Shuru
Apke Nagar Ki App…
ಹುಳಿಯಾರಿನ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
Huliyarkiran
ಹುಳಿಯಾರಿನ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
More news from ಕರ್ನಾಟಕ and nearby areas
- ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು. ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು.1
- ‘ಮಾನವೀಯ ನೆರವಿಗೆ ಕೃತಜ್ಞತೆಯಾಗಿ ನಾವೇ ಜಿಪಿಎ ಕೊಟ್ಟಿದ್ದೇವೆ’: ಅಕ್ರಮ ಖಾತೆ ಆರೋಪ ತಳ್ಳಿಹಾಕಿದ ಕುಟುಂಬಸ್ಥರು, ದಾಖಲೆ ಸಮೇತ ರಮೇಶ್ ಸ್ಪಷ್ಟನೆ. ತುರುವೇಕೆರೆ: ರೈತ ಸಂಘ ತನ್ನ ವಿರುದ್ಧ ಮಾಡಿರುವ ಅಕ್ರಮ ಖಾತೆ ವರ್ಗಾವಣೆ ಆರೋಪ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದ ಹಳೆಯ ರಾಜಕೀಯ ದ್ವೇಷದಿಂದ ಸುಳ್ಳು ವಿವಾದ ಸೃಷ್ಟಿಸಲಾಗುತ್ತಿದೆ ಎಂದು ನಾಗೇಗೌಡನಪಾಳ್ಯದ ಮಾಜಿ ವಿಎಸ್ಎಸ್ಎನ್ ಅಧ್ಯಕ್ಷ ರಮೇಶ್ ಪಿ. ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಜಮೀನಿನ ಮೂಲ ದಾಖಲೆಗಳು ಹಾಗೂ ಆಸ್ಪತ್ರೆಯ ಚಿಕಿತ್ಸೆಯ ಫೋಟೋಗಳನ್ನು ಪ್ರದರ್ಶಿಸಿ ಅವರು ಮಾತನಾಡಿದರು. ಮಾನವೀಯ ನೆರವು ಮತ್ತು ಕಾನೂನುಬದ್ಧ ಒಪ್ಪಂದ: ಮುಹಮ್ಮದ್ ಗೌಸ್ ಎಂಬುವವರಿಗೆ ಸರ್ಕಾರದಿಂದ ಸುಮಾರು 3 ಎಕರೆ ದರಖಾಸ್ತು ಜಮೀನು ಮಂಜೂರಾಗಿತ್ತು. 1991–92ರಲ್ಲಿ ಅರ್ಜಿ ಸಲ್ಲಿಸಿ, 2008ರಲ್ಲಿ ಸಾಗುವಳಿ ಚೀಟಿ ಪಡೆದು, 2015ರಲ್ಲಿ ಖಾತೆ ಮಾಡಿಸಿಕೊಂಡು ಅವರೇ ಸಾಗುವಳಿ ಅನುಭವದಲ್ಲಿದ್ದರು. 80 ವರ್ಷ ದಾಟಿದ್ದ ಮುಹಮ್ಮದ್ ಗೌಸ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟ ಸಂದರ್ಭದಲ್ಲಿ ಕುಟುಂಬದ ಕೋರಿಕೆಯಂತೆ ಮಾನವೀಯ ನೆಲೆಯಲ್ಲಿ ಸಂಪೂರ್ಣ ವೈದ್ಯಕೀಯ ವೆಚ್ಚ ಹಾಗೂ ಆರ್ಥಿಕ ನೆರವು ನೀಡಲಾಗಿತ್ತು. ಆ ಸಮಯದಲ್ಲಿ ನಿಯಮಾನುಸಾರ ಒಪ್ಪಂದ (ಅಗ್ರಿಮೆಂಟ್) ಮಾಡಿಕೊಳ್ಳಲಾಗಿತ್ತು ಎಂದು ರಮೇಶ್ ವಿವರಿಸಿದರು. ಮುಹಮ್ಮದ್ ಗೌಸ್ ಅವರ ನಿಧನದ ಬಳಿಕ, ತಮಗೆ ಯಾವುದೇ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಅವರ ಪತ್ನಿ ಮುಮ್ತಾಜ್ ಹಾಗೂ ಐವರು ಮಕ್ಕಳು ಸ್ವಇಚ್ಛೆಯಿಂದ ಕಾನೂನುಬದ್ಧವಾಗಿ ತಮ್ಮ ಹೆಸರಿಗೆ ಜನರಲ್ ಪವರ್ ಆಫ್ ಅಟಾರ್ನಿ (GPA) ನೋಂದಣಿ ಮಾಡಿಕೊಟ್ಟಿದ್ದಾರೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಕಣ್ಣೀರಿಟ್ಟ ಮುಹಮ್ಮದ್ ಗೌಸ್ ಕುಟುಂಬಸ್ಥರು: ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಮುಹಮ್ಮದ್ ಗೌಸ್ ಅವರ ಪತ್ನಿ ಮುಮ್ತಾಜ್ ಭಾವುಕರಾಗಿ ಕಣ್ಣೀರು ಹಾಕುತ್ತಾ ಮಾತನಾಡಿ, "ಸುಮಾರು 20 ವರ್ಷಗಳಿಂದ ನಾವೇ ಜಮೀನಿನ ಸ್ವಾಧೀನ ಅನುಭವದಲ್ಲಿದ್ದೇವೆ. ಸರ್ಕಾರದ ಸಾಗುವಳಿ ಚೀಟಿ, ಖಾತೆ ಸೇರಿದಂತೆ ಎಲ್ಲಾ ಸಕ್ರಮ ದಾಖಲೆಗಳು ನಮ್ಮ ಬಳಿಯೇ ಇವೆ. ನಮ್ಮ ಸಂಕಷ್ಟದ ಪರಿಸ್ಥಿತಿಯಲ್ಲಿ ರಮೇಶ್ ಅವರು ಚಿಕಿತ್ಸೆಗೆ ನೆರವಾಗಿ ಜೀವ ಉಳಿಸಲು ಪ್ರಯತ್ನಿಸಿದರು. ಅವರಿಗೆ ಮೋಸವಾಗಬಾರದೆಂದು ಇಡೀ ಕುಟುಂಬ ಒಟ್ಟಾಗಿ ಜಿಪಿಎ ಮಾಡಿಕೊಟ್ಟಿದ್ದೇವೆ. ಇದರಲ್ಲಿ ಯಾರ ಒತ್ತಾಯವೂ ಇಲ್ಲ, ಯಾವುದೇ ಅಕ್ರಮವೂ ನಡೆದಿಲ್ಲ" ಎಂದು ತಿಳಿಸಿದರು. ಎಲ್ಲವೂ ಕಾನೂನುಬದ್ಧ, ತನಿಖೆಗೆ ಸಿದ್ಧ: ತಹಶೀಲ್ದಾರ್ ಅವರ ಆದೇಶದಂತೆ ತಾಲೂಕು ಸರ್ವೆ ಇಲಾಖೆಯಿಂದ ಜಾಗದ ಅಧಿಕೃತ ನಕ್ಷೆ (ಸ್ಕೆಚ್) ಮಾಡಿಸಲಾಗಿದೆ. ಜಮೀನು ನೀಡಿದ ಕುಟುಂಬಕ್ಕಾಗಲಿ ಅಥವಾ ಅಕ್ಕಪಕ್ಕದ ರೈತರಿಗಾಗಲಿ ಯಾವುದೇ ತಕರಾರಿಲ್ಲದಿರುವಾಗ, ಕೆಲವರು ರೈತ ಸಂಘದ ಹೆಸರನ್ನು ಮುಂದಿಟ್ಟುಕೊಂಡು ರಾಜಕೀಯ ದುರುದ್ದೇಶದಿಂದ ತೇಜೋವಧೆ ಮಾಡುತ್ತಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವ ತಾನು ಸರ್ಕಾರಕ್ಕಾಗಲಿ, ಜನರಿಗಾಗಲಿ ನಯಾಪೈಸೆ ಮೋಸ ಮಾಡಿಲ್ಲ. ಈ ವಿಚಾರದಲ್ಲಿ ಎಂತಹ ತನಿಖೆ ಎದುರಿಸಲೂ ಸಿದ್ಧ ಎಂದು ರಮೇಶ್ ಸವಾಲು ಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಮುಹಮ್ಮದ್ ಗೌಸ್ ಅವರ ಪತ್ನಿ ಮುಮ್ತಾಜ್ ಬೀ ಹಾಗೂ ಪುತ್ರ ನೂರುಲ್ಲಾ ಉಪಸ್ಥಿತರಿದ್ದರು.4
- ಕೊರಟಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಅಸ್ವಸ್ಥ : ತಾಲ್ಲೂಕು ಅಧಿಕಾರಿ ನಿಂದಿಸಿದ್ದಕ್ಕೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯಾಘಾತ!!! *ಕೊರಟಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಅಸ್ವಸ್ಥ : ತಾಲ್ಲೂಕು ಅಧಿಕಾರಿ ನಿಂದಿಸಿದ್ದಕ್ಕೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯಾಘಾತ* *ಕೊರಟಗೆರೆ, ಸೆ.16:* ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ ಕರಕಲ್ಲಘಟ್ಟ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ರಾಮಕ್ಕ (BLO) ಅವರು ಕರ್ತವ್ಯದ ವೇಳೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯ ತೊಂದರೆಗೆ ಒಳಗಾಗಿರುವ ಘಟನೆ ನಡೆದಿದೆ. ಹೊಳವನಹಳ್ಳಿ 1ನೇ ಬ್ಲಾಕ್ ವ್ಯಾಪ್ತಿಯಲ್ಲಿ ಬಿ.ಎಲ್.ಓ ಆಗಿ ಕೆಲಸ ನಿರ್ವಹಿಸುತ್ತಿದ್ದ ರಾಮಕ್ಕ ಅವರು ನಿನ್ನೆ ದಿನಾಂಕ 15-09-2026 ರಂದು ಕೈಬಿಟ್ಟ ಮತದಾರರಿಗೆ ನೋಟಿಸ್ ನೀಡುವ ಕಾರ್ಯದಲ್ಲಿದ್ದರು. ಈ ವೇಳೆ ತಾಲ್ಲೂಕು ನಿರ್ವಹಣಾಧಿಕಾರಿ ಅಪೂರ್ವ ಅನಂತರಾಮು ಅವರು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ರಾಮಕ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಹೊಳವನಹಳ್ಳಿಯ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇ.ಸಿ.ಜಿ ಪರೀಕ್ಷೆಯಲ್ಲಿ ಹೃದಯದ ತೊಂದರೆ ಇರುವುದು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿದೆ. ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ ಅವರು ಇನ್ನೂ ಕೊರಟಗೆರೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಗೆ ತಾಲ್ಲೂಕು ಅಧಿಕಾರಿಗಳೇ ನೇರ ಹೊಣೆ ಎಂದು ಅಂಗನವಾಡಿ ನೌಕರರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು, ರಾಮಕ್ಕ ಅವರಿಗೆ ಏನಾದರೂ ಅನಾಹುತವಾದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಕೆ ನೀಡಿದೆ. ಹಾಗೂ ಇನ್ನು ಮುಂದೆ ಯಾವುದೇ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ರೀತಿ ಮಾನಸಿಕ ಕಿರುಕುಳ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.4
- ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆಗಳು: ಆತಂಕದಲ್ಲಿ ರೈತರು MADHUGIRI ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ದೊಡ್ಡ ಮಾಲೂರು ಭೂದೇನಹಳ್ಳಿ ವ್ಯಾಪ್ತಿಯಲ್ಲಿ ನಿತ್ಯ ಚಿರತೆಗಳು ಕಂಡುಬರುತ್ತಿದ್ದು ರೈತರು ಆತಂಕಕೊಳಗಾಗಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ತುರ್ತಾಗಿ ಬೋನು ಅಳವಡಿಸಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.1
- ಇ ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಗೌರಸಮುದ್ರ ಮಾರಮ್ಮ ದೊಡ್ಡ ಜಾತ್ರೆಯ ನಂತರ ಎರಡನೇ ದಿನ ಸಿಡಿ ಉತ್ಸವ ನಡೆಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತದೆ ಇಂದು ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಗೆ ಸಿಡಿ ಉತ್ಸವ ನಡೆಯಬೇಕಿತ್ತು. ಸಿಡಿ ಉತ್ಸವದಲ್ಲಿ ಭಾಗವಹಿಸಲು ಕೋನಸಾಗರ ಗ್ರಾಮದ ಭಕ್ತರು ಬರಿಗಾಲಿನಲ್ಲಿ ನಡೆದುಕೊಂಡು ಗೌರಸಮುದ್ರಕ್ಕೆ ಆಗಮಿಸಿದ್ದರು. ಇನ್ನೇನು ಸಿಡಿ ಉತ್ಸವ ಆರಂಭವಾಗಬೇಕು ಎನ್ನುವಷ್ಟರಲ್ಲೇ… ಸಿಡಿ ಮರದ ತುಂಡೊಂದು ಮುರಿದು ಬಿದ್ದಿದೆ! ಬಹುಶಹ ಸಿಡಿ ಮರ ಹಳೆಯದಾಗಿದ್ದು ಇದರಿಂದ ಮುರಿದು ಬಿದ್ದಿರುವ ಶಂಕೆ ವ್ಯಕ್ತವಾಗಿದೆ ಇದರಿಂದ ಸಿಡಿ ಉತ್ಸವಕ್ಕೆ ವಿಘ್ನ ಎದುರಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಮತ್ತೊಮ್ಮೆ ಸಿಡಿ ಮರವನ್ನು ಸರಿಪಡಿಸಿ ಕಟ್ಟುವ ಪ್ರಯತ್ನ ನಡೆಸಲಾಗಿದ್ದು, ಮತ್ತೆ ಸಮಸ್ಯೆ ಉಂಟಾಗಿದ್ದು ಹಿನ್ನೆಲೆಯಲ್ಲಿ ಭಕ್ತರು ಆತಂಕಗೊಂಡಿದ್ದಾರೆ. ಗೌರಸಮುದ್ರ ಮಾರಮ್ಮದೇವಿಯ ಜಾತ್ರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಿಡಿ ಮರ ತುಂಡಾಗಿ ಉತ್ಸವಕ್ಕೆ ವಿಘ್ನ ಉಂಟಾಗಿದೆ ಎಂದು ಗ್ರಾಮದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಅಪಾಯವಾಗಿಲ್ಲ. ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.1
- ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಅವರು ಇಂದು ಗೌರಸಮದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಇಡೀ ದಕ್ಷಿಣ ಭಾರತದಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು ಈ ದೇವಿಯ ಜಾತ್ರೆ ಮುಖಾಂತರ ಭಕ್ತಾದಿಗಳಿಂದ ಸಲ್ಲುವಂತಹ ಪ್ರತಿಯೊಂದು ಸಂಕಲ್ಪಗಳು ಈ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿಯನ್ನು ಜಗನ್ಮಾತೆಯಾದ ಮಾರಮ್ಮ ದೇವಿ ಕರುಣಿಸಲಿ ಇದರ ಮುಖಾಂತರ ಈ ಭಾಗದ ಜನ ಜೀವನದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಬದಲಾವಣೆ ತರಲಿ ಎಂದು ಆಶಿಸಿದರು ಸಂದರ್ಭದಲ್ಲಿ ಜಿಲ್ಲಾ ದಿಶಾ ಕಮಿ ಟಿಯ ಸದಸ್ಯ ಹೊನ್ನೂರ್ ಗೋವಿಂದಪ್ಪ ಬಿಜೆಪಿ ಮುಖಂಡರಾದ ಶ್ರೀನಿವಾಸ್ ಪ್ರದೀಪ್ ಕುಮಾರ್ ವಕೀಲರದ ಶಶಿ ಕುಮಾರ್ ಮಾಜಿ ಪ್ರದಾನ ಜಿ ಟಿ ಮಾರಣ್ಣ ಮುಂತಾದವರು ಹಾಜರಿದ್ದರು1
- ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ. ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ. ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.1
- ಹುಳಿಯಾರಿನ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ1