Shuru
Apke Nagar Ki App…
*ಭಾರತ ನಲ್ಲಿ ವೈರಲ್*
Md Aleemulla Shariff
*ಭಾರತ ನಲ್ಲಿ ವೈರಲ್*
More news from Mandya and nearby areas
- ಯತ್ತಂಬಾಡಿ ಪ್ರಾಥಮಿಕ ಶಾಲೆಯನ್ನು ರಾಜ್ಯದಲ್ಲೇ ಮಾದರಿ ಶಾಲೆ ಮಾಡುವ ಗುರಿ ನಮ್ಮದು , ಉದ್ಯಮಿ ಹೇಮಂತ್. ಹಲಗೂರು:- ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವುಗಳು ಮುಂದಾಗಿದ್ದೇವೆ .ಯತ್ತಂಬಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಜಿಲ್ಲೆ ಯಲ್ಲೇ ಅಲ್ಲ ರಾಜ್ಯದಲ್ಲೇ ನಾನು ಮತ್ತು ನಮ್ಮ ಸ್ನೇಹಿತರು ಸೇರಿ ಮಾದರಿ ಶಾಲೆಯನ್ನಾಗಿ ಮಾಡುವ ಗುರಿಯನ್ನಾಗಿ ಇಟ್ಟುಕೊಂಡಿದ್ದೇವೆ .ಎಂದು ಬೆಂಗಳೂರಿನ ಉದ್ಯಮಿ ಹೇಮಂತ್ ತಿಳಿಸಿದರು. ಸಮೀಪದ ಯತ್ತಂಬಾಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಎಂಬ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಈಗ ಸರ್ಕಾರಿ ಶಾಲೆ ಎಂದರೆ ಅದು ಸರ್ಕಾರಕ್ಕೆ ಸೇರಿದ ಶಾಲೆ, ಸರ್ಕಾರ ಎಂದರೆ ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರ ,ಜೆಡಿಎಸ್ ಸರ್ಕಾರ ಎಂಬ ಭಾವನೆ ಇದೆ. ಇದನ್ನೆಲ್ಲಾ ಹೊರತುಪಡಿಸಿ ಈ ಶಾಲೆ ನಮ್ಮ ಶಾಲೆ ,ನಮ್ಮೆಲ್ಲರ ಶಾಲೆ ಎಂಬ ಗೌರವ ನಮ್ಮಲ್ಲಿ ಬೆಳೆಯಬೇಕು. ಜಯರಾಮು ರವರ ಮೂಲಕ ನಾವು ಈ ಊರಿಗೆ ಕಾಲಿಟ್ಟಿದ್ದೇವೆ ಈ ಊರಿಗೂ ನಮಗೂ ಒಂದು ಋಣಾನುಬಂಧ ಬೆಳೆದಿದೆ .ಈ ಶಾಲೆಯಲ್ಲಿ ನಮಗೊಂದು ಸ್ಥಾನ ಸಿಕ್ಕಿದೆ ಅದು ಉಳಿಯಬೇಕಿದ್ದರೆ ಈ ಶಾಲೆ ಅತ್ಯುನ್ನತ ಮಟ್ಟಕ್ಕೆ ತಲುಪಬೇಕಾದರೆ ಏನೇನುಅಗತ್ಯವಿದೆ ಅದನ್ನೆಲ್ಲ ನಾವು ಪೂರೈಸಲು ಸಿದ್ಧರಿದ್ದೇವೆ. ನಮ್ಮ ಸಂಪಾದನೆಯ ಒಂದು ಭಾಗವನ್ನು ಮೀಸಲಿಟ್ಟುಈ ಶಾಲೆಯನ್ನು ಜಿಲ್ಲೆಯಲ್ಲಿ ಅತ್ಯುತ್ತಮ ಶಾಲೆಯಾಗಿಮಾಡಲು ನನ್ನ ಸ್ನೇಹಿತರ ಸಹಕಾರ ಇದೆ ಎಂಬ ಭಾವನೆಯಿಂದ ಮಾತು ಕೊಡುತ್ತೇನೆ. ಪೋಷಕರೆ ನಿಮ್ಮ ಸಹಕಾರ ನಿಮ್ಮ ಮಕ್ಕಳಿಗೆ ಇರಲಿ, ಗುರುಗಳಿಗೂ ಇರಲಿ ಈ ಮಕ್ಕಳನ್ನು ಉನ್ನತ ಮಟ್ಟದಲ್ಲಿ ನೋಡಲು ಬಯಸುತ್ತೇವೆ. ಇತರ ಶಾಲೆಗಳಿಗೂ ಇದು ಒಂದು ಮಾದರಿ ಶಾಲೆ ಆಗಬೇಕು ಹಾಗೆ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಮತ್ತೋರ್ವ ಉದ್ದಮಿ, ಜಯ ರಾಮು ಮಾತನಾಡುತ್ತಾ, ಹಳ್ಳಿಯಲ್ಲಿ ಬಹುತೇಕ ಸರ್ಕಾರಿ ಶಾಲೆಗಳು ಮುಚ್ಚುವಂತ ಪರಿಸ್ಥಿತಿ ಬಂದಿದೆ ,ಅಂತಹ ಸಂದರ್ಭದಲ್ಲಿ ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಮನೆ ತುಂಬಿಸಿಕೊಳ್ಳುವ ಸುಗ್ಗಿ ಹಬ್ಬಸಂಕ್ರಾಂತಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ನಮ್ಮ ಕಣ್ಮನ ತುಂಬಿಸಿದ ಇಲ್ಲಿಯ ಶಿಕ್ಷಕ ವೃಂದ ಮತ್ತು ಮಕ್ಕಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಹಳ್ಳಿಯ ಶಾಲೆಗಳಲ್ಲಿ ಓದಿ ವಿದ್ಯಾವಂತರಾಗಿ ಪಟ್ಟಣಗಳಲ್ಲಿ ಉದ್ಯೋಗ ನಿಮಿತ್ತ ಒತ್ತಡದ ಜೀವನ ನಡೆಸುತ್ತಿರುವ ನನ್ನ ಕುಟುಂಬದವರು ಮತ್ತು ಸಹೋದ್ಯೋಗಿಗಳನ್ನು ಕರೆತಂದು ಇಲ್ಲಿ ಸಮಯ ಕಳೆದದ್ದಕ್ಕೆ ಅವರಿಗೂ ಧನ್ಯವಾದಗಳು. ದೂರದ ಬೆಟ್ಟ ನುಣ್ಣಗೆ ಎಂದು ಪೋಷಕರು ತಮ್ಮ ಮಕ್ಕಳನ್ನು ಹಳ್ಳಿ ಶಾಲೆ ಬಿಟ್ಟು ಪಟ್ಟಣದ ಆಂಗ್ಲ ಮಾಧ್ಯಮದ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಹಳ್ಳಿ ಶಾಲೆಗಳು ಮುಚ್ಚಲ್ಪಡುತ್ತಿವೆ ಆದುದರಿಂದ ನಾವು ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೈಜೋಡಿಸೋಣ ಎಂದರು. ಶಾಲೆಯ ಮೈದಾನದಲ್ಲಿ ನಿರ್ಮಿಸಲ್ಪಟ್ಟ ಧಾನ್ಯಗಳ ಒಕ್ಕಣೆಯ ಕಣ, ಹೂವಿನಿಂದ ಅಲಂಕರಿಸಿದಧಾನ್ಯಗಳ ರಾಶಿ, ರಟ್ಟಿನಲ್ಲಿ ನಿರ್ಮಿಸಲಾದ ಹಳ್ಳಿಮನೆ, ನೀರು ಸೇದುವ ಬಾವಿ, ಎತ್ತಿನ ಬಂಡಿ ,ಒಣ ಹುಲ್ಲಿನ ಮೆದೆ, ಮೊರಗಳಲ್ಲಿ ತುಂಬಿಟ್ಟ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು, ಹೆಂಗಸು ಮತ್ತುಗಂಡಸಿನ ಚಿತ್ರವನ್ನು ಬಿಡಿಸಿರುವ ಮಡಿಕೆಗಳು, ಪಕ್ಷಿಗಳಿಂದ ಧಾನ್ಯವನ್ನು ಸಂರಕ್ಷಿಸಲು ಹೊಲಗಳಲ್ಲಿರಿಸುವ ಬೆದರು ಬೊಂಬೆಗಳು,ಎಳ್ಳು ಬೆಲ್ಲ ಕೊಬ್ಬರಿ ಮಿಶ್ರಣ, ಪೂಜಾ ಸಾಮಗ್ರಿಗಳು ಒಟ್ಟಾರೆ ಶಾಲೆಯ ಆವರಣ ಹಳ್ಳಿಯ ಸೊಬಗನ್ನು ಪ್ರತಿಬಿಂಬಿಸುತ್ತಿತ್ತು. ಇದೇ ಸಂದರ್ಭದಲ್ಲಿ ಯತ್ತಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ, ಪುಟ್ಟಸ್ವಾಮಾಚಾರಿ, ಸಿ ಆರ್. ಪಿ .ಶಿಕ್ಷಕ ರೇವಣ್ಣ ಹಾಗೂ ಬೆಂಗಳೂರಿನ ಉದ್ಯಮಿಗಳಾದ ಜಯರಾಮು ಶಿವಕುಮಾರ್, ವೀರಣ್ಣ, ಹೇಮಂತ್ ಮತ್ತು ಇತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ಶಿಕ್ಷಕ ವಿಶ್ವನಾಥ ಸೇರದಂತೆ ಶಿಕ್ಷಕ ವೃಂದ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ರಮೇಶ್, ಉಪಾಧ್ಯಕ್ಷರಾದ ಸೋಮಶೇಖರ್, ಶಿವಲಿಂಗೇಗೌಡ, ಕೆಂಚೇಗೌಡ, ಕೆಂಪೇಗೌಡ, ಕೆಂಪರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು. ಯತ್ತಂಬಾಡಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದು.1
- ಹನೂರು ತಾಲ್ಲೂಕು: ಮಹದೇಶ್ವರ ಬೆಟ್ಟ ಮಾರ್ಗದಲ್ಲಿ ಚಿರತೆ ಮತ್ತು ಎರಡು ಮರಿಗಳು ಪ್ರತ್ಯಕ್ಷ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿರುವ ರಂಗಸ್ವಾಮಿ ಒಡ್ಡಿಯಲ್ಲಿ ಚಿರತೆ ಮತ್ತು ಅದರ ಎರಡು ಮರಿಗಳು ಕಾಣಿಸಿಕೊಂಡ ಘಟನೆ ನಡೆದಿದೆ. ಮಹದೇಶ್ವರ ಬೆಟ್ಟ–ತಾಳಬೆಟ್ಟ ಮಾರ್ಗದ ರಂಗಸ್ವಾಮಿ ಒಡ್ಡಿಯ ತಡೆಗೋಡೆಯ ಮೇಲೆ ಶನಿವಾರ ರಾತ್ರಿ ವೇಳೆ ಚಿರತೆ ತನ್ನ ಎರಡು ಮರಿಗಳೊಂದಿಗೆ ಕುಳಿತಿರುವ ದೃಶ್ಯವನ್ನು, ಅದೇ ಮಾರ್ಗವಾಗಿ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ನಲ್ಲಿದ್ದ ಭಕ್ತರು ಗಮನಿಸಿದ್ದಾರೆ. ಕ ಮಾಡಿದೆ.1
- ಶ್ರೀ ಬೈಯಮ್ಮ ತಾಯಿ ಹಾಗೂ ಆಂಜೆನೇಯ ಸ್ವಾಮಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಾಲಿ ಬಾಲ್ ಹಾಡುವ ಮೂಲಕ ಪಂದ್ಯಾವಳಿಗೆ ಶಾಸಕ ಎಂ.ಆರ್ ಮಂಜುನಾಥ್ ರವರು ಚಾಲನೆ ನೀಡಿದರು. ತಾಲೂಕಿನ ರಾಮಪುರದ ಶ್ರೀ ಬೈಯಮ್ಮ ತಾಯಿ ಹಾಗೂ ಆಂಜೆನೇಯ ಸ್ವಾಮಿ ಟ್ರಸ್ಟ್ ವತಿಯಿಂದ ಇಂದಿರಾ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ರಾಮಪುರದಲ್ಲಿ ಆಯೋಜಿಸಿದ್ದ ವಾಲಿ ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ನಂತರ ಮಾತನಾಡಿದರು.. ಇದೆ ಸಮಯದಲ್ಲಿ ಮುನೇಶ್, ಕೃಷ್ಣಮೂರ್ತಿ,ಎಸ್ ಕುಮಾರ್, ವಿಶ್ವ , ಶಿವ, ಎಂ.ಆರ್ ಬಾಬು, ಮಾಜಿ ಸೈನಿಕರಾದ ಮಾದೇಶ್, ರಾಜೇಂದ್ರ, ಮುತ್ತುರಾಜಮ್ಮ, ಮೂರ್ತಿ,ಪಾಳ್ಯ ಸೀನಾ,ಚಿನ್ನವೆಂಕಟ್, ವಿಜಯ್ ಕುಮಾರ್, ನಟರಾಜು ಗೌಡ, ಗೋವಿಂದ ಸೇರಿದಂತೆ ಇನ್ನಿತರ ಮುಖಂಡರುಗಳು ಇದ್ದರು..4
- ಶಿಡ್ಲಘಟ್ಟ ತಾಲೂಕಿನ ಕಾಚಹಳ್ಳಿ ಅಂಕತಟ್ಟಿ ಗ್ರಾಮಗಳಲ್ಲಿ ಸುಮಾರು 80 ಲಕ್ಷ ವೆಚ್ಚದಲ್ಲಿ ಬೂದು ನೀರು ನಿರ್ವಹಣಾ ಘಟಕಕ್ಕೆ ಲೋಕಾರ್ಪಣೆ2
- ಪೋಷಕರು ತಮ್ಮ ಮಕ್ಕಳು ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಿ:- ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಬಾಗೇಪಲ್ಲಿ:- ಆಸ್ತಿ–ಅಂತಸ್ತು ಮನುಷ್ಯರನ್ನು ಉತ್ತಮರನ್ನಾಗಿಸಲು ಸಾಧ್ಯವಿಲ್ಲ. ಗುಣಮಟ್ಟದ ಶಿಕ್ಷಣದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲೆಯ ಅದ್ಯಕ್ಷ ಹಾಗೂ ಸಂಸ್ಥಾಪಕ ವಿ.ಗೋವಿಂದರಾಜಲು ಹಾಗೂ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ಅವರು ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡಿ ಸಾವಿರಾರು ಮಂದಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಯಶಸ್ಸು ಕಂಡಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಹೇಳಿದರು. ಪಟ್ಟಣದ ಹೊರವಲಯದ ಶನಿವಾರ ಏರ್ಪಡಿಸಿದ್ದ ಕಾರಕೂರು ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲಾ ವಾರ್ಷಿಕೋತ್ಸವ ಹಾಗೂ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾರು ಶಿಕ್ಷಣವನ್ನು ಯಶಸ್ವಿಯಾಗಿ ಪಡೆದು ಉನ್ನತ ಶಿಕ್ಷಣ ಪಡೆಯುತ್ತಾರೋ ಅವರಿಗೆ ಉತ್ತಮ ಭವಿಷ್ಯವಿದೆ. ಶಿಕ್ಷಣ ಸಂಸ್ಥೆ ನಿರ್ವಹಣೆ ಕಠಿಣವಾಗಿರುವ ಸಂದರ್ಭದಲ್ಲಿ ಉತ್ತಮ ಶಿಕ್ಷಕರ ತಂಡದೊಂದಿಗೆ ಸಂಸ್ಕಾರಯುತ ಮೌಲ್ಯದೊಂದಿಗೆ ಮಕ್ಕಳಿಗೆ ಬೋಧನೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾದದ್ದು ಎಂದರು. ಮಕ್ಕಳು ತಮ್ಮ ಜೀವನದ ಭವಿಷ್ಯತ್ ನಲ್ಲಿ ಯಾವು ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುತ್ತಾರೋ, ಏನನ್ನು ಮಾಡಲು ಇಷ್ಟಪಡುತ್ತಾರೋ ಪೋಷಕರು ಮಕ್ಕಳ ಆಸಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಪೋಷಕರಿಗೆ ತಮ್ಮ ಮಕ್ಕಳು ಒಬ್ಬ ಒಳ್ಳೆಯ ಡಾಕ್ಟರ್ ಆಗಬೇಕು, ಇಂಜನಿಯರ್ ಆಗಬೇಕು, ವಿಜ್ಞಾನಿ ಆಗಬೇಕು, ಅನ್ನುವ ಆಸೆ ಇರುತ್ತದೆ ಆದರೆ ಮಕ್ಕಳೇ ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಬೇಕು ಎಂದು ಹೇಳಿದರು.3
- ಕಾಂಗ್ರೆಸ್ ಪಕ್ಷದ ಪುರಸಭೆ ಮಾಜಿ ಅಧ್ಯಕ್ಷ ಬಿ.ಆರ್. ಭಾಸ್ಕರ್ ಅವರ ಹುಟ್ಟುಹಬ್ಬ ಅದ್ದೂರಿಯಾಗಿ ಆಚರಣೆ1
- ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ ಕರಾವಳಿ ಪ್ರಗತಿಯೇ ನಮ್ಮ ಸಂಕಲ್ಪ: ಡಿಸಿಎಂ ಡಿ.ಕೆ. ಶಿವಕುಮಾರ್ ಕರಾವಳಿ ಎಂದರೆ ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ. ದೈವ, ದೇವಾಲಯ, ಶಕ್ತಿದೇವತೆಗಳ ಪ್ರವಾಸಿ ಕ್ಷೇತ್ರ. ವ್ಯಾಪಾರಿಗಳ ನಿಧಿ, ಪ್ರವಾಸಿಗರ ಸ್ವರ್ಗ. ಇಷ್ಟೆಲ್ಲಾ ವಿಶೇಷತೆ ಇರುವಾಗ ಈ ಭಾಗದ ಪ್ರವಾಸೋದ್ಯಮದಲ್ಲಿ ನಾವು ಯಾಕೆ ಹಿಂದುಳಿದಿದ್ದೇವೆ ಎಂಬುದು ಅರ್ಥವಾಗುತ್ತಿಲ್ಲ. ಈ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರಲ್ಲಿ ತಿಳಿಸಿದರು. “ನಮ್ಮಲ್ಲಿ 320 ಕಿ ಮೀ ಕರಾವಳಿ ಪ್ರದೇಶವಿದೆ. ಇಲ್ಲಿ ಪ್ರಕೃತಿ ಸಂಪತ್ತಿನ ಜೊತೆಗೆ, ಈ ಭಾಗದ ಹಿರಿಯರು ದೇಶಕ್ಕೆ ಅನೇಕ ಬ್ಯಾಂಕುಗಳನ್ನು ಕೊಟ್ಟಿದ್ದಾರೆ. ಬ್ಯಾಂಕುಗಳಲ್ಲಿ ಶಿಸ್ತು ಕೊಟ್ಟ ಜನ ನೀವು. ಪ್ರಪಂಚದಾದ್ಯಂತ ಈ ಕರಾವಳಿ ಭಾಗದ ಜನ ಕೆಲಸ ಮಾಡುತ್ತಿದ್ದಾರೆ. ಇದು ಶೈಕ್ಷಣಿಕ ಕೇಂದ್ರವೂ ಆಗಿದೆ. ಇಲ್ಲಿರುವಷ್ಟು ಮೆಡಿಕಲ್, ಇಂಜಿನಿಯರ್, ಪಿಯುಸಿ ಕಾಲೇಜು ಬೇರೆ ಯಾವುದೇ ಜಿಲ್ಲೆಯಲ್ಲಿ ಇಲ್ಲ. ನೀವು ಹೆಚ್ಚು ಮಾನವ ಸಂಪನ್ಮೂಲವನ್ನು ತಯಾರು ಮಾಡುತ್ತಿದ್ದೀರಿ. ಆದರೂ ಈ ಭಾಗದ ಪ್ರತಿಭಾವಂತ ಜನರು ಬೆಂಗಳೂರು, ಮುಂಬೈ ಸೇರಿದಂತೆ ಪ್ರಪಂಚದ ಮೂಲೆ ಮೂಲೆಗೆ ಹೋಗುತ್ತಿದ್ದಾರೆ” ಎಂದು ತಿಳಿಸಿದರು. “ಈ ಭಾಗದಲ್ಲಿ ಸುಂದರ ಸಮುದ್ರ ತೀರವಿದೆ. ಗೋವಾ ಹಾಗೂ ನಮಗೆ ಇರುವ ವ್ಯತ್ಯಾಸವೇನು? ಅಲ್ಲಿರುವ ಸೌಂದರ್ಯ ನಮ್ಮಲ್ಲೂ ಇವೆ. ಆದರೆ ಅವುಗಳನ್ನು ಬಳಸಿಕೊಳ್ಳುವಲ್ಲಿ ನಾವು ಎಡವಿದ್ದೇವೆ. ಏಳೆಂಟು ತಿಂಗಳ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಪ್ರವಾಸೋದ್ಯಮ ನೀತಿ ಬಗ್ಗೆ ಚರ್ಚೆ ಮಾಡಲಾಯಿತು. ಆಗ ಪ್ರವಾಸೋದ್ಯಮ ಅಂತಿಮ ನೀತಿಯನ್ನು ತಡೆ ಹಿಡಿಯುವಂತೆ ಹೇಳಿದೆ. ಕರಾವಳಿ ಭಾಗದಲ್ಲಿ ನಾವು ಪ್ರವಾಸೋದ್ಯಮ ನೀತಿ ರೂಪಿಸಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಣೆ ಮಾಡಬೇಕಾದರೆ ಇಲ್ಲಿರುವ ಅಡಚಣೆ ಹೇಗೆ ಸರಿಪಡಿಸಬಹುದು. ಕಾನೂನು ಚೌಕಟ್ಟಿನಲ್ಲಿ ನಿವಾರಣೆ ಮಾಡಿ ನೂತನ ನೀತಿ ತರಬೇಕು ಎಂದು ಹೇಳಿದೆ” ಎಂದರು. "ಬಹಳಷ್ಟು ಮಂದಿ ವಿದೇಶದಲ್ಲಿ ಇರುವವರು, ಮುಂಬೈ, ಬೆಂಗಳೂರಿನಲ್ಲಿ ನೆಲೆಸಿರುವ ಉದ್ಯಮಿಗಳು ತಮ್ಮ ಸ್ವಂತ ಊರಲ್ಲಿ ಏನಾದರೂ ಮಾಡಬೇಕು ಎನ್ನುವ ಆಸಕ್ತಿ ಹೊಂದಿದ್ದಾರೆ. ಅವರುಗಳು ಸರ್ಕಾರದಿಂದ ಅನುಕೂಲ ಮಾಡಿಕೊಟ್ಟರೆ ಬಂಡವಾಳ ಹೂಡುವುದಾಗಿ ತಿಳಿಸಿದ್ದಾರೆ. ಈ ಕಾರಣಕ್ಕೆ ನಾನು ವಿಧಾನಸಭೆ ಸೇರಿದಂತೆ ಹಲವಾರು ಕಡೆ ಇದರ ಬಗ್ಗೆ ಮಾತನಾಡಿದ್ದೇನೆ" ಎಂದರು. "ಇಲ್ಲಿ ಖಾಸಗಿಯವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಸರ್ಕಾರ ಒಂದಷ್ಟು ಮೂಲಸೌಕರ್ಯಗಳನ್ನು ಒದಗಿಸಿಕೊಡುತ್ತದೆ. ಜೊತೆಗೆ ಅನುಕೂಲತೆ, ಅನಾನುಕೂಲತೆ, ಸಮಸ್ಯೆಗಳನ್ನ ಚರ್ಚೆ ನಡೆಸಬೇಕಿದೆ. ಈ ಭಾಗದ ಎಲ್ಲಾ ಶಾಸಕರ ಬಳಿ ಈ ಬಗ್ಗೆ ಮಾತನಾಡಿದ್ದೇನೆ. ಎಲ್ಲರೂ ಬಹಳ ಆಸಕ್ತಿ ತೋರಿದ್ದಾರೆ" ಎಂದರು. “ಈ ಬಗ್ಗೆ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡಿದಾಗ ಮಂಗಳೂರಿನಲ್ಲೇ ಈ ವಿಚಾರವಾಗಿ ಚರ್ಚೆ ಮಾಡೋಣ ಎಂದು ಹೇಳಿದರು. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚೆಸುವುಗು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ನಂಬಿದ್ದೇನೆ. ಹೀಗಾಗಿ ಇಂದು ನಿಮ್ಮ ಜೊತೆ ಚರ್ಚೆ ಮಾಡಲು ಬಂದಿದ್ದೇನೆ. ನಮ್ಮ ಈ ಪ್ರಯತ್ನಕ್ಕೆ ನಾವು ಕೈಜೊಡಿಸುತ್ತೇವೆ ಎಂದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಈ ಭಾಗದ ಅಭಿವೃದ್ಧಿ ಮಾಡಲು ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿ, ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಿ ಎಲ್ಲರೂ ಬೆಳೆಯುವಂತಾಗಲಿ ಎಂಬುದು ಎಲ್ಲರ ಇಚ್ಛಾಶಕ್ತಿಯಾಗಿದೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಅದು ಶಾಶ್ವತವಾಗಿ ಉಳಿಯಲಿದೆ” ಎಂದರು. “ನಾನು ಸಹಕಾರಿ ಸಚಿವನಾಗಿದ್ದಾಗ, ಈ ಎರಡು ಜಿಲ್ಲೆಗಳ ಬ್ಯಾಂಕುಗಳು ಸಾಲ ವಸೂಲಾತಿಯಲ್ಲಿ 90% ಯಶಸ್ವಿಯಾಗುತ್ತಿದ್ದನ್ನು ನೋಡಿದ್ದೇನೆ. ಇಂತಹ ಶಿಸ್ತುಬದ್ಧ ಜನರ ಜ್ಞಾನ ಸಂಪತ್ತು ಸರಿಯಾಗಿ ಬಳಸಿಕೊಳ್ಳಲು ಈ ಸಭೆ ಕರೆದಿದ್ದೇನೆ. ” “ಈ ಭಾಗಕ್ಕೆ ಮತ್ತೆ ಮರುಜೀವ ನೀಡಲು ಈ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಅಗತ್ಯವಿದೆ. ಈ ಭಾಗ ರಾತ್ರಿ 7ರ ನಂತರ ಸ್ತಬ್ಧವಾಗುತ್ತದೆ ಎಂದು ನಾನು ಈ ಹಿಂದೆ ಹೇಳಿದ್ದೇನೆ. ಕೆಲವರು ಸ್ವಾಗತಿಸಿದರು, ಕೆಲವರು ಟೀಕಿಸಿದರು. ನನ್ನ ಮಾತನ್ನು ಸುಳ್ಳು ಮಾಡುವ ಛಲ ಬರಲಿ ಎಂದು ನಾನು ಟೀಕೆ ಮಾಡಿದ್ದೆ. ಇಂದು ನಾನು ಎಲ್ಲಾ ಉದ್ಯಮದವರನ್ನು ಈ ಸಮಾವೇಶಕ್ಕೆ ಆಹ್ವಾನಿಸಿದ್ದೇನೆ. ನಿಮ್ಮ ಅಭಿಪ್ರಾಯ ಸ್ವೀಕರಿಸಲು ನಾವು ಬದ್ಧವಾಗಿದ್ದೇವೆ. ನೀವು ಮುಕ್ತವಾಗಿ ನಿಮ್ಮ ಸಲಹೆಗಳನ್ನು ನೀಡಿ, ನಿಮ್ಮ ಸಲಹೆ ಅಭಿಪ್ರಾಯಗಳನ್ನು ಒಟ್ಟು ಸೇರಿಸಿ ಹಣಕಾಸು ಸ್ಥಿತಿಗೆ ಅನುಗುಣವಾಗಿ ನಾವು, ಸಿಎಂ, ಪ್ರವಾಸೋದ್ಯಮ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಚರ್ಚೆ ಮಾಡಿ ಸಚಿವ ಸಂಪುಟದ ಮುಂದೆ ಪ್ರಸ್ತಾಪ ಮಾಡುತ್ತೇವೆ” ಎಂದರು. ವರದಿ: ಶಂಶೀರ್ ಬುಡೋಳಿ1
- ಮಾಚಿದೇವರ ಜಯಂತಿ ದಿನವೇ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲು ಶಾಸಕರ ದಿನಾಂಕವನ್ನು ನಿಗದಿಪಡಿಸಿ ಮುಂದಿನ ಕಾರ್ಯಕ್ರಮದ ಬಗ್ಗೆ ತಿಳಿಸಲಾಗುವುದು ಎಂದು ಮುಖಂಡ ವಿಜಯ್ ಕುಮಾರ್ ತಿಳಿಸಿದರು .... ಹನೂರು ಪಟ್ಟಣದ ಆರ್ ಎಂ ಸಿ ಆವರಣದಲ್ಲಿ ಜಿಲ್ಲಾ ಹಾಗೂ ತಾಲೂಕು ಘಟಕದ ಕಮಿಟಿ ಸಭೆ ಹಾಗೂ ಮಾಚಿದೇವರ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು . ಜಿಲ್ಲಾ ಕಮಿಟಿ ರಚನೆ ಮಾಡಲು ತಾಲೂಕಿನ ಸಮುದಾಯದ ಜನ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಪದಾಧಿಕಾರಿಗಳ ಬಗ್ಗೆ ಆಯ್ಕೆ ಮಾಡಲು ಸಹಮತವಿದೆ ಜೊತೆಗೆ ಪಟ್ಟಣದಲ್ಲಿ ಫೆಬ್ರವರಿ 1,ರಂದು ಮಾಚಿದೇವರ ಜಯಂತಿ ದಿನವೇ ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಶಾಸಕರ ದಿನಾಂಕವನ್ನು ನಿಗದಿಪಡಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು . ಸಮುದಾಯದ ದಶಕಗಳ ಬೇಡಿಕೆ : ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ಈ ಹಿಂದೆ ಜನಪ್ರತಿನಿಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು ಆದರೂ ಇಚ್ಛಾಶಕ್ತಿ ಕೊರತೆಯಿಂದ ನೆನೆಗುದಿಗೆ ಬಿದ್ದಿದ್ದ ಸಮುದಾಯ ಭವನಕ್ಕೆ ಶಾಸಕ ಎಂಆರ್ ಮಂಜುನಾಥ್ ಅವರು ಅನುದಾನ ನೀಡಿದ್ದಾರೆ ಅವರ ಉಪಸ್ಥಿತಿಯಲ್ಲಿಯೇ ಭವನ ನಿರ್ಮಾಣ ಮಾಡಲು ದಿನಾಂಕ ನಿಗದಿಪಡಿಸಿ ಹಲವು ವರ್ಷಗಳ ಬೇಡಿಕೆ ಈಡೇರಿಸಲು ತಳ ಸಮುದಾಯಗಳ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿರುವ ಶಾಸಕರು ಪಟ್ಟಣದಲ್ಲಿ ಉತ್ತಮವಾದ ಸಮುದಾಯ ಭವನ ನಿರ್ಮಾಣ ಮಾಡಲು ಸಮುದಾಯ ಜನತೆಗೆ ಭರವಸೆ ನೀಡಿದ್ದಾರೆ ಹೀಗಾಗಿ ಸರ್ಕಾರದಿಂದ ಸಿಗುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಸಮುದಾಯ ಭವನ ನಿರ್ಮಾಣ ಮಾಡಲು ಸಹಕಾರ ನೀಡಬೇಕು ಪ್ರತಿಯೊಬ್ಬರು ಎಂದು ತಿಳಿಸಿದರು ಕಾರ್ಯಕ್ರಮದಲ್ಲಿ ಮೋಹನ್ ಕುಮಾರ್ ಕೃಷ್ಣಮೂರ್ತಿ ರುದ್ರಣ್ಣ ಮಾದೇವ್ ಕುಮಾರ್ ನಂದೀಶ್ ಶಾಂತರಾಜು ಹಾಗೂ ಜಿಲ್ಲೆಯ ತಾಲೂಕಿನ ವಿವಿಧ ಭಾಗದ ಮುಖಂಡರು ಉಪಸ್ಥಿತರಿದ್ದರು1