logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಂತ ಸೇವಾಲಾಲರು ಸಮಾನತೆಯ ಹರಿಕಾರರು ಮುಧೋಳ : ಸಂತ ಸೇವಾಲಾಲರು ಸಮಾಜದ ಶ್ರೇಯೋಭಿವೃದ್ಧಿಗೆ ನೀಡಿದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದೆ ಎಂದು ಘಟಕ ವ್ಯವಸ್ಥಾಪಕರಾದ ವಿದ್ಯಾ ನಾಯಕ ಹೇಳಿದರು. ನಗರದ ಬಸ್ ಡಿಪೋ ಘಟಕದಲ್ಲಿ ಸಂತ ಸೇವಾಲಲರ 287 ನೇ ಜಯಂತಿಯ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದರು, ಸಂತ ಸೇವಾಲಾಲರು ಸಮಾನತೆ, ಸೇವಾಭಾವ, ಮತ್ತು ನೈತಿಕ ಮೌಲ್ಯಗಳನ್ನು ಸಾರಿದ ಮಹಾನ್ ಸಂತರು. ಅವರ ಜೀವನ ಸಾಧನೆ ಸಮಾಜದ ಎಲ್ಲ ವರ್ಗದ ಜನತೆಗೆ ಮಾರ್ಗದರ್ಶನವಾಗಿದೆ. ಸಮಾಜದಲ್ಲಿ ಏಕತೆ,ಶಾಂತಿ ಮತ್ತು ಸೌಹಾರ್ದತೆ ಬೆಳೆಸುವಲ್ಲಿ ಅವರ ತತ್ವಗಳು ಮಹತ್ವದಾಗಿದೆ ಎಂದರು ಕಾರ್ಯಕ್ರಮದಲ್ಲಿ ಸಂಚಾರಿ ಅಧೀಕ್ಷಕ ರಮೇಶ್ ಕಳ್ಳಿಗುದ್ದಿ, ಗೋಪಾಲ ಪವಾರ್, ಅಶೋಕ ರಾಠೋಡ, ಡಿ.ಎಲ್. ಜಯಸಿಂಗ, ಕೃಷ್ಣಾ ಜಾದವ್, ಸೇರಿದಂತೆ ಇತರರು ಇದ್ದರು‌.

1 day ago
user_ಗೋವಿಂದಪ್ಪ ತಳವಾರ
ಗೋವಿಂದಪ್ಪ ತಳವಾರ
ಮುಧೋಳ, ಬಾಗಲಕೋಟೆ, ಕರ್ನಾಟಕ•
1 day ago
cb96d386-fa9e-4933-a970-fdb838946600

ಸಂತ ಸೇವಾಲಾಲರು ಸಮಾನತೆಯ ಹರಿಕಾರರು ಮುಧೋಳ : ಸಂತ ಸೇವಾಲಾಲರು ಸಮಾಜದ ಶ್ರೇಯೋಭಿವೃದ್ಧಿಗೆ ನೀಡಿದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದೆ ಎಂದು ಘಟಕ ವ್ಯವಸ್ಥಾಪಕರಾದ ವಿದ್ಯಾ ನಾಯಕ ಹೇಳಿದರು. ನಗರದ ಬಸ್ ಡಿಪೋ ಘಟಕದಲ್ಲಿ ಸಂತ ಸೇವಾಲಲರ 287 ನೇ ಜಯಂತಿಯ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದರು, ಸಂತ ಸೇವಾಲಾಲರು ಸಮಾನತೆ, ಸೇವಾಭಾವ, ಮತ್ತು ನೈತಿಕ ಮೌಲ್ಯಗಳನ್ನು ಸಾರಿದ ಮಹಾನ್ ಸಂತರು. ಅವರ ಜೀವನ ಸಾಧನೆ ಸಮಾಜದ ಎಲ್ಲ ವರ್ಗದ ಜನತೆಗೆ ಮಾರ್ಗದರ್ಶನವಾಗಿದೆ. ಸಮಾಜದಲ್ಲಿ ಏಕತೆ,ಶಾಂತಿ ಮತ್ತು ಸೌಹಾರ್ದತೆ ಬೆಳೆಸುವಲ್ಲಿ ಅವರ ತತ್ವಗಳು ಮಹತ್ವದಾಗಿದೆ ಎಂದರು ಕಾರ್ಯಕ್ರಮದಲ್ಲಿ ಸಂಚಾರಿ ಅಧೀಕ್ಷಕ ರಮೇಶ್ ಕಳ್ಳಿಗುದ್ದಿ, ಗೋಪಾಲ ಪವಾರ್, ಅಶೋಕ ರಾಠೋಡ, ಡಿ.ಎಲ್. ಜಯಸಿಂಗ, ಕೃಷ್ಣಾ ಜಾದವ್, ಸೇರಿದಂತೆ ಇತರರು ಇದ್ದರು‌.

More news from ಕರ್ನಾಟಕ and nearby areas
  • ಮುಧೋಳ : ಸಮೀಪದ ಸೈದಾಪುರ ಕ್ರಾಸ್ ಬಳಿ ಎಥೆನಾಲ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮುಂಜಾಗ್ರತಾ ಕ್ರಮ ಕೈಗೊಂಡು ಎಥೆನಾಲ್ ಸೋರಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. 16ಚಕ್ರದ ಬೃಹತ್ ಗಾತ್ರದ ಲಾರಿ ಸಮೀಪದ ಸಕ್ಕರೆ ಕಾರ್ಖಾನೆಯಿಂದ ಎಥೆನಾಲ್ ತುಂಬಿಕೊಂಡು ತಮಿಳುನಾಡು ಕಡೆಗೆ ಹೊರಟಿತ್ತು ಎಂಬ ಮಾಹಿತಿ ಇದೆ. ಸ್ಥಳಕ್ಕೆ ಮುಧೋಳ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಯಾವುದೇ ರೀತಿಯ ಜೀವಹಾನಿ ಸಂಭವಿಸಿಲ್ಲ‌. ಮಹಾಲಿಂಗಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    4
    ಮುಧೋಳ : ಸಮೀಪದ ಸೈದಾಪುರ ಕ್ರಾಸ್ ಬಳಿ ಎಥೆನಾಲ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮುಂಜಾಗ್ರತಾ ಕ್ರಮ ಕೈಗೊಂಡು ಎಥೆನಾಲ್ ಸೋರಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
16ಚಕ್ರದ ಬೃಹತ್ ಗಾತ್ರದ ಲಾರಿ ಸಮೀಪದ ಸಕ್ಕರೆ ಕಾರ್ಖಾನೆಯಿಂದ ಎಥೆನಾಲ್ ತುಂಬಿಕೊಂಡು ತಮಿಳುನಾಡು ಕಡೆಗೆ ಹೊರಟಿತ್ತು ಎಂಬ ಮಾಹಿತಿ ಇದೆ. ಸ್ಥಳಕ್ಕೆ ಮುಧೋಳ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತದಲ್ಲಿ ಯಾವುದೇ ರೀತಿಯ ಜೀವಹಾನಿ ಸಂಭವಿಸಿಲ್ಲ‌. ಮಹಾಲಿಂಗಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    6 hrs ago
  • ಶ್ರೀ ಸದಾಶಿವ ಮುತ್ಯಾ ಹಾಗೂ ಚಂದ್ರಮ್ಮ ತಾಯಿಯವರ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರುಗಿತು.
    1
    ಶ್ರೀ ಸದಾಶಿವ ಮುತ್ಯಾ ಹಾಗೂ ಚಂದ್ರಮ್ಮ ತಾಯಿಯವರ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರುಗಿತು.
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    1 hr ago
  • Post by Ajay Shet
    3
    Post by Ajay Shet
    user_Ajay Shet
    Ajay Shet
    Grain Trader ಅಥಣಿ, ಬೆಳಗಾವಿ, ಕರ್ನಾಟಕ•
    4 hrs ago
  • ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    3
    ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.
ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    user_ಶುಭಂ ವಾರ್ತೆ ದಿನಪತ್ರಿಕೆ ವರದಿಗಾರರು
    ಶುಭಂ ವಾರ್ತೆ ದಿನಪತ್ರಿಕೆ ವರದಿಗಾರರು
    ರಾಮದುರ್ಗ, ಬೆಳಗಾವಿ, ಕರ್ನಾಟಕ•
    7 hrs ago
  • Post by Omprakash rajkumar khot
    4
    Post by Omprakash rajkumar khot
    user_Omprakash rajkumar khot
    Omprakash rajkumar khot
    Athni, Belagavi•
    7 hrs ago
  • ಬೆಳಗಾಂವ ಜಿಲ್ಲಾ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದ ಸಾರ್ವಜನಿಕರು ರಾಮದುರ್ಗ ತಾಲೂಕಿಗೆ ಬಂದಂತ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ ತಮ್ಮ ಅಳಿಲನ್ನು ಮಾಧ್ಯಮದವರ ಮುಂದೆ ಹೇಳಿಕೊಂಡರು. ಹೊಸಕೋಟೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಬ್ಬ ಡಾಕ್ಟರ್ ಇದ್ದು ಎರಡು ವರ್ಷದಿಂದ ಅವರ ಸೇವೆ ಒಳ್ಳೆ ತರಹ ಮಾಡುತ್ತಾ ಬಂದಿದ್ದು ಹೊಸಕೋಟೆ ಗ್ರಾಮದ ಸುತ್ತು ಮುತ್ತಿಲಿನ ಹಳ್ಳಿಗಳಿಗೆ ಇವರ ಸೇವೆ ಅಚ್ಚುಮೆಚ್ಚಿಗೆ ಪಾತ್ರರಾಗಿದ್ದಾರೆ. ಈಗ ಸರ್ಕಾರದವರು ಇವರನ್ನು ವರ್ಗಾವಣೆ ಮಾಡಿದ್ದಕ್ಕೆ ಹೊಸಕೋಟೆ ಗ್ರಾಮಸ್ಥರು ಅವರನ್ನು ವರ್ಗಾವಣೆ ಮಾಡದಂತೆ ಮನವಿ ಸಲ್ಲಿಸಿ ತಮ್ಮ ಅನಿಸಿಕೆಗಳನ್ನು ಮಾಧ್ಯಮದವರು ಮುಂದೆ ಹೇಳಿಕೊಂಡು ಅವರನ್ನು ವರ್ಗಾವಣೆ ಮಾಡಿದಲ್ಲಿ ಜಿಲ್ಲಾಮಟ್ಟದಲ್ಲಿ ಸತ್ಯಾಗ್ರಹ ಮಾಡಲಾಗುವುದೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
    1
    ಬೆಳಗಾಂವ ಜಿಲ್ಲಾ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದ ಸಾರ್ವಜನಿಕರು ರಾಮದುರ್ಗ ತಾಲೂಕಿಗೆ ಬಂದಂತ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ ತಮ್ಮ ಅಳಿಲನ್ನು ಮಾಧ್ಯಮದವರ ಮುಂದೆ ಹೇಳಿಕೊಂಡರು. ಹೊಸಕೋಟೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಬ್ಬ ಡಾಕ್ಟರ್ ಇದ್ದು ಎರಡು ವರ್ಷದಿಂದ ಅವರ ಸೇವೆ ಒಳ್ಳೆ ತರಹ  ಮಾಡುತ್ತಾ ಬಂದಿದ್ದು ಹೊಸಕೋಟೆ ಗ್ರಾಮದ ಸುತ್ತು ಮುತ್ತಿಲಿನ ಹಳ್ಳಿಗಳಿಗೆ ಇವರ ಸೇವೆ ಅಚ್ಚುಮೆಚ್ಚಿಗೆ ಪಾತ್ರರಾಗಿದ್ದಾರೆ. ಈಗ ಸರ್ಕಾರದವರು ಇವರನ್ನು ವರ್ಗಾವಣೆ ಮಾಡಿದ್ದಕ್ಕೆ ಹೊಸಕೋಟೆ ಗ್ರಾಮಸ್ಥರು ಅವರನ್ನು ವರ್ಗಾವಣೆ ಮಾಡದಂತೆ ಮನವಿ ಸಲ್ಲಿಸಿ ತಮ್ಮ ಅನಿಸಿಕೆಗಳನ್ನು ಮಾಧ್ಯಮದವರು ಮುಂದೆ ಹೇಳಿಕೊಂಡು ಅವರನ್ನು ವರ್ಗಾವಣೆ ಮಾಡಿದಲ್ಲಿ ಜಿಲ್ಲಾಮಟ್ಟದಲ್ಲಿ ಸತ್ಯಾಗ್ರಹ ಮಾಡಲಾಗುವುದೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
    user_ರಾಮಚಂದ್ರ ಹ ಕುಕಡಿ.ಪತ್ರಕರ್ತರು
    ರಾಮಚಂದ್ರ ಹ ಕುಕಡಿ.ಪತ್ರಕರ್ತರು
    Local News Reporter ರಾಮದುರ್ಗ, ಬೆಳಗಾವಿ, ಕರ್ನಾಟಕ•
    12 hrs ago
  • ಧಾರ್ಮಿಕ ಶ್ರದ್ಧಾಕೇಂದ್ರ ಸುಕ್ಷೇತ್ರ ಮದ್ವೀರಶೈವ ಶಿವಯೋಗ ಮಂದಿರದ 116 ನೇ ಕಾರಣಿಕ ಯುಗಪುರುಷ ಹಾನಗಲ್ ಕುಮಾರ ಶ್ರೀಗಳ 65 ಅಡಿ ಎತ್ತರದ ಮಾಹಾರಥೋತ್ಸವ ಸೋಮವಾರ ಸಂಜೆ 6 ಗಂಟೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದೊಂದಿಗೆ ಜರುಗಿತು. ಏಷ್ಯಾ ಖಂಡದಲ್ಲಿಯೇ ಅತಿ ಎತ್ತರದ (೬೫ಅಡಿ) ಮಾಹಾರಥೋತ್ಸವಕ್ಕೆ ಸಾಂಪ್ರದಾಯಕವಾಗಿ ಪೂಜೆ ಪುನಸ್ಕಾರ ನೆರೆವೇರಿಸಿದ ಸಂಸ್ಥೆಯ ಅಧ್ಯಕ್ಷ, ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು. ಶಿರಬಡಗಿ ಗ್ರಾಮದ ಭಕ್ತಾಧಿಗಳು ತಂದ ಹಗ್ಗದಿಂದ ಭಕ್ತಗಣ ರಥ ಎಳೆಯಲಾಯಿತು. ಮಾಹಾರಥೋತ್ಸವಕ್ಕೆ ಭಕ್ತರು ಹೂವು ಸಮರ್ಪಿಸುವ ಮೂಲಕ ಭಕ್ತಿಯ ಪರಾಕಾಷ್ಠೆ ಮೆರೆದರು. ಅಪಾರ ಭಕ್ತ ಸಮೂಹ ಶಿವನ ಹಾಗೂ ಶಿವಯೋಗಿಗಳ ಸ್ಮರಣೆ ಮೂಲಕ ರಥ ಎಳೆದರು. ಸಂಸ್ಥೆಯ ಅಧ್ಯಕ್ಷರೂ ಆಗಿರುವ ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳ ಉಪಾಧ್ಯಕ್ಷ ಹಾವೇರಿ ಹುಕ್ಕೇರಿ ಮಠದ ಸದಾಶಿವ ಶ್ರೀಗಳ ನೇತೃತ್ವದಲ್ಲಿ ಪೂಜೆ ಕೈಂಕರ್ಯಗಳು ಜರುಗಿದವು. ಮಾಹಾರಥೋತ್ಸವದಲ್ಲಿ ನಾಡಿನ ಮಹಾಸ್ವಾಮಿಗಳಾದ ಹೊಳೆಹುಚ್ಚೇಶ್ವರ ಶ್ರೀ, ಫಕೀರ ದಿಂಗಾಲೇಶ್ವರ ಸ್ವಾಮಿಜಿ ನೂರಾರು ಮಠಾಧೀಶರು, ಮಹಾಸ್ವಾಮಿಗಳು, ವಟುಸಾಧಕರು ಹಾಜರಿದ್ದರು. ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಶಾಸಕ ಎಂ.ಕೆ.,ಪಟ್ಟಣಶೆಟ್ಟಿ ಧರ್ಮದರ್ಶಿ ಎಂ.ಬಿ.ಹಂಗರಗಿ, ಶರಣಪ್ಪಗೌಡ ಪಾಟೀಲ, ಕುಮಾರಗೌಡ ಜನಾಲಿ,ಮಹಾಂತೇಶ ಮಮದಾಪೂರ, ಶಾಂತಗೌಡ ಪಾಟೀಲ, ಬಸವರಾಜ ಪಾಟೀಲ, ಸಿದ್ದನಗೌಡ ಪಾಟೀಲ, ಆರ್.ಬಿ.ಪಾಟೀಲ, ಮುಕ್ಕಣಗೌಡ ಜನಾಲಿ, ನಾಗರಾಜ ಕಾಚೆಟ್ಟಿ, ಡಾ.ಆರ್.ಸಿ.ಭಂಡಾರಿ, ಪಂಪಣ್ಣ ಕಾಚೆಟ್ಟಿ, ಸಿಪಿಐ. ಕರೆಪ್ಪ ಬನ್ನೆ, ಪಿ.ಎಸ್.ಐ ಹನಮಂತ ನರಳೆ, ಜಿಲ್ಲೆಯ ವಿವಿಧ ಭಾಗಗಳ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ತಾಲೂಕಿನ ಮಂಗಳೂರು ಗ್ರಾಮದ ಭಜನಾ ಮಂಡಳಿಯವರು ನಂದಿಕೋಲು ಮೆರವಣಿಗೆಯೊಂದಿಗೆ ಮಹಾರಥೋತ್ಸವದಲ್ಲಿ ಗಮನಾರ್ಹವಾಗಿತ್ತು.
    1
    ಧಾರ್ಮಿಕ ಶ್ರದ್ಧಾಕೇಂದ್ರ ಸುಕ್ಷೇತ್ರ ಮದ್ವೀರಶೈವ ಶಿವಯೋಗ ಮಂದಿರದ 116 ನೇ ಕಾರಣಿಕ ಯುಗಪುರುಷ ಹಾನಗಲ್ ಕುಮಾರ ಶ್ರೀಗಳ 65 ಅಡಿ ಎತ್ತರದ ಮಾಹಾರಥೋತ್ಸವ ಸೋಮವಾರ ಸಂಜೆ 6 ಗಂಟೆಗೆ  ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದೊಂದಿಗೆ ಜರುಗಿತು.
ಏಷ್ಯಾ ಖಂಡದಲ್ಲಿಯೇ ಅತಿ ಎತ್ತರದ (೬೫ಅಡಿ) ಮಾಹಾರಥೋತ್ಸವಕ್ಕೆ ಸಾಂಪ್ರದಾಯಕವಾಗಿ ಪೂಜೆ ಪುನಸ್ಕಾರ ನೆರೆವೇರಿಸಿದ ಸಂಸ್ಥೆಯ ಅಧ್ಯಕ್ಷ, ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು.
ಶಿರಬಡಗಿ ಗ್ರಾಮದ ಭಕ್ತಾಧಿಗಳು ತಂದ ಹಗ್ಗದಿಂದ ಭಕ್ತಗಣ ರಥ ಎಳೆಯಲಾಯಿತು. ಮಾಹಾರಥೋತ್ಸವಕ್ಕೆ ಭಕ್ತರು ಹೂವು ಸಮರ್ಪಿಸುವ ಮೂಲಕ ಭಕ್ತಿಯ ಪರಾಕಾಷ್ಠೆ ಮೆರೆದರು. ಅಪಾರ ಭಕ್ತ ಸಮೂಹ ಶಿವನ ಹಾಗೂ ಶಿವಯೋಗಿಗಳ ಸ್ಮರಣೆ  ಮೂಲಕ ರಥ ಎಳೆದರು. ಸಂಸ್ಥೆಯ ಅಧ್ಯಕ್ಷರೂ ಆಗಿರುವ ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳ ಉಪಾಧ್ಯಕ್ಷ ಹಾವೇರಿ ಹುಕ್ಕೇರಿ ಮಠದ ಸದಾಶಿವ ಶ್ರೀಗಳ ನೇತೃತ್ವದಲ್ಲಿ ಪೂಜೆ ಕೈಂಕರ್ಯಗಳು ಜರುಗಿದವು.
ಮಾಹಾರಥೋತ್ಸವದಲ್ಲಿ ನಾಡಿನ ಮಹಾಸ್ವಾಮಿಗಳಾದ ಹೊಳೆಹುಚ್ಚೇಶ್ವರ ಶ್ರೀ, ಫಕೀರ ದಿಂಗಾಲೇಶ್ವರ ಸ್ವಾಮಿಜಿ ನೂರಾರು ಮಠಾಧೀಶರು, ಮಹಾಸ್ವಾಮಿಗಳು, ವಟುಸಾಧಕರು ಹಾಜರಿದ್ದರು.  ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಶಾಸಕ ಎಂ.ಕೆ.,ಪಟ್ಟಣಶೆಟ್ಟಿ ಧರ್ಮದರ್ಶಿ ಎಂ.ಬಿ.ಹಂಗರಗಿ, ಶರಣಪ್ಪಗೌಡ ಪಾಟೀಲ, ಕುಮಾರಗೌಡ ಜನಾಲಿ,ಮಹಾಂತೇಶ ಮಮದಾಪೂರ, ಶಾಂತಗೌಡ ಪಾಟೀಲ, ಬಸವರಾಜ ಪಾಟೀಲ,  ಸಿದ್ದನಗೌಡ ಪಾಟೀಲ, ಆರ್.ಬಿ.ಪಾಟೀಲ, ಮುಕ್ಕಣಗೌಡ ಜನಾಲಿ, ನಾಗರಾಜ ಕಾಚೆಟ್ಟಿ,  ಡಾ.ಆರ್.ಸಿ.ಭಂಡಾರಿ,  ಪಂಪಣ್ಣ ಕಾಚೆಟ್ಟಿ, ಸಿಪಿಐ. ಕರೆಪ್ಪ ಬನ್ನೆ, ಪಿ.ಎಸ್.ಐ ಹನಮಂತ ನರಳೆ, ಜಿಲ್ಲೆಯ ವಿವಿಧ ಭಾಗಗಳ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ತಾಲೂಕಿನ ಮಂಗಳೂರು ಗ್ರಾಮದ ಭಜನಾ ಮಂಡಳಿಯವರು ನಂದಿಕೋಲು ಮೆರವಣಿಗೆಯೊಂದಿಗೆ ಮಹಾರಥೋತ್ಸವದಲ್ಲಿ ಗಮನಾರ್ಹವಾಗಿತ್ತು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    12 hrs ago
  • ಮುಧೋಳ : ತಾಲೂಕಿನ ಮುಗಳಖೋಡ ಗ್ರಾಮದ ಆರಾಧ್ಯ ದೈವ ಪರಮಾನಂದ ದೇವರ ಜಾತ್ರೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು. ಜಾತ್ರೆ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹತ್ತಾರು ದಾರ್ಮಿಕ ಕೈಂಕರ್ಯ ನಡೆದವು. ಮುತ್ತೈದೆಯರು ಆರತಿ ಹಿಡಿದು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡರು. ಸಂಜೆ ದೇವರ ಸನ್ನಿಧಿಯಲ್ಲಿ ಜರುಗಿದ ದೈವ ವಾಣಿ ಆಲಿಸಲು ಸಾವಿರಾರು ಭಕ್ತರು ನೆರೆದಿದ್ದರು. ಮುಗಳಖೋಡ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಜಾತ್ರೋತ್ಸವದಲ್ಲಿ ಪಾಲ್ಗೊಂಡು ದೃವರ ಕೃಪಾಶೀರ್ವಾದಕ್ಕೆ ಪಾತ್ರರಾದರು.
    3
    ಮುಧೋಳ : ತಾಲೂಕಿನ ಮುಗಳಖೋಡ ಗ್ರಾಮದ ಆರಾಧ್ಯ ದೈವ ಪರಮಾನಂದ ದೇವರ ಜಾತ್ರೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು.
ಜಾತ್ರೆ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹತ್ತಾರು ದಾರ್ಮಿಕ ಕೈಂಕರ್ಯ ನಡೆದವು.
ಮುತ್ತೈದೆಯರು ಆರತಿ ಹಿಡಿದು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡರು. ಸಂಜೆ ದೇವರ ಸನ್ನಿಧಿಯಲ್ಲಿ ಜರುಗಿದ ದೈವ ವಾಣಿ ಆಲಿಸಲು ಸಾವಿರಾರು ಭಕ್ತರು ನೆರೆದಿದ್ದರು.
ಮುಗಳಖೋಡ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಜಾತ್ರೋತ್ಸವದಲ್ಲಿ ಪಾಲ್ಗೊಂಡು ದೃವರ ಕೃಪಾಶೀರ್ವಾದಕ್ಕೆ ಪಾತ್ರರಾದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.