logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತುರುವೇಕೆರೆ ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಗೀಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿರುವ ಗ್ರಾಮ ಪಂಚಾಯ್ತಿಗೆ ಸೇರಿದ ಕುಡಿಯುವ ನೀರಿನ ಬೋರ್ವೆಲ್‌ನ ಪೈಪ್‌ಲೈನ್ ಹಲವು ತಿಂಗಳುಗಳಿಂದ ಸೋರಿಕೆಯಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಪೈಪ್ ಸೋರಿಕೆಯಿಂದ ಸಾಕಷ್ಟು ನೀರು ವ್ಯರ್ಥವಾಗಿ ಪೋಲಾಗುತ್ತಿದ್ದು, ಇದು ಕೊಡಗೆಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ತಯಾರಿಸಲು ಹಾಗೂ ಮಕ್ಕಳ ದಿನನಿತ್ಯದ ಶೌಚಾಲಯದ ಬಳಕೆಗೆ ಅಗತ್ಯವಿರುವ ನೀರಿಗಾಗಿ ಶಾಲಾ ಸಿಬ್ಬಂದಿ ಪರದಾಡುವ ಸ್ಥಿತಿಯನ್ನು ಸೃಷ್ಟಿಸಿದೆ. ಶಿಕ್ಷಕರೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದು, ಈ ಗಂಭೀರ ಸಮಸ್ಯೆಯ ಬಗ್ಗೆ ಗ್ರಾಮ ಪಂಚಾಯಿತಿಯ ಪಿಡಿಒ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದರಿಂದ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೋರಿಕೆಯಾಗುತ್ತಿರುವ ಪೈಪ್‌ಲೈನ್ ಅನ್ನು ಶೀಘ್ರವಾಗಿ ದುರಸ್ತಿಗೊಳಿಸುವಂತೆ ಹಾಗೂ ಶಾಲೆಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ, ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ. ಕೊಡಗೀಹಳ್ಳಿ ಗ್ರಾ.ಪಂ. ಪಿಡಿಒ ಮತ್ತು ಸಿಬ್ಬಂದಿಗಳ ಬೇಜವಾಬ್ದಾರಿಗೆ ಶಾಲಾ ಮಕ್ಕಳ ಊಟಕ್ಕೆ ತೊಂದರೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.

4 days ago
user_Manohara
Manohara
Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
4 days ago
5ebde194-9b49-4f76-b7d4-e86bbea20ed6

ತುರುವೇಕೆರೆ ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಗೀಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿರುವ ಗ್ರಾಮ ಪಂಚಾಯ್ತಿಗೆ ಸೇರಿದ ಕುಡಿಯುವ ನೀರಿನ ಬೋರ್ವೆಲ್‌ನ ಪೈಪ್‌ಲೈನ್ ಹಲವು ತಿಂಗಳುಗಳಿಂದ ಸೋರಿಕೆಯಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಪೈಪ್ ಸೋರಿಕೆಯಿಂದ ಸಾಕಷ್ಟು ನೀರು ವ್ಯರ್ಥವಾಗಿ

ಪೋಲಾಗುತ್ತಿದ್ದು, ಇದು ಕೊಡಗೆಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ತಯಾರಿಸಲು ಹಾಗೂ ಮಕ್ಕಳ ದಿನನಿತ್ಯದ ಶೌಚಾಲಯದ ಬಳಕೆಗೆ ಅಗತ್ಯವಿರುವ ನೀರಿಗಾಗಿ ಶಾಲಾ ಸಿಬ್ಬಂದಿ ಪರದಾಡುವ ಸ್ಥಿತಿಯನ್ನು ಸೃಷ್ಟಿಸಿದೆ. ಶಿಕ್ಷಕರೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದು, ಈ ಗಂಭೀರ ಸಮಸ್ಯೆಯ ಬಗ್ಗೆ ಗ್ರಾಮ ಪಂಚಾಯಿತಿಯ ಪಿಡಿಒ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದರಿಂದ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

837dfe0e-fa79-48f0-820a-23a1aba799dc

ಸೋರಿಕೆಯಾಗುತ್ತಿರುವ ಪೈಪ್‌ಲೈನ್ ಅನ್ನು ಶೀಘ್ರವಾಗಿ ದುರಸ್ತಿಗೊಳಿಸುವಂತೆ ಹಾಗೂ ಶಾಲೆಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ, ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ. ಕೊಡಗೀಹಳ್ಳಿ ಗ್ರಾ.ಪಂ. ಪಿಡಿಒ ಮತ್ತು ಸಿಬ್ಬಂದಿಗಳ ಬೇಜವಾಬ್ದಾರಿಗೆ ಶಾಲಾ ಮಕ್ಕಳ ಊಟಕ್ಕೆ ತೊಂದರೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.

More news from ಕರ್ನಾಟಕ and nearby areas
  • ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ರಾಜ್ಯ ಪೊಲೀಸ್ ಗೃಹಮಂಡಳಿಯಿಂದ ನಿರ್ಮಿಸಲಾಗುತ್ತಿರುವ ಪೊಲೀಸ್ ಸಿಬ್ಬಂದಿಗಳ ವಸತಿ ಗೃಹಗಳ ಕಾಮಗಾರಿ ತೀರಾ ಕಳಪೆಯಾಗಿದೆ ಎಂದು ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ತಾಲ್ಲೂಕು ಅಧ್ಯಕ್ಷ ಕಣಕೂರು ಚಂದ್ರಶೇಖರ್ ಮತ್ತು ಡಿ.ಎಸ್.ಎಸ್ ತಾಲ್ಲೂಕು ಸಂಚಾಲಕ ಕೃಷ್ಣ ಮಾದಿಗ ಗಂಭೀರ ಆರೋಪ ಮಾಡಿದ್ದಾರೆ. ಕಾಮಗಾರಿಯನ್ನು ಪರಿಶೀಲಿಸಿದ ಕಣಕೂರು ಚಂದ್ರಶೇಖರ್ ಅವರು, ಕಟ್ಟಡದ ಎಸ್ಟಿಮೇಟ್ ಕೇಳಿದರೆ ಎಸ್.ಪಿ. ಕಚೇರಿಯಲ್ಲಿದೆ ಎಂದು ಸಬೂಬು ಹೇಳಲಾಗುತ್ತಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಇಡಬಹುದಾಗಿದ್ದ ದಾಖಲೆಗಳನ್ನು ಎಸ್.ಪಿ. ಕಚೇರಿಯಲ್ಲೇಕೆ ರಕ್ಷಣೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಸೈಟ್ ಎಂಜಿನಿಯರ್ ಬಳಿ ಯಾವುದೇ ದಾಖಲಾತಿಗಳಿಲ್ಲ, ಇಲ್ಲಿ ಕೇಳುವವರಿಲ್ಲ ಹೇಳುವವರಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚರಂಡಿ ತೆಗೆದ ಮಣ್ಣನ್ನು ತಂದು ತುಂಬಿಸಲಾಗಿದೆ ಮತ್ತು ಕಲ್ಲಿನಿಂದ ಕಟ್ಟಬೇಕಾದ ಅಡಿಪಾಯವನ್ನು ಸಿಮೆಂಟ್ ಇಟ್ಟಿಗೆಗಳಿಂದ ಕಟ್ಟಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ನಮ್ಮ ಅಧಿಕಾರಿಗಳು ವಾಸಿಸುವ ಸ್ಥಳ ಸುರಕ್ಷಿತವಾಗಿರಬೇಕು ಎಂಬುದು ನಮ್ಮ ಕರ್ತವ್ಯ ಎಂದು ಅವರು ಒತ್ತಿಹೇಳಿದರು. ಡಿ.ಎಸ್.ಎಸ್ ತಾಲ್ಲೂಕು ಸಂಚಾಲಕ ಕೃಷ್ಣ ಮಾದಿಗ ಮಾತನಾಡಿ, ಕಾಮಗಾರಿಯ ಉಸ್ತುವಾರಿ ವಹಿಸಿಕೊಂಡವರು ಯಾವುದೇ ಎಸ್ಟಿಮೇಟ್ ನೋಡಲು ಅವಕಾಶ ನೀಡುತ್ತಿಲ್ಲ, ಇದು ಅನುಮಾನಕ್ಕೆ ಎಡೆಮಾಡಿಕೊಡುತ್ತದೆ ಎಂದರು. ಕಟ್ಟಡಕ್ಕೆ ತುಂಬಿರುವ ಮಣ್ಣು ಸಹ ಕಳಪೆಯಾಗಿದ್ದು, ಅದರಲ್ಲಿ ಕಸಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಬಟ್ಟೆಗಳ ತುಂಡುಗಳಿವೆ. ಇದರಿಂದ ಕಟ್ಟಡ ಯಾವುದೇ ಕಾರಣಕ್ಕೂ ಬಾಳಿಕೆ ಬರುವುದಿಲ್ಲ. ಇದರಲ್ಲಿ ಕೆಲವು ಅಧಿಕಾರಿಗಳು ಭ್ರಷ್ಟಾಚಾರ ಎಸಗಿರುವ ಅನುಮಾನಗಳೂ ಇವೆ ಎಂದು ಅವರು ದೂರಿದ್ದಾರೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಬಂದು ಪರಿಶೀಲಿಸುವವರೆಗೂ ಕಾಮಗಾರಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಲಾಗಿದ್ದು, ಸರ್ಕಾರದ ಅನುಮೋದನೆಯಂತೆ ಕಾಮಗಾರಿ ನಡೆಯಬೇಕು ಎಂದು ಆಗ್ರಹಿಸಲಾಗಿದೆ. ಅಧಿಕಾರಿಗಳು ಪರಿಶೀಲಿಸಿ ಕಾಮಗಾರಿ ಕಳಪೆಯಾಗಿದ್ದರೆ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಇದೇ ರೀತಿ ಅಕ್ರಮಗಳು ಮುಂದುವರಿದರೆ, ಮುಂದಿನ ದಿನಗಳಲ್ಲಿ ರಾಜ್ಯ ರೈತಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಜೊತೆಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
    4
    ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ರಾಜ್ಯ ಪೊಲೀಸ್ ಗೃಹಮಂಡಳಿಯಿಂದ ನಿರ್ಮಿಸಲಾಗುತ್ತಿರುವ ಪೊಲೀಸ್ ಸಿಬ್ಬಂದಿಗಳ ವಸತಿ ಗೃಹಗಳ ಕಾಮಗಾರಿ ತೀರಾ ಕಳಪೆಯಾಗಿದೆ ಎಂದು ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ತಾಲ್ಲೂಕು ಅಧ್ಯಕ್ಷ ಕಣಕೂರು ಚಂದ್ರಶೇಖರ್ ಮತ್ತು ಡಿ.ಎಸ್.ಎಸ್ ತಾಲ್ಲೂಕು ಸಂಚಾಲಕ ಕೃಷ್ಣ ಮಾದಿಗ ಗಂಭೀರ ಆರೋಪ ಮಾಡಿದ್ದಾರೆ.

ಕಾಮಗಾರಿಯನ್ನು ಪರಿಶೀಲಿಸಿದ ಕಣಕೂರು ಚಂದ್ರಶೇಖರ್ ಅವರು, ಕಟ್ಟಡದ ಎಸ್ಟಿಮೇಟ್ ಕೇಳಿದರೆ ಎಸ್.ಪಿ. ಕಚೇರಿಯಲ್ಲಿದೆ ಎಂದು ಸಬೂಬು ಹೇಳಲಾಗುತ್ತಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಇಡಬಹುದಾಗಿದ್ದ ದಾಖಲೆಗಳನ್ನು ಎಸ್.ಪಿ. ಕಚೇರಿಯಲ್ಲೇಕೆ ರಕ್ಷಣೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಸೈಟ್ ಎಂಜಿನಿಯರ್ ಬಳಿ ಯಾವುದೇ ದಾಖಲಾತಿಗಳಿಲ್ಲ, ಇಲ್ಲಿ ಕೇಳುವವರಿಲ್ಲ ಹೇಳುವವರಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚರಂಡಿ ತೆಗೆದ ಮಣ್ಣನ್ನು ತಂದು ತುಂಬಿಸಲಾಗಿದೆ ಮತ್ತು ಕಲ್ಲಿನಿಂದ ಕಟ್ಟಬೇಕಾದ ಅಡಿಪಾಯವನ್ನು ಸಿಮೆಂಟ್ ಇಟ್ಟಿಗೆಗಳಿಂದ ಕಟ್ಟಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ನಮ್ಮ ಅಧಿಕಾರಿಗಳು ವಾಸಿಸುವ ಸ್ಥಳ ಸುರಕ್ಷಿತವಾಗಿರಬೇಕು ಎಂಬುದು ನಮ್ಮ ಕರ್ತವ್ಯ ಎಂದು ಅವರು ಒತ್ತಿಹೇಳಿದರು. ಡಿ.ಎಸ್.ಎಸ್ ತಾಲ್ಲೂಕು ಸಂಚಾಲಕ ಕೃಷ್ಣ ಮಾದಿಗ ಮಾತನಾಡಿ, ಕಾಮಗಾರಿಯ ಉಸ್ತುವಾರಿ ವಹಿಸಿಕೊಂಡವರು ಯಾವುದೇ ಎಸ್ಟಿಮೇಟ್ ನೋಡಲು ಅವಕಾಶ ನೀಡುತ್ತಿಲ್ಲ, ಇದು ಅನುಮಾನಕ್ಕೆ ಎಡೆಮಾಡಿಕೊಡುತ್ತದೆ ಎಂದರು. ಕಟ್ಟಡಕ್ಕೆ ತುಂಬಿರುವ ಮಣ್ಣು ಸಹ ಕಳಪೆಯಾಗಿದ್ದು, ಅದರಲ್ಲಿ ಕಸಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಬಟ್ಟೆಗಳ ತುಂಡುಗಳಿವೆ. ಇದರಿಂದ ಕಟ್ಟಡ ಯಾವುದೇ ಕಾರಣಕ್ಕೂ ಬಾಳಿಕೆ ಬರುವುದಿಲ್ಲ. ಇದರಲ್ಲಿ ಕೆಲವು ಅಧಿಕಾರಿಗಳು ಭ್ರಷ್ಟಾಚಾರ ಎಸಗಿರುವ ಅನುಮಾನಗಳೂ ಇವೆ ಎಂದು ಅವರು ದೂರಿದ್ದಾರೆ.

ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಬಂದು ಪರಿಶೀಲಿಸುವವರೆಗೂ ಕಾಮಗಾರಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಲಾಗಿದ್ದು, ಸರ್ಕಾರದ ಅನುಮೋದನೆಯಂತೆ ಕಾಮಗಾರಿ ನಡೆಯಬೇಕು ಎಂದು ಆಗ್ರಹಿಸಲಾಗಿದೆ. ಅಧಿಕಾರಿಗಳು ಪರಿಶೀಲಿಸಿ ಕಾಮಗಾರಿ ಕಳಪೆಯಾಗಿದ್ದರೆ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಇದೇ ರೀತಿ ಅಕ್ರಮಗಳು ಮುಂದುವರಿದರೆ, ಮುಂದಿನ ದಿನಗಳಲ್ಲಿ ರಾಜ್ಯ ರೈತಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಜೊತೆಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    14 hrs ago
  • ರಾಜ್ಯ ರಾಜಕಾರಣದಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಚುನಾವಣೆ ಅಧಿಕೃತವಾಗಿ ಘೋಷಣೆಯಾಗುವುದಕ್ಕೂ ಮುನ್ನವೇ ಕ್ಷೇತ್ರದಲ್ಲಿ ರಾಜಕೀಯ ಕದನ ತೀವ್ರಗೊಂಡಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಎಂಬ ಪ್ರಮುಖ ಮೂರು ಪಕ್ಷಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ. ಈ ಮಧ್ಯೆ, ಜೆಡಿಎಸ್ ಹೈಕಮಾಂಡ್ ಹಿರಿಯೂರು ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ತೆರೆಮರೆಯಲ್ಲಿ ಹೊಸ ತಂತ್ರಗಳನ್ನು ಹೆಣೆಯುತ್ತಿದೆ. ಇದರ ಭಾಗವಾಗಿ, ಕಾಂಗ್ರೆಸ್ ಮುಖಂಡ ಡಾ. ಸಾಸಲು ಸತೀಶ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೆಳೆಯಲು 'ಜೆಡಿಎಸ್ ಆಪರೇಷನ್' ಅನ್ನು ಆರಂಭಿಸಿದೆ. ಈಗಾಗಲೇ ಜೆಡಿಎಸ್‌ನ ದಳಪತಿಗಳು ಸತೀಶ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಡಾ. ಸಾಸಲು ಸತೀಶ್ ಅವರು ಶಿರ ಹಾಗೂ ಹಿರಿಯೂರು ಭಾಗದಲ್ಲಿ ಕಾಂಗ್ರೆಸ್‌ನ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಅಂತಿಮವಾಗಿ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆತಿತ್ತು. ಈ ಕಾರಣದಿಂದಾಗಿ, ಸತೀಶ್ ಮತ್ತು ಅವರ ಬೆಂಬಲಿಗರು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದೆ ತೀವ್ರ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‌ನ ಈ ಆಂತರಿಕ ಅಸಮಾಧಾನದ ಲಾಭವನ್ನು ಪಡೆಯಲು ಜೆಡಿಎಸ್ ಈಗ ರಾಜಕೀಯ ದಾಳ ಉರುಳಿಸಿದೆ. ಹಿರಿಯೂರು ಕ್ಷೇತ್ರದಲ್ಲಿ ಕುಂಚಿಟಿಗ ಮತ್ತು ಕಾಡುಗೊಲ್ಲ ಸಮುದಾಯಗಳ ಮತಗಳು ಅತ್ಯಂತ ನಿರ್ಣಾಯಕವಾಗಿವೆ. ಕಾಡುಗೊಲ್ಲ ಸಮುದಾಯದ ಪ್ರಬಲ ನಾಯಕರಾಗಿರುವ ಸತೀಶ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಕರೆತಂದರೆ, ಆ ಸಮುದಾಯದ ಮತಗಳನ್ನು ಜೆಡಿಎಸ್‌ನತ್ತ ಸೆಳೆಯಬಹುದು ಎಂಬುದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ದಳಪತಿಗಳ ಲೆಕ್ಕಾಚಾರವಾಗಿದೆ. ಸತೀಶ್ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ತೆರೆಮರೆಯ ರಾಜಕೀಯ ತಂತ್ರಗಾರಿಕೆಗಳು ಸಕ್ರಿಯವಾಗಿ ನಡೆದಿವೆ ಎಂದು ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಯಾಗುತ್ತಿದೆ. ಒಟ್ಟಾರೆಯಾಗಿ, ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಹಿರಿಯೂರು ಕ್ಷೇತ್ರದಲ್ಲಿ ರಾಜಕೀಯ ದಾಳ ಉರುಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಮುಂಬರುವ ದಿನಗಳಲ್ಲಿ ಈ ರಾಜಕೀಯ ಕಣ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.
    1
    ರಾಜ್ಯ ರಾಜಕಾರಣದಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಚುನಾವಣೆ ಅಧಿಕೃತವಾಗಿ ಘೋಷಣೆಯಾಗುವುದಕ್ಕೂ ಮುನ್ನವೇ ಕ್ಷೇತ್ರದಲ್ಲಿ ರಾಜಕೀಯ ಕದನ ತೀವ್ರಗೊಂಡಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಎಂಬ ಪ್ರಮುಖ ಮೂರು ಪಕ್ಷಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ. ಈ ಮಧ್ಯೆ, ಜೆಡಿಎಸ್ ಹೈಕಮಾಂಡ್ ಹಿರಿಯೂರು ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ತೆರೆಮರೆಯಲ್ಲಿ ಹೊಸ ತಂತ್ರಗಳನ್ನು ಹೆಣೆಯುತ್ತಿದೆ. ಇದರ ಭಾಗವಾಗಿ, ಕಾಂಗ್ರೆಸ್ ಮುಖಂಡ ಡಾ. ಸಾಸಲು ಸತೀಶ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೆಳೆಯಲು 'ಜೆಡಿಎಸ್ ಆಪರೇಷನ್' ಅನ್ನು ಆರಂಭಿಸಿದೆ. ಈಗಾಗಲೇ ಜೆಡಿಎಸ್‌ನ ದಳಪತಿಗಳು ಸತೀಶ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಡಾ. ಸಾಸಲು ಸತೀಶ್ ಅವರು ಶಿರ ಹಾಗೂ ಹಿರಿಯೂರು ಭಾಗದಲ್ಲಿ ಕಾಂಗ್ರೆಸ್‌ನ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಅಂತಿಮವಾಗಿ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆತಿತ್ತು. ಈ ಕಾರಣದಿಂದಾಗಿ, ಸತೀಶ್ ಮತ್ತು ಅವರ ಬೆಂಬಲಿಗರು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದೆ ತೀವ್ರ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‌ನ ಈ ಆಂತರಿಕ ಅಸಮಾಧಾನದ ಲಾಭವನ್ನು ಪಡೆಯಲು ಜೆಡಿಎಸ್ ಈಗ ರಾಜಕೀಯ ದಾಳ ಉರುಳಿಸಿದೆ.

ಹಿರಿಯೂರು ಕ್ಷೇತ್ರದಲ್ಲಿ ಕುಂಚಿಟಿಗ ಮತ್ತು ಕಾಡುಗೊಲ್ಲ ಸಮುದಾಯಗಳ ಮತಗಳು ಅತ್ಯಂತ ನಿರ್ಣಾಯಕವಾಗಿವೆ. ಕಾಡುಗೊಲ್ಲ ಸಮುದಾಯದ ಪ್ರಬಲ ನಾಯಕರಾಗಿರುವ ಸತೀಶ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಕರೆತಂದರೆ, ಆ ಸಮುದಾಯದ ಮತಗಳನ್ನು ಜೆಡಿಎಸ್‌ನತ್ತ ಸೆಳೆಯಬಹುದು ಎಂಬುದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ದಳಪತಿಗಳ ಲೆಕ್ಕಾಚಾರವಾಗಿದೆ. ಸತೀಶ್ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ತೆರೆಮರೆಯ ರಾಜಕೀಯ ತಂತ್ರಗಾರಿಕೆಗಳು ಸಕ್ರಿಯವಾಗಿ ನಡೆದಿವೆ ಎಂದು ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಯಾಗುತ್ತಿದೆ. ಒಟ್ಟಾರೆಯಾಗಿ, ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಹಿರಿಯೂರು ಕ್ಷೇತ್ರದಲ್ಲಿ ರಾಜಕೀಯ ದಾಳ ಉರುಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಮುಂಬರುವ ದಿನಗಳಲ್ಲಿ ಈ ರಾಜಕೀಯ ಕಣ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    22 hrs ago
  • ಮಂಡ್ಯ ನಗರಸಭೆ ಮತ್ತೆ ತಮ್ಮ ಹೈಲು ದೊರೆಯ ದರ್ಬಾರು ಮುಂದುವರಿಸಿದೆ ಎಂದು ಆರೋಪಿಸಲಾಗಿದೆ. ಹೊಸದಾಗಿ ನಿರ್ಮಿಸಲಾಗಿರುವ ನಗರಸಭೆ ಕಟ್ಟಡಕ್ಕೆ ಸಾರ್ವಜನಿಕರ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಕಳೆದ ಎರಡು-ಮೂರು ವರ್ಷಗಳಿಂದ ಸಾರ್ವಜನಿಕರ ಕಾಲ್ನಡಿಗೆ ದಾರಿಯನ್ನು ಅತಿಕ್ರಮಿಸಿ ಖಾಸಗಿ ವ್ಯಕ್ತಿಯೊಬ್ಬರು ಅದ್ದೂರಿ ವ್ಯಾಪಾರ ನಡೆಸುತ್ತಿದ್ದು, ಇದಕ್ಕೆ ನಗರಸಭೆಯ ಒಳಗಿನಿಂದಲೇ ಕುಮ್ಮಕ್ಕು ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ನಗರಶಕ್ತಿ ಕೇಂದ್ರಕ್ಕೆ ಬೀಗ ಹಾಕಿ, ಪ್ರಜಾಪ್ರಭುತ್ವದಲ್ಲಿ ಪ್ರಜೆಯನ್ನೇ ಒಳಗೆ ಬಾರದಂತೆ ಮಾಡಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರಶ್ನಿಸಿದಾಗ, ಸಾರ್ವಜನಿಕರು ಇಲ್ಲಿ ಬಂದು ಗಲಾಟೆ ಮಾಡುತ್ತಾರೆ ಎಂದು ಅಧಿಕಾರಿಗಳು ಉತ್ತರ ನೀಡುತ್ತಿದ್ದಾರೆ. ಈ ವಿಚಾರ ಜಿಲ್ಲಾಧಿಕಾರಿಗಳಿಗೆ ಬೇಕಾಗಿಲ್ಲ ಎಂದು ಹೇಳಲಾಗಿದೆ. ಆದರೆ ರಾಜಕಾರಣಿಗಳಿಗೆ ಮತ್ತು ಅವರ ಚೇಲಾ ಚಮಚಗಳಿಗೆ ಮುಕ್ತ ಪ್ರವೇಶವಿದ್ದು, ಅವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದ ನಾಗರಿಕರಿಗೆ ಮಾತ್ರ ಹೊರಗೆ ಬಿಸಿಲಿನಲ್ಲಿ ನಿಲ್ಲುವ ಶಿಕ್ಷೆ ವಿಧಿಸಲಾಗುತ್ತಿದ್ದು, ಅವರ ವಾಹನಗಳನ್ನೂ ಬಿಸಿಲಿನಲ್ಲಿ ನಿಲ್ಲಿಸಬೇಕಾಗಿದೆ. ಈ ನಗರಸಭೆ ಕಚೇರಿಯು ಜನರಿಂದ ಜನರಿಗಾಗಿ ಇದೆಯೋ ಅಥವಾ ರಾಜಕಾರಣಿಗಳು ಮತ್ತು ಅಧಿಕಾರಿಗಳಿಗಾಗಿ ಮಾತ್ರ ಇದೆಯೋ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಸಾರ್ವಜನಿಕರ ವಾಹನಗಳಿಗೆ ನಿರ್ಬಂಧ ವಿಧಿಸಿ, ಗೇಟ್‌ಗೆ ಬೀಗ ಹಾಕಿ, ಪಾರ್ಕಿಂಗ್‌ಗೆ ಬೀಗ ಜಡಿದು ಪ್ರಜಾಪ್ರಭುತ್ವದ ವಾಹನಗಳನ್ನು ಬಿಸಿಲಿನಲ್ಲಿ ನಿಲ್ಲಿಸುವ ಈ ನಡೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
    3
    ಮಂಡ್ಯ ನಗರಸಭೆ ಮತ್ತೆ ತಮ್ಮ ಹೈಲು ದೊರೆಯ ದರ್ಬಾರು ಮುಂದುವರಿಸಿದೆ ಎಂದು ಆರೋಪಿಸಲಾಗಿದೆ. ಹೊಸದಾಗಿ ನಿರ್ಮಿಸಲಾಗಿರುವ ನಗರಸಭೆ ಕಟ್ಟಡಕ್ಕೆ ಸಾರ್ವಜನಿಕರ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಕಳೆದ ಎರಡು-ಮೂರು ವರ್ಷಗಳಿಂದ ಸಾರ್ವಜನಿಕರ ಕಾಲ್ನಡಿಗೆ ದಾರಿಯನ್ನು ಅತಿಕ್ರಮಿಸಿ ಖಾಸಗಿ ವ್ಯಕ್ತಿಯೊಬ್ಬರು ಅದ್ದೂರಿ ವ್ಯಾಪಾರ ನಡೆಸುತ್ತಿದ್ದು, ಇದಕ್ಕೆ ನಗರಸಭೆಯ ಒಳಗಿನಿಂದಲೇ ಕುಮ್ಮಕ್ಕು ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ನಗರಶಕ್ತಿ ಕೇಂದ್ರಕ್ಕೆ ಬೀಗ ಹಾಕಿ, ಪ್ರಜಾಪ್ರಭುತ್ವದಲ್ಲಿ ಪ್ರಜೆಯನ್ನೇ ಒಳಗೆ ಬಾರದಂತೆ ಮಾಡಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಪ್ರಶ್ನಿಸಿದಾಗ, ಸಾರ್ವಜನಿಕರು ಇಲ್ಲಿ ಬಂದು ಗಲಾಟೆ ಮಾಡುತ್ತಾರೆ ಎಂದು ಅಧಿಕಾರಿಗಳು ಉತ್ತರ ನೀಡುತ್ತಿದ್ದಾರೆ. ಈ ವಿಚಾರ ಜಿಲ್ಲಾಧಿಕಾರಿಗಳಿಗೆ ಬೇಕಾಗಿಲ್ಲ ಎಂದು ಹೇಳಲಾಗಿದೆ. ಆದರೆ ರಾಜಕಾರಣಿಗಳಿಗೆ ಮತ್ತು ಅವರ ಚೇಲಾ ಚಮಚಗಳಿಗೆ ಮುಕ್ತ ಪ್ರವೇಶವಿದ್ದು, ಅವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದ ನಾಗರಿಕರಿಗೆ ಮಾತ್ರ ಹೊರಗೆ ಬಿಸಿಲಿನಲ್ಲಿ ನಿಲ್ಲುವ ಶಿಕ್ಷೆ ವಿಧಿಸಲಾಗುತ್ತಿದ್ದು, ಅವರ ವಾಹನಗಳನ್ನೂ ಬಿಸಿಲಿನಲ್ಲಿ ನಿಲ್ಲಿಸಬೇಕಾಗಿದೆ.

ಈ ನಗರಸಭೆ ಕಚೇರಿಯು ಜನರಿಂದ ಜನರಿಗಾಗಿ ಇದೆಯೋ ಅಥವಾ ರಾಜಕಾರಣಿಗಳು ಮತ್ತು ಅಧಿಕಾರಿಗಳಿಗಾಗಿ ಮಾತ್ರ ಇದೆಯೋ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಸಾರ್ವಜನಿಕರ ವಾಹನಗಳಿಗೆ ನಿರ್ಬಂಧ ವಿಧಿಸಿ, ಗೇಟ್‌ಗೆ ಬೀಗ ಹಾಕಿ, ಪಾರ್ಕಿಂಗ್‌ಗೆ ಬೀಗ ಜಡಿದು ಪ್ರಜಾಪ್ರಭುತ್ವದ ವಾಹನಗಳನ್ನು ಬಿಸಿಲಿನಲ್ಲಿ ನಿಲ್ಲಿಸುವ ಈ ನಡೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    20 hrs ago
  • ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಡಿ. ಹಲಸಹಳ್ಳಿ ಗ್ರಾಮದ ಬಳಿ ಇರುವ ಗವಿಮಠಕ್ಕೆ ಮಠಾಧ್ಯಕ್ಷರಾದ ಷಡಕ್ಷರ ಸ್ವಾಮೀಜಿಯವರು ಹೊಸ ರೂಪ ನೀಡಿ ಇತಿಹಾಸ ಸೃಷ್ಟಿಸಿದ್ದಾರೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಮಠಾಧೀಶರಾದ ಸಿದ್ದಲಿಂಗ ಮಹಾಸ್ವಾಮೀಜಿಯವರು ಅತೀವ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಕ್ತರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡು, ಭಕ್ತರು ನೀಡಿದ ಸಹಕಾರದಿಂದ ಮಠದ ಅಭಿವೃದ್ಧಿಗಾಗಿ ಷಡಕ್ಷರ ಸ್ವಾಮೀಜಿಯವರು ನಿರಂತರವಾಗಿ ಶ್ರಮಿಸಿದ್ದಾರೆ. ಗವಿಮಠದಲ್ಲಿ ಮೇ ಒಂದರಂದು ನಡೆದ ಕಳಶಾರೋಹಣ, ರಾಜಗೋಪುರ, ಬಸವ ವಿಗ್ರಹ, ಶ್ರೀ ಷಡಕ್ಷರ ಮಂಗಳ ಮಂಟಪ, ಹಾಗೂ ಅನ್ನದಾಸೋಹ ಕಟ್ಟಡದ ಉದ್ಘಾಟನೆ ಮತ್ತು ಧಾರ್ಮಿಕ ಸಭೆಗಳಿಗೆ ಇಂದಿಗೆ 48 ದಿನಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದಗಂಗಾ ಶ್ರೀಗಳು, ಹಲಸಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ಬೆಂಬಲದಿಂದ ಷಡಕ್ಷರ ಸ್ವಾಮಿಗಳು ಕಳೆದ ಮೇ ಒಂದರಂದು ಅದ್ದೂರಿಯಾಗಿ ಕಾರ್ಯಕ್ರಮವನ್ನು ನಡೆಸಿದ್ದಾರೆ ಎಂದು ಹೇಳಿದರು. ಕಳೆದ ಕೆಲವು ವರ್ಷಗಳಿಂದ ಅವರು ತುಂಬಾ ಶ್ರಮಪಟ್ಟು, ಹಿಂದೆ ಬಂಡೆಗಳಿಂದ ತುಂಬಿ, ಸಾರ್ವಜನಿಕ ಸಂಪರ್ಕ ಸೌಲಭ್ಯಗಳಿಲ್ಲದ ಗವಿಮಠಕ್ಕೆ ಹೊಸ ರೂಪವನ್ನು ತಂದುಕೊಟ್ಟಿದ್ದಾರೆ. ಈಗ ಭಕ್ತರಿಗೆ ಶುಭ ಕಾರ್ಯಗಳನ್ನು ಮಾಡಲು ಅನುಕೂಲವಾಗುವಂತೆ ಕಲ್ಯಾಣ ಮಂಟಪ, ಅನ್ನದಾಸೋಹ ಗೃಹ ನಿರ್ಮಿಸಿರುವುದಲ್ಲದೆ, ರಾಜಗೋಪುರ ನಿರ್ಮಾಣ, ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಗಿಡಮರಗಳನ್ನು ಬೆಳೆಸಿ ಸುಂದರವಾದ ವಾತಾವರಣ ನಿರ್ಮಿಸಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಮಠದ ಶೋಭೆಯನ್ನು ಹೆಚ್ಚಿಸಿದ್ದಾರೆ. ತಾನು ಚಿಕ್ಕವನಿದ್ದಾಗ ಈ ಮಠಕ್ಕೆ ಬಂದಾಗ ಜಡೆ ಸ್ವಾಮಿಗಳು ಈ ಮಠದಲ್ಲಿದ್ದರು ಎಂಬುದನ್ನು ಸ್ಮರಿಸಿದ ಸಿದ್ದಗಂಗಾ ಶ್ರೀಗಳು, ಆಗಿನಿಂದಲೂ ಕನಕಪುರದ ದೇಗುಲ ಮಠಕ್ಕೂ, ಈ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಈಗಲೂ ಆ ಬಾಂಧವ್ಯ ಮುಂದುವರೆದಿರುವುದು ತುಂಬಾ ಸಂತೋಷದ ವಿಷಯ ಎಂದು ಹೇಳಿದರು. ಈ ಸ್ಥಳವು ಷಡಕ್ಷರ ದೇವನ ತಪೋನಿಷ್ಠ ಸ್ಥಳವಾಗಿದ್ದು, ರಾಜಶೇಖರ ವಿಲಾಸ ಎಂಬ ಗ್ರಂಥವನ್ನು ಬರೆದ ಸ್ಥಳವೆಂದು ತಿಳಿದುಬಂದಿದೆ. ಹಲವಾರು ಪುಣ್ಯ ಪುರುಷರ ತಪೋಭೂಮಿಯಾಗಿದ್ದ ಈ ಮಠವನ್ನು ಇನ್ನಷ್ಟು ಅಭಿವೃದ್ಧಿಪಡಿಸುವಲ್ಲಿ ಷಡಕ್ಷರ ಸ್ವಾಮೀಜಿಗೆ ನಿಮ್ಮ ಬೆಂಬಲ ಮತ್ತು ಸಹಕಾರ ಹೀಗೆ ಇರಲಿ ಎಂದು ಭಕ್ತಾದಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಗವಿಮಠದ ಷಡಕ್ಷರ ಸ್ವಾಮೀಜಿಯವರು ಸಿದ್ದಗಂಗಾ ಶ್ರೀಗಳಿಗೆ ಪಾದಪೂಜೆಯನ್ನು ನೆರವೇರಿಸಿ ಆಶೀರ್ವಾದ ಪಡೆದರು. ಈ ಸಮಯದಲ್ಲಿ ಅಪಾರ ಭಕ್ತಾದಿಗಳು ಆಗಮಿಸಿ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ನಂತರ ಬಂದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಸ್ವಾಮಿಗಳು, ಡಾ. ಚನ್ನಬಸವಸ್ವಾಮಿಗಳು, ಆಂಗ್ರಾಪುರದ ಬಸವಲಿಂಗ ದೇಶಿ ಕೇಂದ್ರಸ್ವಾಮೀಜಿಗಳು, ಹೊಸಹಳ್ಳಿ ಮಠದ ಓಂಕಾರ ಸ್ವಾಮಿಗಳು, ಮೇದಿನಿ ಗ್ರಾಮ ಮಠದ ಶಿವಲಿಂಗ ಸ್ವಾಮಿಗಳು, ಪುರಿಗಾಲಿ ಮಠದ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಸೇರಿದಂತೆ ಹರಚರ ಮೂರ್ತಿಗಳು ಹಾಗೂ ಡಿ. ಹಲಸಳ್ಳಿ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
    1
    ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಡಿ. ಹಲಸಹಳ್ಳಿ ಗ್ರಾಮದ ಬಳಿ ಇರುವ ಗವಿಮಠಕ್ಕೆ ಮಠಾಧ್ಯಕ್ಷರಾದ ಷಡಕ್ಷರ ಸ್ವಾಮೀಜಿಯವರು ಹೊಸ ರೂಪ ನೀಡಿ ಇತಿಹಾಸ ಸೃಷ್ಟಿಸಿದ್ದಾರೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಮಠಾಧೀಶರಾದ ಸಿದ್ದಲಿಂಗ ಮಹಾಸ್ವಾಮೀಜಿಯವರು ಅತೀವ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಕ್ತರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡು, ಭಕ್ತರು ನೀಡಿದ ಸಹಕಾರದಿಂದ ಮಠದ ಅಭಿವೃದ್ಧಿಗಾಗಿ ಷಡಕ್ಷರ ಸ್ವಾಮೀಜಿಯವರು ನಿರಂತರವಾಗಿ ಶ್ರಮಿಸಿದ್ದಾರೆ.

ಗವಿಮಠದಲ್ಲಿ ಮೇ ಒಂದರಂದು ನಡೆದ ಕಳಶಾರೋಹಣ, ರಾಜಗೋಪುರ, ಬಸವ ವಿಗ್ರಹ, ಶ್ರೀ ಷಡಕ್ಷರ ಮಂಗಳ ಮಂಟಪ, ಹಾಗೂ ಅನ್ನದಾಸೋಹ ಕಟ್ಟಡದ ಉದ್ಘಾಟನೆ ಮತ್ತು ಧಾರ್ಮಿಕ ಸಭೆಗಳಿಗೆ ಇಂದಿಗೆ 48 ದಿನಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದಗಂಗಾ ಶ್ರೀಗಳು, ಹಲಸಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ಬೆಂಬಲದಿಂದ ಷಡಕ್ಷರ ಸ್ವಾಮಿಗಳು ಕಳೆದ ಮೇ ಒಂದರಂದು ಅದ್ದೂರಿಯಾಗಿ ಕಾರ್ಯಕ್ರಮವನ್ನು ನಡೆಸಿದ್ದಾರೆ ಎಂದು ಹೇಳಿದರು. ಕಳೆದ ಕೆಲವು ವರ್ಷಗಳಿಂದ ಅವರು ತುಂಬಾ ಶ್ರಮಪಟ್ಟು, ಹಿಂದೆ ಬಂಡೆಗಳಿಂದ ತುಂಬಿ, ಸಾರ್ವಜನಿಕ ಸಂಪರ್ಕ ಸೌಲಭ್ಯಗಳಿಲ್ಲದ ಗವಿಮಠಕ್ಕೆ ಹೊಸ ರೂಪವನ್ನು ತಂದುಕೊಟ್ಟಿದ್ದಾರೆ. ಈಗ ಭಕ್ತರಿಗೆ ಶುಭ ಕಾರ್ಯಗಳನ್ನು ಮಾಡಲು ಅನುಕೂಲವಾಗುವಂತೆ ಕಲ್ಯಾಣ ಮಂಟಪ, ಅನ್ನದಾಸೋಹ ಗೃಹ ನಿರ್ಮಿಸಿರುವುದಲ್ಲದೆ, ರಾಜಗೋಪುರ ನಿರ್ಮಾಣ, ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಗಿಡಮರಗಳನ್ನು ಬೆಳೆಸಿ ಸುಂದರವಾದ ವಾತಾವರಣ ನಿರ್ಮಿಸಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಮಠದ ಶೋಭೆಯನ್ನು ಹೆಚ್ಚಿಸಿದ್ದಾರೆ.

ತಾನು ಚಿಕ್ಕವನಿದ್ದಾಗ ಈ ಮಠಕ್ಕೆ ಬಂದಾಗ ಜಡೆ ಸ್ವಾಮಿಗಳು ಈ ಮಠದಲ್ಲಿದ್ದರು ಎಂಬುದನ್ನು ಸ್ಮರಿಸಿದ ಸಿದ್ದಗಂಗಾ ಶ್ರೀಗಳು, ಆಗಿನಿಂದಲೂ ಕನಕಪುರದ ದೇಗುಲ ಮಠಕ್ಕೂ, ಈ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಈಗಲೂ ಆ ಬಾಂಧವ್ಯ ಮುಂದುವರೆದಿರುವುದು ತುಂಬಾ ಸಂತೋಷದ ವಿಷಯ ಎಂದು ಹೇಳಿದರು. ಈ ಸ್ಥಳವು ಷಡಕ್ಷರ ದೇವನ ತಪೋನಿಷ್ಠ ಸ್ಥಳವಾಗಿದ್ದು, ರಾಜಶೇಖರ ವಿಲಾಸ ಎಂಬ ಗ್ರಂಥವನ್ನು ಬರೆದ ಸ್ಥಳವೆಂದು ತಿಳಿದುಬಂದಿದೆ. ಹಲವಾರು ಪುಣ್ಯ ಪುರುಷರ ತಪೋಭೂಮಿಯಾಗಿದ್ದ ಈ ಮಠವನ್ನು ಇನ್ನಷ್ಟು ಅಭಿವೃದ್ಧಿಪಡಿಸುವಲ್ಲಿ ಷಡಕ್ಷರ ಸ್ವಾಮೀಜಿಗೆ ನಿಮ್ಮ ಬೆಂಬಲ ಮತ್ತು ಸಹಕಾರ ಹೀಗೆ ಇರಲಿ ಎಂದು ಭಕ್ತಾದಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಗವಿಮಠದ ಷಡಕ್ಷರ ಸ್ವಾಮೀಜಿಯವರು ಸಿದ್ದಗಂಗಾ ಶ್ರೀಗಳಿಗೆ ಪಾದಪೂಜೆಯನ್ನು ನೆರವೇರಿಸಿ ಆಶೀರ್ವಾದ ಪಡೆದರು. ಈ ಸಮಯದಲ್ಲಿ ಅಪಾರ ಭಕ್ತಾದಿಗಳು ಆಗಮಿಸಿ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ನಂತರ ಬಂದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಸ್ವಾಮಿಗಳು, ಡಾ. ಚನ್ನಬಸವಸ್ವಾಮಿಗಳು, ಆಂಗ್ರಾಪುರದ ಬಸವಲಿಂಗ ದೇಶಿ ಕೇಂದ್ರಸ್ವಾಮೀಜಿಗಳು, ಹೊಸಹಳ್ಳಿ ಮಠದ ಓಂಕಾರ ಸ್ವಾಮಿಗಳು, ಮೇದಿನಿ ಗ್ರಾಮ ಮಠದ ಶಿವಲಿಂಗ ಸ್ವಾಮಿಗಳು, ಪುರಿಗಾಲಿ ಮಠದ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಸೇರಿದಂತೆ ಹರಚರ ಮೂರ್ತಿಗಳು ಹಾಗೂ ಡಿ. ಹಲಸಳ್ಳಿ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    1 hr ago
  • ವಕ್ಫ್ ಸಮಿತಿಗಳಲ್ಲಿ ಹಾಗೂ ನಿರ್ದಿಷ್ಟವಾಗಿ ಮೈಸೂರು ಜಿಲ್ಲಾ ವಕ್ಫ್ ಸಲಹಾ ಸಮಿತಿಯೊಂದರಲ್ಲಿ ನಡೆಯುವ ಅವ್ಯವಹಾರಗಳ ಸ್ವರೂಪದಲ್ಲಿನ ಸಾಮ್ಯತೆಗಳ ಕುರಿತಾದ ಮಾಹಿತಿ ಭಾರತದಲ್ಲಿ ವೈರಲ್ ಆಗಿದೆ. ಈ ವೈರಲ್ ಸಂದೇಶವು ಒಂದು ಸಮಿತಿಯಿಂದ ಇನ್ನೊಂದು ಸಮಿತಿಯ ನಡುವೆ ನಡೆಯುವ ದುರಾಚಾರಗಳ ವಿವರಗಳು ಮತ್ತು ಅವುಗಳ ನಡುವಿನ ಸಾಮ್ಯತೆಗಳ ಬಗ್ಗೆ ಬೆಳಕು ಚೆಲ್ಲುತ್ತದೆ.
    1
    ವಕ್ಫ್ ಸಮಿತಿಗಳಲ್ಲಿ ಹಾಗೂ ನಿರ್ದಿಷ್ಟವಾಗಿ ಮೈಸೂರು ಜಿಲ್ಲಾ ವಕ್ಫ್ ಸಲಹಾ ಸಮಿತಿಯೊಂದರಲ್ಲಿ ನಡೆಯುವ ಅವ್ಯವಹಾರಗಳ ಸ್ವರೂಪದಲ್ಲಿನ ಸಾಮ್ಯತೆಗಳ ಕುರಿತಾದ ಮಾಹಿತಿ ಭಾರತದಲ್ಲಿ ವೈರಲ್ ಆಗಿದೆ. ಈ ವೈರಲ್ ಸಂದೇಶವು ಒಂದು ಸಮಿತಿಯಿಂದ ಇನ್ನೊಂದು ಸಮಿತಿಯ ನಡುವೆ ನಡೆಯುವ ದುರಾಚಾರಗಳ ವಿವರಗಳು ಮತ್ತು ಅವುಗಳ ನಡುವಿನ ಸಾಮ್ಯತೆಗಳ ಬಗ್ಗೆ ಬೆಳಕು ಚೆಲ್ಲುತ್ತದೆ.
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಶಬರಿಮಲೆ ದರ್ಶನಕ್ಕೆ ತೆರಳುತ್ತಿದ್ದಾರೆ.
    1
    ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಶಬರಿಮಲೆ ದರ್ಶನಕ್ಕೆ ತೆರಳುತ್ತಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ರಾಜ್ಯದ MBBS ಪದವೀಧರರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ದೊರೆತಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHC) ಸೇವೆ ಸಲ್ಲಿಸಲು ಇಚ್ಛಿಸುವ ವೈದ್ಯರಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಇದು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ಕೈಗೊಂಡ ಮಹತ್ವದ ನಿರ್ಧಾರವಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದ್ದು, ಆಸಕ್ತ ವೈದ್ಯರು ನೇರವಾಗಿ DHO (ಜಿಲ್ಲಾ ಆರೋಗ್ಯ ಅಧಿಕಾರಿ) ಕಚೇರಿಗೆ ಅರ್ಜಿ ಸಲ್ಲಿಸಬಹುದು. ವಾಕ್-ಇನ್ ಇಂಟರ್ವ್ಯೂ ಮೂಲಕ ನೇಮಕಾತಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವಾರದೊಳಗೆ ಉದ್ಯೋಗ ದೊರೆಯಲಿದೆ. ಅಲ್ಲದೆ, ಈ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬ ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಸರ್ಕಾರ ಎಚ್ಚರಿಕೆ ನೀಡಿದೆ.
    1
    ರಾಜ್ಯದ MBBS ಪದವೀಧರರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ದೊರೆತಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHC) ಸೇವೆ ಸಲ್ಲಿಸಲು ಇಚ್ಛಿಸುವ ವೈದ್ಯರಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಇದು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ಕೈಗೊಂಡ ಮಹತ್ವದ ನಿರ್ಧಾರವಾಗಿದೆ.

ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದ್ದು, ಆಸಕ್ತ ವೈದ್ಯರು ನೇರವಾಗಿ DHO (ಜಿಲ್ಲಾ ಆರೋಗ್ಯ ಅಧಿಕಾರಿ) ಕಚೇರಿಗೆ ಅರ್ಜಿ ಸಲ್ಲಿಸಬಹುದು. ವಾಕ್-ಇನ್ ಇಂಟರ್ವ್ಯೂ ಮೂಲಕ ನೇಮಕಾತಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವಾರದೊಳಗೆ ಉದ್ಯೋಗ ದೊರೆಯಲಿದೆ. ಅಲ್ಲದೆ, ಈ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬ ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಸರ್ಕಾರ ಎಚ್ಚರಿಕೆ ನೀಡಿದೆ.
    user_A News24Kannada
    A News24Kannada
    Newsagent Bengaluru East, Bengaluru Urban•
    5 hrs ago
  • ಮಂಡ್ಯ ನಗರದಲ್ಲಿ ಪಾದಚಾರಿ ಮಾರ್ಗಗಳ (ಪುಟ್‌ಪಾತ್‌) ಅತಿಕ್ರಮಣದಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ನಡೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುವ ನಗರದ ನೂರಡಿ ರಸ್ತೆಯಲ್ಲಿ ವಾಹನಗಳ ನಿಲುಗಡೆಯೂ ಹೆಚ್ಚಾಗಿರುವುದರಿಂದ, ಪಾದಚಾರಿ ಮಾರ್ಗಗಳ ಅತಿಕ್ರಮಣದಿಂದ ಜನರು ರಸ್ತೆಯಲ್ಲೇ ಸಂಚರಿಸುವಂತಾಗಿದೆ. ವರ್ಷಗಳಿಂದಲೂ ಈ ಪಾದಚಾರಿ ಮಾರ್ಗಗಳ ಅತಿಕ್ರಮಣ ಸಮಸ್ಯೆಯು ಮಂಡ್ಯ ನಗರಸಭೆ ಅಧಿಕಾರಿಗಳ “ಗಾಢ ನಿದ್ರೆಯಲ್ಲಿದೆ” ಎಂದು ಆರೋಪಿಸಲಾಗಿದೆ. ನಗರಸಭೆ ಆಯುಕ್ತರಿಗೆ ಈ ಬಗ್ಗೆ ದೂರು ನೀಡಿದರೂ, ಅವರು ಬೇರೆ ಅಧಿಕಾರಿಗಳಿಗೆ ತಿಳಿಸಿ ಸುಮ್ಮನಾಗುತ್ತಾರೆಯೇ ಹೊರತು, ಸಮಸ್ಯೆಗೆ ಪರಿಹಾರ ದೊರಕಿಲ್ಲ. ವರ್ಷಗಳಿಂದಲೂ ಈ ಸಮಸ್ಯೆ ಬಗೆಹರಿಯದೆ ಉಳಿದಿದೆ.
    1
    ಮಂಡ್ಯ ನಗರದಲ್ಲಿ ಪಾದಚಾರಿ ಮಾರ್ಗಗಳ (ಪುಟ್‌ಪಾತ್‌) ಅತಿಕ್ರಮಣದಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ನಡೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುವ ನಗರದ ನೂರಡಿ ರಸ್ತೆಯಲ್ಲಿ ವಾಹನಗಳ ನಿಲುಗಡೆಯೂ ಹೆಚ್ಚಾಗಿರುವುದರಿಂದ, ಪಾದಚಾರಿ ಮಾರ್ಗಗಳ ಅತಿಕ್ರಮಣದಿಂದ ಜನರು ರಸ್ತೆಯಲ್ಲೇ ಸಂಚರಿಸುವಂತಾಗಿದೆ.

ವರ್ಷಗಳಿಂದಲೂ ಈ ಪಾದಚಾರಿ ಮಾರ್ಗಗಳ ಅತಿಕ್ರಮಣ ಸಮಸ್ಯೆಯು ಮಂಡ್ಯ ನಗರಸಭೆ ಅಧಿಕಾರಿಗಳ “ಗಾಢ ನಿದ್ರೆಯಲ್ಲಿದೆ” ಎಂದು ಆರೋಪಿಸಲಾಗಿದೆ. ನಗರಸಭೆ ಆಯುಕ್ತರಿಗೆ ಈ ಬಗ್ಗೆ ದೂರು ನೀಡಿದರೂ, ಅವರು ಬೇರೆ ಅಧಿಕಾರಿಗಳಿಗೆ ತಿಳಿಸಿ ಸುಮ್ಮನಾಗುತ್ತಾರೆಯೇ ಹೊರತು, ಸಮಸ್ಯೆಗೆ ಪರಿಹಾರ ದೊರಕಿಲ್ಲ. ವರ್ಷಗಳಿಂದಲೂ ಈ ಸಮಸ್ಯೆ ಬಗೆಹರಿಯದೆ ಉಳಿದಿದೆ.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.