ಧರ್ಮ, ದೇವರ ಹೆಸರಿನಲ್ಲಿ ಪ್ರಾಣಿಬಲಿ ನಿಲ್ಲಬೇಕು/ ಕೊಕಟನೂರ ಜಾತ್ರೆಯಲ್ಲಿ ದಯಾನಂದ ಸ್ವಾಮೀಜಿ ಜನಜಾಗ್ರತಿ ಅಥಣಿ : ತಾಲ್ಲೂಕಿನ ಕೊಕಟನೂರ ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ದೇವರ ಹೆಸರಿನಲ್ಲಿ ನಡೆಯುವ ಪ್ರಾಣಿ ವಧೆ ನಿಲ್ಲಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ತಾಲೂಕ ಆಡಳಿತ ಕಳೆದ ಮೂರು ವರ್ಷಗಳಿಂದ ತಿಳುವಳಿಕೆ ನೀಡುವ ಪ್ರಯತ್ನ ಮಾಡಿದ್ದು, ಆದರೂ ಕೂಡ ಈ ಜಾತ್ರೆಯಲ್ಲಿ ಇನ್ನೂ ಪ್ರಾಣಿ ಬಲಿ ಸಂಪೂರ್ಣ ನಿಂತಿಲ್ಲ. ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ ಅಧ್ಯಕ್ಷ ದಯಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ ಅವರು ಸೋಮವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅಥಣಿ ತಾಲೂಕಿನ ಕೊಕಟನೂರು ಅತಿ ಹೆಚ್ಚು ಪ್ರಾಣಿ ಬಲಿ ನಡೆಯುವ ಜಾತ್ರೆಯಾಗಿದ್ದು, ಕಳೆದ ನಾಲ್ಕೈದು ವರ್ಷಗಳಿಂದ ನಮ್ಮ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯಿಂದ ಅಹಿಂಸಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮಹಾರಾಷ್ಟ್ರದಿಂದ ಲಕ್ಷಾಂತರ ಭಕ್ತರು ಈ ಜಾತ್ರೆಗೆ ಬರುವುದರಿಂದ ಜಾತ್ರಾ ಕಮಿಟಿಯವರು, ಗ್ರಾಮ ಪಂಚಾಯಿತಿ ಆಡಳಿತ, ತಾಲೂಕ ಆಡಳಿತ ಮತ್ತು ಜಿಲ್ಲಾಡಳಿತ ಕನ್ನಡ ಮತ್ತು ಮರಾಠಿ ಭಾಷೆಗಳಲ್ಲಿ ಇಲ್ಲಿನ ಭಕ್ತಾದಿಗಳಿಗೆ ಅರಿವು ಮೂಡಿಸುವ ಮೂಲಕ ಪ್ರಾಣಿ ಬಲಿ ಮತ್ತು ಅನಿಷ್ಠ ಪದ್ಧತಿಗಳನ್ನು ತಡೆಗಟ್ಟಬೇಕು. 1959ರ ಪ್ರಾಣಿ ಬಲಿಗಳ ಪ್ರತಿಬಂಧಕ ಅಧಿನಿಯಮ ಹಾಗೂ 1963 ಮತ್ತು 1975ರ ನಿಯಮ ಗಳ ಪ್ರಕಾರ ರಾಜ್ಯ ಹೈಕೋರ್ಟ್ ಆದೇಶದಂತೆ ಯಾವುದೇ ಧರ್ಮ ಮತ್ತು ದೇವರ ಹೆಸರಿನಲ್ಲಿ ಪ್ರಾಣಿಗಳನ್ನು ಮತ್ತು ಪ್ರಾಣಿಗಳ ಅಂಗಾಂಗಗಳನ್ನು ನೈವೇದ್ಯ ಮಾಡಿ ಹರಕೆ ತೀರಿಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಆದರೆ ಕೊಕಟನೂರು ಎಲ್ಲಮ್ಮ ದೇವಿ ಜಾತ್ರೆಯಲ್ಲಿ ಕಾನೂನು ಬಾಹಿರವಾಗಿ ಪ್ರಾಣಿ ಬಲಿ ಮತ್ತು ಅನಿಷ್ಟ ಪದ್ದತಿಗಳು ಕೆಲವೆಡೆ ತೆರೆಮರೆಯಲ್ಲಿ ಇನ್ನು ಕೆಲವು ಸ್ಥಳಗಳಲ್ಲಿ ಯಾರ ಭಯವೂ ಇಲ್ಲದೆ ರಾಜಾರೋಷವಾಗಿ ಪ್ರಾಣಿಬಲಿ ಬಹಿರಂಗವಾಗಿ ನಡೆಯುತ್ತಿವೆ. ಇದಕ್ಕೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಕೊಳ್ಳಬೇಕು ಎಂದು ಅಗ್ರಹಿಸಿದರು. ದೇವಾಲಯಗಳು ವಧಾಲಯವಾಗಬಾರದು : ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯು ಯಾವುದೇ ಜಾತಿ, ಧರ್ಮದ ವಿರೋಧಿಯಲ್ಲ, ಭಕ್ತರ ಧಾರ್ಮಿಕ ಭಾವನೆಗಳಿಗೆ, ಆಚರಣೆಗಳಿಗೆ ನಾವು ವಿರೋಧ ವ್ಯಕ್ತಪಡಿಸುತ್ತಿಲ್ಲ. ಧರ್ಮ ಮತ್ತು ದೇವರ ಹೆಸರಿನಲ್ಲಿ, ಮೂಡನಂಬಿಕೆ, ಅನಿಷ್ಟ ಪದ್ದತಿಗಳು ನಡೆಯುತ್ತಿರುವುದು ಜನರ ಅಜ್ಞಾನ ಮತ್ತು ಅಂಧಕಾರವಾಗಿದೆ. ನಾವು ಈ ಬಗ್ಗೆ ಜನರಲ್ಲಿ ಜನಜಾಗೃತಿ ಮೂಡಿಸುತ್ತಿದ್ದೇವೆ. ದೇವಾಲಯಗಳು ವಧಾಲಯವಾಗದೆ ದಿವ್ಯಾಲಯಗಳಾಗಬೇಕು ಜ್ಞಾನಾಲಯಗಳಾಗಬೇಕು. ಜಾತ್ರೆಗಳು ಕಟುಕರ ಕೇರಿಯಾಗದೆ ಮಧ್ಯ,ಮಾಂಸಗಳ ಮಾರಾಟ ಸ್ಥಳವಾಗದೆ, ಸದ್ಭಕ್ತಿ ಸತ್ಸಂಪ್ರದಾಯದ ಮೂಲಕ ಸಾತ್ವಿಕವಾಗಿ ಆಚರಿಸಬೇಕು. ನಾವು ಮಾಡುವ ಹೋರಾಟ ಯಾವುದೇ ಧರ್ಮ, ಜಾತಿ, ಮತ ಪಂಥಗಳಿಗೆ ಸೀಮಿತವಾಗದೆ ಬಸವಣ್ಣನವರು ಹೇಳಿದಂತೆ "ದಯವೇ ಧರ್ಮದ ಮೂಲವಯ್ಯ" ಎಂಬಂತೆ ಪ್ರಾಣಿ ದಯೆ ಮೂಲ ಉದ್ದೇಶ ಹೊಂದಿದೆ. ಇತ್ತೀಚಿಗೆ ರಾಜ್ಯ ಸರ್ಕಾರ ಕರ್ನಾಟಕ ಸಾರಿಗೆ ಬಸ್ ಗಳ ಮೇಲೆ " ಪ್ರಾಣಿಗಳ ಬಗ್ಗೆ ಕರುಣೆ ಇರಲಿ " ಎಂದು ಬರೆಸುವ ಮೂಲಕ ಪ್ರಾಣಿಗಳ ಬಗ್ಗೆ ದಯ ತೋರುವ ಕಾರ್ಯ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 5 ದಿನ ಅಹಿಂಸಾ ಸಂದೇಶ ಯಾತ್ರೆ : ಅಥಣಿ ತಾಲೂಕಿನ ಕೊಕಟನೂರು ಜಾತ್ರಾ ಪರಿಸರದಲ್ಲಿ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ ವತಿಯಿಂದ ದಿ. 15 ರಿಂದ 21 ರವರಿಗೆ ಅಹಿಂಸಾ ಪ್ರಾಣಿದಯಾ ಸಂದೇಶ ಯಾತ್ರೆ ಆರಂಭವಾಗಲಿದೆ. ತಾಲೂಕ ಆಡಳಿತ, ವಿವಿಧ ಸಂಘ-ಸಂಸ್ಥೆಗಳು ಯಾತ್ರೆಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು. ದೇಶದಲ್ಲಿ ಅಖಂಡವಾಗಿ 30 ವರ್ಷಗಳಿಂದ ಈ ಹೋರಾಟ ಮಾಡಿಕೊಂಡು ಬರುತ್ತಿರುವ ನಾವುಗಳು ಕಕ್ಕೇರಿ ಭಿಷ್ಠಾದೇವಿ ಜಾತ್ರೆಯನ್ನು ಸಂಪೂರ್ಣ ಪ್ರಾಣಿ ಪ್ರಾಣಿ ಬಲಿ ಮುಕ್ತ ಮಾಡಿದ ಯಶಸ್ಸು ನಮ್ಮದಾಗಿದೆ. ದೇಶದಲ್ಲಿ 1 ಸಾವಿರ ಕಡೆಗಳಲ್ಲಿ ಪ್ರಾಣಿ ಬಲಿಯನ್ನು ತಡೆದಿದ್ದೇವೆ.ಈ ಕಾರ್ಯದಲ್ಲಿ ನಾಡಿನ ಮಠಾಧೀಶರು ಕೈಗೂಡಿಸಿದರೆ ಖಂಡಿತವಾಗಿಯೂ ಈ ಬೆಳೆ ಪದ್ಧತಿ ನಿಂತು ಹೋಗುತ್ತದೆ. ಕೊಕಟನೂರನಲ್ಲಿ ನಡೆಯುವ ಜಾತ್ರೆ ಬಹುದೊಡ್ಡ ಜಾತ್ರೆಯಾಗಿದ್ದು ಜಾತ್ರೆಯಲ್ಲಿ ಪ್ರಾಣಿಬಲಿ ತಡೆಯುವುದು ಕೇವಲ ಪ್ರಾಣಿ ದಯಾ ಸಂಘದ ದಯಾನಂದ ಸ್ವಾಮೀಜಿ ಮಾತ್ರವಲ್ಲ, ಎಲ್ಲರೂ ಸಹಕಾರ ನೀಡಬೇಕೆಂದು ಕರೆ ನೀಡಿದರು. ಈ ವೇಳೆ ದಯಾನಂದ ಸ್ವಾಮೀಜಿ, ಶರಣಪ್ಪ ಕಮ್ಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಧರ್ಮ, ದೇವರ ಹೆಸರಿನಲ್ಲಿ ಪ್ರಾಣಿಬಲಿ ನಿಲ್ಲಬೇಕು/ ಕೊಕಟನೂರ ಜಾತ್ರೆಯಲ್ಲಿ ದಯಾನಂದ ಸ್ವಾಮೀಜಿ ಜನಜಾಗ್ರತಿ ಅಥಣಿ : ತಾಲ್ಲೂಕಿನ ಕೊಕಟನೂರ ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ದೇವರ ಹೆಸರಿನಲ್ಲಿ ನಡೆಯುವ ಪ್ರಾಣಿ ವಧೆ ನಿಲ್ಲಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ತಾಲೂಕ ಆಡಳಿತ ಕಳೆದ ಮೂರು ವರ್ಷಗಳಿಂದ ತಿಳುವಳಿಕೆ ನೀಡುವ ಪ್ರಯತ್ನ ಮಾಡಿದ್ದು, ಆದರೂ ಕೂಡ ಈ ಜಾತ್ರೆಯಲ್ಲಿ ಇನ್ನೂ ಪ್ರಾಣಿ ಬಲಿ ಸಂಪೂರ್ಣ ನಿಂತಿಲ್ಲ. ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ ಅಧ್ಯಕ್ಷ ದಯಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ ಅವರು ಸೋಮವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅಥಣಿ ತಾಲೂಕಿನ ಕೊಕಟನೂರು ಅತಿ ಹೆಚ್ಚು ಪ್ರಾಣಿ ಬಲಿ ನಡೆಯುವ ಜಾತ್ರೆಯಾಗಿದ್ದು, ಕಳೆದ ನಾಲ್ಕೈದು ವರ್ಷಗಳಿಂದ ನಮ್ಮ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯಿಂದ ಅಹಿಂಸಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮಹಾರಾಷ್ಟ್ರದಿಂದ ಲಕ್ಷಾಂತರ ಭಕ್ತರು ಈ ಜಾತ್ರೆಗೆ ಬರುವುದರಿಂದ ಜಾತ್ರಾ ಕಮಿಟಿಯವರು, ಗ್ರಾಮ ಪಂಚಾಯಿತಿ ಆಡಳಿತ, ತಾಲೂಕ ಆಡಳಿತ ಮತ್ತು ಜಿಲ್ಲಾಡಳಿತ ಕನ್ನಡ ಮತ್ತು ಮರಾಠಿ ಭಾಷೆಗಳಲ್ಲಿ ಇಲ್ಲಿನ ಭಕ್ತಾದಿಗಳಿಗೆ ಅರಿವು ಮೂಡಿಸುವ ಮೂಲಕ ಪ್ರಾಣಿ ಬಲಿ ಮತ್ತು ಅನಿಷ್ಠ ಪದ್ಧತಿಗಳನ್ನು ತಡೆಗಟ್ಟಬೇಕು. 1959ರ ಪ್ರಾಣಿ ಬಲಿಗಳ ಪ್ರತಿಬಂಧಕ ಅಧಿನಿಯಮ ಹಾಗೂ 1963 ಮತ್ತು 1975ರ ನಿಯಮ ಗಳ ಪ್ರಕಾರ ರಾಜ್ಯ ಹೈಕೋರ್ಟ್ ಆದೇಶದಂತೆ ಯಾವುದೇ ಧರ್ಮ ಮತ್ತು ದೇವರ ಹೆಸರಿನಲ್ಲಿ ಪ್ರಾಣಿಗಳನ್ನು ಮತ್ತು ಪ್ರಾಣಿಗಳ ಅಂಗಾಂಗಗಳನ್ನು ನೈವೇದ್ಯ ಮಾಡಿ ಹರಕೆ ತೀರಿಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಆದರೆ ಕೊಕಟನೂರು ಎಲ್ಲಮ್ಮ ದೇವಿ ಜಾತ್ರೆಯಲ್ಲಿ ಕಾನೂನು ಬಾಹಿರವಾಗಿ ಪ್ರಾಣಿ ಬಲಿ ಮತ್ತು ಅನಿಷ್ಟ ಪದ್ದತಿಗಳು ಕೆಲವೆಡೆ ತೆರೆಮರೆಯಲ್ಲಿ ಇನ್ನು ಕೆಲವು ಸ್ಥಳಗಳಲ್ಲಿ ಯಾರ ಭಯವೂ ಇಲ್ಲದೆ ರಾಜಾರೋಷವಾಗಿ ಪ್ರಾಣಿಬಲಿ ಬಹಿರಂಗವಾಗಿ ನಡೆಯುತ್ತಿವೆ. ಇದಕ್ಕೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಕೊಳ್ಳಬೇಕು ಎಂದು ಅಗ್ರಹಿಸಿದರು. ದೇವಾಲಯಗಳು ವಧಾಲಯವಾಗಬಾರದು : ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯು ಯಾವುದೇ ಜಾತಿ, ಧರ್ಮದ ವಿರೋಧಿಯಲ್ಲ, ಭಕ್ತರ ಧಾರ್ಮಿಕ ಭಾವನೆಗಳಿಗೆ, ಆಚರಣೆಗಳಿಗೆ ನಾವು ವಿರೋಧ ವ್ಯಕ್ತಪಡಿಸುತ್ತಿಲ್ಲ. ಧರ್ಮ ಮತ್ತು ದೇವರ ಹೆಸರಿನಲ್ಲಿ, ಮೂಡನಂಬಿಕೆ, ಅನಿಷ್ಟ ಪದ್ದತಿಗಳು ನಡೆಯುತ್ತಿರುವುದು ಜನರ ಅಜ್ಞಾನ ಮತ್ತು ಅಂಧಕಾರವಾಗಿದೆ. ನಾವು ಈ ಬಗ್ಗೆ ಜನರಲ್ಲಿ ಜನಜಾಗೃತಿ ಮೂಡಿಸುತ್ತಿದ್ದೇವೆ. ದೇವಾಲಯಗಳು ವಧಾಲಯವಾಗದೆ ದಿವ್ಯಾಲಯಗಳಾಗಬೇಕು ಜ್ಞಾನಾಲಯಗಳಾಗಬೇಕು. ಜಾತ್ರೆಗಳು ಕಟುಕರ ಕೇರಿಯಾಗದೆ ಮಧ್ಯ,ಮಾಂಸಗಳ ಮಾರಾಟ ಸ್ಥಳವಾಗದೆ, ಸದ್ಭಕ್ತಿ ಸತ್ಸಂಪ್ರದಾಯದ ಮೂಲಕ ಸಾತ್ವಿಕವಾಗಿ ಆಚರಿಸಬೇಕು. ನಾವು ಮಾಡುವ ಹೋರಾಟ ಯಾವುದೇ ಧರ್ಮ, ಜಾತಿ, ಮತ ಪಂಥಗಳಿಗೆ ಸೀಮಿತವಾಗದೆ ಬಸವಣ್ಣನವರು ಹೇಳಿದಂತೆ "ದಯವೇ ಧರ್ಮದ ಮೂಲವಯ್ಯ" ಎಂಬಂತೆ ಪ್ರಾಣಿ ದಯೆ ಮೂಲ ಉದ್ದೇಶ ಹೊಂದಿದೆ. ಇತ್ತೀಚಿಗೆ ರಾಜ್ಯ ಸರ್ಕಾರ ಕರ್ನಾಟಕ ಸಾರಿಗೆ ಬಸ್ ಗಳ ಮೇಲೆ " ಪ್ರಾಣಿಗಳ ಬಗ್ಗೆ ಕರುಣೆ ಇರಲಿ " ಎಂದು ಬರೆಸುವ ಮೂಲಕ ಪ್ರಾಣಿಗಳ ಬಗ್ಗೆ ದಯ ತೋರುವ ಕಾರ್ಯ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 5 ದಿನ ಅಹಿಂಸಾ ಸಂದೇಶ ಯಾತ್ರೆ : ಅಥಣಿ ತಾಲೂಕಿನ ಕೊಕಟನೂರು ಜಾತ್ರಾ ಪರಿಸರದಲ್ಲಿ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ ವತಿಯಿಂದ ದಿ. 15 ರಿಂದ 21 ರವರಿಗೆ ಅಹಿಂಸಾ ಪ್ರಾಣಿದಯಾ ಸಂದೇಶ ಯಾತ್ರೆ ಆರಂಭವಾಗಲಿದೆ. ತಾಲೂಕ ಆಡಳಿತ, ವಿವಿಧ ಸಂಘ-ಸಂಸ್ಥೆಗಳು ಯಾತ್ರೆಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು. ದೇಶದಲ್ಲಿ ಅಖಂಡವಾಗಿ 30 ವರ್ಷಗಳಿಂದ ಈ ಹೋರಾಟ ಮಾಡಿಕೊಂಡು ಬರುತ್ತಿರುವ ನಾವುಗಳು ಕಕ್ಕೇರಿ ಭಿಷ್ಠಾದೇವಿ ಜಾತ್ರೆಯನ್ನು ಸಂಪೂರ್ಣ ಪ್ರಾಣಿ ಪ್ರಾಣಿ ಬಲಿ ಮುಕ್ತ ಮಾಡಿದ ಯಶಸ್ಸು ನಮ್ಮದಾಗಿದೆ. ದೇಶದಲ್ಲಿ 1 ಸಾವಿರ ಕಡೆಗಳಲ್ಲಿ ಪ್ರಾಣಿ ಬಲಿಯನ್ನು ತಡೆದಿದ್ದೇವೆ.ಈ ಕಾರ್ಯದಲ್ಲಿ ನಾಡಿನ ಮಠಾಧೀಶರು ಕೈಗೂಡಿಸಿದರೆ ಖಂಡಿತವಾಗಿಯೂ ಈ ಬೆಳೆ ಪದ್ಧತಿ ನಿಂತು ಹೋಗುತ್ತದೆ. ಕೊಕಟನೂರನಲ್ಲಿ ನಡೆಯುವ ಜಾತ್ರೆ ಬಹುದೊಡ್ಡ ಜಾತ್ರೆಯಾಗಿದ್ದು ಜಾತ್ರೆಯಲ್ಲಿ ಪ್ರಾಣಿಬಲಿ ತಡೆಯುವುದು ಕೇವಲ ಪ್ರಾಣಿ ದಯಾ ಸಂಘದ ದಯಾನಂದ ಸ್ವಾಮೀಜಿ ಮಾತ್ರವಲ್ಲ, ಎಲ್ಲರೂ ಸಹಕಾರ ನೀಡಬೇಕೆಂದು ಕರೆ ನೀಡಿದರು. ಈ ವೇಳೆ ದಯಾನಂದ ಸ್ವಾಮೀಜಿ, ಶರಣಪ್ಪ ಕಮ್ಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
- ವಿಜಯಪುರ: ಅದ್ದೂರಿಯಾಗಿ ಜರುಗಿದ ಶಾಸಕ ಯತ್ನಾಳ್ ಸುಪುತ್ರ ಮದುವೆ...1
- ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ಕೆಲ ಬೇಕರಿಗಳು ಮತ್ತು ಸ್ವೀಟ್ ಮಾರ್ಟ್ ಅಂಗಡಿಗಳು ಸಾರ್ವಜನಿಕರ ಆರೋಗ್ಯದ ಜೊತೆ ನೇರವಾಗಿ ಚೆಲ್ಲಾಟವಾಡುತ್ತಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಹಣ ಮಾಡುವ ಆಸೆಯಲ್ಲಿ ಕೆಲ ವ್ಯಾಪಾರಿಗಳು ಸ್ವಚ್ಚತೆ, ಶುಚಿತ್ವ ಎಲ್ಲವನ್ನೂ ಕಡೆಗಣಿಸಿ ಕಳಪೆ ಮಟ್ಟದ ಆಹಾರ ಪದಾರ್ಥಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ ಕೆಮಿಕಲ್ ಕಲರ್ ಬಳಸಿ ತಯಾರಿಸಿದ ಕೇಕ್ ಮತ್ತು ಸ್ವೀಟ್ಸ್ ಜನರ ಆರೋಗ್ಯಕ್ಕೆ ದೊಡ್ಡ ಅಪಾಯವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಬಾದಾಮಿ ನಗರದ ಟಾಂಗ್ ಸ್ಟ್ಯಾಂಡ್ ಹತ್ತಿರ ಇರುವ ಬೆಂಗಳೂರು ಬೇಕರಿಯ ದಿಲ್ ಖುಷ್ ಅಂಗಡಿಯಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಆಹಾರ ಸುರಕ್ಷತಾ ಅಧಿಕಾರಿ ಪಾರುಕಿ, ಆರೋಗ್ಯ ಅಧಿಕಾರಿ ಎಂ.ಬಿ. ಪಾಟೀಲ್ ಹಾಗೂ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಪ್ರವೀಣ್ ಕಂಬಳಿ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಯಿತು. ಪರಿಶೀಲನೆ ವೇಳೆ ಕೇಕ್ ಮತ್ತು ಸ್ವೀಟ್ಸ್ ತಯಾರಿಕೆಗೆ ಬಳಸುವ ಕೆಮಿಕಲ್ ಡಬ್ಬಿಗಳು, ಅಪಾಯಕಾರಿ ಕಲರ್ ಬಾಟಲಿಗಳು ಹಾಗೂ ಹಣ್ಣಿನ ಜ್ಯೂಸ್ ತಯಾರಿಸಲು ಇಡಲಾಗಿದ್ದ ಕೊಳೆತ ಹಣ್ಣುಗಳು ಪತ್ತೆಯಾಗಿದ್ದು, ಅಧಿಕಾರಿಗಳು ಅವುಗಳನ್ನು ಪರೀಕ್ಷೆಗಾಗಿ ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಅನು ಸ್ವೀಟ್ಸ್ ಅಂಗಡಿಯಲ್ಲಿ ಮೈಸೂರು ಪಾಕ್ ಮೇಲೆ ಕಾಲಿಟ್ಟು ಕುಳಿತಿರುವ ದೃಶ್ಯ ಕಂಡುಬಂದಿದ್ದು, ಈ ದೃಶ್ಯ ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ಅಚ್ಚರಿಯ ಸಂಗತಿ ಏನೆಂದರೆ ಈ ಅಂಗಡಿಯೂ ಕೂಡ ಬೆಂಗಳೂರು ಬೇಕರಿಯವರದ್ದೇ ಎಂಬ ಮಾಹಿತಿ ಹೊರಬಿದ್ದಿದೆ. ರಾಮದೇವ್ ಸ್ವೀಟ್ ಮಾರ್ಟ್ ಸೇರಿದಂತೆ ಹಲವಾರು ಅಂಗಡಿಗಳಲ್ಲಿ ಕೋಲ್ಡ್ ಡ್ರಿಂಕ್ಸ್ ಮೇಲೆ ಮುದ್ರಿತ ಬೆಲೆಯಿಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಪ್ರವಾಸಿಗರು ಹಾಗೂ ಸ್ಥಳೀಯ ಸಾರ್ವಜನಿಕರು ಈ ಬಗ್ಗೆ ದೂರು ನೀಡಿದ್ದಾರೆ. ಅಧಿಕಾರಿಗಳ ಜೊತೆ ಆಹಾರ ತಯಾರಿಕಾ ಕೊಠಡಿಗೆ ಪ್ರವೇಶಿಸಿದಾಗ ಕಂಡ ದೃಶ್ಯಗಳು ನಿಜಕ್ಕೂ ಬೆಚ್ಚಿಬೀಳಿಸುವಂತಿವೆ. ಅಲ್ಲಿ ಕೊಳೆತ ಕೇಕ್ಗಳು ಮೂಲೆ ಸೇರಿರುವ ಡಬ್ಬಿಗಳು ಕಸಪೊರಕೆ ತುಂಬಿದ ಸ್ಥಳ ಹೊಲಸು ತುಂಬಿದ ಕೇಕ್ ರಟ್ಟುಗಳು ಅನೈರ್ಮಲ್ಯದಿಂದ ಕೂಡಿದ ಅಡುಗೆ ಎಣ್ಣೆ ಹೀಗೆ ಸ್ವಚ್ಚತೆ ಕಾಣದ ಪರಿಸ್ಥಿತಿಯಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸಲಾಗುತ್ತಿದೆ. ಆಹಾರ ತಯಾರಿಸುವ ಸಿಬ್ಬಂದಿ ಟೋಪಿ, ಹ್ಯಾಂಡ್ ಗ್ಲೋವ್ಸ್, ಜಾಕೆಟ್ ಧರಿಸದೇ ಆಹಾರ ತಯಾರಿಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಆಹಾರ ಸುರಕ್ಷತಾ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ರೀತಿಯ ತಯಾರಿಕೆ ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಒಮ್ಮೆ ಈ ತಯಾರಿಕಾ ಕೊಠಡಿಯನ್ನು ನೋಡಿದರೆ ಜೀವನದಲ್ಲಿ ಬೇಕರಿ ತಿನಿಸು ತಿನ್ನಬಾರದು ಎಂಬ ಭಾವನೆ ಹುಟ್ಟುತ್ತದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾದಾಮಿ ನಗರದಲ್ಲಿ ಇಷ್ಟೊಂದು ಬೇಕರಿ ಹಾಗೂ ಸ್ವೀಟ್ ಮಾರ್ಟ್ ಅಂಗಡಿಗಳು ಕಳಪೆ ಮಟ್ಟದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರೂ ಆಹಾರ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಕಣ್ಮುಚ್ಚಿ ಕುಳಿತಿದೆಯೇ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ. ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುವ ಇಂತಹ ಅಂಗಡಿಗಳ ಮೇಲೆ ಕಠಿಣ ಕ್ರಮ ಕೈಗೊಂಡು ಅಂತಹ ಅಂಗಡಿಗಳನ್ನು ಸೀಜ್ ಮಾಡಿ ಪರವಾನಿಗೆ ರದ್ದುಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಕಳಪೆ ಮಟ್ಟದ ಆಹಾರ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುವ ಅಂಗಡಿಗಳ ವಿರುದ್ಧ ಆಹಾರ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. ವರದಿ : ರುದ್ರೇಶ್ ಪಿ ಹುಣಸಿಗಿಡದ1
- ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್ 9 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಮಾರ್ಚ್ 16ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್ 23 ಕೊನೆಯ ದಿನವಾಗಿದೆ. ಮಾರ್ಚ್ 24ರಂದು ಪರಿಶೀಲನೆ ನಡೆಯಲಿದ್ದು, ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಮೇ 4ರಂದು ಮತ ಎಣಿಕೆ ನಡೆಯಲಿದೆ. ಮಾರ್ಚ್ 15ರಿಂದ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಮತಕ್ಷೇತ್ರದಲ್ಲಿ ಒಟ್ಟು 319 ಮತಗಟ್ಟೆಗಳಿದ್ದು, 2,59,260 ಮತದಾರರು ಇದ್ದಾರೆ. ಚುನಾವಣಾ ನಿಯಮ ಪಾಲನೆಗಾಗಿ ಫ್ಲೈಯಿಂಗ್ ಸ್ಕ್ವಾಡ್, ಸರ್ವೆಲೆನ್ಸ್ ತಂಡಗಳು ಹಾಗೂ 24 ಚೆಕ್ಪೋಸ್ಟ್ಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.1
- ಗುಳೇದಗುಡ್ಡ: ಹನ್ನೆರಡನೇ ಶತಮಾನದ ಶಿವಶರಣರಾದ ಜೇಡರ ದಾಸಿಮಯ್ಯ, ಮಾದರ ಚೆನ್ನಯ್ಯನವರ,ಬಸವಣ್ಣನವರ ಸಮಕಾಲಿನ ಶರಣರ ಶರಣೆಯರು ತಮ್ಮ ವಚನ ಸಾಹಿತ್ಯದಲ್ಲಿ ಕಾಯಕದ ಮಹತ್ವ ತಿಳಿಸಿದವರು. ಎಂದು ಮುದ್ದೇಬಿಹಾಳದ ಎಂ ಜಿ ವ್ಹಿ ಸಿ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಸಾಹಿತಿಗಳಾದ ಡಾ. ಪ್ರಕಾಶ ನರಗುಂದ ಹೇಳಿದರು. ಅವರಿ ಸೋಮವಾರ ಪಟ್ಟಣದ ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಭರವಸೆ ಕೋಶ, ಕನ್ನಡ ವಿಭಾಗ ಹಾಗೂ ರಾಷ್ಟ್ರೀಯ ಸಂಶೋಧನಾ ವೇದಿಕೆ ಇವರ ಸಂಯೋಗದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣದ ಪ್ರಥಮ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿರ್ಲಕ್ಷಿತ ಶರಣರ ವಚನಗಳಲ್ಲಿ ಆತ್ಮ ವಿಮರ್ಶ, ಕಾಯಕವೇ ಕೈಲಾಸ,ದಾಸೋಹ ತತ್ವ ಜಾತಿ,ಲಿಂಗ ಭೇದ,ನಿರಾಕರಣೆ, ಮುಂತಾದ ವಿಷಯಗಳ ಕುರಿತು ಅನೇಕ ಶರಣರು ತಮ್ಮ ವಚನಗಳಲ್ಲಿ ದಾಖಲಿಸಿದ್ದಾರೆ. ಗದ್ಯ ಪದ್ಯ ಮಿಶ್ರಿತ ವಚನ ಸಾಹಿತ್ಯ ಸರಳ ನೇರ ಮತ್ತು ಭಾವಪೂರ್ಣ ಭಾಷೆಯಲ್ಲಿ ಸತ್ಯಶೋಧನೆ ಸಾಮಾಜಿಕ ಸಮಾನತೆ ದೈವಿಕ ಅನುಭವಗಳನ್ನು ಕಾಣಬಹುದಾಗಿದೆ. ಬಸವಣ್ಣನವರ ಅಗಾಧ ವ್ಯಕ್ತಿತ್ವಕ್ಕೆ ಮಾರುಹೋಗಿದ್ದ ನಿರ್ಲಕ್ಷಿತ ವಚನಕಾರರು ಬೇರೆ ಬೇರೆ ರಾಜ್ಯಗಳಿಂದ ಬಂದು ಬೇರೆ ಬೇರೆ ಕಾಯಕಗಳಲ್ಲಿ ಕೈಲಾಸ ಕಂಡವರು. ಇಂಥವರ ಕುರಿತು ಇನ್ನು ಶ್ರೇಷ್ಠ ಮಟ್ಟದ ಸಂಶೋಧನೆಗಳು ಆಗಬೇಕಾಗಿದೆ. ಎಂದರು ಹೇಳಿದರು. ವೇದಿಕೆ ಮೇಲೆ ಕಾಲೇಜಿನ ಪ್ರಚಾರ್ಯ ಪ್ರೊ. ರೇವಣಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ಬಾಗಲಕೋಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ, ಅರುಣಕುಮಾರ ಗಾಳಿ,ರಾಷ್ಟ್ರೀಯ ಸಂಶೋಧನಾ ವೇದಿಕೆಯ ಗೌರವಾಧ್ಯಕ್ಷ ಸಂಗಮೇಶ ಕಲ್ಯಾಣಿ,ಕಾಲೇಜಿನ ಪ್ರಾಚಾರ್ಯರ ಪ್ರೊ. ರೇವಣಸಿದ್ದಪ್ಪ, ಮೋಡಿ ಲಿಪಿ ತಜ್ಞ ಡಾ. ಸಂಗಮೇಶ ಕಲ್ಯಾಣಿ, ಪ್ರೊ. ಫಕೀರಪ್ಪ ಚನ್ನಪ್ಪಗೌಡ್ರು ಉಪಸ್ಥಿತರಿದ್ದರು.1
- ಮಂದ್ದೇಬಿಹಾಳ, ಪಿಲೇಕಮ್ಮಜಾತ್ರಾ ಮೂಹು ಸ್ತವ1
- ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಡಾ. ಸಿ ಸೋಮಶೇಖರ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವಕಾಶ ನೀಡಿ ಎಂದು ನಬಿಸಾಬ ಕುಷ್ಟಗಿ ಹೇಳಿದರು, ಅವರು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಮುಂಬರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯ ಹಿನ್ನೆಲೆ ಡಾ. ಸಿ ಸೋಮಶೇಖರ್ ಐಎಎಸ್, ಮಾಜಿ ಅಧ್ಯಕ್ಷರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರ ಪರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಬಾಲ್ಯದಿಂದಲೂ ಅಪ್ಪಟ ಕನ್ನಡ ಅಭಿಮಾನಿಯಾಗಿರುವ ಸಿ ಸೋಮಶೇಖರ್ ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳ ಬಗ್ಗೆ ಅಪಾರವಾದ ಪ್ರೀತಿ ಮತ್ತು ಆಸಕ್ತಿ ಹೊಂದಿದ್ದಾರೆ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಪ್ರಾರಂಭಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿಯೇ ಪಡೆದು ಆನಂತರ ವಾಣಿಜ್ಯ ಸ್ನಾತಕೋತ್ತರ ಪದವಿಗಳಿಸಿ ಬೆಂಗಳೂರಿನ ಕೆ.ಎಲ್.ಇ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿಯನ್ನು ಪ್ರಾರಂಭಿಸಿ ನಂತರ ಕರ್ನಾಟಕ ಆಡಳಿತ ಪ್ರಥಮ ದರ್ಜೆ ಸೇವೆಯನ್ನು ಸೇರುವ ಅವಕಾಶ ದೊರಕಿತು,ಅಖಿಲ ಭಾರತ ಲೋಕಸೇವಾ ಆಯೋಗದ ಪರೀಕ್ಷೆಯನ್ನು ಸಂಪೂರ್ಣವಾಗಿ ಕನ್ನಡ ಮಾಧ್ಯಮದಲ್ಲಿಯೇ ಉತ್ತರಿಸಿ ಕೇಂದ್ರ ಪ್ರಥಮ ದರ್ಜೆ ಸೇವೆಗೆ ಆಯ್ಕೆಯಾಗಿ ಕನ್ನಡ ನಾಡು, ನುಡಿಯ ಮೇಲಿನ ಅಭಿಮಾನದಿಂದ ಕರ್ನಾಟಕದಲ್ಲಿಯೇ ಸೇವೆ ಸಲ್ಲಿಸಬೇಕೆಂಬ ಹಂಬಲದಿಂದ ಕರ್ನಾಟಕ ಅಡಳಿತ ಸೇವೆಯನ್ನೇ ಆಯ್ಕೆ ಮಾಡಿಕೊಂಡರು ,ಭಾರತ ಆಡಳಿತ ಸೇವೆಗೆ (ಐ.ಎ.ಎಸ್) ಪದೋನ್ನತಿ ಪಡೆದು ರಾಜ್ಯದ ಅನೇಕ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು,ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವಿಶೇಷವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ , ನಿವೃತ್ತಿ ನಂತರ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಿರುತ್ತಾರೆ, ಅವರ ಆಡಳಿತ ಅವಧಿಯಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಿ ಆಡಳಿದ ಎಲ್ಲಾ ಹಂತಗಳಲ್ಲಿಯೂ ಕನ್ನಡ ಭಾಷೆಯೇ ಸಾರ್ವಭೌಮ ಭಾಷೆಯಾಗಿ ಇರುವಂತೆ ಅಭಿಮಾನ ಪೂರಕವಾಗಿ ಪ್ರಯತ್ನಿಸಿದ್ದಾರೆ,ಸಂಸ್ಕೃತಿ- ಪ್ರಗತಿ ಆಡಳಿತ ನಾಣ್ಯದ ಎರಡು ಮುಖಗಳೆಂದೇ ಭಾವಿಸಿರುವ ಅವರು ಆಡಳಿತಕ್ಕೆ ಮಾನವೀಯ ಸ್ಪರ್ಶವನ್ನು ನೀಡಲು ಶ್ರಮಿಸಿರುತ್ತಾರೆ, ಮೂಲತಃ ಸಾಹಿತ್ಯ ಪ್ರೇಮಿಯಾದ ಅವರು ಹಲವಾರು ಮೌಲಿಕ ಕನ್ನಡದ ಕೃತಿಗಳನ್ನು ರಚಿಸಿರುತ್ತಾರೆ,“ವಚನಗಳಲ್ಲಿ ಸಾಮಾಜಿಕ ಚಿಂತನೆ” ಎಂಬ ಮಹಾ ಪ್ರಬಂಧವನ್ನು ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಡಿ.ಲಿಟ್ಪ ಡೆದುಕೊಂಡಿದ್ದಾರೆ,ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳ ಆರಾಧಕನಾಗಿರುವ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಅವರ ಆತ್ಮೀಯ ಕನ್ನಡ ಅಭಿಮಾನಿಗಳ ಒತ್ತಾಸೆಯಿಂದ ಅವರು ಮುಂಬರುವ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿಯಾಗಿ ಸ್ಪರ್ಧಿಸಲು ಬಯಸಿದ್ದಾರೆ,ನಾಡಿನ, ಹೊರನಾಡಿನ ಎಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು ತಮ್ಮ ಆಶೀರ್ವಾದ ಮತ್ತು ಸಹಕಾರದ ಮೂಲಕ ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಸಿ ಸೋಮಶೇಖರ್ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವರಿಗೆ ಒಂದು ಅಪೂರ್ವ ಅವಕಾಶವನ್ನು ನೀಡಬೇಕೆಂದು ಹೇಳಿದರು ಸುದ್ದಿಗೋಷ್ಠಿಯಲ್ಲಿ ಮೋಹನಲಾಲ್ ಜೈನ್ ಮತ್ತು ಇತರರು ಪಾಲ್ಗೊಂಡಿದ್ದರು.1
- “ಮಕ್ಕಳ ಸುರಕ್ಷತೆ ಅಪಾಯದಲ್ಲಿ..! ಕ್ಯಾತನಹಳ್ಳಿ ಗ್ರಾಮದ ವಾಸ್ತವ ಸ್ಥಿತಿ” #neravaaninews #kannada neravaani news1
- MB Patil : ರಾಜ್ಯದ 2 ಕ್ಷೇತ್ರಗಳ ಬೈ ಎಲೆಕ್ಷನ್ಗೆ ಡೇಟ್ ಫಿಕ್ಸ್.. MB ಪಾಟೀಲ್ ರಿಯಾಕ್ಷನ್1