ಸಂಪತ್ತಿಗಿಂತ ಸಂಸ್ಕಾರವೇ ದೊಡ್ಡದು: ಲಕ್ಷ್ಮಿಯಅನುಗ್ರಹ ಸಾಧ್ಯ: ಶ್ರೀ ಪೂರ್ಣಾನಂದ ಸ್ವಾಮೀಜಿ. ಶಿಡ್ಲಘಟ್ಟ: ಮನುಷ್ಯನ ಜೀವನದಲ್ಲಿ ಧರ್ಮ, ಅರ್ಥ, ಕಾಮ ಮತ್ತು ಮೋಕ್ಷ ಎಂಬ ನಾಲ್ಕು ಪುರುಷಾರ್ಥಗಳು ಪ್ರಮುಖವಾಗಿವೆ. ಇದರಲ್ಲಿ ಧರ್ಮದ ಹಾದಿಯಲ್ಲಿ ಗಳಿಸಿದ ಸಂಪತ್ತು (ಅರ್ಥ) ಮಾತ್ರ ನಮಗೆ ನಿಜವಾದ ಸುಖ ಮತ್ತು ಶಾಂತಿಯನ್ನು ನೀಡಲು ಸಾಧ್ಯ ಎಂದು ಚಿಕ್ಕಬಳ್ಳಾಪುರದ ಶ್ರೀ ರಾಮಕೃಷ್ಣ ವಿವೇಕಾನಂದ ಮಠದ ಶ್ರೀ ಪೂರ್ಣಾನಂದ ಸ್ವಾಮೀಜಿ ಅವರು ಪ್ರತಿಪಾದಿಸಿದರು. ಬೆಳ್ಳೂಟಿಯ ಶ್ರೀ ಗುಟ್ಟಾಂಜನೇಯಸ್ವಾಮಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಶ್ರೀ ಲಕ್ಷ್ಮೀ ಪೂಜಾ ಸಮಿತಿ ಹಾಗೂ ಬೆಳ್ಳೂಟಿ ಪ್ರಗತಿ ಬಂಧು ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ 'ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ' ವಿಜೃಂಭಣೆಯಿಂದ ನೆರವೇರಿತು. ಶ್ರೀ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಶ್ರದ್ಧಾಭಕ್ತಿಯಿಂದ ಮಹಾಲಕ್ಷ್ಮಿಯ ಪೂಜೆಯನ್ನು ನೆರವೇರಿಸಿದರು. ಗ್ರಾಮದ ಸುಭಿಕ್ಷೆ ಮತ್ತು ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮೊದಲಿಗೆ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಚಿಕ್ಕಬಳ್ಳಾಪುರದ ಶ್ರೀ ರಾಮಕೃಷ್ಣ ವಿವೇಕಾನಂದ ಮಠದ ಶ್ರೀ ಪೂರ್ಣಾನಂದ ಸ್ವಾಮೀಜಿ ಅವರು, ಇಂದು ಸಮಾಜದಲ್ಲಿ ಸಾಕಷ್ಟು ಹಣವಿದ್ದರೂ ಜನರಲ್ಲಿ ನೆಮ್ಮದಿ ಇಲ್ಲದಿರುವುದಕ್ಕೆ ಧರ್ಮದ ತಳಹದಿಯ ಕೊರತೆಯೇ ಕಾರಣ. ಕೇವಲ ಹಣದಿಂದ ಆರೋಗ್ಯವನ್ನಾಗಲಿ ಅಥವಾ ಜ್ಞಾನವನ್ನಾಗಲಿ ಕೊಳ್ಳಲು ಸಾಧ್ಯವಿಲ್ಲ. ನಾವು ಮಾಡುವ ಲಕ್ಷ್ಮಿ ಪೂಜೆಯು ಸಾರ್ಥಕವಾಗಬೇಕಾದರೆ ನಮ್ಮ ಸಂಪತ್ತು ಧರ್ಮದ ಹಾದಿಯಲ್ಲಿ ಬಂದಿರಬೇಕು. ಭಗವಂತನ ಅನುಗ್ರಹವಿದ್ದರೆ ಮಾತ್ರ ಆರೋಗ್ಯ, ಶಾಂತಿ ಮತ್ತು ಸಮೃದ್ಧಿ ನೆಲೆಸಲು ಸಾಧ್ಯ. ಈ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರವು ದಾನ, ಆರೋಗ್ಯ ಮತ್ತು ವಿದ್ಯಾ ದಾನದ ಮೂಲಕ ಲೋಕಕಲ್ಯಾಣ ಮಾಡುತ್ತಿದೆ ಎಂದು ಶ್ಲಾಘಿಸಿದರು. ನಂತರ ಮಾತನಾಡಿದ ಯೋಜನಾಧಿಕಾರಿ ಪ್ರಸಾದ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಬ್ಯಾಂಕ್ ಮತ್ತು ಗ್ರಾಮೀಣ ಸಂಘಟನೆಗಳ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಹಳ್ಳಿಯ ಜನರ ಆರ್ಥಿಕ ಮತ್ತು ಸಾಮಾಜಿಕ ಏಳಿಗೆಗೆ ಶ್ರಮಿಸುತ್ತಿದೆ ಎಂದು ತಿಳಿಸಿದರು. ಯೋಜನೆಯಡಿ ಸ್ವ-ಸಹಾಯ ಸಂಘಗಳನ್ನು ರಚಿಸಿ, ಬ್ಯಾಂಕುಗಳ ಮೂಲಕ ಸದಸ್ಯರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು. ನಂತರ ವೇದಿಕೆಯಲ್ಲಿರುವ ಗಣ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಾಮೂಹಿಕ ಶ್ರೀ ಲಕ್ಷ್ಮೀಪೂಜಾ ವ್ಯವಸ್ಥಾಪನಾ ಸಮಿತಿ ಬೆಳ್ಳೂಟಿ ಅಧ್ಯಕ್ಷರಾದ ಹೆಚ್. ಕೆ. ಸುರೇಶ್, ಮಾಜಿ ಕೆ.ಎಂ.ಎಫ್. ನಿರ್ದೇಶಕರಾದ ಶ್ರೀನಿವಾಸ್ ರಾಮಯ್ಯ, ರೈತ ಮುಖಂಡರಾದ ಮುನಿಕೆಂಪಣ್ಣ, ಸುಗಟೂರು ನಾಗೇಶ್, ಆನೂರಿನ ಯೋಗ ಶಿಕ್ಷಕರಾದ ಶ್ರೀನಿವಾಸ್,ಬೆಳ್ಳೂಟಿ ವಲಯದ ಮೇಲ್ವಿಚಾರಕಿ ಮೇಘನಾ,ರಾಮಚಂದ್ರ, ಹುಜುಗೂರು ಬಚ್ಚೇಗೌಡ ,ಲಕ್ಷ್ಮೀದೇವಮ್ಮ ದೇವರಾಜ್, ಕಲ್ಪನಾ ಮುನಿರಾಜು,ಹೆಚ್. ಕೆ. ನಾಗೇಶ್ಗೌಡ,ಚಿಕ್ಕಣ್ಣ ಹಾಗೂ ನೂರಕ್ಕೂ ಹೆಚ್ಚು ಮಹಿಳೆಯರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ
ಸಂಪತ್ತಿಗಿಂತ ಸಂಸ್ಕಾರವೇ ದೊಡ್ಡದು: ಲಕ್ಷ್ಮಿಯಅನುಗ್ರಹ ಸಾಧ್ಯ: ಶ್ರೀ ಪೂರ್ಣಾನಂದ ಸ್ವಾಮೀಜಿ. ಶಿಡ್ಲಘಟ್ಟ: ಮನುಷ್ಯನ ಜೀವನದಲ್ಲಿ ಧರ್ಮ, ಅರ್ಥ, ಕಾಮ ಮತ್ತು ಮೋಕ್ಷ ಎಂಬ ನಾಲ್ಕು ಪುರುಷಾರ್ಥಗಳು ಪ್ರಮುಖವಾಗಿವೆ. ಇದರಲ್ಲಿ ಧರ್ಮದ ಹಾದಿಯಲ್ಲಿ ಗಳಿಸಿದ ಸಂಪತ್ತು (ಅರ್ಥ) ಮಾತ್ರ ನಮಗೆ ನಿಜವಾದ ಸುಖ ಮತ್ತು ಶಾಂತಿಯನ್ನು ನೀಡಲು ಸಾಧ್ಯ ಎಂದು ಚಿಕ್ಕಬಳ್ಳಾಪುರದ ಶ್ರೀ ರಾಮಕೃಷ್ಣ ವಿವೇಕಾನಂದ ಮಠದ ಶ್ರೀ ಪೂರ್ಣಾನಂದ ಸ್ವಾಮೀಜಿ ಅವರು ಪ್ರತಿಪಾದಿಸಿದರು. ಬೆಳ್ಳೂಟಿಯ ಶ್ರೀ ಗುಟ್ಟಾಂಜನೇಯಸ್ವಾಮಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಶ್ರೀ ಲಕ್ಷ್ಮೀ ಪೂಜಾ ಸಮಿತಿ ಹಾಗೂ ಬೆಳ್ಳೂಟಿ ಪ್ರಗತಿ ಬಂಧು ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ 'ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ' ವಿಜೃಂಭಣೆಯಿಂದ ನೆರವೇರಿತು. ಶ್ರೀ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಶ್ರದ್ಧಾಭಕ್ತಿಯಿಂದ ಮಹಾಲಕ್ಷ್ಮಿಯ ಪೂಜೆಯನ್ನು ನೆರವೇರಿಸಿದರು. ಗ್ರಾಮದ ಸುಭಿಕ್ಷೆ ಮತ್ತು ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮೊದಲಿಗೆ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಚಿಕ್ಕಬಳ್ಳಾಪುರದ ಶ್ರೀ ರಾಮಕೃಷ್ಣ ವಿವೇಕಾನಂದ ಮಠದ ಶ್ರೀ ಪೂರ್ಣಾನಂದ ಸ್ವಾಮೀಜಿ ಅವರು, ಇಂದು ಸಮಾಜದಲ್ಲಿ ಸಾಕಷ್ಟು ಹಣವಿದ್ದರೂ ಜನರಲ್ಲಿ ನೆಮ್ಮದಿ ಇಲ್ಲದಿರುವುದಕ್ಕೆ ಧರ್ಮದ ತಳಹದಿಯ ಕೊರತೆಯೇ ಕಾರಣ. ಕೇವಲ ಹಣದಿಂದ ಆರೋಗ್ಯವನ್ನಾಗಲಿ ಅಥವಾ ಜ್ಞಾನವನ್ನಾಗಲಿ ಕೊಳ್ಳಲು ಸಾಧ್ಯವಿಲ್ಲ. ನಾವು ಮಾಡುವ ಲಕ್ಷ್ಮಿ ಪೂಜೆಯು ಸಾರ್ಥಕವಾಗಬೇಕಾದರೆ ನಮ್ಮ ಸಂಪತ್ತು ಧರ್ಮದ ಹಾದಿಯಲ್ಲಿ ಬಂದಿರಬೇಕು. ಭಗವಂತನ ಅನುಗ್ರಹವಿದ್ದರೆ ಮಾತ್ರ ಆರೋಗ್ಯ, ಶಾಂತಿ ಮತ್ತು ಸಮೃದ್ಧಿ ನೆಲೆಸಲು ಸಾಧ್ಯ. ಈ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರವು ದಾನ, ಆರೋಗ್ಯ ಮತ್ತು ವಿದ್ಯಾ ದಾನದ ಮೂಲಕ ಲೋಕಕಲ್ಯಾಣ ಮಾಡುತ್ತಿದೆ ಎಂದು ಶ್ಲಾಘಿಸಿದರು. ನಂತರ ಮಾತನಾಡಿದ ಯೋಜನಾಧಿಕಾರಿ ಪ್ರಸಾದ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಬ್ಯಾಂಕ್ ಮತ್ತು ಗ್ರಾಮೀಣ ಸಂಘಟನೆಗಳ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಹಳ್ಳಿಯ ಜನರ ಆರ್ಥಿಕ ಮತ್ತು ಸಾಮಾಜಿಕ ಏಳಿಗೆಗೆ ಶ್ರಮಿಸುತ್ತಿದೆ ಎಂದು ತಿಳಿಸಿದರು. ಯೋಜನೆಯಡಿ ಸ್ವ-ಸಹಾಯ ಸಂಘಗಳನ್ನು ರಚಿಸಿ, ಬ್ಯಾಂಕುಗಳ ಮೂಲಕ ಸದಸ್ಯರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು. ನಂತರ ವೇದಿಕೆಯಲ್ಲಿರುವ ಗಣ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಾಮೂಹಿಕ ಶ್ರೀ ಲಕ್ಷ್ಮೀಪೂಜಾ ವ್ಯವಸ್ಥಾಪನಾ ಸಮಿತಿ ಬೆಳ್ಳೂಟಿ ಅಧ್ಯಕ್ಷರಾದ ಹೆಚ್. ಕೆ. ಸುರೇಶ್, ಮಾಜಿ ಕೆ.ಎಂ.ಎಫ್. ನಿರ್ದೇಶಕರಾದ ಶ್ರೀನಿವಾಸ್ ರಾಮಯ್ಯ, ರೈತ ಮುಖಂಡರಾದ ಮುನಿಕೆಂಪಣ್ಣ, ಸುಗಟೂರು ನಾಗೇಶ್, ಆನೂರಿನ ಯೋಗ ಶಿಕ್ಷಕರಾದ ಶ್ರೀನಿವಾಸ್,ಬೆಳ್ಳೂಟಿ ವಲಯದ ಮೇಲ್ವಿಚಾರಕಿ ಮೇಘನಾ,ರಾಮಚಂದ್ರ, ಹುಜುಗೂರು ಬಚ್ಚೇಗೌಡ ,ಲಕ್ಷ್ಮೀದೇವಮ್ಮ ದೇವರಾಜ್, ಕಲ್ಪನಾ ಮುನಿರಾಜು,ಹೆಚ್. ಕೆ. ನಾಗೇಶ್ಗೌಡ,ಚಿಕ್ಕಣ್ಣ ಹಾಗೂ ನೂರಕ್ಕೂ ಹೆಚ್ಚು ಮಹಿಳೆಯರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ
- ಇರಾನ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಯುದ್ಧದ ಭೀತಿಗೆ ದುಬೈನಲ್ಲಿ ನೆಲೆಸಿದ್ದ ಭಾರತೀಯರು ಸೇರಿದಂತೆ ಬೇರೆ ರಾಷ್ಟ್ರಗಳ ಪ್ರಜೆಗಳು ಸುರಕ್ಷಿತವಾಗಿರಲು ತಮ್ಮ ತಮ್ಮ ದೇಶಕ್ಕೆ ಪ್ರಯಾಣ ಬೆಳೆಸಿದರು, ಈ ಸಂಬಂಧ ದುಬೈ ಏರ್ಪೋರ್ಟ್ ಕಿಕ್ಕಿರಿದು ತುಂಬಿತ್ತು...1
- ಹೋರಾಟದ ವೇದಿಕೆಗೆ CM Siddaramaiah ಬರದೇ ಹೋದರೆ, ಹೋರಾಟಗಾರರು ವಿಧಾನಸೌಧಕ್ಕೆ... ಜೈ ಮಾದಿಗ1
- Post by ಗೋಪನಹಳ್ಳಿಶಿವಣ್ಣ1
- ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ನಾಲ್ಕನೇ ದಿನವಾದ ಗುರುವಾರ ಮುಂಜಾನೆ ಸಂಪ್ರದಾಯಬದ್ಧವಾಗಿ ಅಗ್ನಿಕುಂಡ ಪ್ರದರ್ಶನ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಪಟ್ಟಣದ ಪ್ರಸಿದ್ಧ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರೆಯು ಕಳೆದ ನಾಲ್ಕು ದಿನಗಳಿಂದ ಭಾರೀ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಕ್ತರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನಾಲ್ಕನೇ ದಿನದ ಅಂಗವಾಗಿ ಮುಂಜಾನೆ ದೇವಸ್ಥಾನದಲ್ಲಿ ಅರ್ಚಕ ರಾಜು ರಾವ್ ಅವರ ಸಮ್ಮುಖದಲ್ಲಿ ವಿಶೇಷ ಪೂಜೆಗಳು ನೆರವೇರಿಸಲಾಯಿತು. ನಂತರ ಮೂರು ಕವಲಿನ ಕಂಬದ ಮೇಲೆ ಪ್ರತಿಷ್ಠಾಪನೆ ಮಾಡಲಾಗಿದ್ದ ಅಗ್ನಿಕುಂಡವನ್ನು ಸಂಪ್ರದಾಯದಂತೆ ಮೇಲಕ್ಕೆ ಎತ್ತಿ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕುವ ವಿಧಿ ವಿಧಾನ ಕಾರ್ಯಕ್ರಮ ನೆಡೆಯಿತು ಈ ಸಂದರ್ಭದಲ್ಲಿ ಭಕ್ತರು ದೇವಿಗೆ ಹರಕೆ ಸಲ್ಲಿಸಿ ಜಯಘೋಷಗಳೊಂದಿಗೆ ಭಕ್ತಿಭಾವದಿಂದ ಪಾಲ್ಗೊಂಡರು. ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಭಾಗಿಯಾದ ಯುವಕರು ರಾತ್ರಿ ಪೂರ್ತಿ ಕುಣಿದು ಕುಪ್ಪಳಿಸಿ ಹಬ್ಬದ ವಾತಾವರಣವನ್ನು ಇನ್ನಷ್ಟು ಕಂಗೊಳಿಸಿದರು.1
- ಹನೂರು: ತಾಲ್ಲೂಕಿನ ರಾಮನ ಗುಡ್ಡೆ ಕೆರೆಯಿಂದ ಮಣಗಳ್ಳಿ ಗ್ರಾಮಕ್ಕೆ ಕಾವೇರಿ ನೀರು ಬರುತ್ತಿರುವುದು ಗ್ರಾಮೀಣ ರೈತರ ಮುಖದಲ್ಲಿ ಸಂತೋಷ ಮೂಡಿದೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ ನೀರು ರಾಮನಗುಡ್ಡೆ ಕೆರೆಗೆ ನೀರು ಹನೂರು ವಿಧಾನಸಭಾಕ್ಷೇತ್ರದ ಶಾಸಕ ಎಂ ಆರ್ ಮಂಜುನಾಥ್ ಚಾಲನೆ ನೀಡಿದ್ದರು, ಈಗ ಅಲ್ಲಿಂದ ಕಾವೇರಿ ನೀರು ಮಣಗಳ್ಳಿ ಗ್ರಾಮದ ಹಳ್ಳಕ್ಕೆ ನೀರು ಬರುತ್ತಿದೆ.2
- Post by Suresh Belagere1
- ಸ್ವಂತ ಸೋದರಮಾವನನ್ನು 14 ವರ್ಷಗಳ ಹಿಂದೆ ಮದುವೆಯಾಗಿದ್ದ ಶಾಲಿನಿ ಹರೀಶ್ ಎಂಬುವನೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಳು, ಅರ್ಚಕ ವೃತ್ತಿಯ ಗಂಡ ಸಿದ್ದಲಿಂಗಪ್ಪನಿಗೆ ವಿಷಯ ತಿಳಿದಮೇಲೆ ಅವನನ್ನೇ ಮುಗಿಸಲು ಸಂಚು ಮಾಡಿದ್ದ ಸತಿ ಶಾಲಿನಿ ಹರೀಶನಿಗೆ ಸುಳಿವು ನೀಡಿ ಕೊಲೆ ಮಾಡಿಸಿ ಶವ ಕೆರೆಗೆ ಎಸೆದು ಅಪಘಾತ ಎಂಬಂತೆ ಬಿಂಬಿಸಲು ಹೋಗಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾಳೆ, ಇವಳೊಂದಿಗೆ ಅವಳ ಅನೈತಿಕ ಗೆಳೆಯ ಮತ್ತು ಇಬ್ಬರು ಕಿಲ್ಲರ್ ಗಳು ಸೆರೆಮನೆಗೆ ತಲುಪಿದ್ದಾರೆ...1
- KOLAR.........KOLAR KI.AWAAZ KOUSAR NEWS1
- ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಗೋಕಾಕ ನಗರದ ಗೃಹಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿದರು. ಈ ವೇಳೆ ವಿವಿಧ ಕಾರ್ಯಕ್ರಮಗಳಿಗೆ ನೀಡಿದ ಆಹ್ವಾನವನ್ನು ಸ್ವೀಕರಿಸಿದರು9