Shuru
Apke Nagar Ki App…
Karibasava Balal
More news from ಕರ್ನಾಟಕ and nearby areas
- ಬೆಳೆ ವಿಮೆ ಹಣಕ್ಕೆ ರೈತರ ಆಕ್ರೋಶ! ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ | ಚಿತ್ರದುರ್ಗದಲ್ಲಿ ತೀವ್ರ ಪ್ರತಿಭಟನೆ #ಚಿತ್ರದುರ್ಗ #ಕರ್ನಾಟಕ #ರೈತರ_ಪ್ರತಿಭಟನೆ #ಬೆಳೆವಿಮೆ #ರೈತರ_ಹೋರಾಟ #ಕರ್ನಾಟಕ_ರಾಜ್ಯ_ರೈತ_ಸಂಘ #ಬೆಳೆನಷ್ಟ #ಶೇಂಗಾ_ಬೆಳೆ #ಈರುಳ್ಳಿ_ಬೆಳೆ #ಭದ್ರ_ಮೇಲ್ದಂಡೆ_ಯೋಜನೆ #ಚಿತ್ರದುರ್ಗ_ಸುದ್ದಿ #ಕೃಷಿ_ಸುದ್ದಿ #ರೈತರ_ಸಂಕಷ್ಟ #ಜಿಲ್ಲಾಧಿಕಾರಿ_ಕಚೇರಿ_ಮುತ್ತಿಗೆ #ಅಮಿತ್_ಶಾ #ನರೇಂದ್ರ_ಮೋದಿ #BreakingNews #KarnatakaNews #ChitradurgaNews #FarmersVoice #CropInsurance #FarmerIssues #ViralNews #TrendingNow #NewsUpdate #ViralPost1
- ಸಚಿವರಾದ ಡಿ. ಸುಧಾಕರ್ ರವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಭಾವಪೂರ್ಣ ನಮನ ಸಲ್ಲಿಸಿದ ಚಳ್ಳಕೆರೆ ಜನತೆ .1
- ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಭಾಷಣ ಆರಂಭಿಸುವ ಮುನ್ನ ಭಾವುಕರಾದರು. ಪರಮಪೂಜ್ಯ ಡಾ. ಶಿವಕುಮಾರ ಮಹಾಸ್ವಾಮೀಜಿಗಳ ಸಮಾಜಸೇವೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದಾಗ ಈ ಭಾವನಾತ್ಮಕ ಕ್ಷಣ ಮೂಡಿತು.1
- ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ, ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಇರಲಿದ್ದು, ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ.1
- ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ *ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಮೇ 10 ರಂದು ತಾಯಿ ದಿನ ಪ್ರಯುಕ್ತ , ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನಾಚರಣೆ ಆಚರಿಸಲಾಯಿತು. ಪಟ್ಟಣದಲ್ಲಿನ ಹಿರಿಯ ಸಾಹಿತಿಗಳು , ಹಿರಿಯ ಪತ್ರಕರ್ತರು , ನಿವೃತ್ತ ಉಪನ್ಯಾಸಕರಾದ ಸಿದ್ಧರಾಮ ಹಿರೇಮಠ ರವರು. ತಾಯಿಯನ್ನು ಸ್ಮರಿಸಿದರು ಹಾಗೂ ಅವರೊಂದಿಗಿನ ವಾತ್ಸಲ್ಯಯುತ ಅಮೂಲ್ಯ ಕ್ಷಣಗಳನ್ನು ನೆನೆದರು. ತಾಯಿಯವರ ಆದರ್ಶ ಗುಣಗಳನ್ನು ಕೊಂಡಾಡುತ್ತ , ಅವರಿಗೆ ಶ್ರದ್ಧಾಪೂರ್ವಕ ಭಾವುಕತೆಯಿಂದ ನುಡಿನಮನ ಸಲ್ಲಿಸಿ ವಂದಿಸಿದರು. ಅವರು ಮಾತನಾಡಿ , ತಾಯಿಗೆ ತಾಯಿನೇ ಸಾಟಿ ಅವರ ಹೊರತು ಯಾರೂ ಇಲ್ಲ ಬೇರೆನು ಸಮನಲ್ಲ ಎಂದರು. ಪ್ರತ್ಯಕ್ಷ ಆರಾಧ್ಯ ದೇವ ವೆಂದರೆ , ಹೆತ್ತ ತಾಯಿ ತಂದೆಯರು. ಅವರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಪ್ರೀತಿಸಬೇಕು , ಅವರನ್ನು ಗೌರವಿಸುವುದರೊಂದಿಗೆ ನಮ್ಮ ಮಕ್ಕಳಂತೆ ಪೋಷಿಸಬೇಕು. ಅವರ ಮನದಾಳದ ಆಸೆ ಆಕಾಂಕ್ಷೆ ಒತ್ತಾಸೆಗಳನ್ನು , ಪ್ರೀತಿ ಪೂರ್ವಕವಾಗಿ ಈಡೇರಿಸಬೇಕಿದೆ ಎಂದರು. ತಂದೆ ತಾಯಿಯರನ್ನು ಪ್ರೀತಿಸದವರು ಮನುಷ್ಯರಾಗಿರಲು ಸಾಧ್ಯವೇ ಇಲ್ಲ. ತಂದೆ ತಾಯಿಯರನ್ನು ಸಂತೋಷ ನೆಮ್ಮದಿಯಿಂದ ನೋಡಿಕೊಳ್ಳದವರು , ಕೋಟಿ ತೀರ್ಥಗಳನ್ನು ದೇಗುಲಗಳನ್ನು ಸಂದರ್ಶಿಸಿದರೇನು ಫಲ.. ದಾನ ಧರ್ಮಾದಿ ಯಜ್ಞ ಯಾಗಾದಿಗಳನ್ನು ಮಾಡಿಸರೇನು ಫಲ ಎಂದು ಪ್ರೆಶ್ನಿಸಿದ್ದಾರೆ. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಹಾಗೂ ಅವರ ಸಹೋದರರಾದ ಎನ್ ಟಿ ತಮ್ಮಣ್ಣ ನವರು. ತಮ್ಮ ತಾಯಿಗೆ ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ , ಹಾಗೂ ತಾಯಿಯ ಪಾದಕ್ಕೆ ಸಾಷ್ಟಾಂಗ ನಮಸ್ಕಾರಗಳನ್ನು ಅರ್ಪಿಸಿದ್ದಾರೆ. ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ ರವರು , ಮನೆಯಲ್ಲಿರುವ ತಮ್ಮ ಮಾತೆಯ ಭಾವಚಿತ್ರಕ್ಕೆ ಭಕ್ತಿಯಿಂದ ನಮಿಸಿ ಅವರಿಗೆ ನುಡಿನಮನ ಸಲ್ಲಿಸಿದರು. ಅಂತೆಯೇ ಪತ್ರಕರ್ತರು ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡರಾದ , ವಿ.ಜಿ.ವೃಷಭೇಂದ್ರರವರು ತಮ್ಮ ತಾಯಿಯ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿ , ಅವರಿಗೆ ಉಡುಗೊರೆಯನ್ನಿತ್ತು ಸಿಹಿ ತಿಸಿದರು. ಈ ಸಂದರ್ಭದಲ್ಲಿ ಸಹೋದರಿ ಅಕ್ಕಮಹಾದೇವಿ , ಹಾಗೂ ಸಹೋದರಿಯ ಪುತ್ರ ಇದ್ದರು. ಮತ್ತು ಅವರೂ ಕೂಡ ಸಿಹಿ ಹಂಚಿ ತಾಯಿ ದಿನಾಚರಣೆ ಆಚರಿಸಿದರು. ಅದೇ ರೀತಿ ಪಟ್ಟಣ ಸೇರಿದಂತೆ , ತಾಲೂಕಿನ ವಿವಿದೆಡೆಗಳಲ್ಲಿ. ಗಣ್ಯರು ವಿವಿದ ಮುಖಂಡರು. ಹೋರಾಟಗಾರರು , ಅನೇಕ ಸಾರ್ವಜನಿಕರು ತಾಯಿಗೆ ಸಿಹಿ ಹಂಚಿ ಉಡುಗೊರೆ ನೀಡಿದ್ದಾರೆ ಹಲವರು ತಾಯಿ ಪಾದಪೂಜೆ ಮಾಡಿ ತಾಯಿಗೆ ನಮಿಸಿದ್ದಾರೆ. ಬಹುತೇಕರು ದೇವರಲ್ಲಿ ವಿಶೇಷ ಅರ್ಚನೆ ಪೂಜೆಗಳನ್ನು ಮಾಡಿಸುವ ಮೂಲಕ ಪ್ರಾರ್ಥಿಸಿ ಶುಭ ಕೋರಿದ್ದಾರೆ. ಬಹು ಸಂಭ್ರಮದಿಂದ ಸಡಗರದಿಂದ , ತಾಯಿ ದಿನಾಚರಣೆ ಆಚರಿಸಿದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಿಟ್ಟೂರು ಗ್ರಾಮದಲ್ಲಿ 30 ವರ್ಷಗಳ ಬಳಿಕ ಸಾಂಪ್ರದಾಯಿಕ ಕೆರೆ ಬೇಟೆ ನಡೆಸಲಾಯಿತು. ಗ್ರಾಮದ ಯುವಕರು ದುಗ್ಗಮ್ಮ ಜಾತ್ರೆಗಾಗಿ ಧನ ಸಂಗ್ರಹಿಸಲು ನೂರಾರು ಜನರ ಭಾಗವಹಿಸುವಿಕೆಯೊಂದಿಗೆ ಈ ಕಾರ್ಯಕ್ರಮ ಆಯೋಜಿಸಿದ್ದರು. ಹಿಂದೆ ಜಗಳದಿಂದ ಸ್ಥಗಿತಗೊಂಡಿದ್ದ ಈ ಬೇಟೆ ಈ ಬಾರಿ ಶಾಂತಿಯುತವಾಗಿ ನಡೆಯಿತು.1
- ಗದಗದಲ್ಲಿ ಪೊಲೀಸರು ₹14 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಮತ್ತು ₹29 ಲಕ್ಷ ಮೌಲ್ಯದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಕರ್ನಾಟಕದ ಹರಪನಹಳ್ಳಿಯಿಂದ ಹೊರಟಿದ್ದ ಈ ಅಕ್ಕಿ ಅಕ್ರಮವಾಗಿ ಗುಜರಾತ್ಗೆ ಸಾಗಾಟವಾಗುತ್ತಿತ್ತು. ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ಬೆಟಗೇರಿ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- ಚಳ್ಳಕೆರೆ ನಗರದಲ್ಲಿ ಸಚಿವ ಡಿ.ಸುಧಾಕರ್ ನೆನೆದು ಕಣ್ಣಿರು ಸುರಿಸಿದ ಮಹಿಳೆಯರು1