ಜಿಲ್ಲೆಯಲ್ಲಿ ಕರವೇ ಸಂಘಟನೆ ಹಿಂದುಳಿದಿದೆ ಜಿಲ್ಲಾಧ್ಯಕ್ಷರನ್ನ ಬದಲಾವಣೆಗೆ ಕಾರಣ : ಎಂ. ಎನ್. ಶ್ರೀನಿವಾಸ್ ಕೋಲಾರ : ಜಿಲ್ಲಾ ಕರವೇ ಸಂಘಟನೆ ಜಿಲ್ಲಾ ಕೇಂದ್ರ ಸೇರಿದಂತೆ, ಕೆಜಿಎಫ್, ಶ್ರೀನಿವಾಸಪುರ, ಮುಳಬಾಗಿಲು ತಾಲೂಕುಗಳಲ್ಲಿ ಕರವೇ ಸಂಘಟನೆ ತೀರ ಹಿಂದುಳಿದ್ದು, ಈ ನಿಟ್ಟಿನಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಕರವೇ ಕೋಲಾರ ಜಿಲ್ಲಾಧ್ಯಕ್ಷರನ್ನು ಬದಲಾವಣೆಗೊಳಿಸಿ, ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಿ, ಜವಾಬ್ದಾರಿಯನ್ನು ನೀಡಿದ್ದು, ಮುಂದೆ ಮತ್ತಷ್ಟು ಸಂಘಟನೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಕರವೇ ಸಂಘಟನೆ ಜಿಲ್ಲಾಧ್ಯಕ್ಷ ಎಂ. ಎನ್. ಶ್ರೀನಿವಾಸ್ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಂಗಾರಪೇಟೆ, ಮಾಲೂರು ತಾಲೂಕುಗಳಲ್ಲಿ ಸಂಘಟನೆ ಬಲಿಷ್ಠವಾಗಿದೆ. ಇತರೆ ತಾಲೂಕುಗಳಲ್ಲಿ ಸಹ ಕರವೇ ಸಂಘಟನೆಯನ್ನು ಬಲಪಡಿಸುವ ಕೆಲಸಕ್ಕೆ ಆದ್ಯತೆಯಾಗಿದೆ ಎಂದರು. ಜಿಲ್ಲೆಯ ಪ್ರತಿ ಯೊಂದು ತಾಲೂಕುಗಳಲ್ಲಿ ಕರವೇ ತಾಲೂಕು ಕೇಂದ್ರಗಳಲ್ಲಿ ಕರವೇ ಪದಾಧಿಕಾರಿಗಳನ್ನು ನೇಮಕ ಮಾಡಿ, ಈ ನಿಟ್ಟಿನಲ್ಲಿ ವಾಣಿಜ್ಯ ಮಳಿಗೆಗಳಿಗೆ ಹಾಗೂ ಕೈಗಾರಿಕೆ ವಲಯದ ಕಂಪನಿಗಳಿಗೆ ಶೇ.60 ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ, ಜಿಲ್ಲಾಡಳಿತ, ಮತ್ತು ನಗರ ಸಭೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೂ ಸಹ ಎಚ್ಛೆತ್ತುಕೊಂಡಿಲ್ಲ ಎಂದರು. ವೇಮಗಲ್, ನರಸಾಪುರ, ಮಾಲೂರು ಕೈಗಾರಿಕೆ ವಲಯಗಳಲ್ಲಿ ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಲು ಮುಂದಿನ 15 ದಿನದೊಳಗೆ ಆಂಗ್ಲ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ತಿಳಿಸಿದರು. ಜಿಲ್ಲೆಯ ಕೈಗಾರಿಕೆಗಳಲ್ಲಿ ಜಿಲ್ಲೆಯ ಸ್ಥಳೀಯ ಯುವಕರಿಗೆ ಉದ್ಯೋಗದಿಂದ ವಂಚಿತರಾಗಿದ್ದು, ಸ್ಥಳೀಯ ಕೈಗಾರಿಕೆಯಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಒತ್ತಾಯಿಸಿದರು. ಹೊರ ರಾಜ್ಯದ ಕಾರ್ಮಿಕ ರ ಹೆಚ್ಚಿನ ಸಂಖ್ಯೆಯಿಂದ ಕನ್ನಡಿಗರು ಉದ್ಯೋಗದಿಂದ ದೂರ ಉಳಿಯುತ್ತಿದ್ದು, ಕರವೇ ಹೋರಾಟದ ಮೂಲಕ ಉತ್ತರ ನೀಡಲಾಗುತ್ತದೆ ಎಂದು ತಿಳಿಸಿದರು. ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ. ಕೆ. ರಾಘವೇಂದ್ರ ಅವರನ್ನು ಕರವೇ ರಾಜ್ಯ ಸಮಿತಿಗೆ ಶೀಘ್ರದಲ್ಲೇ ನೇಮಕವನ್ನು ಮಾಡಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಆದೇಶವನ್ನು ಮಾಡಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಮುಳಬಾಗಿಲು ಬಂಗಾರಿ ಮಂಜು, ಶಿವು, ರಾಮ್ ಪ್ರಸಾದ್, ಎಂ ಸಿ ರವಿ, ಲೀಲಾವತಿ, ಸುಮಾ ಮಂಜುನಾಥ್, ಮುರಳೀಧರ್ ಇದ್ದರು.
ಜಿಲ್ಲೆಯಲ್ಲಿ ಕರವೇ ಸಂಘಟನೆ ಹಿಂದುಳಿದಿದೆ ಜಿಲ್ಲಾಧ್ಯಕ್ಷರನ್ನ ಬದಲಾವಣೆಗೆ ಕಾರಣ : ಎಂ. ಎನ್. ಶ್ರೀನಿವಾಸ್ ಕೋಲಾರ : ಜಿಲ್ಲಾ ಕರವೇ ಸಂಘಟನೆ ಜಿಲ್ಲಾ ಕೇಂದ್ರ ಸೇರಿದಂತೆ, ಕೆಜಿಎಫ್, ಶ್ರೀನಿವಾಸಪುರ, ಮುಳಬಾಗಿಲು ತಾಲೂಕುಗಳಲ್ಲಿ ಕರವೇ ಸಂಘಟನೆ ತೀರ ಹಿಂದುಳಿದ್ದು, ಈ ನಿಟ್ಟಿನಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಕರವೇ ಕೋಲಾರ ಜಿಲ್ಲಾಧ್ಯಕ್ಷರನ್ನು ಬದಲಾವಣೆಗೊಳಿಸಿ, ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಿ, ಜವಾಬ್ದಾರಿಯನ್ನು ನೀಡಿದ್ದು, ಮುಂದೆ ಮತ್ತಷ್ಟು ಸಂಘಟನೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಕರವೇ ಸಂಘಟನೆ ಜಿಲ್ಲಾಧ್ಯಕ್ಷ ಎಂ. ಎನ್. ಶ್ರೀನಿವಾಸ್ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಂಗಾರಪೇಟೆ, ಮಾಲೂರು ತಾಲೂಕುಗಳಲ್ಲಿ ಸಂಘಟನೆ ಬಲಿಷ್ಠವಾಗಿದೆ. ಇತರೆ ತಾಲೂಕುಗಳಲ್ಲಿ ಸಹ ಕರವೇ ಸಂಘಟನೆಯನ್ನು ಬಲಪಡಿಸುವ ಕೆಲಸಕ್ಕೆ ಆದ್ಯತೆಯಾಗಿದೆ ಎಂದರು. ಜಿಲ್ಲೆಯ ಪ್ರತಿ ಯೊಂದು ತಾಲೂಕುಗಳಲ್ಲಿ ಕರವೇ ತಾಲೂಕು ಕೇಂದ್ರಗಳಲ್ಲಿ ಕರವೇ ಪದಾಧಿಕಾರಿಗಳನ್ನು ನೇಮಕ ಮಾಡಿ, ಈ ನಿಟ್ಟಿನಲ್ಲಿ ವಾಣಿಜ್ಯ ಮಳಿಗೆಗಳಿಗೆ ಹಾಗೂ ಕೈಗಾರಿಕೆ ವಲಯದ ಕಂಪನಿಗಳಿಗೆ ಶೇ.60 ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ, ಜಿಲ್ಲಾಡಳಿತ, ಮತ್ತು ನಗರ ಸಭೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೂ ಸಹ ಎಚ್ಛೆತ್ತುಕೊಂಡಿಲ್ಲ ಎಂದರು. ವೇಮಗಲ್, ನರಸಾಪುರ, ಮಾಲೂರು ಕೈಗಾರಿಕೆ ವಲಯಗಳಲ್ಲಿ ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಲು ಮುಂದಿನ 15 ದಿನದೊಳಗೆ ಆಂಗ್ಲ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ತಿಳಿಸಿದರು. ಜಿಲ್ಲೆಯ ಕೈಗಾರಿಕೆಗಳಲ್ಲಿ ಜಿಲ್ಲೆಯ ಸ್ಥಳೀಯ ಯುವಕರಿಗೆ ಉದ್ಯೋಗದಿಂದ ವಂಚಿತರಾಗಿದ್ದು, ಸ್ಥಳೀಯ ಕೈಗಾರಿಕೆಯಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಒತ್ತಾಯಿಸಿದರು. ಹೊರ ರಾಜ್ಯದ ಕಾರ್ಮಿಕ ರ ಹೆಚ್ಚಿನ ಸಂಖ್ಯೆಯಿಂದ ಕನ್ನಡಿಗರು ಉದ್ಯೋಗದಿಂದ ದೂರ ಉಳಿಯುತ್ತಿದ್ದು, ಕರವೇ ಹೋರಾಟದ ಮೂಲಕ ಉತ್ತರ ನೀಡಲಾಗುತ್ತದೆ ಎಂದು ತಿಳಿಸಿದರು. ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ. ಕೆ. ರಾಘವೇಂದ್ರ ಅವರನ್ನು ಕರವೇ ರಾಜ್ಯ ಸಮಿತಿಗೆ ಶೀಘ್ರದಲ್ಲೇ ನೇಮಕವನ್ನು ಮಾಡಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಆದೇಶವನ್ನು ಮಾಡಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಮುಳಬಾಗಿಲು ಬಂಗಾರಿ ಮಂಜು, ಶಿವು, ರಾಮ್ ಪ್ರಸಾದ್, ಎಂ ಸಿ ರವಿ, ಲೀಲಾವತಿ, ಸುಮಾ ಮಂಜುನಾಥ್, ಮುರಳೀಧರ್ ಇದ್ದರು.
- ಬಂಗಾರಪೇಟೆ ಗೃಹಜ್ಯೋತಿ ಪರಿಶೀಲನೆಗೆ ನಿರ್ಲಕ್ಷ್ಯ: ಆಸಿಡ್ ಬಾಟಲಿ ಹಿಡಿದು ಹೈಡ್ರಾಮಾ!ಬೆಸ್ಕಾಂ ಕಚೇರಿ ಮುಂದೆ ಮೂವರು ಜಿವಿಪಿಗಳ ಆತ್ಮಹತ್ಯೆ ಬೆದರಿಕೆ; ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಮನೆ ಪರಿಶೀಲನೆಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ಇಲಾಖೆಯ ಮೂವರು ಜಿವಿಪಿಗಳು ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹೈಡ್ರಾಮಾ ನಡೆದ ಘಟನೆ ಬೆಸ್ಕಾಂ ಕಚೇರಿ ಮುಂದೆ ನಡೆದಿದೆ. ಜಿವಿಪಿಗಳಾದ ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರು ಬೆಳಗ್ಗೆ ಸುಮಾರು 9.30ರ ವೇಳೆಗೆ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬೆಸ್ಕಾಂ ಇಲಾಖೆಯ ಸಿಬ್ಬಂದಿ ಮೂವರನ್ನು ಸಮಾಧಾನಪಡಿಸಿ, ಆಸಿಡ್ ಬಾಟಲಿಯನ್ನು ವಶಕ್ಕೆ ಪಡೆದರು. ಗೃಹಜ್ಯೋತಿ ಯೋಜನೆಯಡಿ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ನೈಜ ಸ್ಥಿತಿಗತಿ ಪರಿಶೀಲಿಸುವಂತೆ ಸರ್ಕಾರ ಬೆಸ್ಕಾಂಗೆ ಸೂಚಿಸಿದೆ. ಫಲಾನುಭವಿಗಳ ಪಟ್ಟಿಯೊಂದಿಗೆ ಮನೆಮನೆಗೆ ತೆರಳಿ ಪರಿಶೀಲನೆ ನಡೆಸಿ, ಅರ್ಹತೆ ಇಲ್ಲದಿರುವ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯ ದುರುಪಯೋಗವಾಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನೆಗೆ ಒತ್ತು ನೀಡಲಾಗಿದ್ದು, ಆಗಸ್ಟ್ 31ರೊಳಗೆ ಪರಿಶೀಲನೆ ಪೂರ್ಣಗೊಳಿಸುವ ಗುರಿ ನೀಡಲಾಗಿದೆ. ಘಟನೆ ಕುರಿತು ಬೆಸ್ಕಾಂ ಎಇಇ ಸುಕುಮಾರ್ ರಾಜು ಸ್ಪಷ್ಟನೆ ನೀಡಿ, ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನೆ ಕಾರ್ಯದಲ್ಲಿ ಈ ಮೂವರು ಜಿವಿಪಿಗಳು ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ ಎಂದು ಆರೋಪಿಸಿದರು. ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರಿಗೆ ತಲಾ 400ಕ್ಕೂ ಹೆಚ್ಚು ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸುವ ಜವಾಬ್ದಾರಿ ನೀಡಲಾಗಿತ್ತು. ಆದರೆ, ಈ ಪಟ್ಟಿಯಲ್ಲಿನ ಫಲಾನುಭವಿಗಳ ಪರಿಶೀಲನೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದು, ಗಣನೀಯ ಸಂಖ್ಯೆಯ ಫಲಾನುಭವಿಗಳ ಪರಿಶೀಲನೆ ಬಾಕಿ ಉಳಿದಿದೆ ಎಂದು ತಿಳಿಸಿದರು. ಸರ್ಕಾರ ನಿಗದಿಪಡಿಸಿರುವ ಗಡುವಿನೊಳಗೆ ಪರಿಶೀಲನೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಕಾರ್ಯದ ಪ್ರಗತಿ ಸಾಧಿಸುವಂತೆ ಜಿವಿಪಿಗಳಿಗೆ ಸೂಚಿಸಲಾಗಿತ್ತು. ಕರ್ತವ್ಯ ನಿರ್ವಹಣೆ ಕುರಿತು ಪ್ರಶ್ನಿಸಿದಾಗ ಈ ರೀತಿಯಾಗಿ ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಬೆದರಿಕೆ ಹಾಕಿರುವುದು ಸರಿಯಲ್ಲ ಎಂದು ಎಇಇ ಹೇಳಿದರು. ಇತ್ತ ಜಿವಿಪಿಗಳಾದ ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರು ಅಧಿಕಾರಿಗಳ ಆರೋಪವನ್ನು ತಳ್ಳಿಹಾಕಿದ್ದಾರೆ. ತಮಗೆ ನೀಡಲಾಗಿದ್ದ ಫಲಾನುಭವಿಗಳ ಪಟ್ಟಿಯಲ್ಲಿ ಸುಮಾರು ಶೇ.80ರಷ್ಟು ಮನೆಗಳ ಪರಿಶೀಲನೆ ಪೂರ್ಣಗೊಳಿಸಲಾಗಿದೆ. ಉಳಿದ ಫಲಾನುಭವಿಗಳ ಪೈಕಿ ಹಲವರು ಸ್ಥಳದಲ್ಲಿ ಸಿಗದಿರುವುದು, ಮನೆ ಬದಲಿಸಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಪರಿಶೀಲನೆ ಸಾಧ್ಯವಾಗುತ್ತಿಲ್ಲ. ಈ ಕುರಿತು ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದ್ದಾರೆ. ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಹಾಗೂ ಮಕ್ಕಳ ಶಿಕ್ಷಣದ ವೆಚ್ಚ ಭರಿಸಲು ತೊಂದರೆಯಾಗಿದೆ. ಇಲಾಖೆಯಲ್ಲಿನ ಆಂತರಿಕ ಸಮಸ್ಯೆಯಿಂದ ತಮ್ಮ ಮೇಲೆ ಹೆಚ್ಚಿನ ಕೆಲಸದ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಜಿವಿಪಿಗಳು ಆಸಿಡ್ ಬಾಟಲಿ ಹಿಡಿದಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಅಧಿಕಾರಿಗಳು ಅವರನ್ನು ಸಮಾಧಾನಪಡಿಸಿದರು. ಬಳಿಕ ಎಇಇ ಸುಕುಮಾರ್ ರಾಜು ಹಾಗೂ ಮೂವರು ಜಿವಿಪಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಕರ್ತವ್ಯ ನಿರ್ವಹಿಸದೆ ವೇತನ ಪಡೆಯುವುದು ಹೇಗೆ? ಅಗತ್ಯ ದಾಖಲೆಗಳನ್ನು ನೀಡದೆ ವೇತನ ಪಾವತಿಸಲು ಸಾಧ್ಯವೇ? ಎಂದು ಬೆಸ್ಕಾಂ ಎಇಇ ಸುಕುಮಾರ್ ರಾಜು ಪ್ರಶ್ನಿಸಿದರೆ, ಕೆಲಸ ಮಾಡಿದ್ದರೂ ಐದು ತಿಂಗಳಿಂದ ವೇತನ ನೀಡಿಲ್ಲ ಎಂದು ಜಿವಿಪಿಗಳು ಪ್ರತಿಯಾಗಿ ವಾದಿಸಿದರು. ಈ ಘಟನೆ ಇದೀಗ ಬೆಸ್ಕಾಂ ಇಲಾಖೆಯಲ್ಲಿನ ಕೆಲಸದ ಪ್ರಗತಿ ಹಾಗೂ ವೇತನ ಪಾವತಿ ವಿಚಾರವನ್ನು ಮುನ್ನೆಲೆಗೆ ತಂದಿದೆ. ಜಿವಿಪಿಗಳು ಕರ್ತವ್ಯ ನಿರ್ವಹಿಸಿಲ್ಲ ಎಂಬ ಅಧಿಕಾರಿಗಳ ಆರೋಪ ಹಾಗೂ ತಾವು ಕೆಲಸ ಮಾಡಿದ್ದರೂ ವೇತನ ನೀಡಿಲ್ಲ ಎಂಬ ಜಿವಿಪಿಗಳ ಆರೋಪವಾಗಿದೆ.1
- MBBS students felicitation function1
- *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*2
- ಎಂ. ಶ್ರೀನಿವಾಸನ್ ಸ್ಮರಣಾರ್ಥ ಆ.27ರಂದು ಶ್ರೀನಿವಾಸಪುರದಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ, ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಸಹಾಯಧನ ಪ್ರತಿ ಹೋಬಳಿಯ ಇಬ್ಬರು ಬಡ ಎಸ್ಸಿ ವಿದ್ಯಾರ್ಥಿಗಳಿಗೆ ನೆರವು.1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಉರುಸ್ ಮಹೋತ್ಸವ ಶಾಂತಿ,ಸೌಹಾರ್ದತೆಗೆ ಪ್ರಾರ್ಥಿಸಿದ:ದರ್ಗಾದಲ್ಲಿ ಜೆ.ಕೆ. ಕೃಷ್ಣಾರೆಡ್ಡಿ ವಿಶೇಷ ಪೂಜೆ1
- ಈದ್ ಮಿಲಾದ್ ಅಂಗವಾಗಿ ಹೊಸಕೋಟೆಯಲ್ಲಿ ಬೃಹತ್ ಮೆರವಣಿಗೆ ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಹೊಸಕೋಟೆ: ಈದ್ ಮಿಲಾದ್ ಹಬ್ಬದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಅದ್ದೂರಿ ಬೃಹತ್ ಮೆರವಣಿಗೆ ನಡೆಯಿತು. ನಗರದ ಹಳೆ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ, ಪ್ರಮುಖ ರಸ್ತೆಗಳಲ್ಲಿ ಸಾಗಿತು. ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಲಾಯಿತು. ಜಾಮೀಯಾ ಮಸೀದಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮೆರವಣಿಗೆಗೆ ಮುಸ್ಲಿಂ ಮುಖಂಡರು ನೇತೃತ್ವ ವಹಿಸಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಡಿವೈಎಸ್ಪಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.4
- ಶಿಡ್ಲಘಟ್ಟ ದಲ್ಲಿ ಭೀಕರ ಅಪಘಾತ ಒಬ್ಬ ವ್ಯಕ್ತಿ ಸಾವು ಮತ್ತೊಬ್ಬ ಗಂಬೀರ ಟಾಕ್ಸಿಕ್ ಸಿನಿಮಾ ನೋಡಲು ಹೋದಾಗ ನಡೆದ ಘಟನೆ1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ1