Shuru
Apke Nagar Ki App…
ಬೆಳಗಾವಿ ಜಿಲ್ಲೆಯ ಅಥಣಿಯ ಹಿಪ್ಪರಗಿ ಡ್ಯಾಮ್ ಗೇಟ್ ಅನುದಾನ ಬಿಡುಗಡೆಯಲ್ಲಿನ ಕ್ರೇಡಿಟ್ ವಾರ್ ಬಿಟ್ಟು, ಅಭಿವೃದ್ದಿ ಕೆಲಸ ಮಾಡಿ ಎಂದು ಸೋಮಯ್ಯ ಮಠಪತಿ ಅವರು ಅಭಿಮತ ತಿಳಿಸಿದ್ದಾರೆ. ಈ ಅನುದಾನ ಬಿಡುಗಡೆಯ ಕ್ರೆಡಿಟ್ ಪಡೆಯುವ ಜಟಾಪಟಿಯನ್ನು ಬಿಟ್ಟು, ಕೇವಲ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಬೇಕೆಂದು ಸೋಮಯ್ಯ ಅವರು ಆಗ್ರಹಿಸಿದ್ದಾರೆ.
Santosh Badakambi
ಬೆಳಗಾವಿ ಜಿಲ್ಲೆಯ ಅಥಣಿಯ ಹಿಪ್ಪರಗಿ ಡ್ಯಾಮ್ ಗೇಟ್ ಅನುದಾನ ಬಿಡುಗಡೆಯಲ್ಲಿನ ಕ್ರೇಡಿಟ್ ವಾರ್ ಬಿಟ್ಟು, ಅಭಿವೃದ್ದಿ ಕೆಲಸ ಮಾಡಿ ಎಂದು ಸೋಮಯ್ಯ ಮಠಪತಿ ಅವರು ಅಭಿಮತ ತಿಳಿಸಿದ್ದಾರೆ. ಈ ಅನುದಾನ ಬಿಡುಗಡೆಯ ಕ್ರೆಡಿಟ್ ಪಡೆಯುವ ಜಟಾಪಟಿಯನ್ನು ಬಿಟ್ಟು, ಕೇವಲ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಬೇಕೆಂದು ಸೋಮಯ್ಯ ಅವರು ಆಗ್ರಹಿಸಿದ್ದಾರೆ.
More news from ಕರ್ನಾಟಕ and nearby areas
- ಬೆಳಗಾವಿ ಜಿಲ್ಲೆಯ ಅಥಣಿಯ ಹಿಪ್ಪರಗಿ ಡ್ಯಾಮ್ ಗೇಟ್ ಅನುದಾನ ಬಿಡುಗಡೆಯಲ್ಲಿನ ಕ್ರೇಡಿಟ್ ವಾರ್ ಬಿಟ್ಟು, ಅಭಿವೃದ್ದಿ ಕೆಲಸ ಮಾಡಿ ಎಂದು ಸೋಮಯ್ಯ ಮಠಪತಿ ಅವರು ಅಭಿಮತ ತಿಳಿಸಿದ್ದಾರೆ. ಈ ಅನುದಾನ ಬಿಡುಗಡೆಯ ಕ್ರೆಡಿಟ್ ಪಡೆಯುವ ಜಟಾಪಟಿಯನ್ನು ಬಿಟ್ಟು, ಕೇವಲ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಬೇಕೆಂದು ಸೋಮಯ್ಯ ಅವರು ಆಗ್ರಹಿಸಿದ್ದಾರೆ.1
- ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸುಣಧೋಳ ಗ್ರಾಮದಲ್ಲಿರುವ ಸರ್ಕಾರಿ ಪಶು ಆಸ್ಪತ್ರೆ ಮುಂಭಾಗದಲ್ಲಿ ಸಾರ್ವಜನಿಕರು ಬಹಿರಂಗ ಶೌಚ ಮಾಡುತ್ತಿದ್ದು, ಇದರಿಂದ ಆಸ್ಪತ್ರೆಯ ಸಿಬ್ಬಂದಿ, ಪಶು ವೈದ್ಯಾಧಿಕಾರಿಗಳು ಹಾಗೂ ಜಾನುವಾರುಗಳನ್ನು ಕರೆತರುವ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಯ ಮುಂಭಾಗವು ತೀವ್ರ ದುರ್ವಾಸನೆಯಿಂದ ಕೂಡಿದ್ದು, ಚಿಕಿತ್ಸೆಗಾಗಿ ಬರುವ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಒಳಗೆ ಪ್ರವೇಶಿಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರಿಗೆ ಹಲವು ಬಾರಿ ಮನವಿ ಮಾಡಿದರೂ ಇದುವರೆಗೆ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪಶು ವೈದ್ಯಾಧಿಕಾರಿಗಳ ಪ್ರಕಾರ, ಆಸ್ಪತ್ರೆಯ ಸುತ್ತ ಕಾಂಪೌಂಡ್ ಗೋಡೆ ನಿರ್ಮಿಸಿ, ಮುಂಭಾಗದಲ್ಲಿ ಗೇಟ್ ಅಳವಡಿಸಿದರೆ ಮಾತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದಾಗಿದೆ. ಪ್ರಸ್ತುತ ನೈರ್ಮಲ್ಯದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಆರೋಗ್ಯಕ್ಕೂ ಹಾನಿಯಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ. ಆದ್ದರಿಂದ, ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ, ಆಸ್ಪತ್ರೆಯ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲು ಮತ್ತು ಸ್ವಚ್ಛತೆಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಿಬ್ಬಂದಿ ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.1
- ಬೆಳಗಾವಿ ಸಚಿವ ಸತೀಶ್ ಜಾರಹೋಳಿ ಅವರು ಸುದ್ದಿ ಗೋಷ್ಠಿ ನಡೆಸಿದ್ದಾರೆ.1
- 7090093920 ಸಂಪರ್ಕಸಿ1
- ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮತ್ತೊಮ್ಮೆ ಖಾರವಾಗಿ ಹಾಗೂ ಏಕವಚನದಲ್ಲಿ ಗುಡುಗಿದ್ದಾರೆ. ವಿನಾಕಾರಣ ತಮ್ಮ ವೈಯಕ್ತಿಕ ವಿಷಯಗಳಿಗೆ ಸುಳ್ಳು ಸೇರಿಸಿ ವ್ಯಕ್ತಿತ್ವಕ್ಕೆ ಧಕ್ಕೆ ತಂದರೆ ತಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿರುವ ಅವರು, ನಿನ್ನ ಇತಿಹಾಸ ಮಾತ್ರವಲ್ಲದೆ ನಿನ್ನ ಅಪ್ಪ-ಅಮ್ಮನ ಇತಿಹಾಸವನ್ನು ಜಾಲಾಡಬೇಕಾಗುತ್ತದೆ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ, ತಾವು ಅಡ್ಡ ಮತದಾನ ಮಾಡಿರುವುದಾಗಿ ಹರಡಿರುವ ಆಧಾರ ರಹಿತ ವಿಷಯಗಳನ್ನು ಹಾಗೂ ತಮ್ಮ ಕುಟುಂಬದ ವಿಚಾರಗಳನ್ನು ವಿಜಯೇಂದ್ರ ತನ್ನ ಛೇಲಾಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಈ ಚಾಳಿಯನ್ನು ನಿಲ್ಲಿಸದಿದ್ದರೆ ಆತನ ಜನ್ಮ ಜಾಲಾಡಬೇಕಾಗುತ್ತದೆ ಎಂದು ಎಚ್ಚರಿಸಿದ ಯತ್ನಾಳ, ಈ ಆಟವನ್ನು ಇಲ್ಲಿಗೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಇದೇ ವೇಳೆ ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಯತ್ನಾಳ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನೇ ಡಿ.ಕೆ. ಶಿವಕುಮಾರ ಅವರಿಗೆ ಅನುಕೂಲ ಮಾಡಿಕೊಡಲು ಅಡ್ಡ ಮತದಾನ ಮಾಡಿಸಿ ನೆರವಾಗಿದ್ದಾನೆ ಎಂದಿದ್ದಾರೆ. ಡಿ.ಕೆ. ಶಿವಕುಮಾರ ತನ್ನ ಹಗರಣಗಳನ್ನು ಹೊರಗೆ ಎಳೆಯುತ್ತಾರೆ ಎಂಬ ಭಯದಿಂದ ವಿಜಯೇಂದ್ರನೇ ಕೆಲವು ಶಾಸಕರಿಗೆ ಕಾಂಗ್ರೆಸ್ಗೆ ಮತದಾನ ಮಾಡುವಂತೆ ನೋಡಿಕೊಂಡಿದ್ದಾನೆ ಎಂದು ಆರೋಪಿಸಿದ ಅವರು, ವಿಜಯೇಂದ್ರ ಅವರನ್ನು ನಾಲಾಯಕ್ ವ್ಯಕ್ತಿ ಎಂದು ಜರೆದಿದ್ದಾರೆ.1
- ಎಸ್ ಐಆರ್ (SIR) ವಿರುದ್ಧ ಕಾಂಗ್ರೆಸ್ ಅಪಸ್ವರ ಎತ್ತುತ್ತಿರುವುದನ್ನು ವಿಜಯಪುರದಲ್ಲಿ ಸಂಸದ ಗೋವಿಂದ ಕಾರಜೋಳ ತೀವ್ರವಾಗಿ ಖಂಡಿಸಿದ್ದು, ಕಾಂಗ್ರೆಸ್ ನಾಯಕರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವುದು ಅಲ್ಪಸಂಖ್ಯಾತರು ಅಥವಾ ಬಡವರ ಹಿತಾಸಕ್ತಿಗಾಗಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಾಯಕ ರಾಹುಲ್ ಗಾಂಧಿ ಅವರ ದ್ವಿಪೌರತ್ವದ ರಹಸ್ಯ ಬಯಲಾಗಬಹುದು ಎಂಬ ಭಯದಿಂದಲೇ ಕಾಂಗ್ರೆಸ್ ಎಸ್ ಐಆರ್ ಅನ್ನು ವಿರೋಧಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಅವರು 1994 ರಿಂದಲೇ ಬ್ರಿಟಿಷ್ ಪೌರತ್ವ ಹೊಂದಿದ್ದಾರೆ ಎಂದು ದೂರಿದ ಸಂಸದರು, ಭಾರತೀಯ ಕಾನೂನಿನ ಪ್ರಕಾರ ಚುನಾವಣಾ ನಾಮಪತ್ರ ಸಲ್ಲಿಸುವಾಗ ಯಾವುದೇ ವಿದೇಶಿ ಪೌರತ್ವ ಹೊಂದಿಲ್ಲ ಎಂದು ಪ್ರಮಾಣಪತ್ರ ನೀಡಬೇಕಾಗುತ್ತದೆ, ಆದರೆ ರಾಹುಲ್ ಗಾಂಧಿ ಈ ವಿಷಯವನ್ನು ಮುಚ್ಚಿಟ್ಟಿದ್ದಾರೆ ಎಂದು ಹೇಳಿದರು. ಈ ಗುಟ್ಟು ರಟ್ಟಾದರೆ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಹಾಗೂ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಕುತ್ತು ಬರಲಿದೆ ಎಂಬ ಭೀತಿಯಿಂದ ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟಿಸುತ್ತಿದೆ ಎಂದು ಗೋವಿಂದ ಕಾರಜೋಳ ಟೀಕಿಸಿದ್ದಾರೆ. ಅಂತಿಮವಾಗಿ, ಈ ಎಸ್ ಐಆರ್ ನಿಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಸದಸ್ಯತ್ವ ರದ್ದಾಗುತ್ತದೆ ಎಂದು ಸಂಸದ ಕಾರಜೋಳ ಖಡಾಖಂಡಿತವಾಗಿ ಹೇಳಿದ್ದಾರೆ.1
- ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದಲ್ಲಿನ ಎಲ್ಲಾ ಕಾಲುವೆಗಳನ್ನು ಸ್ವಚ್ಛಗೊಳಿಸಿ ನೀರು ಬಿಡಬೇಕೆಂದು ಶಾಸಕ ಲಕ್ಷ್ಮಣ ಸವದಿ ಅವರಿಗೆ ಸೋಮಯ್ಯಾ ಮಠಪತಿ ಆಗ್ರಹಿಸಿದ್ದಾರೆ. ಕ್ಷೇತ್ರದಲ್ಲಿರುವ ಕಾಲುವೆಗಳನ್ನು ಸ್ವಚ್ಛಗೊಳಿಸಿ ನೀರು ಹರಿಸುವ ಕೆಲಸವನ್ನು ಶಾಸಕರೇ ಮಾಡಬೇಕಿತ್ತು ಎಂದು ಸೋಮಯ್ಯಾ ಮಠಪತಿ ಅವರು ಒತ್ತಾಯಿಸಿದ್ದಾರೆ.1
- ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಬೆಂಕಿಯ ಅವಘಡ ಸಂಭವಿಸಿದ್ದು, ಒಂದು ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ಈ ಅನಾಹುತದ ವೇಳೆ ಮೂರನೇ ಮಹಡಿಯಲ್ಲಿ ಸಿಲುಕಿದ್ದ ಕಾರ್ಮಿಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ.1