logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ ಜಿಲ್ಲಾ ಪ್ರವಾಸದ ವೇಳೆ ಸಿಂದಗಿ ರಸ್ತೆಯಲ್ಲಿರುವ ಮಧುಭಾವಿ ತಾಂಡಾಕ್ಕೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ, ಅಲ್ಲಿನ ಪ್ರಮುಖ ಸಮಸ್ಯೆಗಳ ಕುರಿತು ಮಾಹಿತಿ ಪಡೆದೆ. ಅಕ್ರಮ ಮದ್ಯ ಮಾರಾಟ, ಟೈರ್ ಕಾರ್ಖಾನೆ ಮತ್ತೆ ಕಾರ್ಯಪ್ರವೃತ್ತಗೊಂಡಿರುವುದು, ಸ್ಮಶಾನ ಸೌಲಭ್ಯ, ಜಲಜೀವನ್‌ ಮಿಷನ್‌ ಕಾಮಗಾರಿಯ ಅಸಮರ್ಪಕತೆ ಹಾಗೂ ಕುಡಿಯುವ ನೀರಿನ ತೊಂದರೆ, ಶೌಚಾಲಯಗಳ ಕೊರತೆ, ವಿದ್ಯುತ್ ಮತ್ತು ಬೀದಿ ದೀಪಗಳ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ಗ್ರಾಮಸ್ಥರು ನನ್ನ ಗಮನಕ್ಕೆ ತಂದರು. ಈ ಕುರಿತು ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಗ್ರಾಮದ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಕೈಗೊಂಡ ಕ್ರಮಗಳ ಕುರಿತು 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದೆ. ಮೂಲಭೂತ ಸೌಕರ್ಯಗಳ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ.

1 hr ago
user_ಸುನೀಲ್ ಲ್ ಬೆಟಗೇರಿ
ಸುನೀಲ್ ಲ್ ಬೆಟಗೇರಿ
Spa ಹಾವೇರಿ, ಹಾವೇರಿ, ಕರ್ನಾಟಕ•
1 hr ago
21fe7496-3092-4e19-95ae-060bfe587477
fc0e35c7-18f2-401a-9f49-8e16d0ba9330
adffb638-f93c-4f42-a065-bc7420bdfaf6
4e08e3af-8f88-45bc-ab15-948256304ca6

ವಿಜಯಪುರ ಜಿಲ್ಲಾ ಪ್ರವಾಸದ ವೇಳೆ ಸಿಂದಗಿ ರಸ್ತೆಯಲ್ಲಿರುವ ಮಧುಭಾವಿ ತಾಂಡಾಕ್ಕೆ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ, ಅಲ್ಲಿನ ಪ್ರಮುಖ ಸಮಸ್ಯೆಗಳ ಕುರಿತು ಮಾಹಿತಿ ಪಡೆದೆ. ಅಕ್ರಮ ಮದ್ಯ ಮಾರಾಟ, ಟೈರ್ ಕಾರ್ಖಾನೆ ಮತ್ತೆ ಕಾರ್ಯಪ್ರವೃತ್ತಗೊಂಡಿರುವುದು, ಸ್ಮಶಾನ ಸೌಲಭ್ಯ, ಜಲಜೀವನ್‌ ಮಿಷನ್‌ ಕಾಮಗಾರಿಯ ಅಸಮರ್ಪಕತೆ ಹಾಗೂ ಕುಡಿಯುವ ನೀರಿನ ತೊಂದರೆ, ಶೌಚಾಲಯಗಳ ಕೊರತೆ, ವಿದ್ಯುತ್ ಮತ್ತು ಬೀದಿ ದೀಪಗಳ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ಗ್ರಾಮಸ್ಥರು ನನ್ನ ಗಮನಕ್ಕೆ ತಂದರು. ಈ ಕುರಿತು ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಗ್ರಾಮದ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಕೈಗೊಂಡ ಕ್ರಮಗಳ ಕುರಿತು 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದೆ. ಮೂಲಭೂತ ಸೌಕರ್ಯಗಳ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ.

More news from ಕರ್ನಾಟಕ and nearby areas
  • ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.
    4
    ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ
ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ
ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. 
ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಹಾವೇರಿ, ಹಾವೇರಿ, ಕರ್ನಾಟಕ•
    16 hrs ago
  • ಶಿಕಾರಿಪುರ. 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ. ಶಿಕಾರಿಪುರ. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಹುಸೇನ್ ಅಧ್ಯಕ್ಷ ಶಿರಾಳಕೊಪ್ಪ ಮಾತನಾಡಿ, ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು. ಜಕೀ ಅಹ್ಮದ್ ಆಫ್ರಿದಿ ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ, ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ವಿತರಣೆ ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ, ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು, ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿಸುವುದು ಎಂದರು. ಇದೇ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸಿಬ್ ಗತ್ ಉಲ್ಲಾ ಕಾರ್ಯಕರ್ತರು,ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು,ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು ಅಬ್ದುಲ್ ಕಬೀರ್ ಕಾರ್ಯಕರ್ತರು, ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ ಉಪಸ್ಥಿತರಿದ್ದರು.
    1
    ಶಿಕಾರಿಪುರ. 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ 
ಹಿಂದ್ ಕರ್ನಾಟಕ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ.
ಶಿಕಾರಿಪುರ.
ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  
ಮೊಹಮ್ಮದ್ ಹುಸೇನ್ 
ಅಧ್ಯಕ್ಷ ಶಿರಾಳಕೊಪ್ಪ  ಮಾತನಾಡಿ,
ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು.
ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ.
ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು.
ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು.
ಜಕೀ ಅಹ್ಮದ್ ಆಫ್ರಿದಿ  ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ,
ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ
ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ವಿತರಣೆ
ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ
ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ,
ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ 
ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು,
ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿಸುವುದು ಎಂದರು.
ಇದೇ ಸಂದರ್ಭದಲ್ಲಿ 
ಪತ್ರಿಕಾ ಗೋಷ್ಠಿಯಲ್ಲಿ
ಸಿಬ್ ಗತ್ ಉಲ್ಲಾ 
ಕಾರ್ಯಕರ್ತರು,ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು,ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು ಅಬ್ದುಲ್ ಕಬೀರ್ ಕಾರ್ಯಕರ್ತರು,
ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ 
ಉಪಸ್ಥಿತರಿದ್ದರು.
    user_Press Narashimha swamy SN
    Press Narashimha swamy SN
    Cultural landmark ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
    21 hrs ago
  • ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ
    1
    ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ 
ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    22 hrs ago
  • ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.
    1
    ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ
ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    13 hrs ago
  • ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ. ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ ಕರ್ನಾಟಕದ ರಾಜ್ಯದ 1,576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಗುರುತಿಸಿರುವುದರಿಂದ ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ. ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ. ಈ ವಿಚಾರವನ್ನು ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಶ್ರೀ ಆರ್.ವಿ. ದೇಶಪಾಂಡೆ, ಶಾಸಕ ಮಿತ್ರರಾದ ಶ್ರೀ ಭೀಮಣ್ಣ ಟಿ. ನಾಯಕ್, ಶ್ರೀ ಟಿ.ಡಿ. ರಾಜೇಗೌಡ, ಶ್ರೀ ಎಚ್. ಡಿ. ತಮ್ಮಯ್ಯ ಹಾಗೂ ಶ್ರೀ ಎ.ಎಸ್. ಪೊನ್ನಣ್ಣ ಅವರು ಸದನದ ಒಳಗೂ ಮತ್ತು ಹೊರಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ. ಸರ್ಕಾರ ಈ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದೆ. ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅನಗತ್ಯವಾಗಿ ಮಲೆನಾಡು ಭಾಗದ ರೈತರಲ್ಲಿ ಆತಂಕ ಸೃಷ್ಟಿಸುತ್ತಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅತ್ಯಂತ ಮಹತ್ವದ ಈ ವಿಷಯದ ಕುರಿತು ಚರ್ಚೆಗೆ ಮುಂದಾಗುವ ಬದಲು ಗದ್ದಲ ನಡೆಸಿ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು. ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತವರು. ಅವರ ಆಶಯಗಳನ್ನು ಎತ್ತಿಹಿಡಿಯುವುದೇ ನನ್ನ ಗುರಿ. ಅವರ ಮಾರ್ಗದಲ್ಲಿಯೇ ನಾನು ನಡೆಯುತ್ತಿದ್ದೇನೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ.
    1
    ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ
ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ. ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ.
ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ  ಕರ್ನಾಟಕದ ರಾಜ್ಯದ 1,576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಗುರುತಿಸಿರುವುದರಿಂದ  ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ.
ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ. ಈ ವಿಚಾರವನ್ನು ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಶ್ರೀ ಆರ್.ವಿ. ದೇಶಪಾಂಡೆ, ಶಾಸಕ ಮಿತ್ರರಾದ ಶ್ರೀ ಭೀಮಣ್ಣ ಟಿ. ನಾಯಕ್, ಶ್ರೀ ಟಿ.ಡಿ. ರಾಜೇಗೌಡ, ಶ್ರೀ ಎಚ್. ಡಿ. ತಮ್ಮಯ್ಯ ಹಾಗೂ ಶ್ರೀ ಎ.ಎಸ್. ಪೊನ್ನಣ್ಣ ಅವರು ಸದನದ ಒಳಗೂ ಮತ್ತು ಹೊರಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ. ಸರ್ಕಾರ ಈ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದೆ.
ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅನಗತ್ಯವಾಗಿ ಮಲೆನಾಡು ಭಾಗದ ರೈತರಲ್ಲಿ ಆತಂಕ ಸೃಷ್ಟಿಸುತ್ತಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅತ್ಯಂತ ಮಹತ್ವದ ಈ ವಿಷಯದ ಕುರಿತು ಚರ್ಚೆಗೆ ಮುಂದಾಗುವ ಬದಲು ಗದ್ದಲ ನಡೆಸಿ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು.
ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತವರು. ಅವರ ಆಶಯಗಳನ್ನು ಎತ್ತಿಹಿಡಿಯುವುದೇ ನನ್ನ ಗುರಿ. ಅವರ ಮಾರ್ಗದಲ್ಲಿಯೇ ನಾನು ನಡೆಯುತ್ತಿದ್ದೇನೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ.
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    48 min ago
  • ಗುಟ್ಕಾ ನಿಷೇಧ ತಡೆಯಲು ಚನ್ನಗಿರಿ ಯಿಂದ ದಾವಣಗೆರೆ ಗೆ ದಿನಾಂಕ 26/8/2026 ರಿಂದ 28/8/2026 ರಾ ವರೆಗೆ ಬೃಹತ್ ಪಾದ ಯಾತ್ರೆ ಮಾಡುತ್ತಿರುವ ಮಾಡಳ್ ಮಲ್ಲಿಕಾರ್ಜುನ ರವರು ಮತ್ತು ರೈತರು
    1
    ಗುಟ್ಕಾ ನಿಷೇಧ ತಡೆಯಲು ಚನ್ನಗಿರಿ ಯಿಂದ ದಾವಣಗೆರೆ ಗೆ ದಿನಾಂಕ 26/8/2026 ರಿಂದ 28/8/2026 ರಾ ವರೆಗೆ ಬೃಹತ್ ಪಾದ ಯಾತ್ರೆ ಮಾಡುತ್ತಿರುವ ಮಾಡಳ್ ಮಲ್ಲಿಕಾರ್ಜುನ ರವರು ಮತ್ತು ರೈತರು
    user_ವ್ಯಾವಹಾರಿಕ
    ವ್ಯಾವಹಾರಿಕ
    Farmer ಚನ್ನಗಿರಿ, ದಾವಣಗೆರೆ, ಕರ್ನಾಟಕ•
    21 min ago
  • ಉತ್ತಮ ಗುಣಮಟ್ಟದ ಆಹಾರ ಸೇವಿಸಿ ಕಿಡ್ನಿ(ಮೂತ್ರಪಿಂಡ)ಖಾಯಿಲೆಯಿಂದ ದೂರವಿರಿ : ಡಾ.ಪ್ರಮೋದ್ ಕುಮಾರ್ ಜಗಳೂರು.25 ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮೂತ್ರಪಿಂಡ ಖಾಯಿಲೆಗೆ ಸಂಬಂಧಿಸಿದ ವೈಧ್ಯ ರೋಗಿಗಳ ಡೈಯಾಲೀಸಿಸ್ ಕೇಂದ್ರಕ್ಕೆ ಇತ್ತಿಚೇಗೆ ಭೇಟಿ ನೀಡಿ ಕಿಡ್ನಿ ವೈಪಲ್ಯ ರೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲೀಸಿಸ್ ಕೇಂದ್ರ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡುತ್ತಿದ್ದು ಸಿಬ್ಬಂದಿಗಳು ಸಹ ರೋಗಿಗಳ ಮಧ್ಯೆ ಉತ್ತಮ ಬಾಂಧವ್ಯ ಹೊಂದಿದ್ದು ರೋಗಿಗಳು ಸಹ ಇವರ ಜೊತೆ ಸಹಕಾರ ನೀಡುವುದರಿಂದ ಯಾವುದೇ ತೊಂದೆರೆಯಿಲ್ಲ ಎಂದರು. ಜಿಲ್ಲೆಯಾದ್ಯಂತ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಲ್ಲಿ ಖಾಸಗಿ ಕಂಪನಿಯಿಂದ ನಡೆಯುತ್ತಿರುವ ಡಯಾಲೀಸ್ ಕೇಂದ್ರಗಳು ನಡೆಯುತ್ತಿವೆ ನಾವು ರೋಗಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕೆಂದರು. ಕಿಡ್ನಿ ವೈಫ್ಯಲ್ಯಕ್ಜೆ ಮುಖ್ಯ ಲಕ್ಷಣಗಳು :ಕಿಡ್ನಿ ಸ್ಟೋನ್ (ಮೂತ್ರಪಿಂಡದ ಕಲ್ಲು) ಇರುವಾಗ ಬೆನ್ನು, ಪಾರ್ಶ್ವ ಅಥವಾ ಹೊಟ್ಟೆಯ ಕೆಳಭಾಗದಲ್ಲಿ ತೀವ್ರವಾದ ಮತ್ತು ಅಲೆ ಅಲೆಯಾದ ನೋವು ಕಾಣಿಸಿಕೊಳ್ಳುವುದು ಮುಖ್ಯ ಲಕ್ಷಣವಾಗಿದೆ ಎಂದರು. ಮೂತ್ರಪಿಂಡದ ಕಲ್ಲುಗಳು ಮೂತ್ರಪಿಂಡದಲ್ಲಿ ಉಪ್ಪು ಮತ್ತು ಖನಿಜಗಳ ಗಟ್ಟಿಯಾದ ನಿಕ್ಷೇಪಗಳಾಗಿವೆ. ಈ ಕಲ್ಲುಗಳು ಸಾಮಾನ್ಯವಾಗಿ ಮೂತ್ರನಾಳವನ್ನು ಚಲಿಸಿದಾಗ ಅಥವಾ ಅಡ್ಡಿಪಡಿಸಿದಾಗ ಅಪಾರ ನೋವನ್ನು ಉಂಟುಮಾಡುತ್ತವೆ. ಮೂತ್ರಪಿಂಡದ ಕಲ್ಲುಗಳು ಗಾತ್ರದಲ್ಲಿ ಭಿನ್ನವಾಗಿರುತ್ತವೆ. ಕೆಲವು ಕಲ್ಲುಗಳು ಕೆಲವು ಮಿಮೀ ಗಾತ್ರದಲ್ಲಿರಬಹುದು, ಇನ್ನು ಕೆಲವು ಇಂಚುಗಳಷ್ಟು ಬೆಳೆಯಬಹುದು. ಕಿಡ್ನಿ ಕಲ್ಲುಗಳು ಸಾಕಷ್ಟು ಸಮಾನವಾಗಿ ಹರಡುತ್ತವೆ ಮತ್ತು ಪುರುಷರು ಮತ್ತು ಮಹಿಳೆಯರ ಮೇಲೆ ಪರಿಣಾಮ ಬೀರುತ್ತವೆ. ಕಿಡ್ನಿ ಕಲ್ಲುಗಳನ್ನು ನಾಲ್ಕು ಪ್ರಮುಖ ವಿಧಗಳಾಗಿ ವಿಂಗಡಿಸಬಹುದು- ಕ್ಯಾಲ್ಸಿಯಂ ಕಲ್ಲುಗಳು, ಯೂರಿಕ್ ಆಸಿಡ್ ಕಲ್ಲುಗಳು, ಸ್ಟ್ರುವೈಟ್ ಕಲ್ಲುಗಳು ಮತ್ತು ಸಿಸ್ಟೈನ್ ಕಲ್ಲುಗಳು ಲಕ್ಷಣಗಳು ಎದ್ದು ಕಾಣುತ್ತವೆಂದರು. ಬೆನ್ನು, ಹೊಟ್ಟೆ ಅಥವಾ ಬದಿಯಲ್ಲಿ ನೋವು ಮೂತ್ರಪಿಂಡದ ಕಲ್ಲಿನ ನೋವು - ಇದನ್ನು ಮೂತ್ರಪಿಂಡದ ಕೊಲಿಕ್ ಎಂದೂ ಕರೆಯುತ್ತಾರೆ - ಇದು ಊಹಿಸಬಹುದಾದ ಅತ್ಯಂತ ತೀವ್ರವಾದ ನೋವಿನ ವಿಧಗಳಲ್ಲಿ ಒಂದಾಗಿದೆ ಎಂದರು. ಮೂತ್ರಪಿಂಡದ ಕಲ್ಲಿನ ನೋವು ಹೆಚ್ಚಾಗಿ ಇದ್ದಕ್ಕಿದ್ದಂತೆ ಪ್ರಾರಂಭವಾಗುತ್ತದೆ. ಕಲ್ಲು ಚಲಿಸಿದಂತೆ ನೋವು ಸ್ಥಳ ಮತ್ತು ತೀವ್ರತೆಯನ್ನು ಬದಲಾಯಿಸುತ್ತದೆ. ನೋವು ಆಗಾಗ್ಗೆ ಅಲೆಗಳಲ್ಲಿ ಬಂದು ಹೋಗುತ್ತದೆ, ಮೂತ್ರನಾಳವು ಕಲ್ಲನ್ನು ಹೊರಗೆ ತಳ್ಳಲು ಪ್ರಯತ್ನಿಸುವಾಗ ಸಂಕುಚಿತಗೊಳ್ಳುವುದರಿಂದ ಇದು ಇನ್ನಷ್ಟು ಹದಗೆಡುತ್ತದೆ. ಪ್ರತಿಯೊಂದು ಅಲೆಯು ಕೆಲವು ನಿಮಿಷಗಳ ಕಾಲ ಇರುತ್ತದೆ, ಕಣ್ಮರೆಯಾಗಬಹುದು ಮತ್ತು ನಂತರ ಮತ್ತೆ ಬರಬಹುದು ಎಂದರು.
    2
    ಉತ್ತಮ ಗುಣಮಟ್ಟದ ಆಹಾರ ಸೇವಿಸಿ ಕಿಡ್ನಿ(ಮೂತ್ರಪಿಂಡ)ಖಾಯಿಲೆಯಿಂದ ದೂರವಿರಿ : ಡಾ.ಪ್ರಮೋದ್ ಕುಮಾರ್
ಜಗಳೂರು.25
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ  ಮೂತ್ರಪಿಂಡ ಖಾಯಿಲೆಗೆ ಸಂಬಂಧಿಸಿದ ವೈಧ್ಯ ರೋಗಿಗಳ ಡೈಯಾಲೀಸಿಸ್ ಕೇಂದ್ರಕ್ಕೆ ಇತ್ತಿಚೇಗೆ ಭೇಟಿ ನೀಡಿ ಕಿಡ್ನಿ ವೈಪಲ್ಯ ರೋಗಿಗಳನ್ನು ಉದ್ದೇಶಿಸಿ ಮಾತನಾಡಿದರು.
ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ  ಡಯಾಲೀಸಿಸ್ ಕೇಂದ್ರ ಅತ್ಯುತ್ತಮ
ಕಾರ್ಯನಿರ್ವಹಣೆ  ಮಾಡುತ್ತಿದ್ದು ಸಿಬ್ಬಂದಿಗಳು ಸಹ ರೋಗಿಗಳ ಮಧ್ಯೆ ಉತ್ತಮ ಬಾಂಧವ್ಯ ಹೊಂದಿದ್ದು ರೋಗಿಗಳು ಸಹ ಇವರ ಜೊತೆ ಸಹಕಾರ ನೀಡುವುದರಿಂದ ಯಾವುದೇ ತೊಂದೆರೆಯಿಲ್ಲ ಎಂದರು.
ಜಿಲ್ಲೆಯಾದ್ಯಂತ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಲ್ಲಿ ಖಾಸಗಿ ಕಂಪನಿಯಿಂದ ನಡೆಯುತ್ತಿರುವ ಡಯಾಲೀಸ್ ಕೇಂದ್ರಗಳು ನಡೆಯುತ್ತಿವೆ ನಾವು ರೋಗಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕೆಂದರು.
ಕಿಡ್ನಿ ವೈಫ್ಯಲ್ಯಕ್ಜೆ ಮುಖ್ಯ ಲಕ್ಷಣಗಳು :ಕಿಡ್ನಿ ಸ್ಟೋನ್ (ಮೂತ್ರಪಿಂಡದ ಕಲ್ಲು) ಇರುವಾಗ ಬೆನ್ನು, ಪಾರ್ಶ್ವ ಅಥವಾ ಹೊಟ್ಟೆಯ ಕೆಳಭಾಗದಲ್ಲಿ ತೀವ್ರವಾದ ಮತ್ತು ಅಲೆ ಅಲೆಯಾದ ನೋವು ಕಾಣಿಸಿಕೊಳ್ಳುವುದು ಮುಖ್ಯ ಲಕ್ಷಣವಾಗಿದೆ ಎಂದರು.
ಮೂತ್ರಪಿಂಡದ ಕಲ್ಲುಗಳು ಮೂತ್ರಪಿಂಡದಲ್ಲಿ ಉಪ್ಪು ಮತ್ತು ಖನಿಜಗಳ ಗಟ್ಟಿಯಾದ ನಿಕ್ಷೇಪಗಳಾಗಿವೆ. ಈ ಕಲ್ಲುಗಳು ಸಾಮಾನ್ಯವಾಗಿ ಮೂತ್ರನಾಳವನ್ನು ಚಲಿಸಿದಾಗ ಅಥವಾ ಅಡ್ಡಿಪಡಿಸಿದಾಗ ಅಪಾರ ನೋವನ್ನು ಉಂಟುಮಾಡುತ್ತವೆ. 
ಮೂತ್ರಪಿಂಡದ ಕಲ್ಲುಗಳು ಗಾತ್ರದಲ್ಲಿ ಭಿನ್ನವಾಗಿರುತ್ತವೆ. ಕೆಲವು ಕಲ್ಲುಗಳು ಕೆಲವು ಮಿಮೀ ಗಾತ್ರದಲ್ಲಿರಬಹುದು, ಇನ್ನು ಕೆಲವು ಇಂಚುಗಳಷ್ಟು ಬೆಳೆಯಬಹುದು. ಕಿಡ್ನಿ ಕಲ್ಲುಗಳು ಸಾಕಷ್ಟು ಸಮಾನವಾಗಿ ಹರಡುತ್ತವೆ ಮತ್ತು ಪುರುಷರು ಮತ್ತು ಮಹಿಳೆಯರ ಮೇಲೆ ಪರಿಣಾಮ ಬೀರುತ್ತವೆ. 
ಕಿಡ್ನಿ ಕಲ್ಲುಗಳನ್ನು ನಾಲ್ಕು ಪ್ರಮುಖ ವಿಧಗಳಾಗಿ ವಿಂಗಡಿಸಬಹುದು- ಕ್ಯಾಲ್ಸಿಯಂ ಕಲ್ಲುಗಳು, ಯೂರಿಕ್ ಆಸಿಡ್ ಕಲ್ಲುಗಳು, ಸ್ಟ್ರುವೈಟ್ ಕಲ್ಲುಗಳು ಮತ್ತು ಸಿಸ್ಟೈನ್ ಕಲ್ಲುಗಳು ಲಕ್ಷಣಗಳು ಎದ್ದು ಕಾಣುತ್ತವೆಂದರು.
ಬೆನ್ನು, ಹೊಟ್ಟೆ ಅಥವಾ ಬದಿಯಲ್ಲಿ ನೋವು
ಮೂತ್ರಪಿಂಡದ ಕಲ್ಲಿನ ನೋವು - ಇದನ್ನು ಮೂತ್ರಪಿಂಡದ ಕೊಲಿಕ್ ಎಂದೂ ಕರೆಯುತ್ತಾರೆ - ಇದು ಊಹಿಸಬಹುದಾದ ಅತ್ಯಂತ ತೀವ್ರವಾದ ನೋವಿನ ವಿಧಗಳಲ್ಲಿ ಒಂದಾಗಿದೆ ಎಂದರು.
ಮೂತ್ರಪಿಂಡದ ಕಲ್ಲಿನ ನೋವು ಹೆಚ್ಚಾಗಿ ಇದ್ದಕ್ಕಿದ್ದಂತೆ ಪ್ರಾರಂಭವಾಗುತ್ತದೆ. ಕಲ್ಲು ಚಲಿಸಿದಂತೆ ನೋವು ಸ್ಥಳ ಮತ್ತು ತೀವ್ರತೆಯನ್ನು ಬದಲಾಯಿಸುತ್ತದೆ.
ನೋವು ಆಗಾಗ್ಗೆ ಅಲೆಗಳಲ್ಲಿ ಬಂದು ಹೋಗುತ್ತದೆ, ಮೂತ್ರನಾಳವು ಕಲ್ಲನ್ನು ಹೊರಗೆ ತಳ್ಳಲು ಪ್ರಯತ್ನಿಸುವಾಗ ಸಂಕುಚಿತಗೊಳ್ಳುವುದರಿಂದ ಇದು ಇನ್ನಷ್ಟು ಹದಗೆಡುತ್ತದೆ. ಪ್ರತಿಯೊಂದು ಅಲೆಯು ಕೆಲವು ನಿಮಿಷಗಳ ಕಾಲ ಇರುತ್ತದೆ, ಕಣ್ಮರೆಯಾಗಬಹುದು ಮತ್ತು ನಂತರ ಮತ್ತೆ ಬರಬಹುದು ಎಂದರು.
    user_Basavaraja B Press Reporter AP
    Basavaraja B Press Reporter AP
    Social Media Manager ಜಗಳೂರು, ದಾವಣಗೆರೆ, ಕರ್ನಾಟಕ•
    3 hrs ago
  • ಶಿಕಾರಿಪುರ .ನಗರದ ಮನೆ ಮನಗಳಲ್ಲಿ ನಡೆಯುವ 16ನೇ ವರ್ಷದ ಶ್ರಾವಣದಲ್ಲಿ ಶ್ರಾವಣನುಭಾವ ಕಾರ್ಯಕ್ರಮ ಶ್ರೀ ಮ. ನಿ. ಪ್ರ. ಚನ್ನಬಸವ ಸ್ವಾಮಿಗಳು. ಶಿಕಾರಿಪುರ ನಗರದ ಮನೆ ಮನಗಳಲ್ಲಿ ನಡೆಯುವ 16ನೇ ವರ್ಷದ ಶ್ರಾವಣದಲ್ಲಿ ಶ್ರಾವಣ ಭಾವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಡೆಯಲಿದ್ದು. ಸಾನಿಧ್ಯ. ಶ್ರೀ ಮ. ನಿ. ಪ್ರ. ಗುರುಬಸವ ಮಹಾಸ್ವಾಮಿಗಳು ವಿರಕ್ತಮಠ ಪಾಂಡೋಮಟ್ಟಿ . ನೇತೃತ್ವ.. ಶ್ರೀ ಮ.ನಿ.ಪ್ರ ಚನ್ನಬಸವ ಸ್ವಾಮಿಗಳು ವಿರಕ್ತಮಠ ಶಿಕಾರಿಪುರ. ಸಮ್ಮುಖ. ಶ್ರೀ ಮ. ನಿ .ಪ್ರ. ಮಹಾಂತ ಮಹಾಸ್ವಾಮಿಗಳು ತಿಪ್ಪಾಯಿ ಕೊಪ್ಪ . ಮಾತೆ ಶರಣಾಂಭಿಕೆಯವರು, ಬಸವಾಶ್ರಮ ಶಿಕಾರಿಪುರ, ಉದ್ಘಾಟನೆ. ಶ್ರೀಯುತ ಬಿ ವೈ ರಾಘವೇಂದ್ರ ಲೋಕಸಭಾ ಸದಸ್ಯರು ಶಿವಮೊಗ್ಗ . ಅಧ್ಯಕ್ಷತೆ . ಶ್ರೀಮತಿ ಕಮಲಾಬಾಯಿ ಕೃಷ್ಣ ಸಿಂಗ್ ಶಿಕಾರಿಪುರ , ಪ್ರಾಸ್ತಾವಿಕ ನುಡಿ, ಶ್ರೀ ಸುಭಾಷ್ ಚಂದ್ರ ಸ್ಥಾನಿಕ್ ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯರು ಶಿವಮೊಗ್ಗ , ಮುಖ್ಯ ಅತಿಥಿಗಳು. ಶ್ರೀ ಡಿ.ಜಿ. ಶಾಂತನಗೌಡ್ರು ಮಾನ್ಯ ಶಾಸಕರು ಹೊನ್ನಾಳಿ ಶ್ರೀ ನಗರದ ಮಹದೇವಪ್ಪನವರು ಅಧ್ಯಕ್ಷರು ಕರ್ನಾಟಕ ಪ್ರದೇಶ ಕೃಷಿ ಸಮಾಜ ಬೆಂಗಳೂರು, ಶ್ರೀ ಕೆ.ಎಸ್ ಗುರುಮೂರ್ತಿ ಅವರು ಮಾಜಿ ಅಧ್ಯಕ್ಷರು ಎ0. ಎ. ಡಿ. ಬಿ . ಶಿವಮೊಗ್ಗ , ಶ್ರೀ ಬಿ.ಡಿ. ಭೂಕಾಂತ್ , ಸಹಕಾರ ರತ್ನ ಪುರಸ್ಕೃತರು, ನಿರ್ದೇಶಕರು ರಾಜ್ಯ ಪತ್ತಿನ ಸಹಕಾರ ಮಹಾಮಂಡಳ ನಿ.,ಬೆಂಗಳೂರು, ಹಾಗೂ ಹಲವಾರು ಗಣ್ಯರು ಭಕ್ತಾದಿಗಳು ಉಪಸ್ಥಿತರಿರುವರು.
    1
    ಶಿಕಾರಿಪುರ .ನಗರದ ಮನೆ ಮನಗಳಲ್ಲಿ ನಡೆಯುವ 16ನೇ ವರ್ಷದ ಶ್ರಾವಣದಲ್ಲಿ  ಶ್ರಾವಣನುಭಾವ ಕಾರ್ಯಕ್ರಮ
 ಶ್ರೀ ಮ. ನಿ. ಪ್ರ. ಚನ್ನಬಸವ ಸ್ವಾಮಿಗಳು.
ಶಿಕಾರಿಪುರ ನಗರದ ಮನೆ ಮನಗಳಲ್ಲಿ ನಡೆಯುವ 16ನೇ ವರ್ಷದ ಶ್ರಾವಣದಲ್ಲಿ ಶ್ರಾವಣ ಭಾವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಡೆಯಲಿದ್ದು. 
ಸಾನಿಧ್ಯ.
ಶ್ರೀ ಮ. ನಿ. ಪ್ರ. ಗುರುಬಸವ ಮಹಾಸ್ವಾಮಿಗಳು ವಿರಕ್ತಮಠ ಪಾಂಡೋಮಟ್ಟಿ .
ನೇತೃತ್ವ..
ಶ್ರೀ ಮ.ನಿ.ಪ್ರ  ಚನ್ನಬಸವ ಸ್ವಾಮಿಗಳು ವಿರಕ್ತಮಠ ಶಿಕಾರಿಪುರ.
ಸಮ್ಮುಖ.
ಶ್ರೀ ಮ. ನಿ .ಪ್ರ. ಮಹಾಂತ ಮಹಾಸ್ವಾಮಿಗಳು ತಿಪ್ಪಾಯಿ ಕೊಪ್ಪ .
ಮಾತೆ ಶರಣಾಂಭಿಕೆಯವರು, ಬಸವಾಶ್ರಮ  ಶಿಕಾರಿಪುರ,
ಉದ್ಘಾಟನೆ. 
ಶ್ರೀಯುತ ಬಿ ವೈ ರಾಘವೇಂದ್ರ ಲೋಕಸಭಾ ಸದಸ್ಯರು ಶಿವಮೊಗ್ಗ .
ಅಧ್ಯಕ್ಷತೆ .
ಶ್ರೀಮತಿ ಕಮಲಾಬಾಯಿ ಕೃಷ್ಣ ಸಿಂಗ್ ಶಿಕಾರಿಪುರ ,
ಪ್ರಾಸ್ತಾವಿಕ ನುಡಿ, ಶ್ರೀ ಸುಭಾಷ್ ಚಂದ್ರ ಸ್ಥಾನಿಕ್ ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯರು ಶಿವಮೊಗ್ಗ ,
ಮುಖ್ಯ ಅತಿಥಿಗಳು.
ಶ್ರೀ ಡಿ.ಜಿ. ಶಾಂತನಗೌಡ್ರು 
ಮಾನ್ಯ ಶಾಸಕರು ಹೊನ್ನಾಳಿ 
ಶ್ರೀ ನಗರದ ಮಹದೇವಪ್ಪನವರು 
ಅಧ್ಯಕ್ಷರು ಕರ್ನಾಟಕ ಪ್ರದೇಶ ಕೃಷಿ ಸಮಾಜ ಬೆಂಗಳೂರು,
ಶ್ರೀ ಕೆ.ಎಸ್ ಗುರುಮೂರ್ತಿ ಅವರು 
ಮಾಜಿ ಅಧ್ಯಕ್ಷರು ಎ0. ಎ. ಡಿ. ಬಿ . ಶಿವಮೊಗ್ಗ ,
ಶ್ರೀ ಬಿ.ಡಿ. ಭೂಕಾಂತ್ ,
ಸಹಕಾರ ರತ್ನ ಪುರಸ್ಕೃತರು,
ನಿರ್ದೇಶಕರು ರಾಜ್ಯ ಪತ್ತಿನ ಸಹಕಾರ ಮಹಾಮಂಡಳ ನಿ.,ಬೆಂಗಳೂರು, ಹಾಗೂ ಹಲವಾರು ಗಣ್ಯರು ಭಕ್ತಾದಿಗಳು ಉಪಸ್ಥಿತರಿರುವರು.
    user_Press Narashimha swamy SN
    Press Narashimha swamy SN
    Cultural landmark ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.