logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಯಚೂರು ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ರೈತರು ಪತ್ರಿಕಾ ಭವನದಲ್ಲಿ ಆಗ್ರಹ ರಾಯಚೂರು, ಜು.31: ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರ ಹಿತದೃಷ್ಟಿಯಿಂದ ರಾಯಚೂರು ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತ ಹೋರಾಟಗಾರ ಹಾಗೂ ಸಂಯುಕ್ತ ಕಿಸಾನ್ ಪಾರ್ಟಿ ರಾಜ್ಯಾಧ್ಯಕ್ಷ ಚಾಮರಾಸ ಮಾಲಿಪಾಟೀಲ್ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಲವು ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರ ಹಿನ್ನಡೆಯಾಗಿವೆ. ಜಿಲ್ಲೆಯಲ್ಲಿ ಶೇ.38ರಷ್ಟು ಮಾತ್ರ ಬಿತ್ತನೆ ನಡೆದಿದ್ದು, ಅದರಲ್ಲಿ ಶೇ.19ರಷ್ಟು ಬೆಳೆ ನಷ್ಟವಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರು ಬೆಳೆ ಒಣಗುತ್ತಿರುವುದರಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮೀಣ ಕೂಲಿ ಕಾರ್ಮಿಕರು ಸಹ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಹತ್ತಿ ಸೇರಿದಂತೆ ಅಲ್ಪಾವಧಿ ಬೆಳೆಗಳು ಒಣಗುತ್ತಿದ್ದು, ಜಲಾಶಯಗಳಲ್ಲೂ ನೀರಿನ ಸಂಗ್ರಹಣೆ ಕುಸಿದಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಅವ್ಯವಹಾರ ನಡೆಯುತ್ತಿದೆಯಾದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹಲವು ಬಾರಿ ಹೋರಾಟ ಹಾಗೂ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಜೆಸ್ಕಾಂ ಮುಖ್ಯ ಇಂಜಿನಿಯರ್ ರೈತರ ಸಮಸ್ಯೆಗಳ ಕುರಿತು ಬೇಜವಾಬ್ದಾರಿಯುತ ಹೇಳಿಕೆ ನೀಡಿರುವುದನ್ನು ತೀವ್ರವಾಗಿ ಖಂಡಿಸಿದ ಅವರು, ರೈತರ ಮನವಿಗಳಿಗೆ ಯಾವುದೇ ಬೆಲೆ ನೀಡದ ಅಧಿಕಾರಿಗಳ ವರ್ತನೆ ಖಂಡನೀಯವಾಗಿದೆ. ಜನರ ತೆರಿಗೆ ಹಣದಿಂದ ವೇತನ ಪಡೆಯುವ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಭೂಪಾಲ್‌ನಲ್ಲಿ ಅಲ್ಲಾಪ್ರಭು ಸೇರಿದಂತೆ ಆರು ರೈತರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದ ಅವರು, ನೀಟ್ ಅಕ್ರಮ ಸೇರಿದಂತೆ ದೇಶದ ಹಲವು ಗಂಭೀರ ಸಮಸ್ಯೆಗಳ ಬಗ್ಗೆ ಸರ್ಕಾರಗಳು ತಕ್ಷಣ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಗಾಂಧೀಜಿ ನೀಡಿದ್ದ "ಭಾರತ ಬಿಟ್ಟು ತೊಲಗಿ" ಘೋಷಣೆಯ ಮಾದರಿಯಲ್ಲಿ "ಭ್ರಷ್ಟ ಅಧಿಕಾರಿಗಳೇ, ಬಹುರಾಷ್ಟ್ರೀಯ ಕಂಪನಿಗಳೇ, ಭಾರತ ಬಿಟ್ಟು ತೊಲಗಿ" ಎಂಬ ಘೋಷಣೆಯೊಂದಿಗೆ ಆಗಸ್ಟ್ 10ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಂಯುಕ್ತ ಕಿಸಾನ್ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮಲ್ಲಣ್ಣ ದಿನ್ನಿ, ಮಲ್ಲಯ್ಯ ಚಂದ್ರಬಂಡ, ಬೂದೆಯ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

17 hrs ago
user_K2 kannada News
K2 kannada News
ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
17 hrs ago

ರಾಯಚೂರು ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ರೈತರು ಪತ್ರಿಕಾ ಭವನದಲ್ಲಿ ಆಗ್ರಹ ರಾಯಚೂರು, ಜು.31: ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರ ಹಿತದೃಷ್ಟಿಯಿಂದ ರಾಯಚೂರು ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತ ಹೋರಾಟಗಾರ ಹಾಗೂ ಸಂಯುಕ್ತ ಕಿಸಾನ್ ಪಾರ್ಟಿ ರಾಜ್ಯಾಧ್ಯಕ್ಷ ಚಾಮರಾಸ ಮಾಲಿಪಾಟೀಲ್ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಲವು ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರ ಹಿನ್ನಡೆಯಾಗಿವೆ. ಜಿಲ್ಲೆಯಲ್ಲಿ ಶೇ.38ರಷ್ಟು ಮಾತ್ರ ಬಿತ್ತನೆ ನಡೆದಿದ್ದು, ಅದರಲ್ಲಿ ಶೇ.19ರಷ್ಟು ಬೆಳೆ ನಷ್ಟವಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರು ಬೆಳೆ ಒಣಗುತ್ತಿರುವುದರಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮೀಣ ಕೂಲಿ ಕಾರ್ಮಿಕರು ಸಹ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಹತ್ತಿ ಸೇರಿದಂತೆ ಅಲ್ಪಾವಧಿ ಬೆಳೆಗಳು ಒಣಗುತ್ತಿದ್ದು, ಜಲಾಶಯಗಳಲ್ಲೂ ನೀರಿನ ಸಂಗ್ರಹಣೆ ಕುಸಿದಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಅವ್ಯವಹಾರ ನಡೆಯುತ್ತಿದೆಯಾದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹಲವು ಬಾರಿ ಹೋರಾಟ ಹಾಗೂ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಜೆಸ್ಕಾಂ ಮುಖ್ಯ ಇಂಜಿನಿಯರ್ ರೈತರ ಸಮಸ್ಯೆಗಳ ಕುರಿತು ಬೇಜವಾಬ್ದಾರಿಯುತ ಹೇಳಿಕೆ ನೀಡಿರುವುದನ್ನು ತೀವ್ರವಾಗಿ ಖಂಡಿಸಿದ ಅವರು, ರೈತರ ಮನವಿಗಳಿಗೆ ಯಾವುದೇ ಬೆಲೆ ನೀಡದ ಅಧಿಕಾರಿಗಳ ವರ್ತನೆ ಖಂಡನೀಯವಾಗಿದೆ. ಜನರ ತೆರಿಗೆ ಹಣದಿಂದ ವೇತನ ಪಡೆಯುವ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಭೂಪಾಲ್‌ನಲ್ಲಿ ಅಲ್ಲಾಪ್ರಭು ಸೇರಿದಂತೆ ಆರು ರೈತರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದ ಅವರು, ನೀಟ್ ಅಕ್ರಮ ಸೇರಿದಂತೆ ದೇಶದ ಹಲವು ಗಂಭೀರ ಸಮಸ್ಯೆಗಳ ಬಗ್ಗೆ ಸರ್ಕಾರಗಳು ತಕ್ಷಣ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಗಾಂಧೀಜಿ ನೀಡಿದ್ದ "ಭಾರತ ಬಿಟ್ಟು ತೊಲಗಿ" ಘೋಷಣೆಯ ಮಾದರಿಯಲ್ಲಿ "ಭ್ರಷ್ಟ ಅಧಿಕಾರಿಗಳೇ, ಬಹುರಾಷ್ಟ್ರೀಯ ಕಂಪನಿಗಳೇ, ಭಾರತ ಬಿಟ್ಟು ತೊಲಗಿ" ಎಂಬ ಘೋಷಣೆಯೊಂದಿಗೆ ಆಗಸ್ಟ್ 10ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಂಯುಕ್ತ ಕಿಸಾನ್ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮಲ್ಲಣ್ಣ ದಿನ್ನಿ, ಮಲ್ಲಯ್ಯ ಚಂದ್ರಬಂಡ, ಬೂದೆಯ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಅಕ್ರಮ ವಿದ್ಯುತ್ ಸಂಪರ್ಕ ನೀಡಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಆರೋಪ ರಾಯಚೂರು, ಜು.31: ಹಜರತ್ ಸೈಯದ್ ಶಾ ಶಮ್ಸ್ ಆಲಂ ಹುಸೈನಿ ದರ್ಗಾ ಉರ್ಸ್–2026ಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡುವಲ್ಲಿ ಜೆಸ್ಕಾಂ ಅಧಿಕಾರಿಗಳು ಇಲಾಖೆಯ ಮೇಲಾಧಿಕಾರಿಗಳ ಲಿಖಿತ ಆದೇಶಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಡೆದುಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಅಂಬಾಜಿ ರಾವು ಗಂಭೀರ ಆರೋಪ ಮಾಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರ್ಗಾದ ಅಧಿಕೃತ ಮುತ್ತವಲಿಯವರ ಅನುಮತಿ ಪತ್ರ (ಎನ್‌ಒಸಿ) ಪಡೆಯದೆ ಯಾವುದೇ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಮುಖ್ಯ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ಸ್ಪಷ್ಟ ನಿರ್ದೇಶನ ನೀಡಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಧಿಕ್ಕರಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ ಎಂದು ದೂರಿದರು. ಈ ಕುರಿತು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಲಿಖಿತ ದೂರು ಮತ್ತು ಇ-ಮೇಲ್ ಮೂಲಕ ಮಾಹಿತಿ ನೀಡಿದ್ದರೂ, ಯಾವುದೇ ಕ್ರಮ ಕೈಗೊಳ್ಳದೇ ಸಂಬಂಧಪಟ್ಟ ಅಧಿಕಾರಿಗಳ ಪರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಉರ್ಸ್ ಸಂದರ್ಭದಲ್ಲಿ ಯಾವುದೇ ಇಲಾಖೆಯ ಅನುಮತಿ ಪಡೆಯದೆ ಜೂಲಾಗಳು ಹಾಗೂ ವ್ಯಾಪಾರ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದವು. ಆರಂಭದಲ್ಲಿ ಎಲ್ಲಾ ಅಗತ್ಯ ಅನುಮತಿಗಳು ಪಡೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಆದರೆ ನಂತರ ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿದಾಗ ಯಾವುದೇ ಅನುಮತಿ ನೀಡಿಲ್ಲ ಹಾಗೂ ಸರ್ಕಾರದ ಖಜಾನೆಗೆ ನಿಗದಿತ ಶುಲ್ಕವೂ ಪಾವತಿಯಾಗಿಲ್ಲ ಎಂಬುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾತ್ರಿ ಅಕ್ರಮ ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಯಿತು ಎಂದು ತಿಳಿಸಿದರು. ಭ್ರಷ್ಟಾಚಾರದ ಆರೋಪ ಎದುರಿಸಿದ್ದ ಅಧಿಕಾರಿಗೆ ಮತ್ತೆ ರಾಯಚೂರಿನಲ್ಲೇ ಪದೋನ್ನತಿಯೊಂದಿಗೆ ನೇಮಕ ನೀಡಿರುವುದು ಸಾರ್ವಜನಿಕರ ದುರಾದೃಷ್ಟಕರ ಸಂಗತಿಯಾಗಿದೆ ಎಂದು ಆರೋಪಿಸಿದ ಅವರು, ಇಂತಹ ಅಧಿಕಾರಿಗಳನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು. ಪ್ರಕರಣವನ್ನು ಸ್ವತಂತ್ರ ಹಾಗೂ ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ, ಮೇಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಇಲಾಖಾ ಹಾಗೂ ಕಾನೂನು ಕ್ರಮ ಜರುಗಿಸಬೇಕು. ಅನುಮತಿ ಇಲ್ಲದೆ ವ್ಯಾಪಾರ ನಡೆಸಲು ಅವಕಾಶ ನೀಡಿದ ಅಧಿಕಾರಿಗಳ ಪಾತ್ರವನ್ನೂ ತನಿಖೆ ನಡೆಸಿ, ಕರ್ತವ್ಯಲೋಪ ಎಸಗಿದ ಎಲ್ಲ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಸೂದ್ ಅಲಿ, ಮೊಹಮ್ಮದ್ ಅಲೀಂ ಹಾಗೂ ರಘು ನನ್ನೋರೆ ಉಪಸ್ಥಿತರಿದ್ದರು.
    1
    ಅಕ್ರಮ ವಿದ್ಯುತ್ ಸಂಪರ್ಕ ನೀಡಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಆರೋಪ
ರಾಯಚೂರು, ಜು.31: ಹಜರತ್ ಸೈಯದ್ ಶಾ ಶಮ್ಸ್ ಆಲಂ ಹುಸೈನಿ ದರ್ಗಾ ಉರ್ಸ್–2026ಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡುವಲ್ಲಿ ಜೆಸ್ಕಾಂ ಅಧಿಕಾರಿಗಳು ಇಲಾಖೆಯ ಮೇಲಾಧಿಕಾರಿಗಳ ಲಿಖಿತ ಆದೇಶಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಡೆದುಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಅಂಬಾಜಿ ರಾವು ಗಂಭೀರ ಆರೋಪ ಮಾಡಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರ್ಗಾದ ಅಧಿಕೃತ ಮುತ್ತವಲಿಯವರ ಅನುಮತಿ ಪತ್ರ (ಎನ್‌ಒಸಿ) ಪಡೆಯದೆ ಯಾವುದೇ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಮುಖ್ಯ ಅಭಿಯಂತರರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ಸ್ಪಷ್ಟ ನಿರ್ದೇಶನ ನೀಡಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಧಿಕ್ಕರಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ ಎಂದು ದೂರಿದರು.
ಈ ಕುರಿತು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಲಿಖಿತ ದೂರು ಮತ್ತು ಇ-ಮೇಲ್ ಮೂಲಕ ಮಾಹಿತಿ ನೀಡಿದ್ದರೂ, ಯಾವುದೇ ಕ್ರಮ ಕೈಗೊಳ್ಳದೇ ಸಂಬಂಧಪಟ್ಟ ಅಧಿಕಾರಿಗಳ ಪರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉರ್ಸ್ ಸಂದರ್ಭದಲ್ಲಿ ಯಾವುದೇ ಇಲಾಖೆಯ ಅನುಮತಿ ಪಡೆಯದೆ ಜೂಲಾಗಳು ಹಾಗೂ ವ್ಯಾಪಾರ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದವು. ಆರಂಭದಲ್ಲಿ ಎಲ್ಲಾ ಅಗತ್ಯ ಅನುಮತಿಗಳು ಪಡೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಆದರೆ ನಂತರ ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿದಾಗ ಯಾವುದೇ ಅನುಮತಿ ನೀಡಿಲ್ಲ ಹಾಗೂ ಸರ್ಕಾರದ ಖಜಾನೆಗೆ ನಿಗದಿತ ಶುಲ್ಕವೂ ಪಾವತಿಯಾಗಿಲ್ಲ ಎಂಬುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾತ್ರಿ ಅಕ್ರಮ ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಯಿತು ಎಂದು ತಿಳಿಸಿದರು.
ಭ್ರಷ್ಟಾಚಾರದ ಆರೋಪ ಎದುರಿಸಿದ್ದ ಅಧಿಕಾರಿಗೆ ಮತ್ತೆ ರಾಯಚೂರಿನಲ್ಲೇ ಪದೋನ್ನತಿಯೊಂದಿಗೆ ನೇಮಕ ನೀಡಿರುವುದು ಸಾರ್ವಜನಿಕರ ದುರಾದೃಷ್ಟಕರ ಸಂಗತಿಯಾಗಿದೆ ಎಂದು ಆರೋಪಿಸಿದ ಅವರು, ಇಂತಹ ಅಧಿಕಾರಿಗಳನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರಕರಣವನ್ನು ಸ್ವತಂತ್ರ ಹಾಗೂ ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ, ಮೇಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಇಲಾಖಾ ಹಾಗೂ ಕಾನೂನು ಕ್ರಮ ಜರುಗಿಸಬೇಕು. ಅನುಮತಿ ಇಲ್ಲದೆ ವ್ಯಾಪಾರ ನಡೆಸಲು ಅವಕಾಶ ನೀಡಿದ ಅಧಿಕಾರಿಗಳ ಪಾತ್ರವನ್ನೂ ತನಿಖೆ ನಡೆಸಿ, ಕರ್ತವ್ಯಲೋಪ ಎಸಗಿದ ಎಲ್ಲ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಸೂದ್ ಅಲಿ, ಮೊಹಮ್ಮದ್ ಅಲೀಂ ಹಾಗೂ ರಘು ನನ್ನೋರೆ ಉಪಸ್ಥಿತರಿದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    16 hrs ago
  • ಜನಪ್ರತಿನಿಧಿಗಳ ನಿರ್ದೇಶನ ಜಾರಿಗೆ ಒತ್ತಾಯ: ಮಾನ್ವಿ ನಾಗರಿಕ ವೇದಿಕೆ ಒಂದು ವಾರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ಮಾನ್ವಿ ಪಟ್ಟಣದಲ್ಲಿ ವತಿಯಿಂದ ನಡೆಯುತ್ತಿರುವ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಬಂಧಿತ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಮಾನ್ವಿ ನಾಗರಿಕ ಹಿತ ರಕ್ಷಣಾ ವೇದಿಕೆ ಆರೋಪಿಸಿದೆ. ಸಭೆಯಲ್ಲಿ ನಿರ್ದೇಶನ, ಆದರೆ ಜಾರಿಯಿಲ್ಲ : ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯ ರಾದ ಎನ್. ಎಸ್. ಬೋಸರಾಜು ಮತ್ತು ಮಾನ್ಸಿ ಶಾಸಕರಾದ ಶ್ರೀ ಜಿ. ಹಂಪಯ್ಯ ನಾಯಕ ಸಾಹುಕಾರ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ 8 ಪ್ರಮುಖ ಬೇಡಿಕೆಗಳ ಕುರಿತು ಚರ್ಚಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾ ಗಿತ್ತು. ಆದರೆ ಆ ನಿರ್ದೇಶನಗಳು ಇದುವರೆಗೆ ಜಾರಿಯಾಗಿಲ್ಲ ಎಂದು ವೇದಿಕೆ ತಿಳಿಸಿದೆ. ಆಟೋ ನಗರದಿಂದ ಹೌಸಿಂಗ್ ಬೋರ್ಡ್ ವರೆಗೆ 2002ರಲ್ಲಿ ಭೂಸ್ವಾ ಧೀನ ಮಾಡಿಕೊಂಡ ಜಾಗದಲ್ಲಿ ತಕ್ಷಣ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಸರ್ವೇ ನಡೆಸಬೇಕು. ರಸ್ತೆ ಮಧ್ಯದಲ್ಲಿರುವ ಅಪಾಯಕಾರಿ ಹಾಗೂ ವಿಷಕಾರಿ ಮರಗಳನ್ನು ತೆರವುಗೊಳಿಸಬೇಕು. ರಸ್ತೆ ಅಗಲೀಕರಣ ಕಡಿಮೆ ಮಾಡಿರುವ ಸ್ಥಳಗಳನ್ನು ಮರುಪರಿಶೀಲಿಸಿ ಸರಿಪಡಿಸಬೇಕು. ಬಸವೇಶ್ವರ, ಅಂಬೇಡ್ಕರ್, ಗಾಂಧಿ ಜಿ, ವಾಲ್ಮೀಕಿ, ಮೇಜರ್ ಶಾನವಾ ಜ್ ಖಾನ್ ವೃತ್ತಗಳ ಅಗಲೀಕರಣ ಮತ್ತು ಸುಂದರೀಕರಣ ಕಾಮಗಾರಿ ಆರಂಭಿಸಬೇಕು. ವೈಜ್ಞಾನಿಕ ಡೈನೇ ಜ್ ವ್ಯವಸ್ಥೆ ನಿರ್ಮಿಸಿ ಮಳೆ ನೀರು ಸರಾಗವಾಗಿ ಮಾಡಬೇಕು. ಹರಿಯುವಂತೆ ಸಿಂಧನೂರು ಮಾದರಿಯಲ್ಲಿ ಭೂಗತ ವಿದ್ಯುತ್ ಕೇಬಲ್ ಅಳವಡಿಸಿ, ತೂಗು ತಂತಿ ತೆರವುಗೊಳಿಸಬೇಕು. ಕಾಮಗಾರಿಯ ಪ್ರತಿ ಹಂತದಲ್ಲೂ ನಾಗರಿಕ ವೇದಿಕೆಯೊಂದಿಗೆ ಸಮನ್ವಯ ಸಾಧಿಸಬೇಕು. 8. ವರದಿ: ನೀಡಿದ ನಿರ್ದೇಶನಗಳ ಅನುಷ್ಠಾನದ ಕುರಿತು ಲಿಖಿತ ಮಾಹಿತಿ ನೀಡಬೇಕು. ಸಭೆಯಲ್ಲಿ ಭರವಸೆಗಳು ಹಾಗೂ ನಿರ್ದೇ ಶನಗಳನ್ನು ನಿಗದಿತ ಕಾಲಮಿತಿಯಲ್ಲಿ ನೀಡಿದ ಅನುಷ್ಠಾನಗೊಳಿಸದಿದ್ದರೆ, ಒಂದು ವಾರದ ನಂತರ ಮಾನ್ವಿ ಜನತೆಯೊಂ ದಿಗೆ ಸೇರಿ ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಉಗ್ರ ಹೋರಾಟ ಹಮ್ಮಿ ಕೊಳ್ಳಲಾಗುವುದು ಎಂದು ಮಾನ್ವಿನಾಗರಿಕ ಹಿತ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ. ಈ ಕುರಿತು ತಹಸೀಲ್ದಾರರಿಗೆ ಲಿಖಿತ ಮನವಿಯನ್ನು ಸಲ್ಲಿಸಲಾಗಿದೆ. ಈ ವಿಳಂಬದಿಂದ ಉಂಟಾಗುವ ಎಲ್ಲಾ ಬೆಳವಣಿಗೆಗಳಿಗೆ ಆಡಳಿತ ವರ್ಗ ಹಾಗೂ ಸಂಬಂಧಿಸಿದ ಅಧಿಕಾರಿಗಳೇ ಹೊಣೆಗಾರರಾ ಗಿರುತ್ತಾರೆ ಎಂದು ವೇದಿಕೆ ತಿಳಿಸಿದೆ.
    3
    ಜನಪ್ರತಿನಿಧಿಗಳ ನಿರ್ದೇಶನ ಜಾರಿಗೆ ಒತ್ತಾಯ: ಮಾನ್ವಿ ನಾಗರಿಕ ವೇದಿಕೆ ಒಂದು ವಾರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
ಮಾನ್ವಿ ಪಟ್ಟಣದಲ್ಲಿ ವತಿಯಿಂದ ನಡೆಯುತ್ತಿರುವ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಬಂಧಿತ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಮಾನ್ವಿ ನಾಗರಿಕ ಹಿತ ರಕ್ಷಣಾ ವೇದಿಕೆ ಆರೋಪಿಸಿದೆ.
ಸಭೆಯಲ್ಲಿ ನಿರ್ದೇಶನ, ಆದರೆ ಜಾರಿಯಿಲ್ಲ : ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯ
ರಾದ ಎನ್. ಎಸ್. ಬೋಸರಾಜು ಮತ್ತು ಮಾನ್ಸಿ ಶಾಸಕರಾದ ಶ್ರೀ ಜಿ. ಹಂಪಯ್ಯ ನಾಯಕ ಸಾಹುಕಾರ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ 8 ಪ್ರಮುಖ ಬೇಡಿಕೆಗಳ ಕುರಿತು ಚರ್ಚಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾ ಗಿತ್ತು. ಆದರೆ ಆ ನಿರ್ದೇಶನಗಳು ಇದುವರೆಗೆ ಜಾರಿಯಾಗಿಲ್ಲ ಎಂದು ವೇದಿಕೆ ತಿಳಿಸಿದೆ.
ಆಟೋ ನಗರದಿಂದ ಹೌಸಿಂಗ್ ಬೋರ್ಡ್ ವರೆಗೆ 2002ರಲ್ಲಿ ಭೂಸ್ವಾ ಧೀನ ಮಾಡಿಕೊಂಡ
ಜಾಗದಲ್ಲಿ ತಕ್ಷಣ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಸರ್ವೇ ನಡೆಸಬೇಕು. ರಸ್ತೆ ಮಧ್ಯದಲ್ಲಿರುವ ಅಪಾಯಕಾರಿ ಹಾಗೂ ವಿಷಕಾರಿ ಮರಗಳನ್ನು ತೆರವುಗೊಳಿಸಬೇಕು.
ರಸ್ತೆ ಅಗಲೀಕರಣ ಕಡಿಮೆ ಮಾಡಿರುವ ಸ್ಥಳಗಳನ್ನು ಮರುಪರಿಶೀಲಿಸಿ ಸರಿಪಡಿಸಬೇಕು. ಬಸವೇಶ್ವರ, ಅಂಬೇಡ್ಕರ್, ಗಾಂಧಿ ಜಿ, ವಾಲ್ಮೀಕಿ, ಮೇಜರ್ ಶಾನವಾ ಜ್ ಖಾನ್ ವೃತ್ತಗಳ ಅಗಲೀಕರಣ ಮತ್ತು ಸುಂದರೀಕರಣ ಕಾಮಗಾರಿ ಆರಂಭಿಸಬೇಕು. ವೈಜ್ಞಾನಿಕ ಡೈನೇ ಜ್ ವ್ಯವಸ್ಥೆ ನಿರ್ಮಿಸಿ ಮಳೆ ನೀರು
ಸರಾಗವಾಗಿ ಮಾಡಬೇಕು. ಹರಿಯುವಂತೆ
ಸಿಂಧನೂರು ಮಾದರಿಯಲ್ಲಿ ಭೂಗತ ವಿದ್ಯುತ್ ಕೇಬಲ್ ಅಳವಡಿಸಿ, ತೂಗು ತಂತಿ ತೆರವುಗೊಳಿಸಬೇಕು. ಕಾಮಗಾರಿಯ ಪ್ರತಿ ಹಂತದಲ್ಲೂ ನಾಗರಿಕ ವೇದಿಕೆಯೊಂದಿಗೆ ಸಮನ್ವಯ ಸಾಧಿಸಬೇಕು. 8. ವರದಿ: ನೀಡಿದ ನಿರ್ದೇಶನಗಳ ಅನುಷ್ಠಾನದ ಕುರಿತು ಲಿಖಿತ ಮಾಹಿತಿ ನೀಡಬೇಕು.
ಸಭೆಯಲ್ಲಿ ಭರವಸೆಗಳು ಹಾಗೂ ನಿರ್ದೇ ಶನಗಳನ್ನು ನಿಗದಿತ ಕಾಲಮಿತಿಯಲ್ಲಿ ನೀಡಿದ
ಅನುಷ್ಠಾನಗೊಳಿಸದಿದ್ದರೆ, ಒಂದು ವಾರದ ನಂತರ ಮಾನ್ವಿ ಜನತೆಯೊಂ ದಿಗೆ ಸೇರಿ ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಉಗ್ರ ಹೋರಾಟ ಹಮ್ಮಿ ಕೊಳ್ಳಲಾಗುವುದು ಎಂದು ಮಾನ್ವಿನಾಗರಿಕ ಹಿತ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.
ಈ ಕುರಿತು ತಹಸೀಲ್ದಾರರಿಗೆ ಲಿಖಿತ ಮನವಿಯನ್ನು ಸಲ್ಲಿಸಲಾಗಿದೆ. ಈ ವಿಳಂಬದಿಂದ ಉಂಟಾಗುವ ಎಲ್ಲಾ ಬೆಳವಣಿಗೆಗಳಿಗೆ ಆಡಳಿತ ವರ್ಗ ಹಾಗೂ ಸಂಬಂಧಿಸಿದ ಅಧಿಕಾರಿಗಳೇ ಹೊಣೆಗಾರರಾ ಗಿರುತ್ತಾರೆ ಎಂದು ವೇದಿಕೆ ತಿಳಿಸಿದೆ.
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    3 hrs ago
  • ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ ದಿನಾಂಕ: 31-07-2026 ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 📰 ಜಾಲಹಳ್ಳಿ–ದೇವದುರ್ಗ ಬ್ರೇಕಿಂಗ್ ನ್ಯೂಸ್ ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ ದಿನಾಂಕ: 31-07-2026 ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಣವೇ ಭವಿಷ್ಯದ ಬುನಾದಿ ವಿಶೇಷ ಉಪನ್ಯಾಸ ನೀಡಿದ ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ ಅವರು, "ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ. ಸಮಯದ ಸದ್ಬಳಕೆ ಮಾಡಿಕೊಂಡು ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬಹುದು. ವಿದ್ಯಾರ್ಥಿಗಳು ಕಾಲೇಜು, ಪೋಷಕರು ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು" ಎಂದು ಕರೆ ನೀಡಿದರು ಮುಖ್ಯ ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶ್ರೀ ಸಿದ್ದನಗೌಡ ಮಾಲಿ ಪಾಟೀಲ (ಬಾಗೂರು) ಅವರು ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು ಅತ್ಯಗತ್ಯ. ಪೋಷಕರು ಕಷ್ಟಪಟ್ಟು ಮಕ್ಕಳನ್ನು ಓದಿಸುತ್ತಿದ್ದು, ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿ ಅವರ ಹೆಸರು ತರಬೇಕು ಎಂದರು. ನಿವೃತ್ತ ಪ್ರಾಚಾರ್ಯ ಶ್ರೀ ಉಮೇಶ್ ಹೆಸರೂರು ಅವರು, ಮಾತನಾಡಿ ಕಠಿಣ ಪರಿಶ್ರಮ ಮತ್ತು ಗುರಿಯೊಂದಿಗೆ ವ್ಯಾಸಂಗ ಮಾಡಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು. --_----------------- ಬಾಕ್ಸ್ ನಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್ ಅವರು, ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅವರು ಹೇಳಿದ ಸಂದೇಶ ಎಲ್ಲರ ಗಮನ ಸೆಳೆಯಿತು: «"ಮೊಬೈಲ್ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ನೋಡು, ನಾನು ನಿನಗೆ ತಲೆ ತಗ್ಗಿಸುವಂತೆ ಮಾಡುತ್ತೇನೆ. ಪುಸ್ತಕ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ಓದು, ನಾನು ನಿನಗೆ ತಲೆ ಎತ್ತುವಂತೆ ಮಾಡುತ್ತೇನೆ."»ಪುಸ್ತಕ ಓದುವದು ಕಡೆ ಹೆಚ್ಚು ಗಮನ ಹರಿಸಿ ಎಂದು ಹೇಳಿದರು ----------------===- ಬಾಕ್ಸ್ ನಲ್ಲಿ ಅಧ್ಯಕ್ಷೀಯ ಭಾಷಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಮಾತನಾಡಿ, ಜಾಲಹಳ್ಳಿ ಕಾಲೇಜು ಇಂದು ಉತ್ತಮ ಮಟ್ಟಕ್ಕೆ ಬೆಳೆಯಲು ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು ಅವರ ಸೇವೆ ಮತ್ತು ದೂರದೃಷ್ಟಿಯೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು. 2006ರಲ್ಲಿ ಆರಂಭವಾದ ಕಾಲೇಜಿನ ಬೆಳವಣಿಗೆಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಿದರು. ------------------- ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಅವರು, ಮಾತನಾಡಿ ಜಾಲಹಳ್ಳಿ ಶಾಲೆಯಲ್ಲಿ ಓದಿದ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಅಧಿಕಾರಿಗಳಾಗಿದ್ದಾರೆ. ನೂತನ ವಿದ್ಯಾರ್ಥಿಗಳು ಕೂಡ ಅದೇ ರೀತಿಯಲ್ಲಿ ಸಾಧನೆ ಮಾಡಬೇಕು ಎಂದು ಪ್ರೋತ್ಸಾಹಿಸಿದರು. ಪತ್ರಕರ್ತ ಶ್ರೀ ಮೌನೇಶ್ ಜಾಲಹಳ್ಳಿ ಅವರು ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ಕರೆ ನೀಡಿದರು. ಭೂದಾನಿಗಳು ಹಾಗೂ ಸಾಧಕರಿಗೆ ಸನ್ಮಾನ ಕಾಲೇಜಿಗೆ ಜಾಗವನ್ನು ದಾನವಾಗಿ ನೀಡಿದ ಉದಾರ ಮನಸ್ಸಿನ ಶ್ರೀ ಅಮರೇಶ ತಂದೆ ನೀಲಕಂಠಪ್ಪ ಮೆಣಸಿನಕಾಯಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಇದೆ ವೇಳೆ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಅವರಿಗೆ ಸನ್ಮಾನ ಮಾಡಲಾಯಿತು, ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು)ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಬಹುಮಾನ ವಿತರಿಸಲಾಯಿತು. - ಶ್ರೀದೇವಿ ಶರಣಪ್ಪ (ಜಾಲಹಳ್ಳಿ) – 564 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ. ರಾಜ್ಯಶಾಸ್ತ್ರದಲ್ಲಿ 99/100 ಹಾಗೂ ಸಮಾಜಶಾಸ್ತ್ರದಲ್ಲಿ 99/100 ಅಂಕ ಗಳಿಸಿದ್ದರು. ಕಾಲೇಜಿನಿಂದ ₹1,500 ಹಾಗೂ ನಿವೃತ್ತ ಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹3,000 ನಗದು ಬಹುಮಾನ ನೀಡಿ ಗೌರವಿಸಲಾಯಿತು. - ಪವಿತ್ರಾ ಬಸವರಾಜ್ ಬಂಡಿ (ಜಾಲಹಳ್ಳಿ) – ಕಾಲೇಜಿಗೆ ದ್ವಿತೀಯ ಸ್ಥಾನ. ಕನ್ನಡ ವಿಷಯದಲ್ಲಿ 100/100 ಅಂಕ ಗಳಿಸಿದ್ದು, ಕಾಲೇಜು ಹಾಗೂ ನಿವೃತ್ತಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹2,000 ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. - ಪೂರ್ಣಿಮಾ (ಜಾಲಹಳ್ಳಿ) – 544 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಕಾಲೇಜಿನ ವತಿಯಿಂದ ಗೌರವಿಸಲಾಯಿತು. ಇದರ ಜೊತೆಗೆ ಸಂಸ್ಕೃತ ವಿಭಾಗ ಹಾಗೂ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ನೃತ್ಯ, ನಾಟಕ, ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನೂತನ ವಿದ್ಯಾರ್ಥಿಗಳು ಮತ್ತು ಹಿರಿಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು. ಉಪಸ್ಥಿತಿ ಕಾರ್ಯಕ್ರಮದಲ್ಲಿಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು,ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು) ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ . ಸರ್ಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯಗುರು ನಿಂಗಪ್ಪ, ಇಂಗ್ಲಿಷ್ ಉಪನ್ಯಾಸಕ ಶೇಖರ್, ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಬಾಬುಮಿಯಾ ಟೇಲರ್, ಹಿರಿಯ ಉಪನ್ಯಾಸಕರಾದ ವಿರೂಪಣ್ಣ, ಬಸವರಾಜ್, ಪ್ರಕಾಶ್, ಚನ್ನಬಸವ, ಬಸವರಾಜ್ ಸೋಮನಂಬರಡಿ, ಹನುಮೇಶ್, ಪೂರ್ಣಿಮಾ ಮೇಡಂ ಸೇರಿದಂತೆ ಉಪನ್ಯಾಸಕ ವೃಂದ, ಸಿಬ್ಬಂದಿ, ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಉಪನ್ಯಾಸಕ ಬಸವರಾಜ್ ರಸ್ತಾಪುರ್ ಅವರು ನೆರವೇರಿಸಿದರು. ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
    4
    ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ

ದಿನಾಂಕ: 31-07-2026
ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ

ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


📰 ಜಾಲಹಳ್ಳಿ–ದೇವದುರ್ಗ ಬ್ರೇಕಿಂಗ್ ನ್ಯೂಸ್
ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ
ದಿನಾಂಕ: 31-07-2026
ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ
ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಶಿಕ್ಷಣವೇ ಭವಿಷ್ಯದ ಬುನಾದಿ
ವಿಶೇಷ ಉಪನ್ಯಾಸ ನೀಡಿದ ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ ಅವರು, "ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ. ಸಮಯದ ಸದ್ಬಳಕೆ ಮಾಡಿಕೊಂಡು ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬಹುದು. ವಿದ್ಯಾರ್ಥಿಗಳು ಕಾಲೇಜು, ಪೋಷಕರು ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು" ಎಂದು ಕರೆ ನೀಡಿದರು
ಮುಖ್ಯ ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
ಶ್ರೀ ಸಿದ್ದನಗೌಡ ಮಾಲಿ ಪಾಟೀಲ (ಬಾಗೂರು) ಅವರು ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು ಅತ್ಯಗತ್ಯ. ಪೋಷಕರು ಕಷ್ಟಪಟ್ಟು ಮಕ್ಕಳನ್ನು ಓದಿಸುತ್ತಿದ್ದು, ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿ ಅವರ ಹೆಸರು ತರಬೇಕು ಎಂದರು.
ನಿವೃತ್ತ ಪ್ರಾಚಾರ್ಯ ಶ್ರೀ ಉಮೇಶ್ ಹೆಸರೂರು ಅವರು, ಮಾತನಾಡಿ ಕಠಿಣ ಪರಿಶ್ರಮ ಮತ್ತು ಗುರಿಯೊಂದಿಗೆ ವ್ಯಾಸಂಗ ಮಾಡಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು.
--_-----------------
ಬಾಕ್ಸ್ ನಲ್ಲಿ
ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್ ಅವರು, ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅವರು ಹೇಳಿದ ಸಂದೇಶ ಎಲ್ಲರ ಗಮನ ಸೆಳೆಯಿತು:
«"ಮೊಬೈಲ್ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ನೋಡು, ನಾನು ನಿನಗೆ ತಲೆ ತಗ್ಗಿಸುವಂತೆ ಮಾಡುತ್ತೇನೆ.
ಪುಸ್ತಕ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ಓದು, ನಾನು ನಿನಗೆ ತಲೆ ಎತ್ತುವಂತೆ ಮಾಡುತ್ತೇನೆ."»ಪುಸ್ತಕ ಓದುವದು ಕಡೆ ಹೆಚ್ಚು ಗಮನ ಹರಿಸಿ ಎಂದು ಹೇಳಿದರು 
----------------===-
ಬಾಕ್ಸ್ ನಲ್ಲಿ
ಅಧ್ಯಕ್ಷೀಯ ಭಾಷಣ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಮಾತನಾಡಿ, ಜಾಲಹಳ್ಳಿ ಕಾಲೇಜು ಇಂದು ಉತ್ತಮ ಮಟ್ಟಕ್ಕೆ ಬೆಳೆಯಲು ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು ಅವರ ಸೇವೆ ಮತ್ತು ದೂರದೃಷ್ಟಿಯೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು. 2006ರಲ್ಲಿ ಆರಂಭವಾದ ಕಾಲೇಜಿನ ಬೆಳವಣಿಗೆಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಿದರು.
-------------------
ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಅವರು, ಮಾತನಾಡಿ ಜಾಲಹಳ್ಳಿ ಶಾಲೆಯಲ್ಲಿ ಓದಿದ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಅಧಿಕಾರಿಗಳಾಗಿದ್ದಾರೆ. ನೂತನ ವಿದ್ಯಾರ್ಥಿಗಳು ಕೂಡ ಅದೇ ರೀತಿಯಲ್ಲಿ ಸಾಧನೆ ಮಾಡಬೇಕು ಎಂದು ಪ್ರೋತ್ಸಾಹಿಸಿದರು.
ಪತ್ರಕರ್ತ ಶ್ರೀ ಮೌನೇಶ್ ಜಾಲಹಳ್ಳಿ ಅವರು ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ಕರೆ ನೀಡಿದರು.
ಭೂದಾನಿಗಳು ಹಾಗೂ ಸಾಧಕರಿಗೆ ಸನ್ಮಾನ
ಕಾಲೇಜಿಗೆ ಜಾಗವನ್ನು ದಾನವಾಗಿ ನೀಡಿದ ಉದಾರ ಮನಸ್ಸಿನ ಶ್ರೀ ಅಮರೇಶ ತಂದೆ ನೀಲಕಂಠಪ್ಪ ಮೆಣಸಿನಕಾಯಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಇದೆ ವೇಳೆ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಅವರಿಗೆ ಸನ್ಮಾನ ಮಾಡಲಾಯಿತು, ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು)ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ
2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಬಹುಮಾನ ವಿತರಿಸಲಾಯಿತು.
- ಶ್ರೀದೇವಿ ಶರಣಪ್ಪ (ಜಾಲಹಳ್ಳಿ) – 564 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ. ರಾಜ್ಯಶಾಸ್ತ್ರದಲ್ಲಿ 99/100 ಹಾಗೂ ಸಮಾಜಶಾಸ್ತ್ರದಲ್ಲಿ 99/100 ಅಂಕ ಗಳಿಸಿದ್ದರು. ಕಾಲೇಜಿನಿಂದ ₹1,500 ಹಾಗೂ ನಿವೃತ್ತ ಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹3,000 ನಗದು ಬಹುಮಾನ ನೀಡಿ ಗೌರವಿಸಲಾಯಿತು.
- ಪವಿತ್ರಾ ಬಸವರಾಜ್ ಬಂಡಿ (ಜಾಲಹಳ್ಳಿ) – ಕಾಲೇಜಿಗೆ ದ್ವಿತೀಯ ಸ್ಥಾನ. ಕನ್ನಡ ವಿಷಯದಲ್ಲಿ 100/100 ಅಂಕ ಗಳಿಸಿದ್ದು, ಕಾಲೇಜು ಹಾಗೂ ನಿವೃತ್ತಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹2,000 ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
- ಪೂರ್ಣಿಮಾ (ಜಾಲಹಳ್ಳಿ) – 544 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಕಾಲೇಜಿನ ವತಿಯಿಂದ ಗೌರವಿಸಲಾಯಿತು.
ಇದರ ಜೊತೆಗೆ ಸಂಸ್ಕೃತ ವಿಭಾಗ ಹಾಗೂ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ
ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ನೃತ್ಯ, ನಾಟಕ, ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನೂತನ ವಿದ್ಯಾರ್ಥಿಗಳು ಮತ್ತು ಹಿರಿಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.
ಉಪಸ್ಥಿತಿ
ಕಾರ್ಯಕ್ರಮದಲ್ಲಿಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು,ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು)  ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ .
ಸರ್ಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯಗುರು ನಿಂಗಪ್ಪ, ಇಂಗ್ಲಿಷ್ ಉಪನ್ಯಾಸಕ ಶೇಖರ್, ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಬಾಬುಮಿಯಾ ಟೇಲರ್, ಹಿರಿಯ ಉಪನ್ಯಾಸಕರಾದ ವಿರೂಪಣ್ಣ, ಬಸವರಾಜ್, ಪ್ರಕಾಶ್, ಚನ್ನಬಸವ, ಬಸವರಾಜ್ ಸೋಮನಂಬರಡಿ, ಹನುಮೇಶ್, ಪೂರ್ಣಿಮಾ ಮೇಡಂ ಸೇರಿದಂತೆ ಉಪನ್ಯಾಸಕ ವೃಂದ, ಸಿಬ್ಬಂದಿ, ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಉಪನ್ಯಾಸಕ ಬಸವರಾಜ್ ರಸ್ತಾಪುರ್ ಅವರು ನೆರವೇರಿಸಿದರು.
ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    1 hr ago
  • ಕುರುಕುಂದದ ಆಗ್ರೋ ಕೇಂದ್ರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ ಯಾದಗಿರಿ, ಆ. 1: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕುರುಕುಂದ ಗ್ರಾಮದ ದಂಡಗುಂಡ ಬಸವೇಶ್ವರ ಆಗ್ರೋ ಕೇಂದ್ರದ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಸಮಿತಿಯು ಶಿಸ್ತು ಕ್ರಮ ಕೈಗೊಂಡು ಅಂಗಡಿ ಪರವಾನಗಿಯನ್ನು (ಲೈಸೆನ್ಸ್) ರದ್ದುಪಡಿಸುವಂತೆ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದೆ. ಆಗ್ರೋ ಕೇಂದ್ರದಲ್ಲಿ ಕೃಷಿ ಉತ್ಪನ್ನಗಳನ್ನು ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಸಂಘ ಆರೋಪಿಸಿದೆ. ಅಲ್ಲದೆ, "ಬೇಕಿದ್ದರೆ ಖರೀದಿಸಿ, ಇಲ್ಲದಿದ್ದರೆ ಹೋಗಿ" ಎಂದು ಹೇಳುತ್ತಾ ಕೃತಕ ಅಭಾವ ಸೃಷ್ಟಿಸಿ ರೈತರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ದೂರಿದೆ. ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು, ಶಹಾಪುರ ಅವರು ತಕ್ಷಣ ಮಧ್ಯಪ್ರವೇಶಿಸಿ ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಸಂಘದ ಜಿಲ್ಲಾ ಸಮಿತಿ ಆಗ್ರಹಿಸಿದೆ. ಒಂದು ವೇಳೆ ಅಧಿಕಾರಿಗಳು ಈ ವಿಷಯವನ್ನು ನಿರ್ಲಕ್ಷಿಸಿದರೆ ದಿಢೀರ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಕುರುಕುಂದದ ಆಗ್ರೋ ಕೇಂದ್ರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ ಯಾದಗಿರಿ, ಆ. 1: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕುರುಕುಂದ ಗ್ರಾಮದ ದಂಡಗುಂಡ ಬಸವೇಶ್ವರ ಆಗ್ರೋ ಕೇಂದ್ರದ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಸಮಿತಿಯು ಶಿಸ್ತು ಕ್ರಮ ಕೈಗೊಂಡು ಅಂಗಡಿ ಪರವಾನಗಿಯನ್ನು (ಲೈಸೆನ್ಸ್) ರದ್ದುಪಡಿಸುವಂತೆ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದೆ. ಆಗ್ರೋ ಕೇಂದ್ರದಲ್ಲಿ ಕೃಷಿ ಉತ್ಪನ್ನಗಳನ್ನು ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಸಂಘ ಆರೋಪಿಸಿದೆ. ಅಲ್ಲದೆ, "ಬೇಕಿದ್ದರೆ ಖರೀದಿಸಿ, ಇಲ್ಲದಿದ್ದರೆ ಹೋಗಿ" ಎಂದು ಹೇಳುತ್ತಾ ಕೃತಕ ಅಭಾವ ಸೃಷ್ಟಿಸಿ ರೈತರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ದೂರಿದೆ. ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು, ಶಹಾಪುರ ಅವರು ತಕ್ಷಣ ಮಧ್ಯಪ್ರವೇಶಿಸಿ ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಸಂಘದ ಜಿಲ್ಲಾ ಸಮಿತಿ ಆಗ್ರಹಿಸಿದೆ. ಒಂದು ವೇಳೆ ಅಧಿಕಾರಿಗಳು ಈ ವಿಷಯವನ್ನು ನಿರ್ಲಕ್ಷಿಸಿದರೆ ದಿಢೀರ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
    1
    ಕುರುಕುಂದದ ಆಗ್ರೋ ಕೇಂದ್ರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ

ಯಾದಗಿರಿ, ಆ. 1: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕುರುಕುಂದ ಗ್ರಾಮದ ದಂಡಗುಂಡ ಬಸವೇಶ್ವರ ಆಗ್ರೋ ಕೇಂದ್ರದ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಸಮಿತಿಯು ಶಿಸ್ತು ಕ್ರಮ ಕೈಗೊಂಡು ಅಂಗಡಿ ಪರವಾನಗಿಯನ್ನು (ಲೈಸೆನ್ಸ್) ರದ್ದುಪಡಿಸುವಂತೆ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದೆ.

ಆಗ್ರೋ ಕೇಂದ್ರದಲ್ಲಿ ಕೃಷಿ ಉತ್ಪನ್ನಗಳನ್ನು ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಸಂಘ ಆರೋಪಿಸಿದೆ. ಅಲ್ಲದೆ, "ಬೇಕಿದ್ದರೆ ಖರೀದಿಸಿ, ಇಲ್ಲದಿದ್ದರೆ ಹೋಗಿ" ಎಂದು ಹೇಳುತ್ತಾ ಕೃತಕ ಅಭಾವ ಸೃಷ್ಟಿಸಿ ರೈತರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ದೂರಿದೆ.

ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು, ಶಹಾಪುರ ಅವರು ತಕ್ಷಣ ಮಧ್ಯಪ್ರವೇಶಿಸಿ ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಸಂಘದ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಒಂದು ವೇಳೆ ಅಧಿಕಾರಿಗಳು ಈ ವಿಷಯವನ್ನು ನಿರ್ಲಕ್ಷಿಸಿದರೆ ದಿಢೀರ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.


ಕುರುಕುಂದದ ಆಗ್ರೋ ಕೇಂದ್ರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ
ಯಾದಗಿರಿ, ಆ. 1: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕುರುಕುಂದ ಗ್ರಾಮದ ದಂಡಗುಂಡ ಬಸವೇಶ್ವರ ಆಗ್ರೋ ಕೇಂದ್ರದ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಸಮಿತಿಯು ಶಿಸ್ತು ಕ್ರಮ ಕೈಗೊಂಡು ಅಂಗಡಿ ಪರವಾನಗಿಯನ್ನು (ಲೈಸೆನ್ಸ್) ರದ್ದುಪಡಿಸುವಂತೆ ಸಂಬಂಧಿತ ಅಧಿಕಾರಿಗಳನ್ನು ಒತ್ತಾಯಿಸಿದೆ.
ಆಗ್ರೋ ಕೇಂದ್ರದಲ್ಲಿ ಕೃಷಿ ಉತ್ಪನ್ನಗಳನ್ನು ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಸಂಘ ಆರೋಪಿಸಿದೆ. ಅಲ್ಲದೆ, "ಬೇಕಿದ್ದರೆ ಖರೀದಿಸಿ, ಇಲ್ಲದಿದ್ದರೆ ಹೋಗಿ" ಎಂದು ಹೇಳುತ್ತಾ ಕೃತಕ ಅಭಾವ ಸೃಷ್ಟಿಸಿ ರೈತರನ್ನು ಶೋಷಣೆ ಮಾಡಲಾಗುತ್ತಿದೆ ಎಂದು ದೂರಿದೆ.
ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು, ಶಹಾಪುರ ಅವರು ತಕ್ಷಣ ಮಧ್ಯಪ್ರವೇಶಿಸಿ ಪ್ರಕರಣದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕು ಎಂದು ಸಂಘದ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಒಂದು ವೇಳೆ ಅಧಿಕಾರಿಗಳು ಈ ವಿಷಯವನ್ನು ನಿರ್ಲಕ್ಷಿಸಿದರೆ ದಿಢೀರ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    1 hr ago
  • ಕಲ್ಯಾಣ ವಾರ್ತೆ - "ನೀರಿನ ಹರಿವು ಹೆಚ್ಚುತ್ತಿರುವದರಿಂದ ನದಿ ತೀರಕ್ಕೆ ತೆರಳದಂತೆ ಸಾರ್ವಜನಿಕರಿಗೆ ಮುದ್ನಾಳ ಮನವಿ" 'ಭೀಮಾನದಿ ತೀರಕ್ಕೆ ಉಮೇಶ್ ಮುದ್ನಾಳ ಭೇಟಿ' ಕಲ್ಯಾಣ ವಾರ್ತೆ -ಯಾದಗಿರಿ ಮಹಾರಾಷ್ಟ್ರದಪಶ್ಚೀಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಪರಿಣಾಮ ಭೀಮಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು ನದಿ ತೀರಕ್ಕೆ ಶುಕ್ರವಾರ ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ ಅವರು ಭೇಟಿ ನೀಡಿದರು. ಭೀಮಾನದಿ ಹಾಗೂ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ.ಜಿಲ್ಲಾಡಳಿತ ನದಿ ತೀರದ ಗ್ರಾಮದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.ಮೀನುಗಾರರು,ಸೇರಿ ಯಾರು ನದಿ ತೀರಕ್ಕೆ ತೆರಳಬಾದರೆಂದು ಮುದ್ನಾಳ ಮನವಿ ಮಾಡಿದ್ದಾರೆ.
    1
    ಕಲ್ಯಾಣ ವಾರ್ತೆ -
"ನೀರಿನ ಹರಿವು ಹೆಚ್ಚುತ್ತಿರುವದರಿಂದ ನದಿ ತೀರಕ್ಕೆ ತೆರಳದಂತೆ  ಸಾರ್ವಜನಿಕರಿಗೆ ಮುದ್ನಾಳ ಮನವಿ"
'ಭೀಮಾನದಿ ತೀರಕ್ಕೆ ಉಮೇಶ್ ಮುದ್ನಾಳ ಭೇಟಿ'
ಕಲ್ಯಾಣ ವಾರ್ತೆ -ಯಾದಗಿರಿ
ಮಹಾರಾಷ್ಟ್ರದಪಶ್ಚೀಮ ಘಟ್ಟಗಳ ಪ್ರದೇಶದಲ್ಲಿ  ಭಾರೀ ಪ್ರಮಾಣದ ಮಳೆಯಾಗುತ್ತಿರುವ ಪರಿಣಾಮ ಭೀಮಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು ನದಿ ತೀರಕ್ಕೆ ಶುಕ್ರವಾರ  ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ ಅವರು  ಭೇಟಿ ನೀಡಿದರು.
ಭೀಮಾನದಿ ಹಾಗೂ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ.ಜಿಲ್ಲಾಡಳಿತ ನದಿ ತೀರದ ಗ್ರಾಮದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.ಮೀನುಗಾರರು,ಸೇರಿ ಯಾರು ನದಿ ತೀರಕ್ಕೆ ತೆರಳಬಾದರೆಂದು ಮುದ್ನಾಳ ಮನವಿ ಮಾಡಿದ್ದಾರೆ.
    user_DR. S.S. NAYAK
    DR. S.S. NAYAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    18 hrs ago
  • ಗುರುಮಠಕಲ್‌ ಪಟ್ಟಣದ ಎಸ್‌ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು. ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು. ಪಟ್ಟಣದ ಎಸ್‌ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು. ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಬಾಕ್ಸ್: ೦೧ ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಕೋಟ್: ೦೧ ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ "ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. – – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ
    4
    ಗುರುಮಠಕಲ್‌ ಪಟ್ಟಣದ ಎಸ್‌ ಎಂ ಆರ್ ಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಡಿವೈಎಸ್ಪಿ ಸುರೇಶ ಎಂ ನಾಯಕ್ ಉದ್ಘಾಟಿಸಿದರು.
ಮಾದಕ ವ್ಯಸನಕ್ಕೆ 'ಬೇಡ ಬೋ'; ಉತ್ತಮ ಸ್ನೇಹವೇ ಉಜ್ವಲ ಭವಿಷ್ಯದ ದಾರಿ
ಬೇಡ ಬೋ' ಸಂದೇಶದೊಂದಿಗೆ ವ್ಯಸನದ ವಿರುದ್ಧ ಪೊಲೀಸರ ಜಾಗೃತಿ ಸಮರ
ಗುರುಮಠಕಲ್: ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಕ್ಕೆ ಯುವಕರು ಹಾಗೂ ವಿದ್ಯಾರ್ಥಿಗಳು ಎಂದಿಗೂ ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಯಾದಗಿರಿ ಡಿವೈಎಸ್ಪಿ ಸುರೇಶ ಎಂ. ಕರೆ ನೀಡಿದರು.
ಪಟ್ಟಣದ ಎಸ್‌ಎಂಆರ್ ಕಲ್ಯಾಣ ಮಂಟಪದಲ್ಲಿ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ 'ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ' ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಹಾಗೂ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು. ಉತ್ತಮ ಸ್ನೇಹ ಬಳಗವೇ ವ್ಯಕ್ತಿಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ. ಪೋಷಕರು ಮತ್ತು ಕುಟುಂಬದವರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಸ್ನೇಹಿತರಲ್ಲಿ ಯಾರಾದರೂ ಮಾದಕ ವ್ಯಸನಕ್ಕೆ ಒಳಗಾಗಿದ್ದರೆ ಅವರಿಗೆ 'ಬೇಡ ಬೋ' ಎಂದು ಮನವರಿಕೆ ಮಾಡಿಕೊಡಿ. ಅವರ ದುಶ್ಚಟಗಳಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬೇಡಿ. ಅಕ್ರಮ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾದ ನಾಗಭೂಷಣ ಶೆಟ್ಟಿ ಮಾತನಾಡಿ, ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ಆರಂಭವಾಗುವ ಮಾದಕ ವಸ್ತುಗಳ ಸೇವನೆಯು ಬಳಿಕ ಗಂಭೀರ ವ್ಯಸನವಾಗಿ ಪರಿಣಮಿಸುತ್ತದೆ. ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದರ ಜೊತೆಗೆ ನೆನಪಿನ ಶಕ್ತಿ ಕುಂದುತ್ತದೆ, ಓದಿನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ, ಆತಂಕ, ಖಿನ್ನತೆ, ಕೋಪ ಹಾಗೂ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕುಸಿಯುತ್ತದೆ ಎಂದು ಎಚ್ಚರಿಸಿದರು.
ಮಾದಕ ವ್ಯಸನವು ವ್ಯಕ್ತಿಯ ಬದುಕಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿತಿ ಮತ್ತು ಸಾಮಾಜಿಕ ಗೌರವಕ್ಕೂ ಧಕ್ಕೆ ತರುತ್ತದೆ. ಶಿಕ್ಷಣ ಮಧ್ಯದಲ್ಲೇ ನಿಲ್ಲುವುದು, ಉದ್ಯೋಗಾವಕಾಶ ಕಳೆದುಕೊಳ್ಳುವುದು ಹಾಗೂ ಅಪರಾಧ ಚಟುವಟಿಕೆಗಳತ್ತ ಆಕರ್ಷಿತರಾಗುವ ಅಪಾಯವೂ ಹೆಚ್ಚುತ್ತದೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳು ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ವ್ಯಸನಗಳಿಂದ ದೂರವಿರಬಹುದು. ಸಾರ್ವಜನಿಕರು ತಮ್ಮ ಸುತ್ತಮುತ್ತ ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ನರಸಿಂಹ ಸ್ವಾಮಿ, ವೈದ್ಯಾಧಿಕಾರಿ ಡಾ. ನೀಲಾಂಬಿಕ, ರಾಜ್ಯಮಟ್ಟದ ತರಬೇತುದಾರ ಹಣಮಂತರಾವ್ ಗೊಂಗಲೆ, ಸಿಪಿಐ ದೌಲತ್ ಎನ್. ಕುರಿ, ಶಿಕ್ಷಣ ಸಂಯೋಜಕ ರವೀಂದ್ರ ಉಪಸ್ಥಿತರಿದ್ದರು. ಉಪನ್ಯಾಸಕಿ ಜ್ಯೋತಿಲತಾ ತಡಬಿಡಿಮಠ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಶಾಲೆ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
ಬಾಕ್ಸ್: ೦೧
ಬೇಡ ಬೋ' ಅಭಿಯಾನಕ್ಕೆ ಪೊಲೀಸರ ಒತ್ತು
ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಗುರುಮಠಕಲ್ ಪೊಲೀಸ್ ಠಾಣೆ ವತಿಯಿಂದ 'ಬೇಡ ಬೋ – ವ್ಯಸನ ಬೇಡ' ಅಭಿಯಾನಕ್ಕೆ ವಿಶೇಷ ಒತ್ತು ನೀಡಲಾಯಿತು. ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು, ಇ-ಸಿಗರೇಟ್ ಸೇರಿದಂತೆ ಎಲ್ಲ ರೀತಿಯ ಮಾದಕ ವ್ಯಸನಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕಾರ್ಯಕ್ರಮದಲ್ಲಿ ಮನವಿ ಮಾಡಲಾಯಿತು. ವ್ಯಸನ ಬೇಡ. ಆರೋಗ್ಯಕರ ಜೀವನವೇ ನಮ್ಮ ಗುರಿ ಎಂಬ ಸಂದೇಶ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.
ಕೋಟ್: ೦೧
ಸ್ನೇಹಿತರ ಒತ್ತಡಕ್ಕೆ ಮಣಿದು ವ್ಯಸನದ ದಾರಿ ಹಿಡಿಯಬೇಡಿ
"ಗಾಂಜಾ, ಡ್ರಗ್ಸ್, ಗುಟ್ಕಾ, ತಂಬಾಕು ಸೇರಿದಂತೆ ಯಾವುದೇ ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡರೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು.ಮಾದಕ ವಸ್ತುಗಳ ಅಕ್ರಮ ಮಾರಾಟ ಅಥವಾ ಬಳಕೆ ಕಂಡುಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ.
– – ಸುರೇಶ ಎಂ., ಡಿವೈಎಸ್ಪಿ, ಯಾದಗಿರಿ
    user_N S Patange
    N S Patange
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    13 hrs ago
  • ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    1
    ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    user_Yallalinga
    Yallalinga
    ಸೇಡಂ, ಕಲಬುರಗಿ, ಕರ್ನಾಟಕ•
    14 hrs ago
  • ರಾಯಚೂರು ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ರೈತರು ಪತ್ರಿಕಾ ಭವನದಲ್ಲಿ ಆಗ್ರಹ ರಾಯಚೂರು, ಜು.31: ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರ ಹಿತದೃಷ್ಟಿಯಿಂದ ರಾಯಚೂರು ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತ ಹೋರಾಟಗಾರ ಹಾಗೂ ಸಂಯುಕ್ತ ಕಿಸಾನ್ ಪಾರ್ಟಿ ರಾಜ್ಯಾಧ್ಯಕ್ಷ ಚಾಮರಾಸ ಮಾಲಿಪಾಟೀಲ್ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಲವು ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರ ಹಿನ್ನಡೆಯಾಗಿವೆ. ಜಿಲ್ಲೆಯಲ್ಲಿ ಶೇ.38ರಷ್ಟು ಮಾತ್ರ ಬಿತ್ತನೆ ನಡೆದಿದ್ದು, ಅದರಲ್ಲಿ ಶೇ.19ರಷ್ಟು ಬೆಳೆ ನಷ್ಟವಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರು ಬೆಳೆ ಒಣಗುತ್ತಿರುವುದರಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮೀಣ ಕೂಲಿ ಕಾರ್ಮಿಕರು ಸಹ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಹತ್ತಿ ಸೇರಿದಂತೆ ಅಲ್ಪಾವಧಿ ಬೆಳೆಗಳು ಒಣಗುತ್ತಿದ್ದು, ಜಲಾಶಯಗಳಲ್ಲೂ ನೀರಿನ ಸಂಗ್ರಹಣೆ ಕುಸಿದಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಅವ್ಯವಹಾರ ನಡೆಯುತ್ತಿದೆಯಾದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹಲವು ಬಾರಿ ಹೋರಾಟ ಹಾಗೂ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಜೆಸ್ಕಾಂ ಮುಖ್ಯ ಇಂಜಿನಿಯರ್ ರೈತರ ಸಮಸ್ಯೆಗಳ ಕುರಿತು ಬೇಜವಾಬ್ದಾರಿಯುತ ಹೇಳಿಕೆ ನೀಡಿರುವುದನ್ನು ತೀವ್ರವಾಗಿ ಖಂಡಿಸಿದ ಅವರು, ರೈತರ ಮನವಿಗಳಿಗೆ ಯಾವುದೇ ಬೆಲೆ ನೀಡದ ಅಧಿಕಾರಿಗಳ ವರ್ತನೆ ಖಂಡನೀಯವಾಗಿದೆ. ಜನರ ತೆರಿಗೆ ಹಣದಿಂದ ವೇತನ ಪಡೆಯುವ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಭೂಪಾಲ್‌ನಲ್ಲಿ ಅಲ್ಲಾಪ್ರಭು ಸೇರಿದಂತೆ ಆರು ರೈತರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದ ಅವರು, ನೀಟ್ ಅಕ್ರಮ ಸೇರಿದಂತೆ ದೇಶದ ಹಲವು ಗಂಭೀರ ಸಮಸ್ಯೆಗಳ ಬಗ್ಗೆ ಸರ್ಕಾರಗಳು ತಕ್ಷಣ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಗಾಂಧೀಜಿ ನೀಡಿದ್ದ "ಭಾರತ ಬಿಟ್ಟು ತೊಲಗಿ" ಘೋಷಣೆಯ ಮಾದರಿಯಲ್ಲಿ "ಭ್ರಷ್ಟ ಅಧಿಕಾರಿಗಳೇ, ಬಹುರಾಷ್ಟ್ರೀಯ ಕಂಪನಿಗಳೇ, ಭಾರತ ಬಿಟ್ಟು ತೊಲಗಿ" ಎಂಬ ಘೋಷಣೆಯೊಂದಿಗೆ ಆಗಸ್ಟ್ 10ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಂಯುಕ್ತ ಕಿಸಾನ್ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮಲ್ಲಣ್ಣ ದಿನ್ನಿ, ಮಲ್ಲಯ್ಯ ಚಂದ್ರಬಂಡ, ಬೂದೆಯ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    1
    ರಾಯಚೂರು ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ರೈತರು ಪತ್ರಿಕಾ ಭವನದಲ್ಲಿ ಆಗ್ರಹ
ರಾಯಚೂರು, ಜು.31: ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರ ಹಿತದೃಷ್ಟಿಯಿಂದ ರಾಯಚೂರು ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತ ಹೋರಾಟಗಾರ ಹಾಗೂ ಸಂಯುಕ್ತ ಕಿಸಾನ್ ಪಾರ್ಟಿ ರಾಜ್ಯಾಧ್ಯಕ್ಷ ಚಾಮರಾಸ ಮಾಲಿಪಾಟೀಲ್ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಲವು ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರ ಹಿನ್ನಡೆಯಾಗಿವೆ. ಜಿಲ್ಲೆಯಲ್ಲಿ ಶೇ.38ರಷ್ಟು ಮಾತ್ರ ಬಿತ್ತನೆ ನಡೆದಿದ್ದು, ಅದರಲ್ಲಿ ಶೇ.19ರಷ್ಟು ಬೆಳೆ ನಷ್ಟವಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರು ಬೆಳೆ ಒಣಗುತ್ತಿರುವುದರಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮೀಣ ಕೂಲಿ ಕಾರ್ಮಿಕರು ಸಹ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಹತ್ತಿ ಸೇರಿದಂತೆ ಅಲ್ಪಾವಧಿ ಬೆಳೆಗಳು ಒಣಗುತ್ತಿದ್ದು, ಜಲಾಶಯಗಳಲ್ಲೂ ನೀರಿನ ಸಂಗ್ರಹಣೆ ಕುಸಿದಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಅವ್ಯವಹಾರ ನಡೆಯುತ್ತಿದೆಯಾದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹಲವು ಬಾರಿ ಹೋರಾಟ ಹಾಗೂ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಜೆಸ್ಕಾಂ ಮುಖ್ಯ ಇಂಜಿನಿಯರ್ ರೈತರ ಸಮಸ್ಯೆಗಳ ಕುರಿತು ಬೇಜವಾಬ್ದಾರಿಯುತ ಹೇಳಿಕೆ ನೀಡಿರುವುದನ್ನು ತೀವ್ರವಾಗಿ ಖಂಡಿಸಿದ ಅವರು, ರೈತರ ಮನವಿಗಳಿಗೆ ಯಾವುದೇ ಬೆಲೆ ನೀಡದ ಅಧಿಕಾರಿಗಳ ವರ್ತನೆ ಖಂಡನೀಯವಾಗಿದೆ. ಜನರ ತೆರಿಗೆ ಹಣದಿಂದ ವೇತನ ಪಡೆಯುವ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಭೂಪಾಲ್‌ನಲ್ಲಿ ಅಲ್ಲಾಪ್ರಭು ಸೇರಿದಂತೆ ಆರು ರೈತರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದ ಅವರು, ನೀಟ್ ಅಕ್ರಮ ಸೇರಿದಂತೆ ದೇಶದ ಹಲವು ಗಂಭೀರ ಸಮಸ್ಯೆಗಳ ಬಗ್ಗೆ ಸರ್ಕಾರಗಳು ತಕ್ಷಣ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಗಾಂಧೀಜಿ ನೀಡಿದ್ದ "ಭಾರತ ಬಿಟ್ಟು ತೊಲಗಿ" ಘೋಷಣೆಯ ಮಾದರಿಯಲ್ಲಿ "ಭ್ರಷ್ಟ ಅಧಿಕಾರಿಗಳೇ, ಬಹುರಾಷ್ಟ್ರೀಯ ಕಂಪನಿಗಳೇ, ಭಾರತ ಬಿಟ್ಟು ತೊಲಗಿ" ಎಂಬ ಘೋಷಣೆಯೊಂದಿಗೆ ಆಗಸ್ಟ್ 10ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಂಯುಕ್ತ ಕಿಸಾನ್ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಘೋಷಿಸಿದರು.
ಸುದ್ದಿಗೋಷ್ಠಿಯಲ್ಲಿ ಮಲ್ಲಣ್ಣ ದಿನ್ನಿ, ಮಲ್ಲಯ್ಯ ಚಂದ್ರಬಂಡ, ಬೂದೆಯ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.