ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀ ವೈ ಎಂ ಮಲ್ಲಿಕಾರ್ಜುನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2025-26ನೇ ಸಾಲಿನ ಸಾಂಸ್ಕೃತಿಕ,ಕ್ರೀಡಾ, ಎನ್ ಎಸ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಹಾಗೂ ರೆಡ್ ಕ್ರಾಸ್ ಪಠ್ಯ ಪೂರಕ ಚಟುವಟಿಕೆಗಳ ಸಮಾರೋಪ ಯಳಂದೂರು: ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀ ವೈ ಎಂ ಮಲ್ಲಿಕಾರ್ಜುನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2025-26ನೇ ಸಾಲಿನ ಸಾಂಸ್ಕೃತಿಕ,ಕ್ರೀಡಾ, ಎನ್ ಎಸ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಹಾಗೂ ರೆಡ್ ಕ್ರಾಸ್ ಪಠ್ಯ ಪೂರಕ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಸಕ ಎ ಆರ್ ಕೃಷ್ಣಮೂರ್ತಿ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಉದ್ಯೋಗವನ್ನು ಪಡೆಯುವುದಕ್ಕೆ ಸಜ್ಜಾಗಬೇಕಾಗಿದೆ. ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕ್ರತಿಕ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢತೆಯಿಂದ ಇರಬಹುದು. ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಮಾದರಿಯಾಗಿ ಬದುಕಬೇಕು ಮತ್ತು ಗುಣಮಟ್ಟ ಶಿಕ್ಷಣಪಡೆದು ವಿವಿಧ ಕೌಶಲ್ಯಗಳನ್ನು ರೂಡಿಸಿಕೊಳ್ಳಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ಸಂಸ್ಥಾನವು ಯಳಂದೂರು ತಾಲ್ಲೂಕಿನಾದ್ಯಾಂತ ಶಾಲೆಗಳನ್ನು ತೆರೆದು ಶಿಕ್ಷಣಕ್ಕೆ ಆದ್ಯತೆ ನೀಡಿದ್ದಾರೆ. ಯಳಂದೂರು ಪಟ್ಟಣದ ಸಂತೇ ಮಾಳ ಸಮೀಪವಿರುವ ಶಾಲೆ 97 ವರ್ಷ, ಹೊನ್ನೂರು ಶಾಲೆ 113 ವರ್ಷ, ಕೊಮಾರನಪುರ ಶಾಲೆ 70 ವರ್ಷ, ಕೆಸ್ತೂರು ಶಾಲೆ 70 ವರ್ಷ, ಯರಗಂಬಳ್ಳಿ ಶಾಲೆ 70 ವರ್ಷಗಳನ್ನು ದಾಟಿದೆ ಇಲ್ಲಿ ಅಧ್ಯಯನ ಮಾಡಿದವರು ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಖಾಸಗಿ ಶಾಲೆ ಮತ್ತು ಕಾಲೇಜಿಗಿಂತ ಸರ್ಕಾರಿ ಶಾಲೆ ಕಾಲೇಜಗಳಲ್ಲಿ ಗುಣಮಟ್ಟ ಶಿಕ್ಷಣವನ್ನು ನೀಡುತ್ತದೆ . ಈ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಸಂತಸವಾಗಿದೆ. ಜೂನಿಯರ್ ಕಾಲೇಜ್ ಆವರಣದಲ್ಲಿಯೇ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಇನ್ನೇನೂ ಕೆಲವು ದಿನಗಳಲ್ಲಿ ಗುದ್ದಲಿ ಪೂಜೆ ನಡೆಯಲಿದೆ ಸುಮಾರು ಎರಡುವರೆ ಕೋಟಿ ಅಂದಾಜಿನಲ್ಲಿ ಮೂರು ಅಂತಸ್ತಿನ ಕಟ್ಟಡ ನಿರ್ಮಾಣವಾಗುತ್ತದೆ 2007 ಮತ್ತು 2008 ರಲ್ಲಿ ಪ್ರಾರಂಭವಾದ ಈ ಪದವಿ ಕಾಲೇಜು ಸ್ವಂತ ಕಟ್ಟಡವಿಲ್ಲದೆ ಪದವಿ ಪೂರ್ವ ಕಾಲೇಜಿನ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಆದಷ್ಟು ಬೇಗ ಸ್ವಂತ ಕಟ್ಟಡ ನಿರ್ಮಾಣವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಚಂದ್ರು, ತಾಲ್ಲೂಕು ಗ್ಯಾರಂಟಿ ಅಧ್ಯಕ್ಷ ಪ್ರಭುಪ್ರಸಾದ್, ಪ್ರಾಂಶುಪಾಲರಾದ ಡಾ ವಿಜಯ, ಸಾಹಿತಿ ರವಿಕುಮಾರ್ ಕೊಮಾರನಪುರ,, ಕಂದಹಳ್ಳಿ ನಂಜುಂಡಸ್ವಾಮಿ ಪ್ರಾಧ್ಯಾಪಕರಾದ ಮನೋಜ್ ಕುಮಾರ್, ಶ್ವೇತಾ, ಗಿರಿಜಾ, ವಿಕಾಶ್, ಮುರಳಿ, ವಾಸುದೇವ, ವಿನೋದ್, ಅರುಣ್ ಕುಮಾರ್, ವಿದ್ಯಾರ್ಥಿ ಸಂಘದ ನಾಯಕರಾದ ನಾಗೇಂದ್ರ, ಸೈಯದ್ ಸಾಕೀಬ್, ಅಜಯ್, ಅನನ್ಯ, ಹಾಗೂ ಅತಿಥಿ ಉಪನ್ಯಾಸಕರು, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು.
ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀ ವೈ ಎಂ ಮಲ್ಲಿಕಾರ್ಜುನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2025-26ನೇ ಸಾಲಿನ ಸಾಂಸ್ಕೃತಿಕ,ಕ್ರೀಡಾ, ಎನ್ ಎಸ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಹಾಗೂ ರೆಡ್ ಕ್ರಾಸ್ ಪಠ್ಯ ಪೂರಕ ಚಟುವಟಿಕೆಗಳ ಸಮಾರೋಪ ಯಳಂದೂರು: ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀ ವೈ ಎಂ ಮಲ್ಲಿಕಾರ್ಜುನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2025-26ನೇ ಸಾಲಿನ ಸಾಂಸ್ಕೃತಿಕ,ಕ್ರೀಡಾ, ಎನ್ ಎಸ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಹಾಗೂ ರೆಡ್ ಕ್ರಾಸ್ ಪಠ್ಯ ಪೂರಕ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಸಕ ಎ ಆರ್ ಕೃಷ್ಣಮೂರ್ತಿ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಉದ್ಯೋಗವನ್ನು ಪಡೆಯುವುದಕ್ಕೆ ಸಜ್ಜಾಗಬೇಕಾಗಿದೆ. ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕ್ರತಿಕ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢತೆಯಿಂದ ಇರಬಹುದು. ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಮಾದರಿಯಾಗಿ ಬದುಕಬೇಕು ಮತ್ತು ಗುಣಮಟ್ಟ ಶಿಕ್ಷಣಪಡೆದು ವಿವಿಧ ಕೌಶಲ್ಯಗಳನ್ನು ರೂಡಿಸಿಕೊಳ್ಳಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ಸಂಸ್ಥಾನವು ಯಳಂದೂರು ತಾಲ್ಲೂಕಿನಾದ್ಯಾಂತ ಶಾಲೆಗಳನ್ನು ತೆರೆದು ಶಿಕ್ಷಣಕ್ಕೆ ಆದ್ಯತೆ ನೀಡಿದ್ದಾರೆ. ಯಳಂದೂರು ಪಟ್ಟಣದ ಸಂತೇ ಮಾಳ ಸಮೀಪವಿರುವ ಶಾಲೆ 97 ವರ್ಷ, ಹೊನ್ನೂರು ಶಾಲೆ 113 ವರ್ಷ, ಕೊಮಾರನಪುರ ಶಾಲೆ 70 ವರ್ಷ, ಕೆಸ್ತೂರು ಶಾಲೆ 70 ವರ್ಷ, ಯರಗಂಬಳ್ಳಿ ಶಾಲೆ 70 ವರ್ಷಗಳನ್ನು ದಾಟಿದೆ ಇಲ್ಲಿ ಅಧ್ಯಯನ ಮಾಡಿದವರು ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಖಾಸಗಿ ಶಾಲೆ ಮತ್ತು ಕಾಲೇಜಿಗಿಂತ ಸರ್ಕಾರಿ ಶಾಲೆ ಕಾಲೇಜಗಳಲ್ಲಿ ಗುಣಮಟ್ಟ ಶಿಕ್ಷಣವನ್ನು ನೀಡುತ್ತದೆ . ಈ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಸಂತಸವಾಗಿದೆ. ಜೂನಿಯರ್ ಕಾಲೇಜ್ ಆವರಣದಲ್ಲಿಯೇ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಇನ್ನೇನೂ ಕೆಲವು ದಿನಗಳಲ್ಲಿ ಗುದ್ದಲಿ ಪೂಜೆ ನಡೆಯಲಿದೆ ಸುಮಾರು ಎರಡುವರೆ ಕೋಟಿ ಅಂದಾಜಿನಲ್ಲಿ ಮೂರು ಅಂತಸ್ತಿನ ಕಟ್ಟಡ ನಿರ್ಮಾಣವಾಗುತ್ತದೆ 2007 ಮತ್ತು 2008 ರಲ್ಲಿ ಪ್ರಾರಂಭವಾದ ಈ ಪದವಿ ಕಾಲೇಜು ಸ್ವಂತ ಕಟ್ಟಡವಿಲ್ಲದೆ ಪದವಿ ಪೂರ್ವ ಕಾಲೇಜಿನ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಆದಷ್ಟು ಬೇಗ ಸ್ವಂತ ಕಟ್ಟಡ ನಿರ್ಮಾಣವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಚಂದ್ರು, ತಾಲ್ಲೂಕು ಗ್ಯಾರಂಟಿ ಅಧ್ಯಕ್ಷ ಪ್ರಭುಪ್ರಸಾದ್, ಪ್ರಾಂಶುಪಾಲರಾದ ಡಾ ವಿಜಯ, ಸಾಹಿತಿ ರವಿಕುಮಾರ್ ಕೊಮಾರನಪುರ,, ಕಂದಹಳ್ಳಿ ನಂಜುಂಡಸ್ವಾಮಿ ಪ್ರಾಧ್ಯಾಪಕರಾದ ಮನೋಜ್ ಕುಮಾರ್, ಶ್ವೇತಾ, ಗಿರಿಜಾ, ವಿಕಾಶ್, ಮುರಳಿ, ವಾಸುದೇವ, ವಿನೋದ್, ಅರುಣ್ ಕುಮಾರ್, ವಿದ್ಯಾರ್ಥಿ ಸಂಘದ ನಾಯಕರಾದ ನಾಗೇಂದ್ರ, ಸೈಯದ್ ಸಾಕೀಬ್, ಅಜಯ್, ಅನನ್ಯ, ಹಾಗೂ ಅತಿಥಿ ಉಪನ್ಯಾಸಕರು, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು.
- ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಗ್ರಾಮಸ್ಥರ ಆಕ್ರೋಶ ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಮತ್ತು ಗ್ರಾಮದಲ್ಲಿ ಅಭಿವೃದ್ಧಿ ಪರ ಆಡಳಿತವನ್ನು ನಿರ್ವಹಿಸಲು ಹಾಗೂ ಗ್ರಾಮದ ನೈರ್ಮಲ್ಯ ನರೇಗಾ ಕಾಮಗಾರಿಗಳಲ್ಲಿ ಭ್ರಷ್ಟಾಚಾರವನ್ನು ಎಸಗಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನವಿದ್ದು ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮತ್ತು ಮೇಲ್ವಿಚಾರಣೆ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮನವಿಗೆ ಅರ್ಜಿಗಳಿಗೆ ಸ್ಪಂದಿಸದೆ ಇರುವುದು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ಬದುಕಿಟ್ಟು ಮಲ್ಲಿಗೆಹಳ್ಳಿ, ಮದ್ದೂರು ಗ್ರಾಮದ ಸಾರ್ವಜನಿಕರೊಂದಿಗೆ ಉತ್ತಮ ಸಹ ಸಂಬಂಧವನ್ನು ಹೊಂದಿಲ್ಲದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಟರಾಜ್ ರವರನ್ನು ಗ್ರಾಮ ಪಂಚಾಯಿತಿಯಿಂದ ವರ್ಗಾವಣೆ ಮಾಡಿ ಮತ್ತು ಅವರು ಅಧಿಕಾರ ಅವಧಿಯಲ್ಲಿ ಮಾಡಲಾಗಿರುವ ಕಾಮಗಾರಿಗಳ ಪರಿಶೀಲನೆ ಮತ್ತು ಆಡಳಿತ ವ್ಯವಸ್ಥೆಯನ್ನು ತನಿಖೆ ಕೈಗೊಂಡು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗೆ ದೂರು ನೀಡಿದರೆ.2
- ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿತ ಸಮಯಕ್ಕೂ ಮುನ್ನ ಪಾದಯಾತ್ರೆಗೆ ತೆರಳಿದ್ದ ಯುವಕನ ಮೇಲೆ ಚಿರತೆ ದಾಳಿ ಮಾಡಿ ಪ್ರಾಣ ಕಸಿದಿದೆ. ಈ ದುರ್ಘಟನೆಗೆ ಶಾಸಕ ಎಂ.ಆರ್. ಮಂಜುನಾಥ್ ವಿಷಾದ ವ್ಯಕ್ತಪಡಿಸಿದ್ದು, ಭಕ್ತರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸುರಕ್ಷತಾ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದರು.1
- ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು1
- *ನರೀಪುರ ಗ್ರಾಮದಲ್ಲಿ ಸಡಗರದ ಬಸವ ಜಯಂತಿ ಆಚರಣೆ: ಜನಧ್ವನಿ ವೆಂಕಟೇಶ್ ಭಾಗಿ* ಕೊಳ್ಳೇಗಾಲ : ತಾಲೂಕಿನ ಧನಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೀಪುರ ಗ್ರಾಮದಲ್ಲಿ ಬಸವ ಜಯಂತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ 'ಜನಧ್ವನಿ' ವೆಂಕಟೇಶ್ ಅವರು ಪಾಲ್ಗೊಂಡು ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಗಣ್ಯರು, ಬಸವಣ್ಣನವರ ತತ್ವ ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿದ್ದು, ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ವೃಷಭೇಂದ್ರ ಸ್ವಾಮಿ, ಉಗನಿಯ ಮಹೇಶ್, ಲೋಕೇಶ್ ಜೆಟ್ಟಿ, ವಿಜಯೇಂದ್ರ ಕೂಡ್ಲೂರು, ಮಾದೇಶ್, ಲಿಂಗಾಚಾರಿ, ಚಿನ್ನರಾಜು ಹಾಗೂ ಗ್ರಾಮದ ಮುಖಂಡರುಗಳು, ಹಿರಿಯ ಯಜಮಾನರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ವರದಿ ಉಸ್ಮಾನ್ ಖಾನ್4
- ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಡಾ. ಬಿ.ಜೆ. ವಿಜಯ್ ಕುಮಾರ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಹೈಕಮಾಂಡ್ಗೆ ಒಮ್ಮತದ ನಿರ್ಣಯ ಕಳುಹಿಸಿದ್ದಾರೆ. ಕಳೆದ 25 ವರ್ಷಗಳಿಂದ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಅವರಿಗೆ ಅವಕಾಶ ವಂಚನೆಯಾಗಿದೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿ 7 ಎಫ್ಐಆರ್ಗಳನ್ನು ಎದುರಿಸಿದ ಅವರ ಸೇವೆಯನ್ನು ಪರಿಗಣಿಸಿ ಸ್ಥಾನ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.1
- All About Ways of Path for Life after Death & the Principals to Follow within Life to Live in *ಭಾರತ ನಲ್ಲಿ ವೈರಲ್*1
- ಆನೇಕಲ್: ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಯುವಕರು; ವಿಡಿಯೋ ವೈರಲ್. ಆನೇಕಲ್ನ ಹೊಸೂರು ಮುಖ್ಯರಸ್ತೆಯ ಹೊಂಪಲಘಟ್ಟ ಕ್ರಾಸ್ ಬಳಿ ಹಣದ ವಿಚಾರವಾಗಿ ಇಬ್ಬರು ಯುವಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಘಟನೆ ನಡೆದಿದೆ. ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿದ ಯುವಕರು, ಸಾರ್ವಜನಿಕರ ಎದುರೇ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಈ ದೃಶ್ಯಗಳನ್ನು ಹಾದಿಹೋಕರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನನಿಬಿಡ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಅಸಭ್ಯವಾಗಿ ವರ್ತಿಸಿದ ಯುವಕರ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.1
- ಚಾಮರಾಜನಗರ ಜಿಲ್ಲೆಯ ಹನೂರು ಶಾಸಕ ಎಂ.ಆರ್. ಮಂಜುನಾಥ್ ಅವರು ₹9.5 ಕೋಟಿ ವೆಚ್ಚದ ರಸ್ತೆ ಮತ್ತು ಸಮುದಾಯ ಭವನ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದರ ಜೊತೆಗೆ, ಕ್ಷೇತ್ರದ ನೀರಾವರಿ ಯೋಜನೆಗಳಿಗೆ ₹490 ಕೋಟಿ ಅನುದಾನ ಸಿಕ್ಕಿರುವುದನ್ನು ಘೋಷಿಸಿದರು. ಈ ಯೋಜನೆಗಳಿಂದ ಅಂತರ್ಜಲ ಮಟ್ಟ ಹೆಚ್ಚಾಗಿ, ಗ್ರಾಮಗಳಿಂದ ನಗರಗಳಿಗೆ ವಲಸೆ ಹೋಗುವುದನ್ನು ತಡೆಯುವ ಗುರಿ ಹೊಂದಲಾಗಿದೆ.4