logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್), ಬಮೂಲ್ ಕಲ್ಯಾಣ ಟ್ರಸ್ಟ್ ಹಾಗೂ ಆನೇಕಲ್ ಶಿಬಿರ ಕಚೇರಿಯ ಸಹಯೋಗದಲ್ಲಿ ಆನೇಕಲ್ ತಾಲ್ಲೂಕಿನ ಚಂದಾಪುರದ ಆರ್.ಕೆ ಗಾರ್ಡೇನಿಯಾ ಹೋಟಲ್ ಆವರಣದಲ್ಲಿ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಿಸಲಾಯಿತು. ಸಮಾರಂಭವನ್ನು ಉದ್ಘಾಟಿಸಿದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಮಾತನಾಡಿ, ರೈತರು ಮತ್ತು ಅವರ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ವರ್ಷ ಸುಮಾರು 19 ಕೋಟಿ ರೂಪಾಯಿ ವೆಚ್ಚದ ವಿವಿಧ ಕಲ್ಯಾಣ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು. ಹೈನುಗಾರಿಕೆಯ ಪ್ರಗತಿಗಾಗಿ ಜಾರಿಗೆ ತಂದಿರುವ ಯೋಜನೆಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳುವಂತೆ ಅವರು ಕರೆ ನೀಡಿದರು. ಇದೇ ವೇಳೆ ಮಾತನಾಡಿದ ಬಮೂಲ್ ನಿರ್ದೇಶಕ ಆರ್.ಕೆ. ರಮೇಶ್, ಡಿ.ಕೆ. ಸುರೇಶ್ ಅವರ ನೇತೃತ್ವದಲ್ಲಿ ಒಕ್ಕೂಟದಲ್ಲಿ ಕ್ಷೀರ ಕ್ರಾಂತಿಯೇ ಪ್ರಾರಂಭವಾಗಿದೆ ಎಂದು ಬಣ್ಣಿಸಿದರು. ರೈತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರ ಕೂಡಲೇ ಹಾಲಿನ ಬೆಲೆಯನ್ನು ಏರಿಕೆ ಮಾಡಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಬಹುಮಾನ ವಿತರಿಸಲಾಯಿತು. ಹೆನ್ನಾಗರ ಹಾಲು ಉತ್ಪಾದಕರ ಸಹಕಾರ ಸಂಘ ಪ್ರಥಮ, ಆದಿಗೊಂಡನಹಳ್ಳಿ ಸಂಘ ದ್ವಿತೀಯ ಮತ್ತು ಮರಸೂರು ಇಂದ್ರನಗರ ಸಂಘ ತೃತೀಯ ಬಹುಮಾನ ಪಡೆಯಿತು. ಅಲ್ಲದೆ, ಉತ್ತಮ ಸಿಬ್ಬಂದಿಗಳು, ಕೃತಕ ಗರ್ಭಧಾರಣಾ ಕಾರ್ಯಕರ್ತರು ಮತ್ತು ಅತಿ ಹೆಚ್ಚು ಹಾಲು ಸರಬರಾಜು ಮಾಡಿದ ಉತ್ಪಾದಕರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಾಗರಾಜ್, ಲಿಂಗೇಶ್ ಕುಮಾರ್, ಬಿ.ಜೆ. ಆಂಜಿನಪ್ಪ ಸೇರಿದಂತೆ ಬಮೂಲ್‌ನ ಹಲವು ನಿರ್ದೇಶಕರು, ಶಿಬಿರ ಕಚೇರಿಯ ಅಧಿಕಾರಿಗಳು ಹಾಗೂ ಹಾಲು ಉತ್ಪಾದಕರು ಭಾಗವಹಿಸಿದ್ದರು.

23 hrs ago
user_Chakravarthy
Chakravarthy
Local News Reporter ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
23 hrs ago
8c7023e4-eaff-4838-8c0b-d960f30bd5a0

ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್), ಬಮೂಲ್ ಕಲ್ಯಾಣ ಟ್ರಸ್ಟ್ ಹಾಗೂ ಆನೇಕಲ್ ಶಿಬಿರ ಕಚೇರಿಯ ಸಹಯೋಗದಲ್ಲಿ ಆನೇಕಲ್ ತಾಲ್ಲೂಕಿನ ಚಂದಾಪುರದ ಆರ್.ಕೆ ಗಾರ್ಡೇನಿಯಾ ಹೋಟಲ್ ಆವರಣದಲ್ಲಿ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಿಸಲಾಯಿತು. ಸಮಾರಂಭವನ್ನು ಉದ್ಘಾಟಿಸಿದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಮಾತನಾಡಿ, ರೈತರು ಮತ್ತು ಅವರ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ವರ್ಷ ಸುಮಾರು 19 ಕೋಟಿ ರೂಪಾಯಿ ವೆಚ್ಚದ ವಿವಿಧ ಕಲ್ಯಾಣ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು. ಹೈನುಗಾರಿಕೆಯ ಪ್ರಗತಿಗಾಗಿ ಜಾರಿಗೆ ತಂದಿರುವ ಯೋಜನೆಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳುವಂತೆ ಅವರು ಕರೆ ನೀಡಿದರು. ಇದೇ ವೇಳೆ ಮಾತನಾಡಿದ ಬಮೂಲ್ ನಿರ್ದೇಶಕ ಆರ್.ಕೆ. ರಮೇಶ್, ಡಿ.ಕೆ.

356e7ebe-bc20-4f8f-9f8d-136ca6f493ac

ಸುರೇಶ್ ಅವರ ನೇತೃತ್ವದಲ್ಲಿ ಒಕ್ಕೂಟದಲ್ಲಿ ಕ್ಷೀರ ಕ್ರಾಂತಿಯೇ ಪ್ರಾರಂಭವಾಗಿದೆ ಎಂದು ಬಣ್ಣಿಸಿದರು. ರೈತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರ ಕೂಡಲೇ ಹಾಲಿನ ಬೆಲೆಯನ್ನು ಏರಿಕೆ ಮಾಡಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಬಹುಮಾನ ವಿತರಿಸಲಾಯಿತು. ಹೆನ್ನಾಗರ ಹಾಲು ಉತ್ಪಾದಕರ ಸಹಕಾರ ಸಂಘ ಪ್ರಥಮ, ಆದಿಗೊಂಡನಹಳ್ಳಿ ಸಂಘ ದ್ವಿತೀಯ ಮತ್ತು ಮರಸೂರು ಇಂದ್ರನಗರ ಸಂಘ ತೃತೀಯ ಬಹುಮಾನ ಪಡೆಯಿತು. ಅಲ್ಲದೆ, ಉತ್ತಮ ಸಿಬ್ಬಂದಿಗಳು, ಕೃತಕ ಗರ್ಭಧಾರಣಾ ಕಾರ್ಯಕರ್ತರು ಮತ್ತು ಅತಿ ಹೆಚ್ಚು ಹಾಲು ಸರಬರಾಜು ಮಾಡಿದ ಉತ್ಪಾದಕರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಾಗರಾಜ್, ಲಿಂಗೇಶ್ ಕುಮಾರ್, ಬಿ.ಜೆ. ಆಂಜಿನಪ್ಪ ಸೇರಿದಂತೆ ಬಮೂಲ್‌ನ ಹಲವು ನಿರ್ದೇಶಕರು, ಶಿಬಿರ ಕಚೇರಿಯ ಅಧಿಕಾರಿಗಳು ಹಾಗೂ ಹಾಲು ಉತ್ಪಾದಕರು ಭಾಗವಹಿಸಿದ್ದರು.

More news from ಕರ್ನಾಟಕ and nearby areas
  • ಖ್ಯಾತ ಗಾಯಕಿ ಎಸ್ ಜಾನಕಿ ಅವರು ಇನ್ನಿಲ್ಲ. ಈ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಯ ಚಿತ್ರಣ ಹೊರಬಿದ್ದಿದೆ.
    1
    ಖ್ಯಾತ ಗಾಯಕಿ ಎಸ್ ಜಾನಕಿ ಅವರು ಇನ್ನಿಲ್ಲ. ಈ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಯ ಚಿತ್ರಣ ಹೊರಬಿದ್ದಿದೆ.
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    11 min ago
  • ಕರ್ನಾಟಕದಲ್ಲಿ ಐಎಂಎ (IMA) ಪ್ರಕರಣದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಕೆಯಾಗಿರುವ ಮನವಿ ಕುರಿತು ಕಾನೂನು ಪ್ರಕಾರವೇ ಕ್ರಮವಾಗಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಯಾರೂ ಕಾನೂನಿಗಿಂತ ಮೇಲಲ್ಲ ಹಾಗೂ ಮೊದಲೇ ಅಂತಿಮ ತೀರ್ಮಾನಕ್ಕೆ ಬರುವುದು ಸರಿಯಲ್ಲ ಎಂದು ಹೇಳಿದ ಅವರು, ರಾಜ್ಯಪಾಲರು ಅನುಮತಿ ನೀಡಿದ ಬಳಿಕ ಮುಂದಿನ ಬೆಳವಣಿಗೆಗಳನ್ನು ನೋಡೋಣ ಎಂದು ತಿಳಿಸಿದರು. ಇದೇ ವೇಳೆ ಪಿಆರ್‌ಸಿ (ನಿವಾಸ ಪ್ರಮಾಣಪತ್ರ) ವಿವಾದದ ಕುರಿತು ಮಾತನಾಡಿದ ಗೃಹ ಸಚಿವರು, ಪಿಆರ್‌ಸಿ ನೀಡುವುದು ಸರ್ಕಾರಿ ಅಧಿಕಾರಿಗಳ ಕೆಲಸವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ ಎಂದು ಸ್ಪಷ್ಟಪಡಿಸಿದರು. ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಹೇಳಿದ ಅವರು, ಅಕ್ರಮ ವಲಸಿಗರಿಗೆ ಪಿಆರ್‌ಸಿ ನೀಡಲಾಗುತ್ತಿದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿ, ಅದನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದರು. ರಾಜ್ಯ ಸರ್ಕಾರ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪೌರತ್ವ ಸಾಬೀತಿಗೆ ಯಾವ ದಾಖಲೆ ಬೇಕು ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಲಿ ಎಂದು ಪ್ರಶ್ನಿಸಿದರು. ಅಲ್ಲದೆ, ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಸ್ಪಷ್ಟತೆ ಇಲ್ಲದ ಕಾರಣ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು. ಮತ್ತೊಂದೆಡೆ, ಕೆಪಿಎಸ್‌ಸಿ (KPSC) ವಿಚಾರಕ್ಕೆ ಸಂಬಂಧಿಸಿದ ಆರೋಪಗಳು ಸಾಂವಿಧಾನಿಕ ಸಂಸ್ಥೆಯ ವ್ಯಾಪ್ತಿಗೆ ಬರುವ ವಿಷಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಸರ್ಕಾರ ಕೇವಲ ಸಾಕ್ಷ್ಯ ಒದಗಿಸಬಹುದೇ ಹೊರತು, ಅಂತಿಮ ಕ್ರಮ ಕೈಗೊಳ್ಳುವುದು ಆಯೋಗದ ಜವಾಬ್ದಾರಿಯಾಗಿದೆ ಎಂದ ಅವರು, ಆಯೋಗದಲ್ಲಿ ಸದ್ಯ ಸಮನ್ವಯ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಕೊರತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟರು. ಇದು ಯಾವುದೇ ರಾಜ್ಯಕ್ಕೂ ಒಳ್ಳೆಯ ಬೆಳವಣಿಗೆಯಲ್ಲ ಎಂದು ವಿಷಾದಿಸಿದ ಅವರು, ಸಾರ್ವಜನಿಕ ಸೇವಾ ಆಯೋಗದ ವಿಶ್ವಾಸಾರ್ಹತೆಯನ್ನು ಆಯೋಗವೇ ಪುನಃಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
    1
    ಕರ್ನಾಟಕದಲ್ಲಿ ಐಎಂಎ (IMA) ಪ್ರಕರಣದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಕೆಯಾಗಿರುವ ಮನವಿ ಕುರಿತು ಕಾನೂನು ಪ್ರಕಾರವೇ ಕ್ರಮವಾಗಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಯಾರೂ ಕಾನೂನಿಗಿಂತ ಮೇಲಲ್ಲ ಹಾಗೂ ಮೊದಲೇ ಅಂತಿಮ ತೀರ್ಮಾನಕ್ಕೆ ಬರುವುದು ಸರಿಯಲ್ಲ ಎಂದು ಹೇಳಿದ ಅವರು, ರಾಜ್ಯಪಾಲರು ಅನುಮತಿ ನೀಡಿದ ಬಳಿಕ ಮುಂದಿನ ಬೆಳವಣಿಗೆಗಳನ್ನು ನೋಡೋಣ ಎಂದು ತಿಳಿಸಿದರು.

ಇದೇ ವೇಳೆ ಪಿಆರ್‌ಸಿ (ನಿವಾಸ ಪ್ರಮಾಣಪತ್ರ) ವಿವಾದದ ಕುರಿತು ಮಾತನಾಡಿದ ಗೃಹ ಸಚಿವರು, ಪಿಆರ್‌ಸಿ ನೀಡುವುದು ಸರ್ಕಾರಿ ಅಧಿಕಾರಿಗಳ ಕೆಲಸವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ ಎಂದು ಸ್ಪಷ್ಟಪಡಿಸಿದರು. ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಹೇಳಿದ ಅವರು, ಅಕ್ರಮ ವಲಸಿಗರಿಗೆ ಪಿಆರ್‌ಸಿ ನೀಡಲಾಗುತ್ತಿದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿ, ಅದನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದರು. ರಾಜ್ಯ ಸರ್ಕಾರ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪೌರತ್ವ ಸಾಬೀತಿಗೆ ಯಾವ ದಾಖಲೆ ಬೇಕು ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಲಿ ಎಂದು ಪ್ರಶ್ನಿಸಿದರು. ಅಲ್ಲದೆ, ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಸ್ಪಷ್ಟತೆ ಇಲ್ಲದ ಕಾರಣ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು.

ಮತ್ತೊಂದೆಡೆ, ಕೆಪಿಎಸ್‌ಸಿ (KPSC) ವಿಚಾರಕ್ಕೆ ಸಂಬಂಧಿಸಿದ ಆರೋಪಗಳು ಸಾಂವಿಧಾನಿಕ ಸಂಸ್ಥೆಯ ವ್ಯಾಪ್ತಿಗೆ ಬರುವ ವಿಷಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಸರ್ಕಾರ ಕೇವಲ ಸಾಕ್ಷ್ಯ ಒದಗಿಸಬಹುದೇ ಹೊರತು, ಅಂತಿಮ ಕ್ರಮ ಕೈಗೊಳ್ಳುವುದು ಆಯೋಗದ ಜವಾಬ್ದಾರಿಯಾಗಿದೆ ಎಂದ ಅವರು, ಆಯೋಗದಲ್ಲಿ ಸದ್ಯ ಸಮನ್ವಯ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಕೊರತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟರು. ಇದು ಯಾವುದೇ ರಾಜ್ಯಕ್ಕೂ ಒಳ್ಳೆಯ ಬೆಳವಣಿಗೆಯಲ್ಲ ಎಂದು ವಿಷಾದಿಸಿದ ಅವರು, ಸಾರ್ವಜನಿಕ ಸೇವಾ ಆಯೋಗದ ವಿಶ್ವಾಸಾರ್ಹತೆಯನ್ನು ಆಯೋಗವೇ ಪುನಃಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಕೋಲಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಓಂ ಶಕ್ತಿ ಚಲಪತಿ ಅವರು, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ದೇಶದೊಳಗೆ ಅಕ್ರಮವಾಗಿ ನುಸುಳಿರುವವರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಕಾನೂನುಬಾಹಿರ ಕ್ರಮವನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಎಚ್ಚರಿಸಿರುವ ಅವರು, ರಾಜ್ಯದ ಜನರ ಹಿತಾಸಕ್ತಿ, ದೇಶದ ಆಂತರಿಕ ಭದ್ರತೆ ಹಾಗೂ ಕಾನೂನುಬದ್ಧ ವ್ಯವಸ್ಥೆಗೆ ಧಕ್ಕೆಯಾಗುವ ಯಾವುದೇ ನಿರ್ಧಾರವನ್ನು ತಾವಾಗಲಿ ಅಥವಾ ತಮ್ಮ ಪಕ್ಷವಾಗಲಿ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು. ದೇಶದ ಕಾನೂನಿನ ಪ್ರಕಾರ ಅರ್ಹರಾಗಿರುವ ಜನರಿಗೆ ಮಾತ್ರ ಅಗತ್ಯ ದಾಖಲೆಗಳನ್ನು ನೀಡಬೇಕು ಮತ್ತು ಅಕ್ರಮ ನುಸುಳುಕೋರರಿಗೆ ಯಾವುದೇ ರೀತಿಯ ಮಾನ್ಯತೆ ಅಥವಾ ರಾಜಾಶ್ರಯ ನೀಡಬಾರದು ಎಂಬುದು ನಮ್ಮ ಸ್ಪಷ್ಟ ನಿಲುವು ಎಂದು ಅವರು ಪ್ರತಿಪಾದಿಸಿದರು. ಈ ಸೂಕ್ಷ್ಮ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಮತ್ತು ಈ ಪ್ರಕ್ರಿಯೆಯ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಅನುಮಾನ ಹಾಗೂ ಆತಂಕಗಳಿಗೆ ತಕ್ಷಣವೇ ಸ್ಪಷ್ಟ ಉತ್ತರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಮಾಜಿ ಸಂಸದರು ಮುನಿಸ್ವಾಮಿ, ಜಿಲ್ಲಾ ಉಪಾಧ್ಯಕ್ಷರು ವಿಜಿ ಕುಮಾರ್, ಪ್ರಕೋಷ್ಟಗಳ ಸಂಚಾಲಕರು ಮಾಗೇರಿ ನಾರಾಯಣಸ್ವಾಮಿ, ನಗರ ಘಟಕ ಅಧ್ಯಕ್ಷರು ಸಾಮಾ ಅನಿಲ್ ಬಾಬು, ತಿಮ್ಮರಾಯಪ್ಪ, ಕೆಂಬೋಡಿ ನಾರಾಯಣಸ್ವಾಮಿ, ಗೋವಿಂದರಾಜ್, ಮೋರ್ಚಾ ಬಾಲಾಜಿ, ಸೂರಿ ಮತ್ತು ಮಂಜುನಾಥ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
    2
    ಕೋಲಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಓಂ ಶಕ್ತಿ ಚಲಪತಿ ಅವರು, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ದೇಶದೊಳಗೆ ಅಕ್ರಮವಾಗಿ ನುಸುಳಿರುವವರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಕಾನೂನುಬಾಹಿರ ಕ್ರಮವನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಎಚ್ಚರಿಸಿರುವ ಅವರು, ರಾಜ್ಯದ ಜನರ ಹಿತಾಸಕ್ತಿ, ದೇಶದ ಆಂತರಿಕ ಭದ್ರತೆ ಹಾಗೂ ಕಾನೂನುಬದ್ಧ ವ್ಯವಸ್ಥೆಗೆ ಧಕ್ಕೆಯಾಗುವ ಯಾವುದೇ ನಿರ್ಧಾರವನ್ನು ತಾವಾಗಲಿ ಅಥವಾ ತಮ್ಮ ಪಕ್ಷವಾಗಲಿ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು. ದೇಶದ ಕಾನೂನಿನ ಪ್ರಕಾರ ಅರ್ಹರಾಗಿರುವ ಜನರಿಗೆ ಮಾತ್ರ ಅಗತ್ಯ ದಾಖಲೆಗಳನ್ನು ನೀಡಬೇಕು ಮತ್ತು ಅಕ್ರಮ ನುಸುಳುಕೋರರಿಗೆ ಯಾವುದೇ ರೀತಿಯ ಮಾನ್ಯತೆ ಅಥವಾ ರಾಜಾಶ್ರಯ ನೀಡಬಾರದು ಎಂಬುದು ನಮ್ಮ ಸ್ಪಷ್ಟ ನಿಲುವು ಎಂದು ಅವರು ಪ್ರತಿಪಾದಿಸಿದರು.

ಈ ಸೂಕ್ಷ್ಮ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಮತ್ತು ಈ ಪ್ರಕ್ರಿಯೆಯ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಅನುಮಾನ ಹಾಗೂ ಆತಂಕಗಳಿಗೆ ತಕ್ಷಣವೇ ಸ್ಪಷ್ಟ ಉತ್ತರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಮಾಜಿ ಸಂಸದರು ಮುನಿಸ್ವಾಮಿ, ಜಿಲ್ಲಾ ಉಪಾಧ್ಯಕ್ಷರು ವಿಜಿ ಕುಮಾರ್, ಪ್ರಕೋಷ್ಟಗಳ ಸಂಚಾಲಕರು ಮಾಗೇರಿ ನಾರಾಯಣಸ್ವಾಮಿ, ನಗರ ಘಟಕ ಅಧ್ಯಕ್ಷರು ಸಾಮಾ ಅನಿಲ್ ಬಾಬು, ತಿಮ್ಮರಾಯಪ್ಪ, ಕೆಂಬೋಡಿ ನಾರಾಯಣಸ್ವಾಮಿ, ಗೋವಿಂದರಾಜ್, ಮೋರ್ಚಾ ಬಾಲಾಜಿ, ಸೂರಿ ಮತ್ತು ಮಂಜುನಾಥ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
    user_ಜನಪರ ಸುದ್ದಿ 91
    ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    1 hr ago
  • ಕೋಲಾರ ತಾಲ್ಲೂಕಿನ ವಕ್ಕಲೇರಿ ಹೋಬಳಿಯ ಚುಂಚದೇನಹಳ್ಳಿಯಲ್ಲಿ ನೆಲೆಸಿರುವ ಶ್ರೀ ರುಕ್ಕಿಣೀ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿಯ ಮರು ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಉದ್ಘಾಟನಾ ಮಹೋತ್ಸವವು ಇದೇ 12ರ ಭಾನುವಾರ ನಡೆಯಲಿದೆ ಎಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ. ಭಗವಂತನ ಪ್ರೇರಣೆಯಿಂದ ಈ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿವೆ ಎಂದು ಮುಖಂಡರು ಮಾಹಿತಿ ನೀಡಿದ್ದಾರೆ. ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ಸ್ವಾಮಿಯ ದಿವ್ಯ ದರ್ಶನ ಪಡೆದು, ತಮ್ಮ ಮನೋವಾಂಚಲ್ಯಗಳನ್ನು ನೆರವೇರಿಸಿಕೊಳ್ಳುವಂತೆ ಹಾಗೂ ತೀರ್ಥ ಪ್ರಸಾದ ಸ್ವೀಕರಿಸಬೇಕಾಗಿ ಕೋರಲಾಗಿದೆ. ಈ ವೇಳೆ ಗ್ರಾಮದ ಮುಖಂಡರಾದ ಡಿ. ರಾಮಚಂದ್ರಪ್ಪ, ಮಾಜಿ ಸದಸ್ಯ ಸಿ.ವಿ. ಮುನಿರಾಜು, ಎಸ್. ನಾರಾಯಣಸ್ವಾಮಿ, ರಾಮಣ್ಣ, ರಾಮಯ್ಯ, ಅನಿಲಕುಮಾರ, ವಿವೇಕ್, ಡಿ. ರಾಮಣ್ಣ, ಗುರುಮೂರ್ತಿ, ಜಯರಾಮ್, ಅರ್ಚಕರಾದ ರಾಮಾಚಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    2
    ಕೋಲಾರ ತಾಲ್ಲೂಕಿನ ವಕ್ಕಲೇರಿ ಹೋಬಳಿಯ ಚುಂಚದೇನಹಳ್ಳಿಯಲ್ಲಿ ನೆಲೆಸಿರುವ ಶ್ರೀ ರುಕ್ಕಿಣೀ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿಯ ಮರು ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಉದ್ಘಾಟನಾ ಮಹೋತ್ಸವವು ಇದೇ 12ರ ಭಾನುವಾರ ನಡೆಯಲಿದೆ ಎಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ. ಭಗವಂತನ ಪ್ರೇರಣೆಯಿಂದ ಈ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿವೆ ಎಂದು ಮುಖಂಡರು ಮಾಹಿತಿ ನೀಡಿದ್ದಾರೆ.

ಈ ಶುಭ ಸಂದರ್ಭದಲ್ಲಿ ಭಕ್ತಾದಿಗಳು ಸಕಾಲಕ್ಕೆ ಆಗಮಿಸಿ ಸ್ವಾಮಿಯ ದಿವ್ಯ ದರ್ಶನ ಪಡೆದು, ತಮ್ಮ ಮನೋವಾಂಚಲ್ಯಗಳನ್ನು ನೆರವೇರಿಸಿಕೊಳ್ಳುವಂತೆ ಹಾಗೂ ತೀರ್ಥ ಪ್ರಸಾದ ಸ್ವೀಕರಿಸಬೇಕಾಗಿ ಕೋರಲಾಗಿದೆ. ಈ ವೇಳೆ ಗ್ರಾಮದ ಮುಖಂಡರಾದ ಡಿ. ರಾಮಚಂದ್ರಪ್ಪ, ಮಾಜಿ ಸದಸ್ಯ ಸಿ.ವಿ. ಮುನಿರಾಜು, ಎಸ್. ನಾರಾಯಣಸ್ವಾಮಿ, ರಾಮಣ್ಣ, ರಾಮಯ್ಯ, ಅನಿಲಕುಮಾರ, ವಿವೇಕ್, ಡಿ. ರಾಮಣ್ಣ, ಗುರುಮೂರ್ತಿ, ಜಯರಾಮ್, ಅರ್ಚಕರಾದ ರಾಮಾಚಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    ಕೋಲಾರ, ಕೋಲಾರ, ಕರ್ನಾಟಕ•
    4 hrs ago
  • ಕೋಲಾರದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಾಮಲ್ತ್ ನಗರದಲ್ಲಿ ಶುಕ್ರವಾರ ಬೆಳಗ್ಗೆ ಅನಾಮಿಕರು ಪೋಲೀಸರೊಂದಿಗೆ ಜಾಗದ ಸರ್ವೆಗೆ ಮುಂದಾದಾಗ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುಮಾರು 1989ರಿಂದಲೂ ಈ ಜಾಗಕ್ಕೆ ಸಂಬಂಧಿಸಿದ ಮೂಲ ದಾಖಲೆಗಳು ತಮ್ಮ ಬಳಿಯೇ ಇವೆ ಎಂದು ಸ್ಥಳೀಯರು ಹಾಗೂ ಜಾಗದ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅನಾಮಿಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಜಾಗದ ಮಾಲೀಕರು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಎನ್‌ಎಕೆ (NAK) ಕಾಯಿದೆಯ ಪ್ರಕಾರ ಪಾಣಿ ಮತ್ತು ಮ್ಯುಟೇಷನ್ ದಾಖಲೆಗಳು ಲಭ್ಯವಿದ್ದರೂ, ಇಂತಹ ಅಕ್ರಮ ಸರ್ವೆಗೆ ಮುಂದಾಗಿರುವುದು ಆತಂಕಕ್ಕೆ ಕಾರಣವಾಗಿದೆ.
    1
    ಕೋಲಾರದ ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಾಮಲ್ತ್ ನಗರದಲ್ಲಿ ಶುಕ್ರವಾರ ಬೆಳಗ್ಗೆ ಅನಾಮಿಕರು ಪೋಲೀಸರೊಂದಿಗೆ ಜಾಗದ ಸರ್ವೆಗೆ ಮುಂದಾದಾಗ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುಮಾರು 1989ರಿಂದಲೂ ಈ ಜಾಗಕ್ಕೆ ಸಂಬಂಧಿಸಿದ ಮೂಲ ದಾಖಲೆಗಳು ತಮ್ಮ ಬಳಿಯೇ ಇವೆ ಎಂದು ಸ್ಥಳೀಯರು ಹಾಗೂ ಜಾಗದ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅನಾಮಿಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಜಾಗದ ಮಾಲೀಕರು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಎನ್‌ಎಕೆ (NAK) ಕಾಯಿದೆಯ ಪ್ರಕಾರ ಪಾಣಿ ಮತ್ತು ಮ್ಯುಟೇಷನ್ ದಾಖಲೆಗಳು ಲಭ್ಯವಿದ್ದರೂ, ಇಂತಹ ಅಕ್ರಮ ಸರ್ವೆಗೆ ಮುಂದಾಗಿರುವುದು ಆತಂಕಕ್ಕೆ ಕಾರಣವಾಗಿದೆ.
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    11 hrs ago
  • ಬಂಗಾರಪೇಟೆ ತಾಲೂಕಿನ ಒಟ್ಟು 253 ಮತದಾನ ಕೇಂದ್ರಗಳಲ್ಲಿ ಜೂನ್ 29ರಿಂದ ಆರಂಭವಾಗಿರುವ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯವು ಚುರುಕಾಗಿ ನಡೆಯುತ್ತಿದೆ ಎಂದು ತಾಲೂಕು ಮತದಾರ ನೋಂದಣಾಧಿಕಾರಿ ಹಾಗೂ ಜಿಲ್ಲಾ ಆಹಾರ ಇಲಾಖೆಯ ಉಪ ನಿರ್ದೇಶಕ ಎಂ.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ತಾಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈವರೆಗೆ ಒಟ್ಟು 2.12 ಲಕ್ಷ ಮತದಾರರ ಪೈಕಿ 2.08 ಲಕ್ಷ ಮಂದಿಗೆ ಮನೆ ಮನೆಗೆ ತೆರಳಿ ನಮೂನೆಗಳನ್ನು ತಲುಪಿಸಲಾಗಿದ್ದು, ಶೇಕಡಾ 97.94ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿ ನಮೂನೆ ವಿತರಣಾ ಪ್ರಕ್ರಿಯೆ ವೇಗವಾಗಿ ಸಾಗುತ್ತಿದ್ದು, ಇನ್ನೂ 4,670 ನಮೂನೆಗಳನ್ನು ವಿತರಿಸಬೇಕಿದೆ. ನಗರ ಪ್ರದೇಶಗಳಲ್ಲಿ ಮನೆಗಳಲ್ಲಿನ ಮತದಾರರನ್ನು ಗುರುತಿಸುವುದು ಸವಾಲಿನಾಯಕವಾಗಿರುವುದರಿಂದ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬವಾಗಿದೆ ಎಂದು ಅವರು ವಿವರಿಸಿದರು. ಬಂಗಾರಪೇಟೆ ತಾಲೂಕಿನ ಒಟ್ಟಾರೆ ಕಾರ್ಯನಿರ್ವಹಣೆಯಲ್ಲಿ ಎಸ್ಐಆರ್ (SIR) ಅಡಿ ಶೇ.97.80ರಷ್ಟು ಫಾರ್ಮ್ ವಿತರಣೆ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ.
    1
    ಬಂಗಾರಪೇಟೆ ತಾಲೂಕಿನ ಒಟ್ಟು 253 ಮತದಾನ ಕೇಂದ್ರಗಳಲ್ಲಿ ಜೂನ್ 29ರಿಂದ ಆರಂಭವಾಗಿರುವ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯವು ಚುರುಕಾಗಿ ನಡೆಯುತ್ತಿದೆ ಎಂದು ತಾಲೂಕು ಮತದಾರ ನೋಂದಣಾಧಿಕಾರಿ ಹಾಗೂ ಜಿಲ್ಲಾ ಆಹಾರ ಇಲಾಖೆಯ ಉಪ ನಿರ್ದೇಶಕ ಎಂ.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ತಾಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈವರೆಗೆ ಒಟ್ಟು 2.12 ಲಕ್ಷ ಮತದಾರರ ಪೈಕಿ 2.08 ಲಕ್ಷ ಮಂದಿಗೆ ಮನೆ ಮನೆಗೆ ತೆರಳಿ ನಮೂನೆಗಳನ್ನು ತಲುಪಿಸಲಾಗಿದ್ದು, ಶೇಕಡಾ 97.94ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ನಮೂನೆ ವಿತರಣಾ ಪ್ರಕ್ರಿಯೆ ವೇಗವಾಗಿ ಸಾಗುತ್ತಿದ್ದು, ಇನ್ನೂ 4,670 ನಮೂನೆಗಳನ್ನು ವಿತರಿಸಬೇಕಿದೆ. ನಗರ ಪ್ರದೇಶಗಳಲ್ಲಿ ಮನೆಗಳಲ್ಲಿನ ಮತದಾರರನ್ನು ಗುರುತಿಸುವುದು ಸವಾಲಿನಾಯಕವಾಗಿರುವುದರಿಂದ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬವಾಗಿದೆ ಎಂದು ಅವರು ವಿವರಿಸಿದರು. ಬಂಗಾರಪೇಟೆ ತಾಲೂಕಿನ ಒಟ್ಟಾರೆ ಕಾರ್ಯನಿರ್ವಹಣೆಯಲ್ಲಿ ಎಸ್ಐಆರ್ (SIR) ಅಡಿ ಶೇ.97.80ರಷ್ಟು ಫಾರ್ಮ್ ವಿತರಣೆ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    14 hrs ago
  • ಭಾರತದ ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 88 ವರ್ಷದ ಅವರು ಅನಾರೋಗ್ಯ ಹಾಗೂ ವಯೋಸಹಜ ಸಮಸ್ಯೆಗಳಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದರು. ತಮ್ಮ ಸಾವಿರಾರು ಅಮರ ಗೀತೆಗಳ ಮೂಲಕ ಸಂಗೀತಾಸಕ್ತರ ಮನಗೆದ್ದಿದ್ದ ಎಸ್. ಜಾನಕಿ ಅವರ ನಿಧನದಿಂದಾಗಿ ಇಡೀ ಭಾರತೀಯ ಸಂಗೀತ ಲೋಕಕ್ಕೆ ತುಂಬಲಾರದ ಅಪಾರ ನಷ್ಟ ಉಂಟಾಗಿದೆ.
    1
    ಭಾರತದ ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 88 ವರ್ಷದ ಅವರು ಅನಾರೋಗ್ಯ ಹಾಗೂ ವಯೋಸಹಜ ಸಮಸ್ಯೆಗಳಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದರು. ತಮ್ಮ ಸಾವಿರಾರು ಅಮರ ಗೀತೆಗಳ ಮೂಲಕ ಸಂಗೀತಾಸಕ್ತರ ಮನಗೆದ್ದಿದ್ದ ಎಸ್. ಜಾನಕಿ ಅವರ ನಿಧನದಿಂದಾಗಿ ಇಡೀ ಭಾರತೀಯ ಸಂಗೀತ ಲೋಕಕ್ಕೆ ತುಂಬಲಾರದ ಅಪಾರ ನಷ್ಟ ಉಂಟಾಗಿದೆ.
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    37 min ago
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಹೆದ್ದಾರಿಯಲ್ಲಿ ಮತ್ತೊಂದು ರೋಡ್ ರೇಜ್ ಘಟನೆ ವರದಿಯಾಗಿದೆ. ಆಂಬ್ಯುಲೆನ್ಸ್ ಚಾಲಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಆತನಿಗೆ ಕಪಾಳಮೋಕ್ಷ ಮಾಡಿ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಈ ಗಲಾಟೆ ಮತ್ತು ಹಲ್ಲೆಯ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಘಟನೆಗೆ ಆಂಬ್ಯುಲೆನ್ಸ್ ಚಾಲಕನ ವರ್ತನೆಯೇ ಕಾರಣ ಎಂದು ಆರೋಪಿಸಲಾಗಿದೆ. ಆಂಬ್ಯುಲೆನ್ಸ್‌ನಲ್ಲಿ ರೋಗಿ ಇಲ್ಲದಿದ್ದರೂ ಸಹ, ಚಾಲಕ ಸೈರನ್ ಹಾಕಿಕೊಂಡು ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸುತ್ತಿದ್ದನೆಂದು ಸ್ಥಳದಲ್ಲಿರುವವರು ದೂಷಿಸಿದ್ದಾರೆ. ಹೆದ್ದಾರಿಯಲ್ಲಿ ಕಾರನ್ನು ಅಡ್ಡ ನಿಲ್ಲಿಸಿ ಈ ಹಲ್ಲೆಯನ್ನು ನಡೆಸಲಾಗಿದೆ.
    2
    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಹೆದ್ದಾರಿಯಲ್ಲಿ ಮತ್ತೊಂದು ರೋಡ್ ರೇಜ್ ಘಟನೆ ವರದಿಯಾಗಿದೆ. ಆಂಬ್ಯುಲೆನ್ಸ್ ಚಾಲಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಆತನಿಗೆ ಕಪಾಳಮೋಕ್ಷ ಮಾಡಿ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಈ ಗಲಾಟೆ ಮತ್ತು ಹಲ್ಲೆಯ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಈ ಘಟನೆಗೆ ಆಂಬ್ಯುಲೆನ್ಸ್ ಚಾಲಕನ ವರ್ತನೆಯೇ ಕಾರಣ ಎಂದು ಆರೋಪಿಸಲಾಗಿದೆ. ಆಂಬ್ಯುಲೆನ್ಸ್‌ನಲ್ಲಿ ರೋಗಿ ಇಲ್ಲದಿದ್ದರೂ ಸಹ, ಚಾಲಕ ಸೈರನ್ ಹಾಕಿಕೊಂಡು ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸುತ್ತಿದ್ದನೆಂದು ಸ್ಥಳದಲ್ಲಿರುವವರು ದೂಷಿಸಿದ್ದಾರೆ. ಹೆದ್ದಾರಿಯಲ್ಲಿ ಕಾರನ್ನು ಅಡ್ಡ ನಿಲ್ಲಿಸಿ ಈ ಹಲ್ಲೆಯನ್ನು ನಡೆಸಲಾಗಿದೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.