logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿ ಪಂಚಾಯತಿ ವ್ಯಾಪ್ತಿಗೆ ಬರುವ ಚಿಲುಗೋಡು ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದುರಾಗಿದೆ. ಗ್ರಾಮದ ಚರಂಡಿಗಳನ್ನು ಸುಮಾರು ಒಂದು ವರ್ಷದಿಂದ ಸ್ವಚ್ಛಗೊಳಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಇದೇ ರೀತಿ, ಚಿಲುಗೋಡಿನಲ್ಲಿರುವ ಬೀದಿ ಕಂಬಗಳಿಗೆ ಇದುವರೆಗೂ ದೀಪಗಳನ್ನು ಅಳವಡಿಸಿಲ್ಲ. ಈ ಸಮಸ್ಯೆಗಳ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

4 hrs ago
user_K Santosha Ks
K Santosha Ks
ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
4 hrs ago

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿ ಪಂಚಾಯತಿ ವ್ಯಾಪ್ತಿಗೆ ಬರುವ ಚಿಲುಗೋಡು ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದುರಾಗಿದೆ. ಗ್ರಾಮದ ಚರಂಡಿಗಳನ್ನು ಸುಮಾರು ಒಂದು ವರ್ಷದಿಂದ ಸ್ವಚ್ಛಗೊಳಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಇದೇ ರೀತಿ, ಚಿಲುಗೋಡಿನಲ್ಲಿರುವ ಬೀದಿ ಕಂಬಗಳಿಗೆ ಇದುವರೆಗೂ ದೀಪಗಳನ್ನು ಅಳವಡಿಸಿಲ್ಲ. ಈ ಸಮಸ್ಯೆಗಳ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

More news from ಕರ್ನಾಟಕ and nearby areas
  • ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿ ಪಂಚಾಯತಿ ವ್ಯಾಪ್ತಿಗೆ ಬರುವ ಚಿಲುಗೋಡು ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದುರಾಗಿದೆ. ಗ್ರಾಮದ ಚರಂಡಿಗಳನ್ನು ಸುಮಾರು ಒಂದು ವರ್ಷದಿಂದ ಸ್ವಚ್ಛಗೊಳಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಇದೇ ರೀತಿ, ಚಿಲುಗೋಡಿನಲ್ಲಿರುವ ಬೀದಿ ಕಂಬಗಳಿಗೆ ಇದುವರೆಗೂ ದೀಪಗಳನ್ನು ಅಳವಡಿಸಿಲ್ಲ. ಈ ಸಮಸ್ಯೆಗಳ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    4
    ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿ ಪಂಚಾಯತಿ ವ್ಯಾಪ್ತಿಗೆ ಬರುವ ಚಿಲುಗೋಡು ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದುರಾಗಿದೆ. ಗ್ರಾಮದ ಚರಂಡಿಗಳನ್ನು ಸುಮಾರು ಒಂದು ವರ್ಷದಿಂದ ಸ್ವಚ್ಛಗೊಳಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಇದೇ ರೀತಿ, ಚಿಲುಗೋಡಿನಲ್ಲಿರುವ ಬೀದಿ ಕಂಬಗಳಿಗೆ ಇದುವರೆಗೂ ದೀಪಗಳನ್ನು ಅಳವಡಿಸಿಲ್ಲ. ಈ ಸಮಸ್ಯೆಗಳ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    user_K Santosha Ks
    K Santosha Ks
    ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
    4 hrs ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಡಾ. ಅಂಬೇಡ್ಕರ್ ಭವನದಲ್ಲಿ ಜೂನ್ 22ರಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರ-96ರ ಕೂಡ್ಲಿಗಿ ಹಾಗೂ ಕಾನಹೊಸಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ನೇತೃತ್ವದಲ್ಲಿ ಮತದಾರರ ತೀವ್ರ ವಿಶೇಷ ಪರಿಷ್ಕರಣೆ ಕುರಿತು ಜಾಗೃತಿ ಮತ್ತು ತರಬೇತಿ ಕಾರ್ಯಾಗಾರ ಜರುಗಿತು. ಈ ಕಾರ್ಯಾಗಾರದಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರು ಭಾಗವಹಿಸಿ, ಮತಗಟ್ಟೆ ಏಜೆಂಟರು (BLA-2) ಮತ್ತು ಕ್ಷೇತ್ರದ ಪಕ್ಷದ ಮುಖಂಡರಿಗೆ ಮಾರ್ಗದರ್ಶನ ನೀಡಿದರು. ಈ ವೇಳೆ ಮಾತನಾಡಿದ ಶಾಸಕರು, ಮತದಾರರ ಪಟ್ಟಿ ಪರಿಷ್ಕರಣೆಯ ಮಹತ್ವ, BLA-2 ಏಜೆಂಟರ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವವನ್ನು ಬಲಪಡಿಸುವ ಕುರಿತು ಸವಿವರವಾಗಿ ತಿಳಿಸಿದರು. ಒಂದೇ ಒಂದು ಮತವೂ ಕೈತಪ್ಪದಂತೆ, ಪ್ರತಿ ಮತದಾರರ ಹೆಸರನ್ನು ಪಟ್ಟಿಯಲ್ಲಿ ಸೇರಿಸುವ ಸಂಕಲ್ಪ ಹೊಂದಬೇಕಿದೆ ಎಂದು ಎಲ್ಲಾ BLA-2 ಏಜೆಂಟರಿಗೆ ಕರೆ ನೀಡಿದ ಅವರು, ಪ್ರತಿ ಮತವೂ ಅತ್ಯಮೂಲ್ಯವಾದದ್ದು ಎಂದು ಒತ್ತಿ ಹೇಳಿದರು. ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರರ ಪಟ್ಟಿಯಾಗಿದೆ ಮತ್ತು ಒಂದೇ ಒಂದು ಮತದಾರನ ಹೆಸರು ಕೈತಪ್ಪಿದರೂ ಅದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹವಾಗುತ್ತದೆ ಎಂದು ವಿವರಿಸಿದರು. BLA-2 ಏಜೆಂಟರಾಗಿ ಮಾಡುವ ಕೆಲಸವು ನೇರವಾಗಿ ರಾಜಕೀಯದ ಭವಿಷ್ಯವನ್ನು ನಿರ್ಧರಿಸುತ್ತದೆ. ಆದ್ದರಿಂದ, ಪ್ರತಿ ಮನೆ, ಪ್ರತಿ ಬೂತ್‌ನಲ್ಲಿ ಪರಿಶೀಲನೆ ನಡೆಸಿ, ಒಂದೇ ಒಂದು ಮತವೂ ಕೈತಪ್ಪದಂತೆ ಮತದಾರರ ಪರಿಷ್ಕರಣೆಗೆ ಆದ್ಯತೆ ನೀಡಬೇಕು. ಈ ಮೂಲಕ ಭಾರತ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಮಹತ್ವದ ಕಾರ್ಯವನ್ನು ಮಾಡಬೇಕು ಎಂದು ಶಾಸಕರು ಕರೆ ನೀಡಿದರು. ಜನಪರ ಜಾಗೃತಿಯೇ ಪ್ರಜಾಪ್ರಭುತ್ವದ ರಕ್ಷಣೆಯಾಗಿದ್ದು, ಯಾರಿಗೂ ಮತದಾರರ ಹಕ್ಕು ಕೈತಪ್ಪದಂತೆ ಜಾಗ್ರತೆ ವಹಿಸಬೇಕಿದೆ ಎಂದು ಅವರು ಹೇಳಿದರು. ಈ ಕಾರ್ಯಾಗಾರದಲ್ಲಿ ಕ್ಷೇತ್ರದ ಎಲ್ಲಾ BLA-2, ಪಕ್ಷದ ಏಜೆಂಟರು, ಮುಖಂಡರು, ಹಿರಿಯರು ಮತ್ತು ನಾಗರಿಕರು ಭಾಗವಹಿಸಿದ್ದರು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಡಾ. ಅಂಬೇಡ್ಕರ್ ಭವನದಲ್ಲಿ ಜೂನ್ 22ರಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರ-96ರ ಕೂಡ್ಲಿಗಿ ಹಾಗೂ ಕಾನಹೊಸಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ನೇತೃತ್ವದಲ್ಲಿ ಮತದಾರರ ತೀವ್ರ ವಿಶೇಷ ಪರಿಷ್ಕರಣೆ ಕುರಿತು ಜಾಗೃತಿ ಮತ್ತು ತರಬೇತಿ ಕಾರ್ಯಾಗಾರ ಜರುಗಿತು. ಈ ಕಾರ್ಯಾಗಾರದಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರು ಭಾಗವಹಿಸಿ, ಮತಗಟ್ಟೆ ಏಜೆಂಟರು (BLA-2) ಮತ್ತು ಕ್ಷೇತ್ರದ ಪಕ್ಷದ ಮುಖಂಡರಿಗೆ ಮಾರ್ಗದರ್ಶನ ನೀಡಿದರು.

ಈ ವೇಳೆ ಮಾತನಾಡಿದ ಶಾಸಕರು, ಮತದಾರರ ಪಟ್ಟಿ ಪರಿಷ್ಕರಣೆಯ ಮಹತ್ವ, BLA-2 ಏಜೆಂಟರ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವವನ್ನು ಬಲಪಡಿಸುವ ಕುರಿತು ಸವಿವರವಾಗಿ ತಿಳಿಸಿದರು. ಒಂದೇ ಒಂದು ಮತವೂ ಕೈತಪ್ಪದಂತೆ, ಪ್ರತಿ ಮತದಾರರ ಹೆಸರನ್ನು ಪಟ್ಟಿಯಲ್ಲಿ ಸೇರಿಸುವ ಸಂಕಲ್ಪ ಹೊಂದಬೇಕಿದೆ ಎಂದು ಎಲ್ಲಾ BLA-2 ಏಜೆಂಟರಿಗೆ ಕರೆ ನೀಡಿದ ಅವರು, ಪ್ರತಿ ಮತವೂ ಅತ್ಯಮೂಲ್ಯವಾದದ್ದು ಎಂದು ಒತ್ತಿ ಹೇಳಿದರು. ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರರ ಪಟ್ಟಿಯಾಗಿದೆ ಮತ್ತು ಒಂದೇ ಒಂದು ಮತದಾರನ ಹೆಸರು ಕೈತಪ್ಪಿದರೂ ಅದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹವಾಗುತ್ತದೆ ಎಂದು ವಿವರಿಸಿದರು.

BLA-2 ಏಜೆಂಟರಾಗಿ ಮಾಡುವ ಕೆಲಸವು ನೇರವಾಗಿ ರಾಜಕೀಯದ ಭವಿಷ್ಯವನ್ನು ನಿರ್ಧರಿಸುತ್ತದೆ. ಆದ್ದರಿಂದ, ಪ್ರತಿ ಮನೆ, ಪ್ರತಿ ಬೂತ್‌ನಲ್ಲಿ ಪರಿಶೀಲನೆ ನಡೆಸಿ, ಒಂದೇ ಒಂದು ಮತವೂ ಕೈತಪ್ಪದಂತೆ ಮತದಾರರ ಪರಿಷ್ಕರಣೆಗೆ ಆದ್ಯತೆ ನೀಡಬೇಕು. ಈ ಮೂಲಕ ಭಾರತ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಮಹತ್ವದ ಕಾರ್ಯವನ್ನು ಮಾಡಬೇಕು ಎಂದು ಶಾಸಕರು ಕರೆ ನೀಡಿದರು. ಜನಪರ ಜಾಗೃತಿಯೇ ಪ್ರಜಾಪ್ರಭುತ್ವದ ರಕ್ಷಣೆಯಾಗಿದ್ದು, ಯಾರಿಗೂ ಮತದಾರರ ಹಕ್ಕು ಕೈತಪ್ಪದಂತೆ ಜಾಗ್ರತೆ ವಹಿಸಬೇಕಿದೆ ಎಂದು ಅವರು ಹೇಳಿದರು. ಈ ಕಾರ್ಯಾಗಾರದಲ್ಲಿ ಕ್ಷೇತ್ರದ ಎಲ್ಲಾ BLA-2, ಪಕ್ಷದ ಏಜೆಂಟರು, ಮುಖಂಡರು, ಹಿರಿಯರು ಮತ್ತು ನಾಗರಿಕರು ಭಾಗವಹಿಸಿದ್ದರು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    23 hrs ago
  • ಬಳ್ಳಾರಿ ಗ್ರಾಮೀಣ ಶಾಸಕ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರು ಮತ್ತೊಮ್ಮೆ ಸಚಿವ ಸ್ಥಾನ ಅಲಂಕರಿಸಲಿ ಎಂದು ಹಾರೈಸಿದ ಅಭಿಮಾನಿಗಳು, ಚೇಳ್ಳಗುರ್ಕಿ ಗ್ರಾಮದ ಪ್ರಸಿದ್ಧ ಶ್ರೀ ಎರ್ರಿತಾತನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚೇಳ್ಳಗುರ್ಕಿ ಮಹಾರಥೋತ್ಸವದ ಸಂದರ್ಭದಲ್ಲಿ ಎಂ.ಜಿ. ಕನಕ ಅವರ ನೇತೃತ್ವದಲ್ಲಿ ನಡೆದ ಈ ಹರಕೆಯಲ್ಲಿ, ಅಭಿಮಾನಿಗಳು ಬಾಳೆಹಣ್ಣುಗಳ ಮೇಲೆ "ಮುಂದಿನ ಮಂತ್ರಿ ಬಿ.ನಾಗೇಂದ್ರ ಅಣ್ಣ" ಎಂದು ಬರೆದು ದೇವರಿಗೆ ಸಮರ್ಪಿಸಿದರು. ಆದಷ್ಟು ಬೇಗ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ಲಭಿಸಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದು, ಈ ಕಾರ್ಯಕ್ರಮದಲ್ಲಿ ಹಲವಾರು ಅಭಿಮಾನಿಗಳು ಭಾಗವಹಿಸಿ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.
    1
    ಬಳ್ಳಾರಿ ಗ್ರಾಮೀಣ ಶಾಸಕ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರು ಮತ್ತೊಮ್ಮೆ ಸಚಿವ ಸ್ಥಾನ ಅಲಂಕರಿಸಲಿ ಎಂದು ಹಾರೈಸಿದ ಅಭಿಮಾನಿಗಳು, ಚೇಳ್ಳಗುರ್ಕಿ ಗ್ರಾಮದ ಪ್ರಸಿದ್ಧ ಶ್ರೀ ಎರ್ರಿತಾತನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚೇಳ್ಳಗುರ್ಕಿ ಮಹಾರಥೋತ್ಸವದ ಸಂದರ್ಭದಲ್ಲಿ ಎಂ.ಜಿ. ಕನಕ ಅವರ ನೇತೃತ್ವದಲ್ಲಿ ನಡೆದ ಈ ಹರಕೆಯಲ್ಲಿ, ಅಭಿಮಾನಿಗಳು ಬಾಳೆಹಣ್ಣುಗಳ ಮೇಲೆ "ಮುಂದಿನ ಮಂತ್ರಿ ಬಿ.ನಾಗೇಂದ್ರ ಅಣ್ಣ" ಎಂದು ಬರೆದು ದೇವರಿಗೆ ಸಮರ್ಪಿಸಿದರು. ಆದಷ್ಟು ಬೇಗ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ಲಭಿಸಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದು, ಈ ಕಾರ್ಯಕ್ರಮದಲ್ಲಿ ಹಲವಾರು ಅಭಿಮಾನಿಗಳು ಭಾಗವಹಿಸಿ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.
    user_A News24Kannada
    A News24Kannada
    Newsagent Hosapete, Vijayanagar•
    8 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    6 hrs ago
  • ಮೊಳಕಾಲ್ಮುರು ಸಿವಿಲ್ ನ್ಯಾಯಾಧೀಶರಾದ ಪುನೀತ್ ರವರು ಮಕ್ಕಳನ್ನು ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಿಗೊಳಿಸಿ ಅವರ ಭವಿಷ್ಯ ರೂಪಿಸಲು ಕರೆ ನೀಡಿದ್ದಾರೆ. ಇಂದಿನ ಪ್ರತಿಯೊಬ್ಬ ಮಗು ಉತ್ತಮ ನಾಯಕ ಅಥವಾ ಅಧಿಕಾರಿಯಾಗಬಹುದು ಎಂದು ತಿಳಿಸಿದ ಅವರು, ಪ್ರತಿ ಮಗುವನ್ನು ಶಾಲೆಗೆ ಸೇರಿಸಿ ಅವರ ಭವಿಷ್ಯಕ್ಕೆ ಸಹಕರಿಸುವಂತೆ ಒತ್ತಾಯಿಸಿದರು. ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಒಬ್ಬ ಮಗು ಕನಿಷ್ಠ 25ನೇ ವರ್ಷದ ತನಕ ವಿದ್ಯಾಭ್ಯಾಸ ಮಾಡಿದರೆ ಅವರ ಭವಿಷ್ಯವನ್ನು ಅವರೇ ಕಟ್ಟಿಕೊಳ್ಳುತ್ತಾರೆ ಎಂದ ಪುನೀತ್, ಚಿಕ್ಕ ಮಗುವಿದ್ದಾಗ ಕೆಲಸಕ್ಕೆ ಕಳಿಸಿದರೆ ಅವರ ಭವಿಷ್ಯವನ್ನು ನಾವೇ ಚಿವುಟಿದಂತಾಗುತ್ತದೆ ಎಂದು ಎಚ್ಚರಿಸಿದರು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಒಟ್ಟಾಗಿ ಪ್ರತಿಜ್ಞೆ ಮಾಡೋಣ ಎಂದು ಕರೆ ನೀಡಿದ ಅವರು, ಬಾಲಕಾರ್ಮಿಕ ಮಗು ಮಾಲೀಕರ ಹತ್ತಿರ ಕೆಲಸ ಮಾಡುತ್ತಿದ್ದರೆ ಅಂತಹ ಸಂದರ್ಭದಲ್ಲಿ ಮಾಲೀಕರಿಗೆ ಹಾಗೂ ಪೋಷಕರಿಗೆ ಬುದ್ಧಿ ಹೇಳುವ ಕೆಲಸ ಮಾಡಬೇಕು ಎಂದು ಸೂಚಿಸಿದರು. ಈ ಕಾರ್ಯಕ್ರಮವನ್ನು ತಾಲ್ಲೂಕು ಕಾನೂನು ಸೇವಾಸಮಿತಿ, ಸಿವಿಲ್ ನ್ಯಾಯಾಲಯ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಹೆಚ್. ಹನುಮಂತಪ್ಪ, ತಾಲ್ಲೂಕು ಕಾನೂನು ವಕೀಲರ ಸಂಘದ ಅಧ್ಯಕ್ಷ ವಸಂತ ಕುಮಾರ, ಮೊಳಕಾಲ್ಮುರು ಪೊಲೀಸ್ ಇಲಾಖೆ ವೃತ್ತ ನಿರೀಕ್ಷಕ ನಾಗರಾಜ್, ಉಪ ನಿರೀಕ್ಷಕ ಮಹೇಶ್ ಹೊಸಪೇಟೆ, ಕಾರ್ಮಿಕ ಇಲಾಖೆಯ ಕುಸುಮ ಹಾಗೂ ವಕೀಲರಾದ ವಿಜಯಲಕ್ಷ್ಮಿ, ಆನಂದ, ಬಸವರಾಜ್, ಪಾಪಯ್ಯ ಬಸವರಾಜ್ ಸೇರಿದಂತೆ ವಕೀಲರ ಸಂಘದ ಸದಸ್ಯರು, ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
    3
    ಮೊಳಕಾಲ್ಮುರು ಸಿವಿಲ್ ನ್ಯಾಯಾಧೀಶರಾದ ಪುನೀತ್ ರವರು ಮಕ್ಕಳನ್ನು ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಿಗೊಳಿಸಿ ಅವರ ಭವಿಷ್ಯ ರೂಪಿಸಲು ಕರೆ ನೀಡಿದ್ದಾರೆ. ಇಂದಿನ ಪ್ರತಿಯೊಬ್ಬ ಮಗು ಉತ್ತಮ ನಾಯಕ ಅಥವಾ ಅಧಿಕಾರಿಯಾಗಬಹುದು ಎಂದು ತಿಳಿಸಿದ ಅವರು, ಪ್ರತಿ ಮಗುವನ್ನು ಶಾಲೆಗೆ ಸೇರಿಸಿ ಅವರ ಭವಿಷ್ಯಕ್ಕೆ ಸಹಕರಿಸುವಂತೆ ಒತ್ತಾಯಿಸಿದರು. ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಒಬ್ಬ ಮಗು ಕನಿಷ್ಠ 25ನೇ ವರ್ಷದ ತನಕ ವಿದ್ಯಾಭ್ಯಾಸ ಮಾಡಿದರೆ ಅವರ ಭವಿಷ್ಯವನ್ನು ಅವರೇ ಕಟ್ಟಿಕೊಳ್ಳುತ್ತಾರೆ ಎಂದ ಪುನೀತ್, ಚಿಕ್ಕ ಮಗುವಿದ್ದಾಗ ಕೆಲಸಕ್ಕೆ ಕಳಿಸಿದರೆ ಅವರ ಭವಿಷ್ಯವನ್ನು ನಾವೇ ಚಿವುಟಿದಂತಾಗುತ್ತದೆ ಎಂದು ಎಚ್ಚರಿಸಿದರು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಒಟ್ಟಾಗಿ ಪ್ರತಿಜ್ಞೆ ಮಾಡೋಣ ಎಂದು ಕರೆ ನೀಡಿದ ಅವರು, ಬಾಲಕಾರ್ಮಿಕ ಮಗು ಮಾಲೀಕರ ಹತ್ತಿರ ಕೆಲಸ ಮಾಡುತ್ತಿದ್ದರೆ ಅಂತಹ ಸಂದರ್ಭದಲ್ಲಿ ಮಾಲೀಕರಿಗೆ ಹಾಗೂ ಪೋಷಕರಿಗೆ ಬುದ್ಧಿ ಹೇಳುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಈ ಕಾರ್ಯಕ್ರಮವನ್ನು ತಾಲ್ಲೂಕು ಕಾನೂನು ಸೇವಾಸಮಿತಿ, ಸಿವಿಲ್ ನ್ಯಾಯಾಲಯ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಹೆಚ್. ಹನುಮಂತಪ್ಪ, ತಾಲ್ಲೂಕು ಕಾನೂನು ವಕೀಲರ ಸಂಘದ ಅಧ್ಯಕ್ಷ ವಸಂತ ಕುಮಾರ, ಮೊಳಕಾಲ್ಮುರು ಪೊಲೀಸ್ ಇಲಾಖೆ ವೃತ್ತ ನಿರೀಕ್ಷಕ ನಾಗರಾಜ್, ಉಪ ನಿರೀಕ್ಷಕ ಮಹೇಶ್ ಹೊಸಪೇಟೆ, ಕಾರ್ಮಿಕ ಇಲಾಖೆಯ ಕುಸುಮ ಹಾಗೂ ವಕೀಲರಾದ ವಿಜಯಲಕ್ಷ್ಮಿ, ಆನಂದ, ಬಸವರಾಜ್, ಪಾಪಯ್ಯ ಬಸವರಾಜ್ ಸೇರಿದಂತೆ ವಕೀಲರ ಸಂಘದ ಸದಸ್ಯರು, ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
    user_Basavaraj
    Basavaraj
    Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    13 hrs ago
  • ಹೊಳಲ್ಕೆರೆ ಮತಕ್ಷೇತ್ರದ ಚಿತ್ರಹಳ್ಳಿ ಗ್ರಾಮದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿ ಮತ್ತು ನೂತನ ಅಂಗನವಾಡಿ ಕೇಂದ್ರ ನಿರ್ಮಾಣದ ಕಾಮಗಾರಿಗಳಿಗೆ ಶಾಸಕ ಎಂ. ಚಂದ್ರಪ್ಪ ಅವರು ಇಂದು ಚಾಲನೆ ನೀಡಿದ್ದಾರೆ. ಒಟ್ಟು ₹65 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುವ ಈ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಶಾಸಕರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
    1
    ಹೊಳಲ್ಕೆರೆ ಮತಕ್ಷೇತ್ರದ ಚಿತ್ರಹಳ್ಳಿ ಗ್ರಾಮದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿ ಮತ್ತು ನೂತನ ಅಂಗನವಾಡಿ ಕೇಂದ್ರ ನಿರ್ಮಾಣದ ಕಾಮಗಾರಿಗಳಿಗೆ ಶಾಸಕ ಎಂ. ಚಂದ್ರಪ್ಪ ಅವರು ಇಂದು ಚಾಲನೆ ನೀಡಿದ್ದಾರೆ. ಒಟ್ಟು ₹65 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುವ ಈ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಶಾಸಕರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಚಳ್ಳಕೆರೆ ನಗರದಲ್ಲಿ 60 ವರ್ಷದ ವೃದ್ಧೆ ಯಶೋದಮ್ಮ ಕಾಣೆಯಾಗಿದ್ದು, ಇವರನ್ನು ಪತ್ತೆ ಹಚ್ಚುವಂತೆ ಕುಟುಂಬಸ್ಥರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ಸೋಮುಗುದ್ದ ರಸ್ತೆಯ ಅಪ್ಪರ್ ಭದ್ರಾ ಮೇಲ್ದಂಡೆ ಕ್ವಾಟ್ರಸ್‌ನಲ್ಲಿ ವಾಸವಾಗಿರುವ ನಂದೀಶ ಅವರ ತಾಯಿ ಯಶೋದಮ್ಮ ಅವರು ಸೋಮವಾರ ರಾತ್ರಿ 6:30ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ. ಕಾಣೆಯಾದಾಗ ಯಶೋದಮ್ಮ ಕ್ರೀಮ್ ಕಲರ್ ನೈಟಿ ಹಾಗೂ ಬಿಳಿ ದುಪ್ಪಟ್ಟ ಧರಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಯಶೋದಮ್ಮನವರನ್ನು ಎಲ್ಲಾದರೂ ಕಂಡುಬಂದಲ್ಲಿ ಕೂಡಲೇ ಚಳ್ಳಕೆರೆ ಪೊಲೀಸ್ ಠಾಣೆಗೆ ಅಥವಾ ಅವರ ಪುತ್ರ ನಂದೀಶರ ಮೊಬೈಲ್ ಸಂಖ್ಯೆ 7349020442 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅವರ ಸೊಸೆ ಲಕ್ಷ್ಮಿ ಅವರು ಮನವಿ ಮಾಡಿದ್ದಾರೆ.
    1
    ಚಳ್ಳಕೆರೆ ನಗರದಲ್ಲಿ 60 ವರ್ಷದ ವೃದ್ಧೆ ಯಶೋದಮ್ಮ ಕಾಣೆಯಾಗಿದ್ದು, ಇವರನ್ನು ಪತ್ತೆ ಹಚ್ಚುವಂತೆ ಕುಟುಂಬಸ್ಥರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ಸೋಮುಗುದ್ದ ರಸ್ತೆಯ ಅಪ್ಪರ್ ಭದ್ರಾ ಮೇಲ್ದಂಡೆ ಕ್ವಾಟ್ರಸ್‌ನಲ್ಲಿ ವಾಸವಾಗಿರುವ ನಂದೀಶ ಅವರ ತಾಯಿ ಯಶೋದಮ್ಮ ಅವರು ಸೋಮವಾರ ರಾತ್ರಿ 6:30ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ. ಕಾಣೆಯಾದಾಗ ಯಶೋದಮ್ಮ ಕ್ರೀಮ್ ಕಲರ್ ನೈಟಿ ಹಾಗೂ ಬಿಳಿ ದುಪ್ಪಟ್ಟ ಧರಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಯಶೋದಮ್ಮನವರನ್ನು ಎಲ್ಲಾದರೂ ಕಂಡುಬಂದಲ್ಲಿ ಕೂಡಲೇ ಚಳ್ಳಕೆರೆ ಪೊಲೀಸ್ ಠಾಣೆಗೆ ಅಥವಾ ಅವರ ಪುತ್ರ ನಂದೀಶರ ಮೊಬೈಲ್ ಸಂಖ್ಯೆ 7349020442 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅವರ ಸೊಸೆ ಲಕ್ಷ್ಮಿ ಅವರು ಮನವಿ ಮಾಡಿದ್ದಾರೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮತ್ತು ಸಂವಿಧಾನದ ಪೀಠಿಕೆ ಇಲ್ಲದಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಮಾರ್ಗ (ರಿ) ಜಿಲ್ಲಾ ಸಂಘಟನಾ ಸಂಚಾಲಕ ಮಂಜುನಾಥ್ ಎಂ. ಅವರು ಈ ಕುರಿತು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡಿದ ಮಂಜುನಾಥ್, ಅಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಕಾಣಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ, ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಚೇರಿಯ ಗಾಡ್ರೇಜ್ ಒಳಗೆ ಇರಿಸಲಾಗಿದ್ದು, ಅದನ್ನು ಹೊರತೆಗೆಸಲಾಯಿತು ಎಂದು ವರದಿಯಾಗಿದೆ. ಅಂಬೇಡ್ಕರ್ ಅವರ ಭಾವಚಿತ್ರವನ್ನು ಕೇವಲ ಜಯಂತಿ ದಿನಕ್ಕೆ ಮಾತ್ರ ಸೀಮಿತಗೊಳಿಸಿರುವ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ಈ ನಿರ್ಲಕ್ಷ್ಯ ತೋರಿದ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಮಂಜುನಾಥ್ ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ವಿರುದ್ಧವೂ ಮಂಜುನಾಥ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ರಾಘವೇಂದ್ರ ಅವರು ಸಾರ್ವಜನಿಕರ ಕರೆಗಳನ್ನು ಸ್ವೀಕರಿಸುವುದಿಲ್ಲ ಹಾಗೂ ಕಚೇರಿಗೆ ಸರಿಯಾಗಿ ಬರುವುದಿಲ್ಲ ಎಂದು ಮಂಜುನಾಥ್ ಆರೋಪಿಸಿದ್ದಾರೆ. ಮಂಜುನಾಥ್ ಅವರ ಈ ಆರೋಪಗಳು ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
    4
    ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬಾಚಿಗೊಂಡನಹಳ್ಳಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮತ್ತು ಸಂವಿಧಾನದ ಪೀಠಿಕೆ ಇಲ್ಲದಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಮಾರ್ಗ (ರಿ) ಜಿಲ್ಲಾ ಸಂಘಟನಾ ಸಂಚಾಲಕ ಮಂಜುನಾಥ್ ಎಂ. ಅವರು ಈ ಕುರಿತು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡಿದ ಮಂಜುನಾಥ್, ಅಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಕಾಣಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ, ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಚೇರಿಯ ಗಾಡ್ರೇಜ್ ಒಳಗೆ ಇರಿಸಲಾಗಿದ್ದು, ಅದನ್ನು ಹೊರತೆಗೆಸಲಾಯಿತು ಎಂದು ವರದಿಯಾಗಿದೆ.

ಅಂಬೇಡ್ಕರ್ ಅವರ ಭಾವಚಿತ್ರವನ್ನು ಕೇವಲ ಜಯಂತಿ ದಿನಕ್ಕೆ ಮಾತ್ರ ಸೀಮಿತಗೊಳಿಸಿರುವ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ಈ ನಿರ್ಲಕ್ಷ್ಯ ತೋರಿದ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಮಂಜುನಾಥ್ ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ವಿರುದ್ಧವೂ ಮಂಜುನಾಥ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ರಾಘವೇಂದ್ರ ಅವರು ಸಾರ್ವಜನಿಕರ ಕರೆಗಳನ್ನು ಸ್ವೀಕರಿಸುವುದಿಲ್ಲ ಹಾಗೂ ಕಚೇರಿಗೆ ಸರಿಯಾಗಿ ಬರುವುದಿಲ್ಲ ಎಂದು ಮಂಜುನಾಥ್ ಆರೋಪಿಸಿದ್ದಾರೆ.

ಮಂಜುನಾಥ್ ಅವರ ಈ ಆರೋಪಗಳು ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
    user_K Santosha Ks
    K Santosha Ks
    ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.