logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭದ್ರಾವತಿ-ಸಂವಿಧಾನ ಪ್ರತಿಯೊಬ್ಬ ನಾಗರೀಕರಿಗೂ ಸಮಾನ ಅವಕಾಶ: ಹಕ್ಕುಗಳನ್ನು ನೀಡಿದೆ ಭದ್ರಾವತಿ: ಭಾರತದ ಸಂವಿಧಾನ ಭಾರತೀಯರಾದ ನಮ್ಮೆಲ್ಲರಿಗೂ ಪವಿತ್ರ ವಾದ ಗ್ರಂಥವಾಗಿದ್ದು, ಪ್ರತಿಯೊಬ್ಬ ನಾಗರೀಕರಿಗೂ ಸಂವಿಧಾನವು ಸಮಾನ ಅವಕಾಶ,ಹಕ್ಕುಗಳನ್ನುನೀಡಿದೆ. ಗಣರಾಜ್ಯೋತ್ಸವವೆನ್ನುವುದು ಭಾರತೀಯ ರಾದ ನಮಗೆ ಪವಿತ್ರವಾದ ರಾಷ್ಟ್ರೀಯ ಹಬ್ಬವಾಗಿದೆ ಎಂದು ತಹಶೀಲ್ದಾರ್ ಪರಸಪ್ಪ ಕುರುಬರ ಹೇಳಿದರು. ಅವರು ಸೋಮವಾರ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಏರ್ಪಡಿಸಿದ್ದ 77ನೇ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ವಿವಿಧ ರಾಜ್ಯಗಳನ್ನು ಸಂವಿಧಾನದ ಅಡಿಯಲ್ಲಿ ಒಗ್ಗೂಡಿಸಿ ರಚಿಸಲಾದ ಭಾರತ ದೇಶದಲ್ಲಿ ಗಣರಾಜ್ಯೋತ್ಸವವನ್ನು ಎಲ್ಲರೂ ಶಾಂತಿ,ಸೌಹಾರ್ಧತೆ,ಪ್ರೀತಿಯೀಂದ ಬಾಳುತ್ತಿದ್ದು ಇದು ವಿಶ್ವಕ್ಕೇ ಮಾದರಿ ಯಾಗಿದೆ ಎಂದರು. ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಬಿ.ಕೆ.ಸಂಗಮೆಶ್ವರ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂದೀಜಿ ಹೆಸರನ್ನೇ ಕೇಂದ್ರಸರ್ಕಾರದವರು ನರೇಗಾದಿಂದ ಗಾಂಧೀ ಹೆಸರನ್ನು ಕೈಬಿಟ್ಟು ಗಾಂಧೀ ಹೆಸರನ್ನು ಇಲ್ಲವಾಗಿಸುವ ಪ್ರಯತ್ನಮಾಡಿದ್ದಾರೆ. ಇತಂಹವರು ಅಧಿಕಾರದಲ್ಲಿ ಮುಂದುವರೆದರೆ ಇವರು ಮುಂದೆ ಸಂವಿಧಾನವನ್ನೇ ಬದಲಾಯಿಸ ಬಹುದು ಆದ್ದರಿಂದ ಎಲ್ಲರೂ ಎಚ್ಚರಿಕೆ ಯಿಂದ ಸಂವಿಧಾನದ ರಕ್ಷಣೆಗೆ ಆಧ್ಯತೆ ನೀಡಬೇಕು ಎಂದರು. ಕ್ಷೇತ್ರಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಪ್ರಾಸ್ಥಾವಿಕನುಡಿಗಳನ್ನಾಡಿದರು.ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ಧಬಸಪ್ಪ ಕಾರ್ಯಕ್ರಮ ನಿರೂಪಿಸಿದರು. ಸುಮತಿ ಕಾರಂತ್ ಸಂಗಡಿಗರು ನಾಡಗೀತೆ,ರೈತಗೀತೆ ಹಾಡಿದರು. ಶಾಲಾ ಮಕ್ಕಳು ಸಂವಿಧಾನ ಪೀಠಿಕೆ ಪ್ರತಿಜ್ಞಾವಿಧಿ ಭೋಧಿಸಿದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ ನಗರದಲ್ಲಿ ನಡೆದ ದಂಪತಿಗಳ ಜೋಡಿ ಕೊಲೆಯನ್ನು 24ಗಂಟೆಯಲ್ಲಿ ಬೇಧಿಸಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದ ಡಿವೈಎಸ್ಪಿ ಪ್ರಕಾಶ್ ರಾಠೋಡ್, ನಗರ ವೃತ್ತನಿರೀಕ್ಷಕಿ ನಾಗಮ್ಮ ಹಾಗೂ ಹಳೇನಗರ ಪೋಲಿಸ್ ಠಾಣೆಯ ಪಿಎಸ್ ಐ ಸುನೀಲ್ ಬಸವರಾಜ್ ತೇಲಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ನಗರಸಭಾಧ್ಯಕ್ಷೆ ಗೀತಾರಾಜಕುಮಾರ್,ಉಪಾಧ್ಯಕ್ಷ ಬಷೀರ್, ಸ್ಥಾಯಿಸಮಿತಿ ಅಧ್ಯಕ್ಷ ಸಯ್ಯದ್ ರಿಯಾಜ್ ಅಹಮದ್, ನಗರಸಬಾ ಸದಸ್ಯರುಗಳು, ಪೌರಾಯುಕ್ತ ಹೇಮಂತ್, ತಾಪಂ ಕಾರ್ಯನಿರ್ವಾಹಣಾಧಿಕಾರಿ ಆಶಾ, ಗ್ರಾಮಾಂತರ ವೃತ್ತನಿರೀಕ್ಷಕ ಸಂದೀಪ್ ಮತ್ತಿತರರು ಉಪಸ್ಥಿತರಿದ್ದರು. ತ ತಹಶೀಲ್ದಾರ್ ಹಾಗೂ ಶಾಸಕರು ಪೋಲಿಸ್ ತಂಡ,ಗೃಹರಕ್ಷಕದಳ, ಶಾಲಾಮಕ್ಕಳ ವಾದ್ಯತಂಡದ ಧ್ವಜವಂದನೆ ಸ್ವೀಕರಿಸಿದರು. ವಿವಿಧ ಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ನರ್ತಿಸಿ ರಂಜಿಸಿದರು.

10 hrs ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Journalist Bhadravati, Shivamogga•
10 hrs ago

ಭದ್ರಾವತಿ-ಸಂವಿಧಾನ ಪ್ರತಿಯೊಬ್ಬ ನಾಗರೀಕರಿಗೂ ಸಮಾನ ಅವಕಾಶ: ಹಕ್ಕುಗಳನ್ನು ನೀಡಿದೆ ಭದ್ರಾವತಿ: ಭಾರತದ ಸಂವಿಧಾನ ಭಾರತೀಯರಾದ ನಮ್ಮೆಲ್ಲರಿಗೂ ಪವಿತ್ರ ವಾದ ಗ್ರಂಥವಾಗಿದ್ದು, ಪ್ರತಿಯೊಬ್ಬ ನಾಗರೀಕರಿಗೂ ಸಂವಿಧಾನವು ಸಮಾನ ಅವಕಾಶ,ಹಕ್ಕುಗಳನ್ನುನೀಡಿದೆ. ಗಣರಾಜ್ಯೋತ್ಸವವೆನ್ನುವುದು ಭಾರತೀಯ ರಾದ ನಮಗೆ ಪವಿತ್ರವಾದ ರಾಷ್ಟ್ರೀಯ ಹಬ್ಬವಾಗಿದೆ ಎಂದು ತಹಶೀಲ್ದಾರ್ ಪರಸಪ್ಪ ಕುರುಬರ ಹೇಳಿದರು. ಅವರು ಸೋಮವಾರ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಏರ್ಪಡಿಸಿದ್ದ 77ನೇ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ವಿವಿಧ ರಾಜ್ಯಗಳನ್ನು ಸಂವಿಧಾನದ ಅಡಿಯಲ್ಲಿ ಒಗ್ಗೂಡಿಸಿ ರಚಿಸಲಾದ ಭಾರತ ದೇಶದಲ್ಲಿ ಗಣರಾಜ್ಯೋತ್ಸವವನ್ನು ಎಲ್ಲರೂ ಶಾಂತಿ,ಸೌಹಾರ್ಧತೆ,ಪ್ರೀತಿಯೀಂದ ಬಾಳುತ್ತಿದ್ದು ಇದು ವಿಶ್ವಕ್ಕೇ ಮಾದರಿ ಯಾಗಿದೆ ಎಂದರು. ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಬಿ.ಕೆ.ಸಂಗಮೆಶ್ವರ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂದೀಜಿ ಹೆಸರನ್ನೇ ಕೇಂದ್ರಸರ್ಕಾರದವರು ನರೇಗಾದಿಂದ ಗಾಂಧೀ ಹೆಸರನ್ನು ಕೈಬಿಟ್ಟು ಗಾಂಧೀ ಹೆಸರನ್ನು ಇಲ್ಲವಾಗಿಸುವ ಪ್ರಯತ್ನಮಾಡಿದ್ದಾರೆ. ಇತಂಹವರು ಅಧಿಕಾರದಲ್ಲಿ ಮುಂದುವರೆದರೆ ಇವರು ಮುಂದೆ ಸಂವಿಧಾನವನ್ನೇ ಬದಲಾಯಿಸ ಬಹುದು ಆದ್ದರಿಂದ ಎಲ್ಲರೂ ಎಚ್ಚರಿಕೆ ಯಿಂದ ಸಂವಿಧಾನದ ರಕ್ಷಣೆಗೆ ಆಧ್ಯತೆ ನೀಡಬೇಕು ಎಂದರು. ಕ್ಷೇತ್ರಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಪ್ರಾಸ್ಥಾವಿಕನುಡಿಗಳನ್ನಾಡಿದರು.ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ಧಬಸಪ್ಪ ಕಾರ್ಯಕ್ರಮ ನಿರೂಪಿಸಿದರು. ಸುಮತಿ ಕಾರಂತ್ ಸಂಗಡಿಗರು ನಾಡಗೀತೆ,ರೈತಗೀತೆ ಹಾಡಿದರು. ಶಾಲಾ ಮಕ್ಕಳು ಸಂವಿಧಾನ ಪೀಠಿಕೆ ಪ್ರತಿಜ್ಞಾವಿಧಿ ಭೋಧಿಸಿದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ ನಗರದಲ್ಲಿ ನಡೆದ ದಂಪತಿಗಳ ಜೋಡಿ ಕೊಲೆಯನ್ನು 24ಗಂಟೆಯಲ್ಲಿ ಬೇಧಿಸಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದ ಡಿವೈಎಸ್ಪಿ ಪ್ರಕಾಶ್ ರಾಠೋಡ್, ನಗರ ವೃತ್ತನಿರೀಕ್ಷಕಿ ನಾಗಮ್ಮ ಹಾಗೂ ಹಳೇನಗರ ಪೋಲಿಸ್ ಠಾಣೆಯ ಪಿಎಸ್ ಐ ಸುನೀಲ್ ಬಸವರಾಜ್ ತೇಲಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ನಗರಸಭಾಧ್ಯಕ್ಷೆ ಗೀತಾರಾಜಕುಮಾರ್,ಉಪಾಧ್ಯಕ್ಷ ಬಷೀರ್, ಸ್ಥಾಯಿಸಮಿತಿ ಅಧ್ಯಕ್ಷ ಸಯ್ಯದ್ ರಿಯಾಜ್ ಅಹಮದ್, ನಗರಸಬಾ ಸದಸ್ಯರುಗಳು, ಪೌರಾಯುಕ್ತ ಹೇಮಂತ್, ತಾಪಂ ಕಾರ್ಯನಿರ್ವಾಹಣಾಧಿಕಾರಿ ಆಶಾ, ಗ್ರಾಮಾಂತರ ವೃತ್ತನಿರೀಕ್ಷಕ ಸಂದೀಪ್ ಮತ್ತಿತರರು ಉಪಸ್ಥಿತರಿದ್ದರು. ತ ತಹಶೀಲ್ದಾರ್ ಹಾಗೂ ಶಾಸಕರು ಪೋಲಿಸ್ ತಂಡ,ಗೃಹರಕ್ಷಕದಳ, ಶಾಲಾಮಕ್ಕಳ ವಾದ್ಯತಂಡದ ಧ್ವಜವಂದನೆ ಸ್ವೀಕರಿಸಿದರು. ವಿವಿಧ ಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ನರ್ತಿಸಿ ರಂಜಿಸಿದರು.

More news from Shivamogga and nearby areas
  • ಭದ್ರಾವತಿ: ಭಾರತದ ಸಂವಿಧಾನ ಭಾರತೀಯರಾದ ನಮ್ಮೆಲ್ಲರಿಗೂ ಪವಿತ್ರ ವಾದ ಗ್ರಂಥವಾಗಿದ್ದು, ಪ್ರತಿಯೊಬ್ಬ ನಾಗರೀಕರಿಗೂ ಸಂವಿಧಾನವು ಸಮಾನ ಅವಕಾಶ,ಹಕ್ಕುಗಳನ್ನುನೀಡಿದೆ. ಗಣರಾಜ್ಯೋತ್ಸವವೆನ್ನುವುದು ಭಾರತೀಯ ರಾದ ನಮಗೆ ಪವಿತ್ರವಾದ ರಾಷ್ಟ್ರೀಯ ಹಬ್ಬವಾಗಿದೆ ಎಂದು ತಹಶೀಲ್ದಾರ್ ಪರಸಪ್ಪ ಕುರುಬರ ಹೇಳಿದರು. ಅವರು ಸೋಮವಾರ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಏರ್ಪಡಿಸಿದ್ದ 77ನೇ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ವಿವಿಧ ರಾಜ್ಯಗಳನ್ನು ಸಂವಿಧಾನದ ಅಡಿಯಲ್ಲಿ ಒಗ್ಗೂಡಿಸಿ ರಚಿಸಲಾದ ಭಾರತ ದೇಶದಲ್ಲಿ ಗಣರಾಜ್ಯೋತ್ಸವವನ್ನು ಎಲ್ಲರೂ ಶಾಂತಿ,ಸೌಹಾರ್ಧತೆ,ಪ್ರೀತಿಯೀಂದ ಬಾಳುತ್ತಿದ್ದು ಇದು ವಿಶ್ವಕ್ಕೇ ಮಾದರಿ ಯಾಗಿದೆ ಎಂದರು. ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಬಿ.ಕೆ.ಸಂಗಮೆಶ್ವರ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂದೀಜಿ ಹೆಸರನ್ನೇ ಕೇಂದ್ರಸರ್ಕಾರದವರು ನರೇಗಾದಿಂದ ಗಾಂಧೀ ಹೆಸರನ್ನು ಕೈಬಿಟ್ಟು ಗಾಂಧೀ ಹೆಸರನ್ನು ಇಲ್ಲವಾಗಿಸುವ ಪ್ರಯತ್ನಮಾಡಿದ್ದಾರೆ. ಇತಂಹವರು ಅಧಿಕಾರದಲ್ಲಿ ಮುಂದುವರೆದರೆ ಇವರು ಮುಂದೆ ಸಂವಿಧಾನವನ್ನೇ ಬದಲಾಯಿಸ ಬಹುದು ಆದ್ದರಿಂದ ಎಲ್ಲರೂ ಎಚ್ಚರಿಕೆ ಯಿಂದ ಸಂವಿಧಾನದ ರಕ್ಷಣೆಗೆ ಆಧ್ಯತೆ ನೀಡಬೇಕು ಎಂದರು. ಕ್ಷೇತ್ರಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಪ್ರಾಸ್ಥಾವಿಕನುಡಿಗಳನ್ನಾಡಿದರು.ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ಧಬಸಪ್ಪ ಕಾರ್ಯಕ್ರಮ ನಿರೂಪಿಸಿದರು. ಸುಮತಿ ಕಾರಂತ್ ಸಂಗಡಿಗರು ನಾಡಗೀತೆ,ರೈತಗೀತೆ ಹಾಡಿದರು. ಶಾಲಾ ಮಕ್ಕಳು ಸಂವಿಧಾನ ಪೀಠಿಕೆ ಪ್ರತಿಜ್ಞಾವಿಧಿ ಭೋಧಿಸಿದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ ನಗರದಲ್ಲಿ ನಡೆದ ದಂಪತಿಗಳ ಜೋಡಿ ಕೊಲೆಯನ್ನು 24ಗಂಟೆಯಲ್ಲಿ ಬೇಧಿಸಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದ ಡಿವೈಎಸ್ಪಿ ಪ್ರಕಾಶ್ ರಾಠೋಡ್, ನಗರ ವೃತ್ತನಿರೀಕ್ಷಕಿ ನಾಗಮ್ಮ ಹಾಗೂ ಹಳೇನಗರ ಪೋಲಿಸ್ ಠಾಣೆಯ ಪಿಎಸ್ ಐ ಸುನೀಲ್ ಬಸವರಾಜ್ ತೇಲಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ನಗರಸಭಾಧ್ಯಕ್ಷೆ ಗೀತಾರಾಜಕುಮಾರ್,ಉಪಾಧ್ಯಕ್ಷ ಬಷೀರ್, ಸ್ಥಾಯಿಸಮಿತಿ ಅಧ್ಯಕ್ಷ ಸಯ್ಯದ್ ರಿಯಾಜ್ ಅಹಮದ್, ನಗರಸಬಾ ಸದಸ್ಯರುಗಳು, ಪೌರಾಯುಕ್ತ ಹೇಮಂತ್, ತಾಪಂ ಕಾರ್ಯನಿರ್ವಾಹಣಾಧಿಕಾರಿ ಆಶಾ, ಗ್ರಾಮಾಂತರ ವೃತ್ತನಿರೀಕ್ಷಕ ಸಂದೀಪ್ ಮತ್ತಿತರರು ಉಪಸ್ಥಿತರಿದ್ದರು. ತ ತಹಶೀಲ್ದಾರ್ ಹಾಗೂ ಶಾಸಕರು ಪೋಲಿಸ್ ತಂಡ,ಗೃಹರಕ್ಷಕದಳ, ಶಾಲಾಮಕ್ಕಳ ವಾದ್ಯತಂಡದ ಧ್ವಜವಂದನೆ ಸ್ವೀಕರಿಸಿದರು. ವಿವಿಧ ಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ನರ್ತಿಸಿ ರಂಜಿಸಿದರು.
    1
    ಭದ್ರಾವತಿ: ಭಾರತದ ಸಂವಿಧಾನ ಭಾರತೀಯರಾದ ನಮ್ಮೆಲ್ಲರಿಗೂ ಪವಿತ್ರ ವಾದ ಗ್ರಂಥವಾಗಿದ್ದು, ಪ್ರತಿಯೊಬ್ಬ ನಾಗರೀಕರಿಗೂ ಸಂವಿಧಾನವು ಸಮಾನ ಅವಕಾಶ,ಹಕ್ಕುಗಳನ್ನುನೀಡಿದೆ. ಗಣರಾಜ್ಯೋತ್ಸವವೆನ್ನುವುದು ಭಾರತೀಯ ರಾದ ನಮಗೆ ಪವಿತ್ರವಾದ ರಾಷ್ಟ್ರೀಯ ಹಬ್ಬವಾಗಿದೆ ಎಂದು ತಹಶೀಲ್ದಾರ್ ಪರಸಪ್ಪ ಕುರುಬರ ಹೇಳಿದರು. 
ಅವರು ಸೋಮವಾರ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಏರ್ಪಡಿಸಿದ್ದ 77ನೇ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ವಿವಿಧ ರಾಜ್ಯಗಳನ್ನು ಸಂವಿಧಾನದ ಅಡಿಯಲ್ಲಿ ಒಗ್ಗೂಡಿಸಿ ರಚಿಸಲಾದ ಭಾರತ ದೇಶದಲ್ಲಿ ಗಣರಾಜ್ಯೋತ್ಸವವನ್ನು ಎಲ್ಲರೂ ಶಾಂತಿ,ಸೌಹಾರ್ಧತೆ,ಪ್ರೀತಿಯೀಂದ ಬಾಳುತ್ತಿದ್ದು ಇದು ವಿಶ್ವಕ್ಕೇ ಮಾದರಿ ಯಾಗಿದೆ ಎಂದರು. 
ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಬಿ.ಕೆ.ಸಂಗಮೆಶ್ವರ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂದೀಜಿ ಹೆಸರನ್ನೇ ಕೇಂದ್ರಸರ್ಕಾರದವರು ನರೇಗಾದಿಂದ ಗಾಂಧೀ ಹೆಸರನ್ನು ಕೈಬಿಟ್ಟು ಗಾಂಧೀ ಹೆಸರನ್ನು ಇಲ್ಲವಾಗಿಸುವ ಪ್ರಯತ್ನಮಾಡಿದ್ದಾರೆ. ಇತಂಹವರು ಅಧಿಕಾರದಲ್ಲಿ ಮುಂದುವರೆದರೆ ಇವರು ಮುಂದೆ ಸಂವಿಧಾನವನ್ನೇ ಬದಲಾಯಿಸ ಬಹುದು ಆದ್ದರಿಂದ ಎಲ್ಲರೂ ಎಚ್ಚರಿಕೆ ಯಿಂದ ಸಂವಿಧಾನದ ರಕ್ಷಣೆಗೆ ಆಧ್ಯತೆ ನೀಡಬೇಕು ಎಂದರು. 
ಕ್ಷೇತ್ರಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಪ್ರಾಸ್ಥಾವಿಕನುಡಿಗಳನ್ನಾಡಿದರು.ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ಧಬಸಪ್ಪ ಕಾರ್ಯಕ್ರಮ ನಿರೂಪಿಸಿದರು. ಸುಮತಿ ಕಾರಂತ್ ಸಂಗಡಿಗರು ನಾಡಗೀತೆ,ರೈತಗೀತೆ ಹಾಡಿದರು. ಶಾಲಾ ಮಕ್ಕಳು ಸಂವಿಧಾನ ಪೀಠಿಕೆ ಪ್ರತಿಜ್ಞಾವಿಧಿ ಭೋಧಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು. 
ಇತ್ತೀಚೆಗೆ ನಗರದಲ್ಲಿ ನಡೆದ ದಂಪತಿಗಳ ಜೋಡಿ ಕೊಲೆಯನ್ನು 24ಗಂಟೆಯಲ್ಲಿ ಬೇಧಿಸಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದ ಡಿವೈಎಸ್ಪಿ ಪ್ರಕಾಶ್ ರಾಠೋಡ್, ನಗರ ವೃತ್ತನಿರೀಕ್ಷಕಿ ನಾಗಮ್ಮ ಹಾಗೂ ಹಳೇನಗರ ಪೋಲಿಸ್ ಠಾಣೆಯ ಪಿಎಸ್ ಐ ಸುನೀಲ್ ಬಸವರಾಜ್ ತೇಲಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. 
ವೇದಿಕೆಯಲ್ಲಿ ನಗರಸಭಾಧ್ಯಕ್ಷೆ ಗೀತಾರಾಜಕುಮಾರ್,ಉಪಾಧ್ಯಕ್ಷ ಬಷೀರ್, ಸ್ಥಾಯಿಸಮಿತಿ ಅಧ್ಯಕ್ಷ ಸಯ್ಯದ್ ರಿಯಾಜ್ ಅಹಮದ್, ನಗರಸಬಾ ಸದಸ್ಯರುಗಳು, ಪೌರಾಯುಕ್ತ ಹೇಮಂತ್, ತಾಪಂ ಕಾರ್ಯನಿರ್ವಾಹಣಾಧಿಕಾರಿ ಆಶಾ, ಗ್ರಾಮಾಂತರ ವೃತ್ತನಿರೀಕ್ಷಕ ಸಂದೀಪ್ ಮತ್ತಿತರರು ಉಪಸ್ಥಿತರಿದ್ದರು. ತ
ತಹಶೀಲ್ದಾರ್ ಹಾಗೂ ಶಾಸಕರು ಪೋಲಿಸ್ ತಂಡ,ಗೃಹರಕ್ಷಕದಳ, ಶಾಲಾಮಕ್ಕಳ ವಾದ್ಯತಂಡದ ಧ್ವಜವಂದನೆ ಸ್ವೀಕರಿಸಿದರು. ವಿವಿಧ ಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ನರ್ತಿಸಿ ರಂಜಿಸಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Journalist Bhadravati, Shivamogga•
    10 hrs ago
  • ಸೊರಬ ಪಟ್ಟಣದ ರಂಗಮoದಿರದ ಆಭರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ವಿವಿಧ ಇಲಾಖೆಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಸಹಯೋಗದೊಂದಿಗೆ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಮಂಜುಳಾ ಬಿ ಹೆಗಡಾಳ್ ಶುಭ ಸಂದೇಶ ನೀಡಿ ಗಣರಾಜ್ಯೋತ್ಸವ ಎಂದರೆ ಕೇವಲ ಇತಿಹಾಸವನ್ನು ನೆನಪಿಸಿಕೊಳ್ಳುವುದಲ್ಲ, ಅದು ಭವಿಷ್ಯವನ್ನು ರೂಪಿಸುವುದಾಗಿದೆ. ನಮ್ಮ ದೇಶದ ಪ್ರಗತಿಗೆ ನಾವೆಷ್ಟು ಬದ್ಧರಾಗಿದ್ದೇವೆ ಎಂದು ಮರುಚಿಂತನೆ ಮಾಡುವ ದಿನವಾಗಿದೆ. ಗಣರಾಜ್ಯೋತ್ಸವ ಎಂದರೆ ಕೇವಲ ರಜೆ ದಿನವಲ್ಲ. ಇದು ನಾವು ದೇಶಕ್ಕೆ ಏನು ನೀಡಬಹುದು ಎಂದು ಯೋಚಿಸುವ ದಿನ. ದೇಶದ ಗಣರಾಜ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಅಂತಹ ಇನ್ನು ಅನೇಕ ಮಹನೀಯರನ್ನು ಮತ್ತು ಇಂದಿಗೂ ಗಡಿಯಲ್ಲಿ ನಮ್ಮನ್ನು ಕಾಯುತ್ತಿರುವ ಯೋಧರನ್ನು ನಾವು ಈ ಕ್ಷಣದಲ್ಲಿ ನೆನೆಯಲೇಬೇಕು. ಗಣರಾಜ್ಯ ಎಂದರೇ ಪ್ರಜೆಗಳಿಂದಲೇ ಚುನಾಯಿತರಾದ ಪ್ರತಿನಿಧಿಗಳು. ಆಡಳಿತ ನಡೆಸುವ ವ್ಯವಸ್ಥೆಯೇ 'ಗಣರಾಜ್ಯ' ಇಲ್ಲಿ ಪ್ರಜೆಗಳೇ ಪ್ರಭುಗಳು.ಭಾರತದ ಸಂವಿಧಾನದ ಮೌಲ್ಯಗಳಾದ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವ, ಹಾಗೂ ರಾಷ್ಟ್ರದ ಶಾಂತಿ ಮತ್ತು ಏಕತೆಗಾಗಿ ಬದ್ಧರಾಗುವ ಸಂಕಲ್ಪ ಮಾಡುವ ದಿನವಿದು. ದೇಶದ ಪ್ರಗತಿ ಮತ್ತು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಬ್ಬ ನಾಗರಿಕನ ಕೊಡುಗೆ ಇರಲಿ. "ದೇಶದ ಪ್ರಗತಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿ ಪ್ರಜೆಯ ಕರ್ತವ್ಯ. ಕಾನೂನನ್ನು ಗೌರವಿಸೋಣ, ಸಮಾನತೆಯನ್ನು ಪಾಲಿಸೋಣ. ಸಂವಿಧಾನ ನಮಗೆ ಹಕ್ಕುಗಳನ್ನು ನೀಡಿದೆ, ಅದರ ಜೊತೆಗೆ ಕೆಲವು ಕರ್ತವ್ಯಗಳನ್ನೂ ನೀಡಿದೆ. ಆ ಕರ್ತವ್ಯಗಳನ್ನು ಪಾಲಿಸುವುದು ನಮ್ಮ ಮೊದಲ ಆದ್ಯತೆಯಾಗಲಿ. ದೇಶದ ಕಾನೂನುಗಳನ್ನು ಗೌರವಿಸುವುದು, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ಜಾತಿ ಧರ್ಮಗಳ ಭೇದವಿಲ್ಲದೆ ಒಗ್ಗಟ್ಟಿನಿಂದ ಬಾಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ನoತರ ನಡೆದ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಜಯಶೀಲಗೌಡ, ತಾ.ಪಂ ಮಾಜಿ ಅಧ್ಯಕ್ಷ ಹೆಚ್ ಗಣಪತಿ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೆ ಜಿ ಶಶಿಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ ಆರ್, ಕೃಷಿ ಅಧಿಕಾರಿ ಕೆ.ಜಿ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಚಂದನ್, ನೌಕರರ ಸಂಘದ ಅಧ್ಯಕ್ಷ ಎಸ್ ಮಂಜುನಾಥ್, ಅಧಿಕಾರಿಗಳಾದ ನಾಗರಾಜ್ ಅನ್ವೇಕರ್, ಪ್ರದೀಪ್ ಕುಮಾರ್, ಮೀನಾಕ್ಷಿ, ದಯಾನಂದ ಕಲ್ಲೇರ, ಸೋಮಶೇಖರ್, ಪ್ರಮುಖರಾದ ಹೆಚ್ ಗಣಪತಿ, ಡಿ ಬಿ ಅಣ್ಣಪ್ಪ, ಜಯಶೀಲಗೌಡ, ಪ್ರಶಾಂತ್ ಮೇಸ್ತ್ರಿ, ಸುಜಾಯತ್, ಅತಿಕುರ್ ರೆಹಮಾನ್, ರತ್ನಮ್ಮ ಮೊದಲಾದವರು ಇದ್ದರು.
    4
    ಸೊರಬ ಪಟ್ಟಣದ ರಂಗಮoದಿರದ ಆಭರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ವಿವಿಧ ಇಲಾಖೆಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಸಹಯೋಗದೊಂದಿಗೆ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಮಂಜುಳಾ ಬಿ ಹೆಗಡಾಳ್ ಶುಭ ಸಂದೇಶ ನೀಡಿ ಗಣರಾಜ್ಯೋತ್ಸವ ಎಂದರೆ ಕೇವಲ ಇತಿಹಾಸವನ್ನು ನೆನಪಿಸಿಕೊಳ್ಳುವುದಲ್ಲ, ಅದು ಭವಿಷ್ಯವನ್ನು ರೂಪಿಸುವುದಾಗಿದೆ. ನಮ್ಮ ದೇಶದ ಪ್ರಗತಿಗೆ ನಾವೆಷ್ಟು ಬದ್ಧರಾಗಿದ್ದೇವೆ ಎಂದು ಮರುಚಿಂತನೆ ಮಾಡುವ ದಿನವಾಗಿದೆ. ಗಣರಾಜ್ಯೋತ್ಸವ ಎಂದರೆ ಕೇವಲ ರಜೆ ದಿನವಲ್ಲ. ಇದು ನಾವು ದೇಶಕ್ಕೆ ಏನು ನೀಡಬಹುದು ಎಂದು ಯೋಚಿಸುವ ದಿನ. ದೇಶದ ಗಣರಾಜ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಅಂತಹ ಇನ್ನು ಅನೇಕ ಮಹನೀಯರನ್ನು ಮತ್ತು ಇಂದಿಗೂ ಗಡಿಯಲ್ಲಿ ನಮ್ಮನ್ನು ಕಾಯುತ್ತಿರುವ ಯೋಧರನ್ನು ನಾವು ಈ ಕ್ಷಣದಲ್ಲಿ ನೆನೆಯಲೇಬೇಕು.
ಗಣರಾಜ್ಯ ಎಂದರೇ ಪ್ರಜೆಗಳಿಂದಲೇ ಚುನಾಯಿತರಾದ ಪ್ರತಿನಿಧಿಗಳು. ಆಡಳಿತ ನಡೆಸುವ ವ್ಯವಸ್ಥೆಯೇ 'ಗಣರಾಜ್ಯ' ಇಲ್ಲಿ ಪ್ರಜೆಗಳೇ ಪ್ರಭುಗಳು.ಭಾರತದ ಸಂವಿಧಾನದ ಮೌಲ್ಯಗಳಾದ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವ, ಹಾಗೂ ರಾಷ್ಟ್ರದ ಶಾಂತಿ ಮತ್ತು ಏಕತೆಗಾಗಿ ಬದ್ಧರಾಗುವ ಸಂಕಲ್ಪ ಮಾಡುವ ದಿನವಿದು. ದೇಶದ ಪ್ರಗತಿ ಮತ್ತು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಬ್ಬ ನಾಗರಿಕನ ಕೊಡುಗೆ ಇರಲಿ.
"ದೇಶದ ಪ್ರಗತಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿ ಪ್ರಜೆಯ ಕರ್ತವ್ಯ. ಕಾನೂನನ್ನು ಗೌರವಿಸೋಣ, ಸಮಾನತೆಯನ್ನು ಪಾಲಿಸೋಣ. ಸಂವಿಧಾನ ನಮಗೆ ಹಕ್ಕುಗಳನ್ನು ನೀಡಿದೆ, ಅದರ ಜೊತೆಗೆ ಕೆಲವು ಕರ್ತವ್ಯಗಳನ್ನೂ ನೀಡಿದೆ. ಆ ಕರ್ತವ್ಯಗಳನ್ನು ಪಾಲಿಸುವುದು ನಮ್ಮ ಮೊದಲ ಆದ್ಯತೆಯಾಗಲಿ. ದೇಶದ ಕಾನೂನುಗಳನ್ನು ಗೌರವಿಸುವುದು, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ಜಾತಿ ಧರ್ಮಗಳ ಭೇದವಿಲ್ಲದೆ ಒಗ್ಗಟ್ಟಿನಿಂದ ಬಾಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ನoತರ ನಡೆದ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಜಯಶೀಲಗೌಡ, ತಾ.ಪಂ ಮಾಜಿ ಅಧ್ಯಕ್ಷ ಹೆಚ್ ಗಣಪತಿ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. 
ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೆ ಜಿ ಶಶಿಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ ಆರ್, ಕೃಷಿ ಅಧಿಕಾರಿ ಕೆ.ಜಿ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಚಂದನ್, ನೌಕರರ ಸಂಘದ ಅಧ್ಯಕ್ಷ ಎಸ್ ಮಂಜುನಾಥ್, ಅಧಿಕಾರಿಗಳಾದ ನಾಗರಾಜ್ ಅನ್ವೇಕರ್, ಪ್ರದೀಪ್ ಕುಮಾರ್, ಮೀನಾಕ್ಷಿ, ದಯಾನಂದ ಕಲ್ಲೇರ, ಸೋಮಶೇಖರ್, ಪ್ರಮುಖರಾದ ಹೆಚ್ ಗಣಪತಿ, ಡಿ ಬಿ ಅಣ್ಣಪ್ಪ, ಜಯಶೀಲಗೌಡ, ಪ್ರಶಾಂತ್ ಮೇಸ್ತ್ರಿ, ಸುಜಾಯತ್, ಅತಿಕುರ್ ರೆಹಮಾನ್, ರತ್ನಮ್ಮ ಮೊದಲಾದವರು ಇದ್ದರು.
    user_SANDEEP U. L
    SANDEEP U. L
    Courier service ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    15 hrs ago
  • ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ನೂತನವಾಗಿ ಎಡ್ ಲ್ಯಾಬ್ ಹಾಗೂ ಡಿಜಿಟಲ್ ಕೊಠಡಿಯನ್ನ ನಿರ್ಮಾಣ ಮಾಡಿದ್ದು ಸಚಿವ ಡಿ ಸುಧಾಕರ್ ಅವರು ಆಗಮಿಸಿ ಹಸಿರು ‌ನಿಶಾನೆ ತೋರಿಸುವ ಮೂಲಕ ಉದ್ಘಾಟನೆ ಮಾಡಿದ್ದಾರೆ
    1
    ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ನೂತನವಾಗಿ ಎಡ್ ಲ್ಯಾಬ್ ಹಾಗೂ ಡಿಜಿಟಲ್ ಕೊಠಡಿಯನ್ನ ನಿರ್ಮಾಣ ಮಾಡಿದ್ದು ಸಚಿವ ಡಿ ಸುಧಾಕರ್ ಅವರು ಆಗಮಿಸಿ ಹಸಿರು ‌ನಿಶಾನೆ ತೋರಿಸುವ ಮೂಲಕ ಉದ್ಘಾಟನೆ ಮಾಡಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
  • 77ನೇ ಗಣರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಅಲಂಕಾರ ಮಾಡಲಾಗಿದೆ...ಚಳ್ಳಕೆರೆ ತಾಲ್ಲೂಕ್ ಆಡಳಿತದಿಂದ ಸಂಭ್ರಮದ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.... ನಗರದ ಎಲ್ಲಾ ಸರ್ಕಾರಿ ಕಚೇರಿಗಳು, ತಳಿರು-ತೋರಣ ಮತ್ತು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ . 77 ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ ತಾಲೂಕು ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ನಂತರ ಶಾಸಕಾ ಟಿ .ರಘು ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಗರದ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆಯ ಬಯಲು ರಂಗ ಮಂದಿರದಲ್ಲಿ ಸಭೆ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಧ್ವಜಾರೋಹಣವನ್ನ ತಾಸಿಲ್ದಾರ್ ರಹಂ ಪಾಷಾ ಅವರು ನೆರವೇರಿಸಲಿದ್ದು. ವಿದ್ಯಾರ್ಥಿಗಳಿಂದ ಪಥಸಂಚಲನ.ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಹಾಗೂ ದೇಶದ ಜನತೆಗೆ ತಾಲೂಕು ಆಡಳಿತ ಗಣರಾಜ್ಯೋತ್ಸವದ ಶುಭಾಶಯಗಳು ತಿಳಿಸಿದೆ......
    1
    77ನೇ ಗಣರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಅಲಂಕಾರ ಮಾಡಲಾಗಿದೆ...ಚಳ್ಳಕೆರೆ  ತಾಲ್ಲೂಕ್  ಆಡಳಿತದಿಂದ ಸಂಭ್ರಮದ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.... ನಗರದ ಎಲ್ಲಾ ಸರ್ಕಾರಿ ಕಚೇರಿಗಳು,  ತಳಿರು-ತೋರಣ ಮತ್ತು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ .
77 ನೇ ಗಣರಾಜ್ಯೋತ್ಸವದ ಪ್ರಯುಕ್ತ  ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ ತಾಲೂಕು ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ನಂತರ ಶಾಸಕಾ ಟಿ .ರಘು ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಗರದ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆಯ ಬಯಲು ರಂಗ ಮಂದಿರದಲ್ಲಿ ಸಭೆ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಧ್ವಜಾರೋಹಣವನ್ನ ತಾಸಿಲ್ದಾರ್ ರಹಂ ಪಾಷಾ ಅವರು ನೆರವೇರಿಸಲಿದ್ದು. ವಿದ್ಯಾರ್ಥಿಗಳಿಂದ ಪಥಸಂಚಲನ.ಮತ್ತು
ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಹಾಗೂ ದೇಶದ ಜನತೆಗೆ ತಾಲೂಕು ಆಡಳಿತ ಗಣರಾಜ್ಯೋತ್ಸವದ ಶುಭಾಶಯಗಳು ತಿಳಿಸಿದೆ......
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    22 hrs ago
  • ಹಾವೇರಿ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ನೆಗಳೂರ ಸಂಸ್ಥಾನ ಹಿರೇಮಠದ ನೂತನ ಮಹಾರಥದ ಲೋಕಾರ್ಪಣೆ ನಿಮಿತ್ಯ ಪರಿವರ್ತನೆಯಡೆಗೆ ಧರ್ಮ ಜಾಗೃತಿ ಪ್ರವಚನ ಕಾರ್ಯಕ್ರಮ-16 ಸೋಮವಾರ ಜರುಗಿತು.
    1
    ಹಾವೇರಿ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ನೆಗಳೂರ ಸಂಸ್ಥಾನ ಹಿರೇಮಠದ ನೂತನ ಮಹಾರಥದ ಲೋಕಾರ್ಪಣೆ ನಿಮಿತ್ಯ ಪರಿವರ್ತನೆಯಡೆಗೆ ಧರ್ಮ ಜಾಗೃತಿ ಪ್ರವಚನ ಕಾರ್ಯಕ್ರಮ-16 ಸೋಮವಾರ ಜರುಗಿತು.
    user_GURUSHANTH HIREMATH
    GURUSHANTH HIREMATH
    Journalist ಹಾವೇರಿ, ಹಾವೇರಿ, ಕರ್ನಾಟಕ•
    6 hrs ago
  • ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಸೋಮವಾರ ‌ನಡೆದ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಸಭಾ ಕಾರ್ಯಕ್ರಮದ ಬಳಿಕ ಬೆಟರ್ಡ್ ರೆಸಲ್, ಯೆನೆಪೋಯ, ಕಾರ್ಮೆಲ್ ಹಾಗೂ ಸೇಂಟ್ ಆಗ್ನೆಸ್ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ವರದಿ: ಶಂಶೀರ್ ಬುಡೋಳಿ
    1
    ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಸೋಮವಾರ ‌ನಡೆದ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಸಭಾ ಕಾರ್ಯಕ್ರಮದ ಬಳಿಕ ಬೆಟರ್ಡ್ ರೆಸಲ್, ಯೆನೆಪೋಯ, ಕಾರ್ಮೆಲ್ ಹಾಗೂ ಸೇಂಟ್ ಆಗ್ನೆಸ್ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    17 hrs ago
  • Post by ಡಾ.ಪಾಲಯ್ಯಮಾರಮ್ಮನಹಳ್ಳಿ
    2
    Post by ಡಾ.ಪಾಲಯ್ಯಮಾರಮ್ಮನಹಳ್ಳಿ
    user_ಡಾ.ಪಾಲಯ್ಯಮಾರಮ್ಮನಹಳ್ಳಿ
    ಡಾ.ಪಾಲಯ್ಯಮಾರಮ್ಮನಹಳ್ಳಿ
    Journalist Molakalmuru, Chitradurga•
    8 hrs ago
  • ಚಿತ್ರದುರ್ಗದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ 77 ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ತೆರಳಿ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ
    1
    ಚಿತ್ರದುರ್ಗದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ 77 ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ತೆರಳಿ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.