logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

TOXIC: ಪ್ರಪಂಚದಾದ್ಯಂತ ಅಬ್ಬರ - 12000 ಥಿಯೇಟರ್‌ಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ದರ್ಬಾರ್ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಬಿಡುಗಡೆಗೆ ಸಜ್ಜಾಗಿದೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ Toxic: A Fairy Tale for Grown-Ups. ಯಶ್ ರವರ KGF 2 ಚಲನಚಿತ್ರದ ನಾಲ್ಕು ವರ್ಷಗಳ ನಂತರದ ಸಿನಿಮಾ ಇದಾಗಿದ್ದು, ಒಬ್ಬ ಮಹಿಳಾ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನ ಮಾಡಿದ್ದು , KVN Productions ಮತ್ತು Monster Mind Creations ನಿರ್ಮಾಣದಲ್ಲಿ ಅದ್ಧೂರಿಯಾಗಿ ಮೂಡಿ ಬಂದಿದೆ. ಕರ್ನಾಟಕದಲ್ಲಿ 1500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಭಾರತದಾದ್ಯಂತ 8000 ಚಿತ್ರಮಂದಿರಗಳಲ್ಲಿ ಹಾಗೂ 80ಕ್ಕೂ ಹೆಚ್ಚು ವಿದೇಶಗಳಲ್ಲಿ ಒಟ್ಟು ಪ್ರಪಂಚದಾದ್ಯಂತ 12000 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಆಗಸ್ಟ್ 26, 2026 ರಂದು ಬಿಡುಗಡೆಯಾಗಿ ಕರ್ನಾಟಕದ ಪ್ರಚಂಡ ಯಶಸ್ವಿಗೆ ಕಾರಣವಾಗಿದೆ. ಇಷ್ಟು ದೊಡ್ಡ ಮಟ್ಟದಲ್ಲಿ ಇದು ಕನ್ನಡದ ಯಾವುದೇ ಸಿನಿಮಾಗೆ ಸಿಕ್ಕಿಲ್ಲ ಎಂದೇ ಹೇಳ ಬೇಕಾಗುತ್ತದೆ. ಈ ಚಿತ್ರದ ಮತ್ತೊಂದು ವಿಶೇಷ ಅದರ ಬಹು ತಾರಾಗಣ. ಯಶ್ ಗೆ ಜೊತೆಯಾಗಿ ಭಾರತದ ಐವರು ಪ್ರಮುಖ ನಟಿಯರು ನಟಿಸಿದ್ದಾರೆ. ಲೇಡಿ ಸೂಪರ್‌ಸ್ಟಾರ್ ನಯನತಾರಾ, ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ, ಕನ್ನಡದ ಕ್ರಷ್ ರುಕ್ಮಿಣಿ ವಸಂತ್, ಬಹುಭಾಷಾ ನಟಿ ಹುಮಾ ಖುರೇಶಿ ಮತ್ತು ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇಕರ್ಸ್ ಇತ್ತೀಚೆಗೆ ಬಿಡುಗಡೆ ಮಾಡಿದ 'Ladies & Ladies' ಗ್ಲಿಂಪ್ಸ್ ಈ ಐವರು ನಟಿಯರ ಪವರ್‌ಫುಲ್ ಲುಕ್‌ಗಳನ್ನು ಪರಿಚಯಿಸಿ ಕುತೂಹಲ ಹೆಚ್ಚಿಸಿದೆ. 'Toxic' ಮೂಲತಃ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಚಿತ್ರೀಕರಿಸಲಾದ ಪ್ಯಾನ್-ಇಂಡಿಯನ್ ಚಿತ್ರವಾಗಿದ್ದು, ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ರಿಲೀಸ್ ಆಗಲಿದೆ. IMAX ನಲ್ಲೂ ಬಿಡುಗಡೆಯಾಗುತ್ತಿರುವುದು ಮತ್ತೊಂದು ಹೆಗ್ಗಳಿಕೆ. ಯಶ್ ಅವರನ್ನು 'ರಾಯ' ಎಂಬ ಮಾಸ್ ಮತ್ತು ಸ್ಟೈಲಿಶ್ ಪಾತ್ರದಲ್ಲಿ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಕರ್ನಾಟಕದಲ್ಲಿ 1500 ಥಿಯೇಟರ್‌ಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗುವುದು ಖಚಿತ.

4 hrs ago
user_Basavaraj
Basavaraj
Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
4 hrs ago
763a9184-6794-42c4-9076-ae36b0a027b4

TOXIC: ಪ್ರಪಂಚದಾದ್ಯಂತ ಅಬ್ಬರ - 12000 ಥಿಯೇಟರ್‌ಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ದರ್ಬಾರ್ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಬಿಡುಗಡೆಗೆ ಸಜ್ಜಾಗಿದೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ Toxic: A Fairy Tale for Grown-Ups. ಯಶ್ ರವರ KGF 2 ಚಲನಚಿತ್ರದ ನಾಲ್ಕು ವರ್ಷಗಳ ನಂತರದ ಸಿನಿಮಾ ಇದಾಗಿದ್ದು, ಒಬ್ಬ ಮಹಿಳಾ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನ ಮಾಡಿದ್ದು , KVN Productions ಮತ್ತು Monster Mind Creations ನಿರ್ಮಾಣದಲ್ಲಿ ಅದ್ಧೂರಿಯಾಗಿ ಮೂಡಿ ಬಂದಿದೆ. ಕರ್ನಾಟಕದಲ್ಲಿ 1500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಭಾರತದಾದ್ಯಂತ 8000 ಚಿತ್ರಮಂದಿರಗಳಲ್ಲಿ ಹಾಗೂ 80ಕ್ಕೂ ಹೆಚ್ಚು ವಿದೇಶಗಳಲ್ಲಿ ಒಟ್ಟು ಪ್ರಪಂಚದಾದ್ಯಂತ 12000 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಆಗಸ್ಟ್ 26, 2026 ರಂದು ಬಿಡುಗಡೆಯಾಗಿ ಕರ್ನಾಟಕದ ಪ್ರಚಂಡ ಯಶಸ್ವಿಗೆ ಕಾರಣವಾಗಿದೆ. ಇಷ್ಟು ದೊಡ್ಡ ಮಟ್ಟದಲ್ಲಿ ಇದು ಕನ್ನಡದ ಯಾವುದೇ ಸಿನಿಮಾಗೆ ಸಿಕ್ಕಿಲ್ಲ ಎಂದೇ ಹೇಳ

ef27e9eb-64d3-48a2-8b76-930e3b1485a4

ಬೇಕಾಗುತ್ತದೆ. ಈ ಚಿತ್ರದ ಮತ್ತೊಂದು ವಿಶೇಷ ಅದರ ಬಹು ತಾರಾಗಣ. ಯಶ್ ಗೆ ಜೊತೆಯಾಗಿ ಭಾರತದ ಐವರು ಪ್ರಮುಖ ನಟಿಯರು ನಟಿಸಿದ್ದಾರೆ. ಲೇಡಿ ಸೂಪರ್‌ಸ್ಟಾರ್ ನಯನತಾರಾ, ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ, ಕನ್ನಡದ ಕ್ರಷ್ ರುಕ್ಮಿಣಿ ವಸಂತ್, ಬಹುಭಾಷಾ ನಟಿ ಹುಮಾ ಖುರೇಶಿ ಮತ್ತು ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇಕರ್ಸ್ ಇತ್ತೀಚೆಗೆ ಬಿಡುಗಡೆ ಮಾಡಿದ 'Ladies & Ladies' ಗ್ಲಿಂಪ್ಸ್ ಈ ಐವರು ನಟಿಯರ ಪವರ್‌ಫುಲ್ ಲುಕ್‌ಗಳನ್ನು ಪರಿಚಯಿಸಿ ಕುತೂಹಲ ಹೆಚ್ಚಿಸಿದೆ. 'Toxic' ಮೂಲತಃ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಚಿತ್ರೀಕರಿಸಲಾದ ಪ್ಯಾನ್-ಇಂಡಿಯನ್ ಚಿತ್ರವಾಗಿದ್ದು, ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ರಿಲೀಸ್ ಆಗಲಿದೆ. IMAX ನಲ್ಲೂ ಬಿಡುಗಡೆಯಾಗುತ್ತಿರುವುದು ಮತ್ತೊಂದು ಹೆಗ್ಗಳಿಕೆ. ಯಶ್ ಅವರನ್ನು 'ರಾಯ' ಎಂಬ ಮಾಸ್ ಮತ್ತು ಸ್ಟೈಲಿಶ್ ಪಾತ್ರದಲ್ಲಿ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಕರ್ನಾಟಕದಲ್ಲಿ 1500 ಥಿಯೇಟರ್‌ಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗುವುದು ಖಚಿತ.

More news from ಕರ್ನಾಟಕ and nearby areas
  • ಮುಸ್ಲಿಂ ಭಾಂದವರಿಂದ ಸಂಭ್ರಮದಿಂದ ಈದ್ ಮಿಲಾದ್ ಹಬ್ಬದ ಆಚರಣೆ ಮೊಳಕಾಲ್ಮುರು ಸುದ್ದಿ ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಸಹೋದರರು ಈದ್ ಮಿಲಾದ್ ಹಬ್ಬವನ್ನು ಬಹಳ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಇದು ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸಂಕೇತವಾಗಿ ಆಚರಿಸುವ ಪವಿತ್ರ ಹಬ್ಬ. ಮುಸ್ಲಿಂ ಭಾಂದವರು ಹೊಸ ಬಟ್ಟೆ ತೊಟ್ಟು ಪ್ರವಾದಿಗಳ ಬಗ್ಗೆ ಘೋಷಣೆ ಕೂಗುತ್ತಾ ಊರಲ್ಲಿ ಮೆರವಣಿಗೆ ಮಾಡುತ್ತಾರೆ. ಈ ದಿನದಂದು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಮಸೀದಿಗಳನ್ನು, ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುತ್ತಾರೆ. ಮೆರವಣಿಗೆಗಳನ್ನು ಏರ್ಪಡಿಸಿ ಪ್ರವಾದಿಯವರ ಜೀವನ, ಅವರ ಸಂದೇಶವಾದ ಶಾಂತಿ, ಸಹೋದರತ್ವ, ಕರುಣೆ, ಸಮಾನತೆಯ ಬಗ್ಗೆ ಉಪನ್ಯಾಸಗಳು ನಡೆಯುತ್ತವೆ. ಖುರಾನ್ ಪಠಣ ಹಾಗೂ ಪ್ರವಾದಿಯವರನ್ನು ಸ್ತುತಿಸುವ ಗೀತೆಗಳು ಹಾಡುತ್ತಾ ಮೆರವಣಿಗೆ ಮಾಡುತ್ತಾರೆ. ಈ ಹಬ್ಬವು ಕೇವಲ ಸಂಭ್ರಮವಲ್ಲ, ಪ್ರವಾದಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆಯ ದಿನ. ಬಡವರಿಗೆ ದಾನ, ಅನ್ನದಾನ ಮಾಡುವುದು ಈ ದಿನದ ವಿಶೇಷ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ, ಅದರಲ್ಲೂ ಹೈದರಾಬಾದ್, ಬೆಂಗಳೂರು, ಮೈಸೂರು ಮುಂತಾದ ಕಡೆಗಳಲ್ಲಿ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಕೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಎಂ ಆರ್ ಮೆಬೂಬ್ ಸಾಬ್, ಖಾಜಾ ಹುಸೇನ್, ಇಬ್ರಮ್ ಶಬ್ಬೀರ್ ಟಿ ಜಿಲಾನ್ ಭಾಷ, ಬೇಕರಿ ಭಾಷಾ, ಅಬ್ದುಲ್ ರಝಕ್, ಗುಲಾಮ್ ಮುಹಮ್ಮದ್, ಶಬ್ಬೀರ್ ಅಹಮದ್, ಮುಂತಾಜ್ ಅಹಮದ್, ಆಟೋ ನೂರ್ ಫಾರೂಕ್, ಇಸಾಕ್ ಅಹಮದ್ ಪೊಲೀಸ್ ಅನ್ವರ್ ಭಾಷ ಹಾಗೂ ಮುಸ್ಲಿಂ ಸಮುದಾಯದ ನಾಗರೀಕರು ಭಾಗವಹಿಸಿದ್ದರು.
    1
    ಮುಸ್ಲಿಂ ಭಾಂದವರಿಂದ ಸಂಭ್ರಮದಿಂದ ಈದ್  ಮಿಲಾದ್  ಹಬ್ಬದ  ಆಚರಣೆ 
ಮೊಳಕಾಲ್ಮುರು ಸುದ್ದಿ 
ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಸಹೋದರರು ಈದ್ ಮಿಲಾದ್ ಹಬ್ಬವನ್ನು ಬಹಳ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಇದು ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸಂಕೇತವಾಗಿ ಆಚರಿಸುವ ಪವಿತ್ರ ಹಬ್ಬ.
ಮುಸ್ಲಿಂ ಭಾಂದವರು ಹೊಸ ಬಟ್ಟೆ ತೊಟ್ಟು ಪ್ರವಾದಿಗಳ ಬಗ್ಗೆ ಘೋಷಣೆ ಕೂಗುತ್ತಾ ಊರಲ್ಲಿ ಮೆರವಣಿಗೆ ಮಾಡುತ್ತಾರೆ. ಈ ದಿನದಂದು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಮಸೀದಿಗಳನ್ನು, ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುತ್ತಾರೆ. ಮೆರವಣಿಗೆಗಳನ್ನು ಏರ್ಪಡಿಸಿ ಪ್ರವಾದಿಯವರ ಜೀವನ, ಅವರ ಸಂದೇಶವಾದ ಶಾಂತಿ, ಸಹೋದರತ್ವ, ಕರುಣೆ, ಸಮಾನತೆಯ ಬಗ್ಗೆ ಉಪನ್ಯಾಸಗಳು ನಡೆಯುತ್ತವೆ. ಖುರಾನ್ ಪಠಣ ಹಾಗೂ ಪ್ರವಾದಿಯವರನ್ನು ಸ್ತುತಿಸುವ ಗೀತೆಗಳು ಹಾಡುತ್ತಾ ಮೆರವಣಿಗೆ ಮಾಡುತ್ತಾರೆ.
ಈ ಹಬ್ಬವು ಕೇವಲ ಸಂಭ್ರಮವಲ್ಲ, ಪ್ರವಾದಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆಯ ದಿನ. ಬಡವರಿಗೆ ದಾನ, ಅನ್ನದಾನ ಮಾಡುವುದು ಈ ದಿನದ ವಿಶೇಷ.
ಕರ್ನಾಟಕ ಸೇರಿದಂತೆ ಭಾರತದಾದ್ಯಂತ, ಅದರಲ್ಲೂ ಹೈದರಾಬಾದ್, ಬೆಂಗಳೂರು, ಮೈಸೂರು ಮುಂತಾದ ಕಡೆಗಳಲ್ಲಿ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಕೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಎಂ ಆರ್ ಮೆಬೂಬ್ ಸಾಬ್, ಖಾಜಾ ಹುಸೇನ್, ಇಬ್ರಮ್ ಶಬ್ಬೀರ್ ಟಿ ಜಿಲಾನ್ ಭಾಷ, ಬೇಕರಿ ಭಾಷಾ, ಅಬ್ದುಲ್ ರಝಕ್, ಗುಲಾಮ್ ಮುಹಮ್ಮದ್, ಶಬ್ಬೀರ್ ಅಹಮದ್, ಮುಂತಾಜ್ ಅಹಮದ್, ಆಟೋ ನೂರ್ ಫಾರೂಕ್, ಇಸಾಕ್ ಅಹಮದ್ ಪೊಲೀಸ್ ಅನ್ವರ್ ಭಾಷ ಹಾಗೂ ಮುಸ್ಲಿಂ ಸಮುದಾಯದ ನಾಗರೀಕರು ಭಾಗವಹಿಸಿದ್ದರು.
    user_Basavaraj
    Basavaraj
    Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    3 hrs ago
  • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮನವಿ ಕೂಡ್ಲಿಗಿ: ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಂಗಳವಾರ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಗೌರವಧನ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ಸರ್ಕಾರ ಕೂಡಲೇ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ತಂದು, ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನೋಪಾಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಬಿ.ಎಲ್.ಓ. ಜವಾಬ್ದಾರಿ ಹೊರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಅಂಗನವಾಡಿ ಉದ್ಯೋಗಿಗಳಿಗೆ ನಿವೃತ್ತಿ ನಂತರದ ಜೀವನಕ್ಕೆ ಅನುಕೂಲವಾಗುವಂತೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿ, ಶೀಘ್ರವೇ ನ್ಯಾಯಯುತವಾಗಿ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷೆ ಕೆ ಪದ್ಮಾವತಿ, ತಾಲೂಕ್ ಅಧ್ಯಕ್ಷರು ಎನ್ ಸುಮಾ, ಉಪಾಧ್ಯಕ್ಷರಾದ ಕೆಎನ್ ಕವಿತಾ, ಪಾರ್ವತಮ್ಮ, ಪ್ರಧನ ಕಾರ್ಯದರ್ಶಿ ಎಚ್ ಅನ್ನಪೂರ್ಣ, ಸಹ ಕಾರ್ಯದರ್ಶಿ ಬಿ ಪದ್ಮಾವತಿ, ಓ ಕರಿಬಸಮ್ಮ, ಖಜಾಂಚಿ ಜಯಮಾಲ ಜೆ, ಸಂಘಟನಾ ಕಾರ್ಯದರ್ಶಿ ಮೀನಾಕ್ಷಿ, ಸದಸ್ಯರಾದ ಬಿ ಶಿವಲೀಲಾ, ಜಿ ಗಾಯತ್ರಿ, ರೇಣುಕಮ್ಮ, ಎಚ್ಎಸ್ ಚಂದ್ರಮ್ಮ, ಎಬಿ ಬಸಮ್ಮ, ಓ ಸುಜಾತ, ಸುಮಲತಾ, ಬಿ ರೇಖಾ, ದ್ಯಾಮಕ್ಕ, ಸಿ.ಬಿ ಅನುಸೂಯ ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಉಪಸಿದ್ಧರಿದ್ದರು.
    1
    ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮನವಿ
ಕೂಡ್ಲಿಗಿ: ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮಂಗಳವಾರ ತಹಶೀಲ್ದಾರ್ ವಿ.ಕೆ. ನೇತ್ರಾವತಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಮಕ್ಕಳ ಪೌಷ್ಟಿಕತೆ, ಆರೋಗ್ಯ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಗೌರವಧನ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ಸರ್ಕಾರ ಕೂಡಲೇ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೆ ತಂದು, ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನೋಪಾಯಕ್ಕೆ ಸೂಕ್ತ ಭದ್ರತೆ ಒದಗಿಸಬೇಕು. ಬಿ.ಎಲ್.ಓ. ಜವಾಬ್ದಾರಿ ಹೊರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಅಂಗನವಾಡಿ ಉದ್ಯೋಗಿಗಳಿಗೆ ನಿವೃತ್ತಿ ನಂತರದ ಜೀವನಕ್ಕೆ ಅನುಕೂಲವಾಗುವಂತೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿ, ಶೀಘ್ರವೇ ನ್ಯಾಯಯುತವಾಗಿ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷೆ ಕೆ ಪದ್ಮಾವತಿ, ತಾಲೂಕ್ ಅಧ್ಯಕ್ಷರು ಎನ್ ಸುಮಾ, ಉಪಾಧ್ಯಕ್ಷರಾದ ಕೆಎನ್ ಕವಿತಾ, ಪಾರ್ವತಮ್ಮ, ಪ್ರಧನ ಕಾರ್ಯದರ್ಶಿ ಎಚ್ ಅನ್ನಪೂರ್ಣ, ಸಹ ಕಾರ್ಯದರ್ಶಿ ಬಿ ಪದ್ಮಾವತಿ, ಓ ಕರಿಬಸಮ್ಮ, ಖಜಾಂಚಿ ಜಯಮಾಲ ಜೆ, ಸಂಘಟನಾ ಕಾರ್ಯದರ್ಶಿ ಮೀನಾಕ್ಷಿ, ಸದಸ್ಯರಾದ ಬಿ ಶಿವಲೀಲಾ, ಜಿ ಗಾಯತ್ರಿ, ರೇಣುಕಮ್ಮ, ಎಚ್ಎಸ್ ಚಂದ್ರಮ್ಮ, ಎಬಿ ಬಸಮ್ಮ, ಓ ಸುಜಾತ, ಸುಮಲತಾ, ಬಿ ರೇಖಾ, ದ್ಯಾಮಕ್ಕ, ಸಿ.ಬಿ ಅನುಸೂಯ ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಉಪಸಿದ್ಧರಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    8 hrs ago
  • ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ಮೊಬೈಲ್ ಕಳವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಸಂಬಂಧಿಕರ ಮೊಬೈಲ್ ಫೋನನ್ನು ಕಳ್ಳನೊಬ್ಬ ಎಗರಿಸಿ ಪರಾರಿಯಾದ ಘಟನೆ ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗೆಂದು ರೋಗಿಯೊಬ್ಬರು ದಾಖಲಾಗಿದ್ರು. ರೋಗಿಯ ಸಂಬಂಧಿಗಳು ರಾತ್ರಿ ವೇಳೆ ನಿದ್ರೆಗೆ ಜಾರಿದ್ದ ವೇಳೆ ಖದೀಮ ತನ್ನ ಕೈಚಳಕ ತೋರಿದ್ದು, ಮೆಲ್ಲನೇ ಮೊಬೈಲ್ ಫೋನನ್ನ ಎತ್ತಿಕೊಂಡು ಪರಾರಿಯಾಗಿದ್ದಾನೆ. ಇನ್ನು ಕಳ್ಳನ ಖರಾಮತ್ತು ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಎಷ್ಟು ಸುರಕ್ಷಿತ ಎನ್ನುವ ಚರ್ಚೆಗಳು ಪ್ರಾರಂಬವಾಗಿದ್ದು, ಸಧ್ಯ ಕಳ್ಳತನ ಘಟನೆಗಳಿಗೆ ಬ್ರೇಕ್ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಫ್ಲೋ......
    1
    ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ಮೊಬೈಲ್ ಕಳವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಸಂಬಂಧಿಕರ ಮೊಬೈಲ್ ಫೋನನ್ನು ಕಳ್ಳನೊಬ್ಬ ಎಗರಿಸಿ ಪರಾರಿಯಾದ ಘಟನೆ ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆ ಚಿಕಿತ್ಸೆಗೆಂದು ರೋಗಿಯೊಬ್ಬರು ದಾಖಲಾಗಿದ್ರು. ರೋಗಿಯ ಸಂಬಂಧಿಗಳು ರಾತ್ರಿ ವೇಳೆ ನಿದ್ರೆಗೆ ಜಾರಿದ್ದ ವೇಳೆ ಖದೀಮ ತನ್ನ ಕೈಚಳಕ ತೋರಿದ್ದು, ಮೆಲ್ಲನೇ ಮೊಬೈಲ್ ಫೋನನ್ನ ಎತ್ತಿಕೊಂಡು ಪರಾರಿಯಾಗಿದ್ದಾನೆ. ಇನ್ನು ಕಳ್ಳನ ಖರಾಮತ್ತು ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಿರಿಯೂರು ಸರಕಾರಿ ಆಸ್ಪತ್ರೆಯಲ್ಲಿ  ರೋಗಿಗಳು ಎಷ್ಟು  ಸುರಕ್ಷಿತ ಎನ್ನುವ ಚರ್ಚೆಗಳು ಪ್ರಾರಂಬವಾಗಿದ್ದು, ಸಧ್ಯ ಕಳ್ಳತನ ಘಟನೆಗಳಿಗೆ ಬ್ರೇಕ್ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಫ್ಲೋ......
    user_ನ್ಯೂಸ್ ಕಿಂಗ್
    ನ್ಯೂಸ್ ಕಿಂಗ್
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    17 hrs ago
  • ಈದ್ ಮಿಲಾದ್: ಶಾಂತಿ ಸುವ್ಯವಸ್ಥೆ ಕಾಪಾಡಲು ಚಳ್ಳಕೆರೆಯಲ್ಲಿ ಪೊಲೀಸರಿಂದ ಬೃಹತ್ ಪಥಸಂಚಲನ ಚಳ್ಳಕೆರೆ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಪಥಸಂಚಲನ ನಡೆಸಲಾಯಿತು. ನಗರದ ಪೊಲೀಸ್ ಠಾಣೆಯ ಮುಂಭಾಗದಿಂದ ಆರಂಭವಾದ ಈ ಶಿಸ್ತುಬದ್ಧ ಪಥಸಂಚಲನವು ಚಿತ್ರದುರ್ಗ ರಸ್ತೆ, ಅಂಬೇಡ್ಕರ್ ವೃತ್ತ, ಎಸ್.ಆರ್. ರಸ್ತೆ, ಬೆಂಗಳೂರು ರಸ್ತೆ, ಬಸವೇಶ್ವರ ವೃತ್ತ, ಹಳೆನಗರದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಮೂಲಕ ಸಾಗಿ ಬಳ್ಳಾರಿ ರಸ್ತೆಯವರೆಗೆ ಜರುಗಿತು. ನಗರದ ಅಷ್ಟ ದಿಕ್ಕುಗಳಲ್ಲೂ ಸಂಚರಿಸಿದ ಪೊಲೀಸ್ ಪಡೆ, ಸಾರ್ವಜನಿಕರಲ್ಲಿ ಧೈರ್ಯ ಮತ್ತು ಭದ್ರತೆಯ ಭಾವನೆ ಮೂಡಿಸುವಲ್ಲಿ ಯಶಸ್ವಿಯಾಯಿತು. ಚಳ್ಳಕೆರೆ ವಿಭಾಗದ ಡಿವೈಎಸ್‌ಪಿ ಸತ್ಯನಾರಾಯಣ ರಾವ್ ಅವರ ನೇತೃತ್ವದಲ್ಲಿ ನಡೆದ ಈ ಪಥಸಂಚಲನದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಕೆ. ಕುಮಾರ್, ಪಿಎಸ್‌ಐ ಶಿವರಾಜ್ ಸೇರಿದಂತೆ ಕೆಎಸ್‌ಆರ್‌ಪಿ , ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಎಲ್ಲರೂ ಅನ್ಯೋನ್ಯತೆಯಿಂದ, ಶಾಂತಿ ಹಾಗೂ ಸೌಹಾರ್ದತೆಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಬೇಕು,ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
    1
    ಈದ್ ಮಿಲಾದ್: ಶಾಂತಿ ಸುವ್ಯವಸ್ಥೆ ಕಾಪಾಡಲು ಚಳ್ಳಕೆರೆಯಲ್ಲಿ ಪೊಲೀಸರಿಂದ ಬೃಹತ್ ಪಥಸಂಚಲನ
ಚಳ್ಳಕೆರೆ:  ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಪಥಸಂಚಲನ  ನಡೆಸಲಾಯಿತು.
ನಗರದ ಪೊಲೀಸ್ ಠಾಣೆಯ ಮುಂಭಾಗದಿಂದ ಆರಂಭವಾದ ಈ ಶಿಸ್ತುಬದ್ಧ ಪಥಸಂಚಲನವು ಚಿತ್ರದುರ್ಗ ರಸ್ತೆ, ಅಂಬೇಡ್ಕರ್ ವೃತ್ತ, ಎಸ್.ಆರ್. ರಸ್ತೆ, ಬೆಂಗಳೂರು ರಸ್ತೆ, ಬಸವೇಶ್ವರ ವೃತ್ತ, ಹಳೆನಗರದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಮೂಲಕ ಸಾಗಿ ಬಳ್ಳಾರಿ ರಸ್ತೆಯವರೆಗೆ ಜರುಗಿತು. ನಗರದ ಅಷ್ಟ ದಿಕ್ಕುಗಳಲ್ಲೂ ಸಂಚರಿಸಿದ ಪೊಲೀಸ್ ಪಡೆ, ಸಾರ್ವಜನಿಕರಲ್ಲಿ ಧೈರ್ಯ ಮತ್ತು ಭದ್ರತೆಯ ಭಾವನೆ ಮೂಡಿಸುವಲ್ಲಿ ಯಶಸ್ವಿಯಾಯಿತು.
ಚಳ್ಳಕೆರೆ ವಿಭಾಗದ ಡಿವೈಎಸ್‌ಪಿ ಸತ್ಯನಾರಾಯಣ ರಾವ್ ಅವರ ನೇತೃತ್ವದಲ್ಲಿ ನಡೆದ ಈ ಪಥಸಂಚಲನದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಕೆ. ಕುಮಾರ್, ಪಿಎಸ್‌ಐ ಶಿವರಾಜ್ ಸೇರಿದಂತೆ ಕೆಎಸ್‌ಆರ್‌ಪಿ , ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಎಲ್ಲರೂ ಅನ್ಯೋನ್ಯತೆಯಿಂದ, ಶಾಂತಿ ಹಾಗೂ ಸೌಹಾರ್ದತೆಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಬೇಕು,ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
    user_Kiran M J
    Kiran M J
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಕೂಡ್ಲಿಗಿ : AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ *ಕೂಡ್ಲಿಗಿ : AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಆ 25ರಂದು ಪಟ್ಟಣದಲ್ಲಿ , (AITUC) ಕರ್ನಾಟಕ ರಾಜ್ಯವ ಅಂಗನವಾಡಿ ಕಾರ್ತಕರ್ತೆಯರು , ಮತ್ತು ಸಹಾಯಕಿಯರ ಪೆಡರೇಷನ್ ಕಾರ್ಯಕರ್ತೆಯರು. ತಮ್ಮ ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ , ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ , AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು. ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ , ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು. ಮುಖಂಡ ಹೆಚ್. ವೀರಣ್ಣ ನೇತೃತ್ವದಲ್ಲಿ , ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರ ನೀಡಿದರು. ಹೆಚ್.ವೀರಣ್ಣ ಹಾಗೂ ತಾಲೂಕಾಧ್ಯಕ್ಷರಾದ , ಎನ್ ಸುಮಾ ಮಾತನಾಡಿದರು. ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ , ತಹಶಿಲ್ದಾರರಾದ ವಿ.ಕೆ.ನೇತ್ರಾವತಿಯವರಿಗೆ ಹಾಗೂ ಸಿಡಿಪಿಒ ಮಾಲುಂಬೀರವರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದರು. ತಾಲೂಕು ಪದಾಧಿಕಾರಿಗಳಾದ ಕೆ. ಪದ್ಮ‍ಾವತಿ , ಕೆ.ಹೆಚ್.ಕವಿತಾ , ಬಿ.ಪಾರ್ವತಮ್ಮ , ಹೆಚ್.ಅನ್ನಪೂರ್ಣ , ಜಿ.ಪದ್ಮಾವತಿ , ಓ. ಕರಿವಸಮ್ಮ , ಜೆ.ಜಯಮಾಲ , ಮೀನಾಕ್ಷಿ , ಶಿವಲೀಲಾ , ಗಾಯತ್ರಿ , ರೇಣುಕಮ್ಮ , ಚಂದ್ರಮ್ಮ , ಬಸಮ್ಮ , ಸುಜಾತ , ಸುಮಲತಾ , ರೇಣುಕಾ , ದ್ಯಾಮಕ್ಕ , ಅನಸೂಯ ಸೇರಿದಂತೆ. ಪಟ್ಟಣ ಸೇರಿದಂತೆ , ತಾಲೂಕಿನ ಬಹುತೇಕ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
*ಕೂಡ್ಲಿಗಿ : AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಆ 25ರಂದು ಪಟ್ಟಣದಲ್ಲಿ , (AITUC) ಕರ್ನಾಟಕ ರಾಜ್ಯವ ಅಂಗನವಾಡಿ ಕಾರ್ತಕರ್ತೆಯರು , ಮತ್ತು ಸಹಾಯಕಿಯರ ಪೆಡರೇಷನ್  ಕಾರ್ಯಕರ್ತೆಯರು. ತಮ್ಮ  ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ,  ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ , AITUC ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು. ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ , ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು. ಮುಖಂಡ ಹೆಚ್. ವೀರಣ್ಣ  ನೇತೃತ್ವದಲ್ಲಿ ,  ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರ ನೀಡಿದರು. ಹೆಚ್.ವೀರಣ್ಣ ಹಾಗೂ ತಾಲೂಕಾಧ್ಯಕ್ಷರಾದ , ಎನ್ ಸುಮಾ ಮಾತನಾಡಿದರು. ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ , ತಹಶಿಲ್ದಾರರಾದ ವಿ.ಕೆ.ನೇತ್ರಾವತಿಯವರಿಗೆ ಹಾಗೂ ಸಿಡಿಪಿಒ ಮಾಲುಂಬೀರವರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದರು. ತಾಲೂಕು ಪದಾಧಿಕಾರಿಗಳಾದ  ಕೆ. ಪದ್ಮ‍ಾವತಿ ,  ಕೆ.ಹೆಚ್.ಕವಿತಾ , ಬಿ.ಪಾರ್ವತಮ್ಮ , ಹೆಚ್.ಅನ್ನಪೂರ್ಣ ,  ಜಿ.ಪದ್ಮಾವತಿ , ಓ. ಕರಿವಸಮ್ಮ , ಜೆ.ಜಯಮಾಲ ,  ಮೀನಾಕ್ಷಿ , ಶಿವಲೀಲಾ , ಗಾಯತ್ರಿ , ರೇಣುಕಮ್ಮ , ಚಂದ್ರಮ್ಮ , ಬಸಮ್ಮ , ಸುಜಾತ , ಸುಮಲತಾ , ರೇಣುಕಾ , ದ್ಯಾಮಕ್ಕ , ಅನಸೂಯ ಸೇರಿದಂತೆ. ಪಟ್ಟಣ ಸೇರಿದಂತೆ  , ತಾಲೂಕಿನ ಬಹುತೇಕ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ✍ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    23 hrs ago
  • ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ! ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. 550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ. 📍ಸ್ಥಳ: ಬಳ್ಳಾರಿ 🎥 ASN News24 Kannada #Hashtags #FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    1
    ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!
ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ.
550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ.
📍ಸ್ಥಳ: ಬಳ್ಳಾರಿ
🎥 ASN News24 Kannada
#Hashtags
#FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    user_AsnNews24Kannada
    AsnNews24Kannada
    Local News Reporter Ballari, Karnataka•
    21 min ago
  • ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಹಿಂದೂ ಮಹಾ ಗಣಪತಿಯ ದ್ವಜ ಪೂಜೆ ಹಾಗೂ ಗೋಪೂಜೆ ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಹಿಂದೂ ಮಹಾ ಗಣಪತಿಯ ದ್ವಜ ಪೂಜೆ ಹಾಗೂ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ವಿಶ್ವ ಹಿಂದೂ ಪರಿಷದ್ ಭಜರಂಗದಳದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಹಿಂದೂ ಮಹಾ ಗಣಪತಿ ಪ್ರತಿಷ್ಠಾನೆ ಮಾಡಲಾಗುತ್ತಿದ್ದು ಈ ಹಿನ್ನೆಲೆ ಗಣೇಶ ಪ್ರತಿಷ್ಟಾಪನಾ ಸ್ಥಳದಲ್ಲಿಂದು ದ್ವಜ ಪೂಜೆ ಹಾಗೂ ಗೋಪೂಜೆ ಹಮ್ಮಿಕೊಂಡಿದ್ದು ಸಂಸದ ಗೋವಿಂದ ಕಾರಜೋಳ, ಭೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಯಾದವ ಮಠದ ಸ್ವಾಮೀಜಿ ಸೇರಿದಂತೆ ಅನೇಕ ಮಠಗಳ ಮಠಾದೀಶರು ಆಗಮಿಸಿದ್ದು ದ್ವಜ ಪೂಜೆ ಹಾಗೂ ದ್ವಜ ಪೂಜೆಯನ್ನ ನೆರವೇರಿಸಿದ್ದು ಹಿಂದೂ ಮಹಾ ಗಣಪತಿ ಉತ್ಸವಕ್ಕೆ ಚಾಲನೆಯನ್ನ ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಹಲವು ಮುಖಂಡರು ಹಾಜರಿದ್ದರು
    1
    ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಹಿಂದೂ ಮಹಾ ಗಣಪತಿಯ ದ್ವಜ ಪೂಜೆ ಹಾಗೂ ಗೋಪೂಜೆ
ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಹಿಂದೂ ಮಹಾ ಗಣಪತಿಯ ದ್ವಜ ಪೂಜೆ ಹಾಗೂ ಗೋಪೂಜೆ ಹಮ್ಮಿಕೊಳ್ಳಲಾಗಿತ್ತು. ಇನ್ನೂ ವಿಶ್ವ ಹಿಂದೂ ಪರಿಷದ್ ಭಜರಂಗದಳದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಹಿಂದೂ ಮಹಾ ಗಣಪತಿ ಪ್ರತಿಷ್ಠಾನೆ ಮಾಡಲಾಗುತ್ತಿದ್ದು ಈ ಹಿನ್ನೆಲೆ ಗಣೇಶ ಪ್ರತಿಷ್ಟಾಪನಾ ಸ್ಥಳದಲ್ಲಿಂದು 
ದ್ವಜ ಪೂಜೆ ಹಾಗೂ ಗೋಪೂಜೆ ಹಮ್ಮಿಕೊಂಡಿದ್ದು ಸಂಸದ ಗೋವಿಂದ ಕಾರಜೋಳ, ಭೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಯಾದವ ಮಠದ ಸ್ವಾಮೀಜಿ ಸೇರಿದಂತೆ ಅನೇಕ ಮಠಗಳ ಮಠಾದೀಶರು ಆಗಮಿಸಿದ್ದು ದ್ವಜ ಪೂಜೆ ಹಾಗೂ ದ್ವಜ ಪೂಜೆಯನ್ನ ನೆರವೇರಿಸಿದ್ದು ಹಿಂದೂ ಮಹಾ ಗಣಪತಿ ಉತ್ಸವಕ್ಕೆ ಚಾಲನೆಯನ್ನ ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಹಲವು ಮುಖಂಡರು ಹಾಜರಿದ್ದರು
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 min ago
  • “ನನ್ನದೇ ಬೆಳೆ, ನನ್ನದೇ ಬೆಲೆ!” 🌾 ಬಳ್ಳಾರಿಯಲ್ಲಿ ನಾಳೆಯಿಂದ ರೈತ ಸಂತೆ ಆರಂಭ | ವಿಷಮುಕ್ತ ಆಹಾರಕ್ಕೆ ಒತ್ತು ಬಳ್ಳಾರಿಯಲ್ಲಿ ಆಗಸ್ಟ್ 26ರಿಂದ ‘ರೈತ ಸಂತೆ’ ಆರಂಭ! 🌾 ಗ್ರಾಹಕರಿಗೆ ನೈಸರ್ಗಿಕ ಹಾಗೂ ವಿಷಮುಕ್ತ ಕೃಷಿ ಉತ್ಪನ್ನಗಳನ್ನು ನೇರವಾಗಿ ತಲುಪಿಸುವ ಉದ್ದೇಶದಿಂದ ಬಳ್ಳಾರಿಯ ಗಾಂಧಿ ಭವನದಲ್ಲಿ ರೈತ ಸಂತೆ ಆರಂಭವಾಗಲಿದೆ. “ನನ್ನದೇ ಬೆಳೆ, ನನ್ನದೇ ಬೆಲೆ, ನನ್ನದೇ ಮಾರಾಟ” ಎಂಬ ಪರಿಕಲ್ಪನೆಯಡಿ ರೈತರು ತಮ್ಮ ಉತ್ಪನ್ನಗಳಿಗೆ ತಾವೇ ಬೆಲೆ ನಿಗದಿಪಡಿಸಿ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ನೈಸರ್ಗಿಕ ಕೃಷಿಕರು ಭಾಗವಹಿಸಲಿದ್ದಾರೆ. 📍 ಸ್ಥಳ: ಗಾಂಧಿ ಭವನ, ಬಳ್ಳಾರಿ 📅 ದಿನಾಂಕ: ಆಗಸ್ಟ್ 26, 2026 ⏰ ಸಮಯ: ಬೆಳಿಗ್ಗೆ 11 ಗಂಟೆ 📆 ಮುಂದೆ: ಪ್ರತಿ ಬುಧವಾರ 🌱 ವಿಶೇಷತೆ: ನೈಸರ್ಗಿಕ ಮತ್ತು ವಿಷಮುಕ್ತ ಕೃಷಿ ಉತ್ಪನ್ನಗಳು ರೈತರ ಆರ್ಥಿಕ ಸ್ವಾವಲಂಬನೆ ಹಾಗೂ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ಈ ಪ್ರಯತ್ನದ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ. #Ballari #Bellary #ರೈತಸಂತೆ #ರೈತಸಂಪದ #ನೈಸರ್ಗಿಕಕೃಷಿ #ವಿಷಮುಕ್ತಆಹಾರ #ರೈತರು #ಕೃಷಿ #FarmersMarket #OrganicFarming #NaturalFarming #KarnatakaNews #BallariNews #KannadaNews #Karnataka #Farmers #OrganicFood #LocalFarmers #asnnews24kannada
    1
    “ನನ್ನದೇ ಬೆಳೆ, ನನ್ನದೇ ಬೆಲೆ!” 🌾 ಬಳ್ಳಾರಿಯಲ್ಲಿ ನಾಳೆಯಿಂದ ರೈತ ಸಂತೆ ಆರಂಭ | ವಿಷಮುಕ್ತ ಆಹಾರಕ್ಕೆ ಒತ್ತು
ಬಳ್ಳಾರಿಯಲ್ಲಿ ಆಗಸ್ಟ್ 26ರಿಂದ ‘ರೈತ ಸಂತೆ’ ಆರಂಭ! 🌾
ಗ್ರಾಹಕರಿಗೆ ನೈಸರ್ಗಿಕ ಹಾಗೂ ವಿಷಮುಕ್ತ ಕೃಷಿ ಉತ್ಪನ್ನಗಳನ್ನು ನೇರವಾಗಿ ತಲುಪಿಸುವ ಉದ್ದೇಶದಿಂದ ಬಳ್ಳಾರಿಯ ಗಾಂಧಿ ಭವನದಲ್ಲಿ ರೈತ ಸಂತೆ ಆರಂಭವಾಗಲಿದೆ.
“ನನ್ನದೇ ಬೆಳೆ, ನನ್ನದೇ ಬೆಲೆ, ನನ್ನದೇ ಮಾರಾಟ” ಎಂಬ ಪರಿಕಲ್ಪನೆಯಡಿ ರೈತರು ತಮ್ಮ ಉತ್ಪನ್ನಗಳಿಗೆ ತಾವೇ ಬೆಲೆ ನಿಗದಿಪಡಿಸಿ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ.
ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ನೈಸರ್ಗಿಕ ಕೃಷಿಕರು ಭಾಗವಹಿಸಲಿದ್ದಾರೆ.
📍 ಸ್ಥಳ: ಗಾಂಧಿ ಭವನ, ಬಳ್ಳಾರಿ
📅 ದಿನಾಂಕ: ಆಗಸ್ಟ್ 26, 2026
⏰ ಸಮಯ: ಬೆಳಿಗ್ಗೆ 11 ಗಂಟೆ
📆 ಮುಂದೆ: ಪ್ರತಿ ಬುಧವಾರ
🌱 ವಿಶೇಷತೆ: ನೈಸರ್ಗಿಕ ಮತ್ತು ವಿಷಮುಕ್ತ ಕೃಷಿ ಉತ್ಪನ್ನಗಳು
ರೈತರ ಆರ್ಥಿಕ ಸ್ವಾವಲಂಬನೆ ಹಾಗೂ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ಈ ಪ್ರಯತ್ನದ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ.
#Ballari #Bellary #ರೈತಸಂತೆ #ರೈತಸಂಪದ #ನೈಸರ್ಗಿಕಕೃಷಿ #ವಿಷಮುಕ್ತಆಹಾರ #ರೈತರು #ಕೃಷಿ #FarmersMarket #OrganicFarming #NaturalFarming #KarnatakaNews #BallariNews #KannadaNews #Karnataka #Farmers #OrganicFood #LocalFarmers #asnnews24kannada
    user_AsnNews24Kannada
    AsnNews24Kannada
    Local News Reporter Ballari, Karnataka•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.