲ ಮಾತಿಗೆ ಸೀಮಿತವಾಗಿದೆಯೇ ಎನ್ನುವ ಅನುಮಾನ ಮೂಡುವಂತೆ ಶಹಾಪುರ ತಾಲೂಕಿನ ಗ್ರಾಮದಲ್ಲಿ ಪೈಶಾಚಿಕ ಕೃತ್ಯವೊಂದು ಜರುಗಿದೆ. ಹಸುಳೆ ಎಂದು ನೋಡದೆ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ದಾಳಿ ನಡೆಸಿ, ಇಡೀ ಜಿಲ್ಲೆಯೇ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಘಟನೆಯ ಹಿನ್ನೆಲೆ: ನಡುರಾತ್ರಿಯ ನರಕದರ್ಶನ ರವಿವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಬಾಲಕಿ ಬಹಿರ್ದೆಸೆಗೆ ತೆರಳಿದಾಗ, ಕಾದು ಕುಳಿತಿದ್ದ ಕಾಮುಕರು ಆಕೆಯ ಮೇಲೆ ಎರಗಿದ್ದಾರೆ. ಬಾಲಕಿಯ ಮೈಮೇಲಿದ್ದ ಹೊದಿಕೆಯಿಂದಲೇ (ದುಪ್ಪಟ್ಟಾ) ಆಕೆಯ ಕೈಕಾಲುಗಳನ್ನು ಕಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಯಾವುದೋ ವಾಹನ ಬರುವ ಸದ್ದು ಕೇಳಿ ಹೆದರಿದ ಪಾಪಿಗಳು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಕಾಲುವೆ ಪಕ್ಕದಲ್ಲಿ ಎಸೆದು ಪರಾರಿಯಾಗಿದ್ದಾರೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಗ್ರಾಮಸ್ಥರು ಬಾಲಕಿಯನ್ನು ಕಂಡು ಪೋಷಕರಿಗೆ ವಿಷಯ ಮುಟ್ಟಿಸಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಕಿ ಪಡೆ ಭೇಟಿ - ಚಿಕಿತ್ಸೆ ಮುಂದುವರಿಕೆ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃತ್ವಿಕ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿ, ಘಟನೆಯ ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಬಾಲಕಿ ಚೇತರಿಸಿಕೊಳ್ಳುತ್ತಿದ್ದು, ತಂದೆ ನೀಡಿದ ದೂರಿನ ಮೇರೆಗೆ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ‘ಮೌನ’ಕ್ಕೆ ಆಕ್ರೋಶ ಇಂತಹ ಗಂಭೀರ ಘಟನೆ ನಡೆದಿದ್ದರೂ ಇಡೀ ದಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕಣ್ಣೆತ್ತಿ ನೋಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇಲಾಖೆಯ ಈ ನಿರ್ಲಕ್ಷ್ಯ ಧೋರಣೆಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, "ಅಧಿಕಾರಿಗಳು ಏತಕ್ಕಾಗಿ ಇದ್ದಾರೆ?" ಎಂಬ ಪ್ರಶ್ನೆ ಮೂಡಿದೆ. ಪೊಲೀಸ್ ಇನ್ಸ್ಪೆಕ್ಟರ್ ಹೇಳಿಕೆ: "ಬಾಲಕಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಈಗಾಗಲೇ ಬಾಲಕಿಯ ಹೇಳಿಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದೇವೆ. ತಪ್ಪಿತಸ್ಥರನ್ನು ಪತ್ತೆಹಚ್ಚಲು ತನಿಖೆ ಚುರುಕುಗೊಳಿಸಲಾಗಿದೆ." — ಎಸ್. ಎಂ ಪಾಟೀಲ್, ಪಿಐ ಶಹಾಪುರ ಯುವ ಮುಖಂಡರ ಆಕ್ರೋಶ: "ಜಿಲ್ಲೆಯಲ್ಲಿ ಸ್ತ್ರೀಪೀಡಕರ ಅಟ್ಟಹಾಸ ಮಿತಿಮೀರಿದೆ. ಸರಣಿ ಪ್ರಕರಣಗಳು ನಡೆಯುತ್ತಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಈ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಆಗಲೇ ಸಮಾಜಕ್ಕೆ ಎಚ್ಚರಿಕೆ ರವಾನೆಯಾಗಲು ಸಾಧ್ಯ." — ರಾಯಪ್ಪ ಚಲುವಾದಿ, ಯುವ ಮುಖಂಡರು ತನಿಖೆ ಮುಂದುವರಿದಿದೆ... ಕಾಮುಕರ ಬೇಟೆಗೆ ಪೊಲೀಸರು ಬಲೆ ಬೀಸಿದ್ದಾರೆ.
YADGIR BREAKING NEWS || ನರಹಂತಕರ ಅಟ್ಟಹಾಸ: ಶಹಾಪುರದಲ್ಲಿ ಅಮಾನವೀಯ ಕೃತ್ಯ, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ! ಶಹಾಪುರ: ಜಿಲ್ಲೆಯಲ್ಲಿ ಮಾನವೀಯತೆ ಮಕಾಡೆ ಮಲಗಿದೆ. ಹೆಣ್ಣುಮಕ್ಕಳ ರಕ್ಷಣೆ ಎಂಬುದು ಕೇವಲ ಮಾತಿಗೆ ಸೀಮಿತವಾಗಿದೆಯೇ ಎನ್ನುವ ಅನುಮಾನ ಮೂಡುವಂತೆ ಶಹಾಪುರ ತಾಲೂಕಿನ ಗ್ರಾಮದಲ್ಲಿ ಪೈಶಾಚಿಕ ಕೃತ್ಯವೊಂದು ಜರುಗಿದೆ. ಹಸುಳೆ ಎಂದು ನೋಡದೆ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ದಾಳಿ ನಡೆಸಿ, ಇಡೀ ಜಿಲ್ಲೆಯೇ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಘಟನೆಯ ಹಿನ್ನೆಲೆ: ನಡುರಾತ್ರಿಯ ನರಕದರ್ಶನ ರವಿವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಬಾಲಕಿ ಬಹಿರ್ದೆಸೆಗೆ ತೆರಳಿದಾಗ, ಕಾದು ಕುಳಿತಿದ್ದ ಕಾಮುಕರು ಆಕೆಯ ಮೇಲೆ ಎರಗಿದ್ದಾರೆ. ಬಾಲಕಿಯ ಮೈಮೇಲಿದ್ದ ಹೊದಿಕೆಯಿಂದಲೇ (ದುಪ್ಪಟ್ಟಾ) ಆಕೆಯ ಕೈಕಾಲುಗಳನ್ನು ಕಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಯಾವುದೋ ವಾಹನ ಬರುವ ಸದ್ದು ಕೇಳಿ ಹೆದರಿದ ಪಾಪಿಗಳು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಕಾಲುವೆ ಪಕ್ಕದಲ್ಲಿ ಎಸೆದು ಪರಾರಿಯಾಗಿದ್ದಾರೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಗ್ರಾಮಸ್ಥರು ಬಾಲಕಿಯನ್ನು ಕಂಡು ಪೋಷಕರಿಗೆ ವಿಷಯ ಮುಟ್ಟಿಸಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಕಿ ಪಡೆ ಭೇಟಿ - ಚಿಕಿತ್ಸೆ ಮುಂದುವರಿಕೆ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃತ್ವಿಕ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿ, ಘಟನೆಯ ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಬಾಲಕಿ ಚೇತರಿಸಿಕೊಳ್ಳುತ್ತಿದ್ದು, ತಂದೆ ನೀಡಿದ ದೂರಿನ ಮೇರೆಗೆ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ‘ಮೌನ’ಕ್ಕೆ ಆಕ್ರೋಶ ಇಂತಹ ಗಂಭೀರ ಘಟನೆ ನಡೆದಿದ್ದರೂ ಇಡೀ ದಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕಣ್ಣೆತ್ತಿ ನೋಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇಲಾಖೆಯ ಈ ನಿರ್ಲಕ್ಷ್ಯ ಧೋರಣೆಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, "ಅಧಿಕಾರಿಗಳು ಏತಕ್ಕಾಗಿ ಇದ್ದಾರೆ?" ಎಂಬ ಪ್ರಶ್ನೆ ಮೂಡಿದೆ. ಪೊಲೀಸ್ ಇನ್ಸ್ಪೆಕ್ಟರ್ ಹೇಳಿಕೆ: "ಬಾಲಕಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಈಗಾಗಲೇ ಬಾಲಕಿಯ ಹೇಳಿಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದೇವೆ. ತಪ್ಪಿತಸ್ಥರನ್ನು ಪತ್ತೆಹಚ್ಚಲು ತನಿಖೆ ಚುರುಕುಗೊಳಿಸಲಾಗಿದೆ." — ಎಸ್. ಎಂ ಪಾಟೀಲ್, ಪಿಐ ಶಹಾಪುರ ಯುವ ಮುಖಂಡರ ಆಕ್ರೋಶ: "ಜಿಲ್ಲೆಯಲ್ಲಿ ಸ್ತ್ರೀಪೀಡಕರ ಅಟ್ಟಹಾಸ ಮಿತಿಮೀರಿದೆ. ಸರಣಿ ಪ್ರಕರಣಗಳು ನಡೆಯುತ್ತಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಈ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಆಗಲೇ ಸಮಾಜಕ್ಕೆ ಎಚ್ಚರಿಕೆ ರವಾನೆಯಾಗಲು ಸಾಧ್ಯ." — ರಾಯಪ್ಪ ಚಲುವಾದಿ, ಯುವ ಮುಖಂಡರು ತನಿಖೆ ಮುಂದುವರಿದಿದೆ... ಕಾಮುಕರ ಬೇಟೆಗೆ ಪೊಲೀಸರು ಬಲೆ ಬೀಸಿದ್ದಾರೆ. YADGIR BREAKING NEWS || ನರಹಂತಕರ ಅಟ್ಟಹಾಸ: ಶಹಾಪುರದಲ್ಲಿ ಅಮಾನವೀಯ ಕೃತ್ಯ, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ! ಶಹಾಪುರ: ಜಿಲ್ಲೆಯಲ್ಲಿ ಮಾನವೀಯತೆ ಮಕಾಡೆ ಮಲಗಿದೆ. ಹೆಣ್ಣುಮಕ್ಕಳ ರಕ್ಷಣೆ ಎಂಬುದು ಕೇವಲ ಮಾತಿಗೆ ಸೀಮಿತವಾಗಿದೆಯೇ ಎನ್ನುವ ಅನುಮಾನ ಮೂಡುವಂತೆ ಶಹಾಪುರ ತಾಲೂಕಿನ ಗ್ರಾಮದಲ್ಲಿ ಪೈಶಾಚಿಕ ಕೃತ್ಯವೊಂದು ಜರುಗಿದೆ. ಹಸುಳೆ ಎಂದು ನೋಡದೆ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ದಾಳಿ ನಡೆಸಿ, ಇಡೀ ಜಿಲ್ಲೆಯೇ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಘಟನೆಯ ಹಿನ್ನೆಲೆ: ನಡುರಾತ್ರಿಯ ನರಕದರ್ಶನ ರವಿವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಬಾಲಕಿ ಬಹಿರ್ದೆಸೆಗೆ ತೆರಳಿದಾಗ, ಕಾದು ಕುಳಿತಿದ್ದ ಕಾಮುಕರು ಆಕೆಯ ಮೇಲೆ ಎರಗಿದ್ದಾರೆ. ಬಾಲಕಿಯ ಮೈಮೇಲಿದ್ದ ಹೊದಿಕೆಯಿಂದಲೇ (ದುಪ್ಪಟ್ಟಾ) ಆಕೆಯ ಕೈಕಾಲುಗಳನ್ನು ಕಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಯಾವುದೋ ವಾಹನ ಬರುವ ಸದ್ದು ಕೇಳಿ ಹೆದರಿದ ಪಾಪಿಗಳು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಕಾಲುವೆ ಪಕ್ಕದಲ್ಲಿ ಎಸೆದು ಪರಾರಿಯಾಗಿದ್ದಾರೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಗ್ರಾಮಸ್ಥರು ಬಾಲಕಿಯನ್ನು ಕಂಡು ಪೋಷಕರಿಗೆ ವಿಷಯ ಮುಟ್ಟಿಸಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಕಿ ಪಡೆ ಭೇಟಿ - ಚಿಕಿತ್ಸೆ ಮುಂದುವರಿಕೆ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃತ್ವಿಕ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿ, ಘಟನೆಯ ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಬಾಲಕಿ ಚೇತರಿಸಿಕೊಳ್ಳುತ್ತಿದ್ದು, ತಂದೆ ನೀಡಿದ ದೂರಿನ ಮೇರೆಗೆ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ‘ಮೌನ’ಕ್ಕೆ ಆಕ್ರೋಶ ಇಂತಹ ಗಂಭೀರ ಘಟನೆ ನಡೆದಿದ್ದರೂ ಇಡೀ ದಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕಣ್ಣೆತ್ತಿ ನೋಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇಲಾಖೆಯ ಈ ನಿರ್ಲಕ್ಷ್ಯ ಧೋರಣೆಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, "ಅಧಿಕಾರಿಗಳು ಏತಕ್ಕಾಗಿ ಇದ್ದಾರೆ?" ಎಂಬ ಪ್ರಶ್ನೆ ಮೂಡಿದೆ. ಪೊಲೀಸ್ ಇನ್ಸ್ಪೆಕ್ಟರ್ ಹೇಳಿಕೆ: "ಬಾಲಕಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಈಗಾಗಲೇ ಬಾಲಕಿಯ ಹೇಳಿಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದೇವೆ. ತಪ್ಪಿತಸ್ಥರನ್ನು ಪತ್ತೆಹಚ್ಚಲು ತನಿಖೆ ಚುರುಕುಗೊಳಿಸಲಾಗಿದೆ." — ಎಸ್. ಎಂ ಪಾಟೀಲ್, ಪಿಐ ಶಹಾಪುರ ಯುವ ಮುಖಂಡರ ಆಕ್ರೋಶ: "ಜಿಲ್ಲೆಯಲ್ಲಿ ಸ್ತ್ರೀಪೀಡಕರ ಅಟ್ಟಹಾಸ ಮಿತಿಮೀರಿದೆ. ಸರಣಿ ಪ್ರಕರಣಗಳು ನಡೆಯುತ್ತಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಈ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಆಗಲೇ ಸಮಾಜಕ್ಕೆ ಎಚ್ಚರಿಕೆ ರವಾನೆಯಾಗಲು ಸಾಧ್ಯ." — ರಾಯಪ್ಪ ಚಲುವಾದಿ, ಯುವ ಮುಖಂಡರು ತನಿಖೆ ಮುಂದುವರಿದಿದೆ... ಕಾಮುಕರ ಬೇಟೆಗೆ ಪೊಲೀಸರು ಬಲೆ ಬೀಸಿದ್ದಾರೆ.
- ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಇಂದು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.1
- ಸಮಾನತೆಯ ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು, ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಬೇಕೆಂದು ರಾಯಚೂರು ನಗರದ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು. ಸೋಮವಾರ 11 ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದವರು ಒಗ್ಗಟಾಗಿ ಸಮಾಜದ ಏಳಿಗೆ ಶ್ರಮಿಸಬೇಕು. ಸಮಸ್ಯೆಗಳು ಇದ್ದಲ್ಲಿ ಯಾವುದೇ ಸರ್ಕಾರ ಇರಲಿ. ಹೋರಾಟ ಮಾಡಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.1
- Post by Kalyan karanataka news channel1
- 24 ಗಂಟೆಯಲ್ಲಿ ಹ್ಯಾಂಡ್ ಪಂಪ್ ನಿರ್ಮಾಣ ಮಾಡಿದ ಗ್ರಾಮ ಪಂಚಾಯತಿಯ ಪಿಡಿಯೋ ಅನುಸೂಯ ಆಸ್ಟಗಿ. #NewsUpdate #kalaburagi #afzalpur #video #karnataka #priyanka #ಗ್ರಾಮಪಂಚಾತಿ. Arunkumar M Y Patil ವಿಠ್ಠಲ ಹೇರೂರ ಯುವ ಬ್ರಿಗೇಡ್ Shivakumar Natikar Nitin Guttedar Followers Hosur ನವ ಕರ್ನಾಟಕ ನ್ಯೂಸ್ /Nava Karnataka News Priyank Kharge NewsFirst Kannada.1
- ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಇನ್ಸ್ಪೆಕ್ಟರ್ ಕಣ್ಣೀರು1
- ಆರೋಗ್ಯ ಸಚಿವರೇ ನಿಮ್ಮ ಹಾಸ್ಪಿಟಲ್ ಗತಿ ನೋಡಿ ಬಡವರ ಪರವಾಗಿ ಹಾಸ್ಪಿಟಲಲ್ಲಿ ಎಲ್ಲಾ ಮೆಡಿಸಿನ್ ಕಳಿಸ್ತೀನಿ ಅಂತ ಹೇಳುತ್ತಿದ್ದೀರಲ್ಲ ನೋಡಿ ಆ ನರ್ಸಿಬ್ಬಂದಿ ಹೇಳುತ್ತಾಳೆ ಏಳು ದಿವಸ ಟೈಮ್ ಇದೆ ಬಿಟ್ಟು ಬಂದು ಮಾಡಿಸಿಕೊಳ್ಳಿ ಅದರ ಮೆಡಿಸನ್ ಕಾಲಿಯಾಗಿವೆ. ಸರಿ ಏಳು ದಿನದಲ್ಲಿ ಏನಾದರೂ ಹೆಚ್ಚು ಕಡಿಮೆಯಾದರೆ ಜವಾಬ್ದಾರು ಯಾರು ಸಿಬ್ಬಂದಿಯ ಹೊಣೆಗಾರು.1
- ಸಿಡಿಲು ಅಪ್ಪಳಿಸಿ ಮರಕ್ಕೆ ಬೆಂಕಿ: ಚಿತ್ತಾಪುರದಲ್ಲಿ ವಿಚಿತ್ರ ಘಟನೆ ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವ್ಯಾಪಿಯಲ್ಲಿ ಭಾನುವಾರ ಸಂಜೆ ಗುಡುಗು-ಮಿಂಚು ಸಹಿತ ಮಳೆಯ ವೇಳೆ ಅಚ್ಚರಿಯ ಘಟನೆ ಸಂಭವಿಸಿದೆ. ಟೆಂಗಳಿ ಕ್ರಾಸ್ ಸಮೀಪ, ಕಲಬುರಗಿ–ಸೇಡಂ ರಾಜ್ಯ ಹೆದ್ದಾರಿ ಬಳಿ ನಿಂತಿದ್ದ ಒಣಗಿದ ಮರವೊಂದಕ್ಕೆ ಸಿಡಿಲು ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಸಿಡಿಲಿನ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ, ಇಡೀ ಮರ ಸುಟ್ಟು ಕರಕಲಾಗಿದೆ. ಮಳೆಯ ನಡುವೆಯೇ ಉರಿಯುತ್ತಿರುವ ಮರದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಘಟನೆ ಸ್ಥಳದಲ್ಲಿ ಕೆಲಕಾಲ ಕುತೂಹಲಕರ ವಾತಾವರಣ ನಿರ್ಮಾಣವಾಗಿದ್ದು, ಜನರು ಬೆಂಕಿಗಾಹುತಿಯಾದ ಮರದ ದೃಶ್ಯವನ್ನು ಗಮನಿಸಿದರು. #ಕಲಬುರಗಿ #ಸಿಡಿಲು #ಬೆಂಕಿ #kalaburagi #sidilu #Yadgirnews1
- ರಾಯಚೂರಿನಲ್ಲಿ ಬಸವ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿತು. ಸೋಮವಾರಪೇಟೆ ಹಿರೇಮಠದ ಅಭಿನವ ರಾಜೋಟಿ ವೀರ ಶಿವಾಚಾರ್ಯ ಮಹಾಸ್ವಾಮಿಗಳು, ಇಲ್ಲಿ ಬೃಹನ್ ಮಠದ ಶಾಂತ ಮಲ್ಲ ಶಿವಾಚಾರ್ಯರು ಹಾಗೂ ಸಚಿವ ಎನ್.ಎಸ್. ಬೋಸರಾಜು ಸೇರಿದಂತೆ ಗಣ್ಯರು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜಿಲ್ಲಾಧಿಕಾರಿ ನಿತೀಶ್ ಕೆ., ಎಸ್ಪಿ ಅರುಣಾಂಗ್ಷು ಗಿರಿ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.1
- ಮೇಲಧಿಕಾರಿಗಳಿಂದ ಕಿರುಕುಳ ಆರೋಪ: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಇನ್ಸ್ಪೆಕ್ಟರ್ ಕಣ್ಣೀರು ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಲಧಿಕಾರಿಗಳ ಕಿರುಕುಳದ ಆರೋಪ ಮತ್ತೆ ಮುನ್ನಲೆಗೆ ಬಂದಿದೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ಪಶ್ಚಿಮ ವಲಯದ ಇನ್ಸ್ಪೆಕ್ಟರ್ ಶ್ರೀನಿವಾಸ್ ಅವರು ತಮ್ಮ ಮೇಲಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿ ಕಣ್ಣೀರು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಘಟನೆಯ ಹಿನ್ನೆಲೆ: ಇನ್ಸ್ಪೆಕ್ಟರ್ ಶ್ರೀನಿವಾಸ್ ಅವರು ತಮಗೆ ಎಸ್ಪಿ ಕರಿಬಸವನಗೌಡ ಮತ್ತು ಡಿವೈಎಸ್ಪಿ ಮಹೇಶ್ ಗೌಡರ್ ಅವರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯದಿಂದ ತಮ್ಮನ್ನು ಗುರಿಯಾಗಿಸಿಕೊಂಡು ಶಿಸ್ತು ಕ್ರಮದ ಹೆಸರಿನಲ್ಲಿ ಹಿಂಸೆ ನೀಡಲಾಗುತ್ತಿದೆ ಮತ್ತು ಜಾತಿ ಆಧಾರಿತ ತಾರತಮ್ಯ ಎಸಗಲಾಗುತ್ತಿದೆ ಎಂದು ಅವರು ವಿಡಿಯೋದಲ್ಲಿ ಅಳಲು ತೋಡಿಕೊಂಡಿದ್ದಾರೆ. ಪ್ರಮುಖ ಆರೋಪಗಳು: ಮಾನಸಿಕ ಹಿಂಸೆ: ಕರ್ತವ್ಯದ ಅವಧಿಯಲ್ಲಿ ಅನಗತ್ಯವಾಗಿ ಒತ್ತಡ ಹೇರುವುದು ಮತ್ತು ಸಣ್ಣಪುಟ್ಟ ಕಾರಣಗಳಿಗೆ ನೋಟಿಸ್ ನೀಡುವುದು. ತಾರತಮ್ಯ: ಕಚೇರಿಯಲ್ಲಿ ಗೌರವಯುತವಾಗಿ ನಡೆಸಿಕೊಳ್ಳದೆ, ಕೆಳಹಂತದ ಸಿಬ್ಬಂದಿಯ ಮುಂದೆ ಅವಮಾನಿಸುವುದು. ದೂರು ಸಲ್ಲಿಕೆ: ಈ ಕಿರುಕುಳ ತಾಳಲಾರದೆ ಶ್ರೀನಿವಾಸ್ ಅವರು ಈಗಾಗಲೇ ಡಿಜಿ ಮತ್ತು ಐಜಿಪಿ ಎಂ.ಎ. ಸಲೀಂ ಹಾಗೂ ಡಿಜಿ ಉಮೇಶ್ ಕುಮಾರ್ ಅವರಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ಇಲಾಖೆಯ ಪ್ರತಿಕ್ರಿಯೆ: ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತಿರುವ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು, ಘಟನೆಯ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಡಿಸಿಆರ್ಇ (DCRE) ವಿಭಾಗದಲ್ಲಿ ಅಧಿಕಾರಿಗಳ ನಡುವಿನ ಶೀತಲ ಸಮರ ಬೀದಿಗೆ ಬರುತ್ತಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ತಮ್ಮ ಪ್ರಾಮಾಣಿಕ ಸೇವೆಗೆ ಬೆಲೆ ಇಲ್ಲದಂತಾಗಿದೆ ಎಂದು ಇನ್ಸ್ಪೆಕ್ಟರ್ ಶ್ರೀನಿವಾಸ್ ಅವರು ನೋವು ವ್ಯಕ್ತಪಡಿಸಿದ್ದು, ಸರ್ಕಾರ ಮತ್ತು ಇಲಾಖೆ ತಮಗೆ ನ್ಯಾಯ ಒದಗಿಸಬೇಕೆಂದು ವಿನಂತಿಸಿದ್ದಾರೆ.1