ಕೃಷ್ಣನಗರದಲ್ಲಿ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ : ಅಧ್ಯಕ್ಷ ಡಿ.ಕೆ.ಮೋಹನ್ ಕೆ.ಆರ್.ಪುರ: ಸ್ವಾಭಿಮಾನ ಬದುಕಿಗೆ ಕಾಂಗ್ರೆಸ್ ಪಕ್ಷ ದಾರಿದೀಪವಾಗಿದ್ದು, ಬಡವರು ಹಸಿಮುಕ್ತರಾಗಬೇಕು ಎಂದು ಅನ್ನಭಾಗ್ಯ ಯೋಜನೆ ತಂದಿದ್ದು ನಮ್ಮ ಕಾಂಗ್ರೆಸ್ ಸರ್ಕಾರ ಎಂದು ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಮೋಹನ್ ಅವರು ತಿಳಿಸಿದರು. ಕೆ.ಆರ್.ಪುರ ಕ್ಷೇತ್ರದ ಕೃಷ್ಣನಗರ ಜಿಬಿಎ ಆಕಾಂಕ್ಷಿ ಡಿ.ಕೆ.ಹರೀಶ್ ಅವರ ನೇತೃತ್ವದಲ್ಲಿ ಏರ್ಪಡಿಸಿದ್ದ ಯುಗಾದಿ ಹಾಗೂ ರಂಜಾನ್ ಪ್ರಯುಕ್ತ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಬಡವರಿಗೆ ಸಹಾಯಹಸ್ತವಾಗಿ ಆಹಾರ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಇದಾಗಿದ್ದು,ಮಹಿಳೆಯರಿಗಾಗಿ ಉತ್ತಮ ಯೋಜನೆಗಳು,ಬಡವರಿಗಾಗಿ ಅಕ್ಕಿ ವಿತರಣೆ ಸೇರಿದಂತೆ ಹಲವು ಭಾಗ್ಯಗಳಿಂದ ಜನಪರ ಆಡಳಿತ ನೀಡುತ್ತಿದೆ ಎಂದು ನುಡಿದರು. ಕಾಂಗ್ರೆಸ್ ಪಕ್ಷ ಜನಪರ ಕಾರ್ಯಕ್ರಮಗಳ ಮೂಲಕ ಬಡವರ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತಿರುವುದು ಎಂದು ಹೇಳಿದರು.ನಮ್ಮ ಮುಖಂಡರು ಕೊಡುವ ಈ ಕಿಟ್ ಗಳು ನಮ್ಮ ಮುಖಂಡರು ಸ್ವತಃ ಹಣದಿಂದ ಜನರ ಸೇವೆ ಮಾಡುತ್ತಿದ್ದಾರೆ ಎಂದರು. ಕೃಷ್ಣನಗರ ವಾರ್ಡನ ಜಿಬಿಎ ಆಕಾಂಕ್ಷಿ ಡಿ.ಕೆ.ಹರೀಶ್ ಅವರು ಮಾತನಾಡಿ, ಯುಗಾದಿ ಮತ್ತು ರಂಜಾನ್ ಎರಡು ಹಬ್ಬಗಳು ಕಳೆದ ಮೂರು ನಾಲ್ಕು ವರ್ಷಗಳಿಂದ ಒಟ್ಟಿಗೆ ಬರುತ್ತಿದೆ ಆದರಿಂದ ಬಡವರನ್ನ ಗುರ್ತಿಸಿ ಕಿಟ್ ಗಳನ್ನ ಕೊಡುತ್ತಿದ್ದೇವೆ. ನನ್ನ ಕೈಯಲ್ಲಾದ ಸಹಾಯವನ್ನ ಮಾಡಲಾಗುತ್ತಿದೆ.ಈ ಸಹಾಯವನ್ನ ಎಲ್ಲಾರೂ ಪಡೆದು ಹಬ್ಬವನ್ನ ಮಾಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಆಯೋಜಕ ಡಿ.ಕೆ.ಹರೀಶ್, ಮುಖಂಡರಾದ ಚನ್ನಕೇಶವ, ಬಾಲಕೃಷ್ಣ, ಆಂಜಿನಪ್ಪ, ಎಸ್ ಎಲ್ .ವಿ.ವೆಂಕಟೇಶ್, ಭರತ್, ರಾಜಹಂಸ, ಪ್ರವೀಣ್,ಸಂತೋಷ್ ಮತ್ತಿತರರಿದ್ದರು.
ಕೃಷ್ಣನಗರದಲ್ಲಿ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ : ಅಧ್ಯಕ್ಷ ಡಿ.ಕೆ.ಮೋಹನ್ ಕೆ.ಆರ್.ಪುರ: ಸ್ವಾಭಿಮಾನ ಬದುಕಿಗೆ ಕಾಂಗ್ರೆಸ್ ಪಕ್ಷ ದಾರಿದೀಪವಾಗಿದ್ದು, ಬಡವರು ಹಸಿಮುಕ್ತರಾಗಬೇಕು ಎಂದು ಅನ್ನಭಾಗ್ಯ ಯೋಜನೆ ತಂದಿದ್ದು ನಮ್ಮ ಕಾಂಗ್ರೆಸ್ ಸರ್ಕಾರ ಎಂದು ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಮೋಹನ್ ಅವರು ತಿಳಿಸಿದರು. ಕೆ.ಆರ್.ಪುರ ಕ್ಷೇತ್ರದ ಕೃಷ್ಣನಗರ ಜಿಬಿಎ ಆಕಾಂಕ್ಷಿ ಡಿ.ಕೆ.ಹರೀಶ್ ಅವರ ನೇತೃತ್ವದಲ್ಲಿ ಏರ್ಪಡಿಸಿದ್ದ ಯುಗಾದಿ ಹಾಗೂ ರಂಜಾನ್ ಪ್ರಯುಕ್ತ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಬಡವರಿಗೆ ಸಹಾಯಹಸ್ತವಾಗಿ ಆಹಾರ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಇದಾಗಿದ್ದು,ಮಹಿಳೆಯರಿಗಾಗಿ ಉತ್ತಮ ಯೋಜನೆಗಳು,ಬಡವರಿಗಾಗಿ ಅಕ್ಕಿ ವಿತರಣೆ ಸೇರಿದಂತೆ ಹಲವು ಭಾಗ್ಯಗಳಿಂದ ಜನಪರ ಆಡಳಿತ ನೀಡುತ್ತಿದೆ ಎಂದು ನುಡಿದರು. ಕಾಂಗ್ರೆಸ್ ಪಕ್ಷ ಜನಪರ ಕಾರ್ಯಕ್ರಮಗಳ ಮೂಲಕ ಬಡವರ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತಿರುವುದು ಎಂದು ಹೇಳಿದರು.ನಮ್ಮ ಮುಖಂಡರು ಕೊಡುವ ಈ ಕಿಟ್ ಗಳು ನಮ್ಮ ಮುಖಂಡರು ಸ್ವತಃ ಹಣದಿಂದ ಜನರ ಸೇವೆ ಮಾಡುತ್ತಿದ್ದಾರೆ ಎಂದರು. ಕೃಷ್ಣನಗರ ವಾರ್ಡನ ಜಿಬಿಎ ಆಕಾಂಕ್ಷಿ ಡಿ.ಕೆ.ಹರೀಶ್ ಅವರು ಮಾತನಾಡಿ, ಯುಗಾದಿ ಮತ್ತು ರಂಜಾನ್ ಎರಡು ಹಬ್ಬಗಳು ಕಳೆದ ಮೂರು ನಾಲ್ಕು ವರ್ಷಗಳಿಂದ ಒಟ್ಟಿಗೆ ಬರುತ್ತಿದೆ ಆದರಿಂದ ಬಡವರನ್ನ ಗುರ್ತಿಸಿ ಕಿಟ್ ಗಳನ್ನ ಕೊಡುತ್ತಿದ್ದೇವೆ. ನನ್ನ ಕೈಯಲ್ಲಾದ ಸಹಾಯವನ್ನ ಮಾಡಲಾಗುತ್ತಿದೆ.ಈ ಸಹಾಯವನ್ನ ಎಲ್ಲಾರೂ ಪಡೆದು ಹಬ್ಬವನ್ನ ಮಾಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಆಯೋಜಕ ಡಿ.ಕೆ.ಹರೀಶ್, ಮುಖಂಡರಾದ ಚನ್ನಕೇಶವ, ಬಾಲಕೃಷ್ಣ, ಆಂಜಿನಪ್ಪ, ಎಸ್ ಎಲ್ .ವಿ.ವೆಂಕಟೇಶ್, ಭರತ್, ರಾಜಹಂಸ, ಪ್ರವೀಣ್,ಸಂತೋಷ್ ಮತ್ತಿತರರಿದ್ದರು.
- ಹೈದರಾಬಾದ್ನ ಹೋಟೆಲ್ ಒಂದರಲ್ಲಿ ಆಹಾರಕ್ಕಾಗಿ ಬಂದ ಭಿಕ್ಷುಕನ ಮೇಲೆ ಸಿಬ್ಬಂದಿ ಬಿಸಿನೀರು ಸುರಿದಿರುವ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಇಬ್ರಾಹಿಂ ಖಾನ್ ವಿಡಿಯೋ ಮಾಡಿ ಬಹಿರಂಗಪಡಿಸಿದ ಬಳಿಕ ಅದು ವೈರಲ್ ಆಗಿದೆ. ಗ್ರಾಹಕರಿಗೆ ತೊಂದರೆ ಉಂಟುಮಾಡುತ್ತಿದ್ದಾನೆ ಎಂಬ ಕಾರಣ ಹೇಳಿ ಸಿಬ್ಬಂದಿ ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕೃತ್ಯವನ್ನು ಸಾಮಾಜಿಕ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದು, ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಘಟನೆ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ದೊಡ್ಡಬಳ್ಳಾಪುರ ಬಾಡಿಗೆ ಮನೆಯಲ್ಲಿ ವಾಸವಿರುವ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಘಟನೆ ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳ ಕಳ್ಳತನ ಲ್ಯಾಪ್ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ2
- ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕರಿಗೆ ಕೆ. ಕೃಷ್ಣಮೂರ್ತಿ ಸವಾಲು ಮಾಗಡಿ: ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಶಾಸಕರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿ ವಿಚಾರವಾಗಿ ಅವರು ಎಲ್ಲಿಗಾದರೂ ಬರಲಿ, ನಾವು ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಅವರು ಸವಾಲು ಹಾಕಿದ್ದಾರೆ. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆ.ಕೃಷ್ಣಮೂರ್ತಿ ಅವರ ಆರೋಪಗಳಿಗೆ ನಾನು ಉತ್ತರ ನೀಡುವ ಅಗತ್ಯವಿಲ್ಲ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ ಅವರನ್ನು ನಾನು ಗೆಲ್ಲಿಸಬೇಕಾದ ವೇಳೆ ನಾನು ಯಾರು ಎಂದು ಗೊತ್ತಿರಲಿಲ್ಲವೇ ಮಜಿ ಶಾಸಕರ ಆರೋಪಗಳಿಗೆ ನಮ್ಮ ಪಕ್ಷದ ಮುಖಂಡರು ಉತ್ತರ ನೀಡಲು ಸಿದ್ದರಿದ್ದೇವೆ, ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರ ಮೇಲೆ ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ನಾಯಕರಾದ ಬಾಲಣ್ಣನವರ ವ್ಯಕ್ತಿತ್ವದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಆರೋಪಗಳಿಗೆ ದಾಖಲೆ ನೀಡಲಿ: ಮಾಜಿ ಶಾಸಕರು ಮಾಡುತ್ತಿರುವ 600 ಕೋಟಿ ಹಗರಣ ಅಥವಾ ಗೌರಮ್ಮನಕೆರೆಯ ಮಣ್ಣು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಮಣ್ಣು ಮಾರಾಟ ಮಾಡಿ ಜೀವನ ನಡೆಸುವ ಅಗತ್ಯ ಶಾಸಕರಿಗಿಲ್ಲ ಇಂಥಹ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಅವರ ಬಳಿ ದಾಖಲೆಗಳಿದ್ದರೆ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು. ಚರ್ಚೆಗೆ ದಿನಾಂಕ ನಿಗದಿಪಡಿಸಿ: "ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾವಂತೂ ಸಿದ್ಧ. ಮಾಜಿ ಶಾಸಕರೇ ಅಥವಾ ಮಾಧ್ಯಮದವರೇ ಒಂದು ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಿ. ನಾವು ನಮ್ಮ ನಾಯಕರೊಂದಿಗೆ ಬಂದು ಪ್ರತಿಯೊಂದಕ್ಕೂ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಕೆ. ಕೃಷ್ಣಮೂರ್ತಿ ಹೇಳಿದರು. ಜನರೇ ತೀರ್ಪು ನೀಡುತ್ತಾರೆ: ನಾವು ಮಾಡಿದ ಕೆಲಸಗಳನ್ನು ನಾವೇ ಹೇಳಿಕೊಳ್ಳುವ ಅಗತ್ಯವಿಲ್ಲ, ಜನರು ಅದನ್ನು ಗಮನಿಸುತ್ತಿದ್ದಾರೆ. ಮಾಜಿ ಶಾಸಕರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು. ಕಾಂಗ್ರೆಸ್ ಮುಖಂಡರಾದ ಅಗ್ರೋ ಪುರುಷೋತ್ತಮ್, ಶಿವಕುಮಾರು, ಕಲ್ಕೆರೆ ಶಿವಣ್ಣ, ವೆಂಕಟೇಶ್ ಇತರರು ಇದ್ದರು. 1
- Tod ಶ್ರೀನಿವಾಸಪುರ ತಾಲ್ಲೂಕಿನ ವಳಗೇರನಹಳ್ಳಿ ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತವಾಗಿ ರಸ್ತೆ ಬಳಿ ಉರುಳಿ ಬಿದ್ದಿದ್ದು ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಜೆಡಿಎಸ್ ಮುಖಂಡರಾದ ಸಿ.ಎಂ.ಆರ್ ಶ್ರೀನಾಥ್ ಅಣ್ಣನವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಧೈರ್ಯ ತುಂಬಿ ನಂತರ ಅಲ್ಲಿಂದಲೇ ಪೊಲೀಸ್ ಇಲಾಖೆಗೆ ಮಾಹಿತಿ ತಿಳಿಸಿ ನಂತರ ಕೆ.ಎಸ್.ಆರ್.ಟಿ.ಸಿ ಡಿ.ಸಿ ರವರಿಗೆ ಕರೆ ಮಾಡಿ ಸಮಸ್ಯೆಯ ಬಗ್ಗೆ ವಿವರಿಸಿ ತಕ್ಷಣ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಲಹೆ ನೀಡಿದರು... true news kolar1
- KOLAR KI.AWAAZ KOUSAR NEWS1
- Post by Venu Gopal2
- ಸುಳ್ಳು ಹೇಳುತ್ತಿದ್ದಾರೆ ನನ್ನ ಬಗ್ಗೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬಂದು ಸತ್ಯವನ್ನ ಹೇಳಿಕೊಂಡ ಎ ಪಿ ರಾಘವ್ ಚಡ್ಡಾ1