ಮಳವಳ್ಳಿ ಗೌರಿ ಗಣೇಶ ಹಬ್ಬದ ಅಂಗವಾಗಿ ಹೆಬ್ಬಣಿ ಗ್ರಾಮದಲ್ಲಿ ಕ್ರೀಡಾಕೂಟ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಳವಳ್ಳಿ ಗೌರಿ ಗಣೇಶ ಹಬ್ಬದ ಅಂಗವಾಗಿ ಹೆಬ್ಬಣಿ ಗ್ರಾಮದಲ್ಲಿ ಕ್ರೀಡಾಕೂಟ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಳವಳ್ಳಿ:ತಾಲೂಕಿನ ಹೆಬ್ಬಣಿ ಗ್ರಾಮದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಗ್ರಾಮಸ್ಥರ ವತಿಯಿಂದ ಸೋಮವಾರ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮಣ್ಣಿನ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಮಹಾ ಮಂಗಳಾರತಿ ಮಾಡಲಾಯಿತು. ಪರಿಸರ ಸ್ನೇಹಿ ಮಣ್ಣಿನ ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ ಗ್ರಾಮಂತರ ವೃತ್ತ ನಿರೀಕ್ಷಕ ಬಸವರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕ್ರೀಡಾಕೂಟದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು . ಹಬ್ಬಗಳಲ್ಲಿ ಕೇವಲ ಪೂಜೆಗೆ ಸೀಮಿತವಾಗಬಾರದು. ಇಂತಹ ಕ್ರೀಡಾಕೂಟಗಳಿಂದ ಮಕ್ಕಳಲ್ಲಿ ಕ್ರೀಡಾ ಮನೋಭಾವ, ಒಗ್ಗಟ್ಟು ಬೆಳೆಯುತ್ತದೆ. ಮೊಬೈಲ್ ಬಿಟ್ಟು ಮೈದಾನಕ್ಕೆ ಬರಬೇಕು. ಮಾದಕ ವ್ಯಸನಗಳಿಂದ ದೂರವಿರಬೇಕು" ಎಂದು ಅವರು ಕಿವಿಮಾತು ಹೇಳಿದರು. *ಕಾರ್ಯಕ್ರಮದಲ್ಲಿ* ಗ್ರಾಮದ ಎಲ್ಲಾ ಜನಾಂಗದ ಮುಖಂಡರು, ಯುವಕ ಸಂಘದ ಪದಾಧಿಕಾರಿಗಳು, ಮಹಿಳೆಯರು ಮಕ್ಕಳು ಗ್ರಾಮಸ್ಥರು ಉಪಸ್ಥಿತರಿದ್ದರು.
ಮಳವಳ್ಳಿ ಗೌರಿ ಗಣೇಶ ಹಬ್ಬದ ಅಂಗವಾಗಿ ಹೆಬ್ಬಣಿ ಗ್ರಾಮದಲ್ಲಿ ಕ್ರೀಡಾಕೂಟ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಳವಳ್ಳಿ ಗೌರಿ ಗಣೇಶ ಹಬ್ಬದ ಅಂಗವಾಗಿ ಹೆಬ್ಬಣಿ ಗ್ರಾಮದಲ್ಲಿ ಕ್ರೀಡಾಕೂಟ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಳವಳ್ಳಿ:ತಾಲೂಕಿನ ಹೆಬ್ಬಣಿ ಗ್ರಾಮದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಗ್ರಾಮಸ್ಥರ ವತಿಯಿಂದ ಸೋಮವಾರ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮಣ್ಣಿನ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಮಹಾ ಮಂಗಳಾರತಿ ಮಾಡಲಾಯಿತು. ಪರಿಸರ ಸ್ನೇಹಿ ಮಣ್ಣಿನ ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ ಗ್ರಾಮಂತರ ವೃತ್ತ ನಿರೀಕ್ಷಕ ಬಸವರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕ್ರೀಡಾಕೂಟದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು . ಹಬ್ಬಗಳಲ್ಲಿ ಕೇವಲ ಪೂಜೆಗೆ ಸೀಮಿತವಾಗಬಾರದು. ಇಂತಹ ಕ್ರೀಡಾಕೂಟಗಳಿಂದ ಮಕ್ಕಳಲ್ಲಿ ಕ್ರೀಡಾ ಮನೋಭಾವ, ಒಗ್ಗಟ್ಟು ಬೆಳೆಯುತ್ತದೆ. ಮೊಬೈಲ್ ಬಿಟ್ಟು ಮೈದಾನಕ್ಕೆ ಬರಬೇಕು. ಮಾದಕ ವ್ಯಸನಗಳಿಂದ ದೂರವಿರಬೇಕು" ಎಂದು ಅವರು ಕಿವಿಮಾತು ಹೇಳಿದರು. *ಕಾರ್ಯಕ್ರಮದಲ್ಲಿ* ಗ್ರಾಮದ ಎಲ್ಲಾ ಜನಾಂಗದ ಮುಖಂಡರು, ಯುವಕ ಸಂಘದ ಪದಾಧಿಕಾರಿಗಳು, ಮಹಿಳೆಯರು ಮಕ್ಕಳು ಗ್ರಾಮಸ್ಥರು ಉಪಸ್ಥಿತರಿದ್ದರು.
- ಪಟ್ಟಣದಲ್ಲಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಸಚಿವ ನರೇಂದ್ರಸ್ವಾಮಿ ಚಾಲನೆ ಮಳವಳ್ಳಿ ; ಕಳೆದ 45 ವರ್ಷಗ ಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟ ಣದ ಶಾಂತಿ ಕಾಲೇಜು ಮುಂಭಾ ಗದ 33 ಎಕರೆ ನಿವೇಶನ ಹಂಚಿಕೆ ಕಾರ್ಯಕ್ಕೆ ಮುಕ್ತಿ ದೊರಕಿದ್ದು ನಿವೇಶನ ಹಂಚಿಕೆ ಕಾರ್ಯಕ್ಕೆ ಕೃಷಿ ಸಚಿವರೂ ಅದ ಶಾಸಕ ಪಿ ಎಂ ನರೇಂದ್ರಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ನಿವೇಶನ ಆವರಣದಲ್ಲಿ ಮಂಗಳವಾರ ಸಾಯಂಕಾಲ 5.30 ರ ಸಮಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಲಾಟರಿ ಮೂಲಕ ಫಲಾನುಭವಿಗಳ ಸೈಟ್ ಸಂಖ್ಯೆಯನ್ನು ಅವರೇ ಆಯ್ಕೆ ಮಾಡಿಕೊಳ್ಳುವ ಸಚಿವ ನರೇಂದ್ರಸ್ವಾಮಿ ನಿವೇಶನ ಹಂಚಿಕೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಕಳೆದ 45 ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಕಾಲದಲ್ಲಿ ಭೂಸ್ವಾಧೀನ ವಾಗಿದ್ದ ಈ ನಿವೇಶನ ಜಮೀನಿನ ಮಾಲೀಕರು ಹಾಗೂ ಪುರಸಭೆ ನಡುವಿನ ವ್ಯಾಜ್ಯ ಹೈಕೋಟ್೯ ಮೆಟ್ಟಲೇ ರಿದ ಪರಿಣಾಮ ಅಂದಿನಿಂ ದಲೂ ನೆನೆಗುದಿಗೆ ಬಿದ್ದಿತ್ತಾ ದರೂ ತಾವು 2 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ವೇಳೆ ಈ ಹಂಚಿಕೆ ಕಾರ್ಯಕ್ಕೆ ಚಾಲನೆ ನೀಡಿದ್ದಾಗಿ ತಿಳಿಸಿದರು. ಅಂದು ಜಮೀನಿನ ಮಾಲೀಕರ ಜೊತೆ ಚೆರ್ಚೆ ನಡೆಸಿ ವಿವಾದ ಬಗೆಹರಿಸಿದ್ದರ ಜೊತೆಗೆ ನ್ಯಾಯಾಲಯದ ತಡೆಯಾಜ್ಞೆ ತೆರೆವು ಗೊಳಿಸಿ ಜನರಿಗೆ ನೀಡಿದ ಭರವಸೆಯಂತೆ ಇದೀಗ ನಿವೇಶ ನಗಳ ಹಂಚಿಕೆಗೆ ಇಂದು ಚಾಲನೆ ನೀಡುತ್ತಿರುವುದಾಗಿ ಹೇಳಿದರು. ಇಂದು ಸೈಟ್ ನಂಬರ್ ಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದ್ದು ಸಧ್ಯದಲ್ಲಿ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸುವುದಾಗಿ ತಿಳಿಸಿದ ಅವರು ನಿವೇಶ ಹಂಚಿಕೆ ವಿಚಾರದಲ್ಲಿ ಹಿಂದಿನವರಂತೆ ರಾಜಕಾರಣ ಮಾಡದೆ ಬಡ ಪಲಾನುಭವಿಗಳಿಗೆ ಪ್ರಾಮಾಣಿ ಕವಾಗಿ ನಿವೇಶನ ದೊರಕಿಸಿ ಕೊಡುತ್ತಿರುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ನಿವೇಶನ ಹಂಚಿಕೆ ಯನ್ನು ಪಾರದರ್ಶಕವಾಗಿ ನಡೆಸುತ್ತಿರುವ ಸಚಿವ ಪಿ ಎಂ ನರೇಂದ್ರಸ್ವಾಮಿ ಅವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಜಿ ಪಂ ಸಿಇಒ ನಂದಿನಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ , ನಗರಾಭಿವೃದ್ದಿ ಇಲಾಖೆ ಯೋಜನಾಧಿಕಾರಿ ಚಂದ್ರ ಶೇಖರ್. ಮುಖ್ಯಾಧಿ ಕಾರಿ ನಾಗರತ್ನ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿ ದ್ದರು.1
- ಗೌರಿ ಗಣೇಶ ಹಬ್ಬಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ: ಕೃಷಿ ಸಚಿವ ನರೇಂದ್ರಸ್ವಾಮಿ ಗೌರಿ ಗಣೇಶ ಹಬ್ಬ ಅಂಗವಾಗಿ ನಿಮ್ಮೆಲ್ಲರಿಗೂ ಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದರು. ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನದ ಆವರಣದಲ್ಲಿ ನಗರಾಭಿವೃದ್ದಿ ಇಲಾಖೆ , ರಾಜೀವ್ ಗಾಂಧಿ ವಸತಿ ನಿಗಮ , ಜಿಲ್ಲಾಢಳಿತ, ಪುರಸಭೆ ವತಿಯಿಂದ ಆರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯ ವಿರೋಧವಿದ್ದರೂ ನಾನು ಅಂಜದೆ ಛಲ ಬಿಡದೆ ನಿವೇಶನ ಹಂಚಿಕೆ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು ಇದೇ ನಿವೇಶನಕ್ಕೆ ಕರೆಸಿ ವಿವಿಧ ಕಾಮಗಾರಿಗಳ ಜೊತೆಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು. ಈ ವೇಳೆ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಹಲವರು ಇದ್ದರು.1
- ಹಲಗೂರಿನಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ ಬ್ರಹ್ಮನ್ ಮಠದಲ್ಲಿ ಸ್ವರ್ಣ ಗೌರಿಗೆ ವಿಶೇಷ ಪೂಜೆ ಹಲಗೂರು ಬೃಹನ್ಮಠದಲ್ಲಿ ಸ್ವರ್ಣಗೌರಿಗೆ ವಿಶೇಷ ಪೂಜೆ. ಹಲಗೂರು: ಇಲ್ಲಿನ ಮಠದ ಬೀದಿಯಲ್ಲಿರುವ ಬೃಹನ್ಮಠದಲ್ಲಿ ಸ್ವರ್ಣ ಗೌರಿಗೆ ಮುತ್ತೈದೆಯರು ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿ ನಂತರ ಮುತ್ತೈದೆಯರಿಗೆ ಅರಿಶಿನ ಕುಂಕುಮ ನೀಡಿ ವಿಶೇಷವಾಗಿ ಪೂಜೆ ಸಲ್ಲಿಸಿ ನಮ್ಮ ಕಷ್ಟಕಾರ್ಪಣ್ಯಗಳನ್ನು ನಿವಾರಿಸುವಂತೆ ಸ್ವರ್ಣಗೌರಿಯಲ್ಲಿ ಪ್ರಾರ್ಥಿಸಿದರು. ಸೋಮವಾರ ಸಮೀಪದ ಶಿಂಷಾ ನದಿಯ ದಡದಲ್ಲಿ ಬೆಳಗಿನ ಪ್ರಾಂತ್ಯಕಾಲದ ಬ್ರಹ್ಮ ಮುಹೂರ್ತದಲ್ಲಿ ಅರಸಿನದಿಂದ ತಯಾರಿಸಿದ ಸ್ವರ್ಣ ಗೌರಿಯನ್ನು ತಂದು ಹಲಗೂರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮುಖಾಂತರ ಹಲಗೂರಿನ ಬೃಹನ್ಮಠಕ್ಕೆ ತಂದಾಗ ಮುತ್ತೈದೆಯರು ಆರತಿ ಎತ್ತಿ ವಿಶೇಷವಾಗಿ ಪೂಜೆ ಸಲ್ಲಿಸಿ ಸ್ವರ್ಣ ಗೌರಿಯನ್ನು ಬರಮಾಡಿಕೊಂಡರು. ಶ್ರೀ ವಿದ್ಯಾ ಗಣಪತಿ ದೇವಸ್ಥಾನದ ಪ್ರಸಾದ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಶಿಂಷಾ ನದಿಯಿಂದ ಅರಸಿನ ಮತ್ತು ಮರಳಿನಿಂದ ಸ್ವರ್ಣ ಗೌರಿಯನ್ನು ಮಾಡಿಕೊಂಡು ಮಠಕ್ಕೆ ತರಲಾಯಿತು. ನಂತರ ಗೃಹಿಣಿಯರು ವಿಶೇಷವಾಗಿ ಪೂಜೆ ಸಲ್ಲಿಸುತಿದ್ದರೆ ಎಂದರು. ಸ್ವರ್ಣ ಗೌರಿ ಭಕ್ತ ಮಂಡಳಿಯ ತೋಂಟದಾರ್ಯ ನಾಗೇಂದ್ರ ಮಾತನಾಡಿ 2026 ನೇ ಸಾಲಿನ ಸ್ವರ್ಣ ಗೌರಿ ಮಹೋತ್ಸವವನ್ನು ನಮ್ಮ ಸ್ವರ್ಣಗೌರಿ ಭಕ್ತ ಮಂಡಳಿ ವತಯಿಂದ ಆಚರಿಸಿಕೊಂಡು ಬಂದು 14ನೇ ಸೋಮವಾರ ದಿನದಿಂದ ಪ್ರತಿದಿನ ಸಂಜೆ 9 ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮವನ್ನು ನಡೆಸಿ ಮಹಾಮಂಗಳಾರತಿ ನಂತರ ಪ್ರಸಾದ ವಿನಯೋಗಿಸಲಾಗುತ್ತದೆ. ಮತ್ತು ಸೆಪ್ಟೆಂಬರ್ 22ನೇ ಮಂಗಳವಾರ ಸ್ವರ್ಣ ಗೌರಿಯನ್ನು ಮುತ್ತಿನ ಪಲ್ಲಕಿಯಲ್ಲಿ ಕೂರಿಸಿ ಮೆರವಣಿಗೆ ಮುಖಾಂತರ ವಿಸರ್ಜಿಸಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಸ್ವರ್ಣ ಗೌರಿಯ ಕೃಪೆಗೆ ಪಾತರಾಗುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ವರ್ಣ ಗೌರಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.1
- ರಾಜಕಾರಣ ಮಾಡಲು ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿದ್ದಾರೆ - ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಂಡ್ಯ-ಮದ್ದೂರಿನಲ್ಲಿ ನಡೆಯುತ್ತಿರುವ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸುತ್ತಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಉಸ್ತುವಾರಿ ಸಚಿವ ಚಲುವಾರಾಯಸ್ವಾಮಿ, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಾರದ ಬಿಜೆಪಿ ನಾಯಕರು, ಗಣೇಶ ವಿಸರ್ಜನೆ ನೆಪದಲ್ಲಿ ರಾಜಕಾರಣ ಮಾಡಲು ಮಂಡ್ಯಕ್ಕೆ ಬರುತ್ತಿದ್ದಾರೆ ಬರುತ್ತಿದ್ದಾರೆ. ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜಿಸಬೇಕು ಎಂಬುದು ಗೊತ್ತಿದೆ, ಬಿಜೆಪಿಯವರಿಂದ ಕಲಿಯ ಬೇಕಿಲ್ಲ ರಾಜಕೀಯವಾಗಿ ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡಲು ಬರುತ್ತಿದೆ, ಅವರು ಜಿಲ್ಲೆ ಪ್ರವೇಶಿಸದಂತೆ ಪೊಲೀಸ್ ಭದ್ರತೆ ಒದಗಿಸಿ ವಾಪಸ್ ಕಳುಹಿಸಲಾಗುವುದು ಎಂದುಚಲುವರಾಯಸ್ವಾಮಿ ಗಣೇಶ ವಿಸರ್ಜನೆಗೆ ಬರುತ್ತಿರುವ ಬಾಜಪಾ ನಾಯಕರಿಗೆ ಎಚ್ಚರಿಕೆ ನೀಡಿದರು.1
- ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ ಚನ್ನಪಟ್ಟಣ--ತಂತ್ರಜ್ಞಾನದ ಯುಗದಲ್ಲಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ ದಿಲೀಪ್ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್ ಅನ್ನು ಸಂಸ್ಥೆಯ ಕಾರ್ಯ ದರ್ಶಿಗಳಾದ ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.1
- ಚಾಮರಾಜನಗರ: ಹುಲಿ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ನ್ಯೂಸ್ ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿಡ 9ಗ್ರಾಮದ ಬಸವಣ್ಣ(65) ಮೃತಪಟ್ಟ ವ್ಯಕ್ತಿ. ಈತ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಏಕಾಏಕಿ ದಾಳಿ ನಡೆಸಿರುವ ಹುಲಿ ವ್ಯಕ್ತಿಯ ಅರ್ಧ ದೇಹವನ್ನೇ ತಿಂದು, ಬಳಿಕ ಸಮೀಪದಲ್ಲೇ ಇದ್ದ ಕಬ್ಬಿನ ತೋಟಕ್ಕೆ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ. ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಜಮೀನಿಗೆ ತೆರಳಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಚಾರ ತಿಳಿದು ಸ್ಥಳಕ್ಕೆ ಪೊಲೀಸ್ ಇಲಾಖೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ: ವಿಚಾರ ತಿಳಿದು ಸ್ಥಳಕ್ಕೆ ಪೊಲೀಸ್ ಇಲಾಖೆ ಅಧಿಕಾರಿಗಳು ಆಗಮಿಸಿದ್ದಾರೆ. ಆದರೆ, ಅರಣ್ಯ ಇಲಾಖೆ ಅಧಿಕಾರಿಗಳು ಈವರೆಗೂ ಬಂದಿಲ್ಲ ಎಂದು ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿದರೆ ಸ್ವಿಚ್ ಆಫ್ ಬರುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.2
- ಹನೂರು: ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳೆಯರು ನೀರಿಗಾಗಿ ಕೆಲಸಕಾರ್ಯಗಳನ್ನು ಬಿಟ್ಟು ಸಂಜೆವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಮನಗುಡ್ಡೆಯಿಂದ ಟ್ಯಾಂಕರ್ ಮೂಲಕ ಪೂರೈಸುತ್ತಿರುವ ನೀರು ಸ್ವಚ್ಛವಾಗಿಲ್ಲ ಹಾಗೂ ಕುಡಿಯಲು ಯೋಗ್ಯವಲ್ಲ ಎಂದು ಆರೋಪಿಸಿದರು. ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ನೀರಿನ ಗುಣಮಟ್ಟ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜೇಂದ್ರ, ಗಿರೀಶ್, ಬಾಬು, ಅಜಯ್, ಪ್ರಯಾಗ್ ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು. ಹನೂರು: ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳೆಯರು ನೀರಿಗಾಗಿ ಕೆಲಸಕಾರ್ಯಗಳನ್ನು ಬಿಟ್ಟು ಸಂಜೆವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಮನಗುಡ್ಡೆಯಿಂದ ಟ್ಯಾಂಕರ್ ಮೂಲಕ ಪೂರೈಸುತ್ತಿರುವ ನೀರು ಸ್ವಚ್ಛವಾಗಿಲ್ಲ ಹಾಗೂ ಕುಡಿಯಲು ಯೋಗ್ಯವಲ್ಲ ಎಂದು ಆರೋಪಿಸಿದರು. ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ನೀರಿನ ಗುಣಮಟ್ಟ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜೇಂದ್ರ, ಗಿರೀಶ್, ಬಾಬು, ಅಜಯ್, ಪ್ರಯಾಗ್ ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು.1
- 33 ಎಕರೆಯ 896 ನಿವೇಶನವನ್ನು ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮ ಮಳವಳ್ಳಿ: 44 ವರ್ಷಗಳಿಂದ ನೆನೆಗುಂದಿ ಬಿದ್ದಿದ್ದ 33 ಎಕರೆಯ 896 ನಿವೇಶನವನ್ನು ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮ ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಕೃಷಿ ಸಚಿವ ನರೇಂದ್ರಸ್ವಾಮಿ ಉದ್ಘಾಟಿಸಿದರು. ಈ ವೇಳೆ 23 ವಾರ್ಡುನ 896 ನಿವೇಶನ ಫಲಾನುಭವಿಗಳಿಗೆ ತಮ್ಮ ತಮ್ಮ ನಿವೇಶನದ ಆಯ್ಕೆ ಮಾಡಲು ಫಲಾನುಭವಿಗಳು ಲಾಟರಿ ಮೂಲಕ ಅವಕಾಶ ಕಲ್ಪಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.1