Shuru
Apke Nagar Ki App…
ಎಚ್ಚರಿಕೆ! ಲಂಚ ತಿಂದರೆ ಜೈಲು ಫಿಕ್ಸ್! 🛑⛓️ ಲಿಂಗಸುಗೂರಿನಲ್ಲಿ ಭ್ರಷ್ಟ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 75 ಸಾವಿರ ದಂಡ ವಿಧಿಸಿದ ನ್ಯಾಯಾಲಯ. ಲಂಚ ಪಡೆಯುವುದು ಎಷ್ಟು ಅಪರಾಧವೋ, ನ್ಯಾಯಾಲಯಕ್ಕೆ ಸುಳ್ಳು ಸಾಕ್ಷಿ ನೀಡುವುದು ಕೂಡ ಅಷ್ಟೇ ದೊಡ್ಡ ಅಪರಾಧ ಎಂಬುದನ್ನು ಈ ತೀರ್ಪು ಸಾಬೀತುಪಡಿಸಿದೆ. ಸಾರ್ವಜನಿಕರೇ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿ. ನ್ಯಾಯ ಖಂಡಿತ ಸಿಗುತ್ತದೆ. ✊ #ಭ್ರಷ್ಟಾಚಾರ #ಲಂಚ #ಎಚ್ಚರಿಕೆ #ನ್ಯಾಯ #ಕಾನೂನು #ಜೈಲುಶಿಕ್ಷೆ #Lingasugur #AntiCorruption #Justice #Law #Crime #BreakingNews #Karnataka #Police #CourtVerdict #TruthWins #StopCorruption #PublicNalAwareness #FightorNagalupsction #Voice For Just
Nitin 9071795156 press reporte
ಎಚ್ಚರಿಕೆ! ಲಂಚ ತಿಂದರೆ ಜೈಲು ಫಿಕ್ಸ್! 🛑⛓️ ಲಿಂಗಸುಗೂರಿನಲ್ಲಿ ಭ್ರಷ್ಟ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 75 ಸಾವಿರ ದಂಡ ವಿಧಿಸಿದ ನ್ಯಾಯಾಲಯ. ಲಂಚ ಪಡೆಯುವುದು ಎಷ್ಟು ಅಪರಾಧವೋ, ನ್ಯಾಯಾಲಯಕ್ಕೆ ಸುಳ್ಳು ಸಾಕ್ಷಿ ನೀಡುವುದು ಕೂಡ ಅಷ್ಟೇ ದೊಡ್ಡ ಅಪರಾಧ ಎಂಬುದನ್ನು ಈ ತೀರ್ಪು ಸಾಬೀತುಪಡಿಸಿದೆ. ಸಾರ್ವಜನಿಕರೇ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿ. ನ್ಯಾಯ ಖಂಡಿತ ಸಿಗುತ್ತದೆ. ✊ #ಭ್ರಷ್ಟಾಚಾರ #ಲಂಚ #ಎಚ್ಚರಿಕೆ #ನ್ಯಾಯ #ಕಾನೂನು #ಜೈಲುಶಿಕ್ಷೆ #Lingasugur #AntiCorruption #Justice #Law #Crime #BreakingNews #Karnataka #Police #CourtVerdict #TruthWins #StopCorruption #PublicNalAwareness #FightorNagalupsction #Voice For Just
More news from ಕರ್ನಾಟಕ and nearby areas
- Post by Nitin 9071795156 press reporte1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಧಾರವಾಡ: ಧಾರವಾಡ ಆಕಾಶವಾಣಿ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವನ್ನು ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೆ ಸ್ಥಳಾಂತರಿಸುವುದಾಗಿ ಆದೇಶವನ್ನು ಕೂಡಲೇ ರದ್ದುಪಡಿಸಬೇಕು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೆರೆ ಆಗ್ರಹಿಸಿದರು. ಧಾರವಾಡ ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಪ್ರಾದೇಶಿಕ ಸುದ್ದಿ ವಿಭಾಗಕ್ಕೆ 45 ವರ್ಷಗಳ ಇತಿಹಾಸವಿದೆ. ಈ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಿದರೆ ಉತ್ತರ ಕರ್ನಾಟಕ ಭಾಗದ ಜನರಿಗೆ ಅನ್ಯಾಯ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಕಾಶವಾಣಿ ಸುದ್ದಿ ವಿಭಾಗವನ್ನು ಧಾರವಾಡದಲ್ಲಿ ಉಳಿಸಿಕೊಳ್ಳಲು ಕೇಂದ್ರ ಸಚಿವರಿಗೆ ಹಾಗೂ ಶಾಸಕರಿಗೆ ಮನವಿ ಪತ್ರ ಸಲ್ಲಿಸಿ ಒತ್ತಡ ತರಲಾಗುವುದು. ಈ ಕುರಿತು ಕರ್ನಾಟಕ ವಿದ್ಯಾವರ್ಧಕ ಸಂಘವು ಶೀಘ್ರ ಸಭೆ ಕರೆದು ನಿರ್ಧಾರ ಕೈಗೊಳ್ಳಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ.ಸಂಜೀವ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಸತೀಶ ತುರಮರಿ, ಶಿವಾನಂದ ಭಾವಿಕಟ್ಟಿ, ವಿಶ್ವೇಶ್ವರಿ ಹಿರೇಮಠ, ವೀರಣ್ಣ ಒಡ್ಡೀನ ಸೇರಿದಂತೆ ಇತರರಿದ್ದರು.1
- ಶಿಗ್ಗಾಂವ ತಾಲೂಕಿನ ಅಂಬೇಡ್ಕರ್ ಸಂಕೀರ್ಣದಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಂಡಂತ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಶಿಗ್ಗಾವ ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಸಂಗನಬಸವ ಪೂಜ್ಯಶ್ರೀಗಳು, ಹಾಗೂ ಮಾಜಿ ಸಂಸದರಾದ ಶ್ರೀ ಮಂಜುನಾಥ ಕುನ್ನೂರ್ ಹಾಗೂ ಗಡಿ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ, ತಾಲೂಕ ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ರಾಗಿ ವಕೀಲರು, ಶಿಗ್ಗಾಂವ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಡ್ಡಪ್ಪ ಜಲ್ದಿ, ಗ್ಯಾರೆಂಟಿ ಸಮಿತಿಯ ತಾಲೂಕ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,1
- ಕುಂದಗೋಳ: ತಾಲ್ಲೂಕಿನ ಗ್ರಾಮೀಣ ಹಾಗೂ ಬಡ ಬಾಣಂತಿಯರಿಗೆ ಹೆರಿಗೆಯ ನಂತರ ಸುಲಭವಾಗಿ ಮನೆಗೆ ತಲುಪಲು ಅನುಕೂಲವಾಗುವಂತೆ ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಮಾತೋಶ್ರೀ ಫೌಂಡೇಶನ್ ಸಂಸ್ಥಾಪಕರು ಹಾಗೂ ತಾಲ್ಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಸತೀಶ ಕೊಬ್ಬಯ್ಯನವರು ಉಚಿತ ವಾಹನ ಸೌಲಭ್ಯವನ್ನು ಕಲ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾನುವಾರ ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸತೀಶ ಕೊಬ್ಬಯ್ಯನವರ ತಾಯಿ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಪ್ರೇಮಾ ಕೊಬ್ಬಯ್ಯನವರು ರಿಬ್ಬನ್ ಕತ್ತರಿಸುವ ಮೂಲಕ ಈ ನೂತನ ಸೇವೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಜಿ ಪಂ ಉಪಾಧ್ಯಕ್ಷರಾದ ಪ್ರೇಮಾ ಕೊಬ್ಬಯ್ಯನವರು, ತಮ್ಮ ಮಗನ ಹುಟ್ಟುಹಬ್ಬದ ಸವಿನೆನಪಿಗಾಗಿ ಆಡಂಬರದ ಆಚರಣೆಗಳಿಗೆ ಮೊರೆ ಹೋಗದೆ, ಬಡ ಮಹಿಳೆಯರಿಗೆ ನೆರವಾಗುವ ನಿಟ್ಟಿನಲ್ಲಿ ಈ ವಾಹನವನ್ನು ಉಡುಗೊರೆಯಾಗಿ ನೀಡಲಾಗಿದೆ. ಹೆರಿಗೆಯ ನಂತರ ತಾಯಿ ಮತ್ತು ಮಗು ಸುರಕ್ಷಿತವಾಗಿ ಮನೆ ಸೇರಲು ಈ ಸೌಲಭ್ಯ ಆಸರೆಯಾಗಲಿದ್ದು, ತಾಲ್ಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು. ನಂತರ ಮಾತೋಶ್ರೀ ಫೌಂಡೇಶನ್ ಸಂಸ್ಥಾಪಕರು ಹಾಗೂ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಸತೀಶ ಕೊಬ್ಬಯ್ಯನವರು ಮಾತನಾಡಿ, ತಾಲ್ಲೂಕಿನಲ್ಲಿ ಸಾರಿಗೆ ಬಸ್ಸುಗಳಲ್ಲಿ ಜನದಟ್ಟಣೆ ಹೆಚ್ಚಾಗಿರುವುದರಿಂದ ಹೆರಿಗೆಯಾದ ಮಹಿಳೆಯರಿಗೆ ಪ್ರಯಾಣಿಸಲು ತೀವ್ರ ತೊಂದರೆಯಾಗುತ್ತಿತ್ತು. ಬಾಣಂತಿಯರ ಈ ಕಷ್ಟವನ್ನು ಅರಿತು ಅವರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಯಿತು. ಈ ವಾಹನವು ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸತತವಾಗಿ ಲಭ್ಯವಿರುತ್ತದೆ. ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಹಾಗೂ ವಾಹನ ಬುಕ್ಕಿಂಗ್ಗಾಗಿ 7022430691 ಸಂಖ್ಯೆಗೆ ಕರೆ ಮಾಡಬಹುದು ಎಂದು ಅವರು ಮಾಹಿತಿ ನೀಡಿದರು. ನಂತರ ಆಸ್ಪತ್ರೆಯ ವೈದ್ಯರಾದ ವಿಜಯ ಮಾತನಾಡಿ. ತಾಲ್ಲೂಕು ಆಸ್ಪತ್ರೆಗೆ ಹೆರಿಗೆಗಾಗಿ ಬರುವ ಮಹಿಳೆಯರು ಇದರ ಸದುಪಯೋಗ ಪಡೆದುಕೋಳ್ಳಬೇಕು ಎಂದು ಇಂತಹ ಸೇವೆ ನೀಡಿದ ಮಾತೃಶ್ರೀ ಪೌಂಡೇಶನ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಕಾರ್ಯಕ್ರಮದಲ್ಲಿ ಪೌಂಡೇಶನ ಅಧ್ಯಕ್ಷರಾದ ರಾಘವೇಂದ್ರ ಕಡೆಮನಿ, ಗಾಂಧಿ ಶಾಲೆಯ ಮುಖ್ಯೋಪಾಧ್ಯಾಯರಾದ ಗುರುಸ್ವಾಮಿ ಬಾಳಿಹಳ್ಳಿಮಠ, ವೀರುಪಾಕ್ಷೀ ಹಂಚನಾಳ, ವೀರಯ್ಯ ಶಿರೂರ, ಚನ್ನಬಸಪ್ಪ ಕಾಳೆ, ಮಂಜುನಾಥ ಕಟಗಿ, ಗುರು ಚಲವಾದಿ, ಮುತ್ತಪ್ಪ ಕಟಗಿ, ದೇವಪ್ಪ ಕಾಳಿ, ಮಂಜು ಪೂಜಾರ, ನಾಗರಾಜ ತಾಬ್ರಗುಂಡಿ, ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗ ಹಾಗೂ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.1
- Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 80957823861
- Post by Onlinetv24x71
- ಕಲಘಟಗಿ: ಮಧ್ಯಪಾನ ಸೇವಿಸಿ ವಿದ್ಯುತ್ ಕಂಬ ಏರಿ ಕುಳಿತ ಯುವಕನನ್ನು ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಯುವಕನ ಮನವೊಲಿಸಿ ಸುರಕ್ಷಿತವಾಗಿ ಕೆಳಗೆ ಇಳಿಸಿದ ಘಟನೆ ಶನಿವಾರ ರಾತ್ರಿ ಜರುಗಿದೆ. ತಾಲ್ಲೂಕಿನ ಕಾಡನಕೊಪ್ಪ ಗ್ರಾಮದ ಮಂಜುನಾಥ ಸಿದ್ದಪ್ಪ ಜಮ್ಮಿಹಾಳ (20) ಎಂಬ ಯುವಕನೇ ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಹೈ ವೋಲ್ಟೇಜ್ ವಿದ್ಯುತ್ ಕಂಬದ 150 ಅಡಿ ಎತ್ತರದಲ್ಲಿ ಏರಿ ಕುಳಿತ್ತಿದ್ದನು. 2 ಘಂಟೆಗಳ ಕಾಲ ಅಗ್ನಿ ಶಾಮಕ ಅಧಿಕಾರಿಗಳು ಮನವೊಲಿಸಿದ ನಂತರ ಯುವಕನಿಗೆ ತೊಂದರೆಯಾಗದಂತೆ ಸುರಕ್ಷಿತವಾಗಿ ಕೆಳಗೆ ಇಳಿಸಿ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಾಲ್ಲೂಕ ಅಗ್ನಿಶಾಮಕ ಠಾಣಾಧಿಕಾರಿ ಅರುಣ ಮಾಳುದೇ ತಿಳಿಸಿದರು. ಅಗ್ನಿಶಾಮಕ ಠಾಣೆ ಸಿಬ್ಬಂದಿಗಳಾದ ಥಾವರು ರಾಠೋಡ ಮಹೇಶ ವಡ್ಡರ,ಉಮೇಶ ತೆಂಬದ,ಸಂಜು ದೊಡಮನಿ, ಸಂತೋಷ ಉಗ್ನಿಕೇರಿ,ಈರಣ್ಣ ಮಠದ,ಅನಿಲ ಲೋಖಂಡೆ ಇದ್ದರು.1