logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

೫೦ ಅನಾಥ ವಾಹನಗಳ ಹರಾಜಿಗೆ ಮುಂದಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬೆಂಗಳೂರು:ನಗರದಲ್ಲಿ ಬೀದಿ ಬದಿ ಹಾಗೂ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ವರ್ಷಗಳಿಂದ ನಿಂತಿರುವ ಅನಾಥ ವಾಹನಗಳ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಕಠಿಣ ಕ್ರಮಕ್ಕೆ ಮುಂದಾಗಿದೆ. ಮೊದಲ ಹಂತದಲ್ಲಿ ಈಗಾಗಲೇ ಸೀಜ್ ಮಾಡಿ ಡಂಪಿಂಗ್ ಯಾರ್ಡ್‌ಗೆ ಸ್ಥಳಾಂತರಿಸಿರುವ ೫೦ ಅನಾಥ ವಾಹನಗಳನ್ನು ಹರಾಜು ಮಾಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ದಕ್ಷಿಣ ಮತ್ತು ಪಶ್ಚಿಮ ನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಹಳೆಯ ಹಾಗೂ ಮಾಲೀಕರಿಲ್ಲದ ವಾಹನಗಳನ್ನು ಕಳೆದ ಒಂದು ತಿಂಗಳಿನಿಂದ ಗುರುತಿಸಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಹಲವು ವಾಹನಗಳನ್ನು ಸೀಜ್ ಮಾಡಿ ಜಿಬಿಎ ಡಂಪಿಂಗ್ ಯಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ನೋಟಿಸ್ ನೀಡಿದರೂ ಮಾಲೀಕರ ಪತ್ತೆಯಿಲ್ಲ ಅನಾಥ ವಾಹನಗಳ ಮಾಲೀಕರಿಗೆ ಅವಕಾಶ ನೀಡುವ ಉದ್ದೇಶದಿಂದ ಜಿಬಿಎ ವತಿಯಿಂದ ನೋಟಿಸ್‌ಗಳನ್ನು ಅಂಟಿಸಿ, ಪತ್ರಿಕಾ ಪ್ರಕಟಣೆಗಳ ಮೂಲಕವೂ ಮಾಹಿತಿ ನೀಡಲಾಗಿದೆ. ಆದರೂ ಇದುವರೆಗೆ ೫೦ ವಾಹನಗಳ ಮಾಲೀಕರಲ್ಲಿ ಯಾರೂ ವಾಹನಗಳನ್ನು ಬಿಡಿಸಿಕೊಳ್ಳಲು ಮುಂದೆ ಬಂದಿಲ್ಲ. ಹೀಗಾಗಿ ಈ ವಾಹನಗಳನ್ನು ಅನಾಥ ವಾಹನಗಳೆಂದು ಪರಿಗಣಿಸಿ ಹರಾಜು ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಹೊಸ ತಲೆನೋವು! ಆದರೆ, ರಸ್ತೆಯಲ್ಲಿ ನಿಂತಿರುವ ವಾಹನಗಳಿಗೆ ನೋಟಿಸ್ ಅಂಟಿಸಿದ ಬಳಿಕ ಕೆಲವರು ಆ ವಾಹನಗಳನ್ನು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸ್ಥಳಾಂತರಿಸುತ್ತಿರುವುದು ಜಿಬಿಎ ಅಧಿಕಾರಿಗಳಿಗೆ ತಲೆನೋವಾಗಿದೆ. ವಿವಿಧ ನಗರಪಾಲಿಕೆಗಳ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆಯೂ ವಾಹನ ತೆರವು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಪಾದಚಾರಿ ಮಾರ್ಗವನ್ನು ವಾಹನ ನಿಲುಗಡೆಗೆ ಬಳಸಿಕೊಂಡು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟುಮಾಡುವವರ ವಿರುದ್ಧ ಕ್ರಮ ಮುಂದುವರಿಯಲಿದೆ. ಮೊದಲ ಹಂತದಲ್ಲಿ ೫೦ ವಾಹನಗಳ ಹರಾಜಿನೊಂದಿಗೆ ಅನಾಥ ವಾಹನಗಳ ತೆರವು ಅಭಿಯಾನಕ್ಕೆ ಜಿಬಿಎ ವೇಗ ನೀಡಲು ಮುಂದಾಗಿದೆ. ಸಾರ್ವಜನಿಕರ ಹಕ್ಕಿನ ಪಾದಚಾರಿ ಮಾರ್ಗ ಉಳಿಸಲು ಜಿಬಿಎ ಕಾರ್ಯಾಚರಣೆ ಯಶಸ್ವಿಯಾಗುತ್ತಾ? ಅನಾಥ ವಾಹನಗಳ ಹರಾಜಿನಿಂದ ರಸ್ತೆ ಒತ್ತುವರಿ ಸಮಸ್ಯೆಗೆ ಪರಿಹಾರ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

2 hrs ago
user_Savitha
Savitha
ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
2 hrs ago
e4ba5f19-f8f5-4fd2-bd59-e3b1b7946e67

೫೦ ಅನಾಥ ವಾಹನಗಳ ಹರಾಜಿಗೆ ಮುಂದಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬೆಂಗಳೂರು:ನಗರದಲ್ಲಿ ಬೀದಿ ಬದಿ ಹಾಗೂ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ವರ್ಷಗಳಿಂದ ನಿಂತಿರುವ ಅನಾಥ ವಾಹನಗಳ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಕಠಿಣ ಕ್ರಮಕ್ಕೆ ಮುಂದಾಗಿದೆ. ಮೊದಲ ಹಂತದಲ್ಲಿ ಈಗಾಗಲೇ ಸೀಜ್ ಮಾಡಿ ಡಂಪಿಂಗ್ ಯಾರ್ಡ್‌ಗೆ ಸ್ಥಳಾಂತರಿಸಿರುವ ೫೦ ಅನಾಥ ವಾಹನಗಳನ್ನು ಹರಾಜು ಮಾಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ದಕ್ಷಿಣ ಮತ್ತು ಪಶ್ಚಿಮ ನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಹಳೆಯ ಹಾಗೂ ಮಾಲೀಕರಿಲ್ಲದ ವಾಹನಗಳನ್ನು ಕಳೆದ ಒಂದು ತಿಂಗಳಿನಿಂದ ಗುರುತಿಸಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಹಲವು ವಾಹನಗಳನ್ನು ಸೀಜ್ ಮಾಡಿ ಜಿಬಿಎ ಡಂಪಿಂಗ್ ಯಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ನೋಟಿಸ್ ನೀಡಿದರೂ ಮಾಲೀಕರ ಪತ್ತೆಯಿಲ್ಲ ಅನಾಥ ವಾಹನಗಳ ಮಾಲೀಕರಿಗೆ ಅವಕಾಶ ನೀಡುವ ಉದ್ದೇಶದಿಂದ ಜಿಬಿಎ ವತಿಯಿಂದ ನೋಟಿಸ್‌ಗಳನ್ನು ಅಂಟಿಸಿ, ಪತ್ರಿಕಾ ಪ್ರಕಟಣೆಗಳ ಮೂಲಕವೂ ಮಾಹಿತಿ ನೀಡಲಾಗಿದೆ. ಆದರೂ ಇದುವರೆಗೆ ೫೦ ವಾಹನಗಳ ಮಾಲೀಕರಲ್ಲಿ ಯಾರೂ ವಾಹನಗಳನ್ನು ಬಿಡಿಸಿಕೊಳ್ಳಲು ಮುಂದೆ ಬಂದಿಲ್ಲ. ಹೀಗಾಗಿ ಈ ವಾಹನಗಳನ್ನು ಅನಾಥ ವಾಹನಗಳೆಂದು ಪರಿಗಣಿಸಿ ಹರಾಜು ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಹೊಸ ತಲೆನೋವು! ಆದರೆ, ರಸ್ತೆಯಲ್ಲಿ ನಿಂತಿರುವ ವಾಹನಗಳಿಗೆ ನೋಟಿಸ್ ಅಂಟಿಸಿದ ಬಳಿಕ ಕೆಲವರು ಆ ವಾಹನಗಳನ್ನು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸ್ಥಳಾಂತರಿಸುತ್ತಿರುವುದು ಜಿಬಿಎ ಅಧಿಕಾರಿಗಳಿಗೆ ತಲೆನೋವಾಗಿದೆ. ವಿವಿಧ ನಗರಪಾಲಿಕೆಗಳ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆಯೂ ವಾಹನ ತೆರವು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಪಾದಚಾರಿ ಮಾರ್ಗವನ್ನು ವಾಹನ ನಿಲುಗಡೆಗೆ ಬಳಸಿಕೊಂಡು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟುಮಾಡುವವರ ವಿರುದ್ಧ ಕ್ರಮ ಮುಂದುವರಿಯಲಿದೆ. ಮೊದಲ ಹಂತದಲ್ಲಿ ೫೦ ವಾಹನಗಳ ಹರಾಜಿನೊಂದಿಗೆ ಅನಾಥ ವಾಹನಗಳ ತೆರವು ಅಭಿಯಾನಕ್ಕೆ ಜಿಬಿಎ ವೇಗ ನೀಡಲು ಮುಂದಾಗಿದೆ. ಸಾರ್ವಜನಿಕರ ಹಕ್ಕಿನ ಪಾದಚಾರಿ ಮಾರ್ಗ ಉಳಿಸಲು ಜಿಬಿಎ ಕಾರ್ಯಾಚರಣೆ ಯಶಸ್ವಿಯಾಗುತ್ತಾ? ಅನಾಥ ವಾಹನಗಳ ಹರಾಜಿನಿಂದ ರಸ್ತೆ ಒತ್ತುವರಿ ಸಮಸ್ಯೆಗೆ ಪರಿಹಾರ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

More news from ಕರ್ನಾಟಕ and nearby areas
  • ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ: ಪಕ್ಷದ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳು ಎಂದ ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ನಮ್ಮ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳಾಗಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ. ಈ ಬೆಳವಣಿಗೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಪಕ್ಷದಲ್ಲಿ ಎಲ್ಲರೂ ಶಿಸ್ಬದ್ಧವಾಗಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಪ್ರತಿ ಹಂತದ ಕಾರ್ಯಕರ್ತರು ಸಂಪೂರ್ಣ ಶಿಸ್ಲಿನಿಂದ (ಡಿಸಿಪ್ಲಿನ್) ಇದ್ದಾರೆ ಎಂದು ಪುನರುಚ್ಚರಿಸಿದ ಡಿ.ಕೆ. ಶಿವಕುಮಾರ್, ಪಕ್ಷದ ಹಿತಾಸಕ್ತಿ ಮತ್ತು ನಿರ್ದೇಶನದಂತೆ ಎಲ್ಲರೂ ನಡೆದುಕೊಳ್ಳಲಿದ್ದಾರೆ ಎಂಬ ಸಂದೇಶವನ್ನು ನೀಡಿದರು.
    1
    ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ: ಪಕ್ಷದ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳು ಎಂದ ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ನಮ್ಮ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳಾಗಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ.  
ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ. ಈ ಬೆಳವಣಿಗೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಪಕ್ಷದಲ್ಲಿ ಎಲ್ಲರೂ ಶಿಸ್ಬದ್ಧವಾಗಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.  
ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಪ್ರತಿ ಹಂತದ ಕಾರ್ಯಕರ್ತರು ಸಂಪೂರ್ಣ ಶಿಸ್ಲಿನಿಂದ (ಡಿಸಿಪ್ಲಿನ್) ಇದ್ದಾರೆ ಎಂದು ಪುನರುಚ್ಚರಿಸಿದ ಡಿ.ಕೆ. ಶಿವಕುಮಾರ್, ಪಕ್ಷದ ಹಿತಾಸಕ್ತಿ ಮತ್ತು ನಿರ್ದೇಶನದಂತೆ ಎಲ್ಲರೂ ನಡೆದುಕೊಳ್ಳಲಿದ್ದಾರೆ ಎಂಬ ಸಂದೇಶವನ್ನು ನೀಡಿದರು.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    15 min ago
  • Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ! Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ!
    1
    Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ!

Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    40 min ago
  • ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ. citynextnews247
    1
    ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ
ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ
ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ. citynextnews247
    user_Yusuf Bepari
    Yusuf Bepari
    Local News Reporter ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ವಾಲ್ಮೀಕಿ ನಿಗಮದ ₹187 ಕೋಟಿ ಹಗರಣ! ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು | Janardhana Reddy Attack ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ರೂಪಾಯಿಗಳ ದುರ್ಬಳಕೆ ಪ್ರಕರಣ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ ಬಿ. ನಾಗೇಂದ್ರ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಮಾತನಾಡಿ, ಈ ಹಣ ವಾಲ್ಮೀಕಿ ಸಮುದಾಯದ ಲಕ್ಷಾಂತರ ಫಲಾನುಭವಿಗಳಿಗೆ ತಲುಪಬೇಕಾಗಿತ್ತು. ಆದರೆ ದುರ್ಬಳಕೆಯಿಂದ ಯುವಕರು, ಮಹಿಳೆಯರು ಹಾಗೂ ರೈತರು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ವಿಚಾರದಲ್ಲಿ ಮೌನವಾಗಿರುವುದೇಕೆ ಎಂಬ ಪ್ರಶ್ನೆಯನ್ನೂ ಬಿಜೆಪಿ ನಾಯಕರು ಎತ್ತಿದ್ದಾರೆ. 👉 ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ. #ValmikiScam #BNagendra #KarnatakaPolitics #BJP #Congress #JanardhanaReddy #BreakingNews #KarnatakaNews #ValmikiCorporation #PoliticalNews #Siddaramaiah #DKShivakumar #ASNNews24Kannada #KannadaNews #BellaryNews
    1
    ವಾಲ್ಮೀಕಿ ನಿಗಮದ ₹187 ಕೋಟಿ ಹಗರಣ! ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು | Janardhana Reddy Attack
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ರೂಪಾಯಿಗಳ ದುರ್ಬಳಕೆ ಪ್ರಕರಣ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ ಬಿ. ನಾಗೇಂದ್ರ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಶಾಸಕ ಜನಾರ್ದನ ರೆಡ್ಡಿ ಮಾತನಾಡಿ, ಈ ಹಣ ವಾಲ್ಮೀಕಿ ಸಮುದಾಯದ ಲಕ್ಷಾಂತರ ಫಲಾನುಭವಿಗಳಿಗೆ ತಲುಪಬೇಕಾಗಿತ್ತು. ಆದರೆ ದುರ್ಬಳಕೆಯಿಂದ ಯುವಕರು, ಮಹಿಳೆಯರು ಹಾಗೂ ರೈತರು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ವಿಚಾರದಲ್ಲಿ ಮೌನವಾಗಿರುವುದೇಕೆ ಎಂಬ ಪ್ರಶ್ನೆಯನ್ನೂ ಬಿಜೆಪಿ ನಾಯಕರು ಎತ್ತಿದ್ದಾರೆ.
👉 ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ.
#ValmikiScam #BNagendra #KarnatakaPolitics #BJP #Congress #JanardhanaReddy #BreakingNews #KarnatakaNews #ValmikiCorporation #PoliticalNews #Siddaramaiah #DKShivakumar #ASNNews24Kannada #KannadaNews #BellaryNews
    user_AsnNews24Kannada
    AsnNews24Kannada
    Local News Reporter Bengaluru East, Bengaluru Urban•
    5 hrs ago
  • ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆ ಬಗ್ಗೆ ಮಾತನಾಡಲು ಸಮಯವಿಲ್ಲ" ಬಳ್ಳಾರಿಯ ‘ರೈತ ಸಂತೆ’ಯಲ್ಲಿ ಸರ್ಕಾರದ ವಿರುದ್ಧ ರೈತ ಮುಖಂಡರ ತೀವ್ರ ವಾಗ್ದಾಳಿ ​ಬಳ್ಳಾರಿ: "ಸರ್ಕಾರದಲ್ಲಿರುವವರಿಗೆ ಉದ್ಯಮಿ ಗೌತಮ್ ಅದಾನಿ, ಕಿರಣ್ ಮಜುಂದಾರ್ ಅವರೊಂದಿಗೆ ಮಾತನಾಡಲು, ಅಂಬಾನಿ ಮಕ್ಕಳ ಮದುವೆಗೆ ಹೋಗಲು ಸಮಯವಿರುತ್ತದೆ. ಆದರೆ, ರಾಜ್ಯದಲ್ಲಿ ಪ್ರತಿದಿನ ಎರಡರಿಂದ ಮೂರು ಜನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಆ ಬಗ್ಗೆ ಚರ್ಚಿಸಲು ಸಮಯವಿಲ್ಲ," ಎಂದು ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ​ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬಳ್ಳಾರಿಯಲ್ಲಿ ಆಯೋಜಿಸಲಾಗಿದ್ದ ‘ರೈತ ಸಂತೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ​ಸಾಮಾಜಿಕ ಭದ್ರತೆಯ ಕೊರತೆಯೇ ಆತ್ಮಹತ್ಯೆಗೆ ಕಾರಣ: "ರೈತರು ಹೆಣ್ಣುಮಕ್ಕಳ ಮದುವೆ ಮಾಡಲು ಅಥವಾ ಜೂಜಾಟ ಆಡಲು ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕೃಷಿ ಸಚಿವರು ಸೇರಿದಂತೆ ಸರ್ಕಾರಿ ಪ್ರತಿನಿಧಿಗಳು ಬೇಜವಾಬ್ದಾರಿಯಿಂದ ಹೇಳುತ್ತಾರೆ. ಡಾ. ವೀರೇಶ್ ವರದಿಯಲ್ಲೂ ಇದೇ ರೀತಿಯ ಅಂಶಗಳಿದ್ದವು. ಸರ್ಕಾರಿ ಅಧಿಕಾರಿಗಳು, ಇಂಜಿನಿಯರ್‌ಗಳು, ವೈದ್ಯರು ಸಾಲ ಮಾಡುವುದಿಲ್ಲವೇ? ಮಕ್ಕಳ ಮದುವೆ ಮಾಡುವುದಿಲ್ಲವೇ? ಅವರೇಕೆ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ? ಏಕೆಂದರೆ ಅವರಿಗೆ ‘ಸಾಮಾಜಿಕ ಭದ್ರತೆ’ (Social Security) ಇದೆ. ಆದರೆ ಅನ್ನದಾತನಿಗೆ ಆ ಭದ್ರತೆ ಇಲ್ಲದಿರುವುದೇ ಸಾವುಗಳಿಗೆ ಪ್ರಮುಖ ಕಾರಣ" ಎಂದು ಅವರು ಮಾರ್ಮಿಕವಾಗಿ ನುಡಿದರು. ​ಬೆಳೆದ ಬೆಳೆಗೆ ಬೆಲೆಯಿಲ್ಲ, ಕೀಟಬಾಧೆ: ವಾಣಿಜ್ಯ ಬೆಳೆಗಳನ್ನು ಬೆಳೆಯುವ ರೈತರ ಸ್ಥಿತಿ ಶೋಚನೀಯವಾಗಿದೆ. ಪ್ರಸ್ತುತ ಅಡಿಕೆ ಹೊರತುಪಡಿಸಿ, ಕಬ್ಬು ಸೇರಿದಂತೆ ಯಾವ ಬೆಳೆಗೂ ಸೂಕ್ತ ಬೆಲೆಯಿಲ್ಲ. ಒಣ ಬೇಸಾಯ ಮಾಡುವವರು ಜೋಳ ಬೆಳೆದರೆ ಅದಕ್ಕೂ 'ಸೈನಿಕ ಹುಳು' (Fall Armyworm) ಬಾಧೆ ಕಾಡುತ್ತಿದೆ. ಕಳೆದ ವರ್ಷ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಟನ್‌ಗೆ ಕೇವಲ 500 ರೂ. ಹೆಚ್ಚಳಕ್ಕಾಗಿ ೯ ದಿನಗಳ ಕಾಲ ರಸ್ತೆಯಲ್ಲಿ ಕುಳಿತು ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು ಎಂದು ಅವರು ಕೃಷಿ ಕ್ಷೇತ್ರದ ದುಸ್ಥಿತಿಯನ್ನು ವಿವರಿಸಿದರು. ​ಆಶಾಕಿರಣವಾದ 'ರೈತ ಸಂತೆ': ಸರ್ಕಾರ ರೈತರ ಕೈಬಿಟ್ಟಿದ್ದರೂ, ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ 'ರೈತ ಸಂತೆ'ಗಳು ಅನ್ನದಾತನಿಗೆ ಆಶಾಕಿರಣವಾಗಿವೆ. "ಈಗಾಗಲೇ ಸುಮಾರು 64-65 ರೈತ ಸಂತೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದರಿಂದ, ಕಳೆದ 8-10 ತಿಂಗಳಲ್ಲಿ ಇದರಲ್ಲಿ ಪಾಲ್ಗೊಂಡ ಅನೇಕ ರೈತರ ಆರ್ಥಿಕ ಸಂಕಷ್ಟಗಳು ಕಡಿಮೆಯಾಗಿವೆ. ಸಾಲಬಾಧೆ ಮುಕ್ತರಾಗಿ ಅವರು ನೆಮ್ಮದಿಯ ಜೀವನದತ್ತ ಮುಖ ಮಾಡುತ್ತಿದ್ದಾರೆ, ಸ್ವಂತ ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಇದು ಬದಲಾವಣೆಯ ಸಂಕೇತ" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ​ಸರ್ಕಾರ ಕೇವಲ ಕಾರ್ಪೊರೇಟ್ ಕಂಪನಿಗಳ ಪರ ನಿಲ್ಲದೆ, ತಕ್ಷಣವೇ ಕೃಷಿ ಕ್ಷೇತ್ರಕ್ಕೆ ಹಾಗೂ ರೈತರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ರೈತ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು.
    1
    ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆ ಬಗ್ಗೆ ಮಾತನಾಡಲು ಸಮಯವಿಲ್ಲ"
ಬಳ್ಳಾರಿಯ ‘ರೈತ ಸಂತೆ’ಯಲ್ಲಿ ಸರ್ಕಾರದ ವಿರುದ್ಧ ರೈತ ಮುಖಂಡರ ತೀವ್ರ ವಾಗ್ದಾಳಿ
​ಬಳ್ಳಾರಿ: "ಸರ್ಕಾರದಲ್ಲಿರುವವರಿಗೆ ಉದ್ಯಮಿ ಗೌತಮ್ ಅದಾನಿ, ಕಿರಣ್ ಮಜುಂದಾರ್ ಅವರೊಂದಿಗೆ ಮಾತನಾಡಲು, ಅಂಬಾನಿ ಮಕ್ಕಳ ಮದುವೆಗೆ ಹೋಗಲು ಸಮಯವಿರುತ್ತದೆ. ಆದರೆ, ರಾಜ್ಯದಲ್ಲಿ ಪ್ರತಿದಿನ ಎರಡರಿಂದ ಮೂರು ಜನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಆ ಬಗ್ಗೆ ಚರ್ಚಿಸಲು ಸಮಯವಿಲ್ಲ," ಎಂದು ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
​ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬಳ್ಳಾರಿಯಲ್ಲಿ ಆಯೋಜಿಸಲಾಗಿದ್ದ ‘ರೈತ ಸಂತೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
​ಸಾಮಾಜಿಕ ಭದ್ರತೆಯ ಕೊರತೆಯೇ ಆತ್ಮಹತ್ಯೆಗೆ ಕಾರಣ:
"ರೈತರು ಹೆಣ್ಣುಮಕ್ಕಳ ಮದುವೆ ಮಾಡಲು ಅಥವಾ ಜೂಜಾಟ ಆಡಲು ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕೃಷಿ ಸಚಿವರು ಸೇರಿದಂತೆ ಸರ್ಕಾರಿ ಪ್ರತಿನಿಧಿಗಳು ಬೇಜವಾಬ್ದಾರಿಯಿಂದ ಹೇಳುತ್ತಾರೆ. ಡಾ. ವೀರೇಶ್ ವರದಿಯಲ್ಲೂ ಇದೇ ರೀತಿಯ ಅಂಶಗಳಿದ್ದವು. ಸರ್ಕಾರಿ ಅಧಿಕಾರಿಗಳು, ಇಂಜಿನಿಯರ್‌ಗಳು, ವೈದ್ಯರು ಸಾಲ ಮಾಡುವುದಿಲ್ಲವೇ? ಮಕ್ಕಳ ಮದುವೆ ಮಾಡುವುದಿಲ್ಲವೇ? ಅವರೇಕೆ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ? ಏಕೆಂದರೆ ಅವರಿಗೆ ‘ಸಾಮಾಜಿಕ ಭದ್ರತೆ’ (Social Security) ಇದೆ. ಆದರೆ ಅನ್ನದಾತನಿಗೆ ಆ ಭದ್ರತೆ ಇಲ್ಲದಿರುವುದೇ ಸಾವುಗಳಿಗೆ ಪ್ರಮುಖ ಕಾರಣ" ಎಂದು ಅವರು ಮಾರ್ಮಿಕವಾಗಿ ನುಡಿದರು.
​ಬೆಳೆದ ಬೆಳೆಗೆ ಬೆಲೆಯಿಲ್ಲ, ಕೀಟಬಾಧೆ:
ವಾಣಿಜ್ಯ ಬೆಳೆಗಳನ್ನು ಬೆಳೆಯುವ ರೈತರ ಸ್ಥಿತಿ ಶೋಚನೀಯವಾಗಿದೆ. ಪ್ರಸ್ತುತ ಅಡಿಕೆ ಹೊರತುಪಡಿಸಿ, ಕಬ್ಬು ಸೇರಿದಂತೆ ಯಾವ ಬೆಳೆಗೂ ಸೂಕ್ತ ಬೆಲೆಯಿಲ್ಲ. ಒಣ ಬೇಸಾಯ ಮಾಡುವವರು ಜೋಳ ಬೆಳೆದರೆ ಅದಕ್ಕೂ 'ಸೈನಿಕ ಹುಳು' (Fall Armyworm) ಬಾಧೆ ಕಾಡುತ್ತಿದೆ. ಕಳೆದ ವರ್ಷ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಟನ್‌ಗೆ ಕೇವಲ 500 ರೂ. ಹೆಚ್ಚಳಕ್ಕಾಗಿ ೯ ದಿನಗಳ ಕಾಲ ರಸ್ತೆಯಲ್ಲಿ ಕುಳಿತು ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು ಎಂದು ಅವರು ಕೃಷಿ ಕ್ಷೇತ್ರದ ದುಸ್ಥಿತಿಯನ್ನು ವಿವರಿಸಿದರು.
​ಆಶಾಕಿರಣವಾದ 'ರೈತ ಸಂತೆ':
ಸರ್ಕಾರ ರೈತರ ಕೈಬಿಟ್ಟಿದ್ದರೂ, ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ 'ರೈತ ಸಂತೆ'ಗಳು ಅನ್ನದಾತನಿಗೆ ಆಶಾಕಿರಣವಾಗಿವೆ. "ಈಗಾಗಲೇ ಸುಮಾರು 64-65 ರೈತ ಸಂತೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದರಿಂದ, ಕಳೆದ 8-10 ತಿಂಗಳಲ್ಲಿ ಇದರಲ್ಲಿ ಪಾಲ್ಗೊಂಡ ಅನೇಕ ರೈತರ ಆರ್ಥಿಕ ಸಂಕಷ್ಟಗಳು ಕಡಿಮೆಯಾಗಿವೆ. ಸಾಲಬಾಧೆ ಮುಕ್ತರಾಗಿ ಅವರು ನೆಮ್ಮದಿಯ ಜೀವನದತ್ತ ಮುಖ ಮಾಡುತ್ತಿದ್ದಾರೆ, ಸ್ವಂತ ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಇದು ಬದಲಾವಣೆಯ ಸಂಕೇತ" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
​ಸರ್ಕಾರ ಕೇವಲ ಕಾರ್ಪೊರೇಟ್ ಕಂಪನಿಗಳ ಪರ ನಿಲ್ಲದೆ, ತಕ್ಷಣವೇ ಕೃಷಿ ಕ್ಷೇತ್ರಕ್ಕೆ ಹಾಗೂ ರೈತರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ರೈತ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು.
    user_Aslam Basha
    Aslam Basha
    Local News Reporter Bengaluru East, Bengaluru Urban•
    6 hrs ago
  • ಸಾರ್ವಜನಿಕ ಸ್ಥಳದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದ ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ರೂ. ದಂಡ ಬೆಂಗಳೂರು:ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುರಪ್ಪನಪಾಳ್ಯ ಪ್ರದೇಶದಲ್ಲಿ ನಿಯಮಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ಸುರಿದ ಕ್ಲಿನಿಕ್‌ಗೆ ದಂಡ ವಿಧಿಸಲಾಗಿದೆ. ಇಂದು ಬೆಳಿಗ್ಗೆ ಬಿಟಿಎಂ ಲೇಔಟ್ 1ನೇ ಹಂತದ ಗುರಪ್ಪನಪಾಳ್ಯದ 9ನೇ ಮುಖ್ಯರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ವೈದ್ಯಕೀಯ ತ್ಯಾಜ್ಯಗಳಾದ ಸೂಜಿಗಳು, ಸಿರಿಂಜ್, ಪ್ಲಾಸ್ಟರ್ ಗಳು, ಮಾತ್ರೆ ಡಬ್ಬಗಳು ಹಾಗೂ ಇನ್ನಿತರ ಅಪಾಯಕಾರಿ ವೈದ್ಯಕೀಯ ತ್ಯಾಜ್ಯಗಳನ್ನು ಸುರಿದಿರುವುದನ್ನ ಗಮನಿಸಿದ ಪೌರಕಾರ್ಮಿಕರು ಮಾರ್ಷಲ್ ಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಮಾರ್ಷಲ್ ಗಳು ತ್ಯಾಜ್ಯಗಳನ್ನು ಪರಿಶೀಲಿಸಿದಾಗ ವೈದ್ಯಕೀಯ ತ್ಯಾಜ್ಯಗಳೊಡನೆ ಹೆಲ್ತ್ ಕೇರ್ ಸೆಂಟರ್ ಪ್ರಿಸ್ಕ್ರಿಪ್ಷನ್ ಪತ್ರಗಳು ಕಂಡುಬಂದಿದ್ದ ಮೇರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿರುವವರ ಮಾಹಿತಿ ಪತ್ತೆಯಾಗಿರುತ್ತದೆ. ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದು ಪಾಲಿಕೆಯ ಮಾರ್ಷಲ್‌ಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಮೇಲಧಿಕಾರಿಗಳ ನಿರ್ದೇಶನದ ಮೇರೆಗೆ ಸ್ಥಳಕ್ಕೆ ಧಾವಿಸಿದ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್‌ಗಳು, ಸಾರ್ವಜನಿಕರ ಆರೋಗ್ಯ ಮತ್ತು ಪರಿಸರಕ್ಕೆ ಹಾನಿಯುಂಟು ಮಾಡುವ ರೀತಿಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ಸುರಿದಿರುವ ಹೆಲ್ತ್ ಕೇರ್ ಸೆಂಟರ್‌ಗೆ ಸ್ಥಳದಲ್ಲೇ 40,000 ದಂಡ ವಿಧಿಸಿ, ಡಿಜಿಟಲ್ ಪಾವತಿ ಮೂಲಕ ವಸೂಲಿ ಮಾಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್ ಭಾಗವಹಿಸಿದ್ದರು.
    1
    ಸಾರ್ವಜನಿಕ ಸ್ಥಳದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದ ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ರೂ. ದಂಡ
ಬೆಂಗಳೂರು:ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುರಪ್ಪನಪಾಳ್ಯ ಪ್ರದೇಶದಲ್ಲಿ ನಿಯಮಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ಸುರಿದ ಕ್ಲಿನಿಕ್‌ಗೆ ದಂಡ ವಿಧಿಸಲಾಗಿದೆ.
ಇಂದು ಬೆಳಿಗ್ಗೆ ಬಿಟಿಎಂ ಲೇಔಟ್ 1ನೇ ಹಂತದ ಗುರಪ್ಪನಪಾಳ್ಯದ 9ನೇ ಮುಖ್ಯರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ವೈದ್ಯಕೀಯ ತ್ಯಾಜ್ಯಗಳಾದ ಸೂಜಿಗಳು, ಸಿರಿಂಜ್, ಪ್ಲಾಸ್ಟರ್ ಗಳು, ಮಾತ್ರೆ ಡಬ್ಬಗಳು ಹಾಗೂ ಇನ್ನಿತರ ಅಪಾಯಕಾರಿ ವೈದ್ಯಕೀಯ ತ್ಯಾಜ್ಯಗಳನ್ನು ಸುರಿದಿರುವುದನ್ನ ಗಮನಿಸಿದ ಪೌರಕಾರ್ಮಿಕರು ಮಾರ್ಷಲ್ ಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಮಾರ್ಷಲ್ ಗಳು ತ್ಯಾಜ್ಯಗಳನ್ನು ಪರಿಶೀಲಿಸಿದಾಗ ವೈದ್ಯಕೀಯ ತ್ಯಾಜ್ಯಗಳೊಡನೆ ಹೆಲ್ತ್ ಕೇರ್ ಸೆಂಟರ್ ಪ್ರಿಸ್ಕ್ರಿಪ್ಷನ್ ಪತ್ರಗಳು ಕಂಡುಬಂದಿದ್ದ ಮೇರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿರುವವರ ಮಾಹಿತಿ ಪತ್ತೆಯಾಗಿರುತ್ತದೆ. ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದು ಪಾಲಿಕೆಯ ಮಾರ್ಷಲ್‌ಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.
ಮೇಲಧಿಕಾರಿಗಳ ನಿರ್ದೇಶನದ ಮೇರೆಗೆ ಸ್ಥಳಕ್ಕೆ ಧಾವಿಸಿದ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್‌ಗಳು, ಸಾರ್ವಜನಿಕರ ಆರೋಗ್ಯ ಮತ್ತು ಪರಿಸರಕ್ಕೆ ಹಾನಿಯುಂಟು ಮಾಡುವ ರೀತಿಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು  ಅವೈಜ್ಞಾನಿಕವಾಗಿ ಸುರಿದಿರುವ ಹೆಲ್ತ್ ಕೇರ್ ಸೆಂಟರ್‌ಗೆ ಸ್ಥಳದಲ್ಲೇ 40,000 ದಂಡ ವಿಧಿಸಿ, ಡಿಜಿಟಲ್ ಪಾವತಿ ಮೂಲಕ ವಸೂಲಿ ಮಾಡಿರುತ್ತಾರೆ.
ಈ ಕಾರ್ಯಾಚರಣೆಯಲ್ಲಿ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್ ಭಾಗವಹಿಸಿದ್ದರು.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    12 hrs ago
  • ಈದ್ ಮಿಲಾದ್ ಅಂಗವಾಗಿ ಹೊಸಕೋಟೆಯಲ್ಲಿ ಬೃಹತ್ ಮೆರವಣಿಗೆ ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಹೊಸಕೋಟೆ: ಈದ್ ಮಿಲಾದ್ ಹಬ್ಬದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಅದ್ದೂರಿ ಬೃಹತ್ ಮೆರವಣಿಗೆ ನಡೆಯಿತು. ನಗರದ ಹಳೆ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ, ಪ್ರಮುಖ ರಸ್ತೆಗಳಲ್ಲಿ ಸಾಗಿತು. ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಲಾಯಿತು. ಜಾಮೀಯಾ ಮಸೀದಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮೆರವಣಿಗೆಗೆ ಮುಸ್ಲಿಂ ಮುಖಂಡರು ನೇತೃತ್ವ ವಹಿಸಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಡಿವೈಎಸ್ಪಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.
    4
    ಈದ್ ಮಿಲಾದ್ ಅಂಗವಾಗಿ ಹೊಸಕೋಟೆಯಲ್ಲಿ ಬೃಹತ್ ಮೆರವಣಿಗೆ
ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು
ಹೊಸಕೋಟೆ: ಈದ್ ಮಿಲಾದ್ ಹಬ್ಬದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಅದ್ದೂರಿ ಬೃಹತ್ ಮೆರವಣಿಗೆ ನಡೆಯಿತು.
ನಗರದ ಹಳೆ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ, ಪ್ರಮುಖ ರಸ್ತೆಗಳಲ್ಲಿ ಸಾಗಿತು. ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಲಾಯಿತು.
ಜಾಮೀಯಾ ಮಸೀದಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮೆರವಣಿಗೆಗೆ ಮುಸ್ಲಿಂ ಮುಖಂಡರು ನೇತೃತ್ವ ವಹಿಸಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಡಿವೈಎಸ್ಪಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    5 hrs ago
  • ಈದ್ ಮಿಲಾದ್ ಮೆರವಣಿಗೆಯಲ್ಲಿ ಘೋಷಣೆಗಳ ಗದ್ದಲ! ಬಸವನಗುಡಿಯಲ್ಲಿ ಯುವಕನ ಮೇಲೆ ಹಲ್ಲೆ, ಪೊಲೀಸ್ ಠಾಣೆ ಬಳಿ ಆಕ್ರೋಶ! ಈದ್ ಮಿಲಾದ್ ಮೆರವಣಿಗೆಯಲ್ಲಿ ಘೋಷಣೆಗಳ ಗದ್ದಲ! ಬಸವನಗುಡಿಯಲ್ಲಿ ಯುವಕನ ಮೇಲೆ ಹಲ್ಲೆ, ಪೊಲೀಸ್ ಠಾಣೆ ಬಳಿ ಆಕ್ರೋಶ!
    1
    ಈದ್ ಮಿಲಾದ್ ಮೆರವಣಿಗೆಯಲ್ಲಿ ಘೋಷಣೆಗಳ ಗದ್ದಲ!
ಬಸವನಗುಡಿಯಲ್ಲಿ ಯುವಕನ ಮೇಲೆ ಹಲ್ಲೆ, ಪೊಲೀಸ್ ಠಾಣೆ ಬಳಿ ಆಕ್ರೋಶ!
ಈದ್ ಮಿಲಾದ್ ಮೆರವಣಿಗೆಯಲ್ಲಿ ಘೋಷಣೆಗಳ ಗದ್ದಲ!
ಬಸವನಗುಡಿಯಲ್ಲಿ ಯುವಕನ ಮೇಲೆ ಹಲ್ಲೆ, ಪೊಲೀಸ್ ಠಾಣೆ ಬಳಿ ಆಕ್ರೋಶ!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.