logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆಗಳು ಸಮೃದ್ಧವಾಗಿ ಬೆಳೆಯಲಿ ಹಾಗೂ ರೈತರ ಬದುಕಿನಲ್ಲಿ ನೆಮ್ಮದಿ ನೆಲೆಸಲಿ ಎಂಬ ಉದ್ದೇಶದಿಂದ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ವತಿಯಿಂದ ಜುಲೈ 17ರಂದು ವಿಶೇಷ ಪಾದಯಾತ್ರೆ ಹಾಗೂ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ತಿಳಿಸಿದ್ದಾರೆ. ಮಾನ್ವಿ ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಇಲ್ಲದೆ ಬಿತ್ತನೆ ಮಾಡಿದ ಬೆಳೆಗಳು ಒಣಗುವ ಪರಿಸ್ಥಿತಿ ಬಂದಿದ್ದು ರೈತರು ತೀವ್ರ ಆತಂಕದಲ್ಲಿದ್ದಾರೆ. ರೈತರ ಸಂಕಷ್ಟ ನಿವಾರಣೆಯಾಗಲಿ ಎಂಬ ಸಂಕಲ್ಪದೊಂದಿಗೆ ದೇವರ ಮೊರೆ ಹೋಗಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಈ ವಿಶೇಷ ಪಾದಯಾತ್ರೆಯು ಜುಲೈ 17ರಂದು ಬೆಳಗ್ಗೆ 9 ಗಂಟೆಗೆ ಮಾನ್ವಿ ಪಟ್ಟಣದ ಕೊನಾಪೂರ್ ಪೇಟೆಯ ಶ್ರೀ ಮಾರಿಕಾಂಬಾ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆರಂಭವಾಗಲಿದೆ. ನಂತರ ಟಿಪ್ಪು ಸುಲ್ತಾನ್ ವೃತ್ತದ ಮಾರ್ಗವಾಗಿ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನ, ಕಚೇರಿ ಆಂಜನೇಯ ಸ್ವಾಮಿ ದೇವಸ್ಥಾನ, ಬಸವ ವೃತ್ತ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮಾರ್ಗವಾಗಿ ಶ್ರೀ ಲಕ್ಷ್ಮೀ ದೇವಸ್ಥಾನ ತಲುಪಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಅಲ್ಲಿಂದ ನೀರಮಾನ್ವಿ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನಕ್ಕೆ ತಲುಪಿ ಕೊನೆಯ ವಿಶೇಷ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮವು ಸಮಾರೋಪಗೊಳ್ಳಲಿದೆ. ರೈತರ ಹಿತಾಸಕ್ತಿಗಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ಮಾನ್ವಿ ತಾಲೂಕು ಅಧ್ಯಕ್ಷ ಈರಣ್ಣ ಮರ್ಲಟ್ಟಿ, ಸಿರವಾರ ತಾಲೂಕು ಅಧ್ಯಕ್ಷ ಟಿ. ಮಲ್ಲಿಕಾರ್ಜುನ ಪಾಟೀಲ್, ನಗರ ಘಟಕದ ಅಧ್ಯಕ್ಷ ಹೆಚ್. ಮೌನೇಶ್ ಗೌಡ, ರೈತ ಘಟಕದ ಅಧ್ಯಕ್ಷ ಶರಣಪ್ಪ ಗೌಡ ಮದ್ಲಾಪೂರ್ ಹಾಗೂ ಮುಖಂಡ ಬಾಷ ಸಾಬ್ ಸೇರಿದಂತೆ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

1 hr ago
user_ಬಸವರಾಜ ಭೋಗಾವತಿ
ಬಸವರಾಜ ಭೋಗಾವತಿ
Local News Reporter ಮಾನ್ವಿ, ರಾಯಚೂರು, ಕರ್ನಾಟಕ•
1 hr ago

ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆಗಳು ಸಮೃದ್ಧವಾಗಿ ಬೆಳೆಯಲಿ ಹಾಗೂ ರೈತರ ಬದುಕಿನಲ್ಲಿ ನೆಮ್ಮದಿ ನೆಲೆಸಲಿ ಎಂಬ ಉದ್ದೇಶದಿಂದ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ವತಿಯಿಂದ ಜುಲೈ 17ರಂದು ವಿಶೇಷ ಪಾದಯಾತ್ರೆ ಹಾಗೂ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ತಿಳಿಸಿದ್ದಾರೆ. ಮಾನ್ವಿ ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಇಲ್ಲದೆ ಬಿತ್ತನೆ ಮಾಡಿದ ಬೆಳೆಗಳು ಒಣಗುವ ಪರಿಸ್ಥಿತಿ ಬಂದಿದ್ದು ರೈತರು ತೀವ್ರ ಆತಂಕದಲ್ಲಿದ್ದಾರೆ. ರೈತರ ಸಂಕಷ್ಟ ನಿವಾರಣೆಯಾಗಲಿ ಎಂಬ ಸಂಕಲ್ಪದೊಂದಿಗೆ ದೇವರ ಮೊರೆ ಹೋಗಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಈ ವಿಶೇಷ ಪಾದಯಾತ್ರೆಯು ಜುಲೈ 17ರಂದು ಬೆಳಗ್ಗೆ 9 ಗಂಟೆಗೆ ಮಾನ್ವಿ ಪಟ್ಟಣದ ಕೊನಾಪೂರ್ ಪೇಟೆಯ ಶ್ರೀ ಮಾರಿಕಾಂಬಾ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆರಂಭವಾಗಲಿದೆ. ನಂತರ ಟಿಪ್ಪು ಸುಲ್ತಾನ್ ವೃತ್ತದ ಮಾರ್ಗವಾಗಿ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನ, ಕಚೇರಿ ಆಂಜನೇಯ ಸ್ವಾಮಿ ದೇವಸ್ಥಾನ, ಬಸವ ವೃತ್ತ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮಾರ್ಗವಾಗಿ ಶ್ರೀ ಲಕ್ಷ್ಮೀ ದೇವಸ್ಥಾನ ತಲುಪಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಅಲ್ಲಿಂದ ನೀರಮಾನ್ವಿ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನಕ್ಕೆ ತಲುಪಿ ಕೊನೆಯ ವಿಶೇಷ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮವು ಸಮಾರೋಪಗೊಳ್ಳಲಿದೆ. ರೈತರ ಹಿತಾಸಕ್ತಿಗಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ಮಾನ್ವಿ ತಾಲೂಕು ಅಧ್ಯಕ್ಷ ಈರಣ್ಣ ಮರ್ಲಟ್ಟಿ, ಸಿರವಾರ ತಾಲೂಕು ಅಧ್ಯಕ್ಷ ಟಿ. ಮಲ್ಲಿಕಾರ್ಜುನ ಪಾಟೀಲ್, ನಗರ ಘಟಕದ ಅಧ್ಯಕ್ಷ ಹೆಚ್. ಮೌನೇಶ್ ಗೌಡ, ರೈತ ಘಟಕದ ಅಧ್ಯಕ್ಷ ಶರಣಪ್ಪ ಗೌಡ ಮದ್ಲಾಪೂರ್ ಹಾಗೂ ಮುಖಂಡ ಬಾಷ ಸಾಬ್ ಸೇರಿದಂತೆ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆಗಳು ಸಮೃದ್ಧವಾಗಿ ಬೆಳೆಯಲಿ ಹಾಗೂ ರೈತರ ಬದುಕಿನಲ್ಲಿ ನೆಮ್ಮದಿ ನೆಲೆಸಲಿ ಎಂಬ ಉದ್ದೇಶದಿಂದ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ವತಿಯಿಂದ ಜುಲೈ 17ರಂದು ವಿಶೇಷ ಪಾದಯಾತ್ರೆ ಹಾಗೂ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ತಿಳಿಸಿದ್ದಾರೆ. ಮಾನ್ವಿ ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಇಲ್ಲದೆ ಬಿತ್ತನೆ ಮಾಡಿದ ಬೆಳೆಗಳು ಒಣಗುವ ಪರಿಸ್ಥಿತಿ ಬಂದಿದ್ದು ರೈತರು ತೀವ್ರ ಆತಂಕದಲ್ಲಿದ್ದಾರೆ. ರೈತರ ಸಂಕಷ್ಟ ನಿವಾರಣೆಯಾಗಲಿ ಎಂಬ ಸಂಕಲ್ಪದೊಂದಿಗೆ ದೇವರ ಮೊರೆ ಹೋಗಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಈ ವಿಶೇಷ ಪಾದಯಾತ್ರೆಯು ಜುಲೈ 17ರಂದು ಬೆಳಗ್ಗೆ 9 ಗಂಟೆಗೆ ಮಾನ್ವಿ ಪಟ್ಟಣದ ಕೊನಾಪೂರ್ ಪೇಟೆಯ ಶ್ರೀ ಮಾರಿಕಾಂಬಾ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆರಂಭವಾಗಲಿದೆ. ನಂತರ ಟಿಪ್ಪು ಸುಲ್ತಾನ್ ವೃತ್ತದ ಮಾರ್ಗವಾಗಿ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನ, ಕಚೇರಿ ಆಂಜನೇಯ ಸ್ವಾಮಿ ದೇವಸ್ಥಾನ, ಬಸವ ವೃತ್ತ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮಾರ್ಗವಾಗಿ ಶ್ರೀ ಲಕ್ಷ್ಮೀ ದೇವಸ್ಥಾನ ತಲುಪಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಅಲ್ಲಿಂದ ನೀರಮಾನ್ವಿ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನಕ್ಕೆ ತಲುಪಿ ಕೊನೆಯ ವಿಶೇಷ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮವು ಸಮಾರೋಪಗೊಳ್ಳಲಿದೆ. ರೈತರ ಹಿತಾಸಕ್ತಿಗಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ಮಾನ್ವಿ ತಾಲೂಕು ಅಧ್ಯಕ್ಷ ಈರಣ್ಣ ಮರ್ಲಟ್ಟಿ, ಸಿರವಾರ ತಾಲೂಕು ಅಧ್ಯಕ್ಷ ಟಿ. ಮಲ್ಲಿಕಾರ್ಜುನ ಪಾಟೀಲ್, ನಗರ ಘಟಕದ ಅಧ್ಯಕ್ಷ ಹೆಚ್. ಮೌನೇಶ್ ಗೌಡ, ರೈತ ಘಟಕದ ಅಧ್ಯಕ್ಷ ಶರಣಪ್ಪ ಗೌಡ ಮದ್ಲಾಪೂರ್ ಹಾಗೂ ಮುಖಂಡ ಬಾಷ ಸಾಬ್ ಸೇರಿದಂತೆ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆಗಳು ಸಮೃದ್ಧವಾಗಿ ಬೆಳೆಯಲಿ ಹಾಗೂ ರೈತರ ಬದುಕಿನಲ್ಲಿ ನೆಮ್ಮದಿ ನೆಲೆಸಲಿ ಎಂಬ ಉದ್ದೇಶದಿಂದ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ವತಿಯಿಂದ ಜುಲೈ 17ರಂದು ವಿಶೇಷ ಪಾದಯಾತ್ರೆ ಹಾಗೂ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ತಿಳಿಸಿದ್ದಾರೆ. ಮಾನ್ವಿ ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಇಲ್ಲದೆ ಬಿತ್ತನೆ ಮಾಡಿದ ಬೆಳೆಗಳು ಒಣಗುವ ಪರಿಸ್ಥಿತಿ ಬಂದಿದ್ದು ರೈತರು ತೀವ್ರ ಆತಂಕದಲ್ಲಿದ್ದಾರೆ. ರೈತರ ಸಂಕಷ್ಟ ನಿವಾರಣೆಯಾಗಲಿ ಎಂಬ ಸಂಕಲ್ಪದೊಂದಿಗೆ ದೇವರ ಮೊರೆ ಹೋಗಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಈ ವಿಶೇಷ ಪಾದಯಾತ್ರೆಯು ಜುಲೈ 17ರಂದು ಬೆಳಗ್ಗೆ 9 ಗಂಟೆಗೆ ಮಾನ್ವಿ ಪಟ್ಟಣದ ಕೊನಾಪೂರ್ ಪೇಟೆಯ ಶ್ರೀ ಮಾರಿಕಾಂಬಾ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆರಂಭವಾಗಲಿದೆ. ನಂತರ ಟಿಪ್ಪು ಸುಲ್ತಾನ್ ವೃತ್ತದ ಮಾರ್ಗವಾಗಿ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನ, ಕಚೇರಿ ಆಂಜನೇಯ ಸ್ವಾಮಿ ದೇವಸ್ಥಾನ, ಬಸವ ವೃತ್ತ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮಾರ್ಗವಾಗಿ ಶ್ರೀ ಲಕ್ಷ್ಮೀ ದೇವಸ್ಥಾನ ತಲುಪಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಅಲ್ಲಿಂದ ನೀರಮಾನ್ವಿ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನಕ್ಕೆ ತಲುಪಿ ಕೊನೆಯ ವಿಶೇಷ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮವು ಸಮಾರೋಪಗೊಳ್ಳಲಿದೆ.

ರೈತರ ಹಿತಾಸಕ್ತಿಗಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ಮಾನ್ವಿ ತಾಲೂಕು ಅಧ್ಯಕ್ಷ ಈರಣ್ಣ ಮರ್ಲಟ್ಟಿ, ಸಿರವಾರ ತಾಲೂಕು ಅಧ್ಯಕ್ಷ ಟಿ. ಮಲ್ಲಿಕಾರ್ಜುನ ಪಾಟೀಲ್, ನಗರ ಘಟಕದ ಅಧ್ಯಕ್ಷ ಹೆಚ್. ಮೌನೇಶ್ ಗೌಡ, ರೈತ ಘಟಕದ ಅಧ್ಯಕ್ಷ ಶರಣಪ್ಪ ಗೌಡ ಮದ್ಲಾಪೂರ್ ಹಾಗೂ ಮುಖಂಡ ಬಾಷ ಸಾಬ್ ಸೇರಿದಂತೆ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಬಸವರಾಜ ಭೋಗಾವತಿ
    ಬಸವರಾಜ ಭೋಗಾವತಿ
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    1 hr ago
  • ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಲ್ವಡಗಿ ತಾಂಡಾಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷಗಳು ಕಳೆದರೂ ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ಜನರು ಕಲುಷಿತ ನೀರು ಕುಡಿಯುವಂತಾಗಿದೆ. ಈ ದುಃಸ್ಥಿತಿಯಿಂದ ಬೇಸತ್ತ ತಾಂಡಾದ ನಿವಾಸಿಗಳು ಮತ್ತು ಮಹಿಳೆಯರು ಭಾನುವಾರ ಮುಂಜಾನೆ ಕೈಯಲ್ಲಿ ಖಾಲಿ ಕೊಡಗಳನ್ನು ಹಿಡಿದು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ. ತಾಂಡಾದಲ್ಲಿ ಕಾಲಿನಡಿಗೆಯಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದ ಉಮೇಶ ಕೆ. ಮುದ್ನಾಳ ಅವರು ಇಲ್ಲಿನ ದುಃಸ್ಥಿತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾಂಡಾದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದ್ದು, ಮೂರು ಕೈ ಪಂಪುಗಳು ಕೆಟ್ಟು ನಿಂತಿವೆ ಹಾಗೂ ಉದ್ಘಾಟನೆ ಆಗದ ಕುಡಿಯುವ ನೀರಿನ ಟ್ಯಾಂಕ್ ನಿರುಪಯುಕ್ತವಾಗಿದೆ. ಸೂಕ್ತ ಚರಂಡಿ ಮತ್ತು ಸಿಸಿ ರಸ್ತೆಗಳಿಲ್ಲದ ಕಾರಣ ತಗ್ಗು ಪ್ರದೇಶಗಳಲ್ಲಿ ಕಲುಷಿತ ನೀರು ನಿಂತು ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಡೆಂಗು ಹಾಗೂ ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ಜನರು ಬದುಕುತ್ತಿದ್ದಾರೆ. ಅಪಾಯಕಾರಿಯಾಗಿ ಜೋತುಬಿದ್ದಿರುವ ವಿದ್ಯುತ್ ಕಂಬದ ವೈರ್‌ಗಳು, ಮಹಿಳೆಯರ ಶೌಚಾಲಯದ ಕೊರತೆ ಹಾಗೂ ಮುಖ್ಯ ರಸ್ತೆಯಿಂದ ತಾಂಡಾಕ್ಕೆ ಸಂಪರ್ಕ ಕಲ್ಪಿಸುವ ದಾರಿಯಲ್ಲಿ ಮುಳ್ಳಿನ ಕಂಟಿಗಳು ಬೆಳೆದು ತಗ್ಗು-ಗುಂಡಿಗಳು ಬಿದ್ದಿರುವುದರಿಂದ ಸಂಚಾರವೇ ದುಸ್ತರವಾಗಿದೆ. ತಾಂಡಾದ ಅಭಿವೃದ್ಧಿಗೆ ಬಂದ ಲಕ್ಷಾಂತರ ರೂಪಾಯಿ ಹಣ ಯಾರ ತಿಜೋರಿ ಸೇರಿದೆ ಎಂದು ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಮುಂದಿನ 24 ಗಂಟೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸದಿದ್ದರೆ, ಯಾದಗಿರಿ-ಶಹಾಪೂರ ಮುಖ್ಯ ರಸ್ತೆಯ ನಾಯ್ಕಲ್ ಸರ್ಕಲ್‌ನಲ್ಲಿ ಬೃಹತ್ ರಸ್ತೆ ತಡೆ ಪ್ರತಿಭಟನೆ ನಡೆಸುವುದಾಗಿ ಗಡುವು ನೀಡಿದ್ದಾರೆ. ಈ ಪ್ರತಿಭಟನೆಯಲ್ಲಿ ಪವನ್, ವಿಶಾಲ, ಗಂಗಾರಾಮ ಕಾರಬಾರಿ, ಹಿರೂ ನಾಯಕ, ಶೀಲಿಬಾಯಿ, ಲಕ್ಕಿ ಬಾಯಿ ಸೇರಿದಂತೆ ತಾಂಡಾದ ಹಲವಾರು ಮುಖಂಡರು, ಯುವಕರು ಮತ್ತು ಮಹಿಳೆಯರು ಭಾಗವಹಿಸಿದ್ದರು.
    1
    ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಲ್ವಡಗಿ ತಾಂಡಾಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷಗಳು ಕಳೆದರೂ ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ಜನರು ಕಲುಷಿತ ನೀರು ಕುಡಿಯುವಂತಾಗಿದೆ. ಈ ದುಃಸ್ಥಿತಿಯಿಂದ ಬೇಸತ್ತ ತಾಂಡಾದ ನಿವಾಸಿಗಳು ಮತ್ತು ಮಹಿಳೆಯರು ಭಾನುವಾರ ಮುಂಜಾನೆ ಕೈಯಲ್ಲಿ ಖಾಲಿ ಕೊಡಗಳನ್ನು ಹಿಡಿದು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ.

ತಾಂಡಾದಲ್ಲಿ ಕಾಲಿನಡಿಗೆಯಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದ ಉಮೇಶ ಕೆ. ಮುದ್ನಾಳ ಅವರು ಇಲ್ಲಿನ ದುಃಸ್ಥಿತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾಂಡಾದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದ್ದು, ಮೂರು ಕೈ ಪಂಪುಗಳು ಕೆಟ್ಟು ನಿಂತಿವೆ ಹಾಗೂ ಉದ್ಘಾಟನೆ ಆಗದ ಕುಡಿಯುವ ನೀರಿನ ಟ್ಯಾಂಕ್ ನಿರುಪಯುಕ್ತವಾಗಿದೆ. ಸೂಕ್ತ ಚರಂಡಿ ಮತ್ತು ಸಿಸಿ ರಸ್ತೆಗಳಿಲ್ಲದ ಕಾರಣ ತಗ್ಗು ಪ್ರದೇಶಗಳಲ್ಲಿ ಕಲುಷಿತ ನೀರು ನಿಂತು ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಡೆಂಗು ಹಾಗೂ ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ಜನರು ಬದುಕುತ್ತಿದ್ದಾರೆ. ಅಪಾಯಕಾರಿಯಾಗಿ ಜೋತುಬಿದ್ದಿರುವ ವಿದ್ಯುತ್ ಕಂಬದ ವೈರ್‌ಗಳು, ಮಹಿಳೆಯರ ಶೌಚಾಲಯದ ಕೊರತೆ ಹಾಗೂ ಮುಖ್ಯ ರಸ್ತೆಯಿಂದ ತಾಂಡಾಕ್ಕೆ ಸಂಪರ್ಕ ಕಲ್ಪಿಸುವ ದಾರಿಯಲ್ಲಿ ಮುಳ್ಳಿನ ಕಂಟಿಗಳು ಬೆಳೆದು ತಗ್ಗು-ಗುಂಡಿಗಳು ಬಿದ್ದಿರುವುದರಿಂದ ಸಂಚಾರವೇ ದುಸ್ತರವಾಗಿದೆ.

ತಾಂಡಾದ ಅಭಿವೃದ್ಧಿಗೆ ಬಂದ ಲಕ್ಷಾಂತರ ರೂಪಾಯಿ ಹಣ ಯಾರ ತಿಜೋರಿ ಸೇರಿದೆ ಎಂದು ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಮುಂದಿನ 24 ಗಂಟೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸದಿದ್ದರೆ, ಯಾದಗಿರಿ-ಶಹಾಪೂರ ಮುಖ್ಯ ರಸ್ತೆಯ ನಾಯ್ಕಲ್ ಸರ್ಕಲ್‌ನಲ್ಲಿ ಬೃಹತ್ ರಸ್ತೆ ತಡೆ ಪ್ರತಿಭಟನೆ ನಡೆಸುವುದಾಗಿ ಗಡುವು ನೀಡಿದ್ದಾರೆ. ಈ ಪ್ರತಿಭಟನೆಯಲ್ಲಿ ಪವನ್, ವಿಶಾಲ, ಗಂಗಾರಾಮ ಕಾರಬಾರಿ, ಹಿರೂ ನಾಯಕ, ಶೀಲಿಬಾಯಿ, ಲಕ್ಕಿ ಬಾಯಿ ಸೇರಿದಂತೆ ತಾಂಡಾದ ಹಲವಾರು ಮುಖಂಡರು, ಯುವಕರು ಮತ್ತು ಮಹಿಳೆಯರು ಭಾಗವಹಿಸಿದ್ದರು.
    user_DR. S.S. NANAK
    DR. S.S. NANAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    12 min ago
  • ಬಳ್ಳಾರಿಯ ಮೂಲ ನಿವಾಸಿಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಅವರಿಗೆ ಮತದಾನದ ಹಕ್ಕು ನಿರಾಕರಿಸಲಾಗುತ್ತಿದೆ ಎಂದು ಕರ್ನಾಟಕ ಚರ್ಮೋದ್ಯಮ ಅಭಿವೃದ್ಧಿ ನಿಗಮ (ಲಿಡ್ಕರ್) ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ದಾಖಲೆಗಳನ್ನು ಪ್ರದರ್ಶಿಸಿದ ಅವರು, ಬಿಜೆಪಿ ಎಸ್‌ಐಆರ್ (SIR) ನೆಪದಲ್ಲಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜಕೀಯ ಮಾಡುತ್ತಿದೆ ಎಂದು ತೀವ್ರವಾಗಿ ಕಿಡಿಕಾರಿದ್ದಾರೆ. ಬಳ್ಳಾರಿಯ ಮೂಲ ನಿವಾಸಿಗಳಿಗೆ ತಕ್ಷಣವೇ ನ್ಯಾಯ ಒದಗಿಸಬೇಕು ಮತ್ತು ಅವರ ಮತದಾನದ ಹಕ್ಕನ್ನು ಖಾತರಿಪಡಿಸಬೇಕು ಎಂದು ಅವರು ಜಿಲ್ಲಾಡಳಿತ ಹಾಗೂ ಚುನಾವಣಾ ಅಧಿಕಾರಿಗಳಿಗೆ ಬಲವಾಗಿ ಆಗ್ರಹಿಸಿದ್ದಾರೆ.
    1
    ಬಳ್ಳಾರಿಯ ಮೂಲ ನಿವಾಸಿಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಅವರಿಗೆ ಮತದಾನದ ಹಕ್ಕು ನಿರಾಕರಿಸಲಾಗುತ್ತಿದೆ ಎಂದು ಕರ್ನಾಟಕ ಚರ್ಮೋದ್ಯಮ ಅಭಿವೃದ್ಧಿ ನಿಗಮ (ಲಿಡ್ಕರ್) ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ದಾಖಲೆಗಳನ್ನು ಪ್ರದರ್ಶಿಸಿದ ಅವರು, ಬಿಜೆಪಿ ಎಸ್‌ಐಆರ್ (SIR) ನೆಪದಲ್ಲಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜಕೀಯ ಮಾಡುತ್ತಿದೆ ಎಂದು ತೀವ್ರವಾಗಿ ಕಿಡಿಕಾರಿದ್ದಾರೆ.

ಬಳ್ಳಾರಿಯ ಮೂಲ ನಿವಾಸಿಗಳಿಗೆ ತಕ್ಷಣವೇ ನ್ಯಾಯ ಒದಗಿಸಬೇಕು ಮತ್ತು ಅವರ ಮತದಾನದ ಹಕ್ಕನ್ನು ಖಾತರಿಪಡಿಸಬೇಕು ಎಂದು ಅವರು ಜಿಲ್ಲಾಡಳಿತ ಹಾಗೂ ಚುನಾವಣಾ ಅಧಿಕಾರಿಗಳಿಗೆ ಬಲವಾಗಿ ಆಗ್ರಹಿಸಿದ್ದಾರೆ.
    user_AsnNews24Kannada
    AsnNews24Kannada
    Local News Reporter Ballari, Karnataka•
    3 hrs ago
  • ಕುಷ್ಟಗಿಯ ಹಳೆ ಪ್ರವಾಸಿ ಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಖ್ಯಾತ ಗಾಯಕಿ ಎಸ್. ಜಾನಕಿ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಹಾಗೂ ಭಾವಪೂರ್ಣ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರಗೌಡ ಮಾಲಿ ಪಾಟೀಲ ಅವರು, ಸುಮಾರು 17 ಭಾಷೆಗಳಲ್ಲಿ ತಮ್ಮ ಮಧುರ ಕಂಠದಿಂದ ಹಾಡಿ ಪದ್ಮಶ್ರೀ ಪ್ರಶಸ್ತಿ, ರಾಷ್ಟ್ರೀಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದ ಗಾನ ಕೋಗಿಲೆ ಎಸ್. ಜಾನಕಿ ಅಮ್ಮನವರು ನಮ್ಮನ್ನು ಬಿಟ್ಟು ಅಗಲಿದ್ದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಕಂಬನಿ ಮಿಡಿದರು. ಶ್ರದ್ಧಾಂಜಲಿ ಸಭೆಯಲ್ಲಿ ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ, ಒಂದು ನಿಮಿಷದ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ರಾಜ್ಯ ಹಾಗೂ ದೇಶದ ಜನರ ಮನಗಳಲ್ಲಿ ನೆಲೆಸಿದ್ದ ಜಾನಕಮ್ಮನ ನೆನಪುಗಳು ಮಾತ್ರ ಈಗ ನಮಗೆ ಉಳಿದಿದ್ದು, ಅವರ ತತ್ವಗಳನ್ನು ಸಮಾಜದ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಗಣ್ಯರು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹನಮಂತಪ್ಪ ಈಟಿಯವರ್, ಮಾಜಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಟರಾಜ ಸೋನಾರ್, ಸಾಹಿತಿ ಕುಮಾರಸ್ವಾಮಿ ಹಿರೇಮಠ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶರಣಪ್ಪ ವಣಗೇರಿ ಉಪಸ್ಥಿತರಿದ್ದು ಮಾತನಾಡಿದರು. ಇದೇ ಸಂದರ್ಭದಲ್ಲಿ ಶರಣಪ್ಪ ಲೈನದ್, ಇಮಾಮಸಾಬ ಗರಡಿಮನಿ, ಬುಡ್ನೆಸಾಬ ಕಲಾದಗಿ, ಪರಶಿವಮೂರ್ತಿ ದೋಟಿಹಾಳ, ಪವಾಡೆಪ್ಪ ಚೌಡ್ಕಿ ಹಾಗೂ ದೇವರಾಜ ವಿಶ್ವಕರ್ಮ ಸೇರಿದಂತೆ ಹಲವರು ಪಾಲ್ಗೊಂಡು ಶ್ರದ್ಧಾಂಜಲಿ ಅರ್ಪಿಸಿದರು.
    3
    ಕುಷ್ಟಗಿಯ ಹಳೆ ಪ್ರವಾಸಿ ಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಖ್ಯಾತ ಗಾಯಕಿ ಎಸ್. ಜಾನಕಿ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಹಾಗೂ ಭಾವಪೂರ್ಣ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರಗೌಡ ಮಾಲಿ ಪಾಟೀಲ ಅವರು, ಸುಮಾರು 17 ಭಾಷೆಗಳಲ್ಲಿ ತಮ್ಮ ಮಧುರ ಕಂಠದಿಂದ ಹಾಡಿ ಪದ್ಮಶ್ರೀ ಪ್ರಶಸ್ತಿ, ರಾಷ್ಟ್ರೀಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದ ಗಾನ ಕೋಗಿಲೆ ಎಸ್. ಜಾನಕಿ ಅಮ್ಮನವರು ನಮ್ಮನ್ನು ಬಿಟ್ಟು ಅಗಲಿದ್ದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಕಂಬನಿ ಮಿಡಿದರು.

ಶ್ರದ್ಧಾಂಜಲಿ ಸಭೆಯಲ್ಲಿ ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ, ಒಂದು ನಿಮಿಷದ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ರಾಜ್ಯ ಹಾಗೂ ದೇಶದ ಜನರ ಮನಗಳಲ್ಲಿ ನೆಲೆಸಿದ್ದ ಜಾನಕಮ್ಮನ ನೆನಪುಗಳು ಮಾತ್ರ ಈಗ ನಮಗೆ ಉಳಿದಿದ್ದು, ಅವರ ತತ್ವಗಳನ್ನು ಸಮಾಜದ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಗಣ್ಯರು ಕರೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹನಮಂತಪ್ಪ ಈಟಿಯವರ್, ಮಾಜಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಟರಾಜ ಸೋನಾರ್, ಸಾಹಿತಿ ಕುಮಾರಸ್ವಾಮಿ ಹಿರೇಮಠ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶರಣಪ್ಪ ವಣಗೇರಿ ಉಪಸ್ಥಿತರಿದ್ದು ಮಾತನಾಡಿದರು. ಇದೇ ಸಂದರ್ಭದಲ್ಲಿ ಶರಣಪ್ಪ ಲೈನದ್, ಇಮಾಮಸಾಬ ಗರಡಿಮನಿ, ಬುಡ್ನೆಸಾಬ ಕಲಾದಗಿ, ಪರಶಿವಮೂರ್ತಿ ದೋಟಿಹಾಳ, ಪವಾಡೆಪ್ಪ ಚೌಡ್ಕಿ ಹಾಗೂ ದೇವರಾಜ ವಿಶ್ವಕರ್ಮ ಸೇರಿದಂತೆ ಹಲವರು ಪಾಲ್ಗೊಂಡು ಶ್ರದ್ಧಾಂಜಲಿ ಅರ್ಪಿಸಿದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    20 hrs ago
  • ಕೃಷ್ಣ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಆಲಮಟ್ಟಿ ಹಾಗೂ ತುಂಗಭದ್ರಾ ಜಲಾಶಯಗಳಿಗೆ ಭಾರಿ ಪ್ರಮಾಣದ ನೀರಿನ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಜಲಾಶಯಗಳ ನೀರಿನ ಮಟ್ಟವು ಏರಿಕೆಯಾಗಿದ್ದು, ಖಾರಿಫ್ ಬೆಳೆಗಳಿಗೆ ನೀರಾವರಿ ನೀರು ಬಿಡುಗಡೆಯಾಗುವ ನಿರೀಕ್ಷೆ ಬಲಗೊಂಡಿದೆ. ಕಳೆದ ಕೆಲವು ವಾರಗಳಿಂದ ತೀವ್ರ ಆತಂಕದಲ್ಲಿದ್ದ ಉತ್ತರ ಕರ್ನಾಟಕದ ರೈತರಲ್ಲಿ ಈ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿರುವುದು ಇದೀಗ ಹೊಸ ಭರವಸೆಯನ್ನು ಮೂಡಿಸಿದೆ. ಆಲಮಟ್ಟಿ ಮತ್ತು ತುಂಗಭದ್ರಾ ಜಲಾಶಯಗಳ ಭಾರಿ ಒಳಹರಿವಿನಿಂದಾಗಿ ಬೆಳೆಗಳಿಗೆ ನೀರು ಬಿಡುಗಡೆಯಾಗುವ ಸಾಧ್ಯತೆಗಳು ಮತ್ತೆ ಮೂಡಿಕೊಂಡಿವೆ.
    1
    ಕೃಷ್ಣ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಆಲಮಟ್ಟಿ ಹಾಗೂ ತುಂಗಭದ್ರಾ ಜಲಾಶಯಗಳಿಗೆ ಭಾರಿ ಪ್ರಮಾಣದ ನೀರಿನ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಜಲಾಶಯಗಳ ನೀರಿನ ಮಟ್ಟವು ಏರಿಕೆಯಾಗಿದ್ದು, ಖಾರಿಫ್ ಬೆಳೆಗಳಿಗೆ ನೀರಾವರಿ ನೀರು ಬಿಡುಗಡೆಯಾಗುವ ನಿರೀಕ್ಷೆ ಬಲಗೊಂಡಿದೆ.

ಕಳೆದ ಕೆಲವು ವಾರಗಳಿಂದ ತೀವ್ರ ಆತಂಕದಲ್ಲಿದ್ದ ಉತ್ತರ ಕರ್ನಾಟಕದ ರೈತರಲ್ಲಿ ಈ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿರುವುದು ಇದೀಗ ಹೊಸ ಭರವಸೆಯನ್ನು ಮೂಡಿಸಿದೆ. ಆಲಮಟ್ಟಿ ಮತ್ತು ತುಂಗಭದ್ರಾ ಜಲಾಶಯಗಳ ಭಾರಿ ಒಳಹರಿವಿನಿಂದಾಗಿ ಬೆಳೆಗಳಿಗೆ ನೀರು ಬಿಡುಗಡೆಯಾಗುವ ಸಾಧ್ಯತೆಗಳು ಮತ್ತೆ ಮೂಡಿಕೊಂಡಿವೆ.
    user_Sharanugouda Patil
    Sharanugouda Patil
    Muddebihal, Vijayapura•
    2 hrs ago
  • ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ್ ಅವರು ಜೆಡಿಎಸ್ ಕಾರ್ಯಕರ್ತರಲ್ಲಿ ಎಸ್ಐಆರ್ ಪ್ರಕ್ರಿಯೆಯ ಬಗ್ಗೆ ತಿಳುವಳಿಕೆ ಮೂಡಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗಟ್ಟಾಗಿ ಪ್ರತಿಯೊಬ್ಬರ ಮನೆ ಮನೆಗೆ ತೆರಳಿ ಈ ಎಸ್ಐಆರ್ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ತಿಳಿಸಿದ್ದಾರೆ. ದೇವರಹಿಪ್ಪರಗಿ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರಿಗೆ ಶಾಸಕರು ಈ ಕುರಿತು ಅಗತ್ಯ ತಿಳುವಳಿಕೆ ನೀಡಿದ್ದಾರೆ ಎಂದು ಈರಣ್ಣ ತಾರನಾಳ್ ವರದಿ ಮಾಡಿದ್ದಾರೆ.
    1
    ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ್ ಅವರು ಜೆಡಿಎಸ್ ಕಾರ್ಯಕರ್ತರಲ್ಲಿ ಎಸ್ಐಆರ್ ಪ್ರಕ್ರಿಯೆಯ ಬಗ್ಗೆ ತಿಳುವಳಿಕೆ ಮೂಡಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗಟ್ಟಾಗಿ ಪ್ರತಿಯೊಬ್ಬರ ಮನೆ ಮನೆಗೆ ತೆರಳಿ ಈ ಎಸ್ಐಆರ್ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ತಿಳಿಸಿದ್ದಾರೆ. ದೇವರಹಿಪ್ಪರಗಿ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರಿಗೆ ಶಾಸಕರು ಈ ಕುರಿತು ಅಗತ್ಯ ತಿಳುವಳಿಕೆ ನೀಡಿದ್ದಾರೆ ಎಂದು ಈರಣ್ಣ ತಾರನಾಳ್ ವರದಿ ಮಾಡಿದ್ದಾರೆ.
    user_Iranna Tarnal
    Iranna Tarnal
    Artist ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    6 hrs ago
  • ರಾಜ್ಯ ಹೆದ್ದಾರಿಯ ಚತುಷ್ಪಥ ನಿರ್ಮಾಣ ಕಾಮಗಾರಿಯ ನೆಪದಲ್ಲಿ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಅಂಬೇಡ್ಕರ್ ವೃತ್ತವನ್ನು ವಿರೂಪಗೊಳಿಸಿರುವ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಬೇಕು ಎಂದು ಕರ್ನಾಟಕ ದಲಿತಪರ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಪ್ರಭುರಾಜ ಕೊಡ್ಲಿ ಆಗ್ರಹಿಸಿದ್ದಾರೆ. ಮಾನ್ವಿ ಪಟ್ಟಣದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಅವರು ಈ ಗಂಭೀರ ಒತ್ತಾಯವನ್ನು ಮಂಡಿಸಿದರು. ಚತುಷ್ಪಥ ನಿರ್ಮಾಣ ಕಾಮಗಾರಿಯನ್ನು ನಿಗದಿತ ಅಂದಾಜು ಪಟ್ಟಿಯ ಪ್ರಕಾರ ನಿರ್ವಹಿಸದೆ ಅತ್ಯಂತ ಕಳಪೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿಯ ಕುರಿತು ಜಿಲ್ಲಾಡಳಿತದ ವತಿಯಿಂದ ಪ್ರತ್ಯೇಕ ತನಿಖಾ ತಂಡವನ್ನು ರಚಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಅವರು ಪ್ರಬಲವಾಗಿ ಒತ್ತಾಯಿಸಿದ್ದಾರೆ.
    1
    ರಾಜ್ಯ ಹೆದ್ದಾರಿಯ ಚತುಷ್ಪಥ ನಿರ್ಮಾಣ ಕಾಮಗಾರಿಯ ನೆಪದಲ್ಲಿ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಅಂಬೇಡ್ಕರ್ ವೃತ್ತವನ್ನು ವಿರೂಪಗೊಳಿಸಿರುವ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಬೇಕು ಎಂದು ಕರ್ನಾಟಕ ದಲಿತಪರ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಪ್ರಭುರಾಜ ಕೊಡ್ಲಿ ಆಗ್ರಹಿಸಿದ್ದಾರೆ. ಮಾನ್ವಿ ಪಟ್ಟಣದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಅವರು ಈ ಗಂಭೀರ ಒತ್ತಾಯವನ್ನು ಮಂಡಿಸಿದರು.

ಚತುಷ್ಪಥ ನಿರ್ಮಾಣ ಕಾಮಗಾರಿಯನ್ನು ನಿಗದಿತ ಅಂದಾಜು ಪಟ್ಟಿಯ ಪ್ರಕಾರ ನಿರ್ವಹಿಸದೆ ಅತ್ಯಂತ ಕಳಪೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿಯ ಕುರಿತು ಜಿಲ್ಲಾಡಳಿತದ ವತಿಯಿಂದ ಪ್ರತ್ಯೇಕ ತನಿಖಾ ತಂಡವನ್ನು ರಚಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಅವರು ಪ್ರಬಲವಾಗಿ ಒತ್ತಾಯಿಸಿದ್ದಾರೆ.
    user_ಬಸವರಾಜ ಭೋಗಾವತಿ
    ಬಸವರಾಜ ಭೋಗಾವತಿ
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    3 hrs ago
  • ಚೀನಾದಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ಸುಮಾರು 900 ಹಾವುಗಳು ಪರಾರಿಯಾಗಿವೆ. ಈ ಹಾವುಗಳು ಸಂತಾನೋತ್ಪತ್ತಿ ಕೇಂದ್ರದಿಂದ ಹೊರಬಂದಿವೆ ಎಂದು ತಿಳಿದುಬಂದಿದೆ.
    1
    ಚೀನಾದಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ಸುಮಾರು 900 ಹಾವುಗಳು ಪರಾರಿಯಾಗಿವೆ. ಈ ಹಾವುಗಳು ಸಂತಾನೋತ್ಪತ್ತಿ ಕೇಂದ್ರದಿಂದ ಹೊರಬಂದಿವೆ ಎಂದು ತಿಳಿದುಬಂದಿದೆ.
    user_Feroz khan
    Feroz khan
    Salesperson ಯಾದಗಿರಿ, ಯಾದಗಿರಿ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.