Shuru
Apke Nagar Ki App…
All About,How the political Influencial are misuing #WaqfProperties #WaqfFunds to their advantage *ಭಾರತ ನಲ್ಲಿ ವೈರಲ್*
Md Aleemulla Shariff
All About,How the political Influencial are misuing #WaqfProperties #WaqfFunds to their advantage *ಭಾರತ ನಲ್ಲಿ ವೈರಲ್*
More news from ಕರ್ನಾಟಕ and nearby areas
- All About,How the political Influencial are misuing #WaqfProperties #WaqfFunds to their advantage *ಭಾರತ ನಲ್ಲಿ ವೈರಲ್*1
- ಮೈಸೂರಿನಲ್ಲಿ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ.. ‘ನಕಲಿ ಹಿಂದುತ್ವವಾದಿ’ ಎಂದು ಘೋಷಣೆ | ಗಡಿಪಾರು ಮಾಡುವಂತೆ ಆಗ್ರಹ ಮೈಸೂರು: ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ನಕಲಿ ಹಿಂದುತ್ವವಾದಿ ಪ್ರತಾಪ್ ಸಿಂಹ’, ‘ಕೋಮುವಾದಿ ಬಿಜೆಪಿ, ಕೋಮುವಾದಿ ಪ್ರತಾಪ್ ಸಿಂಹ’ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಟಿ. ನರಸೀಪುರದಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಗಣೇಶ ಮೂರ್ತಿ ಹಿಡಿದು, ಪಾದರಕ್ಷೆ ಧರಿಸಿ ಪ್ರತಿಭಟನೆ ನಡೆಸಿರುವುದನ್ನು ಪ್ರಶ್ನಿಸಿದ ಕಾರ್ಯಕರ್ತರು, ಧಾರ್ಮಿಕ ಭಾವನೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿಯ ನಡೆ ಸಮಾಜದಲ್ಲಿ ಅಶಾಂತಿ ಮೂಡಿಸುವುದಲ್ಲದೆ, ಯುವಕರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು. ಪ್ರತಾಪ್ ಸಿಂಹ ಅವರು ದಲಿತರು ಹಾಗೂ ಮುಸ್ಲಿಮರ ವಿರುದ್ಧ ದ್ವೇಷದ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿ, ಅವರನ್ನು ಗಡಿಪಾರು ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ಅವರ ಸೂಚನೆಗಳ ಕುರಿತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರೆ, ಇದಕ್ಕೆ ಪ್ರತಿಯಾಗಿ ದಲಿತ ಸಂಘಟನೆಗಳು ಹಾಗೂ ಇತರ ಸಂಘಟನೆಗಳಿಂದಲೂ ಪ್ರತಿಭಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಪ್ರಕರಣ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.1
- ಜೆಸ್ಕಾಂ ಕಚೇರಿ ಮುಂದೆ ಕೃಷಿಕಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ಟಿ. ನರಸೀಪುರ ಅಸಮರ್ಪಕ ವಿದ್ಯುತ್ ಪೂರೈಕೆ: ರೈತರು ಸಂಕಷ್ಟದಲ್ಲಿ. ಟಿ. ನರಸೀಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ನೀರಾವರಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಆತಂಕ ಎದುರಾಗಿದೆ. ಕೃಷಿ ಪಂಪ್ಸೆಟ್ಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ವೋಲ್ಟೇಜ್ನೊಂದಿಗೆ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಮೋಟಾರ್ಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಬೆಳೆಗಳಿಗೆ ಸಾಕಷ್ಟು ಖರ್ಚು ಮಾಡಿರುವ ರೈತರಿಗೆ ವಿದ್ಯುತ್ ಸಮಸ್ಯೆ ಮತ್ತಷ್ಟು ಆರ್ಥಿಕ ಹೊರೆ ತಂದಿದೆ. ವಿದ್ಯುತ್ ಸಮಸ್ಯೆಯಿಂದ ಬೆಳೆ ಹಾನಿಯಾದರೆ ರೈತರ ಪರಿಸ್ಥಿತಿ ಮತ್ತಷ್ಟು ದುಸ್ತರವಾಗಲಿದೆ. ಕೃಷಿ ಪಂಪ್ಸೆಟ್ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಲೈನ್ಗಳು, ಟ್ರಾನ್ಸ್ಫಾರ್ಮರ್ಗಳು ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಸರಿಪಡಿಸಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ತುರ್ತಾಗಿ ಸಮಸ್ಯೆ ಪರಿಹರಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ರೈತರ ಆಗ್ರಹವಾಗಿದೆ. ರೈತರ ಬೆಳೆ ಉಳಿಸಲು ವಿದ್ಯುತ್ ಪೂರೈಕೆ ಸಮರ್ಪಕವಾಗಲಿಯಂದು ರೈತರ ಒತ್ತಾಯ . ಈ ಪ್ರತಿಭಟನೆಯಲ್ಲಿ ಕಿರಗುಸೂರು ಶಂಕರ್ ಕೆಜಿ ಗುರುಸ್ವಾಮಿ ಕುರುಬುರ್ ಗೌರಿಶಂಕರ್ ವಾಚ್ ಕುಮಾರ್ ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ ಅಪ್ಪಣ್ಣ ಕುರುಬೂರು ಸಿದ್ದೇಶ್, ಬಿಪಿ ಪರಶಿವಮೂರ್ತಿ, ಕರುವಟಿ ಉಮೇಶ್ ಕುರುಬೂರ ಪ್ರದೀಪ್ ಸೋಮಶೇಖರ್ ಬನ್ನಳ್ಳಿ ಹುಂಡಿ ರಾಜೇಂದ್ರ ನಿಲ್ಸೋಗೆ ಉಮೇಶ್ ಪ್ರತಾಪ್, ಕುಮಾರ್ ಕೆ ಎಂ, ವಾಟಾಳ್ ಪುರ ಸತೀಶ್ ಕುಮಾರ್ ಹೊಸಪುರ ನಾಗರಾಜು ಮಾದೇಶ್ ಮಾದೇವಮೂರ್ತಿ ಬಸವರಾಜು ಎಸ್ ಕೆಬ್ಬೆ ಹುಂಡಿ, ಮಾದೇವಸ್ವಾಮಿ ಮಾವ್ನಹಳ್ಳಿ, ತರಕಾರಿ ನಿಂಗರಾಜು ಬನ್ನಳ್ಳಿ ಶಾಂತರಾಜು ಆದಿ ಬೆಟ್ಟಳ್ಳಿ ಮಹೇಶ ಕನ್ನಳ್ಳಿ ಮೊಳೆ ಮಣಿಕಂಠ ಲೋಕೇಶ್ ರವೀಂದ್ರ ಮಾದೇಶ್ ನಿಲ್ಸೋಗೆ ನಾಗರಾಜು ಚಿನ್ನಸ್ವಾಮಿ ಕುರುಬೂರು ಶಿವಪ್ರಸಾದ್ ವೀರೇಶ್ ಎಲ್ ಐ ಸಿ ಪ್ರದೀಪ್ ಎಬಿ ಮಂಜುನಾಥ್ ನವೀನ ತೊಟ್ಟುವಾಡಿ ಇನ್ನು ಮುಂತಾದ ರೈತರು ಭಾಗವಹಿಸಿದ್ದರು1
- ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇಇ ಮಳವಳ್ಳಿ : ತಾಲ್ಲೂಕಿನ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ವಿರುವುದರಿಂದ ಸೆಪ್ಟಂಬರ್ 18 ರಂದು ಈ ಕೇಂದ್ರ ವ್ಯಾಪ್ತಿ ಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ. 18 ರಂದು ಬೆಳಿಗ್ಗೆ 9. ರಿಂದ ಸಾಯಂಕಾಲ 5 ರ ವರೆಗೆ 66/11 ಕೆ ವಿ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕಿರುಗಾಬಲು, ದೊಡ್ಡೇಗೌಡನಕೊಪ್ಪಲು, ಚಿಕ್ಕಮಾಳಿಗೆ ಕೊಪ್ಪಲು, ನೇಣನೂರು, ಸಂಶೆಟ್ಟಿಪುರ, ಚಿಕ್ಕಮುಲಗೂಡು, ಮಿಕ್ಕರೆ, ಕಲ್ಕುಣಿ, ಡೋರನಹಳ್ಳಿ, ಹೆಚ್ ಹೆಚ್ ಕೊಪ್ಪಲು, ಭೀಮನಹಳ್ಳಿ, ಬಂಡೂರು, ಆಲದಹಳ್ಳಿ, ಮೂಗನಕೊಪ್ಪಲು, ಹೂವಿನ ಕೊಪ್ಪಲು, ಹಾಗೂ ಸುತ್ತಮು ತ್ತಲ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಪಟ್ಟಣ ದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಚೆಸ್ಕಾಂನ ಕಾರ್ಯಪಾಲಕ ಇಂಜೀನಿಯರ್ ಟಿ ಪುಟ್ಟಸ್ವಾಮಿ ಅವರು ನೀಡಿ ರುವ ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ.1
- ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ. ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧುಗಂಗಾಧರ್ ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ. ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಈ ತಿಂಗಳು 17 ನೇ ತಾರೀಖಿನಿಂದ ಮುಂದಿನ ತಿಂಗಳು 17 ರವರಗೆ ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ ಎಂದರು. ಈ ವೇಳೆ ಬಿಜೆಪಿ ಅಧ್ಯಕ್ಷ ಮಧುಗಂಗಾಧರ್, ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.1
- ಯಳಂದೂರು ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಸರಳ ಆಚರಣೆ . ಯಳಂದೂರು ನ್ಯೂಸ್ ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು ಯಳಂದೂರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಯಳಂದೂರು ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚನ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ ಶ್ರೀ ವಿಶ್ವಕರ್ಮ ಜಯಂತಿ ಸಮಾರಂಭದ ಕಾರ್ಯಕ್ರಮದಲ್ಲಿ ಗಣ್ಯರು ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು ನಂತರ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಎಸ್ ಪುಷ್ಪಲತಾ ರವರು ಮಾತನಾಡಿ ವಿಶ್ವಕರ್ಮ ಜಯಂತಿ ಒಂದು ಜನಾಂಗಕ್ಕೆ ಸೀಮಿತವಾಗಿರುವುದು ದುರಂತ ಕಲೆ, ವಾಸ್ತುಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದುದ್ದು ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ’ ‘ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಿದಲ್ಲಿ ಸಮುದಾಯವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಅದರಿಂದ ಪ್ರತಿಯೊಬ್ಬ ನಾಗರಿಕರು ವಿಶ್ವಕರ್ಮರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಹೆಚ್. ವಿ . ಚಂದ್ರು, ತಾಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಪ್ರಭು ಪ್ರಸಾದ್, ತಹಸಿಲ್ದಾರ್ ಎಸ್. ಎಲ್ ನಯನ ಸಮಾರಂಭವನ್ನು ಉದ್ದೇಶಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ತಾಲೂಕ ಅಧ್ಯಕ್ಷ ನಾಗರಾಜು, ಪಟ್ಟಣ ಪಂಚಾಯಿತಿ ಪ್ರಭಾರ ಮುಖ್ಯ ಅಧಿಕಾರಿ ಮಹದೇವ ನಾಯಕ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಮೃತೇಶ್, ಶಿಕ್ಷಣ ಇಲಾಖೆ ಬಿ ಆರ್ ಪಿ ರೇಚಣ್ಣ, ಶಿವಣ್ಣಚಾರಿ ತಾಲೂಕಿನ ವಿಶ್ವಕರ್ಮ ಸಮಾಜದ ಮುಖಂಡರು, ಯುವಕರು, ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.1
- ಇತ್ತೀಚಿನ ಮಳೆಗೆ ಶಾಲೆಯ ಮೇಲ್ಚಾವಣಿ ಕುಸಿತ ಆತಂಕದಲ್ಲಿ ಶಾಲಾ ಮಕ್ಕಳು ಚಾಮರಾಜನಗರ:ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಸಣಾಪುರ ಇಲ್ಲಿನ ಶಾಲಾ ಕೊಠಡಿ ಹಳೆಯದಾಗಿದ್ದು ಇತ್ತೀಚಿಗೆ ಸುರಿಯುತ್ತಿರುವ ಬಾರಿಮಳೆಗೆ ಕೊಠಡಿಯ ಮೇಲ್ಚಾವಣಿ ಕುಸಿಯುತ್ತಿದ್ದು ಶಾಲಾ ಮಕ್ಕಳು ಮತ್ತು ಶಿಕ್ಷಕರು ಆತಂಕದಲ್ಲಿ ಶಾಲೆಯನ್ನು ಮುಂದುವರಿಸಬೇಕಾಗಿದೆ ಕಳೆದ ಬಾರಿಯು ಕೂಡ ಸಂಬಂಧಪಟ್ಟ ಇಲಾಖೆಗೆ ತಮ್ಮ ಸಮಸ್ಯೆಯನ್ನು ಹೇಳಿದರು ಕೂಡ ಇಲಾಖೆ ನಿರ್ಲಕ್ಷಯನ್ನು ತೂರುತ್ತಿದೆ. ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು ಶಿಕ್ಷಕರ ಕೊರತೆಯನ್ನು ನಿವಾರಿಸಲು ಇಲಾಖೆಯು ಮೀನಾಮೇಶ ಎನಿಸುತ್ತಿದೆ. ಕಳೆದ ಬಾರಿಯಿಂದಲೂ ಕೂಡ ಶಿಕ್ಷಕರ ಕೊರತೆ ಇದ್ದ ಮಕ್ಕಳ ಸಂಖ್ಯಾ ಶೇಕಡಾ ವಾರು ಶಿಕ್ಷಕರನ್ನು ಆಯೋಜನೆ ಮಾಡುವುದರಲ್ಲಿ ಸಂಬಂಧ ಪಟ್ಟ ಅಧಿಕಾರಿಯು ನಿರ್ಲಕ್ಷವನ್ನು ತೂರುತಿದ್ದಾರೆ ಎಂದು sdmc ಕಮಿಟಿಯ ಸದಸ್ಯರಾದ ಶಿವಕುಮಾರ. ಎನ್ ರವರು ದೂರಿನಲ್ಲಿ ತಿಳಿಸಿರುತ್ತಾರೆ.3
- All About,Requesting our Hon'ble Minister for #Waqf to hand#AnwarManipaddy and #UpaLokayuta report to #CBI for fair review *ಭಾರತ ನಲ್ಲಿ ವೈರಲ್*1