ಬಾಗಲಕೋಟೆ: ಉಪಚುನಾವಣೆ ಅಧಿಸೂಚನೆ: ಏಪ್ರಿಲ್ 9ಕ್ಕೆ ಮತದಾನ: ಜಿಲ್ಲಾಧಿಕಾರಿ ಸಂಗಪ್ಪ ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್ 9 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 16ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್ 23 ಕೊನೆಯ ದಿನವಾಗಿದೆ. ಮಾರ್ಚ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ. ಮಾರ್ಚ್ 15ರಿಂದ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ ಎಂದು ತಿಳಿಸಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 319 ಮತಗಟ್ಟೆಗಳಿದ್ದು, ಅದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 176 ಮತ್ತು ನಗರ ಪ್ರದೇಶದಲ್ಲಿ 143 ಮತಗಟ್ಟೆಗಳಿವೆ. ಫೆಬ್ರವರಿ 14ರ ಅಂತಿಮ ಮತದಾರರ ಪಟ್ಟಿಯ ಪ್ರಕಾರ ಕ್ಷೇತ್ರದಲ್ಲಿ ಒಟ್ಟು 2,59,260 ಮತದಾರರಿದ್ದು, 1,26,761 ಪುರುಷರು ಹಾಗೂ 1,32,476 ಮಹಿಳಾ ಮತದಾರರು ಇದ್ದಾರೆ. ಯುವ ಮತದಾರರು 4,188, 85 ವರ್ಷಕ್ಕಿಂತ ಮೇಲ್ಪಟ್ಟವರು 3,017, ಪಿಡಬ್ಲ್ಯೂಡಿ ಮತದಾರರು 2,633, 100 ವರ್ಷಕ್ಕಿಂತ ಮೇಲ್ಪಟ್ಟವರು 38 ಹಾಗೂ 391 ಸೇವಾ ಮತದಾರರು ಇದ್ದಾರೆ ಎಂದು ಹೇಳಿದರು. ಚುನಾವಣೆ ನಿಯಮ ಪಾಲನೆಗಾಗಿ ಜಿಲ್ಲೆಯಲ್ಲಿ 60 ಫ್ಲೈಯಿಂಗ್ ಸ್ಕ್ವಾಡ್, 72 ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು, 22 ವಿಡಿಯೋ ಸರ್ವೆಲೆನ್ಸ್ ತಂಡಗಳು ಹಾಗೂ 24 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಅನಧಿಕೃತ ಹಣ ಹಾಗೂ ಸಾಮಗ್ರಿಗಳ ಸಾಗಾಣಿಕೆ ತಡೆಯಲು ವಿವಿಧ ಕ್ಷೇತ್ರಗಳಲ್ಲಿ ಈ ಚೆಕ್ಪೋಸ್ಟ್ಗಳನ್ನು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಸಾರ್ವಜನಿಕರು ಸಿವಿಜಿಲ್ (cVIGIL) ಆ್ಯಪ್ ಮೂಲಕ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ ಸಿಇಓ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಹಾಗೂ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಉಪಸ್ಥಿತರಿದ್ದರು.
ಬಾಗಲಕೋಟೆ: ಉಪಚುನಾವಣೆ ಅಧಿಸೂಚನೆ: ಏಪ್ರಿಲ್ 9ಕ್ಕೆ ಮತದಾನ: ಜಿಲ್ಲಾಧಿಕಾರಿ ಸಂಗಪ್ಪ ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್ 9 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 16ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್ 23 ಕೊನೆಯ ದಿನವಾಗಿದೆ. ಮಾರ್ಚ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ. ಮಾರ್ಚ್ 15ರಿಂದ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ ಎಂದು ತಿಳಿಸಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 319 ಮತಗಟ್ಟೆಗಳಿದ್ದು, ಅದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 176 ಮತ್ತು ನಗರ ಪ್ರದೇಶದಲ್ಲಿ 143 ಮತಗಟ್ಟೆಗಳಿವೆ. ಫೆಬ್ರವರಿ 14ರ ಅಂತಿಮ ಮತದಾರರ ಪಟ್ಟಿಯ ಪ್ರಕಾರ ಕ್ಷೇತ್ರದಲ್ಲಿ ಒಟ್ಟು 2,59,260 ಮತದಾರರಿದ್ದು, 1,26,761 ಪುರುಷರು ಹಾಗೂ 1,32,476 ಮಹಿಳಾ ಮತದಾರರು ಇದ್ದಾರೆ. ಯುವ ಮತದಾರರು 4,188, 85 ವರ್ಷಕ್ಕಿಂತ ಮೇಲ್ಪಟ್ಟವರು 3,017, ಪಿಡಬ್ಲ್ಯೂಡಿ ಮತದಾರರು 2,633, 100 ವರ್ಷಕ್ಕಿಂತ ಮೇಲ್ಪಟ್ಟವರು 38 ಹಾಗೂ 391 ಸೇವಾ ಮತದಾರರು ಇದ್ದಾರೆ ಎಂದು ಹೇಳಿದರು. ಚುನಾವಣೆ ನಿಯಮ ಪಾಲನೆಗಾಗಿ ಜಿಲ್ಲೆಯಲ್ಲಿ 60 ಫ್ಲೈಯಿಂಗ್ ಸ್ಕ್ವಾಡ್, 72 ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು, 22 ವಿಡಿಯೋ ಸರ್ವೆಲೆನ್ಸ್ ತಂಡಗಳು ಹಾಗೂ 24 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಅನಧಿಕೃತ ಹಣ ಹಾಗೂ ಸಾಮಗ್ರಿಗಳ ಸಾಗಾಣಿಕೆ ತಡೆಯಲು ವಿವಿಧ ಕ್ಷೇತ್ರಗಳಲ್ಲಿ ಈ ಚೆಕ್ಪೋಸ್ಟ್ಗಳನ್ನು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಸಾರ್ವಜನಿಕರು ಸಿವಿಜಿಲ್ (cVIGIL) ಆ್ಯಪ್ ಮೂಲಕ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ ಸಿಇಓ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಹಾಗೂ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಉಪಸ್ಥಿತರಿದ್ದರು.
- ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮಾಚ೯ 18 ರಿಂದ ಏಪ್ರಿಲ್ 02 ರ ವರೆಗೆ ಹುನಗುಂದ ಮತ್ತು ಇಳಕಲ್ ಅವಳಿ ತಾಲೂಕಿನ 7 ಸರ್ಕಾರಿ , 08 ಅನುದಾನಿತ ಹಾಗೂ ಒಂದು ಅನುದಾನ ರಹಿತ ಶಾಲೆ ಸೇರಿದಂತೆ ಒಟ್ಟು 16 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲೇದಾರ ತಿಳಿಸಿದ್ದಾರೆ.1
- MB Patil : ರಾಜ್ಯದ 2 ಕ್ಷೇತ್ರಗಳ ಬೈ ಎಲೆಕ್ಷನ್ಗೆ ಡೇಟ್ ಫಿಕ್ಸ್.. MB ಪಾಟೀಲ್ ರಿಯಾಕ್ಷನ್1
- #onlinetv24x7 #tumkur #ಶ್ರೀಶನಿಮಹಾತ್ಮ #ಶ್ರೀಶನಿದೇವ #ಶನಿಮಹಾತ್ಮ #ಶ್ರೀಕ್ಷೇತ್ರದೊಂಬರಟ್ಟಿ #ಕುಣಿಗಲ್ #ಶ್ರೀಶನಿಮಹಾತ್ಮ1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ರಾಯಚೂರು ಜಿಲ್ಲೆ all Indian institute to medical hospital ಸ್ಥಾಪಿಸಬೇಕೆಂದು ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರು ಮಾತನಾಡಿ ರಾಯಚೂರು ಜಿಲ್ಲೆಗೆ AIlms ಈ ಸ್ಥಾಪನೆಗಾಗಿ ರಾಯಚೂರಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿರುತ್ತೇವೆ ಇದನ್ನು ಅರಿತುಕೊಂಡ ಕೇಂದ್ರ ಸರ್ಕಾರವು ರಾಯಚೂರಿನಲ್ಲಿ ಏಮ್ಸ್ ಆಸ್ಪತ್ರೆಗೆ ಮುಂದಾಗಿಲಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಏನೇ ಮಾಡಿ ಒಳ್ಳೆದನ್ನೇ ಮಾಡಿ ಮಾಡುತ್ತಲೇ ಇರಿ ಜೈ ಕೆ ಆರ್ ಎಸ್ ದ್ಯಾವಣ್ಣ ನಾಯಕ ಪುಲದಿನ್ನಿ ರಾಜ್ಯ ಯುವ ಸಮಿತಿ ಕಾರ್ಯದರ್ಶಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ1
- ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸು ನಿಲ್ದಾಣ ಹತ್ತಿರ ಮಹಿಳೆಗೆ ಬಸ್ಸು ಡಿಕ್ಕಿ ಹೊಡೆದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ ಮಹಿಳೆ ಸಿಂಧನೂರು ಬಸ್ಸು ಡ್ರೈವರ್ ಗಳು ಹಾಗೂ ವಾಹನ ಚಾಲಕರು ಹುಷಾರಾಗಿ ಚಲಾಯಿಸಿ2
- ಬಾಗಲಕೋಟೆಯಲ್ಲಿ ಬಿಜೆಪಿ ಪಕ್ಷದ ಪದಗ್ರಹಣ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಜೋರಾಗಿ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹಾಗೂ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ದಿಲೀಪ್ ರಾಠೋಡ ಅವರಿಗೆ ಪದಗ್ರಹಣ ಮಾಡಿಸಲಾಯಿತು. ಇದೇ ವೇಳೆ 150ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು. ಪದಗ್ರಹಣ ಹಿನ್ನೆಲೆಯಲ್ಲಿ ನವನಗರ ಕೋರ್ಟ್ ಸರ್ಕಲ್ನಿಂದ ಆರಂಭವಾದ ಬೃಹತ್ ಬೈಕ್ ರ್ಯಾಲಿ ವಿದ್ಯಾಗಿರಿ, ಬಸವೇಶ್ವರ ವೃತ್ತ, ರೈಲ್ವೆ ನಿಲ್ದಾಣ ರಸ್ತೆ ಮೂಲಕ ಎಪಿಎಂಸಿ ಮೂಲಕ ಬಿಜೆಪಿ ಜಿಲ್ಲಾ ಕಾರ್ಯಾಲಯದವರೆಗೆ ಸಾಗಿತು.1
- ಮಕ್ಕಳ ವಿಚಾರವಾಗಿ ಎಚ್ಚರವಿರಲಿ1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1