logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಡರಕಟ್ಟಿ–ಕುಂದ್ರಳ್ಳಿ–ನಾದಿಗಟ್ಟಿ ರಸ್ತೆ ಸುಧಾರಣಾ ಕಾಮಗಾರಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ​ಲಕ್ಷ್ಮೇಶ್ವರ : ಕ್ಷೇತ್ರದ ಗ್ರಾಮೀಣ ರಸ್ತೆಗಳ ಮೂಲಭೂತ ಸೌಕರ್ಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ, ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಅಡರಕಟ್ಟಿ–ಕುಂದ್ರಳ್ಳಿ–ನಾದಿಗಟ್ಟಿ ಜಿಲ್ಲಾ ಮುಖ್ಯ ರಸ್ತೆ ಸುಧಾರಣಾ (ಸಿ.ಸಿ. ರಸ್ತೆ) ಕಾಮಗಾರಿಗೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಂದ್ರು ಕೆ. ಲಮಾಣಿ ಅವರು ಸೆಪ್ಟೆಂಬರ್ 17, 2026 ರಂದು ಭೂಮಿಪೂಜೆ ನೆರವೇರಿಸಿದರು. ​2025-26ನೇ ಸಾಲಿನ ಸಿಎಂಐಡಿಪಿ (CMIDP) ಯೋಜನೆಯ ಅನುದಾನದಡಿ ಈ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅಡರಕಟ್ಟಿಯಲ್ಲಿ ನಡೆದ ಭೂಮಿಪೂಜೆ ಸಮಾರಂಭದಲ್ಲಿ ಶಾಸಕರು ಚಾಲನೆ ನೀಡಿದರು. ​ಈ ರಸ್ತೆಯ 19 ಕಿಲೋ ಮೀಟರ್ ವ್ಯಾಪ್ತಿಯ ಆಯ್ದ ಭಾಗಗಳಲ್ಲಿ ರಸ್ತೆ ಸುಧಾರಣೆ ಹಾಗೂ ಸಿ.ಸಿ. ರಸ್ತೆ ನಿರ್ಮಾಣ ಕಾರ್ಯ ನಡೆಯಲಿದ್ದು, ಇದರಿಂದ ದೀರ್ಘಕಾಲದಿಂದ ಕಳಪೆ ರಸ್ತೆಯಿಂದ ಪರದಾಡುತ್ತಿದ್ದ ಈ ಭಾಗದ ಪ್ರಯಾಣಿಕರು, ವಾಹನ ಸವಾರರು ಹಾಗೂ ರೈತರಿಗೆ ಸುಗಮ ಸಂಚಾರದ ಅನುಕೂಲ ದೊರೆಯಲಿದೆ. ​ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಇಲಾಖೆಯ ಅಭಿಯಂತರರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

4 hrs ago
user_ದರ್ಪಣ ಕನ್ನಡ ಟಿವಿ
ದರ್ಪಣ ಕನ್ನಡ ಟಿವಿ
ಲಕ್ಷ್ಮೇಶ್ವರ, ಗದಗ, ಕರ್ನಾಟಕ•
4 hrs ago
7f6aa6c7-3c2c-45e0-a006-89ba723d8ebd

ಅಡರಕಟ್ಟಿ–ಕುಂದ್ರಳ್ಳಿ–ನಾದಿಗಟ್ಟಿ ರಸ್ತೆ ಸುಧಾರಣಾ ಕಾಮಗಾರಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ​ಲಕ್ಷ್ಮೇಶ್ವರ : ಕ್ಷೇತ್ರದ ಗ್ರಾಮೀಣ ರಸ್ತೆಗಳ ಮೂಲಭೂತ ಸೌಕರ್ಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ, ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಅಡರಕಟ್ಟಿ–ಕುಂದ್ರಳ್ಳಿ–ನಾದಿಗಟ್ಟಿ ಜಿಲ್ಲಾ ಮುಖ್ಯ ರಸ್ತೆ ಸುಧಾರಣಾ (ಸಿ.ಸಿ. ರಸ್ತೆ) ಕಾಮಗಾರಿಗೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಂದ್ರು ಕೆ. ಲಮಾಣಿ ಅವರು ಸೆಪ್ಟೆಂಬರ್ 17, 2026 ರಂದು ಭೂಮಿಪೂಜೆ ನೆರವೇರಿಸಿದರು. ​2025-26ನೇ ಸಾಲಿನ ಸಿಎಂಐಡಿಪಿ (CMIDP) ಯೋಜನೆಯ ಅನುದಾನದಡಿ ಈ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅಡರಕಟ್ಟಿಯಲ್ಲಿ ನಡೆದ ಭೂಮಿಪೂಜೆ ಸಮಾರಂಭದಲ್ಲಿ ಶಾಸಕರು ಚಾಲನೆ ನೀಡಿದರು. ​ಈ ರಸ್ತೆಯ 19 ಕಿಲೋ ಮೀಟರ್ ವ್ಯಾಪ್ತಿಯ ಆಯ್ದ ಭಾಗಗಳಲ್ಲಿ ರಸ್ತೆ ಸುಧಾರಣೆ ಹಾಗೂ ಸಿ.ಸಿ. ರಸ್ತೆ ನಿರ್ಮಾಣ ಕಾರ್ಯ ನಡೆಯಲಿದ್ದು, ಇದರಿಂದ ದೀರ್ಘಕಾಲದಿಂದ ಕಳಪೆ ರಸ್ತೆಯಿಂದ ಪರದಾಡುತ್ತಿದ್ದ ಈ ಭಾಗದ ಪ್ರಯಾಣಿಕರು, ವಾಹನ ಸವಾರರು ಹಾಗೂ ರೈತರಿಗೆ ಸುಗಮ ಸಂಚಾರದ ಅನುಕೂಲ ದೊರೆಯಲಿದೆ. ​ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಇಲಾಖೆಯ ಅಭಿಯಂತರರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ! ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ವೃದ್ಧರು, ಮಹಿಳೆಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೂ ಸಮರ್ಪಕ ನೆರಳಿನ ವ್ಯವಸ್ಥೆ ಇಲ್ಲದೆ ಹೊರಗಡೆ ಕಾಯುವಂತಾಗಿದೆ. ಆಸ್ಪತ್ರೆ ಆವರಣದಲ್ಲಿ ಆಸನಗಳಿದ್ದರೂ, ಔಷಧಿ ವಿತರಣಾ ಕೌಂಟರ್ ಬಳಿ ಸರಿಯಾದ ಸರತಿ ವ್ಯವಸ್ಥೆ ಮತ್ತು ರೋಗಿಗಳಿಗೆ ಅನುಕೂಲಕರ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಇದರ ಜೊತೆಗೆ, ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದೆ ಹೊರಗಿನ ಖಾಸಗಿ ಔಷಧಿ ಅಂಗಡಿಗಳಿಂದ ಖರೀದಿಸುವಂತೆ ಚೀಟಿ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಹಾಗಾದರೆ ಜೀಮ್ಸ್‌ನಲ್ಲಿ ರೋಗಿಗಳ ಗೋಳು ಕೇಳುವವರು ಯಾರು? ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಔಷಧಿ ವಿತರಿಸುವ ಕೌಂಟರ್‌ಗೆ ನೆರಳು, ಕುಡಿಯುವ ನೀರು, ಆಸನ ಹಾಗೂ ಸಮರ್ಪಕ ಔಷಧಿ ವಿತರಣಾ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
    1
    ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ!
ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ.
ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ಗದಗ ಜೀಮ್ಸ್‌ನಲ್ಲಿ ಬಿಸಿಲಲ್ಲೇ ನಿಂತು ಔಷಧಿ ಪಡೆಯುವ ದುಸ್ಥಿತಿ!
ಗದಗ ಜಿಲ್ಲೆಯ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜೀಮ್ಸ್‌ಗೆ ಪ್ರತಿದಿನ ನೂರಾರು ರೋಗಿಗಳು ಹಾಗೂ ಅವರ ಸಂಬಂಧಿಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ.
ಆದರೆ, ಇಲ್ಲಿ ಔಷಧಿ ಪಡೆಯಲು ರೋಗಿಗಳು ಬಿಸಿಲು, ಮಳೆ ಹಾಗೂ ಗಾಳಿಯ ನಡುವೆಯೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ವೃದ್ಧರು, ಮಹಿಳೆಯರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳಿಗೂ ಸಮರ್ಪಕ ನೆರಳಿನ ವ್ಯವಸ್ಥೆ ಇಲ್ಲದೆ ಹೊರಗಡೆ ಕಾಯುವಂತಾಗಿದೆ.
ಆಸ್ಪತ್ರೆ ಆವರಣದಲ್ಲಿ ಆಸನಗಳಿದ್ದರೂ, ಔಷಧಿ ವಿತರಣಾ ಕೌಂಟರ್ ಬಳಿ ಸರಿಯಾದ ಸರತಿ ವ್ಯವಸ್ಥೆ ಮತ್ತು ರೋಗಿಗಳಿಗೆ ಅನುಕೂಲಕರ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ.
ಇದರ ಜೊತೆಗೆ, ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದೆ ಹೊರಗಿನ ಖಾಸಗಿ ಔಷಧಿ ಅಂಗಡಿಗಳಿಂದ ಖರೀದಿಸುವಂತೆ ಚೀಟಿ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
ಹಾಗಾದರೆ ಜೀಮ್ಸ್‌ನಲ್ಲಿ ರೋಗಿಗಳ ಗೋಳು ಕೇಳುವವರು ಯಾರು?
ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಔಷಧಿ ವಿತರಿಸುವ ಕೌಂಟರ್‌ಗೆ ನೆರಳು, ಕುಡಿಯುವ ನೀರು, ಆಸನ ಹಾಗೂ ಸಮರ್ಪಕ ಔಷಧಿ ವಿತರಣಾ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
    user_NEWS 83 KARNATAKA
    NEWS 83 KARNATAKA
    ಲಕ್ಷ್ಮೇಶ್ವರ, ಗದಗ, ಕರ್ನಾಟಕ•
    20 hrs ago
  • ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ. ಬೊಮ್ಮಾಯಿ. ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ಇಂದು ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಶ್ರೀ ಗಣೇಶ ದೇವಸ್ಥಾನ ಹಾಗೂ ಶ್ರೀ ಸುಬ್ರಮಣ್ಯ ಸ್ವಾಮಿಯ ದರ್ಶನಾಶೀರ್ವಾದವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದುಕೊಂಡರು.
    1
    ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ. ಬೊಮ್ಮಾಯಿ.
ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 76 ನೇಯ ಜನ್ಮದಿನದ ಅಂಗವಾಗಿ ಇಂದು ಹುಬ್ಬಳ್ಳಿಯ ಆದರ್ಶ ನಗರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಶ್ರೀ ಗಣೇಶ ದೇವಸ್ಥಾನ ಹಾಗೂ ಶ್ರೀ ಸುಬ್ರಮಣ್ಯ ಸ್ವಾಮಿಯ ದರ್ಶನಾಶೀರ್ವಾದವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದುಕೊಂಡರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    2 hrs ago
  • *ಹಾವೇರಿ, ಸೆ.17:* ಇಂದು ಪ್ರಧಾನಿ ನರೇಂದ್ರ ಮೋದಿಜಿ ಅವರ 76ನೇ ಜನ್ಮದಿನದ ಅಂಗವಾಗಿ ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಮೋದಿಜಿಯವರಿಗೆ ಆಯುಷ್ಯ, ಆರೋಗ್ಯ ನೀಡಿ ಕಾಪಾಡಲಿ ಎಂದು ವಿಶೇಷ ಪೂಜಾ ಅರ್ಚನೆ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಆಶಾಕಿರಣ ವೃದ್ಧಾಶ್ರಮದಲ್ಲಿ ಕೇಕ್ ಕಟ್ ಮಾಡಿ ಸಿಹಿ ಹಂಚಲಾಯಿತು. ಈ ಕಾರ್ಯಕ್ರಮದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಸಿದ್ದರಾಜಣ್ಣ ಕಲಕೋಟಿ, ನಗರಾಧ್ಯಕ್ಷರಾದ ಕಿರಣ್ ಕೊಳ್ಳಿ, ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷರಾದ ಅಲ್ಲಾಭಕ್ಷ ತಿಮ್ಮಾಪುರ, ಮಂಜುಳಾ ಕರಬಸಣ್ಣನವರ್, ನಿರಂಜನ್ ಹೇರೂರ್, ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಬೆಟಗೇರಿ, ಸುರೇಶ್ ಹೊಸಮನಿ, ಗಿರೀಶ್ ಶೆಟ್ಟಿ ಹಾಗೂ ರಾಜ್ಯ, ಜಿಲ್ಲಾ, ನಗರ ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಬೂತ್ ಅಧ್ಯಕ್ಷರು, ನಗರಸಭೆ ಮಾಜಿ ಸದಸ್ಯರು ಮತ್ತು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
    1
    *ಹಾವೇರಿ, ಸೆ.17:* ಇಂದು ಪ್ರಧಾನಿ ನರೇಂದ್ರ ಮೋದಿಜಿ ಅವರ 76ನೇ ಜನ್ಮದಿನದ ಅಂಗವಾಗಿ ನಗರದ ಪುರಸಿದ್ದೇಶ್ವರ ದೇವಸ್ಥಾನದಲ್ಲಿ ಮೋದಿಜಿಯವರಿಗೆ ಆಯುಷ್ಯ, ಆರೋಗ್ಯ ನೀಡಿ ಕಾಪಾಡಲಿ ಎಂದು ವಿಶೇಷ ಪೂಜಾ ಅರ್ಚನೆ ನೆರವೇರಿಸಲಾಯಿತು.
ಇದೇ ಸಂದರ್ಭದಲ್ಲಿ ಆಶಾಕಿರಣ ವೃದ್ಧಾಶ್ರಮದಲ್ಲಿ ಕೇಕ್ ಕಟ್ ಮಾಡಿ ಸಿಹಿ ಹಂಚಲಾಯಿತು.
ಈ ಕಾರ್ಯಕ್ರಮದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಸಿದ್ದರಾಜಣ್ಣ ಕಲಕೋಟಿ, ನಗರಾಧ್ಯಕ್ಷರಾದ ಕಿರಣ್ ಕೊಳ್ಳಿ, ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷರಾದ ಅಲ್ಲಾಭಕ್ಷ ತಿಮ್ಮಾಪುರ, ಮಂಜುಳಾ ಕರಬಸಣ್ಣನವರ್, ನಿರಂಜನ್ ಹೇರೂರ್, ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಬೆಟಗೇರಿ, ಸುರೇಶ್ ಹೊಸಮನಿ, ಗಿರೀಶ್ ಶೆಟ್ಟಿ ಹಾಗೂ ರಾಜ್ಯ, ಜಿಲ್ಲಾ, ನಗರ ಮಂಡಲ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಬೂತ್ ಅಧ್ಯಕ್ಷರು, ನಗರಸಭೆ ಮಾಜಿ ಸದಸ್ಯರು ಮತ್ತು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    3 hrs ago
  • ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ಕಾರ್ಯಕ್ರಮದಲ್ಲಿ ಶ್ರೀ ಗಳ ಆಶೀರ್ವಚನ. ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. ಗದಗ : ಭಾರತೀಯ ಸಂಸ್ಕೃತಿಯಲ್ಲಿ ಪಾವಿತ್ರತೆ ಪಡೆದ ತಿಂಗಳು ಈ ಶ್ರಾವಣ ಮಾಸ,ಮಾಸ ಪರ್ಯಂತ ಭಗವಂತನ ನಾಮಸ್ಮರಣೆಯಿಂದ ಅನುಗ್ರಹ ಪಡೆಯಲು ಸುಲಭವಾದ ಮಾರ್ಗ ಭಜನೆ ಎಂದು ಶ್ರೀ ಡಾ ಶಿವಕುಮಾರ ಮಾಹಾಸ್ವಾಮಿಗಳು ನುಡಿದರು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮಂಡಳಿಯ ಆಯೋಜಿಸಲಾದ ಭಜನಾ ಮಹಾ ಮಂಗಲ ಕಾರ್ಯಕ್ರಮದ ಸಮಾರೋಪ ಸಮಾರಂಭದ saದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ನೆರದಿದ್ದ ಭಕ್ತರಿಗೆ ಆಶೀರ್ವಚನದಲ್ಲಿ ಮಾತನಾಡಿದ ಅವರು. ಭಜನೆ ಎಂದರೆ ಭಜ್ ಎಂಬುವ ಧಾತುವಿನಿಂದ ಬಂದಿರುವ ಪದ ಅಂದರೆ ಭಜನೆ ಅಂದರೆ ಭಗವಂತನ ನಾಮಸ್ಮರಣೆ, ಆ ಭಗವಂತನ ಕೃಪೆಗೆ ಪಾತ್ರರಾಗಲು ಭಜನೆ ಅತೀ ಶ್ರೇಷ್ಠ ಮಾರ್ಗ ಎಂದರು. ಯಾರಿಗೂ ನಮ್ಮಿಂದ ನೋವಾಗದ ರೀತಿಯ ಬದುಕುವದು ಅಸಾಧ್ಯ ಆದರೂ ಉದ್ದೇಶ ಪೂರ್ವಕವಾಗಿ ಯಾರಿಗೂ ನೋವುಂಟು ಮಾಡಬಾರದು ಏಕೆಂದರೆ ಈ ಪ್ರಪಂಚದಲ್ಲಿ ನಕಾರಾತ್ಮಕ ಹಾಗೂ ಸಕರಾತ್ಮಕ ಚಿಂತನೆಗಳು ಒಂದಕ್ಕೊಂದು ಅಂಟಿಕೊಂಡೆ ಬಂದಿರುತ್ತವೆ, ಹೇಗೆ ರಾತ್ರಿಯ ಜೊತೆಗೆ ಹಗಲು,ಸುಖದ ಜೊತೆಗೆ ದುಃಖ,ಜನನದ ಜೊತೆಗೆ ಮರಣ ಇದೆಯೋ ಹಾಗೇ  ಅದಕ್ಕಾಗಿ ಯಾವುದೇ ವ್ಯಕ್ತಿಗೂ ಬರೀ ಸುಖವೇ ಸಿಗುವದಿಲ್ಲ ಆದರೆ ಜೊತೆಗೆ ದುಃಖ ಬೆನ್ನ ಹತ್ತಿರುತ್ತದೆ ಕಾರಣ ಇಷ್ಟೇ ಪ್ರತಿ ಜೀವಿಗೂ ಹುಟ್ಟು ಅನಿಶ್ಚಿತ ಸಾವು ಖಚಿತ ಅಂತೆಯೇ ತಾವೆಲ್ಲರೂ ಪವಿತ್ರ ಶ್ರಾವಣ ಮಾಸದಲ್ಲಿ ನೀವಷ್ಟೇ ಭಜನೆ ಮಾಡದೇ ಇಡೀ ಗ್ರಾಮದ ಜನರ ಮನ ತಲುಪುವಂತೆ ಭಜನೆಯೊಂದಿಗೆ ಭಕ್ತಿಯ ಗೀತೆಗಳನ್ನು ಹಾಡುತ್ತಾ ವಠಾರಗಳಲ್ಲಿ ಸಂಚರಿಸಿ ಭಕ್ತಿಯ ಪರಾಕಷ್ಠೆ ಮೆರೆದು ಕೊನೆಯ ಹಂತ ಭಜನಾ ಮುಕ್ತಾಯ ಸಮಾರೋಪ ಸಮಾರಂಭ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ಸಂಭ್ರಮ ವಿಚಾರ ಎಂದರು. ರಾತ್ರಿಯಿಡೀ ಸಪ್ತಾಹ ಮಾಡಿ ಬೆಳಿಗ್ಗೆ ಗ್ರಾಮದ ತುಂಬೆಲ್ಲಾ  ಭಜನೆಯೊಂದಿಗೆ ಮಾರುತೇಶ್ವರನ ಎಂಟು ಅಡಿ ಹಾಗೂ ಬಸವೇಶ್ವರನ ಭಾವಚಿತ್ರ ಮೆರವಣಿಗೆ ನೆರವೇರಿಸಿ ನಮ್ಮ ಪ್ರವಚನಕ್ಕಾಗಿ ಶಾಂತಿ ಸಹನೆಯಿಂದ ಕುಳಿತಿದ್ದು ನೋಡಿದರೆ ಆ ಮಾರುತೇಶ್ವರನ ಕೃಪೆಗೆ ತಾವೆಲ್ಲರೂ ಪಾತ್ರರಾಗಿದ್ದಿರಿ ಎನ್ನಬಹುದು. ನಮ್ಮ ರಾಜ್ಯದಲ್ಲಿ ನಿರಂತರ ಸಪ್ತಾಹ ಮಾಡುವ ಏಕೈಕ ಮಠ ಹುಬ್ಬಳ್ಳಿ ಸಿದ್ದಾರೂಢರ ಮಠ ಸುಮಾರು 94 ವರ್ಷಗಳ ಕಾಲ ಪ್ರತಿ ನಿತ್ಯ ಸಪ್ತಾಹ ಮಾಡುತ್ತಿರುವುದು ಇಂದಿಗೂ ಕಾಣಬಹುದು ಎಂದರು. ದಿವ್ಯ ಸಾನಿಧ್ಯವಹಿಸಿದ್ದ  ಶ್ರೀ ಮ ನಿ ಪ್ರ ಮುಪ್ಪಿನ ಬಸವಲಿಂಗ ನಿರಂಜನ ಮಹಾಸ್ವಾಮಿಗಳು ಭಜನಾ ಸಮಾರೋಪ ಕುರಿತು ಆಶೀರ್ವಚನ ನೀಡಿದರು ಕಾರ್ಯಕ್ರಮದಲ್ಲಿ ಶ್ರೀ ವೇದ ಮೂರ್ತಿ ಮಹಾದೇವಯ್ಯನವರು ಸಾನಿಧ್ಯ ವಹಿಸಿಕೊಂಡು ಅವರೂ ಕೂಡ ಆಶೀರ್ವಚನ ನೀಡಿದರು. ಕಾರ್ಯಕ್ರಮದ ನಿರೂಪಣೆ ವೀರಭದ್ರಯ್ಯ ಸಾಲಿಮಠ ನೆಡೆಸಿದರೆ ಎಸ್ ಎಸ್ ಅಂಗಡಿ ಶಿಕ್ಷಕರು ಸ್ವಾಗತಿಸಿದರು. ಶಿವಕುಮಾರಗೌಡ ಚಿಕ್ಕನಗೌಡರ ವಂದಿಸಿದರು. ಡಾ ಅಂಬೇಡ್ಕರ್ ಭಜನಾ ಸಂಘದ ಸದಸ್ಯರು, ಶ್ರೀ ದುರ್ಗಾದೇವಿ ಭಜನಾ ಮಂಡಳಿಯವರು ಹಾಗೂ ಹೊನ್ನಾಪುರ ಗ್ರಾಮದ ಶ್ರೀ ಮಲ್ಲಜ್ಜೇಶ್ವರ ಭಜನಾ ಮಂಡಳಿಯವರು,ಗ್ರಾಮದ ಹಿರಿಯರಾದ  ವಿ ಎನ್ ಗೊಜನೂರು,ಅಶೋಕ ಗೊಜನೂರು, ಮಹೇಶಗೌಡ ಚಿಕ್ಕನಗೌಡರ ಶೇಕಪ್ಪ ಹುಲಗೂರು, (ಕೆಮ್ಮಣ್ಣವರ )ಭಜನಾ ಮಂಡಳಿ ಅಧ್ಯಕ್ಷ ಸಿದ್ದು ದುಂಡಪ್ಪನವರ, ವಿನೋದ ಗೊಜನೂರು ಪರಪ್ಪ ಬರಡ್ವಾದ ಕುರಗೋಡೆಪ್ಪ ಮುಕ್ಕಣ್ಣವರ ಸಿ ಬಿ ಮುಕ್ಕಣ್ಣವರ, ಬಸವರಾಜ ಹಡಪದ, ವೀರಪ್ಪ ದೇಸಾಯಿ ಸೇರಿದಂತೆ ಇನ್ನುಳಿದ ಸರ್ವ ಸದಸ್ಯರು, ಮಹಿಳೆಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
    2
    ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. 
ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ಕಾರ್ಯಕ್ರಮದಲ್ಲಿ ಶ್ರೀ ಗಳ ಆಶೀರ್ವಚನ.
ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. 
ಗದಗ : ಭಾರತೀಯ ಸಂಸ್ಕೃತಿಯಲ್ಲಿ ಪಾವಿತ್ರತೆ ಪಡೆದ ತಿಂಗಳು ಈ ಶ್ರಾವಣ ಮಾಸ,ಮಾಸ ಪರ್ಯಂತ ಭಗವಂತನ ನಾಮಸ್ಮರಣೆಯಿಂದ ಅನುಗ್ರಹ ಪಡೆಯಲು ಸುಲಭವಾದ ಮಾರ್ಗ ಭಜನೆ ಎಂದು ಶ್ರೀ ಡಾ ಶಿವಕುಮಾರ ಮಾಹಾಸ್ವಾಮಿಗಳು ನುಡಿದರು.
ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮಂಡಳಿಯ ಆಯೋಜಿಸಲಾದ ಭಜನಾ ಮಹಾ ಮಂಗಲ ಕಾರ್ಯಕ್ರಮದ ಸಮಾರೋಪ ಸಮಾರಂಭದ saದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ನೆರದಿದ್ದ ಭಕ್ತರಿಗೆ ಆಶೀರ್ವಚನದಲ್ಲಿ ಮಾತನಾಡಿದ ಅವರು.
ಭಜನೆ ಎಂದರೆ ಭಜ್ ಎಂಬುವ ಧಾತುವಿನಿಂದ ಬಂದಿರುವ ಪದ ಅಂದರೆ ಭಜನೆ ಅಂದರೆ ಭಗವಂತನ ನಾಮಸ್ಮರಣೆ, ಆ ಭಗವಂತನ ಕೃಪೆಗೆ ಪಾತ್ರರಾಗಲು ಭಜನೆ ಅತೀ ಶ್ರೇಷ್ಠ ಮಾರ್ಗ ಎಂದರು.
ಯಾರಿಗೂ ನಮ್ಮಿಂದ ನೋವಾಗದ ರೀತಿಯ ಬದುಕುವದು ಅಸಾಧ್ಯ ಆದರೂ ಉದ್ದೇಶ ಪೂರ್ವಕವಾಗಿ ಯಾರಿಗೂ ನೋವುಂಟು ಮಾಡಬಾರದು ಏಕೆಂದರೆ ಈ ಪ್ರಪಂಚದಲ್ಲಿ ನಕಾರಾತ್ಮಕ ಹಾಗೂ ಸಕರಾತ್ಮಕ ಚಿಂತನೆಗಳು ಒಂದಕ್ಕೊಂದು ಅಂಟಿಕೊಂಡೆ ಬಂದಿರುತ್ತವೆ, ಹೇಗೆ ರಾತ್ರಿಯ ಜೊತೆಗೆ ಹಗಲು,ಸುಖದ ಜೊತೆಗೆ ದುಃಖ,ಜನನದ ಜೊತೆಗೆ ಮರಣ ಇದೆಯೋ ಹಾಗೇ  ಅದಕ್ಕಾಗಿ ಯಾವುದೇ ವ್ಯಕ್ತಿಗೂ ಬರೀ ಸುಖವೇ ಸಿಗುವದಿಲ್ಲ ಆದರೆ ಜೊತೆಗೆ ದುಃಖ ಬೆನ್ನ ಹತ್ತಿರುತ್ತದೆ ಕಾರಣ ಇಷ್ಟೇ ಪ್ರತಿ ಜೀವಿಗೂ ಹುಟ್ಟು ಅನಿಶ್ಚಿತ ಸಾವು ಖಚಿತ ಅಂತೆಯೇ ತಾವೆಲ್ಲರೂ ಪವಿತ್ರ ಶ್ರಾವಣ ಮಾಸದಲ್ಲಿ ನೀವಷ್ಟೇ ಭಜನೆ ಮಾಡದೇ ಇಡೀ ಗ್ರಾಮದ ಜನರ ಮನ ತಲುಪುವಂತೆ ಭಜನೆಯೊಂದಿಗೆ ಭಕ್ತಿಯ ಗೀತೆಗಳನ್ನು ಹಾಡುತ್ತಾ ವಠಾರಗಳಲ್ಲಿ ಸಂಚರಿಸಿ ಭಕ್ತಿಯ ಪರಾಕಷ್ಠೆ ಮೆರೆದು ಕೊನೆಯ ಹಂತ ಭಜನಾ ಮುಕ್ತಾಯ ಸಮಾರೋಪ ಸಮಾರಂಭ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ಸಂಭ್ರಮ ವಿಚಾರ ಎಂದರು.
ರಾತ್ರಿಯಿಡೀ ಸಪ್ತಾಹ ಮಾಡಿ ಬೆಳಿಗ್ಗೆ ಗ್ರಾಮದ ತುಂಬೆಲ್ಲಾ  ಭಜನೆಯೊಂದಿಗೆ ಮಾರುತೇಶ್ವರನ ಎಂಟು ಅಡಿ ಹಾಗೂ ಬಸವೇಶ್ವರನ ಭಾವಚಿತ್ರ ಮೆರವಣಿಗೆ ನೆರವೇರಿಸಿ ನಮ್ಮ ಪ್ರವಚನಕ್ಕಾಗಿ ಶಾಂತಿ ಸಹನೆಯಿಂದ ಕುಳಿತಿದ್ದು ನೋಡಿದರೆ ಆ ಮಾರುತೇಶ್ವರನ ಕೃಪೆಗೆ ತಾವೆಲ್ಲರೂ ಪಾತ್ರರಾಗಿದ್ದಿರಿ ಎನ್ನಬಹುದು. ನಮ್ಮ ರಾಜ್ಯದಲ್ಲಿ ನಿರಂತರ ಸಪ್ತಾಹ ಮಾಡುವ ಏಕೈಕ ಮಠ ಹುಬ್ಬಳ್ಳಿ ಸಿದ್ದಾರೂಢರ ಮಠ ಸುಮಾರು 94 ವರ್ಷಗಳ ಕಾಲ ಪ್ರತಿ ನಿತ್ಯ ಸಪ್ತಾಹ ಮಾಡುತ್ತಿರುವುದು ಇಂದಿಗೂ ಕಾಣಬಹುದು ಎಂದರು.
ದಿವ್ಯ ಸಾನಿಧ್ಯವಹಿಸಿದ್ದ  ಶ್ರೀ ಮ ನಿ ಪ್ರ ಮುಪ್ಪಿನ ಬಸವಲಿಂಗ ನಿರಂಜನ ಮಹಾಸ್ವಾಮಿಗಳು ಭಜನಾ ಸಮಾರೋಪ ಕುರಿತು ಆಶೀರ್ವಚನ ನೀಡಿದರು ಕಾರ್ಯಕ್ರಮದಲ್ಲಿ ಶ್ರೀ ವೇದ ಮೂರ್ತಿ ಮಹಾದೇವಯ್ಯನವರು ಸಾನಿಧ್ಯ ವಹಿಸಿಕೊಂಡು ಅವರೂ ಕೂಡ ಆಶೀರ್ವಚನ ನೀಡಿದರು.
ಕಾರ್ಯಕ್ರಮದ ನಿರೂಪಣೆ ವೀರಭದ್ರಯ್ಯ ಸಾಲಿಮಠ ನೆಡೆಸಿದರೆ ಎಸ್ ಎಸ್ ಅಂಗಡಿ ಶಿಕ್ಷಕರು ಸ್ವಾಗತಿಸಿದರು. ಶಿವಕುಮಾರಗೌಡ ಚಿಕ್ಕನಗೌಡರ ವಂದಿಸಿದರು. ಡಾ ಅಂಬೇಡ್ಕರ್ ಭಜನಾ ಸಂಘದ ಸದಸ್ಯರು, ಶ್ರೀ ದುರ್ಗಾದೇವಿ ಭಜನಾ ಮಂಡಳಿಯವರು ಹಾಗೂ ಹೊನ್ನಾಪುರ ಗ್ರಾಮದ ಶ್ರೀ ಮಲ್ಲಜ್ಜೇಶ್ವರ ಭಜನಾ ಮಂಡಳಿಯವರು,ಗ್ರಾಮದ ಹಿರಿಯರಾದ  ವಿ ಎನ್ ಗೊಜನೂರು,ಅಶೋಕ ಗೊಜನೂರು, ಮಹೇಶಗೌಡ ಚಿಕ್ಕನಗೌಡರ ಶೇಕಪ್ಪ ಹುಲಗೂರು, (ಕೆಮ್ಮಣ್ಣವರ )ಭಜನಾ ಮಂಡಳಿ ಅಧ್ಯಕ್ಷ ಸಿದ್ದು ದುಂಡಪ್ಪನವರ, ವಿನೋದ ಗೊಜನೂರು ಪರಪ್ಪ ಬರಡ್ವಾದ ಕುರಗೋಡೆಪ್ಪ ಮುಕ್ಕಣ್ಣವರ ಸಿ ಬಿ ಮುಕ್ಕಣ್ಣವರ, ಬಸವರಾಜ ಹಡಪದ, ವೀರಪ್ಪ ದೇಸಾಯಿ ಸೇರಿದಂತೆ ಇನ್ನುಳಿದ ಸರ್ವ ಸದಸ್ಯರು, ಮಹಿಳೆಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
    user_ಪ್ರಕಾಶ ಗುದ್ನೇಪ್ಪನವರ.
    ಪ್ರಕಾಶ ಗುದ್ನೇಪ್ಪನವರ.
    Local News Reporter ಗದಗ, ಗದಗ, ಕರ್ನಾಟಕ•
    3 hrs ago
  • ಕೊಪ್ಪಳ: ನಮ್ಮ ಒತ್ತಡದಿಂದಲೇ ತಾಲೂಕಿನ ಬರ ಗುರುತಿಸಿದ ಸರಕಾರ' : ಸಿವಿಸಿ 'ಕೊಪ್ಪಳ: ಕೊಪ್ಪಳ ತಾಲೂಕ ಬರಪೀಡಿತ ಎಂದು ಸರಕಾರ ಒಪ್ಪಿಕೊಂಡಿರುವುದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. "ಕೊಪ್ಪಳವೂ ಸೇರಿದಂತೆ 53 ತಾಲೂಕುಗಳು ಬರಪೀಡಿತ ಸರಕಾರ ಆದೇಶ ಹೊರಡಿಸಿದೆ. ತಾಂತ್ರಿಕ ಪ್ರಕ್ರಿಯೆಗಳ ನಂತರ ಒಂದು ವಾರದಲ್ಲಿ ಈ ತಾಲೂಕು ಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುತ್ತದೆ. ಈ ವಿಷಯದಲ್ಲಿ ಈ ಹಿಂದೆ ಮಾಡಿದಂತಹ ವಿಳಂಬವನ್ನು ಮಾಡದೆ ಎಲ್ಲಾ ಪ್ರಕ್ರಿಯೆಗಳನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಬೇಕು," ಎಂದು ಒತ್ತಾಯಿಸಿದ್ದಾರೆ. ತಾಲೂಕಿನ ಪರಸ್ಥಿತಿಯ ಆಧಾರದ ಮೇಲೆ ನಾವು ಮಂಡಿಸಿದ್ದ ಬೇಡಿಕೆಯನ್ನು ಈಡೇರಿಸಲು ಎರಡೂವರೆ ತಿಂಗಳುಗಳಷ್ಟು ಕಾಲಹರಣ ಮಾಡುವ ಅಗತ್ಯ ಇರಲಿಲ್ಲ. ನಾವು ಒಂದೂವರೆ ತಿಂಗಳಿನಲ್ಲಿ ಎರಡು ಪಾದಯಾತ್ರೆಗಳನ್ನು ಹಮ್ಮಿಕೊಂಡು ತೀವ್ರ ಒತ್ತಡ ಹೇರದಿದ್ದರೆ ಕೊಪ್ಪಳದಲ್ಲಿ ಬರ ಇರುವುದನ್ನು ಸರಕಾರ ಒಪ್ಪುತ್ತಿರಲಿಲ್ಲ. ಶಾಸಕರು ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರೆ ನಾವು ಹೋರಾಡುವ ಪರಿಸ್ಥಿತಿಯೇ ಇರುತ್ತಿರಲಿಲ್ಲ. ಸರಕಾರದ ನಿರ್ಧಾರ ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ. "ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ, ಬಾಕಿ ಇರುವ ಬೆಳೆ ವಿಮೆಗೆ ಹಾಗೂ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಹಣ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ಈ ಕೂಡಲೇ ಆರಂಭಿಸಬೇಕು. ಈ ಪ್ರಕ್ರಿಯೆಯಲ್ಲಿ ವಿಳಂಬವಾದರೆ ಪರಿಹಾರ ಸಕಾಲದಲ್ಲಿ ದೊರೆಯದೆ ರೈತರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ಈ ವಿಷಯದಲ್ಲಿ ಕಾಲಹರಣ ಮಾಡಿದರೇ ನಮ್ಮ ಪಕ್ಷ ಮತ್ತೊಮ್ಮೆ ಉಗ್ರ ಹೋರಾಟ ಮಾಡುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.
    2
    ಕೊಪ್ಪಳ: ನಮ್ಮ ಒತ್ತಡದಿಂದಲೇ
ತಾಲೂಕಿನ ಬರ ಗುರುತಿಸಿದ ಸರಕಾರ' : ಸಿವಿಸಿ 
'ಕೊಪ್ಪಳ: ಕೊಪ್ಪಳ ತಾಲೂಕ
ಬರಪೀಡಿತ ಎಂದು ಸರಕಾರ ಒಪ್ಪಿಕೊಂಡಿರುವುದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಕೊಪ್ಪಳವೂ ಸೇರಿದಂತೆ 53 ತಾಲೂಕುಗಳು ಬರಪೀಡಿತ ಸರಕಾರ ಆದೇಶ ಹೊರಡಿಸಿದೆ. ತಾಂತ್ರಿಕ ಪ್ರಕ್ರಿಯೆಗಳ ನಂತರ ಒಂದು ವಾರದಲ್ಲಿ ಈ ತಾಲೂಕು ಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುತ್ತದೆ. ಈ ವಿಷಯದಲ್ಲಿ ಈ ಹಿಂದೆ ಮಾಡಿದಂತಹ ವಿಳಂಬವನ್ನು ಮಾಡದೆ ಎಲ್ಲಾ ಪ್ರಕ್ರಿಯೆಗಳನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಬೇಕು," ಎಂದು ಒತ್ತಾಯಿಸಿದ್ದಾರೆ.
ತಾಲೂಕಿನ ಪರಸ್ಥಿತಿಯ ಆಧಾರದ ಮೇಲೆ ನಾವು ಮಂಡಿಸಿದ್ದ ಬೇಡಿಕೆಯನ್ನು 
ಈಡೇರಿಸಲು ಎರಡೂವರೆ ತಿಂಗಳುಗಳಷ್ಟು ಕಾಲಹರಣ ಮಾಡುವ ಅಗತ್ಯ ಇರಲಿಲ್ಲ. ನಾವು ಒಂದೂವರೆ ತಿಂಗಳಿನಲ್ಲಿ ಎರಡು ಪಾದಯಾತ್ರೆಗಳನ್ನು
ಹಮ್ಮಿಕೊಂಡು ತೀವ್ರ ಒತ್ತಡ ಹೇರದಿದ್ದರೆ ಕೊಪ್ಪಳದಲ್ಲಿ ಬರ ಇರುವುದನ್ನು ಸರಕಾರ ಒಪ್ಪುತ್ತಿರಲಿಲ್ಲ. ಶಾಸಕರು ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರೆ ನಾವು ಹೋರಾಡುವ ಪರಿಸ್ಥಿತಿಯೇ ಇರುತ್ತಿರಲಿಲ್ಲ. ಸರಕಾರದ ನಿರ್ಧಾರ ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.
"ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ, ಬಾಕಿ ಇರುವ ಬೆಳೆ ವಿಮೆಗೆ ಹಾಗೂ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಹಣ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ಈ ಕೂಡಲೇ ಆರಂಭಿಸಬೇಕು. ಈ ಪ್ರಕ್ರಿಯೆಯಲ್ಲಿ ವಿಳಂಬವಾದರೆ ಪರಿಹಾರ ಸಕಾಲದಲ್ಲಿ ದೊರೆಯದೆ ರೈತರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ಈ ವಿಷಯದಲ್ಲಿ ಕಾಲಹರಣ ಮಾಡಿದರೇ ನಮ್ಮ ಪಕ್ಷ ಮತ್ತೊಮ್ಮೆ ಉಗ್ರ ಹೋರಾಟ ಮಾಡುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.
    user_STAR OF KOPPAL
    STAR OF KOPPAL
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    3 hrs ago
  • ಕುಂದಗೋಳ ತಾಲೂಕು ಶಿರೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತಹಶೀಲ್ದಾರ್ ವಾಹನ ತಡೆದು ಗ್ರಾಮಸ್ಥರ ಆಕ್ರೋಶ! ಕುಂದಗೋಳ ತಾಲೂಕು ಶಿರೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತಹಶೀಲ್ದಾರ್ ವಾಹನ ತಡೆದು ಗ್ರಾಮಸ್ಥರ ಆಕ್ರೋಶ! ಹಲವು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಶಿರೂರು ಗ್ರಾಮದ ನವಗ್ರಾಮದ ನಿವಾಸಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಶಿರೂರು ಮಾರ್ಗವಾಗಿ ತೆರಳುತ್ತಿದ್ದ ಕುಂದಗೋಳ ತಹಶೀಲ್ದಾರ್ ರಾಜು ಮಾವರ್ಕರ್ ಅವರ ವಾಹನವನ್ನು ಮಹಿಳೆಯರು ಸೇರಿದಂತೆ ಗ್ರಾಮಸ್ಥರು ತಡೆದು, ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದರು. ಸ್ಥಳೀಯ ಆಡಳಿತ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು , ಅಧಿಕಾರಿಗಳನ್ನು ಪ್ರಶ್ನಿಸಿದರೆ ಉಡಾಫೆಯ ಉತ್ತರ ನೀಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಅಹವಾಲು ಆಲಿಸಿದ ತಹಶೀಲ್ದಾರ್, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದರು. ಬಳಿಕ ಸಮಸ್ಯಾತ್ಮಕ ಶೀಘ್ರ ಬಗೆಹರಿಯದಿದ್ದರೆ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
    1
    ಕುಂದಗೋಳ  ತಾಲೂಕು ಶಿರೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ
 ತಹಶೀಲ್ದಾರ್ ವಾಹನ ತಡೆದು ಗ್ರಾಮಸ್ಥರ ಆಕ್ರೋಶ!
ಕುಂದಗೋಳ  ತಾಲೂಕು ಶಿರೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ
ತಹಶೀಲ್ದಾರ್ ವಾಹನ ತಡೆದು ಗ್ರಾಮಸ್ಥರ ಆಕ್ರೋಶ!
ಹಲವು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಶಿರೂರು ಗ್ರಾಮದ ನವಗ್ರಾಮದ ನಿವಾಸಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಶಿರೂರು ಮಾರ್ಗವಾಗಿ ತೆರಳುತ್ತಿದ್ದ ಕುಂದಗೋಳ ತಹಶೀಲ್ದಾರ್ ರಾಜು ಮಾವರ್ಕರ್ ಅವರ ವಾಹನವನ್ನು
ಮಹಿಳೆಯರು ಸೇರಿದಂತೆ ಗ್ರಾಮಸ್ಥರು ತಡೆದು, ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದರು.
ಸ್ಥಳೀಯ ಆಡಳಿತ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು
, ಅಧಿಕಾರಿಗಳನ್ನು ಪ್ರಶ್ನಿಸಿದರೆ ಉಡಾಫೆಯ ಉತ್ತರ ನೀಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಅಹವಾಲು ಆಲಿಸಿದ
ತಹಶೀಲ್ದಾರ್, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ 
ನಡೆಸಿದರು. ಬಳಿಕ ಸಮಸ್ಯಾತ್ಮಕ 
ಶೀಘ್ರ ಬಗೆಹರಿಯದಿದ್ದರೆ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ
ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
    user_NEWS 83 KARNATAKA
    NEWS 83 KARNATAKA
    ಲಕ್ಷ್ಮೇಶ್ವರ, ಗದಗ, ಕರ್ನಾಟಕ•
    20 hrs ago
  • ಬೆಳಗಾವಿ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ನಿವೃತ್ತ ಯೋಧ, ಪುತ್ರಿ ಹ... ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಿವೃತ್ತ ಯೋಧ ಹಾಗೂ ಅವರ ಪುತ್ರಿ ಹತ್ಯೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮೃತರನ್ನು ನಿವೃತ್ತ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಎಂದು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ. ಆಸ್ತಿ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಹತ್ಯೆಗೆ ನಿಖರ ಕಾರಣವೇನು ಮತ್ತು ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಪ್ರಕರಣದ ವಿವಿಧ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ. ಆರೋಪಿಗಳ ಪತ್ತೆ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. **ಪೊಲೀಸರ ಅಧಿಕೃತ ಮಾಹಿತಿ ಹೊರಬಂದ ಬಳಿಕವಷ್ಟೇ ಹತ್ಯೆಯ ನಿಖರ ಕಾರಣ ಮತ್ತು ಆರೋಪಿಗಳ ಕುರಿತು ಸ್ಪಷ್ಟತೆ ಸಿಗಲಿದೆ.**
    1
    ಬೆಳಗಾವಿ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ನಿವೃತ್ತ ಯೋಧ, ಪುತ್ರಿ ಹ...
ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಿವೃತ್ತ ಯೋಧ ಹಾಗೂ ಅವರ ಪುತ್ರಿ ಹತ್ಯೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.
ಮೃತರನ್ನು ನಿವೃತ್ತ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಎಂದು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ.
ಆಸ್ತಿ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಹತ್ಯೆಗೆ ನಿಖರ ಕಾರಣವೇನು ಮತ್ತು ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಪ್ರಕರಣದ ವಿವಿಧ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ.
ಆರೋಪಿಗಳ ಪತ್ತೆ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. **ಪೊಲೀಸರ ಅಧಿಕೃತ ಮಾಹಿತಿ ಹೊರಬಂದ ಬಳಿಕವಷ್ಟೇ ಹತ್ಯೆಯ ನಿಖರ ಕಾರಣ ಮತ್ತು ಆರೋಪಿಗಳ ಕುರಿತು ಸ್ಪಷ್ಟತೆ ಸಿಗಲಿದೆ.**
    user_ದರ್ಪಣ ಕನ್ನಡ ಟಿವಿ
    ದರ್ಪಣ ಕನ್ನಡ ಟಿವಿ
    ಲಕ್ಷ್ಮೇಶ್ವರ, ಗದಗ, ಕರ್ನಾಟಕ•
    22 hrs ago
  • ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ
    1
    ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ 
ಅಣ್ಣಿಗೇರಿ ಹುಬ್ಬಳ್ಳಿ ರಸ್ತೆ ಕಾರಿನ ಟೈರ ಬ್ಲಾಸ್ಟ್ ಆಗ್ಗಿ ಕಾರ್ ಪಾಲ್ಟಿ ಆಗಿ ಒಬ್ಬ ಸಾವು ಇಬ್ಬರೂ ಗಾಯಾಳುಗಳ
    user_Annigeri Sunil
    Annigeri Sunil
    Electrician ಅಣ್ಣಿಗೇರಿ, ಧಾರವಾಡ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.