Shuru
Apke Nagar Ki App…
ರೈತರಿಗೆ ಒಂದು ಮುಖ್ಯ ಸುದ್ದಿ ಇಲ್ಲಿದೆ. 2026 ಮತ್ತು 2027ನೇ ಸಾಲಿನ ಮುಂಗಾರು ಬೆಳೆ ಹಂಗಾಮು ಇನ್ನೇನು ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ರೈತರು ಬೆಳೆ ವಿಮೆಯನ್ನು ಪಾವತಿಸಬೇಕೇ ಅಥವಾ ಬೇಡವೇ ಎಂಬ ವಿಷಯ ಮುನ್ನೆಲೆಗೆ ಬಂದಿದೆ.
Rajkumar M
ರೈತರಿಗೆ ಒಂದು ಮುಖ್ಯ ಸುದ್ದಿ ಇಲ್ಲಿದೆ. 2026 ಮತ್ತು 2027ನೇ ಸಾಲಿನ ಮುಂಗಾರು ಬೆಳೆ ಹಂಗಾಮು ಇನ್ನೇನು ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ರೈತರು ಬೆಳೆ ವಿಮೆಯನ್ನು ಪಾವತಿಸಬೇಕೇ ಅಥವಾ ಬೇಡವೇ ಎಂಬ ವಿಷಯ ಮುನ್ನೆಲೆಗೆ ಬಂದಿದೆ.
More news from ಕರ್ನಾಟಕ and nearby areas
- ಕಲಬುರಗಿ ಜಿಲ್ಲೆಯ ಚಿತಾಪುರ ವ್ಯಾಪ್ತಿಯಲ್ಲಿ ರವಿವಾರದಂದೂ ಸಹ ಬಿಎಲ್ಒಗಳು (BLO) ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿಮ್ಮ ವ್ಯಾಪ್ತಿಯ ಬಿಎಲ್ಒಗಳು ಕೆಲಸ ಮಾಡುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ತಮ್ಮ ಬಿಎಲ್ಒಗಳನ್ನು ಭೇಟಿ ಮಾಡುವಂತೆ ತಿಳಿಸಲಾಗಿದೆ.1
- ಬೀದರ್ ಜಿಲ್ಲೆಯ ಬಸವಕಲ್ಯಾಣದ ಗ್ರಾಮೀಣ ಭಾಗದಲ್ಲಿ ಡಿವೈಎಸ್ಪಿ ನೇತೃತ್ವದ ಪೊಲೀಸ್ ಅಧಿಕಾರಿಗಳ ತಂಡವು ಸಂಚಾರ ನಡೆಸಿದ್ದು, ಸ್ಥಳೀಯ ಜನರೊಂದಿಗೆ ಸಂವಾದ ನಡೆಸಿದೆ.1
- ಹಿರೇಕೆರೂರಿನಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಪೊಲೀಸ್ ಇಲಾಖೆಯು ವಿಶೇಷ ಅಭಿಯಾನವೊಂದನ್ನು ಹಮ್ಮಿಕೊಂಡಿದೆ. "ನಿಮ್ಮ ಸಮಸ್ಯೆ – ನಮ್ಮ ಜವಾಬ್ದಾರಿ" ಎಂಬ ಈ ವಿಶೇಷ ಉಪಕ್ರಮದ ಅಡಿಯಲ್ಲಿ ಹಿರೇಕೆರೂರು ಪೊಲೀಸರು ಬೀಟ್ ಸಂಚರಣೆ ನಡೆಸಲಿದ್ದು, ಜನರ ಮನೆ ಬಾಗಿಲಿಗೇ ಬಂದು ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ.1
- ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಬಿಎಂಟಿಸಿ ಬಸ್ಗಳಲ್ಲಿ ಮಾರುವೇಷದಲ್ಲಿ ಪ್ರಯಾಣಿಸುವ ಮೂಲಕ ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಸಚಿವರು ಸುಮಾರು 2 ಗಂಟೆಗಳ ಕಾಲ ಹಲವು ಬಸ್ಗಳಲ್ಲಿ ಓಡಾಡಿ, ಸಾಮಾನ್ಯ ಪ್ರಯಾಣಿಕರು ದಿನನಿತ್ಯ ಎದುರಿಸುತ್ತಿರುವ ತೊಂದರೆಗಳ ಖುದ್ದು ಅನುಭವವನ್ನು ಪಡೆದುಕೊಂಡಿದ್ದಾರೆ ಹಾಗೂ ಅವರ ಸಮಸ್ಯೆಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಈ ರಹಸ್ಯ ಕಾರ್ಯಾಚರಣೆಯ ವೇಳೆ, ಒಂದು ಬಸ್ನಲ್ಲಿ ಚೇಂಜ್ ಇಲ್ಲದ ಕಾರಣಕ್ಕಾಗಿ ಕಂಡೆಕ್ಟರ್ ಸ್ವತಃ ಸಚಿವರಿಗೇ ಬಸ್ನಿಂದ ಇಳಿಯುವಂತೆ ಸೂಚಿಸಿದ್ದಾರೆ. ಮತ್ತೊಂದೆಡೆ, ಪ್ರಯಾಣಿಕರಿಗೆ ನಿಗದಿತ ಜಾಗದಲ್ಲಿ ಸ್ಟಾಪ್ ನೀಡದ ಇನ್ನೊಬ್ಬ ಕಂಡೆಕ್ಟರ್ನನ್ನು ಸ್ಥಳದಲ್ಲೇ ಸಸ್ಪೆಂಡ್ ಮಾಡಲು ಸಚಿವರು ಆದೇಶಿಸಿದ್ದಾರೆ.1
- ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟು ಭೀಕರ ಬರಗಾಲದ ಛಾಯೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಸಕಾಲಕ್ಕೆ ಮಳೆ ಬಂದು ನಾಡು ಸುಭಿಕ್ಷವಾಗಲಿ ಎಂದು ಆಶಿಸಿ ಕತ್ತೆಗಳ ಮದುವೆಯನ್ನು ಅತ್ಯಂತ ವಿಜೃಂಭಣೆ ಹಾಗೂ ಅದ್ದೂರಿಯಾಗಿ ನೆರವೇರಿಸಲಾಗಿದೆ. ಗ್ರಾಮೀಣ ಭಾಗದ ವಿಶಿಷ್ಟ ಜನಪದ ನಂಬಿಕೆಯಂತೆ, ಮಳೆ ದೇವರಾದ ವರುಣ ದೇವನನ್ನು ಒಲಿಸಿಕೊಳ್ಳಲು ಸಾರ್ವಜನಿಕರು ಹಾಗೂ ರೈತ ಬಾಂಧವರು ಒಗ್ಗೂಡಿ ಈ ವಿಶಿಷ್ಟ ಆಚರಣೆಯನ್ನು ಹಮ್ಮಿಕೊಂಡಿದ್ದರು. ಊರಿನ ಗೌಡರ ಮನೆಯಲ್ಲಿ ಶಾಸ್ತ್ರೋಕ್ತವಾಗಿ ಜರುಗಿದ ಈ ಕಲ್ಯಾಣ ಮಹೋತ್ಸವಕ್ಕೆ ಮಹಾದೇವ ಗೌಡರು ಹಾಗೂ ಪ್ರವೀಣ ಗೌಡರು ಪೂಜೆ ಸಲ್ಲಿಸಿದರು. ಮಲ್ಲಿಕಾರ್ಜುನ ಮಠಪತಿ, ಗಿರೀಶ ಜೋಶಿ ಹಾಗೂ ಅಪ್ಪಯ್ಯ ಹಿರೇಮಠ ಅವರ ನೇತೃತ್ವದಲ್ಲಿ ಸಾಮಾನ್ಯ ಮದುವೆಯಂತೆಯೇ ಸಕಲ ಸಂಪ್ರದಾಯಗಳೊಂದಿಗೆ ಕತ್ತೆಗಳ ವಿವಾಹ ಕಾರ್ಯ ನೆರವೇರಿತು. ಕತ್ತೆಗಳಿಗೆ ಮಂಗಲ ಸ್ನಾನ ಮಾಡಿಸಿ, ಅರಿಶಿನ-ಕುಂಕುಮ ಹಚ್ಚಿ, ನೂತನ ವಸ್ತ್ರ ಹಾಗೂ ಹೂವಿನ ಹಾರಗಳಿಂದ ಶೃಂಗರಿಸಲಾಗಿತ್ತು. ಮಂಗಲ ವಾದ್ಯಗಳ ಭಿನ್ನ ಧ್ವನಿ ಹಾಗೂ ಮಂತ್ರಘೋಷಗಳ ನಡುವೆ ಕತ್ತೆಗಳ ಮದುವೆ ಶಾಸ್ತ್ರೋಕ್ತವಾಗಿ ಸಂಪನ್ನಗೊಂಡಿತು. ಮದುವೆಯ ನಂತರ ಶೃಂಗರಿತ ಕತ್ತೆಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅತ್ಯಂತ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಗ್ರಾಮಸ್ಥರು, ಮಹಿಳೆಯರು ಹಾಗೂ ಯುವಕರು ಸಂಭ್ರಮದಿಂದ ಪಾಲ್ಗೊಂಡಿದ್ದರು. 'ಹೊತ್ತ ಬಂದಾಗ ಕತ್ತೆ ಕಾಲು ಹಿಡಿಯಬೇಕು' ಎಂಬ ಗಾದೆ ಮಾತಿನಂತೆ, ಗ್ರಾಮದ ಅಗಸಿಯಲ್ಲಿ ಪ್ರವೀಣ ಗೌಡರು ಹಾಗೂ ಖಂಡೇರಾವ ಘೋರ್ಪಡೆ ಅವರು ಕತ್ತೆಗಳ ಕಾಲನ್ನು ಹಿಡಿದು ವರುಣ ದೇವನು ಪ್ರಸನ್ನನಾಗಿ ಸಕಾಲಕ್ಕೆ ಉತ್ತಮ ಮಳೆ ಕರುಣಿಸಲಿ ಎಂದು ಭಕ್ತಿಭಾವದಿಂದ ಪ್ರಾರ್ಥಿಸಿದರು. ಬರಗಾಲ ಎದುರಾದಾಗ ಕತ್ತೆಗಳ ಮದುವೆ ಮಾಡುವ ಮೂಲಕ ಪ್ರಕೃತಿ ಮಾತೆಯನ್ನು ಬೇಡಿಕೊಳ್ಳುವುದು ಹಿರಿಯರ ಕಾಲದಿಂದಲೂ ನಡೆದುಬಂದ ಸಂಪ್ರದಾಯವಾಗಿದ್ದು, ಇದರಿಂದ ಸದ್ಯದಲ್ಲೇ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಲಿದೆ ಎಂದು ಗ್ರಾಮಸ್ಥರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಅಪೂರ್ವ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ಸಿದರಾಯ ತೋಡಕರ, ಅಸ್ಲಾಂ ಮುಲ್ಲಾ, ಅಶೋಕ ಪೂಜಾರಿ, ರಾಮಣ್ಣ ಮಗದುಮ್ಮ, ಆರ್ ಎಂ ಪಾಟೀಲ, ಚಿದಾನಂದ ಜಾಲಿಹಾಳ ಸೇರಿದಂತೆ ಹಲವು ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು ಎಂದು ವಿಶೇಷ ಪ್ರತಿನಿಧಿ ಮಹೇಶ್ ಶರ್ಮಾ ವರದಿ ಮಾಡಿದ್ದಾರೆ.1
- ಯಾದಗಿರಿಯಲ್ಲಿ ವ್ಯಕ್ತಿಯೊಬ್ಬರು ತಾವು ಸಾವಯವ ವಸ್ತುಗಳನ್ನು ಬಳಕೆ ಮಾಡುತ್ತಿರುವುದಾಗಿ ತಿಳಿಸಿದ್ದು, ಇತರರಿಗೂ ಸಹ ಇವುಗಳನ್ನು ಬಳಸುವಂತೆ ಪ್ರೋತ್ಸಾಹಿಸಿದ್ದಾರೆ. ನಮ್ಮ ಭೂಮಿಗಾಗಿ ಸಾವಯವ ವಸ್ತುಗಳನ್ನು ಬಳಕೆ ಮಾಡಿ ಎಂದು ಕರೆ ನೀಡಿರುವ ಇವರು, ಆಸಕ್ತರು ಸಂಪರ್ಕಿಸಲು 9008959177 ಮೊಬೈಲ್ ಸಂಖ್ಯೆಯನ್ನು ಹಂಚಿಕೊಂಡಿದ್ದಾರೆ.1
- ಯಾದಗಿರಿ ಜಿಲ್ಲೆಯಾದ್ಯಂತ ಮನೆಗಳು, ದ್ವಿಚಕ್ರ ವಾಹನಗಳು, ದನ-ಕರುಗಳು ಹಾಗೂ ಕುರಿಗಳ ಕಳ್ಳತನ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಲು ಅನುಭವಿ ಹಾಗೂ ನುರಿತ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಜಾನುವಾರುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಅವುಗಳನ್ನು ಕಳವು ಮಾಡಿ ಮಾರಾಟ ಮಾಡುವ ಸಂಘಟಿತ ಜಾಲ ಕಾರ್ಯನಿರ್ವಹಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ರೈತರು ಭಯದ ನೆರಳಿನಲ್ಲಿ ಬದುಕುವಂತಾಗಿದೆ. ಇತ್ತೀಚೆಗೆ ಬಳಿಚಕ್ರ ಗ್ರಾಮದಲ್ಲಿ ಮಧ್ಯರಾತ್ರಿ ಸುಮಾರು 3 ಗಂಟೆಯವರೆಗೆ ಜೀವದ ಹಂಗು ತೊರೆದು ಬೈಕ್ ಕಳ್ಳನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾಹಸಮಯ ಘಟನೆಯನ್ನು ಉಲ್ಲೇಖಿಸಿರುವ ಉಮೇಶ್ ಮುದ್ನಾಳ, ಅಲ್ಲಿಂದ ಪರಾರಿಯಾಗಿರುವ ಇತರ ಆರೋಪಿಗಳನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೆಳಮಟ್ಟದ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡುವಂತೆ ಒತ್ತಾಯಿಸಲಾಗಿದ್ದು, ಈ ಮನವಿಯ ಪ್ರತಿಯನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರು, ಕಲಬುರಗಿ ಪ್ರಾದೇಶಿಕ ಆಯುಕ್ತರು ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮಕ್ಕಾಗಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ವೀರಭದ್ರಪ್ಪ, ಪರಸಪ್ಪ, ಈರಪ್ಪಗೌಡ, ಮಲ್ಲಿಕಾರ್ಜುನ, ಸಾಯಿಬಣ್ಣ, ಗನ್ ಶಾಮ್, ಆಕಾಶ, ಅಕ್ರಮ, ನಯಿಮ್, ಅಜೀಜ್, ವೆಂಕಟೇಶ, ಅಯ್ಯಣ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.1
- ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮದುವೆಯಾದ ಕೇವಲ ಮೂರೇ ವರ್ಷದಲ್ಲಿ ವಿಚ್ಛೇದನ ಬಯಸಿದ್ದ ದಂಪತಿಗಳನ್ನು ನ್ಯಾಯಾಧೀಶರು ಮತ್ತೆ ಒಂದಾಗಿಸಿದ್ದಾರೆ.1